Author: admin

ಬಂಟರ ಸಂಘ (ರಿ) ಸುರತ್ಕಲ್ ಇದರ 26ನೇ ವಾರ್ಷಿಕ ಮಹಾಸಭೆ, ಅಭಿನಂದನೆ, ಸಹಾಯಹಸ್ತ, ವಿದ್ಯಾರ್ಥಿ ವೇತನ, ದತ್ತಿ ನಿಧಿ ಹಾಗೂ ಸಮೂಹ ನೃತ್ಯ ಸ್ಪರ್ಧೆ ಕಾರ್ಯಕ್ರಮವು ಸುರತ್ಕಲ್ ಬಂಟರ ಭವನದಲ್ಲಿ ಜರುಗಿತು. ಕಾರ್ಯಕ್ರಮವನ್ನು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಕೆ. ಅಜಿತ್ ಕುಮಾರ್ ರೈ ಮಾಲಾಡಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿ, ‘ಬಂಟ ಸಮಾಜ ಇಂದು ಬಹಳಷ್ಟು ಮುಂದುವರಿದಿದೆ. ಮಕ್ಕಳು ಉನ್ನತ ಶಿಕ್ಷಣ ಪಡೆಯುತ್ತಿದ್ದಾರೆ. ಆದರೆ ಇಂದು ಅದೇ ವಿದ್ಯೆ ನಮ್ಮ ಸಮಾಜಕ್ಕೆ ಶಾಪ ಆಗುತ್ತಿದೆಯಾ ಅನ್ನುವ ಸಂಶಯ ಕಾಡುತ್ತಿದೆ. ಯಾಕೆಂದರೆ ಮಕ್ಕಳು ವಿದ್ಯೆ ಪಡೆದು ವಿದೇಶ ಸೇರಿದರೆ ಮನೆ ನಿರ್ವಹಣೆ ಇಲ್ಲದೇ ಪಾಳು ಬೀಳುತ್ತಿದೆ. ಹೆತ್ತವರು ಒಂಟಿಯಾಗುತ್ತಿದ್ದಾರೆ. ಇದು ಸರಿಯಲ್ಲ. ನಮ್ಮ ಸಮಾಜ ಈ ಬಗ್ಗೆ ತುರ್ತು ಗಮನಿಸಬೇಕು. ಮಕ್ಕಳಿಗೆ ಶಿಕ್ಷಣದ ಜೊತೆ ಉತ್ತಮ ಸಂಸ್ಕಾರವನ್ನು ನೀಡಬೇಕು. ಹುಟ್ಟಿ ಬೆಳೆದ ಮನೆ, ಹೆತ್ತವರು ಮತ್ತು ಊರನ್ನು ಮಕ್ಕಳು ಮರೆಯಬಾರದು. ತಾವು ದುಡಿದ ಒಂದಂಶವನ್ನು ಸಮಾಜಕ್ಕೆ…

Read More

ಭಾರತೀಯ ಮಾಸ್ಟರ್ಸ್ ವೇಟ್ ಲಿಫ್ಟಿಂಗ್ ಫೆಡರೇಶನ್ ಜರ್ಮನಿಯಲ್ಲಿ ನಡೆದ ಜರ್ಮನಿ ಓಪನ್ ವಿಶ್ವ ಚಾಂಪಿಯನ್ ಶಿಪ್ ನಲ್ಲಿ ದೇಶವನ್ನು ಹೆಮ್ಮೆಯಿಂದ ಪ್ರತಿನಿಧಿಸಿ ಗಮನಾರ್ಹ ಸಾಧನೆ ಮಾಡಿದೆ. ಭಾರತೀಯ ತಂಡವು ಒಟ್ಟು ಎಂಟು ಪದಕಗಳನ್ನು ಗೆದ್ದು ರಾಷ್ಟ್ರದ ಕೀರ್ತಿಯನ್ನು ಹೆಚ್ಚಿಸಿದೆ. ಈ ಅದ್ಭುತ ಸಾಧನೆಯನ್ನು ಗುರುತಿಸಿ ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವರಾದ ಡಾ. ಮನ್ಸುಖ್ ಮಾಂಡವಿಯ ಅವರು ಭಾರತೀಯ ಮಾಸ್ಟರ್ಸ್ ವೇಟ್ ಲಿಫ್ಟಿಂಗ್ ತಂಡವನ್ನು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಫೆಡರೇಶನ್ ನ ಪ್ರಧಾನ ಕಾರ್ಯದರ್ಶಿ ಉದಯ ಶೆಟ್ಟಿ ಹಾಗೂ ತಂಡದ ಸದಸ್ಯರು ಉಪಸ್ಥಿತರಿದ್ದರು. ಕ್ರೀಡಾಪಟುಗಳೊಂದಿಗೆ ನಡೆದ ಸಂವಾದದಲ್ಲಿ ಡಾ. ಮಾಂಡವಿಯ ಅವರು ಭವಿಷ್ಯದ ಸ್ಪರ್ಧೆಗಳಿಗೆ ಶುಭ ಹಾರೈಸಿ ಭಾರತದಲ್ಲಿ ಮಾಸ್ಟರ್ಸ್ ವೇಟ್ ಲಿಫ್ಟಿಂಗ್ ಕ್ರೀಡೆಯ ಅಭಿವೃದ್ಧಿ ಮತ್ತು ಉತ್ತೇಜನಕ್ಕಾಗಿ ಕೇಂದ್ರ ಸರ್ಕಾರದಿಂದ ನಿರಂತರ ಬೆಂಬಲ ದೊರೆಯಲಿದೆ ಎಂದು ಭರವಸೆ ನೀಡಿದರು. ಭಾರತೀಯ ತಂಡವು ಇದೇ ವರ್ಷ ಸೆಪ್ಟೆಂಬರ್ 17ರಿಂದ 26ರವರೆಗೆ ಗ್ರೀಸ್ ನಲ್ಲಿ ನಡೆಯಲಿರುವ ವಿಶ್ವ ಮಾಸ್ಟರ್ಸ್ ವೇಟ್ ಲಿಫ್ಟಿಂಗ್…

Read More

ಜುಲೈ 01 ರಿಂದ 10 ರವರೆಗೆ ಚೀನಾದ ಶಾಂಗ್ಲುಓದಲ್ಲಿ ನಡೆಯುವ U-18 ವರ್ಲ್ಡ್ ಸ್ಕೂಲ್ ಗೇಮ್ಸ್ ನ ಭಾರತೀಯ ವಾಲಿಬಾಲ್ ತಂಡಕ್ಕೆ ನೈಜಾ ರಾಜೇಶ್ ಹೆಗ್ಡೆಯವರು ಆಯ್ಕೆಯಾಗಿದ್ದಾರೆ. ಕರ್ನಾಟಕದಿಂದ ಆಯ್ಕೆಯಾದ ಏಕೈಕ ಆಟಗಾರ್ತಿ ಎಂಬುದು ನೈಜಾಳ ಪ್ರತಿಭೆ ಮತ್ತು ಪರಿಶ್ರಮಕ್ಕೆ ಸಾಕ್ಷಿ. ಶೇಷಾದ್ರಿಪುರಂ ಇನ್‌ಸ್ಟಿಟ್ಯೂಟ್ ಆಫ್ ಕಾಮರ್ಸ್ ಆಂಡ್ ಮ್ಯಾನೇಜ್‌ಮೆಂಟ್‌ ವಿದ್ಯಾರ್ಥಿನಿಯಾಗಿರುವ ನೈಜಾಳನ್ನು ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ ಗುರುತಿಸಿದೆ. ಈ ಸಾಧನೆಯ ಹಿಂದೆ ಪೋಷಕರಾದ ರಾಜೇಶ್ ಹೆಗ್ಡೆ ದಂಪತಿಗಳ ತ್ಯಾಗ ಮತ್ತು ಪ್ರೋತ್ಸಾಹವಿದ್ದು, ಬಂಟ ಸಮುದಾಯಕ್ಕೆ ಇದು ಭಾವನಾತ್ಮಕ ಕ್ಷಣವಾಗಿದೆ. ಯುವ ಪೀಳಿಗೆ ಸಮುದಾಯ ಚಟುವಟಿಕೆಗಳಿಂದ ದೂರ ಸರಿಯುತ್ತಿರುವ ಕಾಲದಲ್ಲಿ ನೈಜಾಳ ಯಶಸ್ಸು ಸಮುದಾಯವನ್ನು ಒಗ್ಗೂಡಿಸಿದೆ. U-18 ವರ್ಲ್ಡ್ ಸ್ಕೂಲ್ ಗೇಮ್ಸ್ ಕೇವಲ ಆರಂಭವಾಗಿದ್ದು, ಸರಿಯಾದ ತರಬೇತಿ ಮತ್ತು ಪ್ರೋತ್ಸಾಹ ಸಿಕ್ಕರೆ ನೈಜಾ ಮುಂದೊಂದು ದಿನ ಒಲಿಂಪಿಕ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸುವ ಸಾಮರ್ಥ್ಯ ಹೊಂದಿದ್ದಾಳೆ. ಅದು ಬಂಟ ಸಮುದಾಯಕ್ಕೆ ಐತಿಹಾಸಿಕ ಹೆಮ್ಮೆಯ ಕ್ಷಣವಾಗಲಿದೆ.

Read More

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ) ಮೂಡುಬಿದಿರೆ ಇದರ ನಾಟಕ ವಿಭಾಗ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ತಂಡಕ್ಕೆ ಕಲಾವಿದರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರತೀ ವರ್ಷವೂ ಹಲವು ಶ್ರೇಷ್ಠ ನಾಟಕಗಳನ್ನು ಕನ್ನಡ ರಂಗಭೂಮಿಗೆ ನೀಡಿದ ಕೀರ್ತಿ ಆಳ್ವಾಸ್ ರಂಗ ತಂಡದ್ದು. ರಂಗಾಭಿನಯ, ಮಾತುಗಾರಿಕೆ ಹಾಗೂ ತಾಂತ್ರಿಕವಾಗಿಯೂ ತರಬೇತಿ ಪಡೆದು ಸಂಪೂರ್ಣ ವೃತ್ತಿಪರ ತಂಡದಂತೆ ತಿರುಗಾಟ ಮಾಡಲು ಆಸಕ್ತಿ ಇರುವ ರಂಗ ಕಲಾವಿದರು ಅರ್ಜಿ ಸಲ್ಲಿಸಬಹುದು. ವಿದ್ಯಾರ್ಹತೆ ಒಂದು ವರ್ಷದ ರಂಗ ಶಿಕ್ಷಣ ಪದವಿ ಅಥವಾ ಕನಿಷ್ಠ ನಾಲ್ಕೈದು ನಾಟಕಗಳಲ್ಲಿ ಅಭಿನಯಿಸಿದ ಅನುಭವ ಹೊಂದಿರಬೇಕು. ವಯೋಮಿತಿ 20 ರಿಂದ 35 ವರ್ಷದೊಳಗಿನವರು ಜೂನ್ 17 ರೊಳಗೆ ಅಧ್ಯಕ್ಷರು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ) ಮೂಡುಬಿದಿರೆ ದ.ಕ ಈ ವಿಳಾಸಕ್ಕೆ ಅರ್ಜಿಯನ್ನು ಕಳುಹಿಸಲು ಕೋರಲಾಗಿದೆ. ಸಂದರ್ಶನದಲ್ಲಿ ಆಯ್ಕೆ ಆದವರಿಗೆ ಉಚಿತ ಊಟ, ವಸತಿ ಹಾಗೂ ಪ್ರತಿಭೆಗೆ ಅನುಸಾರ ತಿಂಗಳ ವೇತನ ನೀಡಲಾಗುವುದು. ಮಾಹಿತಿಗಾಗಿ ಡಾ| ಜೀವನ್ ರಾಂ ಸುಳ್ಯ, ನಿರ್ದೇಶಕರು, ಆಳ್ವಾಸ್ ರಂಗ ಅಧ್ಯಯನ ಕೇಂದ್ರ…

Read More

ಅವಿಭಕ್ತ ದಕ್ಷಿಣ ಕನ್ನಡ ಜಿಲ್ಲೆಯ ಬಂಟರು ಉದ್ಯಮಶೀಲರು, ಸಾಹಸಿಗಳು ಮತ್ತು ಪರಿಶ್ರಮಿಗಳು. ತಾವು ತಮ್ಮ ಲಕ್ಷ್ಯವನ್ನು ಹಿಂಬಾಲಿಸುವಲ್ಲಿ ಎದುರಾಗುವ ಕಷ್ಟನಷ್ಟಗಳನ್ನು ಸವಾಲು ಎಂಬಂತೆ ಸ್ವೀಕರಿಸುತ್ತಾ ಕೊನೆಗೊಂದು ದಿನ ಯಶಸ್ಸಿನ ತುತ್ತ ತುದಿಯಲ್ಲಿದ್ದು ತಮ್ಮನ್ನು ಗುರುತಿಸಿಕೊಳ್ಳುತ್ತಾರೆ. ಕರುಣಾಕರ ಎಂ ಶೆಟ್ಟಿ ಅವರ ಹೆಸರು ದೇಶದಾದ್ಯಂತ ಪರಿಚಿತ. 1975 ರ ಸುಮಾರಿಗೆ ವಿ.ಕೆ ಇಂಜಿನಿಯರ್ಸ್ ಎಂಬ ಹೆಸರಿನೊಂದಿಗೆ ಉದ್ಯಮ ರಂಗ ಪ್ರವೇಶಿಸಿದ ಕೆ.ಎಂ ಶೆಟ್ಟರು ಟೂಲ್ ರೂಂ ವರ್ಕ್ ಶಾಪ್ ಯಂತ್ರೋಪಕರಣಗಳ ಮೂಲಕ ತಮ್ಮ ಕಾರ್ಯಾಗಾರವನ್ನು ಪ್ರಾರಂಭಿಸಿದರು. ಉದ್ಯಮ ಕ್ಷೇತ್ರದಲ್ಲಿ ಅತ್ಯುತ್ತಮ ಗುಣಮಟ್ಟದ ಇಂಜೆಕ್ಷನ್ ಮೌಲ್ಡಿಂಗ್ ಉಪಕರಣಗಳನ್ನು ಉತ್ಪಾದಿಸುವ ಮೂಲಕ ಅತ್ಯಂತ ಕಡಿಮೆ ಅವಧಿಯಲ್ಲಿ ಗ್ರಾಹಕರ ವಿಶ್ವಾಸವನ್ನು ಗಳಿಸಿಕೊಂಡರು. ತನ್ನ ಉದ್ಯಮ ಅಪೂರ್ವ ಯಶಸ್ಸು ಕಂಡ ಬಳಿಕ ದೇಶದ ಅನ್ಯಭಾಗಗಳಲ್ಲಿ ಗ್ರಾಹಕರ ಬೇಡಿಕೆಗಳನ್ನು ಅನುಸರಿಸಿ ಶಾಖೆಗಳನ್ನು ತೆರೆದು ಉದ್ಯಮ ವ್ಯಾಪ್ತಿಯನ್ನು ವಿಸ್ತರಿಸಿಕೊಂಡರು. ಕೆ.ಎಂ ಶೆಟ್ಟರು ಇದರ ಕಾರ್ಯಾಧ್ಯಕ್ಷರಾಗಿ, ಆಡಳಿತ ನಿರ್ದೇಶಕರಾಗಿ ಕಾರ್ಯ ನಿರ್ವಹಿಸತೊಡಗಿದರು. ಪ್ರಸ್ತುತ ಈ ಕಂಪನಿಯಲ್ಲಿ ಗೃಹೋಪಯೋಗಿ ಉತ್ಪನ್ನಗಳನ್ನು ತಯಾರಿಸುತ್ತಾರೆ. ಮುಖ್ಯವಾಗಿ ಇಂದಿನ…

Read More

28 ವರ್ಷಗಳ ಕಾಲ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಾ ಸಾವಿರಾರು ವಿದ್ಯಾರ್ಥಿಗಳ ಬದುಕಿಗೆ ದಾರಿ ತೋರಿ, ಪ್ರಸ್ತುತ ಅಲೈಯನ್ಸ್ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಜನರಲ್ ಆಗಿ ಸಂಸ್ಥೆಯನ್ನು ಜಾಗತಿಕ ಮಾನ್ಯತೆಗೆ ಒಯ್ಯುತ್ತಿರುವ ರಾಣಿ ಅಬ್ಬಕ್ಕ ಪ್ರಶಸ್ತಿ ಪುರಸ್ಕೃತೆ ಶ್ರೀಮತಿ ಸುರೇಖಾ ಶೆಟ್ಟಿಯವರು ಬೆಂಗಳೂರು ಬಂಟರ ಸಂಘದ ಚುನಾವಣೆಯಲ್ಲಿ 2026-29 ರ ಸಾಲಿಗೆ ಜೊತೆ ಕಾರ್ಯದರ್ಶಿ ಹುದ್ದೆಗೆ ಡಾ| ದೀಪಕ್ ಶೆಟ್ಟಿ ಬಣದಲ್ಲಿ ಸ್ಪರ್ಧಿಸುತ್ತಿದ್ದಾರೆ. ಕಾರ್ಪೊರೇಟ್ ಸಂಬಂಧಗಳು, ಪ್ರವೇಶ, ವಿದ್ಯಾರ್ಥಿ ಸೇವೆ, CSR, ಮಹಿಳಾ ಸಬಲೀಕರಣದಲ್ಲಿ 28 ವರ್ಷಗಳ ನಾಯಕತ್ವದ ಅನುಭವ, ವಿದ್ಯಾ ಸ್ಪಂದನ – ಕೌಶಲ್ಯ ಸ್ಪಂದನದ ಮೂಲಕ ಬಡ ಮಕ್ಕಳು ಮತ್ತು ಮಹಿಳೆಯರಿಗೆ ಉಚಿತ ಶಿಕ್ಷಣ, ಹೊಲಿಗೆ, ಇಂಗ್ಲಿಷ್ ಕಂಪ್ಯೂಟರ್ ತರಬೇತಿ ಮೂಲಕ ಸೇವೆ ಸಲ್ಲಿಸಿದ ಅನುಭವವಿರುವ ಇವರು ಬೆಂಗಳೂರು ಬಂಟರ ಸಂಘದಲ್ಲಿ ಕಾರ್ಯಕಾರಿ ಸಮಿತಿ ಸದಸ್ಯೆಯಾಗಿಯೂ ಕಾರ್ಯನಿರ್ವಹಿಸಿದ್ದಾರೆ. CII, NHRD, RNS ವಿದ್ಯಾನಿಕೇತನದಲ್ಲಿಯೂ ಸಕ್ರಿಯ ಕೊಡುಗೆಯನ್ನು ನೀಡಿ, ಉದ್ಯಮ ಶಿಕ್ಷಣದ ನಡುವೆ ಸೇತುವೆಯಾಗಿ ಮಕ್ಕಳಿಗೆ ಉದ್ಯೋಗದ ಬಾಗಿಲು ತೆರೆದ ಸುರೇಖಾ…

Read More

ಆಳ್ವಾಸ್ ಕಾನೂನು ಕಾಲೇಜಿನ ವತಿಯಿಂದ ಮಂಗಳೂರು ಬಾರ್ ಅಸೋಸಿಯೇಷನ್ ಅಧ್ಯಕ್ಷರಾಗಿ ಆಯ್ಕೆಯಾದ ಜಗದೀಶ್ ಶೇಣವ ಹಾಗೂ ಮೂಡುಬಿದಿರೆ ಬಾರ್ ಅಸೋಸಿಯೇಷನ್ ಅಧ್ಯಕ್ಷರಾಗಿ ಆಯ್ಕೆಯಾದ ಶರತ್ ಶೆಟ್ಟಿಯವರಿಗೆ ಸನ್ಮಾನ ಕಾರ್ಯಕ್ರಮ ವಿದ್ಯಾಗಿರಿಯ ಕುವೆಂಪು ಸಭಾಂಗಣದಲ್ಲಿ ನಡೆಯಿತು. ಇಲ್ಲಿ ಬಾಹ್ಯಕಾಶವೇ ಮಿತಿ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಮಂಗಳೂರು ಬಾರ್ ಅಸೋಸಿಯೇಷನ್ ಅಧ್ಯಕ್ಷ ಜಗದೀಶ್ ಶೇಣವ, ವಕೀಲ ವೃತ್ತಿಯಲ್ಲಿ ದೊರೆಯುವ ಹೆಸರು, ಗೌರವ ಮತ್ತು ಆರ್ಥಿಕ ಯಶಸ್ಸು ಬೇರೆ ಯಾವ ಕ್ಷೇತ್ರಗಳಲ್ಲೂ ಸಿಗಲಾರದು. ಇಲ್ಲಿ ಆಕಾಶವಲ್ಲ, ಬಾಹ್ಯಾಕಾಶವೇ ನಮ್ಮ ಮಿತಿ ಎಂದರು. ವಿದ್ಯಾರ್ಥಿ ಜೀವನದಲ್ಲಿ ಕಾಲೇಜು ನಾಯಕತ್ವ ಚುನಾವಣೆಯಲ್ಲಿ ಸ್ಪರ್ಧಿಸಿದ್ದೆ. ಬಳಿಕ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಚುನಾವಣೆಯನ್ನು ಎದುರಿಸಿದ್ದೆ. ಇದೀಗ ಮಂಗಳೂರು ಬಾರ್ ಅಸೋಸಿಯೇಷನ್ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗುವ ಮೂಲಕ ಮೂರನೇ ಪ್ರಮುಖ ಚುನಾವಣೆಯಲ್ಲಿ ಯಶಸ್ಸು ಕಂಡಿದ್ದೇನೆ. ತಾನು ಮೂಲತಃ ವೈದ್ಯನಾಗುವ ಕನಸು ಕಂಡಿದ್ದೆ. ಆದರೆ ಪಿಸಿಎಂಬಿ ವಿಭಾಗದಲ್ಲಿ ಅನುತ್ತೀರ್ಣನಾದ ಬಳಿಕ ಕಲಾ ವಿಭಾಗಕ್ಕೆ ಸೇರ್ಪಡೆಗೊಂಡೆ. ಜೀವನದ ಸೋಲುಗಳೇ ನನ್ನ ಯಶಸ್ಸಿನ ದಾರಿಯನ್ನು…

Read More

ರಾಮಾಭಿವಂದ್ಯ ಯಕ್ಷ ಸೇವಾ ಬಳಗ, ಮುಂಬಯಿ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಜಂಟಿ ಆಯೋಜನೆಯಲ್ಲಿ ಪ್ರಭು ಶ್ರೀರಾಮಚಂದ್ರ ದೇವರ ಅವತಾರದ ಆರಂಭದಿಂದ ನಿರ್ಯಾಣದವರೆಗಿನ ಸಂಪೂರ್ಣ ಶ್ರೀರಾಮ ಚರಿತ್ರೆ, ಶ್ರೀರಾಮಕಥಾ ಹೃದಯಂ ಪುಣ್ಯಪ್ರದ ಇಪ್ಪತ್ನಾಲ್ಕು ಕಂತುಗಳ ಸರಣಿ ತಾಳಮದ್ದಳೆ ಕಾರ್ಯಕ್ರಮದ 9ನೇ ಪ್ರಸ್ತುತಿ ವಾಲಿ ಮೋಕ್ಷ ಮತ್ತು ಸನ್ಮಾನ ಕಾರ್ಯಕ್ರಮವು ಜೂನ್ 14 ರಂದು ಅಪರಾಹ್ನ 2.15ರಿಂದ ವಿದ್ಯಾವಿಹಾರ್ ಪಶ್ಚಿಮದ ಗಾವ್ದೇವಿಯ ಅಂಬಿಕಾ ಆದಿನಾಥೇಶ್ವರ ಮಹಾಗಣಪತಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಲಿದೆ. ವೇದಮೂರ್ತಿ ಹರಿದಾಸ ಭಟ್ ಪೆರ್ಣಂಕಿಲ ಅವರ ಶುಭಾಶೀರ್ವಾದದೊಂದಿಗೆ ಶ್ರೀ ಅಂಬಿಕಾ ಆದಿನಾಥೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಹರಿದಾಸ ಗೋಪಾಲ ಶೆಟ್ಟಿಯವರ ಸಂಪೂರ್ಣ ಸಹಕಾರದೊಂದಿಗೆ ನಡೆಯಲಿರುವ ಈ ಸಮಾರಂಭದಲ್ಲಿ ಕಳೆದ 5 ದಶಕಗಳಿಂದ ಮುಂಬಯಿ ಮಹಾನಗರದಲ್ಲಿ ಕಲಾ ಸೇವೆಗೈಯ್ಯುತ್ತಿರುವ ಆನಂದ ಶೆಟ್ಟಿ ಇನ್ನಾ ಅವರನ್ನು ಗೌರವಿಸಲಾಗುವುದು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ವೇದಮೂರ್ತಿ ಹರಿದಾಸ ಭಟ್ ಪೆರ್ಣಂಕಿಲ ಅವರು ವಹಿಸಲಿದ್ದು, ಶ್ರೀ ಅಂಬಿಕಾ ಆದಿನಾಥೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಹರಿದಾಸ ಗೋಪಾಲ ಶೆಟ್ಟಿಯವರ ಗೌರವ ಉಪಸ್ಥಿತಿಯಿರಲಿದೆ. ಮುಖ್ಯ…

Read More

ಹೆತ್ತವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು, ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ತಮ್ಮನ್ನು ಸಮರ್ಪಿಸಿಕೊಂಡಿರುವ ಸೇವಾ ದುರೀಣ ಆನಂದ ಎಂ ಶೆಟ್ಟಿ ಅವರು ಇಂದು ಆರ್ಗಾನಿಕ್ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಮೂಲಕ ಜಾಗತಿಕ ಮಟ್ಟದಲ್ಲಿ ಜನಪ್ರಿಯರಾಗಿದ್ದಾರೆ. ದಿವಂಗತ ಮೋನಪ್ಪ ಶೆಟ್ಟಿ ಹಾಗೂ ದಿವಂಗತ ಲಕ್ಷ್ಮಿ ಶೆಟ್ಟಿ ದಂಪತಿಗಳ ಸುಪುತ್ರರಾಗಿ ತೋನ್ಸೆಯ ಪ್ರತಿಷ್ಠಿತ ಬಂಟ ಕುಟುಂಬದಲ್ಲಿ ಜನಿಸಿದ ಆನಂದ ಶೆಟ್ಟಿಯವರು ಯಶಸ್ವೀ ಉದ್ಯಮಿಯಾಗಿ ವ್ಯವಹಾರದಲ್ಲಿ ಬಂದ ಲಾಭದಲ್ಲಿ ಸಮಾಜಕ್ಕೆ ಏನಾದರೂ ಮರಳಿ ನೀಡಬೇಕು ಎಂಬ ಉದ್ದೇಶದೊಂದಿಗೆ ಮುನ್ನಡೆಯುತ್ತಿರುವ ಅವರ ಚಿಂತನೆ ಅನೇಕರಿಗೆ ಮಾದರಿಯಾಗಿದೆ. ಆರ್ಗಾನಿಕ್ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯನ್ನು ಯಶಸ್ವಿಯಾಗಿ ಮುನ್ನಡೆಸುತ್ತಾ, ಸಾವಿರಾರು ಕುಟುಂಬಗಳಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸಿರುವ ಆನಂದ ಎಂ ಶೆಟ್ಟಿ ಅವರು ಶಿಕ್ಷಣ, ಆರೋಗ್ಯ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡುತ್ತಿದ್ದಾರೆ. ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವು, ಬಡ ಕುಟುಂಬಗಳ ಸಂಕಷ್ಟಗಳಿಗೆ ಸ್ಪಂದನೆ, ಸಾಮಾಜಿಕ ಸಂಘಟನೆಗಳಿಗೆ ಪ್ರೋತ್ಸಾಹ ಹಾಗೂ ಧಾರ್ಮಿಕ ಕಾರ್ಯಕ್ರಮಗಳಿಗೆ ಸಹಕಾರ ನೀಡುವ ಮೂಲಕ ಜನಸಾಮಾನ್ಯರ…

Read More

ಖ್ಯಾತ ಕವಿ ಡಾ| ಕಯ್ಯಾರ ಕಿಂಞಣ್ಣ ರೈ ಅವರ ಜನ್ಮದಿನಾಚರಣೆ ಸಂದರ್ಭದಲ್ಲಿ ನೀಡಲ್ಪಡುವ ಕಯ್ಯಾರ ಪ್ರಶಸ್ತಿಗೆ ಉದ್ಯಮಿ, ಸಮಾಜ ಸೇವಕ, ಎಟಿಎಸ್ ಸಂಸ್ಥೆಯ ಆಡಳಿತ ನಿರ್ದೇಶಕ ಡಾ| ರವಿ ಶೆಟ್ಟಿ ದೋಣಿಂಜೆ ಗುತ್ತು ಅವರು ಆಯ್ಕೆಯಾಗಿದ್ದಾರೆ. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಕಾಸರಗೋಡು, ಕಲ್ಕೂರ ಪ್ರತಿಷ್ಠಾನ ಮಂಗಳೂರು ಇವರ ಸಹಯೋಗದಲ್ಲಿ ಜೂನ್ 21ರಂದು ಬೆಳಗ್ಗೆ 9ರಿಂದ ಕಯ್ಯಾರು ಕಾಮಿಲ್ ಕೊಕ್ಕೆಚಾಲು ಶಾಲಾ ವಠಾರದಲ್ಲಿ ನಡೆಯುವ ನಾಡೋಜ ಡಾ| ಕಯ್ಯಾರ ಕಿಂಞಣ್ಣ ರೈ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಹಿರಿಯ ಸಾಹಿತಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಪ್ರೊ.ಎಸ್.ಜಿ ಸಿದ್ದರಾಮಯ್ಯ ಅವರು ಕಾರ್ಯಕ್ರಮ ಉದ್ಘಾಟಿಸುವರು. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ, ಮಾಜಿ ಶಾಸಕ ಸೋಮಣ್ಣ ಬೇವಿನಮರದ ಅಧ್ಯಕ್ಷತೆ ವಹಿಸುವರು. ಮಂಜೇಶ್ವರ ಶಾಸಕ ಎ.ಕೆ.ಎಂ ಅಶ್ರಫ್ ಪ್ರಶಸ್ತಿ ಪ್ರದಾನ ಮಾಡುವರು. ಇದೇ ವೇಳೆ ಕೃತಿ ಬಿಡುಗಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.

Read More