Author: admin

ಲೋಕಾಯುಕ್ತದ ಆರು ವರ್ಷಗಳ ಅನುಭವದಲ್ಲಿ ಅನ್ಯಾಯದ ಬಗ್ಗೆ ತಿಳಿದುಕೊಂಡೆ. ಇದಕ್ಕೆ ವ್ಯಕ್ತಿಗಳಲ್ಲ ಸಮಾಜ ಮೂಲ ಕಾರಣ ಎಂದು ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಎನ್ ಸಂತೋಷ್ ಹೆಗ್ಡೆ ಅವರು ಹೇಳಿದರು. ಅವರು ರವಿವಾರ ಬಂಟರ ಸಂಘ ಬಜಪೆ ವಲಯದ ಆಶ್ರಯದಲ್ಲಿ ಮುಂಡಾರು ತಾರಿಕಂಬ್ಳದಲ್ಲಿ ನಡೆದ ನೂತನ ಅಧ್ಯಕ್ಷ ಕರಂಬಾರು ಪಡುಮನೆ ವೇಣುಗೋಪಾಲ್ ಎಲ್ ಶೆಟ್ಟಿ ಅವರ ಪದಗ್ರಹಣ ಕಾರ್ಯಕ್ರಮ, ರಾಷ್ಟ್ರೀಯ ಬಂಟರ ಸಂಘಗಳ ಸಾಂಸ್ಕೃತಿಕ ಸ್ಪರ್ಧೆ, ಪಾಲ್ದಟ್ಟೆಡ್ ಬಂಟೆರೆ ಪರ್ಬ – 2025ರ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಸನ್ಮಾನಗಳಿಂದ ಸಮಾಜದಲ್ಲಿ ಶಾಂತಿ, ಸೌಹಾರ್ದ, ಗೌರವ ಹೆಚ್ಚಾಗುತ್ತದೆ. ಕಾನೂನು ಚೌಕಟ್ಟಿನಲ್ಲಿ ಶ್ರೀಮಂತರಾಗಬೇಕು. ಮಕ್ಕಳಲ್ಲಿ ತೃಪ್ತಿ ಹಾಗೂ ಮಾನವೀಯತೆ ಬೆಳೆಸಿದರೆ ಶಾಂತಿ ಸೌಹಾರ್ದದಿಂದ ಪ್ರಗತಿ ಸಾಧ್ಯ ಎಂದರು. ಆಳ್ವಾಸ್ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷ ಡಾ. ಎಂ ಮೋಹನ್ ಆಳ್ವ ಹಾಗೂ ಎಮ್.ಆರ್.ಜಿ ಗ್ರೂಪ್ ಬೆಂಗಳೂರು ಇದರ ಸಿಎಂಡಿ ಡಾ| ಕೆ ಪ್ರಕಾಶ್ ಶೆಟ್ಟಿ ಅವರನ್ನು ನ್ಯಾಯಮೂರ್ತಿ ಎನ್ ಸಂತೋಷ್ ಹೆಗ್ಡೆ ಅವರು…

Read More

ಪುತ್ತೂರು ತಾಲೂಕು ಜಾನಪದ ಸಾಹಿತ್ಯ ವೇದಿಕೆಯ ನೂತನ ಅಧ್ಯಕ್ಷರಾಗಿ ಕೆ.ಎಸ್ ರವೀಂದ್ರನಾಥ ರೈ ಬಳ್ಳಮಜಲುಗುತ್ತು ಅವರನ್ನು ಆಯ್ಕೆ ಮಾಡಲಾಗಿದೆ. ಸಂಸ್ಥೆಯ ಪ್ರಧಾನ ಕಾರ್ಯದರ್ಶಿಯಾಗಿ, ಉಪಾಧ್ಯಕ್ಷರಾಗಿ ಲೇಖಕ ನಿವೃತ್ತ ಶಿಕ್ಷಕ ನಾರಾಯಣ ರೈ ಕುಕ್ಕುವಳ್ಳಿ, ಸಂಚಾಲಕರಾಗಿ ಪತ್ರಕರ್ತ ಉಮಾಪ್ರಸಾದ್ ರೈ ನಡುಬೈಲುರವರುಗಳು ಆಯ್ಕೆಯಾಗಿದ್ದಾರೆ. ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕೆ.ಎಸ್ ರವೀಂದ್ರನಾಥ ರೈಯವರು ಬಳ್ಳಮಜಲುಗುತ್ತು ಕುಟುಂಬದ ಯಜಮಾನರಾಗಿದ್ದು, ಪುತ್ತೂರು ತಾಲೂಕು ಅಡಿಕೆ ವರ್ತಕರ ಸಂಘದ ಅಧ್ಯಕ್ಷರಾಗಿದ್ದಾರೆ. ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ನಾರಾಯಣ ರೈ ಕುಕ್ಕುವಳ್ಳಿ ಅವರು 36 ವರ್ಷ ಶಿಕ್ಷಕರಾಗಿದ್ದರು. ಪ್ರಸ್ತುತ ಲೇಖಕರಾಗಿದ್ದಾರೆ. ಉಮಾಪ್ರಸಾದ್ ರೈ ನಡುಬೈಲು 32 ವರ್ಷಗಳಿಂದ ವರದಿಗಾರರಾಗಿದ್ದು, 25 ವರ್ಷದಿಂದ ಸುದ್ದಿ ಬಿಡುಗಡೆ ವರದಿಗಾರರಾಗಿದ್ದಾರೆ.

Read More

ಸಾಂಸ್ಕೃತಿಕವಾಗಿ ಶ್ರೀಮಂತವಾದ ರಿಪ್ಪನ್ ಪೇಟೆಯಲ್ಲಿ ಬಂಟರ ಯಾನೆ ನಾಡವರ ಸಂಘದ ಎರಡನೇ ವರ್ಷದ ವಾರ್ಷಿಕೋತ್ಸವ ಭಾನುವಾರ ಅದ್ದೂರಿಯಾಗಿ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸಾಗರದ ಬಂಟರ ಸಂಘದ ಅಧ್ಯಕ್ಷ ಸುಧೀರ್ ಶೆಟ್ಟಿ ಹಕ್ಲಾಡಿ ಮಾತನಾಡಿ, ಇಂತಹ ಮಹತ್ವದ ಸಮಾರಂಭದಲ್ಲಿ ಭಾಗವಹಿಸುವ ಅವಕಾಶ ನನಗೆ ಹೆಮ್ಮೆಯ ಕ್ಷಣ. ಬಂಟರ ನಾಡವರ ಸಮುದಾಯವು ಶ್ರಮ, ಶಿಸ್ತು, ಸಂಸ್ಕಾರ ಮತ್ತು ಸೇವೆಯನ್ನು ಜೀವನ ಮೌಲ್ಯಗಳಾಗಿ ಅಳವಡಿಸಿಕೊಂಡು ಸಮಾಜದ ಎಲ್ಲಾ ಕ್ಷೇತ್ರಗಳಲ್ಲಿ ತನ್ನದೇ ಆದ ಛಾಪು ಮೂಡಿಸಿದೆ. ಕೇವಲ ಎರಡು ವರ್ಷಗಳಲ್ಲಿ ರಿಪ್ಪನ್ ಪೇಟೆ ಬಂಟರ ಯಾನೆ ನಾಡವರ ಸಂಘ ಸಾಧಿಸಿರುವ ಪ್ರಗತಿ ಶ್ಲಾಘನೀಯವಾಗಿದೆ ಎಂದು ಪ್ರಶಂಸಿಸಿದ ಅವರು, ಸಂಘಟನೆ, ಸಹಕಾರ ಮತ್ತು ಸೇವಾ ಮನೋಭಾವದ ಮೂಲಕ ಸಮಾಜವನ್ನು ಒಗ್ಗೂಡಿಸುವ ಕಾರ್ಯವನ್ನು ಈ ಸಂಘ ಯಶಸ್ವಿಯಾಗಿ ಮಾಡುತ್ತಿದೆ. ಯುವಕರು ಶಿಕ್ಷಣ, ಉದ್ಯೋಗ ಹಾಗೂ ತಂತ್ರಜ್ಞಾನದಲ್ಲಿ ಮುನ್ನಡೆಯುವ ಜೊತೆಗೆ ತಮ್ಮ ಮೂಲ ಸಂಸ್ಕೃತಿಯನ್ನು ಮರೆಯಬಾರದು ಎಂದು ಸಲಹೆ ನೀಡಿದರು. ಸಮಾಜದಲ್ಲಿ ವೇಗವಾಗಿ ಬದಲಾವಣೆ ನಡೆಯುತ್ತಿರುವ ಈ ಕಾಲಘಟ್ಟದಲ್ಲಿ…

Read More

ಪದವಿ ಬದುಕಿನಲ್ಲಿ ಆರಂಭಿಕ ಅವಕಾಶವನ್ನು ಒದಗಿಸಿದರೆ, ಶ್ರೇಷ್ಠತೆಯ ಶಿಖರ ತಲುಪುವುದು ನಮ್ಮ ನಿಲುವು ಹಾಗೂ ಚಿಂತನೆಯಿಂದ ಎಂದು ಪ್ರೊವಿಟ್ ಫುಡ್ಸ್ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕವಿನ್ಸೆಂಟ್ ಕುಟಿನ್ಹಾ ನುಡಿದರು. ಅವರು ಸೋಮವಾರ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ಹಾಗೂ ಕಲಾ ವಿಭಾಗದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ವಾರ್ಷಿಕ ಬಹುಮಾನ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಯ ನೆಲೆಯಲ್ಲಿ ಮಾತನಾಡಿದರು. ಬದುಕಿನ ಸಫಲತೆ ಕೇವಲ ಹುದ್ದೆ ಅಥವಾ ಪ್ರಮಾಣ ಪತ್ರದಲ್ಲಿಲ್ಲ. ಜ್ಞಾನ ಮೌಲ್ಯವನ್ನು ಉಂಟುಮಾಡಿ, ಕೆಲಸ ಸಮಾಜದ ಮೇಲೆ ಪ್ರಭಾವ ಬೀರಿ, ವ್ಯಕ್ತಿತ್ವದಿಂದ ವಿಶ್ವಾಸ ಬೆಳೆದಾಗ ಬದುಕು ಸಾರ್ಥಕ್ಯದೆಡೆಗೆ ಸಾಗಲು ಸಾಧ್ಯ. ಪ್ರಾಮಾಣಿಕತೆ ಮತ್ತು ಶಿಸ್ತು, ಜೀವನದ ಯಶಸ್ಸಿನ ಕೀಲಿಕೈ ಪ್ರಾಮಾಣಿಕತೆ ಮತ್ತು ಶಿಸ್ತು ಒಂದಕ್ಕೊಂದು ಪೂರಕ. ಪ್ರಾಮಾಣಿಕತೆ ವ್ಯಕ್ತಿತ್ವಕ್ಕೆ ನೈತಿಕ ಬಲ ನೀಡಿದರೆ, ಶಿಸ್ತು ಜೀವನಕ್ಕೆ ವೈಯಕ್ತಿಕ ಬಲ ನೀಡುತ್ತದೆ. ಈ ಎರಡು ಗುಣಗಳು ಬೆರೆತಾಗ ವ್ಯಕ್ತಿ ಯಶಸ್ವಿಯಾಗುತ್ತಾನೆ. ೩೦ ಸಾವಿರದಿಂದ ೪೫೦ ಕೋಟಿಗೆ ಸ್ವಯಂನಂಬಿಕೆ, ಪರಿಶ್ರಮ…

Read More

ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳು ದಿನಾಂಕ 27 ಡಿಸೆಂಬರ್ 2025 ರಂದು ಹೆಬ್ರಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜರುಗಿದವು. ಜಿಲ್ಲೆಯ ವಿವಿಧ ಪದವಿ ಪೂರ್ವ ಕಾಲೇಜುಗಳಿಂದ ಆಗಮಿಸಿದ ಪ್ರತಿಭಾವಂತ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಂಡು ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಿದರು. ಈ ಸ್ಪರ್ಧೆಗಳಲ್ಲಿನ ಕನ್ನಡ ಭಾಷಣ ವಿಭಾಗದಲ್ಲಿ ಕ್ರಿಯೇಟಿವ್ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಆದ್ಯ ಎಸ್. ಪಡ್ರೆ ಅವರು ಅತ್ಯುತ್ತಮ ಪ್ರದರ್ಶನ ನೀಡಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಕಾಲೇಜಿಗೆ ಹಾಗೂ ಕಾರ್ಕಳ ತಾಲೂಕಿಗೆ ಹೆಮ್ಮೆಯನ್ನು ತಂದಿದ್ದಾರೆ. ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಮೇಲಿನ ಆಳವಾದ ಅಭಿಮಾನವನ್ನು ತಮ್ಮ ಭಾಷಣದಲ್ಲಿ ಸ್ಪಷ್ಟವಾಗಿ ಪ್ರತಿಬಿಂಬಿಸಿದ ಆದ್ಯ ಅವರು, ಸುಸ್ಪಷ್ಟ ಉಚ್ಚಾರಣೆ, ವಿಚಾರಬದ್ಧ ವಿಷಯ ಪ್ರಸ್ತುತಿ ಹಾಗೂ ಆತ್ಮವಿಶ್ವಾಸಪೂರ್ಣ ನಿರೂಪಣೆಯಿಂದ ಮೆಚ್ಚುಗೆಗೆ ಪಾತ್ರರಾದರು. ಸ್ಪರ್ಧೆಯ ವೇಳೆ ಆದ್ಯ ಅವರು ಸಮಕಾಲೀನ ವಿಚಾರಗಳನ್ನು ಕನ್ನಡದ ಸೊಗಸಿನ ಭಾಷೆಯೊಂದಿಗೆ ಜೋಡಿಸಿ ಮಂಡಿಸಿದ ರೀತಿಗೆ ಪ್ರೇಕ್ಷಕರಿಂದಲೂ ಪ್ರಶಂಸೆ ವ್ಯಕ್ತವಾಯಿತು. ವಿದ್ಯಾರ್ಥಿನಿಯ ಶ್ರಮ,…

Read More

ಪುತ್ತೂರು ತಾಲೂಕು ಯುವ ಬಂಟರ ಸಂಘದ ನೇತೃತ್ವದಲ್ಲಿ ಬಂಟ ಸಮಾಜ ಬಾಂಧವರಲ್ಲಿ ಧಾರ್ಮಿಕ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಆಯೋಜಿಸಲಾದ ಶ್ರೀ ಸತ್ಯನಾರಾಯಣ ಪೂಜೆ ಉತ್ತಮ ಕಾರ್ಯಯವಾಗಿದೆ ಎಂದು ಒಡಿಯೂರು ಶ್ರೀ ಗುರು ದೇವದತ್ತ ಸಂಸ್ಥಾನಮ್ ಶ್ರೀ ಮಾತಾನಂದಮಯೀ ಹೇಳಿದರು. ಅವರು ಡಿಸೆಂಬರ್ 27 ರಂದು ಪುತ್ತೂರು ಯುವ ಬಂಟರ ಸಂಘದ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು, ಪುತ್ತೂರು ತಾಲೂಕು ಸಮಿತಿ ಮತ್ತು ಬಂಟರ ಸಂಘ ಪುತ್ತೂರು ತಾಲೂಕು ಇದರ ಮಾರ್ಗದರ್ಶನದಲ್ಲಿ ಮಹಿಳಾ ಹಾಗೂ ವಿದ್ಯಾರ್ಥಿ ಬಂಟರ ವಿಭಾಗದ ಸಹಯೋಗದಲ್ಲಿ ಪುತ್ತೂರು ಎಂ. ಸುಂದರ ರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ವೇ. ಮೂ. ಪುರೋಹಿತ ನಾಗರಾಜ ಭಟ್ ಸುಳ್ಯ ಇವರ ನೇತೃತ್ವದಲ್ಲಿ ಜರಗಿದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ ಮಾತಾಡಿ ಹರ್ಷಕುಮಾರ್ ರೈ ನಾಯಕತ್ವದಲ್ಲಿ ಯುವ ಬಂಟರ ವಿಭಾಗ ಉತ್ತಮ ಕೆಲಸವನ್ನು ಮಾಡಿ, ಸಮಾಜ ಭಾಂದವರ ಪ್ರೀತಿಗಳಿಸಿದೆ ಎಂದು ಹೇಳಿ ಕಾರ್ಯಕ್ರಮಕ್ಕೆ ಶುಭ…

Read More

ಬ್ರಹ್ಮಾವರ: ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್ ನಲ್ಲಿ ವಿಜ್ಞಾನ ಮಾದರಿ, ಕಲೆ ಹಾಗೂ ಕರಕುಶಲ ವಸ್ತುಗಳ ಪ್ರದರ್ಶನವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಪೂರ್ಣಪ್ರಜ್ಞಾ ವಿಜ್ಞಾನ ಸಂಶೋಧನಾ ಸ0ಸ್ಥೆಯ ನಿರ್ದೇಶಕರಾದ ಡಾ. ಆನಂದ ಆಗಮಿಸಿದ್ದರು. ಅವರು ವಿದ್ಯಾರ್ಥಿ ನಿರ್ಮಿತ ಮಾಯಾಜ್ವಾಲೆ ಮತ್ತು ರಾಕೆಟ್ ಉಡಾವಣೆ ಮಾಡುವ ಮೂಲಕ ವಸ್ತು ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿ ಪೋಷಕರು ವಿಜ್ಞಾನ ವಿಷಯಕ್ಕೆ ತುಂಬಾ ಮಹತ್ವ ನೀಡುತ್ತಾರೆ, ನೀವು ಕ್ರಿಯಾತ್ಮಕ ಯೋಜನೆ, ನಿಮಗಿರುವ ಸಾಮರ್ಥ್ಯದ ಕಡೆಗೆ ಗಮನ ನೀಡಬೇಕು. ಇಂದಿನ ಯುವ ಜನಾಂಗಕ್ಕೆ ತುಂಬಾ ಅವಕಾಶಗಳು ಮತ್ತು ಸೌಲಭ್ಯಗಳಿವೆ ಅವುಗಳನ್ನು ಸೂಕ್ತವಾಗಿ ಉಪಯೋಗಿಸಿಕೊಳ್ಳಿ. ನಿಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಿ. ಭಾರತದ ಶಕ್ತಿ ಯುವಕರು ಎಂದು ತಿಳಿಸಿದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ ಚಿತ್ರಕಲೆ ಮತ್ತು ವಿಜ್ಞಾನ ಮಾದರಿ ತಯಾರಿಕೆಯಲ್ಲಿ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಿದ ಶಿಕ್ಷಕ ವೃಂದದವರಿಗೆ ಕೃತಜ್ಞತೆ ಸಲ್ಲಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಸಂಸ್ಥೆಯ ಪ್ರಾಂಶುಪಾಲರಾದ ಜಾರ್ಜ್…

Read More

ಹೆಬ್ರಿಯಲ್ಲಿ ಇತ್ತೀಚೆಗೆ ನಡೆದ ಉಡುಪಿ ಜಿಲ್ಲಾಮಟ್ಟದ ಪ್ರೌಢಶಾಲಾ ವಿಭಾಗದ (8 ರಿಂದ 12ನೇ ತರಗತಿ) ‘ಪ್ರತಿಭಾ ಕಾರಂಜಿ’ ಸ್ಪರ್ಧೆಯಲ್ಲಿ ಯಡಾಡಿ ಮತ್ಯಾಡಿಯ ಸುಜ್ಞಾನ ಪಿಯು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಉಪನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಾರ್ಕಳ ಹಾಗೂ ಸರ್ಕಾರಿ ಪದವಿಪೂರ್ವ ಕಾಲೇಜು ಹೆಬ್ರಿ ಇವರ ಸಂಯುಕ್ತ ಆಶ್ರಯದಲ್ಲಿ ಈ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ‘ಕನ್ನಡ ಕವನ ವಾಚನ’ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ಶ್ರೀಶಾಂತ್ ಮತ್ತು ‘ಸಂಸ್ಕೃತ ಧಾರ್ಮಿಕ ಪಠಣ’ದಲ್ಲಿ ಪ್ರಥಮ ಸ್ಥಾನ ಪಡೆದ ಭೂಮಿಕಾ ಕಾರಂತ್ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುವ ವಿದ್ಯಾರ್ಥಿಗಳು. ʼಕನ್ನಡ ಭಾಷಣʼ ಸ್ಪರ್ಧೆಯಲ್ಲಿ ಸ್ಪೂರ್ತಿ ದ್ವಿತೀಯ ಸ್ಥಾನ ʼಮಿಮಿಕ್ರಿʼಯಲ್ಲಿ ಮಿಥಿಲ್‌ ತೃತೀಯ ಸ್ಥಾನ ಗಳಿಸಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷರಾದ ಡಾ| ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ…

Read More

ಬಜಪೆ ಬಂಟರ ಸಂಘದ ಯುವಕರ ಹಾಗೂ ಹಿರಿಯರ ನಿರಂತರ ಪ್ರಯತ್ನ ಪರಿಶ್ರಮ ಇಂದಿನ ಈ ಕಾರ್ಯಕ್ರಮವಾಗಿದೆ ಎಂದು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಹೇಳಿದರು. ಅವರು ರವಿವಾರ ಮುಂಡಾರು ತಾರಿಕಂಬ್ಳದ ಬಂಟರ ಸಂಘ ಬಜಪೆ ವಲಯದ ಮೈದಾನದಲ್ಲಿ ಬಂಟರ ಸಂಘ ಬಜಪೆ ವಲಯದ ಆಶಯದಲ್ಲಿ ನಡೆದ ರಾಷ್ಟ್ರೀಯ ಬಂಟರ ಕಲಾ ವೈಭವ, ನೂತನ ಅಧ್ಯಕ್ಷ ಕರಂಬಾರು ಪಡುಮನೆ ವೇಣುಗೋಪಾಲ ಎಲ್ ಶೆಟ್ಟಿ ಅವರ ಪದಗ್ರಹಣ ಸಮಾರಂಭ, ರಾಷ್ಟ್ರೀಯ ಬಂಟರ ಸಂಘಗಳ ಸಾಂಸ್ಕೃತಿಕ ಸ್ಪರ್ಧೆ ಪಾಲ್ದಟ್ಟೆಡ್ ಬಂಟೆರೆ ಪರ್ಬ 2025 ಕಾರ್ಯಕ್ರಮದಲ್ಲಿ ಮಾತನಾಡಿದರು. ವೇಣುಗೋಪಾಲ್ ಎಲ್ ಶೆಟ್ಟಿ ಅವರನ್ನು ಅಧ್ಯಕ್ಷ ಮಾಡುವ ಇಲ್ಲಿನ ಬಂಟರ ಪ್ರಯತ್ನ ಇಂದು ಸಾಕಾರಗೊಂಡಿದೆ. ಸಂಘ ಸಂಸ್ಥೆಯಲ್ಲಿ ಸಣ್ಣ ಸಣ್ಣ ಭಿನ್ನಮತ ಇದ್ದದ್ದೆ. ಅವುಗಳನ್ನು ಪರಿಹಾರ ಮಾಡಿ ಸಹಮತ ಏಕತೆಯ ಮೂಲಕ ಕಾರ್ಯವೆಸಗಬೇಕು ಎಂದು ಅವರು ಹೇಳಿದರು. ಪುಣೆ ಬಂಟರ ಸಂಘದ ಅಧ್ಯಕ್ಷ ಅಜಿತ್ ಹೆಗ್ಡೆ ಕೆಂಜಾರು ಗುತ್ತು, ಮುಡಾರೆ…

Read More

ಕನ್ನಡ ಸಾಹಿತ್ಯವು ಸಮಾಜದ ಒಳನೋವಿಗೆ ಸ್ಪಂದಿಸುವ ಸಂವೇದನಾಶೀಲ ಶಕ್ತಿ. ಅದು ವ್ಯಕ್ತಿಯ ಮನೋವಿಕಾಸಕ್ಕೂ, ಸಮೂಹದ ಸಾಂಸ್ಕೃತಿಕ ಬೆಳವಣಿಗೆಗೂ ಕಾರಣವಾಗುತ್ತದೆ ಎಂದು ಕಾರ್ಕಳ ತಾಲೂಕು 21ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಸಿದ್ದಾಪುರ ವಾಸುದೇವ ಭಟ್ ಅಭಿಪ್ರಾಯಪಟ್ಟರು. ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಭಾನುವಾರ ನಡೆದ ತಾಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಾಹಿತ್ಯವು ಮನುಷ್ಯನನ್ನು ಮನುಷ್ಯನಿಗೆ ಹತ್ತಿರ ಮಾಡುವ ಸಾಧನವಾಗಿದೆ ಎಂದರು. ಜೀವನದ ಕಠಿಣ ಅನುಭವಗಳಿಗೆ ಅರ್ಥ ನೀಡುವ ಶಕ್ತಿ ಸಾಹಿತ್ಯಕ್ಕಿದೆ. ಸಮಾಜದಲ್ಲಿ ಒಳ್ಳೆಯ ಮೌಲ್ಯಗಳನ್ನು ಬೆಳೆಸುವಲ್ಲಿ ಬರಹಗಾರರ ಪಾತ್ರ ಮಹತ್ವದ್ದೆಂದು ಹೇಳಿದರು. ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್, ಸಾಹಿತ್ಯ ಸಮ್ಮೇಳನಗಳು ಆತ್ಮಾವಲೋಕನಕ್ಕೆ ಅವಕಾಶ ನೀಡಬೇಕು ಎಂದು ಹೇಳಿದರು. ಇತ್ತೀಚಿನ ದಿನಗಳಲ್ಲಿ ಸಣ್ಣ ವಿಷಯಗಳು ಹೆಚ್ಚಿನ ಗಮನ ಸೆಳೆಯುತ್ತಿರುವುದು ಗಮನಾರ್ಹ. ಆದರೆ ಒಂದು ಸಾಲಿನ ಸಾಹಿತ್ಯವೂ ಜನಮನದಲ್ಲಿ ದೊಡ್ಡ ಅಲೆ ಎಬ್ಬಿಸಬಲ್ಲ ಶಕ್ತಿ ಹೊಂದಿದೆ ಎಂಬುದು ಈ ಸಂದರ್ಭಗಳಲ್ಲಿ…

Read More