Author: admin
ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ನಗರದ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯುತ್ತಿರುವ ಜಿಲ್ಲಾ ಕರಾವಳಿ ಉತ್ಸವ – 2025 ಅಂಗವಾಗಿ ಡಿಸೆಂಬರ್ 21ರಂದು ದಕ್ಷಿಣೋತ್ತರ ಕನ್ನಡ ಜಿಲ್ಲೆಗಳ ಪ್ರಸಿದ್ಧ ಕಲಾವಿದರಿಂದ ಯಕ್ಷಗಾನ ತಾಳಮದ್ದಳೆ ಜರಗಿತು. ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ನೇತೃತ್ವದ ಆಕಾಶವಾಣಿ ಮತ್ತು ದೂರದರ್ಶನ ಖ್ಯಾತಿಯ ಕರ್ನಾಟಕ ಯಕ್ಷ ಭಾರತಿ ಪುತ್ತೂರು ತಂಡವು ಕರಾವಳಿ ಉತ್ಸವದ ವಸ್ತು ಪ್ರದರ್ಶನ ವೇದಿಕೆಯಲ್ಲಿ ‘ವೀರಮಣಿ ಕಾಳಗ’ ಪ್ರಸಂಗವನ್ನು ಪ್ರಸ್ತುತಪಡಿಸಿತು. ಯಕ್ಷಗಾನ ರಂಗದ ಪ್ರಮುಖ ಅರ್ಥಧಾರಿಗಳಾದ ಡಾ. ಎಂ. ಪ್ರಭಾಕರ ಜೋಶಿ, ಭಾಸ್ಕರ ರೈ ಕುಕ್ಕುವಳ್ಳಿ, ಜಬ್ಬಾರ್ ಸಮೋ ಸಂಪಾಜೆ ಮತ್ತು ಪ್ರಸಾದ ಪೂಜಾರಿ ಭಟ್ಕಳ ವಿವಿಧ ಪಾತ್ರಗಳನ್ನು ನಿರ್ವಹಿಸಿದರು. ಭಾಗವತ ಹರೀಶ ಶೆಟ್ಟಿ ಸೂಡ ಅವರ ಹಾಡುಗಾರಿಕೆಗೆ ವಿಕಾಸ್ ರಾವ್ ಕೆರೆಕಾಡ್ , ಶ್ರೀಶ ರಾವ್ ನಿಡ್ಲೆ ಮತ್ತು ಕೀರ್ತನ್ ಹಿಮ್ಮೇಳದಲ್ಲಿ ಸಹಕರಿಸಿದರು. ಜಿಲ್ಲಾಡಳಿತದ ಪರವಾಗಿ ದ.ಕ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಜಯಲಕ್ಷ್ಮಿ ರಾಯಕೋಡ ಅವರು ಕರ್ನಾಟಕ ಯಕ್ಷ ಭಾರತಿಯ ಸಂಚಾಲಕ…
ಬೆಂಗಳೂರಿನಲ್ಲಿ 2003ರಲ್ಲಿ ನಡೆದ ನೈಜ ಘಟನೆಯನ್ನು ಆಧರಿಸಿ ಚಿತ್ರ ‘ಚಾರ್ಜ್ ಶೀಟ್ 03/08’. ಆ ಘಟನೆಗೆ ಪ್ರತ್ಯಕ್ಷ ಸಾಕ್ಷಿಯಾಗಿದ್ದ ಪೊಲೀಸ್ ಅಧಿಕಾರಿ ಎಸ್.ಕೆ. ಉಮೇಶ್ ಜೀವನಾನುಭವ ಹಾಗೂ ಅವರು ಬರೆದ ಕಾದಂಬರಿಯೇ ಈ ಸಿನಿಮಾದ ಕಥಾಹಂದರ. ಸತ್ಯದ ಹುಡುಕಾಟ, ವ್ಯವಸ್ಥೆಯೊಳಗಿನ ಸಂಘರ್ಷ ಮತ್ತು ನ್ಯಾಯಕ್ಕಾಗಿ ನಡೆಯುವ ಹೋರಾಟವನ್ನು ಈ ಸಿನಿಮಾ ಚಿತ್ರಿಸುವುದರ ಜೊತೆಗೆ ಉತ್ತಮ ಸಂದೇಶವನ್ನೂ ನೀಡಲಿದೆ.ನಿರ್ದೇಶಕ ವೆಂಕಟ್ ಭಾರದ್ವಾಜ್ ಈ ನೈಜ ಕಥೆಗೆ ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದಾರೆ. ಈಗಾಗಲೇ ಚಿತ್ರೀಕರಣ ಮುಗಿದಿದ್ದು, 2000ದ ದಶಕದ ಆರಂಭದ ಬೆಂಗಳೂರಿನ ವಾತಾವರಣವನ್ನು ಇಲ್ಲಿ ನೈಜವಾಗಿ ಸೆರೆ ಹಿಡಿಯಲಾಗಿದೆ. ಚಿತ್ರದಲ್ಲಿ ಸುಂದರ್ ರಾಜ್, ಹರ್ಶ್ ಅರ್ಜುನ್, ಅಮರ್, ಸತೆಯಾ, ರಾಮ್, ಚೇತನ ಖೋಟ್, ಡಾ. ಪ್ರಮೋದ್, ಡಾ. ಸುಧಾಕರ್ ಶೆಟ್ಟಿ, ರೂಪೇಶ್ ಹಾಗೂ ವೆಂಕಟ್ ಭಾರದ್ವಾಜ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಡಾ. ಸುಧಾಕರ ಶೆಟ್ಟಿಯವರ ಮೊದಲ ಚಿತ್ರ ವೆಂಕಟ್ ಭಾರಧ್ವಜ್ ನಿರ್ದೇಶನದ ಹೇ ಪ್ರಭು, ಎರಡನೆ ಚಿತ್ರ ಚಾರ್ಜ್ ಶೀಟ್, ಮೂರನೇ ಚಿತ್ರ…
ನವಿ ಮುಂಬಯಿ ಜೂಯಿ ನಗರದಲ್ಲಿರುವ ಬಂಟ್ಸ್ ಸೆಂಟರಿನಲ್ಲಿ ಸುಮಾರು 12 ವರ್ಷಗಳಿಂದ ಬಾಂಬೆ ಬಂಟ್ಸ್ ಅಸೋಸಿಯೇಶನ್ ಇದರ ಆಡಳಿತದಿಂದ ನಡೆಸಿಕೊಂಡು ಬರುತ್ತಿರುವ ‘ಬಂಟ್ಸ್ ಉನ್ನತ ಶಿಕ್ಷಣ’ ರಾತ್ರಿ ಕಾಲೇಜಿನ ವಾರ್ಷಿಕೋತ್ಸವ ‘ಬಂಟ್ಸ್ ಪರಿಷ್ಕರ್’ ಮತ್ತು ಕಲಿಕೆ, ಆಟೋಟ ಸ್ಪರ್ಧೆಯಲ್ಲಿ ಸಾಧನೆಗೈದ ಮಕ್ಕಳಿಗೆ ಬಹುಮಾನ ವಿತರಣಾ ಕಾರ್ಯಕ್ರಮವು ಡಿಸೆಂಬರ್ 21 ರಂದು ಕಾಲೇಜು ಕಟ್ಟಡದ ಬಂಟ್ಸ್ ಸೆಂಟರ್ ಸಭಾಗೃಹದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯಿತು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ದೀಪಕ್ ಆಳ್ವ (CAO. SP. Jain Institute of Management and Research (JIMR) ವಿದ್ಯಾ ಸಂಸ್ಥೆ ಮತ್ತು ಬಾಂಬೆ ಬಂಟ್ಸ್ ಅಸೋಸಿಯೇಷನ್ ಅಧ್ಯಕ್ಷ ಅಡ್ವೋಕೇಟ್ ಡಿ.ಕೆ ಶೆಟ್ಟಿ, ಉಪಾದ್ಯಕ್ಷ ಐಕಳ ಕಿಶೋರ್ ಶೆಟ್ಟಿ, ಗೌ. ಕಾರ್ಯದರ್ಶಿ ಅಡ್ವೋಕೇಟ್ ಶೇಖರ ರಾಜು ಶೆಟ್ಟಿ, ಗೌ. ಕೋಶಾಧಿಕಾರಿ ಸಿಎ ವಿಶ್ವನಾಥ ಶೆಟ್ಟಿ, ಕಾಲೇಜು ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷ ಅಡ್ವೋಕೇಟ್ ರತ್ನಾಕರ ವಿ.ಶೆಟ್ಟಿ, ಉನ್ನತ ಶಿಕ್ಷಣ ವಿಭಾಗದ ಕಾರ್ಯದರ್ಶಿ ಶ್ರೀಧರ ಕೆ ಶೆಟ್ಟಿ, ಯುವ ವಿಭಾಗದ…
ಕರುನಾಡ ಚಕ್ರವರ್ತಿ ಶಿವರಾಜ ಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿರುವ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಎಂ. ರಮೇಶ್ ರೆಡ್ಡಿ ಅವರು ತಮ್ಮ ಸೂರಜ್ ಪ್ರೊಡಕ್ಷನ್ ಬ್ಯಾನರ್ ನಲ್ಲಿ ನಿರ್ಮಿಸಿರುವ ಕನ್ನಡದ ಬಹು ನಿರೀಕ್ಷಿತ ಮಲ್ಟಿ ಸ್ಟಾರರ್ “45” ಚಿತ್ರ ಇದೇ ಡಿಸೆಂಬರ್ 25 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಇತ್ತೀಚೆಗಷ್ಟೇ ಚಿತ್ರದ ಟ್ರೇಲರ್ ಸಹ ಬಿಡುಗಡೆಯಾಗಿದ್ದು, ನಿರೀಕ್ಷೆಗೂ ಮೀರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇತ್ತೀಚೆಗಷ್ಟೇ ಚಿತ್ರದ ಟ್ರೇಲರ್ ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಬಿಡುಗಡೆಯಾಗಿದ್ದು, ಎಲ್ಲಾ ಕಡೆಗಳಿಂದಲೂ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಹಾಡುಗಳಿಗೂ ಜನರು ಮನ ಸೋತಿದ್ದಾರೆ. ಅರ್ಜುನ್ ಜನ್ಯ ಅವರು ಮೂರು ವರ್ಷಗಳಿಂದ ಚಿತ್ರಕ್ಕಾಗಿ ಪಟ್ಟಿರುವ ಶ್ರಮ ಅಷ್ಟಿಷ್ಟಲ್ಲ. ಮೂರು ವರ್ಷಗಳ ಶ್ರಮವನ್ನು ಈ ಸಿನಿಮಾಗೆ ಹಾಕಿರುವ ನಿರ್ದೇಶಕ ಅರ್ಜುನ್ ಜನ್ಯ ಹಾಗೂ ಚಿತ್ರವನ್ನು ಬಹಳ ಪ್ರೀತಿಯಿಂದ ನಿರ್ಮಾಣ ಮಾಡಿರುವ ನಿರ್ಮಾಪಕ ರಮೇಶ್ ರೆಡ್ಡಿ ಅವರಿಗೆ ಅಭಿನಂದನೆ ಸಲ್ಲಿಸಿ…
ಶಿಕ್ಷಣದ ಅವಕಾಶ ಜೀವನದಲ್ಲಿ ಯಾವಾಗಲೂ ಬರುವುದಿಲ್ಲ. ಮಕ್ಕಳು ವಿದ್ಯಾವಂತರಾದಲ್ಲಿ ಇಡೀ ಕುಟುಂಬ ಮತ್ತು ಸಮಾಜದ ಅಭಿವೃದ್ಧಿಯಾಗುತ್ತದೆ. ಜೀವನದಲ್ಲಿ ಕಲಿಕೆಗೆ ಹೆಚ್ಚಿನ ಒತ್ತು ನೀಡಿದಲ್ಲಿ ಜೀವನದಲ್ಲಿ ಯಶಸ್ಸು ಸಾಧ್ಯ. ಶಿಕ್ಷಣದಿಂದ ಸುಂದರ ಬದುಕು ಕಟ್ಟಿಕೊಳ್ಳುವ ವಿದ್ಯಾದೇಗುಲದ ಅಭಿವೃದ್ಧಿಯಲ್ಲಿ ನಾವು ತೊಡಗಿಸಿಕೊಂಡಲ್ಲಿ ದೇವರ ಅನುಗ್ರಹ ಪ್ರಾಪ್ತಿಯಾಗುತ್ತದೆ ಎಂದು ಮುಂಬಯಿ ಬಂಟರ ಸಂಘದ ಮಾಜಿ ಅಧ್ಯಕ್ಷರಾದ ಸಿಎ ಶಂಕರ ಬಿ ಶೆಟ್ಟಿ ಹೇಳಿದರು. ಅವರು ಡಿಸೆಂಬರ್ 21 ರಂದು ಕುತ್ಯಾರು ವಿದ್ಯಾದಾಯಿನಿ ಹಿ.ಪ್ರಾ. ಶಾಲೆಯ ಆವರಣದಲ್ಲಿ ನಡೆದ ಶಾಲೆಯ ಶತ ಸಂವತ್ಸರೋತ್ಸವ ಸಮಾರೋಪ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ಶಿರ್ವ ವಿದ್ಯಾವರ್ಧಕ ಸಂಘದ ಆಡಳಿತಾಧಿಕಾರಿ ಪ್ರೊ| ವೈ ಭಾಸ್ಕರ ಶೆಟ್ಟಿ ಮಾತನಾಡಿ, ಮಕ್ಕಳಿಗೆ ಸಂಸ್ಕೃತಿ, ಸಂಸ್ಕಾರ ನೀಡುವಲ್ಲಿ ಕನ್ನಡ ಮಾಧ್ಯಮ ಶಾಲೆಗಳು ಹೆಚ್ಚಿನ ಒತ್ತು ನೀಡುತ್ತಿದೆ ಎಂದು ಹೇಳಿದರು. ಸಿಎ ಶಂಕರ ಬಿ ಶೆಟ್ಟಿ ಮತ್ತು ಮುಂಬಯಿ ಉದ್ಯಮಿ ಸದಾಶಿವ ಶೆಟ್ಟಿ ನವೀಕೃತ ಶಾಲಾ ಕೊಠಡಿಯನ್ನು ಉದ್ಘಾಟಿಸಿದರು. ಶಾಲೆಯಲ್ಲಿ ಸೇವೆ ಸಲ್ಲಿಸಿದ ನಿವೃತ್ತ ಮುಖ್ಯ…
ಎಂ.ಆರ್.ಜಿ. ಗ್ರೂಪ್ ನ ಆಶಾ ಪ್ರಕಾಶ್ ಶೆಟ್ಟಿ ಸಹಾಯ ಪ್ರದಾನ ಸಮಾರಂಭ ‘ನೆರವು-2025’ ಡಿಸೆಂಬರ್ 25 ರಂದು ಮಂಗಳೂರಿನಲ್ಲಿ ನಡೆಯಲಿದೆ. ಕೂಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಸುಮಾರು 4000 ಕುಟುಂಬಗಳು ಹಾಗೂ 100 ಕ್ಕೂ ಅಧಿಕ ಸಂಘ ಸಂಸ್ಥೆಗಳಿಗೆ ಒಟ್ಟು ರೂಪಾಯಿ 9 ಕೋಟಿಗೂ ಅಧಿಕ ಮೊತ್ತದ ನೆರವು ವಿತರಣೆಯಾಗಲಿದೆ ಎಂದು ಯೋಜನೆಯ ಪ್ರವರ್ತಕರಾದ ಎಂ.ಆರ್.ಜಿ ಗ್ರೂಪಿನ ಛೇರ್ಮನ್ ಡಾ| ಪ್ರಕಾಶ್ ಶೆಟ್ಟಿ ಮಂಗಳೂರಿನಲ್ಲಿ ಆಯೋಜಿಸಿದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಈ ವರ್ಷ ಯೋಜನೆ ಏಳನೇ ವರ್ಷವನ್ನು ಪೂರೈಸುತ್ತಿದೆ. ಇನ್ನು ಮೂರು ವರ್ಷಗಳ ಕಾಲ ಯೋಜನೆ ಮುಂದುವರಿಯುತ್ತದೆ. ದಶಮಾನೋತ್ಸವ ಬಳಿಕ ‘ನೆರವು’ ಯೋಜನೆಯ ಫಲಾನುಭವಿಗಳನ್ನು ಸೇರಿಸಿಕೊಂಡು ಅದಕ್ಕೊಂದು ಸಾಮೂಹಿಕ ರೂಪ ಕೊಡುವ ಚಿಂತನೆ ಇದೆ. ಈ ವಿಸ್ತರಣೆಯಿಂದ ಪ್ರತೀ ವರ್ಷ ಕನಿಷ್ಠ ಹದಿನಾಲ್ಕು ಸಾವಿರ ಕುಟುಂಬಗಳಿಗೆ ನೆರವು ಕೊಡಲು ಸಾಧ್ಯವಾಗಲಿದೆ ಎಂದವರು ತಮ್ಮ ದೃಷ್ಟಿಕೋನವನ್ನು ಹಂಚಿಕೊಂಡರು. ಇಂದಿನ ಆಧುನಿಕ ತಂತ್ರಜ್ಞಾನ ಯುಗದಲ್ಲಿ ವೈದ್ಯಕೀಯ ಚಿಕಿತ್ಸೆ ಸುಲಭವಾಗಿದೆ. ಆದರೆ ಆ ಸವಲತ್ತುಗಳಿಗೆ ಎಲ್ಲರಿಗೂ…
‘ಮೂಲ್ಕಿ ಸೀಮೆ ಅರಸು ಕಂಬುಲ’ ಶೀರ್ಷಿಕೆಯ ಪುಸ್ತಕವು ಅಕ್ಟೋಬರ್ 24 ರಂದು ಮಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಲೋಕಾರ್ಪಣೆಗೊಂಡಿದ್ದು, ಅದರ ಮರು ಅನಾವರಣ ಮುಂಬಯಿಯ ಪ್ರತಿಷ್ಠಿತ ಬಾಂಬೆ ಬಂಟ್ಸ್ ಅಸೋಸಿಯೇಷನ್ ಇದರ ವತಿಯಿಂದ ಡಿಸೆಂಬರ್ 20 ರಂದು ಸ್ವಾಮಿ ನಿತ್ಯಾನಂದ ಸಭಾಗೃಹದಲ್ಲಿ ಬಾಂಬೆ ಬಂಟ್ಸ್ ಅಸೋಸಿಯೇಷನ್ ಅಧ್ಯಕ್ಷರಾದ ನ್ಯಾಯವಾದಿ ಡಿ.ಕೆ ಶೆಟ್ಟಿಯವರ ದಿವ್ಯ ಹಸ್ತದಿಂದ ಮಾಜಿ ಅಧ್ಯಕ್ಷರುಗಳು, ವಿಶ್ವಸ್ಥರು, ಪ್ರಧಾನ ಕಾರ್ಯಕಾರಿ ಸಮಿತಿ ಮತ್ತು ಸಮಿತಿ ಸದಸ್ಯರ ಸಮಕ್ಷತೆಯಲ್ಲಿ ನಡೆಯಿತು. ಅಧ್ಯಕ್ಷರು ಪುಸ್ತಕದ ಪರಿಚಯ ಮಾಡಿದರೆ ನಂತರದಲ್ಲಿ ಆ ಪುಸ್ತಕದ ಪ್ರತಿಗಳನ್ನು ನಾಮಮಾತ್ರ ಬೆಲೆಗೆ ಎಲ್ಲಾ ಸೇರಿದ ಸಭಿಕರಿಗೆ ಹಂಚಲಾಯಿತು. ಬಂಟ ಸಮಾಜದ ಐತಿಹಾಸಿಕ ವೀರಪುರುಷ ಅಗೋಳಿ ಮಂಜಣ್ಣನಿಂದ ಪ್ರಾರಂಭವಾಗಿ ಆನಂತರದಲ್ಲಿ 1973 ರಿಂದ ಅರಸು ಕಂಬಳ ಸಮಿತಿಯಿಂದ ನಡೆದುಕೊಂಡು ಬಂದಿದೆ ಎಂದು ಐತಿಹಾಸಿಕ ಹಿನ್ನಲೆಯಿರುವ ಮುಲ್ಕಿ ಸೀಮೆಯ ಅರಸು ಕಂಬಳದ ಬಗೆಗೆ ಸರಿಸುಮಾರು ಐವತ್ತು ವರ್ಷಗಳ ವಿಸ್ತೃತ ಅನುಭವವನ್ನು ತೆರೆದಿಟ್ಟಿರುವ ಈ ಪುಸ್ತಕಕ್ಕೆ ನಿಟ್ಟೆ ವಿಶ್ವವಿದ್ಯಾನಿಲಯದ ಕುಲಾಧಿಪತಿ ಹಾಗೂ ಮುಲ್ಕಿ…
ಈಗ ಎಲ್ಲವೂ ಫಾಸ್ಟ್ ಫಾಸ್ಟ್. ಹೊಟ್ಟೆಯಿಂದ ಹೊರ ಬರುವಾಗಲೇ ತಿಂಗಳಾದರೂ ಆಗಿಲ್ಲದಿದ್ದರೂ ಕಾಯುವ ಪ್ರಮೇಯವೇ ಇಲ್ಲ. ಮುಂಚಿನ ದಿವಸದವರೆಗೆ ಎಲ್ಲವೂ ನಾರ್ಮಲ್ ಎಂದ ಡಾಕ್ಟರ್ ಗಳು ಮರು ದಿವಸ ಹೇಳ್ತಾರೆ ಮಗು ತಿರುಗಿದೆ, ಕುತ್ತಿಗೆಗೆ ಕರುಳು ಸಿಕ್ಕಿ ಹಾಕಿಕೊಂಡಿದೆ, ಉಸಿರಾಟ ನಿಧಾನವಾಗಿದೆ ಹಾಗಾಗಿ ಸಿಜೇರಿಯನ್ ಮಾಡಿದರೆ ಉತ್ತಮ. ಮತ್ತೆ ನೀವು ರಿಸ್ಕ್ ತೊಗೋಳ್ತೀರಾದರೆ ಓಕೆ ಎಂದು. ನಾವು ಹೆದರಿ ನೀವೇ ದೇವರು! ಏನು ಹೇಳ್ತೀರೋ ಹಾಗೇ ಡಾಕ್ಟರ್ ಸಿಜೇರಿಯನ್ ಮಾಡಿಸಲು ಒಪ್ಪುತ್ತೇವೆ. ಹೀಗೆ ಗಡಿಬಿಡಿಯಲ್ಲೇ ಬಂದ ಮಕ್ಕಳು ಗಡಿಬಿಡಿಯಲ್ಲೇ ಫಾಸ್ಟ್ ಜಂಕ್ ಫುಡ್ ತಿಂದು ಬೆಳೆದು ಶಾಲೆಯಲ್ಲಿ ಕೆಜಿ ಕ್ವಿಂಟಾಳ್ ತೂಗಿ ಎಸ್.ಎಸ್.ಎಲ್.ಸಿ ಮುಗಿಸಿಕೊಂಡು ಕಾಲೇಜು ಮೆಟ್ಟಲು ಹತ್ತುವಾಗ ಏನು ಕಲಿ ಪ್ರಭಾವವೋ, ಒಳ್ಳೆಯದಕ್ಕಿಂತ ಹೆಚ್ಚು ಕೆಟ್ಟ ಬುದ್ದಿಯನ್ನೇ ಕಲಿಯುತ್ತಿದ್ದಾರೆ !. ಇದಕ್ಕೆ ಕಾರಣ ಈಗಿನ ನಮ್ಮ ಜೀವನ ಶೈಲಿ. ಹೆಚ್ಚಿನ ತಂದೆ ತಾಯಿಗೆ ಮಕ್ಕಳ ಬಗ್ಗೆ ಗಮನ ಕೊಡಲು ಪುರುಸೊತ್ತೇ ಇಲ್ಲ, ಮತ್ತೆ ಆಸಕ್ತಿಯೂ ಕಡಿಮೆಯಾಗಿದೆ. ಕಾರಣ ವ್ಯವಹಾರದ ಇಲ್ಲವೇ…
ಸಜೀಪ ದಸರಾ -2026 : 100ನೇ ವರ್ಷದ ಶ್ರೀ ಶಾರದಾ ಪೂಜಾ ಸಮಿತಿಯ ನೂತನ ಅಧ್ಯಕ್ಷರಾಗಿ ದೇವಿಪ್ರಸಾದ್ ಪೂಂಜ ಆಯ್ಕೆ
ಸಜೀಪ ದಸರಾ – 2026 ಶತಮಾನೋತ್ಸವಕ್ಕೆ ಈಗಿನಿಂದಲೇ ಸಿದ್ಧತೆಗಳು ನಡೆಯುತ್ತಿದೆ. 100ನೇ ವರ್ಷದ ಈ ಸುಂದರ ಕಾರ್ಯಕ್ರಮವನ್ನು ಅದ್ಧೂರಿಯಾಗಿ ನಡೆಸಲು ಸಮಾಲೋಚನ ಸಭೆಗಳನ್ನು ನಡೆಸಲಾಗುತ್ತಿದೆ. ಶತಮಾನೋತ್ಸವ ಸಮಿತಿ, ಶಾರದಾ ಪೂಜಾ ಸಮಿತಿ ಹಾಗೂ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಯೋಚನೆಯನ್ನೂ ಮಾಡಲಾಗುತ್ತಿದೆ. ಇನ್ನು 5 ದಿನ ಶತಮಾನೋತ್ಸವನ್ನು ಆಚರಿಸುವ ಯೋಚನೆಗೆ ಬಂದಿದ್ದು ಈಗಾಗಲೇ ಸಮಿತಿಯನ್ನು ರಚಿಸಿ ಎಲ್ಲರಿಗೂ ಜವಾಬ್ದಾರಿಯನ್ನು ನೀಡಲಾಗಿದೆ ಹಾಗೂ ಸಮಾಜಸೇವೆಯ ಮುಖೇನ ಮತ್ತು ವಿಭಿನ್ನ ಕಾರ್ಯಕ್ರಮಗಳನ್ನು ನಡೆಸುತ್ತಾ, 100ನೇ ವರ್ಷದ ಸಜೀಪ ದಸರಾ ಕಾರ್ಯಕ್ರಮವನ್ನು ಇನ್ನಷ್ಟು ಚಂದಗಾಣಿಸುವ ಕೆಲಸ ಕಾರ್ಯಗಳು ನಡೆಯುತ್ತಿದೆ. ಇನ್ನು ಶತಮಾನೋತ್ಸವದ ಈ 100ನೇ ವರ್ಷದ ಶಾರದಾ ಪೂಜಾ ಸಮಿತಿಯ ನೂತನ ಅಧ್ಯಕ್ಷರಾಗಿ ಸಜೀಪ ಮೂಡ ಗ್ರಾ.ಪಂ ನ ಮಾಜಿ ಅಧ್ಯಕ್ಷರಾದ, ಪ್ರತೀ ಬಾರಿಯೂ ಕಾರ್ಯಕ್ರಮದ ಯಶಸ್ಸಿಗಾಗಿ ಜೊತೆಯಾಗಿ ನಿಲ್ಲುವ ದೇವಿಪ್ರಸಾದ್ ಪೂಂಜ ಆಯ್ಕೆಯಾಗಿದ್ದಾರೆ ಹಾಗೂ ಮಹಿಳಾ ಸಮಿತಿಯ ಅಧ್ಯಕ್ಷರಾಗಿ ಪುಷ್ಪಾವತಿ ರಮೇಶ್ ಸುವರ್ಣ, ಉಪಾಧ್ಯಕ್ಷರಾಗಿ ಗಿರೀಶ್ ಕುಮಾರ್ ಪೆರ್ವ, ಅಶ್ವಿತ್ ಬೇಂಕ್ಯ ಮತ್ತು ಗಂಗಾಧರ ಕೊಲ್ಯ…
ಶಿಬರೂರು ಕ್ಷೇತ್ರದ ತೀರ್ಥ ಬಹಳ ಪ್ರಸಿದ್ಧಿ ಪಡೆದಿದೆ. ಹಿಂದಿನ ಕಾಲದಲ್ಲಿ ಸೂರಿಂಜೆ ಗುತ್ತು ತ್ಯಾಂಪ ಶೆಟ್ಟಿ ತನ್ನ ಗಿಣಿಚಿರಾವಿಯಲ್ಲಿದ್ದ ವಿಷ ಹೀರುವ ಕಲ್ಲನ್ನು ದೈವಗಳನ್ನು ನೆನೆಸಿ ’ಇನ್ನು ಮುಂದೆ ಈ ಬಾವಿಯ ನೀರು ಮತ್ತು ದೈವ ಗಂಧವೇ ವಿಷಕ್ಕೆ ಮದ್ದಾಗಲಿ’ ಎಂದು ಹೇಳಿ ತಿಬಾರಗುತ್ತಿನ ಬಾವಿಗೆ ಹಾಕುತ್ತಾರೆ. ಇದರಿಂದ ಕೊಡಮಣಿತ್ತಾಯ ದೈವಕ್ಕೆ ‘ವೈದ್ಯನಾಥ’ ನೆಂಬ ಅಭಿದಾನ ಪ್ರಾಪ್ತವಾಯಿತು. ಕಾರಣಿಕ ಸ್ಥಳ ಶಿಬರೂರಿನ ತೀರ್ಥದ ಬಾವಿಯಲ್ಲಿ ಸಿಗುವ ತೀರ್ಥವನ್ನು, ದೈವದ ಗಂಧ ಪ್ರಸಾದವನ್ನು ಭಕ್ತಿಯಿಂದ ಸ್ವೀಕರಿಸಿದರೆ ವಿಷನಾಶವಾಗುತ್ತದೆ ಎಂಬ ನಂಬಿಕೆ. ಅಷ್ಟು ಮಾತ್ರವಲ್ಲದೇ ಬಾವಿಯ ತೀರ್ಥ ಮತ್ತು ದೈವದ ಗಂಧ ಪ್ರಸಾದ ಸ್ವೀಕರಿಸುವವರಿಗೆ ನಾಗದೋಷ ನಿವಾರಕ, ಚರ್ಮವ್ಯಾನಾಶಕ, ಉಬ್ಬಸ ರೋಗ ದೂರಿಕರಿಸುವ ಶಕ್ತಿಯಲ್ಲದೇ, ಸಂತಾನ ಪ್ರತಿಬಂಧಕ ದೋಷವೂ ಪರಿಹಾರವಾಗುವುದು. ವಿಷಜಂತು ಕಚ್ಚಿದ ಅನೇಕ ಜನರನ್ನು ರಕ್ಷಿಸಿದ ಜ್ವಲಂತ ಉದಾಹರಣೆಗಳು ಪರಿಸರದಲ್ಲಿ ಕಾಣುತ್ತಿವೆ. ಈ ಬಾವಿಯ ನೀರನ್ನು ಏತದಿಂದಲೇ ಮೇಲಕ್ಕೆತ್ತುತ್ತಾರೆ. ಪ್ರತೀ ವರ್ಷ ನೇಮದ ಸಂದರ್ಭ ಕ್ಷೇತ್ರಕ್ಕೆ ಭೇಟಿ ನೀಡುವ ಐವತ್ತು ಸಾವಿರಕ್ಕೂ ಹೆಚ್ಚು…















