Author: admin

ಮೂಡುಬಿದಿರೆ: ಎಜುಕೇಶನ್ ಡೆಸ್ಕಟಾಪ್-ಆಸ್-ಎ-ಸರ್ವೀಸ್ (EDaaS) ಮೂಲಕ ಸಂಸ್ಥೆಯಲ್ಲಿನ ದತ್ತಾಂಶಗಳ ವ್ಯವಸ್ಥಿತ ನಿರ್ವಹಣೆಗಾಗಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ಮಾಹಿತಿ ತಂತ್ರಜ್ಞಾನದ ಮೂಲಸೌಕರ್ಯಗಳನ್ನು ಒದಗಿಸುವ ಕಾಂಪ್ ಕ್ಲೌಡ್ ಐಟಿ ಸರ್ವಿಸಸ್‌ನ ಜೊತೆಗೆ (CompCloud IT Services) ಮುಂದಿನ ೫ ವರ್ಷಗಳಿಗೆ ಒಡಂಬಡಿಕೆ ಮಾಡಿಕೊಂಡಿದೆ. ಈ ವ್ಯವಸ್ಥೆಯ ನೆರವಿನಿಂದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ತನ್ನ ಸಂಸ್ಥೆಗಳಲ್ಲಿ ವರ್ಚುವಲ್ ಡೆಸ್ಕ್ ಟಾಪ್ ಸೌಕರ್ಯವನ್ನು ಪ್ರತಿ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳಿಗೆ ಪ್ರತ್ಯೇಕವಾಗಿ ಒದಗಿಸಿದ್ದು, ಈ ಮೂಲಕ ಸಾಫ್ಟ್ವೇರ್ ಡಿಫೈನ್ಡ್ ನೆಟ್‌ವರ್ಕ್ಜ (SDN) ಜೊತೆಗೆ ಕೇಂದ್ರೀಕೃತ ಗಣಕ ನಿರ್ವಹಣಾ ವ್ಯವಸ್ಥೆಯನ್ನು ಮಾಡಲಾಗಿದೆ. ಸಾಂಪ್ರದಾಯಿಕ ಡೆಸ್ಕಟಾಪ್ಗಳಿಗೆ ಹೋಲಿಸಿದರೆ, ಎಜುಕೇಶನ್ ಡೆಸ್ಕಟಾಪ್-ಆಸ್-ಎ-ಸರ್ವೀಸ್ ವ್ಯವಸ್ಥೆಯ ಮೂಲಕ ೮೦% ವಿದ್ಯುತ್ ಉಳಿತಾಯವಾಗಲಿದೆ. ಸ್ಕಾಟ್ಲೆಂಡ್‌ನಲ್ಲಿ ನೆಲೆಸಿರುವ ಕಾಂಪ್ ಕ್ಲೌಡ್ ಐಟಿ ಸರ್ವಿಸಸ್‌ನ ವ್ಯವಸ್ಥಾಪಕ ನಿರ್ದೇಶಕ ಪ್ರದೀಪ್ ಪೈ, ಆ ದೇಶದಲ್ಲಿನ ಶಿಕ್ಷಣ ಕ್ಷೇತ್ರದಲ್ಲಿನ ಅತ್ಯಾಧುನಿಕ ಗುಣಮಟ್ಟದ ಮಾಹಿತಿ ತಂತ್ರಜ್ಞಾನದ ಸೇವೆಯನ್ನು ಈ ವ್ಯವಸ್ಥೆಯ ಮೂಲಕ ನೀಡಲಿದ್ದಾರೆ. ಒಡಂಬಡಿಕೆಯ ಕುರಿತು ಮಾತನಾಡಿದ ಸಂಸ್ಥೆಯ ವ್ಯವಸ್ಥಾಪಕ ಟ್ರಸ್ಟಿ ವಿವೇಕ್…

Read More

ಮೂಡುಬಿದಿರೆ: ಆಳ್ವಾಸ್ ಇಂಜಿನಿಯರಿAಗ್ ಕಾಲೇಜಿನ ರೀಡರ್ಸ್ ಕ್ಲಬ್ ವತಿಯಿಂದ “ಸಂಘರ್ಷ(ಕಾನ್ಫಿಕ್ಟ್) ಪತ್ರಕರ್ತನಾಗಿದ್ದಾಗ ಅಹಿತಕರ ಘಟನೆಗಳಿಂದ ಕಲಿತ ಪಾಠಗಳು” ವಿಷಯದ ಕುರಿತು ವಿಶೇಷ ಅತಿಥಿ ಉಪನ್ಯಾಸ ಕಾರ್ಯಕ್ರಮ ಆಳ್ವಾಸ್ ಎಂಬಿಎ ಸೆಮಿನಾರ್‌ನಲ್ಲಿ ಶನಿವಾರ ನಡೆಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಸಂಘರ್ಷ ವರದಿಗಾರ, ಲೇಖಕ ಮತ್ತು ಸಿನಿಮಾ ನಿರ್ಮಾಪಕ ಅವಲೋಕ್ ಲ್ಯಾಂಗರ್ ಪತ್ರಿಕೋದ್ಯಮ ವೃತ್ತಿಯಲ್ಲಿ ಊಹೆ ಸಲ್ಲದು. ರವಾನಿಸುವ ಪ್ರತಿ ಸುದ್ದಿಯನ್ನು ಸೂಕ್ಶ್ಮತೆಯಿಂದ ಅವಲೋಕಿಸಿ.ಜಾಲತಾಣದಲ್ಲಿ ಬರುವ ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ. ಹೊಸ ಆವಿಷ್ಕಾರ, ಪ್ರಯೋಗಗಳ ಕಡೆಗೆ ಹೆಚ್ಚು ಗಮನ ನೀಡುವುದರೊಂದಿಗೆ ಸತ್ಯವನ್ನು ಶೋಧಿಸುವ ಮಾರ್ಗದಲ್ಲಿ ಪ್ರಶ್ನಿಸುವ ಮನೋಭಾವವನ್ನು ವಿದ್ಯಾರ್ಥಿ ದಿನಗಳಲ್ಲೇ ಬೆಳೆಸಿಕೊಳ್ಳಿ. ಲಭಿಸಿದ ಎಲ್ಲಾ ಅವಕಾಶಗಳನ್ನು ಸದ್ವಿನಿಯೋಗ ಪಡಿಸಿಕೊಳ್ಳಿ ಎಂದು ಸಲಹೆ ನೀಡಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ , ಕಾಲೇಜು ದಿನಗಳಲ್ಲಿ ವಿದ್ಯಾರ್ಥಿಗಳ ಬೌದ್ಧಿಕ ಜ್ಞಾನವನ್ನು ಹೆಚ್ಚಿಸಲು ರೀಡರ್ಸ್ ಕ್ಲಬ್ ಕೈಗೊಳ್ಳುತ್ತಿರುವ ಕರ‍್ಯಗಳು ಶ್ಲಾಘನೀಯ. ಇಂದಿನ ಯುವಜನತೆಯಲ್ಲಿ ಆಲೋಚನಾ ಶಕ್ತಿಯ ಕೊರತೆ ಇದೆ. ಎಲ್ಲ ಮಾಹಿತಿಗಳನ್ನು…

Read More

ವಿದ್ಯಾಗಿರಿ: ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನ ಮತ್ತು ಜೈವಿಕ ವಿಜ್ಞಾನ ವಿಲೀನಗೊಂಡು ಸಂಶೋಧನಾ ಅಧ್ಯಯನ ನಡೆಸಲು ಪೂರಕ ವಾತವರಣ ನಿರ್ಮಾಣವಾಗುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದು ಮಣಿಪಾಲ ಕೆಎಂಸಿಯ ಔಷಧಶಾಸ್ತ್ರ ವಿಭಾಗದ ಸಂಶೋಧನಾ ಸಹಾಯಕಿ ಡಾ. ರಮ್ಯಾ ಕಟೀಲ್ ಹೇಳಿದರು. ಆಳ್ವಾಸ್ (ಸ್ವಾಯತ್ತ)ಕಾಲೇಜಿನ ಜೈವಿಕ ವಿಜ್ಞಾನ ವಿಭಾಗ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಮಂಗಳೂರು ಇದರ ಸಹಯೋಗದೊಂದಿಗೆ ಕುವೆಂಪು ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡ “ಜೈವಿಕ ವಿಜ್ಞಾನಗಳಲ್ಲಿ ಇತ್ತೀಚಿನ ಪ್ರಗತಿಗಳು ಮತ್ತು ನಾವೀನ್ಯತೆಗಳು” ಕುರಿತು ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು. ವೈಜ್ಞಾನಿಕ ವಿಚಾರ ಸಂಕಿರಣವು ಸಂಶೋಧನಾರ್ಥಿಗಳಿಗೆ ಸೃಜನಾತ್ಮಕ ಜ್ಞಾನ, ವಿಚಾರ ವಿನಿಮಯ ಮತ್ತು ಅಧ್ಯಯನದಲ್ಲಿ ಪಾಲ್ಗೊಳ್ಳಲು ಸಹಕಾರಿ ಎಂದರು.ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಮಂಗಳೂರು ಇಲ್ಲಿನ ಪರಿಸರ ಅಧಿಕಾರಿ ಡಾ. ಎಚ್. ಲಕ್ಷ್ಮಿಕಾಂತ, ಸಂಶೋಧನಾ ಪ್ರಬಂಧಗಳನ್ನು ತಯಾರಿಸುವ ಸಂದರ್ಭಗಳಲ್ಲಿ ಹಲವಾರು ಬಾರಿ ನಿರಾಕರಣೆಯಾಗುವ ಸಂಭವ ಎದುರಾಗಬಹುದು. ಪರಿಶ್ರಮ ಮತ್ತು ಸ್ಥಿರತೆಯಿಂದ ಅಧ್ಯಯನವನ್ನು ಪೂರ್ಣಗೊಳಿಸಿ. ಪ್ರತಿ ಅಧ್ಯಯನದಲ್ಲಿಯೂ ಕುತೂಹಲ ಮತ್ತು ಪ್ರಶ್ನಿಸುವ…

Read More

ವಿಶ್ವ ಬಂಟ ಪ್ರತಿಷ್ಠಾನದಿಂದ 2024-25ನೇ ಸಾಲಿನ ವಿದ್ಯಾರ್ಥಿ ವೇತನ ಹಾಗೂ ಬಡ್ಡಿ ರಹಿತ ಶೈಕ್ಷಣಿಕ ಸಾಲ ವಿತರಣಾ ಸಮಾರಂಭ ನಗರದ ಮೋತಿಮಹಲ್ ಹೋಟೆಲ್ ಸಭಾಂಗಣದಲ್ಲಿ ನಡೆಯಿತು. ಒಟ್ಟು 165 ವಿದ್ಯಾರ್ಥಿಗಳಿಗೆ 36.70 ಲಕ್ಷ ರೂ.ವಿದ್ಯಾರ್ಥಿ ವೇತನ ಹಾಗೂ ಬಡ್ಡಿ ರಹಿತ ಶೈಕ್ಷಣಿಕ ಸಾಲ ನೀಡಲಾಯಿತು. ವಿದ್ಯಾರ್ಥಿ ದತ್ತಿ ನಿಧಿಯಿಂದ ಪ್ರಸಕ್ತ ಸಾಲಿನಲ್ಲಿ 9 ವಿದ್ಯಾರ್ಥಿಗಳಿಗೆ 1.75 ಲಕ್ಷ ರೂ. ನೀಡಲಾಯಿತು. ಪ್ರತಿಷ್ಠಾನದ ಅಧ್ಯಕ್ಷ ಡಾ. ಎ.ಜೆ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಸುಧೀರ್ ಕುಮಾರ್ ಶೆಟ್ಟಿ, ಖಜಾಂಜಿ ಸಿಎ ಸುದೇಶ್ ಕುಮಾರ್ ರೈ.ಬಿ, ಯೋಜನಾ ನಿರ್ದೇಶಕ ಡಾ. ಸಂಜೀವ ಬಿ ರೈ, ಜೈರಾಜ್ ಬಿ ರೈ, ಬೂಡಿಯಾರ್ ರಾಧಾಕೃಷ್ಣ ರೈ, ಚಂದ್ರಶೇಖರ ಭಂಡಾರಿ, ಡಾ. ಪ್ರಶಾಂತ್ ಕುಮಾರ್ ರೈ, ಬಲರಾಜ್ ರೈ, ಜ್ಯೋತಿ ಆಳ್ವ, ಶಂಕರಿ ರೈ, ವರಲಕ್ಷ್ಮಿ ಮಲ್ಲಿ ಉಪಸ್ಥಿತರಿದ್ದರು. ವಿಶ್ವ ಬಂಟ ಪ್ರತಿಷ್ಠಾನ ಕಳೆದ 28 ವರ್ಷಗಳಲ್ಲಿ 6,000ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಿ ಅವರ…

Read More

ನೀರಿನ ಲವಂಗದ 8 ಆಶ್ಚರ್ಯಕರ ಪ್ರಯೋಜನಗಳ ಬಗ್ಗೆ ನಿಮಗೆ ಬಹುಶಃ ತಿಳಿದಿಲ್ಲ. ಲವಂಗಗಳು ತಮ್ಮ ದಪ್ಪ ಸುವಾಸನೆ ಮತ್ತು ಔಷಧೀಯ ಗುಣಗಳಿಗೆ ಹೆಸರು ವಾಸಿಯಾಗಿದೆ. ಆದರೆ ಲವಂಗವನ್ನು ನೀರಿನಲ್ಲಿ ನೆನೆಸುವುದು ಇನ್ನಷ್ಟು ಆರೋಗ್ಯ ಪ್ರಯೋಜನಗಳನ್ನು ಅನ್ಲಾಕ್ ಮಾಡುತ್ತದೆ. ರಾತ್ರಿಯಿಡೀ ಕೆಲವು ಲವಂಗಗಳನ್ನು ನೆನೆಸಿ ಮತ್ತು ತುಂಬಿದ ನೀರನ್ನು ಸೇವಿಸುವ ಮೂಲಕ ತಯಾರಿಸಲಾದ ಲವಂಗದ ನೀರು, ಆಂಟಿ ಆಕ್ಸಿಡೆಂಟ್‌ಗಳು, ಉರಿಯೂತದ ಏಜೆಂಟ್‌ಗಳು ಮತ್ತು ಆರೋಗ್ಯಕರ ಜೀವನ ಶೈಲಿಯನ್ನು ಬೆಂಬಲಿಸಲು ಸಹಾಯ ಮಾಡುವ ಅಗತ್ಯ ಪೋಷಕಾಂಶಗಳಿಂದ ತುಂಬಿರುತ್ತದೆ. ನೀರಿನ ಲವಂಗದ ಎಂಟು ಆಶ್ಚರ್ಯಕರ ಪ್ರಯೋಜನಗಳು ಇಲ್ಲಿವೆ. ಅದು ನಿಮ್ಮ ದಿನಚರಿಯಲ್ಲಿ ಈ ನೈಸರ್ಗಿಕ ಪರಿಹಾರವನ್ನು ಸೇರಿಸಲು ಬಯಸುತ್ತದೆ. 1. ಜೀರ್ಣಕಾರಿ ಆರೋಗ್ಯವನ್ನು ಹೆಚ್ಚಿಸುತ್ತದೆ. ಲವಂಗದ ನೀರು ಜೀರ್ಣಕಾರಿ ಕಿಣ್ವಗಳ ಸ್ರವಿಸುವಿಕೆಯನ್ನು ಉತ್ತೇಜಿಸುವ ಮೂಲಕ ಜೀರ್ಣಕ್ರಿಯೆಯಲ್ಲಿ ಸಹಾಯ ಮಾಡುತ್ತದೆ. ಆಹಾರವನ್ನು ಹೆಚ್ಚು ಪರಿಣಾಮಕಾರಿಯಾಗಿ ಒಡೆಯಲು ಸಹಾಯ ಮಾಡುತ್ತದೆ. ಲವಂಗದ ನೈಸರ್ಗಿಕ ಸಂಯುಕ್ತಗಳು ಉಬ್ಬುವುದು, ಅನಿಲ ಮತ್ತು ಅಜೀರ್ಣವನ್ನು ನಿವಾರಿಸುತ್ತದೆ. ಇದು ಸೂಕ್ಷ್ಮ ಹೊಟ್ಟೆ ಅಥವಾ ಜೀರ್ಣಕಾರಿ…

Read More

ಪರಶುರಾಮ ಸೃಷ್ಠಿಯ ಸಪ್ತ ಕ್ಷೇತ್ರಗಳಲ್ಲೊಂದಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರವು ಪುರಾಣ, ಇತಿಹಾಸ ಕಾಲಗಳಿಂದಲೂ ನಾಗಾರಾಧನೆಗೆ ಪ್ರಸಿದ್ಧಿಯಾಗಿದ್ದು, ವಾಸುಕೀ ಸನ್ನಿಹಿತ ಶ್ರೀ ಸುಬ್ರಹ್ಮಣ್ಯ ದೇವರು ಭಕ್ತಾದಿಗಳ ಕಾಮನೆಗಳ ಪ್ರದಾಯಕನಾಗಿ, ಈ ಕ್ಷೇತ್ರದ ಅಧಿದೇವತೆಯಾಗಿ ನೆಲೆಸಿರುತ್ತಾನೆ. ಈ ಕ್ಷೇತ್ರವನ್ನು ಗುಪ್ತ ಕ್ಷೇತ್ರವೆಂಬುವುದಾಗಿಯೂ ಕರೆಯುತ್ತಾರೆ. “ಮೃತ್ತಿಕಾ” (ಮಣ್ಣು) ಪ್ರಸಾದ ಇಲ್ಲಿನ ಶ್ರೇಷ್ಠ ಪ್ರಸಾದವಾಗಿದೆ. ಪವಿತ್ರ ಕುಮಾರಧಾರ ತೀರ್ಥ ಸ್ನಾನದಿಂದ ಕುಷ್ಠ ರೋಗದಂತಹ ಭಯಾನಕ ರೋಗಗಳೂ, ಚರ್ಮ ವ್ಯಾಧಿಗಳೂ ಶಮನವಾಗುವುದೆಂಬುದು ಭಕ್ತರ ಅಪಾರ ನಂಬಿಕೆ. ಶ್ರೀ ದೇವರಿಗೆ ಅನ್ನದಾತ ಸುಬ್ಬಪ್ಪನೆಂಬ ನಾಮಾಭಿದಾನವಿದ್ದು, ಶ್ರೀ ಕ್ಷೇತ್ರದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾದಿಗಳಿಗೆ ನಿತ್ಯ ಅನ್ನ ಸಂತರ್ಪಣೆ ನಡೆಯುತ್ತಿದೆ. ಸರ್ಪದೋಷದಿಂದ ಬರುವಂತಹ ಸಂತಾನ ಹೀನತೆ, ಚರ್ಮ ವ್ಯಾಧಿ, ದೃಷ್ಠಿ ಮಾಂದ್ಯ, ಭೂಮಿದೋಷವೇ ಮೊದಲಾದ ಜ್ವಲಂತ ಸಮಸ್ಯೆಗಳಿಗೆ ಪರಿಹಾರವಾಗಿ ಸರ್ಪಸಂಸ್ಕಾರ, ನಾಗಪ್ರತಿಷ್ಠೆ, ಅಶ್ಲೇಷ ಬಲಿ, ಇತ್ಯಾದಿ ಪ್ರಮುಖ ಹರಕೆ ಸೇವೆಗಳನ್ನು ಭಕ್ತರು ಇಲ್ಲಿ ನಡೆಸಿ ಕೃತಾರ್ಥರಾಗುತ್ತಾರೆ. ಪೌರಾಣಿಕ ಕಥೆ : ಶ್ರೀ ಕುಮಾರಸ್ವಾಮಿಯು ತಾರಕಾಸುರ ಶೂರ ಪದ್ಮಾಸುರ ಹಾಗೂ ಅವನ ಅನುಯಾಯಿಗಳನ್ನು…

Read More

ಮೂಡುಬಿದಿರೆ: ‘ಶಿಕ್ಷಣ ವ್ಯವಸ್ಥೆಯ ಆರಂಭದಲ್ಲೆ, ಒಬ್ಬ ವ್ಯಕ್ತಿಯಾಗಿ ತನ್ನ ಜೀವನದ ಉದ್ದೇಶವೇನೆಂಬುದನ್ನು ಅರಿಯಬೇಕು’ ಎಂದು ಕೋಟೇಶ್ವರದ ರಾಜಾರಾಮ್ ಪೋಲಿಮರ್ಸ್ ಸಂಸ್ಥೆಯ ಸ್ಥಾಪಕ ಸುರೇಶ್ ಕಾಮತ್ ಹೇಳಿದರು. ಆಳ್ವಾಸ್(ಸ್ವಾಯತ್ತ) ಕಾಲೇಜಿನ ಮ್ಯಾನೇಜ್‌ಮೆಂಟ್ ವಿಭಾಗದ ವತಿಯಿಂದ ಹಮ್ಮಿಕೊಂಡ ಎಂತುಝಿಯಾ ಕೋರ್ಪೊ ಕನೆಕ್ಟ್ ಫೆಸ್ಟ್ ನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜೀವನದಲ್ಲಿ ಗುರಿಯನ್ನು ಆರಂಭದಲ್ಲೆ ಅರಿಯುವುದು ಉತ್ತಮ. ಪ್ರತಿ ಕೆಲಸದಿಂದ ಬರುವ ಅನುಭವದಿಂದ ಬದುಕನ್ನು ಶ್ರೇಷ್ಠತೆಯೆಡೆಗೆ ಒಯ್ಯುವ ಕೆಲಸವಾಗಬೇಕಿದೆ ಎಂದರು. ಮುಖ್ಯಅತಿಥಿ ನೆಲೆಯಲ್ಲಿ ಮಾತನಾಡಿದ ಯುವ ಪ್ರತಿನಿಧಿ ಮಿಥುನ್ ರೈ, ವೃತ್ತಿಪರ ಜೀವನವನ್ನು ಅತ್ಯುತ್ತಮ ರೀತಿಯಲ್ಲಿ ರೂಪಿಸಿಕೊಳ್ಳಲು ಮ್ಯಾನಜ್ಮೆಂಟ್ ಪದವಿ ಸೂಕ್ತ ಆಯ್ಕೆ. ಎಲ್ಲವನ್ನು ಪರಿಶ್ರಮದಿಂದ ಕಲಿಯಬೇಕು. ಸವಾಲುಗಳನ್ನು ಎದುರಿಸಿ ಮುನ್ನಡೆಯುವವ ನಿಜವಾದ ನಾಯಕನೆನಿಸಿಕೊಳ್ಳಬಲ್ಲ. ಪ್ರತಿಯೊಬ್ಬರಲ್ಲೂ ಪ್ರತಿಭೆ ಇದೆ ಅದನ್ನು ತಾವೇ ಗುರುತಿಸಿಕೊಳ್ಳಬೇಕು ಹಾಗೂ ಉಪನ್ಯಾಸಕರು ಸರಿಯಾದ ಮಾರ್ಗದರ್ಶನ ನೀಡಬೇಕು ಎಂದರು. ದಶಕಗಳ ಹಿಂದೆ ತಾನು ಪದವಿ ವಿದ್ಯಾರ್ಥಿಯಾಗಿದ್ದಾಗ ಆಯೋಜಿಸಿದ ಅಂತಾರಾಷ್ಟ್ರೀಯ ಸಮ್ಮೇಳನ ಯಶಸ್ಸನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಡರು. ಏಷ್ಯಾ ಖಂಡದ ಹಲವು ದೇಶಗಳ ಪ್ರತಿನಿಧಿಗಳು ಪಾಲ್ಗೊಂಡು,…

Read More

ಒಬ್ಬ ರಾಜ ತನ್ನ ರಾಜ್ಯ ನೋಡಲು ಕುದುರೆಯನೇರಿ ಹೊರಟ. ಒಂದೂರಿನ ಹಾದಿಯಲ್ಲಿ ಹೋಗುವಾಗ ಆತನಿಗೆ ತುಂಬಾ ಹಸಿವಾಯಿತು. ಸುತ್ತಮುತ್ತ ನೋಡಿದಾಗ ಬೃಹದಾಕಾರದ ಮರದಲ್ಲಿ ತುಂಬಾ ಹಣ್ಣುಗಳು ಜೋತು ಬಿದ್ದಿದ್ದವು. ಆ ಮರ ಎತ್ತರವಿದ್ದ ಕಾರಣ ಒಂದು ಹಣ್ಣೂ ಆತನ ಕೈಗೆ ಎಟಕಲಿಲ್ಲ. ಆಗ ಮರ ಕಡಿಯುವವನೊಬ್ಬ ಸಾಕಷ್ಟು ಹಣ್ಣುಗಳನ್ನು ಕೊಯ್ದು ರಾಜನಿಗೆ ಕೊಟ್ಟ ತಕ್ಷಣ ಆತ ಅದನ್ನು ಗಬಗಬನೆ ತಿಂದು ಮರ ಕಡಿಯುವವನಿಗೆ ಚಿನ್ನದ ನಾಣ್ಯಗಳನ್ನು ಕೊಟ್ಟು ಮುಂದೆ ಸಾಗಿದ. ಹೀಗೆ ಸಾಗುವಾಗ ಆತ, ನಾನು ರಾಜನಾದರೂ ನನಗೆ ಮರ ಏರಲು ತಿಳಿದಿಲ್ಲ. ಇದೆಂತಹ ಅವಮಾನ ಎಂದು ಮರುಗಿದ. ಹೀಗೆ ದೂರ ಸಾಗುವಾಗ ಬಿಸಿಲು ಆತನಿಗೆ ಸುಸ್ತಿನ ಜೊತೆಗೆ ನಿದ್ರೆ ಬರಲು ಶುರುವಾಯಿತು. ಮರದ ಕೆಳಗೆ ಮಲಗಿದರೂ ಆತನಿಗೆ ನಿದ್ರೆ ಬರಲಿಲ್ಲ. ದೂರದಲ್ಲಿ ಮರಗೆಲಸದವನೊಬ್ಬ ತನ್ನ ತಲೆಗೆ ಕಟ್ಟಿದ್ದ ತುಂಡು ಬಟ್ಟೆ ಹಾಸಿ ಗಾಢ ನಿದ್ರೆಗೆ ಜಾರಿದ್ದ. ಆಗ ರಾಜನಿಗೆ, ಅವನಿಗೆ ಆ ಭಗವಂತ ಅದೆಷ್ಟು ಸುಖ ನಿದ್ರೆ ಕರುಣಿಸಿದ್ದಾನೆ. ಕಲ್ಲು,…

Read More

ಕರೀಮ್ ನಗರ ಹೋಟೆಲ್ ಉದ್ಯಮಿಗಳಿಂದ ಯುವ ಸಂಘಟಕ ಕುಂದಾಪುರ ತಾಲೂಕು ಯುವ ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಡಾ| ಅಂಪಾರು ನಿತ್ಯಾನಂದ ಶೆಟ್ಟಿಯವರನ್ನು ಹೋಟೆಲ್ ಗೀತಾ ಭವನ್ ನಲ್ಲಿ ಹಿರಿಯ ಹೋಟೆಲ್ ಉದ್ಯಮಿಗಳಾದ ಕೊಡ್ಲಾಡಿ ಗಂಜಿಕೂಡ್ಲು ಶಿವರಾಮ ಶೆಟ್ಟಿ ಸನ್ಮಾನಿಸಿ ಗೌರವಿಸಿದರು. ಇದೇ ಸಂದರ್ಭದಲ್ಲಿ ಹೋಟೆಲ್ ಉದ್ಯಮಿಗಳಾದ ರವೀಂದ್ರ ಶೆಟ್ಟಿ ಅಮಾಸೆಬೈಲು, ಅಲ್ತಾರು ಭಾಸ್ಕರ ಶೆಟ್ಟಿ, ಗಿರೀಶ್ ಉಪಸ್ಥಿತರಿದ್ದರು.

Read More

ಸನಾತನ ಹಿಂದೂ ಧರ್ಮ ನಿರಂತರವಾಗಿದೆ. ಎಷ್ಟೇ ಅಡೆ ತಡೆ ಬಂದರೂ ಯಾವುದೇ ರೀತಿಯಲ್ಲೂ ನಿಲ್ಲದು. ಇದು ಶಾಶ್ವತ ಧರ್ಮ ಎಂಬುದನ್ನು ಜಗತ್ತು ತಿಳಿದುಕೊಳ್ಳಬೇಕು. ನಮ್ಮ ಸನಾತನ ಹಿಂದೂ ಧರ್ಮದ ಜ್ಞಾನ ಭಂಡಾರವನ್ನು ಎಷ್ಟು ಅರಿತು ಕೊಂಡರೂ ಕಡಿಮೆಯೇ. ಅದರೆ ಹಿಂದೂ ಜ್ಞಾನವನ್ನು ಪಡೆಯುವುದು ಇಂದಿನ ಕಾಲಕ್ಕೆ ಬಹು ಮುಖ್ಯ. ನಮ್ಮಹಿಂದೂಗಳ ಜಾತಿಯನ್ನು ಬದಿಗಿಟ್ಟು ಧರ್ಮವನ್ನು ಅಪ್ಪಿಕೊಳ್ಳಿ. ಇದರಿಂದ ಮಾತ್ರ ಧರ್ಮ ಜಾಗೃತಿಯಾಗಲು ಸಾದ್ಯ. ಜಾತಿ ಮನೆಯ ಒಳಗಿರಲಿ, ಆದರೆ ದೇಶಕ್ಕಾಗಿ ಸನಾತನ ಧರ್ಮಕ್ಕಾಗಿ ಹಿಂದೂವಾಗಿ ಸಮಾಜದಲ್ಲಿ ಗುರುತಿಸಿಕೊಳ್ಳಬೇಕು. ನಾವೆಲ್ಲಾ ಹಿಂದೂ ನಾವೆಲ್ಲಾ ಒಂದು ಎಂಬ ಭಾವನೆ ನಮ್ಮಲ್ಲಿರಲಿ. ಧರ್ಮ ಜಾಗೃತಿ ಮನೆ ಮನೆಯಲ್ಲೂ ಬೆಳಗಬೇಕು. ಮನೆ ಮನೆಯಲ್ಲೂ ಹಿಂದೂ ಧರ್ಮ ಜಾಗೃತಿಯೊಂದಿಗೆ ಮಗು ಹುಟ್ಟಿ ಬರಬೇಕು. ಆವಾಗ ಮಾತ್ರ ಸಂಘಟಿತ ಬಲ ಬರಲು ಸಾಧ್ಯ. ಮಕ್ಕಳಿಗೆ ಧರ್ಮ ಭೋಧನೆ ಪ್ರತಿ ಮನೆಯಲ್ಲೂ ಅಗಬೇಕು. ಹಿಂದೂವಾಗಿ ಜನಿಸಿ, ಬದುಕಿ, ಹಿಂದೂ ನನ್ನ ಜನ್ಮ ಸಿದ್ದ ಹಕ್ಕು ಎಂಬಂತೆ ದೇಶಕ್ಕಾಗಿ ಬದುಕಿ ತೋರಿಸಬೇಕು. ಹಿಂದೂ…

Read More