Author: admin

ಜಾತಿ ಸಂಘಟನೆಗಳಲ್ಲಿ ಯುಎಇಯ ಅತೀ ಹಿರಿಯ ಸಂಸ್ಥೆ ಯುಎಇ ಬಂಟ್ಸ್ ನ ವತಿಯಿಂದ ಜುಲೈ 27 ರಂದು ಪ್ರಥಮ ಬಾರಿಗೆ ಯುಎಇಯ ಈ ಮರಳು ಭೂಮಿಯಲ್ಲಿ “ದುಬೈ ಬಂಟೆರ್ನ‌ ಆಟಿಡೊಂಜಿ ದಿನ” ಕಾರ್ಯಕ್ರಮ ಯಶಸ್ವಿಯಾಗಿ ಜರಗಿತು. ಕಾರ್ಯಕ್ರಮದಲ್ಲಿ ಯುಎಇಯ ಎಲ್ಲಾ ರಾಜ್ಯದ ಬಂಟ ಬಾಂಧವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿ ಕಾರ್ಯಕ್ರಮವೆಂದು ಸಾಬೀತು ಪಡಿಸಿಕೊಟ್ಟರು. ಬೆಳಿಗ್ಗೆ ಹತ್ತು ಗಂಟೆಗೆ ಯುಎಇಯ ಬಂಟ್ಸ್ ನ ಮಹಿಳೆಯರು ದೀಪವನ್ನು ಬೆಳಗಿಸಿ ಪ್ರಾರ್ಥನೆ ಗೀತೆಯೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮ ಆರಂಭಗೊಂಡಿತು. ನಂತರ ಯುಎಇಯ ಬಂಟ ಬಂಧು ಭಗಿಣಿಯರಿಂದ ಸಂಗೀತ ರಸಮಂಜರಿ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಬಳಿಕ ಸಭಾ ವೇದಿಕೆಯಲ್ಲಿ ದುಬೈ ಬಂಟೆರ್ನ ಆಟಿಡೊಂಜಿ ದಿನ ಕಾರ್ಯಕ್ರಮದ ಉದ್ಘಾಟನೆಯನ್ನು ಯುಎಇ ಬಂಟ್ಸ್ ನ ಹಿರಿಯ ಮಹಾ ಪೋಷಕರಾದ ಡಾ. ಬಿ.ಆರ್ ಶೆಟ್ಟಿ, ಕಾರ್ಯಕ್ರಮದ ಮುಖ್ಯ ಅತಿಥಿ ಹಾಗೂ ಮುಖ್ಯ ಪ್ರಾಯೋಜಕರಾದ ರಾಮೀ ಗ್ರೂಪ್ ಆಫ್ ಹೋಟೆಲ್ಸ್ ಆಂಡ್ ರೆಸಾರ್ಟ್ಸ್ ಇದರ ಆಡಳಿತ ನಿರ್ದೇಶಕರಾದ ವರದರಾಜ್ ಎಮ್ ಶೆಟ್ಟಿ, ಸಹ ಪ್ರಾಯೋಜಕರಾದ…

Read More

ಮನುಷ್ಯನಿಗೆ ಎಲ್ಲಾ ಸಂಪತ್ತಿಗಿಂತಲೂ ಆರೋಗ್ಯ ಸಂಪತ್ತು ಅತೀ ಮುಖ್ಯವಾಗಿದ್ದು, ಆರೋಗ್ಯ ಕಾಳಜಿ ಬಹಳ ಮುಖ್ಯ. ಆರೋಗ್ಯ ಕಾಪಾಡಿಕೊಳ್ಳಲು ಉಪಯೋಗವಾಗುವಂತಹ ಇಂತಹ ಉಚಿತ ವೈದ್ಯಕೀಯ ವಿಚಾರ ಸಂಕಿರಣಗಳಲ್ಲಿ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು. ಬೋಂಬೆ ಬಂಟ್ಸ್ ಅಸೋಸಿಯೇಷನ್ ನ ಸಮಾಜ ಸೇವೆ, ಶಿಕ್ಷಣ, ವೈದ್ಯಕೀಯ ಮೊದಲಾದ ಸಮಾಜಪರ ಕಾರ್ಯಗಳಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದು ಬೋಂಬೆ ಬಂಟ್ಸ್ ಅಸೋಸಿಯೇಷನ್ ಅಧ್ಯಕ್ಷ ನ್ಯಾಯವಾದಿ ಡಿ.ಕೆ ಶೆಟ್ಟಿ ಅವರು ತಿಳಿಸಿದರು. ಬೋಂಬೆ ಬಂಟ್ಸ್ ಅಸೋಸಿಯೇಷನ್ ವತಿಯಿಂದ ಜುಲೈ 26ರಂದು ಜೂಯಿ ನಗರದ ಬಂಟ್ಸ್ ಸೆಂಟರ್ ನ ಸೌಮ್ಯಲತಾ ಸದಾನಂದ ಶೆಟ್ಟಿ ಸಭಾಗೃಹದ ಭಾರತಿ ಡಾ. ವೈ. ಶಿವಾನಂದ ಶೆಟ್ಟಿ ವೇದಿಕೆಯಲ್ಲಿ ನಡೆದ ವೈದ್ಯಕೀಯ ವಿಚಾರ ಸಂಕಿರಣದಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂದು ಎಲ್ಲಾ ವೈದ್ಯರು ತಮ್ಮ ಅಮೂಲ್ಯ ಸಮಯ ಮತ್ತು ಪರಿಣಿತ ಜ್ಞಾನವನ್ನು ಸಮಾಜ ಬಾಂಧವರೊಂದಿಗೆ ಮುಕ್ತವಾಗಿ ಹಂಚಿಕೊಂಡಿರುವುದು ಅಭಿನಂದನೀಯ. ಅದಕ್ಕಾಗಿ ಅವರೆಲ್ಲರಿಗೂ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುತ್ತೇನೆ. ಸಮಾಜ ಬಾಂಧವರ ಆರೋಗ್ಯದ ಬಗ್ಗೆ ಕಾಳಜಿ…

Read More

ವೀರಮಂಗಲ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಪಿಎಂಶ್ರೀ ಸಮುದಾಯದ ಸಹಭಾಗಿತ್ವ ಕಾರ್ಯಕ್ರಮದಡಿ ಇಕೋಕ್ಲಬ್, ಸ್ಕೌಟ್ ಆಂಡ್ ಗೈಡ್, ಸಾಹಿತ್ಯ ಕ್ಲಬ್ ಸೇವಾದಳ, ಸಾಂಸ್ಕೃತಿಕ ಕ್ಲಬ್ ಆಯೋಜಿಸಿದ ತುಳುನಾಡಿನ ಸಂಸ್ಕೃತಿಗಳ ಪರಿಚಯವನ್ನು ಮಾಡುವ ಉದ್ದೇಶದಿಂದ ಸಂಪನ್ಮೂಲ ವ್ಯಕ್ತಿಗಳಿಂದ ಮಾತುಕತೆ, ತುಳುನಾಡಿನ ಆಷಾಡ ಮಾಸದ ತಿನಿಸುಗಳು ಹಾಗೂ ತುಳುನಾಡ ಬಲಿಯೇಂದ್ರೆ ಎಂಬ ಯಕ್ಷಗಾನ ತಾಳಮದ್ದಳೆಯು ಶಾಲಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟಣೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರವಿಚಂದ್ರ ಇವರು ನೆರವೇರಿಸಿದರು. ತಾಸೆ ಡೋಳು ಬಾರಿಸಿ ತುಳು ಸಂಸ್ಕೃತಿಯನ್ನು ಉದ್ಘಾಟಿಸಿ ಮಾತನಾಡಿದ ರಾಕೇಶ್ ರೈ ಕೆಡೆಂಜಿಯವರು, ತುಳುನಾಡು ಬಾರ್ಕೂರಿನಿಂದ ಕಾಸರಗೋಡಿನ ತನಕ ವ್ಯಾಪಿಸಿದೆ. ಇಲ್ಲಿಯ ಆಚರಣೆಗಳು, ಇಲ್ಲಿನ ಜನರ ಪ್ರೀತಿ, ನಂಬಿಕೆಗಳು, ಆರಾದನೆಗಳು, ಜಾಗತೀಕರಣದ ಜಂಜಾಟದಲ್ಲಿ ಬದುಕು ಮರೆಯಾಗಿ ಯಾಂತ್ರಿಕತೆಗೆ ವಾಲುತ್ತಿರುವ ದಿನಮಾನಗಳಲ್ಲಿ ತುಳು ಸಂಸ್ಕೃತಿಯ ಬದುಕು ಕಟ್ಟಿಕೊಳ್ಳುವ ಕಾಯಕ ಶಾಲೆಗಳಲ್ಲಿ ಆಗುತ್ತಿರುವುದು ಸ್ತುತ್ಯಾರ್ಹ್ಯ ಎಂದರು. ಶಾಲೆಯಲ್ಲಿ ಸಿದ್ಧಗೊಳಿಸಿದ ತುಳು ಆಹಾರ ಖಾದ್ಯಗಳನ್ನು ಉದ್ಘಾಟಿಸಿ ಮಾತನಾಡಿದ ಭಾಗ್ಯೇಶ್ ರೈಯವರು, ಆಹಾರಗಳು ಮನುಷ್ಯನ ಮೇಲೆ ವಿಶೇಷವಾದ…

Read More

ಬಂಟರ ಸಂಘ ಅಳಿಕೆ ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಮತ್ತು ಅಷ್ಟಾವದಾನ ದುರ್ಗಾ ಪೂಜೆಯು ಎರುಂಬು ವಿಷ್ಣುಮಂಗಲ ದೇವಸ್ಥಾನದ ಸಭಾ ಭವನದಲ್ಲಿ ಬಹಳ ಅಚ್ಚುಕಟ್ಟಾಗಿ ವಿಜೃಂಭಣೆಯಿಂದ ನಡೆಯಿತು. ಪ್ರಾರಂಭದಲ್ಲಿ ವಿಷ್ಣುಮಂಗಲ ದೇವಸ್ಥಾನದಲ್ಲಿ ಸಂಕಲ್ಪ ಮಾಡಿ, ಸಭಾಭವನದಲ್ಲಿ ದೀಪ ಬೆಳಗಿಸುವ ಮೂಲಕ ಬಾಲಕೃಷ್ಣ ಕಾರಂತರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಂಟ ಬಾಂಧವರಿಂದ ಭಜನೆ, ನಂತರ ನೂತನ ಪದಾಧಿಕಾರಿಗಳ ಪದಗ್ರಹಣ ನಡೆಯಿತು. ನಿಕಟಪೂರ್ವ ಅಧ್ಯಕ್ಷ ರಾಜೇಂದ್ರ ರೈ ಪಡಿಬಾಗಿಲು ಇವರು ನೂತನ ಕಮಿಟಿಗೆ ಅಧಿಕಾರ ಹಸ್ತಾಂತರಿಸಿದರು. ಬಂಟರ ಮಹಿಳಾ ವಿಭಾಗ, ಯುವ ಬಂಟರ ವಿಭಾಗ ಅಳಿಕೆ ಮತ್ತು ಬಂಟರ ಸಂಘ ಅಳಿಕೆಯ ಪದಗ್ರಹಣ ಸಮಾರಂಭ ಹಿರಿಯರ ಸಮ್ಮುಖದಲ್ಲಿ ನಡೆಯಿತು. ಬಂಟರ ಸಂಘ ಅಳಿಕೆಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಮೋಹನದಾಸ್ ರೈಯವರು ಮುಂದಿನ ಮೂರು ವರ್ಷದ ಕಾಲಾವಧಿಯಲ್ಲಿ ಎಲ್ಲರ ಸಂಪೂರ್ಣ ಸಹಕಾರವಿರಲೆಂದು ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿಯಲ್ಲಿ 90% ಕ್ಕಿಂತ ಅಧಿಕ ಅಂಕ ಪಡೆದ ಇಬ್ಬರು ಮಕ್ಕಳನ್ನು ಸನ್ಮಾನಿಸಲಾಯಿತು. ಬಳಿಕ ಅಷ್ಟಾವದಾನ ಸೇವೆ…

Read More

ಯುನಿವರ್ಸಲ್ ಸಮೂಹ ಶಿಕ್ಷಣ ಸಂಸ್ಥೆ ವತಿಯಿಂದ ಪಿಯು ಕಾಲೇಜಿನ ಪ್ರಾಂಶುಪಾಲರು ಹಾಗೂ ಉಪ ಪ್ರಾಂಶುಪಾಲರಿಗಾಗಿ ವಿಶೇಷವಾಗಿ ನಾಯಕತ್ವ ಹಾಗೂ ಚಿಂತನ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ಆಗಸ್ಟ್ 2 ರಂದು ಬೆಳಗ್ಗೆ 11ರಿಂದ ಸಂಜೆ 4.30 ರವರೆಗೆ ಕೆಂಗೇರಿಯಲ್ಲಿರುವ ಯುನಿವರ್ಸಲ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಕೀರ್ಣದ ಕೋಲೂರು ಶಾಖೆಯಲ್ಲಿ ಕಾರ್ಯಾಗಾರ ನಡೆಯಲಿದೆ. ಶಿಕ್ಷಣ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಆರ್. ಉಪೇಂದ್ರ ಶೆಟ್ಟಿ ನೇತೃತ್ವ ವಹಿಸಲಿದ್ದು, ‘ಶೈಕ್ಷಣಿಕ ಕ್ಷೇತ್ರದಲ್ಲಿನ ಪ್ರಸ್ತಕ ಸವಾಲುಗಳು ಹಾಗೂ ಶೈಕ್ಷಣಿಕ ಆಡಳಿತದಲ್ಲಿ ಕೃತಕ ಬುದ್ಧಿಮತ್ತೆಯ ಪಾತ್ರ’ ಕುರಿತು ಕಾರ್ಯಕ್ರಮ ನಡೆಯಲಿದೆ.ಕೃತಕ ಬುದ್ಧಿಮತ್ತೆ ಮೂಲಕ ಶೈಕ್ಷಣಿಕ ಆಡಳಿತ ಮತ್ತು ನಿರ್ಧಾರಗಳ ಯಶಸ್ಸಿಗೆ ಸಹಾಯ ಮಾಡುವುದರ ಜತೆಗೆ ಶಿಕ್ಷಣ ಸಂಸ್ಥೆಗಳು ಹೊಸ ಸವಾಲು ಎದುರಿಸುವುದರ ಕುರಿತು ಚರ್ಚೆ ನಡೆಯಲಿದೆ. ನೋಂದಣಿ ಉಚಿತವಾಗಿದ್ದು, ಶೈಕ್ಷಣಿಕ ಆಡಳಿತದಲ್ಲಿ ಎಐ ಕುರಿತು ತಜ್ಞರ ಭಾಷಣ, ಪಿಯು ಕಾಲೇಜು ಮುಖ್ಯಸ್ಥರೊಂದಿಗೆ ನೆಟ್ ವರ್ಕಿಂಗ್ ಅವಕಾಶ ಇರಲಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9686664985 ಗೆ ಸಂಪರ್ಕಿಸಬಹುದು.

Read More

ಸೈಂಟ್ ಅಲೋಶಿಯಸ್ ಕಾಲೇಜು ಮಂಗಳೂರಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಕಾಮರ್ಸ್ ಫೆಸ್ಟ್ ಪ್ರಯುಕ್ತ ನಡೆಸಲ್ಪಟ್ಟ ಎಕನಾವಾಂಝ ಇಂಟರ್ ಕಾಲೇಜುಗಳ ವಿವಿಧ ಸ್ಪರ್ಧಾವಳಿಗಳಲ್ಲಿ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ ಪಡೆಯುವುದರ ಮೂಲಕ ಚಾಂಪಿಯನ್ ಶಿಪ್ ನೊಂದಿಗೆ, ನಗದು ಪುರಸ್ಕಾರವನ್ನು ಪಡೆದುಕೊಂಡು ಸಂಸ್ಥೆಗೆ ಕೀರ್ತಿ ತಂದಿರುತ್ತಾರೆ. ವಿದ್ಯಾರ್ಥಿಗಳಾದ ಆದ್ಯ ಪಡ್ರೆ, ಚಿರಾಯು, ಸುಜೀತ್, ಶ್ರೇಯಸ್, ಮಂಗಿಲಲ್, ಅನ್ವಿತ್, ಕಿಶನ್, ಚಿನ್ಮಯ್, ಸೃಷ್ಟಿ, ಅರುಷಿ, ಸೋನಿಯಾ, ಸಂಜನಾ, ಪ್ರೇರಣಾ, ಹರ್ಷಿತ, ಅನಿಷಾ,ವೃದ್ಧಿ, ದ್ಯುತಿ, ಪೂರ್ವಿ ವಿವಿಧ ಸ್ಪರ್ಧೆ ಯಲ್ಲಿ ಭಾಗವಹಿಸಿ ಕಾಲೇಜಿಗೆ ಸಮಗ್ರ ಪ್ರಶಸ್ತಿ ಯನ್ನು ತಂದು ಕಾಲೇಜಿನ ಕೀರ್ತಿ ಹೆಚ್ಚಿಸಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಗೆ ಆಡಳಿತ ಮಂಡಳಿ, ಬೋಧಕ ಬೋಧಕೇತರ ವೃಂದ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

Read More

ಈಗ ಎಲ್ಲಾ ಸಂಸ್ಥೆಗಳು ಆಟಿಯನ್ನು ವೈವಿಧ್ಯಮಯವಾಗಿ ಆಚರಿಸುತ್ತಿದ್ದಾರೆ. ಇದು ನಮ್ಮ ಸಂಸ್ಕೃತಿಯ ತಿರುಳನ್ನು ತಿಳಿಸುತ್ತದೆ. ಇವತ್ತು ಈ ಸಮಿತಿ ಕೃಷಿ ಸಂಸ್ಕೃತಿಗೆ ವಿಶೇಷ ಮಹತ್ವ ನೀಡಿರುವುದು ಸಂತೋಷವಾಗಿದೆ. ನಾನು ಕೂಡಾ ಕೃಷಿಯ ಎಲ್ಲಾ ಬಗೆಯ ಕೆಲಸದಲ್ಲಿ ನನ್ನನ್ನು ತೊಡಗಿಸಿಕೊಂಡವನು ಎನ್ನಲು ಆನಂದವಾಗುತ್ತದೆ. ಇಲ್ಲಿನ ಕಾರ್ಯಾಧ್ಯಕ್ಷರಾದ ಸೂರಜ್ ಶೆಟ್ಟಿ ಅವರು ಬಹಳ ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಶಿಕ್ಷಣಕ್ಕೆ, ವೈದ್ಯಕೀಯ ಕ್ಷೇತ್ರಕ್ಕೆ ಅಂಧೇರಿ ಬಾಂದ್ರಾದ ಕೊಡುಗೆ ಮಹತ್ವದ್ದು. ಇಂದು ಸಮಿತಿಯ ಪದಾಧಿಕಾರಿಗಳು ವಿಶೇಷ ಸಂವಾದ ಕಾರ್ಯಕ್ರಮ ನಡೆಸಿಕೊಟ್ಟದ್ದನ್ನು ನೋಡಿ, ನಿಮ್ಮ ಮಾತುಗಳನ್ನು ಕೇಳಿ ಖುಷಿಯಾಗಿದೆ. ಮಹಿಳೆಯರನ್ನು ಸಾಂಘಿಕವಾಗಿ, ಸಾಂಸ್ಕ್ರತಿಕವಾಗಿ ಒಗ್ಗೂಡಿಸಿ ಪ್ರತಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ ಶೋಭಾ ಅಮರನಾಥ ಶೆಟ್ಟಿ ಅವರು ಉತ್ತಮ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಸಮಿತಿ ಅಂದಿನಿಂದ ಇಂದಿನವರೆಗೂ ಎಲ್ಲಾ ವಿಧದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ. ಆಟಿ ತಿಂಗಳ ಆಚರಣೆ ನಮ್ಮ ಸಂಸ್ಕೃತಿ ಸಂಸ್ಕಾರದ ಉಳಿವಿನೊಂದಿಗೆ ಸಹಭೋಜನದೊಂದಿಗೆ ಭಾಂಧವ್ಯವನ್ನು ಬೆಸೆಯುವ ಕೆಲಸ ಮಾಡುತ್ತಿದೆ ಎಂದು ಬಂಟರ ಸಂಘ ಮುಂಬಯಿಯ ಅಧ್ಯಕ್ಷರಾದ ಪ್ರವೀಣ ಭೋಜ…

Read More

ಅನ್ಯ ಉದ್ಯೋಗವಿಲ್ಲದೆ ಕೇವಲ ಕೃಷಿ ಕಾಯಕದಲ್ಲಿ ತೊಡಗಿದ್ದ ನಮ್ಮ ಹಿರಿಯರು ತೀರಾ ಕಷ್ಟ ಕಾರ್ಪಣ್ಯಗಳನ್ನು ಎದುರಿಸುತ್ತಿದ್ದ ಕಾಲ ಆಟಿ. ಆಗ ತೀವ್ರ ಬಡತನ, ನಿರುದ್ಯೋಗ ಮತ್ತು ರೋಗ ರುಜಿನಗಳಿಂದ ಜನ ನರಳುತ್ತಿದ್ದರು. ಆದರೆ ಆಟಿ ಅನಿಷ್ಟವೆಂದು ಅವರೆಂದೂ ಭಾವಿಸಿರಲಿಲ್ಲ; ಅದು ಅವರ ಬದುಕಿಗೆ ನಿಷ್ಠವಾಗಿತ್ತು. ನೈಸರ್ಗಿಕವಾಗಿ ದೊರೆಯುವ ವಸ್ತುಗಳನ್ನೇ ಸೇವಿಸಿ ದಿನ ದೂಡುತ್ತಿದ್ದವರಿಗೆ ಆಹಾರವೇ ಔಷಧಿಯೂ ಆಗಿತ್ತು ಎಂದು ವಿಶ್ರಾಂತ ಪ್ರಾಧ್ಯಾಪಕ, ಕರ್ನಾಟಕ ಜಾನಪದ ಯಕ್ಷಗಾನ ಮತ್ತು ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಭಾಸ್ಕರ ರೈ ಕುಕ್ಕುವಳ್ಳಿ ಹೇಳಿದ್ದಾರೆ. ಗುರುಪುರ ಸರಕಾರಿ ಪದವಿಪೂರ್ವ ಕಾಲೇಜಿನ ‘ಪಿಂಗಾರ’ ತುಳು ಸಂಘದ ಆಶ್ರಯದಲ್ಲಿ ಜರಗಿದ ಆಟಿಡೊಂಜಿ ದಿನ ಕಾರ್ಯಕ್ರಮದಲ್ಲಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಕಾಟಿಪಳ್ಳ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯೆ ಅನುಸೂಯ ಕೆ.ಪಿಯವರು ತೆಂಗಿನ ಗರಿ ಅರಳಿಸಿ ಸಾಂಪ್ರದಾಯಿಕ ಶೈಲಿಯಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಾಲ್ಯಪದವು ಸರಕಾರಿ ಕಿರಿಯ ಕಾಲೇಜಿನ ಇತಿಹಾಸ ಉಪನ್ಯಾಸಕ ಕೇಶವ ಪೂಜಾರಿ ಮುಖ್ಯ ಅತಿಥಿಗಳಾಗಿದ್ದರು. ಗುರುಪುರ ಸರಕಾರಿ ಪದವಿಪೂರ್ವ…

Read More

ಬಂಟರ ಸಂಘ ಫರಂಗಿಪೇಟೆ ವಲಯದ ನೂತನ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಮತ್ತು ಆಟಿದ ಗಮ್ಮತ್ ಕಾರ್ಯಕ್ರಮ ಬಂಟವಾಳದ ಬಂಟರ ಭವನದ ಆರ್ ಎನ್ ಶೆಟ್ಟಿ ಸಭಾಂಗಣದಲ್ಲಿ ಜುಲೈ 27 ರಂದು ಜರಗಿತು. ಮಾಜಿ ಸಚಿವ ಬಿ ರಮಾನಾಥ ರೈಯವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಬಂಟ ಸಮುದಾಯ ಇತರ ಸಮುದಾಯದವರನ್ನು ಗೌರವಿಸುವ ಸಮಾಜ. ಅದಕ್ಕಾಗಿಯೇ ನಮಗೆ ಇತರ ಸಮಾಜದವರು ಕೂಡಾ ನಾಯಕತ್ವವನ್ನು ನೀಡುತ್ತಾರೆ. ನಾವಾಗಿಯೇ ನಾಯಕತ್ವವನ್ನು ಪಡೆದಿರುವುದಲ್ಲ. ಇತರರು ನಮಗೆ ನೀಡಿರುವುದೆಂದು ಹೇಳಿದರು. ವಿಶ್ವನಾಥ ಶೆಟ್ಟಿ ಕೊಟ್ಟಿಂಜ ಗುತ್ತು ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬಂಟ ಸಮುದಾಯ ಸಾಹಸಿ ಪ್ರವೃತ್ತಿಯವರು. ಎಲ್ಲಾ ರಂಗಗಳಲ್ಲಿಯೂ ಬಂಟರು ತನ್ನ ವಿಶೇಷ ಛಾಪು ಮೂಡಿಸಿದ್ದಾರೆ ಎಂದು ಶಶಿ ಹಾಸ್ಪಿಟಾಲಿಟಿ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ ಬರೋಡ ಇದರ ಸಿಎಂಡಿ ಶಶಿಧರ ಶೆಟ್ಟಿ ಬರೋಡರವರು ಭಾಗವಹಿಸಿ ಮಾತನಾಡಿದರು. ವೇದಿಕೆಯಲ್ಲಿ ಮಂಗಳೂರು ತಾಲೂಕು ಬಂಟರ ಸಂಘದ ಅಧ್ಯಕ್ಷರಾದ ನಿಟ್ಟೆ ಗುತ್ತು ರವಿರಾಜ್ ಶೆಟ್ಟಿ, ಬಂಟ್ವಾಳ ತಾಲೂಕು ಬಂಟರ ಸಂಘದ…

Read More

ಕಲಾಪ್ರಕಾಶ ಪ್ರತಿಷ್ಠಾನ (ರಿ.) ಮುಂಬಯಿ ಇವರ ಸಂಯೋಜನೆಯಲ್ಲಿ ಪ್ರಶಸ್ತಿ ವಿಜೇತ ಶ್ರೀ ಮಹಾಗಣಪತಿ ಮಹಿಳಾ ಯಕ್ಷಗಾನ ಸಂಘ ಬಾಳ ಕಾಟಿಪಳ್ಳ ಕಲಾವಿದರು ಅಭಿನಯಿಸುವ, ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿ ಪುರಸ್ಕೃತೆ ಪೂರ್ಣಿಮಾ ಯತೀಶ್ ರೈ ನಿರ್ದೇಶನದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನ ಜುಲೈ 26 ರಂದು ಹೊಟೇಲ್ ಗ್ಯಾಲಕ್ಸಿ ನಾಲಾಸೋಪಾರ (ಪ) ಇಲ್ಲಿ ನಡೆಯಿತು. ಯಕ್ಷಗಾನದ ಮಧ್ಯಂತರದಲ್ಲಿ ತಂಡದ ನಿರ್ದೇಶಕಿ ಸುಮಾರು ಒಂದು ಸಾವಿರಕ್ಕೂ ಮಿಕ್ಕಿ ಮಹಿಷಾಸುರ ಪಾತ್ರದಲ್ಲಿ ಸಂಭ್ರಮಿಸಿದ ಪೂರ್ಣಿಮಾ ಯತೀಶ್ ರೈ, ತೆಂಕುತಿಟ್ಟಿನ ಹಿರಿಯ ಚೆಂಡೆ ವಾದಕ ಸುಬ್ರಹ್ಮಣ್ಯ ಭಟ್ ದೇಲಂತ ಮಜಲು ಹಾಗೂ ಕಟೀಲು ಮೇಳದ ಭಾಗವತ ಸತೀಶ್ ಬೊಂದೆಲ್ ಇವರನ್ನು ಸನ್ಮಾನಿಸಲಾಯಿತು. ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ತುಳುಕೂಟ ಫೌಂಡೇಶನ್ ನಾಲಾಸೋಪಾರ ಅಧ್ಯಕ್ಷ ಶಶಿಧರ ಕೆ ಶೆಟ್ಟಿ ಇನ್ನಂಜೆ ಮಾತನಾಡುತ್ತಾ, ಕಲೆ ಮತ್ತು ಕಲಾವಿದರಿಗೆ ನಿರಂತರವಾಗಿ ಈ ಪರಿಸರದ ಎಲ್ಲಾ ಕಲಾಪೋಷಕರು ಸಹಕಾರವನ್ನು ನೀಡುತ್ತಾ ಬಂದವರು. ಪ್ರಕಾಶ್ ಶೆಟ್ಟಿ ಅವರು ಊರಿನಿಂದ ನಾಟಕ,…

Read More