Author: admin
ರಾಜಕಾರಣಿಗಳಿಂದ ಹಿಡಿದು ಸಮಾಜದ ವಿವಿಧ ವಿಭಾಗಗಳ, ನಾನಾ ಸ್ಥರಗಳ ಜನರು ಗುರುವಾರ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಮಂಗಳೂರಿನ ಶಿವಭಾಗ್ನಲ್ಲಿರುವ ನಿವಾಸದಲ್ಲಿ ನಿಟ್ಟೆ ಸಮೂಹ ಸಂಸ್ಥೆಗಳ ಅಧ್ಯಕ್ಷ ವಿನಯ ಹೆಗ್ಡೆ ಅವರ ಪಾರ್ಥಿವ ಶರೀರದ ದರ್ಶನ ಪಡೆದು ಕಣ್ಣೀರಾದರು. ಕಾರ್ಕಳದ ನಿಟ್ಟೆ ಎಂಜಿನಿಯರಿಂಗ್ ಕಾಲೇಜಿಲ್ಲಿ ವಿದ್ಯಾರ್ಥಿಗಳು, ಗ್ರಾಮಸ್ಥರು ಮತ್ತು ವಿವಿಧ ವಲಯಗಳ ಜನರು ಗೌರವ ಸಲ್ಲಿಸಿ ಕಣ್ಣೀರಿನೊಂದಿಗೆ ವಿದಾಯ ಹೇಳಿದರು. ವಿನಯ ಹೆಗ್ಡೆ ತಮ್ಮ ತಂದೆ ತಾಯಿ ಚಿರನಿದ್ರೆಗೈದಿರುವ ಕಾರ್ಕಳ ಸಮೀಪದ ನಿಟ್ಟೆ ಶಿಕ್ಷಣ ಸಂಸ್ಥೆಯ ಕ್ರೀಡಾಂಗಣದ ಬಳಿ ಇರುವ ‘ಸನ್ಮತಿ’ಯ ಸಮೀಪ ಪಂಚಭೂತಗಳಲ್ಲಿ ಲೀನವಾದರು. ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಾಧಿಪತಿ ವಿನಯ ಹೆಗ್ಡೆ ಅವರು ಸ್ಥಾಪಿಸಿದ ನಿಟ್ಟೆ ಎಜುಕೇಷನ್ ಟ್ರಸ್ಟ್ನ 43 ಸಂಸ್ಥೆಗಳಲ್ಲಿ 29 ಸಾವಿರ ವಿದ್ಯಾರ್ಥಿಗಳು ಕಲಿಯುತ್ತಿದ್ದು, 5,500 ಮಂದಿ ಉದ್ಯೋಗದಲ್ಲಿದ್ದಾರೆ. ಹೀಗಾಗಿ ಶಿವಭಾಗ್ನ ಮನೆಯಲ್ಲೂ ನಿಟ್ಟೆಯ ಕ್ಯಾಂಪಸ್ನಲ್ಲೂ ಅವರನ್ನು ಕೊನೆಯದಾಗಿ ಒಮ್ಮೆ ನೋಡಲು ಬಂದವರ ಸಾಲು ದೊಡ್ಡದಿತ್ತು. ಮಧ್ಯಾಹ್ನ ತಲುಪಿದ ಸಹೋದರ ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಅಣ್ಣನಿಗೆ…
ಪಿಂಪ್ರಿ ಚಿಂಚ್ವಾಡ್ ಬಂಟರ ಸಂಘದ ಆಶ್ರಯದಲ್ಲಿ ಬಂಟ್ಸ್ ಒಲಂಪಿಕ್ಸ್ ಮತ್ತು ವಾರ್ಷಿಕ ಕ್ರೀಡಾಕೂಟವು ಡಿ 25 ರಂದು ನಗರದ ಮದನ್ ಲಾಲ್ ಡಿಂಗ್ರಾ ಮೈದಾನದಲ್ಲಿ ಜರಗಿತು. ಜಗದೀಶ್ ಶೆಟ್ಟಿ ನೇತೃತ್ವದಲ್ಲಿ ಕ್ರೀಡಾ ಕಾರ್ಯಾಧ್ಯಕ್ಷ ಜಯ ಶೆಟ್ಟಿ ರೆಂಜಾಳ, ಯುವ ವಿಭಾಗದ ಕಾರ್ಯಾಧ್ಯಕ್ಷ ಶುಭಂ ಶೆಟ್ಟಿ, ಆಕಾಶ್ ಶೆಟ್ಟಿಯವರ ಮುಂದಾಳತ್ವದಲ್ಲಿ ಪುಣೆ ಪರಿಸರದ ಬಂಟರ ಸಂಘ ಪಿಂಪ್ರಿ ಚಿಂಚ್ವಾಡ್, ಬಂಟರ ಸಂಘ ಪುಣೆ ಮತ್ತು ಬಂಟ್ಸ್ ಅಸೋಸಿಯೇಷನ್ ಮೂರು ಬಂಟರ ಸಂಘಗಳ ಪಾಲ್ಗೊಳ್ಳುವಿಕೆಯಲ್ಲಿ ನಡೆದ ಬಂಟ್ಸ್ ಒಲಂಪಿಕ್ಸ್ ನಲ್ಲಿ ಬಾಕ್ಸ್ ಕ್ರಿಕೆಟ್, ಫುಲ್ ಪಿಚ್ ಕ್ರಿಕೆಟ್, ಬ್ಯಾಡ್ಮಿಂಟನ್, ಚೆಸ್, ಕ್ಯಾರಂ, ಪುಟ್ಬಾಲ್, ಲಗೋರಿ, ದೊಡ್ಜಬಾಲ್, ವಾಲಿಬಾಲ್, ತ್ರೋಬಾಲ್, ಕಬಡ್ಡಿ, ಹಗ್ಗ ಜಗ್ಗಾಟ ಮೊದಲಾದ ಆಟೋಟ ಸ್ಪರ್ದೆಗಳು ನಡೆದವು. ವಿವಿಧ ದಿನಗಳಲ್ಲಿ ವಿವಿಧ ಸ್ಪರ್ದೆಗಳು ವಿವಿಧ ಕ್ರೀಡಾಂಗಣದಲ್ಲಿ ಸ್ಪರ್ದೆಗಳು ನಡೆದು ಕ್ರೀಡಾ ಕೂಟದ ಸಮಾರೋಪವು 25ರಂದು ಜರಗಿತು. ಈ ಸಂದರ್ಭದಲ್ಲಿ ಬಂಟ್ಸ್ ಒಲಂಪಿಕ್ ನ ಫೈನಲ್ ಪಂದ್ಯಾಟಗಳು ಬಹಳ ಜಿದ್ದಾಜಿದ್ದಿನ ಸ್ಪರ್ದೆಯೊಂದಿಗೆ ನಡೆಯಿತು. ಫುಲ್…
ಸುಭಾಷಿತ ನಗರ ರೆಸಿಡೆಂಟ್ಸ್ ಅಸೋಸಿಯೇಶನ್ ವಾರ್ಷಿಕೋತ್ಸವ : ಅಂತಾರಾಷ್ಟ್ರೀಯ ಕಬಡ್ಡಿಪಟುವಿಗೆ ಸನ್ಮಾನ, 1,01,000 ಲಕ್ಷ ರೂ. ಆರ್ಥಿಕ ನೆರವು ಹಸ್ತಾಂತರ
ಸುರತ್ಕಲ್ ನ ಸುಭಾಷಿತ ನಗರ ರೆಸಿಡೆಂಟ್ಸ್ ಅಸೋಸಿಯೇಶನ್ ವೆಲ್ಫೇರ್ ಅಸೋಸಿಯೇಶನ್ ಇದರ ನಾಲ್ಕನೇ ವರ್ಷದ ವಾರ್ಷಿಕೋತ್ಸವ ಹಾಗೂ ಸ್ನೇಹ ಸಮ್ಮಿಲನ ಸಮಾರಂಭ ಸುರತ್ಕಲ್ ಬಂಟರ ಸಂಘದ ವಠಾರದಲ್ಲಿ ಜರುಗಿತು. ಕಾರ್ಯಕ್ರಮವನ್ನು ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಅಂತಾರಾಷ್ಟ್ರೀಯ ಕಬಡ್ಡಿ ಕ್ರೀಡಾಪಟು ಧನಲಕ್ಷ್ಮೀ ಪೂಜಾರಿ ಅವರನ್ನು ಸನ್ಮಾನಿಸಲಾಯಿತು. ಈ ವೇಳೆ ಅಸೋಸಿಯೇಶನ್ ವತಿಯಿಂದ ಸಂಗ್ರಹಿಸಿದ ರೂ.1,01,000 ಅನ್ನು ಹಸ್ತಾಂತರಿಸಲಾಯಿತು. ಬಳಿಕ ಮಾತಾಡಿದ ಅವರು, ಸುಭಾಷಿತ ನಗರ ಅಸೋಸಿಯೇಷನ್ ನನ್ನ ಪ್ರತಿಭೆಯನ್ನು ಗುರುತಿಸಿ ನನಗೆ ಸನ್ಮಾನದ ಜೊತೆಗೆ ಆರ್ಥಿಕ ಸಹಾಯ ಮಾಡಿರುವುದು ತುಂಬಾ ಖುಷಿಯಾಗಿದೆ. ಇದನ್ನು ಮರೆಯಲು ಸಾಧ್ಯವಿಲ್ಲ. ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿರುವ ಸಂಘಟನೆ ಇನ್ನಷ್ಟು ಸಮಾಜಮುಖಿಯಾಗಿ ಬೆಳೆಯಲಿ ಎಂದರು. ವೇದಿಕೆಯಲ್ಲಿ ಸುಭಾಷಿತ ನಗರ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಶನ್ ಅಧ್ಯಕ್ಷ ರಮೇಶ್ ಶೆಟ್ಟಿ, ಉಪಾಧ್ಯಕ್ಷ ತಾರಾನಾಥ ಸಾಲ್ಯಾನ್, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಶೆಟ್ಟಿ, ಕೋಶಾಧಿಕಾರಿ ನರಸಿಂಹ ಸುವರ್ಣ, ಸಂಘಟನಾ ಕಾರ್ಯದರ್ಶಿ ಪುಷ್ಪರಾಜ್ ಶೆಟ್ಟಿ ಕುಡುಂಬೂರು, ಜೊತೆ ಕಾರ್ಯದರ್ಶಿ ಲಕ್ಷ್ಮಿ ಚಂದ್ರಶೇಖರ್ ಆಚಾರ್ಯ,…
ಡ್ರಗ್ಸ್ ಮುಕ್ತ ಕರ್ನಾಟಕ ಜನಜಾಗೃತಿ ರಥ ಯಾತ್ರೆ ನಿಟ್ಟೆಗೆ ಆಗಮಿಸಿದಾಗ ರೋಟರಿ ಕ್ಲಬ್ ಕಾರ್ಕಳ ಹಾಗೂ ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ವತಿಯಿಂದ ಸ್ವಾಗತಿಸಲಾಯಿತು. ಬಳಿಕ ನಿಟ್ಟೆ ಎನ್.ಎಸ್.ಎ.ಎಂ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ವೀಣಾಕುಮಾರಿ ಬಿ.ಕೆ, ಉಪನ್ಯಾಸಕ ಪ್ರಕಾಶ್ ಬಿ., ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರಕಾಶ್ ಶೆಣೈ ಮಾತನಾಡಿ, ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯದ ಸೇವನೆಯ ದುಷ್ಪರಿಣಾಮಗಳು ಹಾಗೂ ಅದನ್ನು ತಡೆಗಟ್ಟುವಲ್ಲಿ ವಿದ್ಯಾರ್ಥಿಗಳ ಪಾತ್ರದ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಕಾರ್ಕಳ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ, ಸಮುದಾಯ ಸೇವಾ ಚೇರ್ಮನ್ ವಸಂತ್ ಎಂ, ರಾಕ್ ಸಿಟಿ ಅಧ್ಯಕ್ಷ ಸುರೇಂದ್ರ ನಾಯಕ್, ಚಿರಾಗ್ ರಾವ್ ಉಪಸ್ಥಿತರಿದ್ದರು.
ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ : ಜನವರಿ 3ರಂದು ಪುಣೆ ಜೀರ್ಣೋದ್ದಾರ ಸೇವಾ ಸಮಿತಿಯ ಸಮಾಲೋಚನ ಸಭೆ
ಪಡುಬಿದ್ರಿ ಸೀಮೆಯ ಒಡೆಯ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಪುನರ್ ನಿರ್ಮಾಣ ಜೀರ್ಣೋದ್ದಾರ ಪುಣೆ ಸೇವಾ ಸಮಿತಿಯ ಸಮಾಲೋಚನಾ ಸಭೆಯು ಪುಣೆ ಬಂಟರ ಸಂಘದ ಗೌರವಾಧ್ಯಕ್ಷರಾದ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು ಬಾಳಿಕೆಯವರ ಅಧ್ಯಕ್ಷತೆಯಲ್ಲಿ ಜನವರಿ 3 ಶನಿವಾರದಂದು ಬೆಳಿಗ್ಗೆ ಗಂಟೆ 11.30ಕ್ಕೆ ಪುಣೆ ಬಂಟರ ಭವನ ಬಾಣೇರ್ ನಲ್ಲಿ ಜರಗಲಿದೆ. ಈ ಸಭೆಯಲ್ಲಿ ದೇವಸ್ಥಾನದ ಜೀರ್ಣೋದ್ದಾರದ ಸಂಕಲ್ಪವನ್ನು ಮಾಡಿ, ಧಾರ್ಮಿಕ ಕಾರ್ಯವನ್ನು ಕೈಗೆತ್ತಿಕೊಂಡು ಘನ ಕಾರ್ಯದ ನೇತೃತ್ವ ವಹಿಸಿಕೊಂಡ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರಾದ ಡಾ| ಕೆ ಪ್ರಕಾಶ್ ಶೆಟ್ಟಿ, ಅನುವಂಶಿಕ ಮೊಕ್ತೇಸರರಾದ ಭವಾನಿ ಶಂಕರ ಹೆಗ್ಡೆ, ಮುಂಬಯಿ ಸಮಿತಿ ಅಧ್ಯಕ್ಷರಾದ ಮಹೇಶ್ ಶೆಟ್ಟಿ, ನವೀನ್ ಚಂದ್ರ ಜೆ ಶೆಟ್ಟಿ ಪಡುಬಿದ್ರಿ, ಸುರೇಶ್ ಶೆಟ್ಟಿ ಪಡುಬಿದ್ರಿ, ಪುಣೆ ಬಂಟರ ಸಂಘದ ಅಧ್ಯಕ್ಷರಾದ ಅಜಿತ್ ಹೆಗ್ಡೆ ಕೆಂಜಾರು ಗುತ್ತು, ಮಾಜಿ ಅಧ್ಯಕ್ಷರುಗಳಾದ ಕುಶಲ್ ಹೆಗ್ಡೆ, ಸದಾನಂದ ಕೆ ಶೆಟ್ಟಿ, ಜಯಂತ್ ಶೆಟ್ಟಿ, ಬಂಟರ ಸಂಘದ ಟ್ರಸ್ಟಿಗಳಾದ ಜಿತೇಂದ್ರ ಹೆಗ್ಡೆ, ಕೆ.ಕೆ ಶೆಟ್ಟಿ,…
ಕನ್ನಡ ಪ್ರಖ್ಯಾತ ಸುದ್ದಿ ನಿರೂಪಕ ಹಾಗೂ ಪತ್ರಕರ್ತ ಜಯಪ್ರಕಾಶ್ ಶೆಟ್ಟಿ ಸಿನಿಮಾ ರಂಗಕ್ಕೆ ಕಾಲಿಡುತ್ತಿದ್ದಾರೆ. ಏಷ್ಯಾನೆಟ್ ಸುವರ್ಣ ನ್ಯೂಸ್, ರಿಪಬ್ಲಿಕ್ ಕನ್ನಡದಲ್ಲಿ ಕೆಲಸ ಮಾಡಿದ್ದ ಜಯಪ್ರಕಾಶ್ ಶೆಟ್ಟಿ ಈಗ ಸುದ್ದಿ ನಿರೂಪಣೆ ಬಿಟ್ಟು ತುಳು ಚಿತ್ರರಂಗಕ್ಕೆ ಪ್ರವೇಶ ಮಾಡುತ್ತಿರುವುದು ಅಧಿಕೃತವಾಗಿದೆ. ನಿತಿನ್ ರೈ ಕುಕ್ಕುವಳ್ಳಿ ನಿರ್ದೇಶನದ ಬಹು ನಿರೀಕ್ಷಿತ ‘ಬನ’ ಚಿತ್ರದಲ್ಲಿ ಅವರು ಅಪರೂಪದ ಪಾತ್ರ ಮಾಡುತ್ತಿದ್ದಾರೆ ಎನ್ನಲಾಗಿದೆ. ತುಳು ಚಿತ್ರರಂಗದಲ್ಲಿ ದೊಡ್ಡ ಮಟ್ಟದ ಸಂಚಲನ ಸೃಷ್ಟಿಸಿದ್ದ ಧರ್ಮದೈವ ಹಾಗೂ ಧರ್ಮ ಚಾವಡಿ ಸಿನಿಮಾವನ್ನು ನಿತಿನ್ ರೈ ಕುಕ್ಕುವಳ್ಳಿ ನಿರ್ದೇಶನ ಮಾಡಿದ್ದರು. ಮೂಲಗಳ ಪ್ರಕಾರ ಬನ ಸಿನಿಮಾದ ಬಹುತೇಕ ಚಿತ್ರೀಕರಣ ಪೂರ್ಣಗೊಂಡಿದೆ. ಈ ಹಿಂದೆ ಜಯಪ್ರಕಾಶ್ ಶೆಟ್ಟಿ ಅವರಿಗೆ ಬಿಗ್ಬಾಸ್ ಟೀಮ್ನಿಂದಲೂ ಭಾಗವಹಿಸುವಂತೆ ಆಫರ್ ಬಂದಿತ್ತು. ಆದರೆ ಈ ಆಫರ್ ಅನ್ನು ಸ್ವತಃ ನಾನೇ ತಿರಸ್ಕರಿಸಿದೆ ಎಂದು ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದರು. ಆತ್ಮೀಯರಿಂದ ಜೆಪಿ ಎಂದೇ ಕರೆಸಿಕೊಳ್ಳುತ್ತಿದ್ದ ಜೆಪಿ ಅವರು ಸಿನಿಮಾದಲ್ಲಿ ಒಟ್ಟು 6 ದಿನಗಳ ಕಾಲ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಸಿನಿಮಾದ ಶೂಟಿಂಗ್…
ಮುನಿಯಾಲು ಬಂಟರ ಸಂಘದ ವತಿಯಿಂದ ಹದಿನೆಂಟನೇ ವರ್ಷದ ವಿದ್ಯಾರ್ಥಿ ವೇತನ, ಆಶಕ್ತರಿಗೆ ಸಹಾಯಧನ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭವು ಮುನಿಯಾಲು ಶ್ರೀ ಮಾರಿಯಮ್ಮ ದೇವಸ್ಥಾನದ ಸಭಾಭವನದಲ್ಲಿ ನೆರವೇರಿತು. ಈ ಸಂದರ್ಭದಲ್ಲಿ ಭಾರತೀಯ ಸೈನ್ಯದಲ್ಲಿ ಹದಿನೇಳು ವರ್ಷ ಸೇವೆ ಸಲ್ಲಿಸಿ ನಿವೃತ್ತಿಯಾದ ಮುನಿಯಾಲಿನ ವೀರ ಯೋಧ ಪ್ರವೀಣ್ ಕುಮಾರ್ ಶೆಟ್ಟಿ, ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪಂಚವಟಿ ಶಂಕರ್ ಶೆಟ್ಟಿ ಹಾಗೂ ಜೂನಿಯರ್ ಕಬಡ್ಡಿ ವಿಭಾಗದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ವಿಪುಲ್ ಶೆಟ್ಟಿ ಮುಟ್ಲುಪಾಡಿ ಇವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ವೇದಿಕೆಯಲ್ಲಿ ಮುನಿಯಾಲು ಬಂಟರ ಸಂಘದ ಗೌರವಾಧ್ಯಕ್ಷರಾದ ದಿವಾಕರ್ ವೈ ಶೆಟ್ಟಿ, ಸಂಘದ ಅಧ್ಯಕ್ಷರಾದ ಮುಟ್ಲುಪಾಡಿ ಸತೀಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ವಿನೋದ್ ರಾಜ್ ಶೆಟ್ಟಿ ಮತ್ತು ನವೀನ್ ರಾಜ್ ಶೆಟ್ಟಿ, ಉಪಾಧ್ಯಕ್ಷರಾದ ಸುರೇಂದ್ರ ಶೆಟ್ಟಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಗಣ್ಯರಾದ ಸೀತಾರಾಮ್ ಕಡಂಬ, ಅಶೋಕ್ ಶೆಟ್ಟಿ, ಭುಜಂಗ ಶೆಟ್ಟಿ, ಸುಜಯ್ ಶೆಟ್ಟಿ, ಸುಂದರ್ ಶೆಟ್ಟಿ, ಸುರೇಶ್ ರೈ, ಸಮೃದ್ಧಿ ಪ್ರಕಾಶ್ ಶೆಟ್ಟಿ ಹಾಗೂ…
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ನಾಲ್ವರು ಕ್ರೀಡಾಪಟುಗಳು ಅಂತಾರಾಷ್ಟ್ರೀಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ ಆಯ್ಕೆಯಾಗುವ ಮೂಲಕ ಗಮನಾರ್ಹ ಸಾಧನೆ ಮೆರೆದಿದ್ದಾರೆ. ಬಿಹಾರದ ಪಾಟ್ನಾದಲ್ಲಿ ಡಿಸೆಂಬರ್ 27 ರಿಂದ 29ರವರೆಗೆ ನಡೆದ ದಕ್ಷಿಣ ಏಷ್ಯಾ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಜಯಲಕ್ಷ್ಮಿ ಭಾರತ ಮಹಿಳಾ ತಂಡದ ನಾಯಕಿಯಾಗಿ ಸ್ಪರ್ಧೆಯಲ್ಲಿ ಪಾಲ್ಗೊಂಡು, ತಂಡವನ್ನು ಜಯಭೇರಿ ಮೊಳಗಿಸುವಲ್ಲಿ ಯಶಸ್ವಿಯಾದರು. ಅತಿಥೇಯ ಭಾರತವಲ್ಲದೇ ನೇಪಾಳ, ಶ್ರೀಲಂಕಾ ಹಾಗೂ ಭೂತಾನ್ ತಂಡಗಳು ಈ ಪಂದ್ಯಾಟದಲ್ಲಿ ಪಾಲ್ಗೊಂಡಿದ್ದವು. ಇದರ ಜೊತೆಗೆ ಜನವರಿ 1ರಿಂದ 5, 2026ರವರೆಗೆ ನೇಪಾಳದ ಖಠ್ಮಂಡುವಿನ ಬಿರ್ಗುಂಜ್ನಲ್ಲಿ ನಡೆಯುವ ಇಂಡೋ ನೇಪಾಳ ಬಾಲ್ ಬ್ಯಾಡ್ಮಿಂಟನ್ ಟೆಸ್ಟ್ ಸರಣಿಗೆ ಆಳ್ವಾಸ್ ಪ್ರತಿಷ್ಠಾನದ ವಿದ್ಯಾರ್ಥಿಗಳಾದ ಪ್ರಶಾಂತ್ ಹೆಚ್.ಜಿ, ಸಾವಿತ್ರಿ ರಮೇಶ್ ಕರಿಗಾರ್ ಮತ್ತು ಲಾಂಛನ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ವಿದ್ಯಾರ್ಥಿಗಳ ಸಾಧನೆಯನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ ಆಳ್ವ ಅಭಿನಂದಿಸಿದ್ದಾರೆ.
ಅಡ್ವೆ ಕೆಲ್ಲಾರ್ ಪಲಿಮಾರು ದಿವಂಗತ ವಿಠಲ ಶೆಟ್ಟಿ ಅವರ ಧರ್ಮ ಪತ್ನಿ ಹಾಗೂ ಮಲಾಡ್ ಪಶ್ಚಿಮ ಡ್ರೀಮ್ ಪ್ಯಾಲೇಸ್ ಮತ್ತು ಚಾರ್ ಕೋಪ್ ಲೇಕ್ ಗಾರ್ಡನ್ ಹೊಟೇಲ್ ನ ಸತೀಶ್ ಶೆಟ್ಟಿ ಹಾಗೂ ಸಹೋದರರ ಮಾತೃಶ್ರೀಯವರಾದ ಕಡಂಜ ಹರೇಕಳ ಸರೋಜಿನಿ ಶೆಟ್ಟಿ ಅವರು ಇತ್ತೀಚೆಗೆ ನಿಧನರಾಗಿದ್ದಾರೆ. ಮೃತರು ಸತೀಶ್ ಶೆಟ್ಟಿ, ಸುರೇಶ್ ಶೆಟ್ಟಿ, ದಿವಾಕರ ಶೆಟ್ಟಿ, ಶ್ರೀಕರ್ ಶೆಟ್ಟಿ, ಮಗಳು ವೀಣಾ ರವೀಂದ್ರನಾಥ ಶೆಟ್ಟಿ, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿರುತ್ತಾರೆ. ದಿವಂಗತರ ಆತ್ಮಸದ್ಗತಿ ಪ್ರಯುಕ್ತ ವೈಕುಂಠ ಸಮಾರಾಧನೆ ಇದೇ ಬರುವ ಜನವರಿ 3, 2026 ರಂದು ನಂದಿಕೂರು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜರುಗಲಿದ್ದು, ಮೃತರ ಕುಟುಂಬಿಕರು, ಬಂಧು ಮಿತ್ರರು ಆಗಮಿಸಿ ಅಗಲಿದ ಮೃತರ ಆತ್ಮಕ್ಕೆ ಸದ್ಗತಿ ದೊರೆಯಲೆಂದು ಪ್ರಾರ್ಥಿಸಬೇಕೆಂದು ಸತೀಶ್ ಶೆಟ್ಟಿ, ವೀಣಾ ರವೀಂದ್ರನಾಥ ಶೆಟ್ಟಿ ಮತ್ತು ಬಂಧು ಬಾಂಧವರು ವಿನಂತಿಸಿಕೊಂಡಿದ್ದಾರೆ.
ಕುಂಬಳೆಯ ಕೋಟೆಕಾರು ಎಂಬಲ್ಲಿಯ ನಿವಾಸಿಯಾಗಿರುವ ಎಂಬತ್ತೇಳರ ಹರೆಯದ ದೇರಣ್ಣ ರೈ ಒಂದು ಊರುಗೋಲನ್ನು ಹಿಡಿದು ನಡೆಯುವುದನ್ನು ಕಂಡರೆ ತೆಂಕುತಿಟ್ಟಿನ ಇತಿಹಾಸವೇ ನಡೆಯುವಂತೆ ಭಾಸವಾಗುತ್ತದೆ. ಯಕ್ಷಗಾನದ ಪರಂಪರೆಯ ಹಿಮ್ಮೇಳ ವಾದಕ, ದಂತಕತೆ ಶ್ರೀ ಕೋಟೆಕಾರು ದೇರಣ್ಣ ರೈಗಳು ಬರೆದ ‘ತೆಂಕಣ ಯಕ್ಷಪಥ’ ಎಂಬ ಪುಸ್ತಕದಲ್ಲಿ ಯಕ್ಷಗಾನ ವಿದ್ವಾಂಸ ಶ್ರೀ ರಾಘವ ನಂಬಿಯಾರರು ಹೇಳಿದ ಮಾತುಗಳಿವು. ಇದರಲ್ಲಿ ಉತ್ಪ್ರೇಕ್ಷೆಗಳೇನೂ ಇಲ್ಲ. ಓರ್ವ ಹಿರಿಯ ಯಕ್ಷಗಾನ ವಿದ್ವಾಂಸರ ಕುರಿತಾಗಿ ಮತ್ತೋರ್ವ ವಿದ್ವಾಂಸರ ಬಾಯಿಯಿಂದ ಸಹಜವಾಗಿ ಹೊರಹೊಮ್ಮಿದ ಉದ್ಘಾರವಿದು. ಮೇಲಿನ ಮಾತುಗಳಂತೆ ದೇರಣ್ಣ ರೈಗಳು ತೆಂಕುತಿಟ್ಟಿನ ಪರಂಪರೆಯ ಪ್ರತೀಕವೆಂಬಂತೆ ತನ್ನ ಕಲಾ ಜೀವನದುದ್ದಕ್ಕೂ ಬಾಳಿ ಬದುಕಿದವರು. ಮುಂದಿನ ಪೀಳಿಗೆಯ ಕಲಾವಿದರಿಗೆ ಆದರ್ಶ ಕಲಾವಿದನಾಗಿ ಕಲಾಸೇವೆ ಮಾಡಿದವರು. ಬೆಳಿಂಜಗುತ್ತು ಕೆ. ದೇರಣ್ಣ ರೈಯವರು 24.02.1917ರಂದು ಕೋಟೆಕಾರು ಹಳೆಮನೆಯ ಶ್ರೀ ಬಟ್ಯಪ್ಪ ರೈ ಮತ್ತು ಬೆಳಿಂಜಗುತ್ತು ಶ್ರೀಮತಿ ಮುತ್ತಕ್ಕೆ ಹೆಂಗ್ಸು ದಂಪತಿಗೆ ಮಗನಾಗಿ ಜನಿಸಿದರು. ತುಂಬು ಸಂಸಾರದ ಕುಟುಂಬದಲ್ಲಿ ದೇರಣ್ಣ ರೈಯವರು ಕಲಾವಾಸನೆಯ ಜೊತೆಜೊತೆಗೆ ಬೆಳೆಯತೊಡಗಿದರು. ಪುರಾಣ ಪುಣ್ಯ ಕಥೆಗಳ…















