Author: admin
ದಕ್ಷಿಣ ಭಾರತ ಕುಸ್ತಿ ಸಂಘದ 2025 – 29ರ ಸಾಲಿನ ಉಪಾಧ್ಯಕ್ಷರಾಗಿ ಬೆಳ್ಳಿಪಾಡಿ ಗುಣರಂಜನ್ ಶೆಟ್ಟಿಯವರು ಆಯ್ಕೆಯಾಗಿದ್ದಾರೆ. ಈ ಮೂಲಕ ಕುಸ್ತಿ ಸಂಘದಲ್ಲಿ ದಕ್ಷಿಣ ಭಾರತಕ್ಕೆ ಮೊದಲ ಬಾರಿಗೆ ಪ್ರಮುಖ ಪ್ರಾತಿನಿಧ್ಯ ದೊರೆತಂತಾಗಿದೆ.ಪುತ್ತೂರು ತಾಲೂಕಿನ ಚಿಕ್ಕಮುಡ್ನೂರು ಗ್ರಾಮದ ಪ್ರತಿಷ್ಠಿತ ಬೆಳ್ಳಿಪಾಡಿ ಮನೆತನದವರಾಗಿರುವ ಗುಣರಂಜನ್ ಶೆಟ್ಟಿ ಅವರು ಭಾರತ ಕುಸ್ತಿ ಸಂಘದ ಜಂಟಿ ಕಾರ್ಯದರ್ಶಿ ಹಾಗೂ ರಾಜ್ಯ ಕುಸ್ತಿ ಸಂಘದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ.ಖ್ಯಾತ ಚಲನಚಿತ್ರ ನಟಿ ಅನುಷ್ಕಾ ಶೆಟ್ಟಿ ಅವರ ಸಹೋದರನಾಗಿರುವ ಉದ್ಯಮಿ ಗುಣರಂಜನ್ ಶೆಟ್ಟಿ ಅವರು ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮಾತನಾಡಿ, ನಾಲ್ಕು ವರ್ಷದ ನಂತರ ಚುನಾವಣೆ ನಡೆದಿದ್ದು ಕರ್ನಾಟಕ ಎಲ್ಲಾ ವಿಭಾಗಗಳಲ್ಲೂ ತನ್ನ ಚಾಪು ಮೂಡಿಸುತ್ತಿದೆ. ಕುಸ್ತಿಯಲ್ಲಿ ಕರ್ನಾಟಕ ಉತ್ತಮ ಸಾಧನೆ ಮಾಡುತ್ತಿದ್ದು, ಅಂತರಾಷ್ಟ್ರೀಯ ಮಟ್ಟದಲ್ಲಿ ದಕ್ಷಿಣ ಭಾರತಕ್ಕೆ ಉತ್ತಮ ಪ್ರಾತಿನಿಧ್ಯ ದೊರಕಿಸಿಕೊಡುವುದು ನಮ್ಮ ಗುರಿಯಾಗಿದೆ ಎಂದು ಹೇಳಿದ್ದಾರೆ.
ಸುರತ್ಕಲ್ ಅರಂತಬೆಟ್ಟು ಗುತ್ತಿನಲ್ಲಿ ಗಡಿಪ್ರಧಾನ ಕಾರ್ಯಕ್ರಮದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಮತ್ತು ಅವರ ಧರ್ಮಪತ್ನಿ ಶ್ರೀಮತಿ ಚಂದ್ರಿಕಾ ಹರೀಶ್ ಶೆಟ್ಟಿಯವರು ಭಾಗಿಯಾಗಿ ಶ್ರೀ ದೈವ ದೇವರ ಗಂಧ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ದಂಪತಿಗಳನ್ನು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಸಮಿತಿ ಅಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ, ಗಡಿ ಪ್ರಧಾನರಾದ ನಿಡ್ಡೋಡಿ ಮೈಂದಡಿ ಸದಾನಂದ ಶೆಟ್ಟಿ, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು, ಸುರೇಂದ್ರ ಶೆಟ್ಟಿ, ಹಿರಿಯ ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳ, ರಾಜೇಶ್ ಶೆಟ್ಟಿ, ಉದ್ಯಮಿ ದಿಲ್ ರಾಜ್ ಆಳ್ವ, ದಿವಾಕರ ಸಾಮನಿ ಇವರುಗಳು ಉಪಸ್ಥಿತರಿದ್ದರು.
ಟೀಮ್ ಅಭಿಮತ ಮತ್ತು ಜನಸೇವಾ ಟ್ರಸ್ಟ್ ಮೂಡುಗಿಳಿಯಾರು ಇದರ ಸೇವಾ ಯೋಜನೆಯಾದ ಅಶಕ್ತರಿಗೆ ಮನೆ ನಿರ್ಮಿಸಿಕೊಡುವ ’ಮಡಿಲು’ ಯೋಜನೆಗೆ ಮುಹೂರ್ತ ಇತ್ತೀಚಿಗೆ ನೆರವೇರಿತು. ಶಿರಿಯಾರ ಬಳಿಯ ಅತ್ಯಂತ ಆರ್ಥಿಕ ಅಶಕ್ತ ಮತ್ತು ಅನಾರೋಗ್ಯ ಪೀಡಿತ ಕುಟುಂಬವೊಂದರ ಮನೆ ಈ ವರ್ಷದ ಮಳೆಗಾಲದಲ್ಲಿ ಕುಸಿದು ಬೀಳುವ ಎಲ್ಲಾ ಸಾದ್ಯತೆಗಳಿದ್ದವು. ಅದನ್ನು ಗುರುತಿಸಿ ಅವರಿಗೊಂದು ಪುಟ್ಟದಾದರೂ, ನೆಮ್ಮದಿಯ ಸೂರು ನಿರ್ಮಿಸಿಕೊಡುವ ಯೋಜನೆಗೆ ಮುನ್ನುಡಿ ಬರೆದರು. ಕೋಟೇಶ್ವರದ ಪ್ರಸಿದ್ಧ ಗುರು ಎಂಜಿನಿಯರ್ ಸೇವಾರ್ಥವಾಗಿ ಮಾರ್ಕಿಂಗ್ ಮಾಡಿ, ಮಾರ್ಗದರ್ಶನ ನೀಡಿದ್ದು, ಈ ಮನೆ ನಿರ್ಮಾಣಕ್ಕೆ ಹಲವು ದಾನಿಗಳು ತಮ್ಮ ನೆರವು ನೀಡುವ ಭರವಸೆಯನ್ನೂ ನೀಡಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಈ ವರ್ಷದ ವಿಜಯದಶಮಿಯ ದಿವಸ ಮನೆ ಹಸ್ತಾಂತರ ಕಾರ್ಯಕ್ರಮ ನೆರವೇರಲಿದೆ. ಈ ಸಂಧರ್ಭ ವಸಂತ್ ಗಿಳಿಯಾರ್, ಆನಂದ್ ಸಿ ಕುಂದರ್, ಟೀಮ್ ಅಭಿಮತದ ಸದಸ್ಯರು ಉಪಸ್ಥಿತರಿದ್ದರು.
ತೆಂಕು ಬಡಗು ಯಕ್ಷಗಾನದ ಹವ್ಯಾಸಿ ವೇಷಧಾರಿ, ಹೋಟೆಲ್ ಉದ್ಯಮಿ ಮತ್ತು ಸಾಮಾಜಿಕ ಸೇವಾ ಕಾರ್ಯಕರ್ತ ಪಣಿಯೂರುಗುತ್ತು ಕರುಣಾಕರ ಶೆಟ್ಟಿ ಅವರು 2024- 25 ನೇ ಸಾಲಿನ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಭಾರತೀಯ ಬಾಹ್ಯಾಕಾಶ ನೌಕೆ ಆರ್ಯಭಟ ಉಪಗ್ರಹ ಉಡ್ಡಯನವಾದ ವರ್ಷವೇ ಸ್ಥಾಪನೆಗೊಂಡ ಬೆಂಗಳೂರಿನ ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯು 50 ವರ್ಷಗಳನ್ನು ಪೂರೈಸಿದ್ದು, ಪ್ರತಿ ವರ್ಷದಂತೆ ಈ ಬಾರಿಯೂ ದೇಶ ವಿದೇಶದ ಅನನ್ಯ ಸಾಧಕರನ್ನು ಗುರುತಿಸಿ ಈ ವಿಶೇಷ ಪ್ರಶಸ್ತಿಯನ್ನು ನೀಡುತ್ತಿದೆ. ಉಡುಪಿ ಜಿಲ್ಲೆಯ ಪ್ರತಿಷ್ಠಿತ ಪಣಿಯೂರು ಕುಟುಂಬದವರಾದ ಕರುಣಾಕರ ಶೆಟ್ಟರಿಗೆ ಪ್ರಸ್ತುತ 66ರ ಹರೆಯ. ಯಕ್ಷಗಾನ ಕಲೆಯಲ್ಲಿ ಅಪಾರ ಅಭಿಮಾನ ಹೊಂದಿದ ಅವರು ಬಡಗುತಿಟ್ಟಿನ ಹವ್ಯಾಸಿ ವೇಷಧಾರಿಯಾಗಿ ಪ್ರಸಿದ್ಧ ಕಲಾವಿದರೊಂದಿಗೆ ಪಾತ್ರವಹಿಸಿದ್ದಾರೆ. ತೆಂಕು ಬಡಗುತಿಟ್ಟಿನ ಪ್ರಮುಖರೊಂದಿಗೆ ತಾಳಮದ್ದಳೆ ಅರ್ಥಧಾರಿಯಾಗಿಯೂ ಭಾಗವಹಿಸಿದ್ದಾರೆ. ಅಲ್ಲದೆ ಹಲವು ವರ್ಷ ಐತಿಹಾಸಿಕ ಮೂಲ್ಕಿ ಮೇಳವನ್ನು ನಡೆಸಿದ ಅನುಭವ ಅವರಿಗಿದೆ. ಸುಮಾರು ನಾಲ್ಕು ದಶಕಗಳ ರಂಗಾನುಭವ ಹೊಂದಿದ ಪಣಿಯೂರು ಅವರು ಭರತನಾಟ್ಯವನ್ನೂ ಅಭ್ಯಸಿಸಿದ್ದಾರೆ. ತುಳು ಕನ್ನಡ ಪೌರಾಣಿಕ…
ಖ್ಯಾತ ಲೇಖಕ, ಸಾಹಿತಿ, ನಿವೃತ್ತ ಬ್ಯಾಂಕ್ ಅಧಿಕಾರಿ ಚೇರ್ಕಾಡಿ ಸಚ್ಚಿದಾನಂದ ಶೆಟ್ಟಿ ಅವರು ಸುವರ್ಣ ಸಂಭ್ರಮದ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯು ತನ್ನ 50ನೇ ವರ್ಷಾಚರಣೆ ಸಂದರ್ಭದಲ್ಲಿ 2024- 25 ನೇ ಸಾಲಿನ ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಭಾರತೀಯ ಪ್ರಜೆಗಳಿಗೆ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ನೀಡುತ್ತಿದೆ. ಉಡುಪಿ ಜಿಲ್ಲೆಯ ಚೇರ್ಕಾಡಿ ಗ್ರಾಮದ ಸಚ್ಚಿದಾನಂದ ಶೆಟ್ಟಿಯವರು ತಮ್ಮ ಪ್ರಾಥಮಿಕ ಮತ್ತು ಮಾಧ್ಯಮಿಕ ಶಿಕ್ಷಣವನ್ನು ಚೇರ್ಕಾಡಿಯಲ್ಲಿ ಪೂರೈಸಿ ಪದವಿ ವ್ಯಾಸಂಗವನ್ನು ಉಡುಪಿಯ ಎಂ.ಜಿ.ಎಂ ಕಾಲೇಜಿನಲ್ಲಿ ಮುಗಿಸಿ, 1976ರಲ್ಲಿ ವಿಜಯಾ ಬ್ಯಾಂಕಿಗೆ ಸೇರ್ಪಡೆಗೊಂಡು ಸೇವೆಯಲ್ಲಿರುವಾಗಲೇ ಕರ್ನಾಟಕ ವಿಶ್ವವಿದ್ಯಾನಿಲಯದಿಂದ ಅರ್ಥಶಾಸ್ತ್ರದಲ್ಲಿ ಸ್ನಾತಕ ಪದವಿಯನ್ನು ಗಳಿಸಿದರು. ತದನಂತರ ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಕಾನೂನು ವ್ಯಾಸಂಗವನ್ನು ಪೂರೈಸಿ ಮುಂದೆ ಐಬಿಐ ನಿರ್ವಹಿಸುವ ಪ್ರತಿಷ್ಠಿತ ಬ್ಯಾಂಕಿಂಗ್ ನ ಸಿಎಐಐಬಿ ಪದವಿಯನ್ನು ಪಡೆದುಕೊಳ್ಳುತ್ತಾರೆ. ಬ್ಯಾಂಕ್ ನಲ್ಲಿನ ಸುದೀರ್ಘ 39 ವರ್ಷ ಸೇವೆಯಲ್ಲಿ ದೇಶ ಉದ್ದಗಲಗಳ ಆರು ರಾಜ್ಯಗಳಲ್ಲಿ ಸೇವೆಯನ್ನು ಸಲ್ಲಿಸಿ ಬ್ಯಾಂಕಿನ ಅತಿ…
ಕುಂದಾಪುರದ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪ್ರಾವ್ಯ ಪಿ.ಶೆಟ್ಟಿ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ 625ಕ್ಕೆ 623 ಅಂಕಗಳಿಸಿ ರಾಜ್ಯಕ್ಕೆ ಮೂರನೇ ಸ್ಥಾನ ಗಳಿಸಿದ್ದು ತನ್ನ ಉತ್ತಮ ಸಾಧನೆಯಿಂದ ಸಂತಸಗೊಂಡಿರುವ ಪ್ರಾವ್ಯ ಪಿ. ಶೆಟ್ಟಿ ಮಾತನಾಡುತ್ತಾ, ತನ್ನ ಈ ಉತ್ಕೃಷ್ಟವಾದ ಫಲಿತಾಂಶವನ್ನು ನಾನು ಮೊದಲೇ ನಿರೀಕ್ಷಿಸಿದ್ದೆ. ತನ್ನ ಈ ಸಾಧನೆಗೆ ಶಾಲಾ ಶಿಕ್ಷಕರು, ಪೋಷಕರು ಮತ್ತು ಶಾಲಾ ಆಡಳಿತ ಮಂಡಳಿಯ ಸಹಕಾರವೇ ಕಾರಣ. ಶಾಲೆಯಲ್ಲಿನ ಅತ್ಯುತ್ತಮವಾದ ಬೋಧನೆ, ನಿರಂತರವಾಗಿ ನಡೆಸುತ್ತಿದ್ದ ಪೂರ್ವ ತಯಾರಿ ಪರೀಕ್ಷೆಗಳು, ಪರೀಕ್ಷಾ ಸಮಯದಲ್ಲಿ ಶಾಲೆಯಲ್ಲಿ ಆಯೋಜಿಸಿದ್ದ ವಿಶೇಷ ಕಾರ್ಯಗಾರಗಳು, ಸಹಪಠ್ಯ ಚಟುವಟಿಕೆಗಳು ತುಂಬಾ ಸಹಾಯವಾಗಿದ್ದು ಉತ್ತಮ ಸಾಧನೆಗೆ ಸಹಾಯವಾಯಿತು. ನಾನು ಹಾಸ್ಟೆಲ್ ನ ವಿದ್ಯಾರ್ಥಿನಿಯಾಗಿದ್ದು ಹಾಸ್ಟೆಲ್ ನ ಸ್ಟಡಿ ಅವರ್ಸ್, ಹಾಸ್ಟೆಲ್ ಶಿಕ್ಷಕರು, ಹಾಸ್ಟೆಲ್ ವಾರ್ಡನ್ ಎಲ್ಲರ ಸಹಕಾರದಿಂದ ಈ ಸಾಧನೆ ಸಾಧ್ಯವಾಯಿತು. ವಿಶೇಷವಾಗಿ ನಮ್ಮ ಶಾಲೆಯಲ್ಲಿ ಆರನೇ ತರಗತಿಯಿಂದಲೇ ಬೋಧಿಸುತ್ತಿರುವ ಐಐಟಿ/ನೀಟ್ ಫೌಂಡೇಶನ್ ಕೋರ್ಸ್ ನ ಮಾಸಿಕ ಪರೀಕ್ಷೆಗಳು ಜಟಿಲವಾದ ಪ್ರಶ್ನೆಗಳನ್ನು ಸರಳವಾಗಿ ಉತ್ತರಿಸಲು ನೆರವಾಯಿತು.…
ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಆಯುಷ್ ಶೆಟ್ಟಿ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ 625ಕ್ಕೆ 622 ಅಂಕಗಳಿಸಿ ರಾಜ್ಯಕ್ಕೆ ನಾಲ್ಕನೇ ರ್ಯಾಂಕ್ ಗಳಿಸಿದ್ದು, ತನ್ನ ಉತ್ತಮ ಸಾಧನೆಯಿಂದ ಸಂತಸಗೊಂಡಿರುವ ವಿದ್ಯಾರ್ಥಿ ಮಾತನಾಡುತ್ತಾ, ತನ್ನ ಈ ಸಾಧನೆಗೆ ಶಾಲಾ ಶಿಕ್ಷಕರು, ಪೋಷಕರು ಮತ್ತು ಶಾಲಾ ಆಡಳಿತ ಮಂಡಳಿಯ ಸಹಕಾರವೇ ಕಾರಣ. ಶಾಲೆಯಲ್ಲಿನ ಉತ್ತಮ ಬೋಧನೆ, ಪರೀಕ್ಷಾ ಸಮಯದಲ್ಲಿ ಶಾಲೆಯಲ್ಲಿ ಆಯೋಜಿಸಿದ ವಿಶೇಷ ಕಾರ್ಯಗಾರಗಳು, ಪೂರ್ವ ತಯಾರಿ ಪರೀಕ್ಷೆಗಳು, ಫಲಿತಾಂಶ ಆಧಾರಿತ ವಿಶೇಷ ಗಮನ ಸಹಪಠ್ಯ ಚಟುವಟಿಕೆಗಳು ತುಂಬಾ ಸಹಾಯವಾಗಿದ್ದು ಉತ್ತಮ ಸಾಧನೆಗೆ ಸಹಾಯವಾಯಿತು ಎಂದನು. ಮುಂಬೈ ಉದ್ಯಮಿ ಉದಯ್ ಶೆಟ್ಟಿಯವರ ಸುಪುತ್ರ ಆಯುಷ್ ಯು ಶೆಟ್ಟಿ ಮುಂದೆ ವಿಜ್ಞಾನ ವಿಷಯವನ್ನು ಆಯ್ಕೆ ಮಾಡಿಕೊಂಡು ವೈದ್ಯನಾಗುವ ಕನಸನ್ನು ಹೊಂದಿದ್ದಾನೆ.
ವಿದ್ಯಾಗಿರಿ: ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಈ ಬಾರಿಯ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಿಸಿದ್ದು, ಆಳ್ವಾಸ್ ಶಾಲೆಯ 81 ವಿದ್ಯಾರ್ಥಿಗಳು 625ರಲ್ಲಿ 600ಕ್ಕೂ ಹೆಚ್ಚು ಅಂಕ ಪಡೆಯುವ ಮೂಲಕ ವಿಶಿಷ್ಟ ಸಾಧನೆ ಮೆರೆದಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ಮಾನ್ಯ (622), ಕ್ಷೀರಜಾ (621), ಹರೀಶ್ ಬಡಿಗೇರ್ (621), ಪವನ್ ಶರಣಬಸಪ್ಪ ಮೇಗೂರ್(621), ರಿಯಾ ವಿದ್ಯಾಧರ ಕಮಟೆ(621), ಪ್ರಜ್ಞಾ ಶೀತಲ್ ಪಾಟೀಲ್ (620), ಸಮೀಕ್ಷಾ ಸಂದೀಪ್ ಸಮಾಜನ್ನವರ್ (620), ಸಿಂಧೂ ಶೀತಲ್ ಚೌಗಲೆ(620), ಸುಪ್ರೀತಾ ಲಕ್ಷ್ಮಣ್ ನಾಯ್ಕ್ (620), ಆದಿತ್ಯ(620), ಚಿನ್ಮಯ್(620) ಅಂಕಗಳನ್ನು ಪಡೆಯುವುದರ ಮೂಲಕ ವಿಶಿಷ್ಠ ಸಾಧನೆ ಮಾಡಿದ್ದಾರೆ. 91 ವಿದ್ಯಾರ್ಥಿಗಳು ಶೇ95ಕ್ಕೂ ಅಧಿಕ, 161 ವಿದ್ಯಾರ್ಥಿಗಳು ಶೇ90ಕ್ಕೂ ಅಧಿಕ, 211 ವಿದ್ಯಾರ್ಥಿಗಳು ಶೇ 85ಕ್ಕೂ ಅಧಿಕ ಅಂಕ ಪಡೆದಿದ್ದಾರೆ ಎಂದರು. ಇಬ್ಬರು ವಿದ್ಯಾರ್ಥಿಗಳು ಐದು ವಿಷಯಗಳಲ್ಲಿ, ನಾಲ್ಕು ವಿಷಯಗಳಲ್ಲಿ 6 ವಿದ್ಯಾರ್ಥಿಗಳು, ಮೂರು…
ಗಣಿತನಗರ : ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಸಮಾಜಮುಖಿ ಕಾರ್ಯಕ್ರಮ ಒಂದು ಭಾಗವಾಗಿ ಕಳೆದ ವರ್ಷದಿಂದ ವಾಣಿಜ್ಯ ವಿಬಾಗದಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಲಾಗುತ್ತಿದೆ. 2025-26ನೇ ಶೈಕ್ಷಣಿಕ ಸಾಲಿನ ವಾಣಿಜ್ಯ ವಿಭಾಗಕ್ಕೆ ದಾಖಲಾತಿ ಬಯಸುವ, ಹತ್ತನೇ ತರಗತಿಯಲ್ಲಿ ಶೇ 95ಕ್ಕಿಂತ ಅಧಿಕ ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ಕಾಲೇಜು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಸಂಪೂರ್ಣ ಉಚಿತ ಶಿಕ್ಷಣ, ಶೇ90ಕ್ಕಿಂತ ಅಧಿಕ ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ಕಾಲೇಜು ಶುಲ್ಕದಲ್ಲಿ ಸಂಪೂರ್ಣ ವಿನಾಯಿತಿ, ಶೇ 85ಕ್ಕಿಂತ ಅಧಿಕ ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ಶೇ.25ರಷ್ಟು ಕಾಲೇಜು ಶುಲ್ಕದಲ್ಲಿ ವಿನಾಯಿತಿ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಆಸಕ್ತ ವಿದ್ಯಾರ್ಥಿಗಳು ಮತ್ತು ಪೋಷಕರು ಸಂಸ್ಥೆಯ ಕಛೇರಿಯನ್ನು ಸಂಪರ್ಕಿಸಿ ಮಾಹಿತಿ ಪಡೆದು ಕೊಳ್ಳಬಹುದು ಎಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ. ಮಾಹಿತಿಗಾಗಿ : 8147454906 2024-25ರ ಫಲಿತಾಂಶದಲ್ಲಿ ರಕ್ಷಾ ರಾಮ್ಚಂದ್ರ ನಾಯಕ್ 597 ಅಂಕಗಳೊಂದಿಗೆ ರಾಜ್ಯಕ್ಕೆ 3ನೇ ಸ್ಥಾನಿಯಾಗಿ ಹಾಗೂ ಉಡುಪಿ ಜಿಲ್ಲೆಗೆ ದ್ವಿತೀಯ…
ಬಂಟರ ಸಂಘ ಸಜೀಪ ವಲಯ ಇದರ ಆಶ್ರಯದಲ್ಲಿ ನಡೆದ ವಲಯ ಮಟ್ಟದ ಕ್ರೀಡಾಕೂಟ, ವಲಯದ ಸಾಧಕರಿಗೆ ಗೌರವ ಸನ್ಮಾನ ಮತ್ತು ವಲಯ ಬಂಟರ ಸಮ್ಮಿಲನ ಕಾರ್ಯಕ್ರಮವು ಏಪ್ರಿಲ್ 26 ರಂದು ಸಂಕೇಶದಲ್ಲಿ ನಡೆಯಿತು. ರಾತ್ರಿ ನಡೆದ ಬಂಟರ ಸಮ್ಮಿಲನ ಕಾರ್ಯಕ್ರಮವು ವಿವಿಧ ರೀತಿಯ ವಿನೋದ ಕಾರ್ಯಕ್ರಮಗಳು ಮತ್ತು ನೃತ್ಯ ಪ್ರದರ್ಶನಗಳೊಂದಿಗೆ ನಡೆಯಿತು. ನಂತರ ನಡೆದ ಸಭಾ ಕಾರ್ಯಕ್ರಮವು ಸುರೇಶ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಜರಗಿತು. ಸಮಾಜದ ಹಿರಿಯರಾದ ಅಖಿಲ ಭಾರತ ತುಳು ಒಕ್ಕೂಟದ ಅಧ್ಯಕ್ಷರಾಗಿ ಮರು ಆಯ್ಕೆಯಾದ ಎ.ಸಿ ಭಂಡಾರಿ, ನಂದಾವರ ಶ್ರೀ ವಿನಾಯಕ ಶಂಕರ ನಾರಾಯಣ ದುರ್ಗಾಂಬಾ ಕ್ಷೇತ್ರದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಪ್ರಭಾಕರ ಶೆಟ್ಟಿ ಕಾಂತಾಡಿಗುತ್ತು, ವಿವಿಧ ಸಂಸ್ಥೆಗಳಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಸದಸ್ಯರಾಗಿ ಆಯ್ಕೆಯಾದ ಮಹನೀಯರು ಹಾಗೂ ಶೈಕ್ಷಣಿಕ ಮತ್ತು ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಮಾಜದ ವಿದ್ಯಾರ್ಥಿಗಳು ಸೇರಿದಂತೆ ಹದಿನೆಂಟು ಸಾಧಕರಿಗೆ ಗಣ್ಯರ ಉಪಸ್ಥಿತಿಯಲ್ಲಿ ಗೌರವ ಸನ್ಮಾನ ಮಾಡಲಾಯಿತು. ವಿವಿಧ ಕ್ರೀಡಾ ಪಂದ್ಯಾಟಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.…