Author: admin
ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವರ ಬ್ರಹ್ಮಕಲಶೋತ್ಸವದ ಪ್ರಯುಕ್ತ ನಡೆಯುವ ಹೊರೆಕಾಣಿಕೆ ಮತ್ತು ಹೊರೆಕಾಣಿಕೆ ಮೆರವಣಿಗೆಯ ಕುರಿತು ಸುರತ್ಕಲ್ ಬಂಟರ ಸಂಘದಲ್ಲಿ ಸಭೆಯನ್ನು ಸುರತ್ಕಲ್ ಬಂಟರ ಸಂಘದ ಮಾಜಿ ಅಧ್ಯಕ್ಷರಾದ ಉಲ್ಲಾಸ್ ಆರ್ ಶೆಟ್ಟಿ ಪೆರ್ಮುದೆ ಇವರ ನೇತೃತ್ವದಲ್ಲಿ ಆಯೋಜಿಸಲಾಗಿತ್ತು. ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಬಾಳ ಜಗನ್ನಾಥ ಶೆಟ್ಟಿ ವಹಿಸಿದ್ದರು. ಸಭೆಯಲ್ಲಿ ಹೊರೆಕಾಣಿಕೆಯ ದಕ್ಷಿಣ ಕನ್ನಡ ಜಿಲ್ಲಾ ಸಂಚಾಲಕರಾದ ಚಂದ್ರಹಾಸ ಶೆಟ್ಟಿ ರಂಗೋಲಿ ಮಾತನಾಡಿ, ಎಂಆರ್ ಜಿ ಗ್ರೂಪ್ ನ ಅಧ್ಯಕ್ಷ ಡಾ| ಕೆ ಪ್ರಕಾಶ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಪಡುಬಿದ್ರೆ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವರ ಬ್ರಹ್ಮಕಲಶೋತ್ಸವ ನಡೆಯುತ್ತಿದೆ. ಅದರ ಪ್ರಯುಕ್ತ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಸಹಿತ ಬೇರೆ ಜಿಲ್ಲೆಗಳಿಂದಲೂ ಪಡುಬಿದ್ರೆ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯುವ ದೇವತಾ ಕಾರ್ಯಕ್ಕೆ ಹೊರೆಕಾಣಿಕೆಯನ್ನು ಕಳುಹಿಸಲು ಎಲ್ಲಾ ಬಂಟರ ಸಂಘಗಳಿಗೆ ಮನವಿ ಪತ್ರ ಬಂದಿರುತ್ತದೆ. ಈ ನಿಟ್ಟಿನಲ್ಲಿ ಸುರತ್ಕಲ್ ಬಂಟರ ಸಂಘ ಕೂಡಾ ಬಹಳಷ್ಟು ಮುತುವರ್ಜಿ ವಹಿಸಿ ಇಂದಿನ ಸಭೆಯನ್ನು…
ಹೊಸದಿಲ್ಲಿಯ ವಿನೋದ್ ನಗರ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನ ಮೈದಾನದಲ್ಲಿ ಅಡ್ವೆಂಚರ್ ಆಂಡ್ ಮಾಸ್ಟರ್ ಸ್ಪೋರ್ಟ್ಸ್ ಫೆಡರೇಶನ್ ವತಿಯಿಂದ ಆಯೋಜನೆಗೊಂಡ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಉದ್ಯಮಿ, ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕ ಸದಾನಂದ ಆಳ್ವ ತೇವು ಅವರು 400 ಮೀಟರ್ ಓಟದಲ್ಲಿ ಚಿನ್ನದ ಪದಕವನ್ನು ಪಡೆದಿದ್ದಾರೆ. ಇವರು ಮಂಗಳೂರಿನ ಮಂಗಳಾ ಸ್ಟೇಡಿಯಂನಲ್ಲಿ ಕೋಚ್ ರವಿ ಶಂಕರ್ ಅವರಿಂದ ತರಬೇತಿ ಪಡೆಯುತ್ತಿದ್ದಾರೆ.
ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸನ್ಮಾನ್ಯ ಸಿದ್ದರಾಮಯ್ಯರವರು ವಿಧಾನಸೌಧ ಕಚೇರಿಯಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಆಟಗಾರ ಕಾರ್ಕಳದ ಸಾಣೂರಿನ ಹೆಮ್ಮೆಯ ಕ್ರೀಡಾ ಪ್ರತಿಭೆ ಆಯುಷ್ ಶೆಟ್ಟಿಯವರನ್ನು ಅಭಿನಂದಿಸಿ ಶಾಲು ಹಾಕಿ ಗೌರವಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಹಾಗೂ ಮಾಜಿ ಸಂಸದರಾದ ಕೆ ಜಯಪ್ರಕಾಶ್ ಹೆಗ್ಡೆ, ವಿನಯಕುಮಾರ್ ಸೊರಕೆ, ಕಾರ್ಕಳ ಕಾಂಗ್ರೆಸ್ ಮುಖಂಡರಾದ ಉದಯ ಕುಮಾರ್ ಶೆಟ್ಟಿ ಮುನಿಯಾಲು, ವಿಧಾನಪರಿಷತ್ ಸದಸ್ಯರಾದ ಗೋವಿಂದರಾಜು, ಯುವ ಮುಖಂಡ ಅಶ್ವಿತ್ ಜೈನ್, ಆಯುಶ್ ಶೆಟ್ಟಿಯವರ ತಂದೆ ರಾಮ ಪ್ರಕಾಶ್ ಶೆಟ್ಟಿ, ತಾಯಿ ಶ್ರೀಮತಿ ಶಾಲ್ಮಲಿ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಆಯುಶ್ ಶೆಟ್ಟಿಯವರು ಚೀನಾದ ನಿಂಗ್ಬೋದಲ್ಲಿ ನಡೆದ ಪಂದ್ಯಾಟದಲ್ಲಿ ವಿಶ್ವದ ನಂ. 1 ಆಟಗಾರ ಕುನ್ಲಾವುತ್ ವಿಟಿಡ್ಸರ್ನ್ ಅವರನ್ನು ಭರ್ಜರಿಯಾಗಿ ಸೋಲಿಸಿ ಪೈನಲ್ ಪ್ರವೇಶಗೈದು 61 ವರ್ಷದ ಬಳಿಕ ಭಾರತಕ್ಕೆ ಬೆಳ್ಳಿ ಪದಕದ ಸಾಧನೆ ಮಾಡಿದ್ದರು.
ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ (ರಿ) : ರಮೇಶ್ ರವರಿಗೆ ರೂ. 2 ಲಕ್ಷಕ್ಕಿಂತ ಹೆಚ್ಚಿನ ಮೊತ್ತದ ವೈದ್ಯಕೀಯ ನೆರವು
ಗಂಭೀರ ಆರೋಗ್ಯ ಸಮಸ್ಯೆಗೆ ತುತ್ತಾಗಿ ಅಸಹಾಯಕರಾಗಿದ್ದ ಕಾರ್ಕಳದ ಕಾಬೆಟ್ಟು ನಿವಾಸಿ ರಮೇಶ್ ಅವರಿಗೆ ಸಹೃದಯ ದಾನಿಗಳ ಸಹಾಯದ ಕೋರಿಕೆಯನ್ನು ಮಾಡಿರುವಂತೆ ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ (ರಿ) ಮೂಲಕ ದಾನಿಗಳ ಸಹಕಾರದಿಂದ ಸಂಗ್ರಹವಾದ ಒಟ್ಟು ರೂ. 2.00 ಲಕ್ಷಕ್ಕಿಂತ ಹೆಚ್ಚಿನ ಮೊತ್ತವನ್ನು ಶಾಸಕರಾದ ವಿ. ಸುನೀಲ್ ಕುಮಾರ್ ಮತ್ತು ಸ್ಥಳೀಯ ಪ್ರಮುಖರಾದ ವಿಜಯ್ ಶೆಟ್ಟಿ, ನಿರಂಜನ್ ಜೈನ್, ಸುನೀಲ್ ಕೋಟ್ಯಾನ್, ದಿನೇಶ್ ಶೆಟ್ಟಿ ಹಾಗೂ ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ (ರಿ) ಅಧ್ಯಕ್ಷರಾದ ಅವಿನಾಶ್ ಜಿ. ಶೆಟ್ಟಿ ಅವರು ರಮೇಶ್ ಅವರ ಮನೆಗೆ ತೆರಳಿ ಹಸ್ತಾಂತರ ಮಾಡಿ ಬಳಿಕ ಆವರ ಆರೋಗ್ಯ ವಿಚಾರಿಸಲಾಯಿತು.
ಏಪ್ರಿಲ್ 26ರಂದು ಮೂಲ್ಕಿ ಮೂಡುಬಿದಿರೆ ವಲಯ ಹಗ್ಗ ಜಗ್ಗಾಟ ಸ್ವರ್ಧೆ : ಡಾ| ಜಗನ್ನಾಥ ಶೆಟ್ಟಿ ನಿಡ್ಡೋಡಿ ಚಾವಡಿ ಮನೆ
ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆ ಕಿನ್ನಿಗೋಳಿ ವತಿಯಿಂದ ಮೂಲ್ಕಿ ಮೂಡುಬಿದಿರೆ ವಲಯ ಮಟ್ಟದ ಪುರುಷರ ಮತ್ತು ಮಹಿಳೆಯರ ಹಗ್ಗ ಜಗ್ಗಾಟ ಸ್ವರ್ಧೆ ಏಪ್ರಿಲ್ 26ರಂದು ಬೆಳಿಗ್ಗೆ 11 ಗಂಟೆಗೆ ಕಿನ್ನಿಗೋಳಿ ಸೈಂಟ್ ಮೇರಿಸ್ ಸ್ಪೆಷಲ್ ಸ್ಕೂಲ್, ಚರ್ಚ್ ಬಳಿ ನಡೆಯಲಿದೆ ಎಂದು ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆ ಕಿನ್ನಿಗೋಳಿ ಅಧ್ಯಕ್ಷ ಡಾ| ಜಗನ್ನಾಥ ಶೆಟ್ಟಿ ನಿಡ್ಡೋಡಿ ಚಾವಡಿ ಮನೆ ಹೇಳಿದರು. ಕಿನ್ನಿಗೋಳಿಯ ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಹಗ್ಗಜಗ್ಗಾಟ ಸ್ವರ್ಧೆಯಲ್ಲಿ ಜಯ ಗಳಿಸಿದವರಿಗೆ ಮೊದಲನೇ ಬಹುಮಾನ 30,000 ಮತ್ತು ಟ್ರೋಫಿ, ಎರಡನೇ ಬಹುಮಾನ 20,000 ಮತ್ತು ಟ್ರೋಫಿ, ಮೂರನೇ ಬಹುಮಾನ 10,000 ಮತ್ತು ಟ್ರೋಫಿ, ನಾಲ್ಕನೇ ಬಹುಮಾನ 5,000 ರೂ ನಗದು ಮತ್ತು ಟ್ರೋಫಿ ನೀಡಲಾಗುವುದು. ನೋಂದಣಿಗೆ ಏಪ್ರಿಲ್ 23 ಕೊನೆಯ ದಿನವಾಗಿದೆ. ಪಂದ್ಯಾಟದಲ್ಲಿ 30 ಪುರುಷ 20 ಮಹಿಳಾ ತಂಡಗಳು ಭಾಗವಹಿಸುವ ನಿರೀಕ್ಷೆ ಇದೆ. ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆ ಕಳೆದ 16…
ಮಂಗಳೂರು ವಿಶ್ವವಿದ್ಯಾನಿಲಯದ ಅಂತರ್ ಕಾಲೇಜು ಕಬಡ್ಡಿ ಪಂದ್ಯಾಟದಲ್ಲಿ ಆಳ್ವಾಸ್ ಕಾಲೇಜಿನ ಪುರುಷರ ಹಾಗೂ ಮಹಿಳೆಯರ ತಂಡ ಕ್ರಮವಾಗಿ 10 ಹಾಗೂ 17 ಬಾರಿ ಚಾಂಪಿಯನ್ಸ್ ಪಟ್ಟ ಪಡೆದುಕೊಂಡಿತು. ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯದ ಅಂತರ್ ಕಾಲೇಜು ಪುರುಷರ ಪಂದ್ಯಾಟದಲ್ಲಿ ಉಜಿರೆಯ ಎಸ್.ಡಿ.ಎಂ ಕಾಲೇಜಿನ ತಂಡವನ್ನು ಸೋಲಿಸಿ 10ನೇ ಬಾರಿ ರತ್ನವರ್ಮ ಹೆಗ್ಗಡೆ ರೋಲಿಂಗ್ ಟ್ರೋಪಿಯನ್ನು ತನ್ನದಾಗಿಸಿಕೊಂಡಿತು. ಆಳ್ವಾಸ್ ತಂಡದ ಧನುಷ್ ಉತ್ತಮ ಹಿಡಿತಗಾರ ಹಾಗೂ ಸಾಯಿ ಪ್ರಸಾದ ಉತ್ತಮ ದಾಳಿಗಾರ ವೈಯಕ್ತಿಕ ಪ್ರಶಸ್ತಿಯನ್ನು ಪಡೆದುಕೊಂಡರು. ಉಡುಪಿಯ ಪೂರ್ಣಪ್ರಜ್ಞಾ ಕಾಲೇಜಿನಲ್ಲಿ ಮಹಿಳೆಯರ ಅಂತರ್ ಕಾಲೇಜು ಕಬಡ್ಡಿ ಪಂದ್ಯಾಟದಲ್ಲಿ ಉಜಿರೆಯ ಎಸ್.ಡಿ.ಎಂ ಕಾಲೇಜಿನ ತಂಡವನ್ನು ಪರಾಭವಗೊಳಿಸಿ ರೆವರೆಂಟ್ ಫಾದರ್ ಪತ್ರಾವೋ ರೋಲಿಂಗ್ ಟ್ರೋಫಿ ಹಾಗೂ ಶಾಶ್ವತ ಫಲಕವನ್ನು 17ನೇ ಬಾರಿ ತನ್ನದಾಗಿಸಿಕೊಂಡಿತು. ಆಳ್ವಾಸ್ನ ವಿನುಶ್ರೀ ಉತ್ತಮ ಹಿಡಿತಗಾರ್ತಿ ಪ್ರಶಸ್ತಿ ಪಡೆದರೆ, ಸುಶ್ಮಿತಾ ಉತ್ತಮ ದಾಳಿಗಾರ್ತಿ ಪ್ರಶಸ್ತಿ ಪಡೆದರು. ವಿಜೇತ ಅವಳಿ ತಂಡವನ್ನು ಆಳ್ವಾಸ್ ಸಂಸ್ಥೆಯ ಅಧ್ಯಕ್ಷ ಡಾ. ಎಂ ಮೋಹನ್…
ಏರೋಡೈನಾಮಿಕ್ಸ್ ಸಂಸ್ಥೆಯು ಆಳ್ವಾಸ್ ಕಾಲೇಜಿನಲ್ಲಿ ಪ್ರಾರಂಭಿಸಿರುವ ದಕ್ಷಿಣ ಕನ್ನಡ ಜಿಲ್ಲೆಯ ಮೊದಲ ಡಿಜಿಸಿಎ ಮಾನ್ಯತೆ ಪಡೆದ ಡ್ರೋನ್ ತರಬೇತಿ ಕೇಂದ್ರವನ್ನು ಮಂಗಳವಾರ ಕಾಲೇಜಿನ ಆವರಣದಲ್ಲಿ ಉದ್ಘಾಟಿಸಲಾಯಿತು. ಕರ್ನಾಟಕದ ಕೋಸ್ಟ್ ಗಾರ್ಡ್ ನ ಉಪಮಹಾನಿರೀಕ್ಷಕ (ಡಿಐಜಿ) ಹಾಗೂ ಜಿಲ್ಲಾ ಕಮಾಂಡರ್ ಪಿ.ಕೆ ಮಿಶ್ರಾ ಮಾತನಾಡಿ, ರಕ್ಷಣೆ ಹಾಗೂ ನಾಗರಿಕ ಕ್ಷೇತ್ರಗಳಲ್ಲಿ ಡ್ರೋನ್ ತಂತ್ರಜ್ಞಾನವು ವ್ಯಾಪಕವಾಗಿ ಬಳಸಲ್ಪಡುತ್ತಿರುವುದರಿಂದ ಇದರ ಮಹತ್ವ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಡಿಮೆ ವೆಚ್ಚ, ನಿಖರತೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಬಳಸಬಹುದಾದ ಸಾಮರ್ಥ್ಯದಿಂದ ಡ್ರೋನ್ಗಳು ಕ್ರಾಂತಿಕಾರಿ ತಂತ್ರಜ್ಞಾನವಾಗಿ ಹೊರಹೊಮ್ಮುತ್ತಿವೆ ಎಂದು ಅವರು ಅಭಿಪ್ರಾಯಪಟ್ಟರು. ಜಾಗತಿಕ ಬೆಳವಣಿಗೆಗಳನ್ನು ಉಲ್ಲೇಖಿಸಿ, ಅಮೇರಿಕಾ, ಇಸ್ರೇಲ್ ಹಾಗೂ ಇರಾನ್ ನಡುವಿನ ಸಂಘರ್ಷಗಳಲ್ಲಿ, ಡ್ರೋನ್ಗಳು ಆಧುನಿಕ ಯುದ್ಧ ತಂತ್ರಗಳನ್ನು ಮಹತ್ತರವಾಗಿ ಬದಲಾಯಿಸುತ್ತಿರುವುದಾಗಿ ಹೇಳಿದರು. ಡ್ರೋನ್ ತಂತ್ರಜ್ಞಾನವು ಸಣ್ಣ ರಾಷ್ಟ್ರಗಳಿಗೂ ತಾಂತ್ರಿಕವಾಗಿ ಮುಂದುವರಿದ ರಾಷ್ಟ್ರಗಳನ್ನು ಎದುರಿಸುವ ಸಾಮರ್ಥ್ಯವನ್ನು ನೀಡುತ್ತಿವೆ. ದುಬಾರಿ ಸಾಂಪ್ರದಾಯಿಕ ಯುದ್ಧೋಪಕರಣಗಳಿಗಿಂತ ಕಡಿಮೆ ವೆಚ್ಚದ ಮಾನವರಹಿತ ಡ್ರೋನ್ಗಳ ಅಭಿವೃದ್ಧಿಗೆ ದೇಶಗಳು ಹೆಚ್ಚು ಒತ್ತು ನೀಡುತ್ತಿರುವುದಾಗಿ ತಿಳಿಸಿದರು. ವಿದ್ಯಾರ್ಥಿಗಳು ಇಂತಹ…
ಮುಂಬಯಿ ಮಹಾನಗರದ ಬಂಟರ ಪ್ರತಿಷ್ಠಿತ ಹಿರಿಯ ಸಮಾಜ ಸೇವಾ ಸಂಸ್ಥೆ ಬಂಟರ ಸಂಘ ಮುಂಬಯಿ ಇದರ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮಿತಿಯ ಆಶ್ರಯದಲ್ಲಿ ಪ್ರತೀ ವರ್ಷದಂತೆ ಈ ಬಾರಿ ಏಪ್ರಿಲ್ 14 ರಂದು ಮಂಗಳವಾರ ಬೆಳಿಗ್ಗೆ 9:00 ರಿಂದ ಕುರ್ಲಾ ಪೂರ್ವ ಬಂಟರ ಭವನದ ಶ್ರೀಮತಿ ರಾಧಾಬಾಯಿ ತಿಮ್ಮಪ್ಪ ಭಂಡಾರಿ ಸಭಾಗೃಹದಲ್ಲಿ ಬಿಸು ಪರ್ಬ ಆಚರಣೆ, ಬಂಟ ದಿನಾಚರಣೆ, ಶ್ರೀ ಮಹಾವಿಷ್ಣು ಬಂಟ ಯಕ್ಷ ಕಲಾ ವೇದಿಕೆಯ ವಾರ್ಷಿಕೋತ್ಸವ ಹಾಗೂ ಸಂಘದ ವಾರ್ಷಿಕ ಸ್ನೇಹ ಸಮ್ಮಿಲನ -2026 ಕಾರ್ಯಕ್ರಮವು ವಿಜೃಂಭಣೆಯಿಂದ ಜರುಗಲಿರುವುದು. ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಸಂಘದ ಸಾಹಿತ್ಯ ಮತ್ತು ಸಂಸ್ಕೃತಿಕ ಸಮಿತಿಯ ನೇತೃತ್ವದಲ್ಲಿ ಜರಗಲಿರುವ ಈ ಕಾರ್ಯಕ್ರಮವನ್ನು ಅಬುದಾಭಿ ಕರ್ನಾಟಕ ಸಂಘದ ಅಧ್ಯಕ್ಷ ಸರ್ವೋತ್ತಮ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಲಿರುವರು. ಮುಖ್ಯ ಅತಿಥಿಯಾಗಿ ಬೋಂಬೆ ಬಂಟ್ಸ್ ಅಸೋಸಿಯೇಷನ್ ಅಧ್ಯಕ್ಷ ನ್ಯಾಯವಾದಿ ಡಿ.ಕೆ ಶೆಟ್ಟಿ, ಗೌರವ ಅತಿಥಿಯಾಗಿ ರೀಜೆನ್ಸಿ ಗ್ರೂಪ್ ಆಫ್ ಹೋಟೆಲ್ಸ್ ನ ಸಿಎಂಡಿ ಜಯರಾಮ ಎನ್…
ಮಂಗಳೂರಿನ ಪುರಭವನದಲ್ಲಿ ನಡೆದ ಬಂಟರ ಯಾನೆ ನಾಡವರ ಮಾತೃ ಸಂಘದ (ರಿ) ಬಹಿರಂಗ ಅಧಿವೇಶನವು ಸಮಾಜದ ಹಿರಿಯರು, ಸಾಧಕರು ಮತ್ತು ಯುವ ಪೀಳಿಗೆಯ ಸಮಾಗಮಕ್ಕೆ ಸಾಕ್ಷಿಯಾಯಿತು. ಕಾರ್ಯಕ್ರಮವನ್ನು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ವಿಶ್ವಜಿತ್ ಶೆಟ್ಟಿ ಸವಣೂರು ಮತ್ತು ರಾಜೇಶ್ ರೈ ಕಲ್ಲಂಗಳ ಅವರು ದೀಪ ಬೆಳಗಿಸಿ ಹಾಗೂ ಕಳಸದಲ್ಲಿದ್ದ ತೆಂಗಿನ ಸಿರಿಯನ್ನು ಅರಳಿಸುವ ಮೂಲಕ ಸಾಂಪ್ರದಾಯಿಕವಾಗಿ ಉದ್ಘಾಟಿಸಿದರು. ಉದ್ಘಾಟನಾ ಭಾಷಣ ಮಾಡಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಸವಣೂರು ಅವರು, 118 ವರ್ಷಗಳ ಇತಿಹಾಸವಿರುವ ಈ ಸಂಘದೊಂದಿಗೆ ತಮಗೆ ವಿದ್ಯಾರ್ಥಿ ದೆಸೆಯಿಂದಲೇ ಇರುವ 40 ವರ್ಷಗಳ ಸುದೀರ್ಘ ಒಡನಾಟವನ್ನು ಸ್ಮರಿಸಿದರು. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಮುಂಚೂಣಿಯಲ್ಲಿದ್ದರೂ, ಯುಪಿಎಸ್ಸಿ ಮತ್ತು ಕೆಪಿಎಸ್ಸಿಯಂತಹ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಆಸಕ್ತಿ ತೋರುತ್ತಿಲ್ಲ. ಯಾದಗಿರಿಯಂತಹ ಜಿಲ್ಲೆಗಳು ಎಸ್ಎಸ್ಎಲ್ಸಿಯಲ್ಲಿ ಕೊನೆಯ ಸ್ಥಾನದಲ್ಲಿದ್ದರೂ ಯುಪಿಎಸ್ಸಿಯಲ್ಲಿ ಹೆಚ್ಚು ಸಾಧನೆ ಮಾಡುತ್ತಿವೆ ಎಂದು ಉದಾಹರಿಸಿದ ಅವರು, ಬಂಟರ ಸಂಘವು ನಮ್ಮ ಸಮುದಾಯದ ಅಭ್ಯರ್ಥಿಗಳಿಗೆ ಇಂತಹ ಪರೀಕ್ಷೆ ಎದುರಿಸಲು ವಿಶೇಷ ತರಬೇತಿ…
ರೋಟರಿ ಆನ್ಸ್ ಕ್ಲಬ್ ಕಾರ್ಕಳ ವತಿಯಿಂದ ಹೂವಿನ ಅಲಂಕಾರ ಸ್ಪರ್ಧೆಯು ಹೋಟೆಲ್ ಪ್ರಕಾಶ್ ನಲ್ಲಿ ನಡೆಯಿತು. ಕ್ಲಬ್ಬಿನ ಅಧ್ಯಕ್ಷೆ ಜಯಂತಿ ನಾಯಕ್ ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ರೋಟರಿ ಜಿಲ್ಲಾ ಪ್ರಥಮ ಮಹಿಳೆ ರೇಖಾ ಪಾಲಾಕ್ಷರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಸಭಾಪತಿ ವೃಂದಾ ಹರಿಪ್ರಕಾಶ್ ಶೆಟ್ಟಿ ಅತಿಥಿಗಳನ್ನು ಪರಿಚಯಿಸಿದರು. ಹೂವಿನ ಅಲಂಕಾರ ಮತ್ತು ರಂಗೋಲಿ ಸ್ಪರ್ದೆಯಲ್ಲಿ ಪ್ರಥಮ ಸ್ಥಾನ ಪಡೆದ ಆಶಾ ಡಿಮೆಲ್ಲೊ, ಸಹನಾ ಹೆಗ್ಡೆ ಮತ್ತು ಗಾಯತ್ರಿ ವಿಜೇಂದ್ರ, ದ್ವಿತೀಯ ಸ್ಥಾನ ಪಡೆದ ಕಸ್ತೂರಿ ವಸಂತ್, ವೃಂದಾ ಹರಿಪ್ರಕಾಶ್ ಶೆಟ್ಟಿ ಇವರಿಗೆ ಅತಿಥಿಗಳು ಬಹುಮಾನದೊಂದಿಗೆ ಅಭಿನಂದಿಸಿದರು. ವಿಜಯಶ್ರೀ ರಾವ್ ಪ್ರಾರ್ಥಿಸಿದರು. ಜ್ಯೋತಿ ಸುನಿಲ್ ಕುಮಾರ್ ಶೆಟ್ಟಿ ನಿರೂಪಿಸಿದರು. ಆಶಾ ಡಿಮೆಲ್ಲೊ ವಂದಿಸಿದರು.















