Author: admin

ಕಾರ್ಕಳ ಚೇತನ ವಿಶೇಷ ಶಾಲೆಗೆ ರೋಟರಿ ಕ್ಲಬ್ ಕಾರ್ಕಳ ವತಿಯಿಂದ ಆಹಾರ ಸಾಮಗ್ರಿ ಹಾಗೂ ಧನಸಹಾಯವನ್ನು ನೀಡುವ ಕಾರ್ಯಕ್ರಮ ಶಾಲಾ ಸಭಾಂಗಣದಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ರೋಟರಿ ಕ್ಲಬ್ಬಿನ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ, ಶಿಕ್ಷಕಿಯರ ತ್ಯಾಗ ಮತ್ತು ವಾತ್ಸಲ್ಯಮಯ ಸೇವೆ, ಆಡಳಿತ ಮಂಡಳಿಯ ಸೇವಾ ಮನೋಭಾವನೆ ಅಭಿನಂದನೀಯ ಎಂದರು. ಕಾರ್ಯಕ್ರಮದ ಪ್ರಾಯೋಜಕರು, ದಾನಿಗಳೂ ಆದ ಜಗದೀಶ್ ಟಿ. ಯವರು ರೂ. 21,000 ಮೌಲ್ಯದ ಅಕ್ಕಿ ಹಾಗೂ 30,000 ರೂ. ಮೊತ್ತದ ಚೆಕ್ ಅನ್ನು ಸಂಸ್ಥೆಗೆ ಹಸ್ತಾಂತರಿಸಿದರು. ಸಂಸ್ಥೆಯ ಗೌರವಾಧ್ಯಕ್ಷ ಗಣಪತಿ ಹೆಗ್ಡೆ, ರೋಟರಿ ಸದಸ್ಯರಾದ ಸುರೇಶ ನಾಯಕ್, ಹರಿಶ್ಚಂದ್ರ ಹೆಗ್ಡೆ, ಸಮುದಾಯ ಸೇವಾ ಚೇರ್ಮನ್ ವಸಂತ್ ಎಂ, ಕಾರ್ಯದರ್ಶಿ ಚೇತನ್ ನಾಯಕ್ ಉಪಸ್ಥಿತರಿದ್ದರು. ಶಾಲಾ ಸಂಚಾಲಕ ರಘುನಾಥ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮ ನಿರೂಪಿಸಿದ ಶಿಕ್ಷಕಿ ಮಂಜುಳಾ ಸ್ವಾಗತಿಸಿ ವಂದಿಸಿದರು.

Read More

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕುರಿತು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿರುವ ಸುಳ್ಳು ಸುದ್ದಿಗಳಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪದಧಿಕಾರಿಗಳು ಸ್ಪಷ್ಟಿಕರಣ ನೀಡಿದ್ದಾರೆ. ಜನವರಿ 12 ರಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ)ದ ಮಂಗಳೂರಿನ ಬಂಟ್ಸ್ ಹಾಸ್ಟೆಲ್ ಬಳಿ ಇರುವ ಪ್ರಧಾನ ಕಛೇರಿಯಲ್ಲಿ ಪದಾಧಿಕಾರಿಗಳ ಸಭೆ ಜರಗಿಸಲಾಯಿತು. ಸಭೆಯಲ್ಲಿ ಚುನಾವಣಾ ಪ್ರಕ್ರಿಯೆ ಬಗ್ಗೆ ಮತ್ತು ಲೆಕ್ಕಪತ್ರಗಳ ನಿರ್ವಹಣೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿ ಹರಡುತ್ತಿರುವುದರ ಬಗ್ಗೆ ಖಂಡಿಸಲಾಯಿತು. ಪ್ರಧಾನ ಕಾರ್ಯದರ್ಶಿ ಜಯಕರ್ ಶೆಟ್ಟಿ ಇಂದ್ರಾಳಿಯವರು ಮಾತನಾಡಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟ ಸಂಸ್ಥೆಯು ಜಗತ್ತಿನ ಎಲ್ಲಾ ಬಂಟರ ಸಂಘಗಳ ಒಕ್ಕೂಟವಾಗಿದ್ದು, ಈ ಹಿಂದಿನಿಂದಲೂ ಸಮಾಜಕ್ಕೆ ಸಮುದಾಯಕ್ಕೆ ಸಹಾಯವಾಗುವಂತಹ ಸಮಾಜಮುಖಿ ಕಾರ್ಯಕ್ರಮಗಳನ್ನು ನಿರಂತರವಾಗಿ ಮಾಡುತ್ತಿದ್ದು ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರ ನೇತೃತ್ವದಲ್ಲಿ ಮನೆ ಇಲ್ಲದವರಿಗೆ ಮನೆ ನಿರ್ಮಾಣ, ಅನಾರೋಗ್ಯ ಪೀಡಿತರಿಗೆ ಆರೋಗ್ಯಕ್ಕೆ ಸಹಾಯಹಸ್ತ, ವಿದ್ಯಾಭ್ಯಾಸಕ್ಕೆ ಸಹಾಯ, ಮದುವೆ ಶುಭ ಕಾರ್ಯಗಳಿಗೆ ಆರ್ಥಿಕ ಸಹಾಯ ನೀಡುತ್ತಾ ಸಮುದಾಯದ ಮೆಚ್ಚುಗೆಯನ್ನು ಪಡೆದಿರುತ್ತದೆ.…

Read More

ಶಿಸ್ತು, ನಾಯಕತ್ವ ಗುಣಗಳನ್ನು ಬೆಳೆಸಿ ಒತ್ತಡ ನಿವಾರಣೆ ಮಾಡಿ ಸ್ಪರ್ಧಾತ್ಮಕ ಮನೋಭಾವ ಹೆಚ್ಚಿಸುವಲ್ಲಿ ಕ್ರೀಡೆಗಳ ಪಾತ್ರ ದೊಡ್ಡದು. ನಮ್ಮ ನೆಚ್ಚಿನ ಕ್ರೀಡೆಯಲ್ಲಿ ತೊಡಗಿಸಿಕೊಂಡಂತೆ ಕ್ರೀಡೆ ನಮ್ಮ ಮಾನಸಿಕ ಆರೋಗ್ಯಕ್ಕೆ ಕೂಡಾ ಅತ್ಯವಶ್ಯಕವಾಗಿದೆ. ಕ್ರೀಡೆ ಜೀವನದಲ್ಲಿ ಯಶಸ್ವಿಯಾಗಲು ಬೇಕಾದ ವಿಶ್ವಾಸ ಮತ್ತು ಕೌಶಲ್ಯಗಳನ್ನು ನೀಡುವ ಚಟುವಟಿಕೆಯಾಗಿದೆ. ಪಾಲಕರು ಮಕ್ಕಳಿಗೆ ಕ್ರೀಡಾ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವುದು ಅತ್ಯವಶ್ಯಕ. ಯುವ ಅಥ್ಲೆಟಿಕ್ಸ್ ಗಳಿಗೆ ಖೇಲೋ ಇಂಡಿಯಾ ಮೂಲಕ ಹಲವಾರು ಸವಲತ್ತು ಸಿಗುತ್ತಿವೆ. ಇದರ ಸದುಪಯೋಗ ಪಡೆಯುವಲ್ಲಿ ನಮ್ಮ ಸಮಾಜದವರು ಪ್ರಯತ್ನಿಸಬೇಕು. ಬಂಟರು ಸಂಘಟನೆ, ಉದ್ಯಮ, ಕೈಗಾರಿಕಾ, ವಿದ್ಯಾ ಕ್ಷೇತ್ರ ಮತ್ತು ಹಲವಾರು ಕ್ಷೇತ್ರದಲ್ಲಿ ಮಾಡಿದ ಸಾಧನೆ ಬಹಳ ದೊಡ್ಡದು. ಅದೇ ರೀತಿ ಕ್ರೀಡಾ ಕ್ಷೇತ್ರದಲ್ಲಿ ನಮ್ಮವರ ಸಾಧನೆ ದೊಡ್ಡ ಮಟ್ಟದಲ್ಲಿ ಮೂಡಿ ಬರಬೇಕು. ನಮ್ಮ ಸಮಾಜದ ಪ್ರತಿಭಾವಂತ ಕ್ರೀಡಾಪಟುಗಳಿಗೆ ಸಂಘ ಸಂಸ್ಥೆಗಳು ಸಹಕಾರ ನೀಡಬೇಕು. ನಮಗೆ ಇಂಟರ್ನ್ಯಾಷನಲ್ ಸ್ಪೋರ್ಟ್ಸ್ ಮೀಟ್ ಹೋದಾಗ ಸಿಗುವ ಆತಿಥ್ಯ ಇಲ್ಲಿ ಪುಣೆ ಬಂಟರ ಸಂಘದಿಂದ ಕೂಡಾ ಸಿಕ್ಕಿದೆ. ಪುಣೆಗೆ ಬಂದು…

Read More

ಮುಂಬೈಯ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾದ ಬಾಂಬೆ ಬಂಟ್ಸ್ ಅಸೋಸಿಯೇಷನ್ ಶೈಕ್ಷಣಿಕ, ಸಾಮಾಜಿಕ ಹಾಗೂ ಧಾರ್ಮಿಕ ಕಾರ್ಯಗಳಲ್ಲಿ ತನ್ನನ್ನು ತಾನು ಸಮಾಜಸೇವೆಯಲ್ಲಿ ತೊಡಗಿಸಿಕೊಂಡು ಹಲವಾರು ಸಹಯೋಗವನ್ನು ಸಮಾಜಕ್ಕೆ ನೀಡಿದೆ. ಅದರೊಂದಿಗೆ ಸಂಸ್ಥೆಯ ಮಹಿಳಾ ವಿಭಾಗವು ಕೂಡಾ ಮಹಿಳೆಯರಿಗಾಗಿ, ಮಕ್ಕಳಿಗಾಗಿ ಧಾರ್ಮಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ತನ್ನನ್ನು ತೊಡಗಿಸಿಕೊಂಡು ನಿರಂತರ ಕಾರ್ಯಕ್ರಮಗಳನ್ನು ಮಾಡುತ್ತಾ ಬಂದಿದ್ದು, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆಯಾಗಿ ಶಾಂತ ನಾರಾಯಣ ಶೆಟ್ಟಿಯವರು ಚುಕ್ಕಾಣಿಯನ್ನು ಹಿಡಿದ ನಂತರ ಸಂಸ್ಥೆಯ ಅಧ್ಯಕ್ಷರಾದ ನ್ಯಾಯವಾದಿ ಡಿ.ಕೆ ಶೆಟ್ಟಿಯವರ ಮಾರ್ಗದರ್ಶನದಲ್ಲಿ ವಿಭಾಗದ ಎಲ್ಲಾ ಸದಸ್ಯೆಯರ ಸಂಪೂರ್ಣ ಸಹಕಾರ, ಸಹಯೋಗದೊಂದಿಗೆ ಪಾದರಸದಂತೆ ಹುರುಪಿನ ಚಟುವಟಿಕೆಯಲ್ಲಿ ಕಾರ್ಯ ನಿರತವಾಗಿದೆ ಎಂದರೆ ತಪ್ಪಾಗಲಾರದು. ಅದಕ್ಕೆ ಸಾಕ್ಷಿಯಾಗಿ ಇದೇ ಬರುವ ಜನವರಿ 18 ರಂದು ಭಾನುವಾರ ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 8 ಗಂಟೆಯ ತನಕ ಸಂಸ್ಥೆಯ ಮುಖ್ಯ ಸಭಾಗೃಹದಲ್ಲಿ ಹಳದಿ ಕುಂಕುಮ ಕಾರ್ಯಕ್ರಮವು ಬಹು ವಿಜೃಂಭಣೆಯಿಂದ ನಡೆಯಲಿದ್ದು, ತನ್ಮಧ್ಯೆ ಪ್ರಥಮ ಸಂಸ್ಥೆಯ ಮಹಿಳಾ ವಿಭಾಗದ ವತಿಯಿಂದ ಭಜನೆ, ತದ ನಂತರ ಶ್ರೀ…

Read More

ಇಂದಿನ ಪರಿಸರದಲ್ಲಿನ ಬದಲಾವಣೆ, ಅಹಾರ ವಸ್ತುಗಳು ಮತ್ತು ಕಲುಶಿತ ವಾತಾವರಣದಿಂದ ಮನುಷ್ಯನ ಆರೋಗ್ಯದಲ್ಲಿ ಏರುಪೇರು ಯಾವಾಗ ಬೇಕಾದರೂ ಆಗಬಹುದು. ಪ್ರತಿಯೊಬ್ಬರೂ ಆರೋಗ್ಯವಂತ ಬದುಕನ್ನು ಬಯಸುತ್ತಾರೆ. ಆದರೆ ಇಂದಿನ ಬ್ಯುಸಿ ಜೀವನದಲ್ಲಿ ಆರೋಗ್ಯದ ಕಡೆ ಗಮನ ಕೊಡಲು ಸಮಯವೇ ಸಿಗದ ಪರಿಸ್ಥಿತಿಯಲ್ಲಿ, ದೈಹಿಕ ಮತ್ತು ಮಾನಸಿಕ ಒತ್ತಡಕ್ಕೆ ಒಳಗಾದಾಗ ಆರೋಗ್ಯದಲ್ಲಿ ಬದಲಾವಣೆ ಕೂಡಾ ಆಗುತ್ತದೆ. ಇಂತಹ ಸಮಯದಲ್ಲಿ ಅಸಡ್ಡೆ ಮಾಡದೆ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ. ಅರೋಗ್ಯ ಇದ್ದರೇ ಜೀವನ ಸುಂದರವಾಗಿರುತ್ತದೆ. ಈ ನಿಟ್ಟಿನಲ್ಲಿ ನಮ್ಮ ಅರೋಗ್ಯ ತಪಾಸಣೆ ಮಾಡಿಸಿಕೊಳ್ಳುವ ನಿಯಮವನ್ನು ಪಾಲಿಸಬೇಕು. ನಮ್ಮ ಬಂಟ್ಸ್ ಅಸೋಸಿಯೇಷನ್ ಈ ನಿಟ್ಟಿನಲ್ಲಿ ಈ ಶಿಬಿರವನ್ನು ಆಯೋಜಿಸಿದೆ. ಆರೋಗ್ಯವೇ ಭಾಗ್ಯ ಎಂಬ ಕಾಳಜಿ ನಿಮ್ಮಲ್ಲಿರಲಿ ಎಂದು ಪುಣೆ ಬಂಟ್ಸ್ ಅಸೋಸಿಯೇಷನ್ ನ ಅಧ್ಯಕ್ಷರಾದ ರೋಹಿತ್ ಶೆಟ್ಟಿ ನಗ್ರಿಗುತ್ತು ನುಡಿದರು. ಪುಣೆ ಬಂಟ್ಸ್ ಅಸೋಸಿಯೇಷನ್ ನ ಸಮಾಜ ಕಲ್ಯಾಣ ಸೇವಾ ಕಾರ್ಯದಂಗವಾಗಿ ಗುರುನಾನಕ್ ಮೆಡಿಕಲ್ ಫೌಂಡೇಶನ್ ಸಹಯೋಗದೊಂದಿಗೆ ಸಮಾಜ ಬಾಂಧವರಿಗಾಗಿ ಮಲ್ಟಿಸ್ಪೆಷಾಲಿಟಿ ಉಚಿತ ಅರೋಗ್ಯ…

Read More

ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸು ಪಡೆಯಲು ಧನಾತ್ಮಕ ಮನೋಭಾವ, ಆತ್ಮವಿಶ್ವಾಸ ಮತ್ತು ಕಠಿಣ ಪರಿಶ್ರಮ ಅತ್ಯಗತ್ಯ. ಪ್ರತಿಯೊಬ್ಬರೂ ದೊಡ್ಡ ಕನಸುಗಳನ್ನು ಕಾಣಬೇಕು ಮತ್ತು ಅವುಗಳನ್ನು ನನಸಾಗಿಸುವ ಮೂಲಕ ಸಮಾಜಕ್ಕೆ ಉತ್ತಮ ಕೊಡುಗೆ ನೀಡಬೇಕು. ಚರಿತ್ರೆಯಲ್ಲಿ ನೂರಕ್ಕೆ ನೂರು ಶೇಖಡಾ ಸಾಧನೆಗಳು ಸಾಧ್ಯವಾದದ್ದು ಪ್ರೇರಣೆ ಹಾಗೂ ಪ್ರೋತ್ಸಾಹದಿಂದ ಎಂದು ರಾಷ್ಟ್ರ ಮಟ್ಟದ ವ್ಯಕ್ತಿತ್ವ ವಿಕಸನ ತರಬೇತುದಾರ ರಾಜೇಂದ್ರ ಭಟ್ ಹೇಳಿದರು. ಯಡಾಡಿ ಮತ್ಯಾಡಿಯ ವಿದ್ಯಾರಣ್ಯ ಕ್ಯಾಂಪಸ್‌ನಲ್ಲಿರುವ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ವತಿಯಿಂದ ಸ್ವಾಮಿ ವಿವೇಕಾನಂದರ ಜಯಂತಿಯ ಪ್ರಯುಕ್ತ ಜ. 12 ರಂದು ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್‌ ಸಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ “ಹದಿಹರೆಯದವರ ಮನಸ್ಸುಗಳ ಸಬಲೀಕರಣ” (ಎಂಪವರಿಂಗ್ ಯಂಗ್ ಮೈಂಡ್ಸ್) ಎಂಬ ವಿಶೇಷ ಕಾರ್ಯಾಗಾರದಲ್ಲಿ ಮಾತನಾಡಿದರು. ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷ ಡಾ| ರಮೇಶ್ ಶೆಟ್ಟಿ ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ಕೇವಲ ಪಠ್ಯ ಶಿಕ್ಷಣ ನೀಡಿದರೆ ಸಾಲದು. ಆಧುನಿಕ ಜೀವನದ ಸವಾಲುಗಳನ್ನು ಎದುರಿಸಲು ಮೌಲ್ಯಾಧಾರಿತ ಶಿಕ್ಷಣದ ಅಗತ್ಯವಿದೆ. ಇಂತಹ ಕಾರ್ಯಾಗಾರಗಳ ಮೂಲಕ ವಿದ್ಯಾರ್ಥಿಗಳ ಮಾನಸಿಕ…

Read More

ಅಸ್ತ್ರ ಪ್ರೊಡಕ್ಷನ್ ಸಂಸ್ಥೆಯ ಲಂಚುಲಾಲ್ ಕೆ.ಎಸ್ ನಿರ್ಮಾಣದ ಬಹುನಿರೀಕ್ಷಿತ ಕ್ರೈಂ ಥ್ರಿಲ್ಲರ್ ತುಳು ಸಿನಿಮಾ ‘ಕಟ್ಟೆಮಾರ್’ ಇದೇ ಜನವರಿ 23ರಂದು ತೆರೆಗೆ ಬರಲಿದ್ದು, ಅದರ ಟ್ರೇಲರ್ ಬಿಡುಗಡೆ ಸಮಾರಂಭ ಮಂಗಳೂರಿನ ಬಿಗ್ ಸಿನಿಮಾಸ್‌ನಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಅದ್ಧೂರಿಯಾಗಿ ನೆರವೇರಿತು. ಟ್ರೇಲರ್ ಬಿಡುಗಡೆ ಮಾಡಿ ಮಾತನಾಡಿದ ನಿರ್ಮಾಪಕ ಲಂಚುಲಾಲ್ ಕೆ.ಎಸ್., ಜನವರಿ 23ರಂದು ಕಟ್ಟೆಮಾರ್ ಸಿನಿಮಾ ಬಿಡುಗಡೆಯಾಗುತ್ತಿದೆ. ಬೇರೆ ಭಾಷೆಗಳ ಸಿನಿಮಾಗಳಿಗಿಂತ ತುಳು ಚಿತ್ರವೂ ಯಾವುದಕ್ಕೂ ಕಡಿಮೆಯಾಗಬಾರದು ಎಂಬ ಉದ್ದೇಶದಿಂದ ಈ ಚಿತ್ರವನ್ನು ಭರ್ಜರಿಯಾಗಿ ನಿರ್ಮಿಸಿದ್ದೇವೆ. ತುಳು ಚಿತ್ರರಂಗಕ್ಕೆ ಕಟ್ಟೆಮಾರ್ ನಮ್ಮ ವಿಶೇಷ ಕೊಡುಗೆ. ಎಲ್ಲರೂ ಈ ಹೊಸ ಪ್ರಯತ್ನಕ್ಕೆ ಬೆಂಬಲ ನೀಡಬೇಕು. ನಿಮ್ಮ ಬೆಂಬಲ ದೊರೆತರೆ ತುಳು ಸಿನಿ ಇಂಡಸ್ಟ್ರಿಗೆ ಇನ್ನೂ ಹಲವು ಹೊಸ ಸಾಹಸಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು. ನಟ ರೂಪೇಶ್ ಶೆಟ್ಟಿ ಮಾತನಾಡಿ, ಈ ಚಿತ್ರಕ್ಕೆ ರಿವ್ಯೂ ಕೊಡುವ ಅವಶ್ಯಕತೆಯೇ ಇಲ್ಲ. ಟ್ರೇಲರ್ ಪ್ರದರ್ಶನದ ವೇಳೆ ಕೇಳಿಬಂದ ಪ್ರೇಕ್ಷಕರ ಚಪ್ಪಾಳೆ, ಶಿಳ್ಳೆಗಳೇ ಇದರ ಮಟ್ಟವನ್ನು ತೋರಿಸಿವೆ ಎಂದರು.…

Read More

ಇದೊಂದು ಅತ್ಯಂತ ಸಾಮಾನ್ಯವಾದ ತೊಂದರೆ. ಕಡಿಮೆಯೆಂದರೂ ಶೇಕಡ 80 ಮಹಿಳೆಯರು ಹದಿಹರೆಯದಲ್ಲಿ ಮುಟ್ಟು ಪ್ರಾರಂಭವಾಗುವ ಕೆಲವು ವರ್ಷಗಳಾದರೂ ಈ ನೋವನ್ನು ಅನುಭವಿಸಿರಬಹುದು. ಇದರ ತೀವ್ರತೆಯಲ್ಲಿ ವ್ಯತ್ಯಾಸ ಇರಬಹುದಷ್ಟೆ. ಹದಿಹರೆಯದಲ್ಲಿ ಮುಟ್ಟಿನ ನೋವು ತಾಯಿಗೆ ಅತೀವ ಮಾನಸಿಕ ಒತ್ತಡ ಉಂಟು ಮಾಡಿದರೆ ಮಧ್ಯ ವಯಸ್ಸಿನ ಮುಟ್ಟಿನ ನೋವು ಆ ಮಹಿಳೆಗೆ ಬಹಳ ಮಾನಸಿಕ ಒತ್ತಡ ಮತ್ತು ದೈಹಿಕ ಒತ್ತಡ ಉಂಟು ಮಾಡುತ್ತದೆ. ಮುಟ್ಟಿನ ತೊಂದರೆಗಳಲ್ಲಿ ಎರಡು ವಿಧಗಳಿವೆ. 1) ಹದಿಹರೆಯದ ಮುಟ್ಟಿನ ನೋವು : ಹುಡುಗಿ ಪ್ರಬುದ್ಧಾವಸ್ಥೆಗೆ ಬಂದ ಮೇಲೆ ಮುಟ್ಟಿನ ಜೊತೆಗೆ ಬರುವ ನೋವು ಹಲವು ರೀತಿಯ ಸಮಸ್ಯೆಗಳನ್ನು ತಂದೊಡುತ್ತವೆ. ಕಲಿಕೆಗೂ ತೊಂದರೆ ಉಂಟು ಮಾಡುವುದಲ್ಲದೇ ಆಹಾರ ಸೇವಿಸುವಲ್ಲಿಯೂ ವ್ಯತ್ಯಯವಾಗುತ್ತದೆ. ಕೆಳ ಹೊಟ್ಟೆನೋವು, ಸೊಂಟನೋವು, ತೊಡೆಗಳಲ್ಲಿ ನೋವು ಕಂಡು ಬರಬಹುದು. ಇದರ ಜೊತೆಗೆ ವಾಂತಿಭೇದಿಯೂ ಕಂಡು ಬರಬಹುದು. ಕೆಲವರಲ್ಲಿ ಯಾವುದೇ ಕಾರಣವಿಲ್ಲದೇ ಅತೀವ ಬಳಲಿಕೆಯೂ ಇರಬಹುದು. ಆದರೆ ಸಮಾಧಾನದ ವಿಷಯವೆಂದರೆ ಈ ಹರೆಯದಲ್ಲಿ ಬರುವ ಮುಟ್ಟಿನ ನೋವು ಬೇರೆ ಯಾವುದೇ ತೊಂದರೆ…

Read More

ತುಳುನಾಡಿನ ಭಾಷೆ, ಸಂಸ್ಕೃತಿ ಮತ್ತು ಸಮುದಾಯ ಸಂಘಟನೆಯಲ್ಲಿ ಸಲ್ಲಿಸಿದ ಮಹತ್ವದ ಸೇವೆಯನ್ನು ಗುರುತಿಸಿ ಅಲಯನ್ಸ್ ಯೂನಿವರ್ಸಿಟಿ ಬೆಂಗಳೂರಿನಲ್ಲಿ ನಡೆದ ರಾಷ್ಟ್ರೀಯ ತುಳು ವಿಚಾರ ಸಂಕಿರಣದಲ್ಲಿ ಮೂಲ್ಕಿ ತುಳುವ ಮಹಾಸಭೆ ಇಂಟರ್ನ್ಯಾಷನಲ್‌ನ ಸಂಚಾಲಕಿ ಕಕ್ವಗುತ್ತು ಶ್ರೀಮತಿ ಭಾನುಮತಿ ಪ್ರಶಾಂತ್ ಶೆಟ್ಟಿಯವರಿಗೆ ಶ್ರೀ ಸರ್ವೋತ್ತಮ ಶೆಟ್ಟಿ ಹಾಗೂ ಡಾ| ರಾಜೇಶ್ ಆಳ್ವ ಅವರು ‘ತುಳುವರ್ಲ್ಡ್ ಸಮ್ಮಾನ್’ ಪ್ರಶಸ್ತಿ ನೀಡಿ ಗೌರವಿಸಿದರು. ಮೂಲ್ಕಿ ತುಳುವ ಮಹಾಸಭೆ ಇಂಟರ್ನ್ಯಾಷನಲ್‌ನ ಸಂಚಾಲಕಿಯಾಗಿ ಭಾನುಮತಿ ಶೆಟ್ಟಿಯವರು ತೋರಿದ ನಾಯಕತ್ವ, ಸಂಘಟನಾ ಸಾಮರ್ಥ್ಯ ಮತ್ತು ಸೇವಾ ಮನೋಭಾವವು ತುಳುನಾಡಿನ ಮಹಿಳಾ ಶಕ್ತಿಗೆ ಹೊಸ ದಿಕ್ಕು ನೀಡಿದೆ. ಮೂಲಭೂತ ಮಟ್ಟದಿಂದ ಸಂಘಟನೆಯನ್ನು ಬಲಪಡಿಸುವ ಇವರ ಶೈಲಿ, ಮಹಿಳೆಯರನ್ನು ಮುನ್ನಡೆಗೆ ತರುವ ದೃಷ್ಟಿ ಮತ್ತು ಸಂಸ್ಕೃತಿಯ ಮೇಲಿನ ನಿಷ್ಠೆ ಇವುಗಳೆಲ್ಲವೂ ಈ ಗೌರವಕ್ಕೆ ಸಂಪೂರ್ಣ ಅರ್ಹತೆಯನ್ನು ತಂದುಕೊಟ್ಟಿವೆ. ಈ ಸಮ್ಮಾನ್ ಭಾನುಮತಿ ಶೆಟ್ಟಿಯವರ ಮುಂದಿನ ಸೇವಾ ಪಯಣದಲ್ಲಿ ಇನ್ನಷ್ಟು ಶಕ್ತಿ, ಉತ್ಸಾಹ ಮತ್ತು ಪ್ರೇರಣೆಯನ್ನು ನೀಡಲಿ. ತುಳುನಾಡಿನ ಮಣ್ಣು, ಮಾತು ಮತ್ತು ಮಾನವೀಯತೆಯ ಸೇವೆಯಲ್ಲಿ…

Read More

ತನ್ನ ಆದಾಯದಲ್ಲಿ ತನ್ನವರನ್ನು ಪೋಷಿಸುವ ಕೆಲಸವನ್ನು ಪಶು ಪಕ್ಷಿಗಳು ಕೂಡ ಮಾಡುತ್ತವೆ. ಆದರೆ, ತಾನು ಗಳಿಸಿದ ಆದಾಯದ ಒಂದು ಪಾಲನ್ನು ಸಮಾಜಮುಖಿ ಕೆಲಸಕ್ಕೆ ವಿನಿಯೋಗಿಸಿಕೊಳ್ಳಲು ಬಲು ದೊಡ್ಡ ಮನಸ್ಸು ಬೇಕಾಗುತ್ತದೆ. ಈ ನಿಟ್ಟಿನಲ್ಲಿ ದಯಾನಂದ ಹೆಗ್ಡೆ ಮತ್ತು ಸುಗಂಧಿ ಹೆಗ್ಡೆ ದಂಪತಿಗಳ ಸಮಾಜ ಸೇವೆ ಶ್ಲಾಘನೀಯ ಎಂದು ನವೋದಯ ಕನ್ನಡ ಸೇವಾ ಸಂಘದ ಅಧ್ಯಕ್ಷರಾದ ಎಳತ್ತೂರುಗುತ್ತು ದಯಾನಂದ ಶೆಟ್ಟಿ ಅಭಿಪ್ರಾಯಪಟ್ಟರು. ಅವರು ತರುಣ ಭಾರತ ಚಾರಿಟೇಬಲ್ ಟ್ರಸ್ಟ್ (ರಿ) ಹೆರ್ಮುಂಡೆ ಇದರ ಮುಂಬೈ ಶಾಖೆಯ ಪ್ರಥಮ ವಾರ್ಷಿಕೋತ್ಸವ ಮತ್ತು ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಿದ್ದರು. ಸಮಾಜದ ಒಳಿತಿಗಾಗಿ ತನ್ನಿಂದ ಏನಾದರೂ ಆಗಬೇಕೆಂದು ದೃಢ ಸಂಕಲ್ಪ ಹೊಂದಿರುವ ದಯಾನಂದ ಹೆಗ್ಡೆಯವರ ಆಶಯಕ್ಕೆ ಭಗವಂತನ ಸಂಪೂರ್ಣ ಅನುಗ್ರಹವಿರಲಿ. ಮುಂಬರುವ ದಿನಗಳಲ್ಲಿ ಇನ್ನೂ ಸುಸಜ್ಜಿತ ಕಚೇರಿಯಲ್ಲಿ ತಮ್ಮ ಈ ನಿಸ್ವಾರ್ಥ ಸೇವೆ ದೊಡ್ಡ ಮಟ್ಟದಲ್ಲಿ ನಡೆಯಲಿ ಎಂದು ಅವರು ಹಾರೈಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಇನ್ನೋರ್ವ ಅತಿಥಿ ಬಿಲ್ಲವರ ಅಸೋಸಿಯೇಶನ್…

Read More