Author: admin
ಗೋವಾದ ತುಳುವರನ್ನು ಸಂಘಟಿಸಿ ಗಣೇಶ್ ಕೆ ಶೆಟ್ಟಿ ಇರ್ವತ್ತೂರು ಅಧ್ಯಕ್ಷತೆಯಲ್ಲಿ ರಚಿಸಲ್ಪಟ್ಟಿರುವ ತುಳುಕೂಟ ಗೋವಾ ಘಟಕ ಅದ್ದೂರಿ ಕಾರ್ಯಕ್ರಮದೊಂದಿಗೆ ಲೋಕಾರ್ಪಣೆಗೊಂಡಿತು. ಗೋವಾ ತುಳು ಕೂಟವನ್ನು ಪುತ್ತೂರಿನ ಜನಪ್ರಿಯ ಶಾಸಕರು ತುಳು ಭಾಷೆಯನ್ನು ಕರ್ನಾಟಕ ರಾಜ್ಯದ ಎರಡನೇ ಭಾಷೆಯಾಗಿ ಜಾರಿಗೆ ತರುವ ಪ್ರಯತ್ನವನ್ನು ಮಾಡುತ್ತಿರುವ ಶ್ರೀ ಅಶೋಕ್ ಕುಮಾರ್ ರೈಯವರು ಉದ್ಘಾಟಿಸಿದರು. ತುಳುನಾಡಿನಿಂದ ಬಂದಿದ್ದ ಗಣ್ಯರು ಹಾಗೂ ಗೋವಾದ ಪ್ರಮುಖರು ಉಪಸ್ಥಿತರಿದ್ದ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಭಾಷಣ ಮಾಡಿದ ತುಳುಕೂಟ ಗೋವಾದ ಅಧ್ಯಕ್ಷ ಗಣೇಶ್ ಕೆ ಶೆಟ್ಟಿ ಇರ್ವತ್ತೂರು ಗೋವಾದಲ್ಲಿ ತುಳುಕೂಟ ಆರಂಭಿಸಲು ಕಾರಣವಾದ ಅಂಶಗಳನ್ನು ವಿವರಿಸಿದರು. ಮುಂಬಯಿ ಮತ್ತು ಬೆಂಗಳೂರಿನಲ್ಲಿ ತುಳುವರು ತುಳುವರ ಸಂಘಗಳನ್ನು ಕಟ್ಟಿಕೊಂಡು ಕಾರ್ಯಕ್ರಮಗಳನ್ನು ಸಂಘಟಿಸುವ ಮೂಲಕ ಅವರು ತುಳುನಾಡಿನಲ್ಲೇ ಇರುವಂತಹ ಅನುಭವವನ್ನು ಪಡೆದಿದ್ದಾರೆ. ಅದೇ ರೀತಿ ಗೋವಾದಲ್ಲೂ ತುಂಬಾ ಜನ ತುಳುವರಿದ್ದಾರೆ. ಅವರನ್ನು ಸಂಘಟಿಸುವ ಅವಕಾಶವಿರಲಿಲ್ಲ. ಯಾರಾದರೂ ತುಳುವಿನಲ್ಲಿ ಮಾತನಾಡುವುದನ್ನು ಕೇಳಿದರೆ ಯಾವ ಊರು? ಎಂದು ಕೇಳುವಷ್ಟು ಮಾತುಕತೆ ಮಾತ್ರ ನಡೆಯುತ್ತಿತ್ತು. ಅದಕ್ಕಿಂತ ಮುಂದೆ ಹೋಗುತ್ತಿರಲಿಲ್ಲ. ಹೀಗಾಗಿ ತುಳುವರನ್ನು…
ಪುತ್ತೂರು ತಾಲೂಕು ಬಂಟರ ಸಂಘ ಇದರ ಮಹಿಳಾ ವಿಭಾಗದ ಮಾಸಿಕ ಸಭೆ ಅಕ್ಟೋಬರ್ 17 ರಂದು ಪುತ್ತೂರು ಬಂಟರ ಭವನದಲ್ಲಿ ಜರಗಿತು. ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಮತ್ತು ಸಾರ್ವಜನಿಕ ಗಣೇಶೋತ್ಸವ ಸಮಿತಿ ಬಂಟ್ಸ್ ಹಾಸ್ಟೆಲ್ ಮಂಗಳೂರು ಇಲ್ಲಿ ನಡೆದ ಬಂಟರ ಕ್ರೀಡಾ ಕೂಟದಲ್ಲಿ ಬಂಟರ ಮಹಿಳಾ ವಿಭಾಗ, ಪುತ್ತೂರು ಬಂಟರ ಸಂಘವನ್ನು ಪ್ರತಿನಿಧಿಸಿ, ತ್ರೋಬಾಲ್ ಆಟದಲ್ಲಿ ದ್ವಿತೀಯ ಬಹುಮಾನವನ್ನು ಪಡೆದುಕೊಂಡ ಬಗ್ಗೆ ಬಂಟರ ಮಹಿಳಾ ತಂಡಕ್ಕೆ ಸೂಕ್ತ ರೀತಿಯಲ್ಲಿ ತರಬೇತಿ ಹಾಗೂ ಮಾರ್ಗದರ್ಶನ ನೀಡುತ್ತಿರುವ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ದಯಾನಂದ ರೈ ಕೋರ್ಮಂಡ ಮತ್ತು ದೈಹಿಕ ಶಿಕ್ಷಣ ಶಿಕ್ಷಕ ಪ್ರೇಮನಾಥ ಶೆಟ್ಟಿ ಕಾವು ಇವರನ್ನು ಗೌರವಿಸಲಾಯಿತು. ಹಾಗೆಯೇ ಆಟಗಾರ್ತಿಯರನ್ನು ಮತ್ತು ಬಂಟರ ಮಹಿಳಾ ವಿಭಾಗದ ಕ್ರೀಡಾ ಸಂಚಾಲಕರಾದ ಸಬಿತಾ ಭಂಡಾರಿ ಹಾಗೂ ಸ್ವರ್ಣಲತಾ ಜೆ ರೈ ಇವರನ್ನು ಅಭಿನಂದಿಸಲಾಯಿತು. ಪುತ್ತೂರು ನಗರಸಭಾ ಮಾಜಿ ಅಧ್ಯಕ್ಷ ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆ ಮತ್ತು ಹರಿಣಾಕ್ಷಿ ಜೆ ಶೆಟ್ಟಿ ಇವರ ಪುತ್ರಿ ಸಮೃದ್ಧಿ ಜೆ.…
ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಅಂತರಕಾಲೇಜು ಬ್ಯಾಡ್ಮಿಂಟನ್ ಟೂರ್ನಿಯ ಪುರುಷರ ವಿಭಾಗದಲ್ಲಿ ಸತತ ೧೬ನೇ ಬಾರಿ ಚಾಂಪಿಯನ್ ಆಗಿರುವ ಆಳ್ವಾಸ್ ಕಾಲೇಜು ತಂಡವು ‘ಶ್ರೀ ಕೆಮ್ಮಾರು ಬಾಲಕೃಷ್ಣ ಗೌಡ ಸ್ಮರಣಾರ್ಥ ಟ್ರೋಫಿ’ಯನ್ನು ಎತ್ತಿ ಹಿಡಿದಿದೆ. ಮಹಿಳಾ ವಿಭಾಗದಲ್ಲಿ ಆಳ್ವಾಸ್ ಕಾಲೇಜು ತೃತೀಯ ಸ್ಥಾನ ಪಡೆದಿದೆ. ಮಂಗಳೂರಿನ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಶ್ರಯದಲ್ಲಿ ನಡೆದ ಟೂರ್ನಿಯ ಪುರುಷರ ವಿಭಾಗದ ಫೈನಲ್ನಲ್ಲಿ ಆಳ್ವಾಸ್ ಕಾಲೇಜು ತಂಡವು ೩-೦ ನೇರ ಸೆಟ್ಗಳಿಂದ ಪ್ರೇರಣಾ ಕಾಲೇಜು ತಂಡವನ್ನು ಮಣಿಸಿ, ಪ್ರಶಸ್ತಿಯನ್ನು ತನ್ನಲ್ಲಿ ಉಳಿಸಿಕೊಂಡಿತು. ಉತ್ತಮ ಪ್ರದರ್ಶನ ನೀಡಿದ ಮಹಿಳಾ ತಂಡವು ತೃತೀಯ ಸ್ಥಾನ ಪಡೆಯಿತು. ಸಾಧನೆ ಮಾಡಿದ ಕ್ರೀಡಾಪಟುಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.
‘ಯಜ್ಞದಂತೆ ಸರ್ವಸಮರ್ಪಣೆಯ ಭಾವ ಬದುಕಿನಲ್ಲಿ ಇರಲಿ’ ವಿದ್ಯಾಗಿರಿ: ಎಲ್ಲಾದರೂ ಇರಿ, ಹೇಗಾದರೂ ಇರಿ. ಭಾರತೀಯತೀಯತೆ ಎತ್ತಿ ಹಿಡಿಯಿರಿ. ಉತ್ತಮ ಜೀವನ ರೂಪಿಸಿಕೊಳ್ಳಲು ಭಾರತವೇ ಶ್ರೇಷ್ಠ ಎಂದು ಶ್ರೀ ಕ್ಷೇತ್ರ ಕಟೀಲಿನ ವಿದ್ವಾನ್ ಕಮಲಾದೇವಿ ಪ್ರಸಾದ ಆಸ್ರಣ್ಣ ಹೇಳಿದರು . ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಆಳ್ವಾಸ್ ಕಾಲೇಜು (ಸ್ವಾಯತ್ತ) ಸಂಸ್ಕೃತ ವಿಭಾಗ ಮತ್ತು ಪ್ರಜ್ಞಾ -ಜಿಜ್ಞಾಸಾವೇದಿ ಆಶ್ರಯದಲ್ಲಿ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಸೋಮವಾರ ಆರಂಭಗೊಂಡ ೭ ದಿನಗಳ “ಶ್ರೀಮದ್ ವಾಲ್ಮೀಕಿರಾಮಾಯಣ -ಶ್ರವಣಸಪ್ತಾಹ ” ಉದ್ಘಾಟಿಸಿ ಅವರು ಮಾತನಾಡಿದರು. ರಾಮಾಯಣ ಎನ್ನುವುದು ರಾಮ, ರಾಮಸ್ಯ, ಅಯಣಂ. ಅಂದರೆ ರಾಮ ನಡೆದ ದಾರಿಯಲ್ಲಿ ಸಾಗುವುದು ಎಂದರ್ಥ. ರಾಮಾಯಣ ಎಂಬ ಪೂಜ್ಯನೀಯ ಕಾವ್ಯವನ್ನು ಲೋಕಕ್ಕೆ ಕೊಡುಗೆಯಾಗಿ ನೀಡಿದ ಕೀರ್ತಿ ಶ್ರೀ ವಾಲ್ಮೀಕಿ ಅವರಿಗೆ ಸಲ್ಲುತ್ತದೆ ಎಂದು ಹೇಳಿದರು. ರಾಮನ ಕಾಲದಲ್ಲಿ ಪ್ರಜಾಪ್ರಭುತ್ವ ಇಲ್ಲದ್ದಿದರೂ ಪ್ರಜೆಗಳು ರಾಮನ ಆದರ್ಶಗಳನ್ನು ಪರಿಪಾಲನೆ ಮಾಡುತ್ತಿದ್ದರು. ಕೇವಲ ರಾಮನ ಹೆಸರನ್ನು ಪೂಜಿಸುವುದಲ್ಲದೆ ರಾಮನ ನಿಜಗುಣ , ಆದರ್ಶಗಳ ಪರಿಪಾಲನೆ ಮಾಡುತ್ತಾ ಜೀವನವನ್ನು…
ಶ್ರೀನಿವಾಸ್ ವಿಶ್ವವಿದ್ಯಾಲಯದ ಎಂಬಿಎ ವಿದ್ಯಾರ್ಥಿ ಚಿರಾಗ್ ರೈ ಮೇಗಿನಗುತ್ತು ಅವರು ಅಕ್ಟೋಬರ್ 30ರಿಂದ ಚೆನ್ನೈಯಲ್ಲಿ ನಡೆಯಲಿರುವ ದಕ್ಷಿಣ ವಲಯ ವಿಶ್ವವಿದ್ಯಾಲಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಶ್ರೀನಿವಾಸ್ ವಿಶ್ವವಿದ್ಯಾಲಯದ ತಂಡಕ್ಕೆ ಆಯ್ಕೆಯಾಗಿದ್ದಾರೆ. ಚಿರಾಗ್ ರೈ ಅವರು ಸರ್ವೆ ಗ್ರಾಮದ ಮೇಗಿನಗುತ್ತಿನಲ್ಲಿ ವಾಸವಾಗಿದ್ದು, ಇವರ ತಂದೆ ಯತೀಶ್ ರೈ ಮುಂಡೂರು ಗ್ರಾಮ ಪಂಚಾಯತ್ ನ ಮಾಜಿ ಸದಸ್ಯರಾಗಿದ್ದಾರೆ. ತಾಯಿ ಯೋಗಿನಿ ರೈ ಮುಂಡೂರು ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷೆಯಾಗಿ ಸೇವೆ ಸಲ್ಲಿಸಿದ್ದಾರೆ.
ಆರೋಗ್ಯವೇ ಭಾಗ್ಯ ಎನ್ನುವಂತೆ ನಮ್ಮ ಆರೋಗ್ಯವನ್ನು ಪ್ರಕೃತಿಯ ಬದಲಾವಣೆಗನುಗುಣವಾಗಿ ಕಾಪಾಡಿಕೊಳ್ಳುವುದು ನಮ್ಮ ಕರ್ತವ್ಯ. ದಿನ ನಿತ್ಯದ ಜೀವನದಲ್ಲಿ ಪ್ರಾಯಕ್ಕೆ ಅನುಗುಣವಾಗಿ ಶರೀರಕ್ಕೆ ಆಗುವ ತ್ರಾಸದಾಯಕ ಸನ್ನಿವೇಶಳಿಗೆ ಹೊಂದಿಕೊಳ್ಳಬೇಕು. ಹಿರಿ ಪ್ರಾಯದಲ್ಲಿ ಒತ್ತಡಕ್ಕೆ ಒಳಗಾಗುವುದು ಸರ್ವೇ ಸಾಮಾನ್ಯ. ಆದರೆ ತಾಳ್ಮೆಯಿಂದ ವ್ಯವಹರಿಸುವ ಗುಣ ನಮ್ಮಲ್ಲಿರಬೇಕು. ವ್ಯಾಯಮ, ಕ್ರೀಡೆ ಮತ್ತು ಚಟುವಟಿಕೆಯಿಂದ ಇರುವ ಮೂಲಕ ಒತ್ತಡ ಕಡಿಮೆ ಮಾಡಿಕೊಳ್ಳಬೇಕು. ಇಂದಿನ ಯಾಂತ್ರಿಕ ಜೀವನದಲ್ಲಿ ಯುವ ಮಕ್ಕಳು ಕೂಡಾ ಒತ್ತಡಕ್ಕೆ ಒಳಾಗಾಗುವುದನ್ನು ನಾವು ಕಾಣುತ್ತೇವೆ. ಇದು ಇಂದಿನ ಜೀವನ ಪದ್ದತಿಯಿಂದ ಆಗುವ ಪರಿಣಾಮಗಳಾಗಿವೆ. ಪ್ರಕೃತಿಯ ಬದಲಾವಣೆಗೆ ಹೊಂದಿಕೊಂಡು ದೈಹಿಕ ಮಾನಸಿಕ ಯೋಗ ಕ್ಷೇಮದೊಂದಿಗೆ ಆರೋಗ್ಯ ಕಾಪಾಡಿಕೊಳ್ಳುವ ದೃಡತೆ ನಮ್ಮಲ್ಲಿರಬೇಕು ಎಂದು ಪುಣೆಯ ಖ್ಯಾತ ವೈದ್ಯರಾದ ಡಾ. ಚಿತ್ತರಂಜನ್ ಶೆಟ್ಟಿ ನುಡಿದರು. ಬಂಟ್ಸ್ ಅಸೋಸಿಯೇಷನ್ ಪುಣೆ ಇದರ ವತಿಯಿಂದ ನವರಾತ್ರಿಯ ಪ್ರಯುಕ್ತ ವಾರ್ಷಿಕ ದಸರಾ ಪೂಜೆ, ತೆನೆ ಹಬ್ಬ ಹಾಗೂ ದಾಂಡಿಯಾ ರಾಸ್ ಧಾರ್ಮಿಕ ಕಾರ್ಯಕ್ರಮವು ಅಕ್ಟೋಬರ್ 11 ರಂದು ಪುಣೆಯ ಕ್ಯಾಂಪ್ ನಲ್ಲಿಯ ಪೂನಾ ಕ್ಲಬ್…
ಅನಾದಿ ಕಾಲದಲ್ಲಿ ವ್ಯಕ್ತಿ ಕೌಶಲತೆಯ ಆಧಾರದಲ್ಲಿ ಜನರನ್ನು ನಾಲ್ಕು ವಿಭಾಗ ವರ್ಣವಾಗಿ ವಿಂಗಡಿಸಲಾಗಿತ್ತು. ಅದೇ ಮುಂದೆ ಮಾನವತೆಗೆ ಶಾಪವಾದ ಉಚ್ಚ, ನೀಚ ಜಾತಿ ಪದ್ಧತಿ ಕಾರಣವಾಯಿತು. ಅದರೊಂದಿಗೆ ಮೇಲು ಕೀಳು ಅಸ್ಪಶ್ಯತೆಯು ಅಂಟಿಕೊಂಡಿತು. ಅದರ ಆಧಾರದಲ್ಲಿಯೇ ಕಲಕಸುಬು ಹಂಚಲಾಯಿತು. ಸ್ವಾತಂತ್ರ್ಯ ನಂತರದ ಭಾರತದಲ್ಲಿ ಕಲಕಸುಬುಗಳು ಜಾತಿವರ್ಣಗಳಿಂದ ಹೊರಬಂದು ವ್ಯಕ್ತಿಗೆ (ಕೆಲಸ) ಬುದ್ಧಿ ಕೌಶಲ್ಯವೇ ಮಾನದಂಡವಾಯಿತು. ಮುಂದುವರಿದ ರಾಷ್ಟ್ರಗಳಲ್ಲಿ ಮಕ್ಕಳಿಗೆ 15 ವರ್ಷ ಪ್ರಾಯವಾಗುವಾಗಲೇ ಅವನ ಇಚ್ಛೆಯನ್ನು ಅರಿತು ಅವರಿಗೆ ಐಚ್ಚಿಕ ಶಿಕ್ಷಣ ಕೊಡುತ್ತಿದ್ದಾರೆ. ಪೌರೋಹಿತ್ಯ, ಕರಕುಶಲ, ಬಡಗಿ, ಅಕ್ಕಸಾಲಿಗ, ಕಮ್ಮಾರ, ಮಡಿಕೆ ತಯಾರಿ, ಬುಟ್ಟಿ, ಚಾಪೆ ತಯಾರಿ ಕಲ್ಲು ಕಟ್ಟುವ, ಮೀನು ಹಿಡಿಯುವುದು ಇತ್ಯಾದಿಯಾಗಿ ಎಲ್ಲವೂ ಜಾತಿ ಆಧಾರಿತವಾಗಿತ್ತು. ಪ್ರಸ್ತುತ ಶಾಸ್ತ್ರ ಕಲಿತರೆ ಪುರೋಹಿತ್ಯವನ್ನು ದಲಿತನು ಮಾಡಬಹುದಾಗಿದೆ. ಮೇಲಿನ ಯಾವ ಕಸುಬುಗಳು ಇಂದು ಜಾತಿ ಆಧಾರಿತವಾಗಿಲ್ಲ. ಆದರೆ ತೌಳವ ಮೂಲದ ಪ್ರಕೃತಿ ಶಕ್ತಿಗಳಾದ ದೈವರಾದನೆ ಮಾತ್ರ ಇಂದೂ ಕೂಡ ಜಾತಿ ಸೀಮಿತವಾಗಿಯೇ ನೆಲೆ ನಿಂತಿರುವುದು ಅಚ್ಚರಿಯಾದರೂ ಇದು ಅಪ್ಪಟ ಸತ್ಯ. ಇತ್ತೀಚೆಗೆ…
ಮೂಡಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಬೆಳಗಾವಿ ಜಿಲ್ಲೆ ಮತ್ತು ಶಾಂತಿನಿಕೇತನ ಪದವಿಪೂರ್ವ ಕಾಲೇಜು ಕುಪ್ಪಟಗೇರಿ ಇವರ ಆಶ್ರಯದಲ್ಲಿ ಜರುಗಿದ ರಾಜ್ಯ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಹುಡುಗರ ಮತ್ತು ಹುಡುಗಿಯರ ವಿಭಾಗದಲ್ಲಿ 1 ಚಿನ್ನ, 2 ಬೆಳ್ಳಿ ಹಾಗೂ 2 ಕಂಚು ಒಟ್ಟು 5 ಪದಕ ಪಡೆದುಕೊಂಡರು. ಫಲಿತಾಂಶ : ಟೆನ್ನಿ ಕೃಷ್ಣ – 120ಕೆಜಿ ವಿಭಾಗದಲ್ಲಿ (ಪ್ರಥಮ), ಕೃಷ್ಣ – 92ಕೆಜಿ ವಿಭಾಗದಲ್ಲಿ (ದ್ವಿತೀಯ), ಸಂಕೇತ್ ಶೆಟ್ಟಿ – 74 ಕೆಜಿ ವಿಭಾಗದಲ್ಲಿ (ತೃತೀಯ), ಶಶಿಕುಮಾರ್ – 63 ಕೆಜಿ ವಿಭಾಗದಲ್ಲಿ (ತೃತೀಯ), ಊರ್ಮಿಳಾ – 62 ಕೆಜಿ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದರು. ವಿಜೇತ ಕ್ರೀಡಾಪಟುಗಳಿಗೆ ಸಂಸ್ಥೆಯ ಅಧ್ಯಕ್ಷರಾದ ಡಾ.ಎಂ ಮೋಹನ ಆಳ್ವರು ಅಭಿನಂದಿಸಿದ್ದಾರೆ.
ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕುಂತಳನಗರದ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ನಲ್ಲಿ ಉಡುಪಿ ಗ್ರೂಪ್ ಆಫ್ ಇನ್ಸ್ಟಿಟ್ಯೂಶನ್ ಮಣಿಪಾಲದ ವಿದ್ಯಾರ್ಥಿಗಳಿಗೆ ಒಂದು ದಿನದ ಕೌಶಲ ಮತ್ತು ವೃತ್ತಿ ಅಭಿವೃದ್ಧಿ ತರಬೇತಿಯು ಅಕ್ಟೋಬರ್ 19 ರಂದು ನಡೆಯಿತು. ಸಮಾರಂಭವನ್ನು ಉದ್ಘಾಟಿಸಿದ ನಿಟ್ಟೆ ಡೀಮ್ಡ್ ಯುನಿವರ್ಸಿಟಿಯ ಉಪಾಧ್ಯಕ್ಷ ಡಾ. ಗೋಪಾಲ್ ಮೊಗೆರಾಯ ಮುಂಡ್ಕೂರು ಮಾತನಾಡಿ, ಆರಾಮ ವಲಯದಿಂದ ಹೊರ ಬಂದಾಗ ಸಾಧನೆ, ಬೆಳವಣಿಗೆ ಸಾಧ್ಯವಾಗುತ್ತದೆ. ಅದಾಗ ಅದ್ಬುತವಾದ ಜೀವನ ನಿರ್ಮಾಣವಾಗುತ್ತದೆ. ಆ ನಿಟ್ಟಿನಲ್ಲಿ ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ಇವರ ಮನುಕುಲದ ಸೇವೆಯು ಸ್ತುತ್ಯಾರ್ಹ ಎಂದರು. ದಿಕ್ಸೂಚಿ ಮಾತುಗಳನ್ನಾಡಿದ ಮಲ್ಪೆ ರಾಜ್ ಫಿಶ್ ಮಿಲ್ ಆಯಿಲ್ ಕಂಪನಿ ಆಡಳಿತ ನಿರ್ದೇಶಕ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ನಮ್ಮ ಜೀವನ ಯಶಸ್ಸು ಮತ್ತು ವೈಫಲ್ಯಗಳ ಮೇಲೆ ನಿರ್ಧರಿತವಾಗುತ್ತದೆ. ದೇಶದ ಸಂಸ್ಕೃತಿ, ಸಂಸ್ಕಾರ, ಪ್ರಾಮಾಣಿಕತೆಯಿಂದ ಬದುಕು ಹಸನಾಗಬಲ್ಲುದು. ಭವಿಷ್ಯದ ಗರ್ಭದಲ್ಲಿ ಯಾರು ಏನಾಗುತ್ತಾರೋ ಎಂಬುದು ಗೊತ್ತಿಲ್ಲ. ಉಡುಪಿ ಗ್ರಾಮೀಣ ಬಂಟರ…
ವಿದ್ಯಾಗಿರಿ: ‘ಔಷಧಾಲಯ ಅಥವಾ ಔಷಧ ವಿಜ್ಞಾನ ಎಂಬುದು ಕೇವಲ ಕುಳಿತು ಮಾಡುವ ವ್ಯಾಪಾರಿ ವೃತ್ತಿಯಲ್ಲ, ಅದು ವೈದ್ಯರು ಮತ್ತು ರೋಗಿಗಳ ಮಧ್ಯದ ಸೇತು’ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ ಆಳ್ವ ಹೇಳಿದರು. ಆಳ್ವಾಸ್ ಕಾಲೇಜಿನ ಧನ್ವಂತರಿ ಸಭಾಭವನದಲ್ಲಿ ಸೋಮವಾರ ನಡೆದ ಆಳ್ವಾಸ್ ಫಾರ್ಮಸಿ ಕಾಲೇಜು ಉದ್ಘಾಟನೆ ಮತ್ತು ಅಭಿವಿನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಔಷಧಾಲಯ ಪರಿಣಿತರು ವೈದ್ಯರು ಸೂಚಿಸಿ ಬರೆದ ಔಷಧಗಳ ಸಂಪೂರ್ಣ ಜ್ಞಾನ ಹೊಂದಿರಬೇಕು. ಔಷಧಾಲಯ ಪರಿಣತರಿಗೆ ಜಗತ್ತಿನಾದ್ಯಂತ ಬೇಡಿಕೆ ಹೆಚ್ಚಿದೆ. ಆಳ್ವಾಸ್ನಲ್ಲಿ ‘ಫಾರ್ಮಸಿ’ ಎಲ್ಲ ಅಗತ್ಯ ಸೌಲಭ್ಯಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಗುವುದು. ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದು, ಅತ್ಯುನ್ನತ ಹುದ್ದೆಗಳಿಗೆ ತೆರಳಬೇಕು ಎಂದರು. ಭಾರತವು ಜಗತ್ತಿನ ಔಷಧ ಶಾಲೆ. ಕೋವಿಡ್ನಂತಹ ಸಂದರ್ಭದಲ್ಲಿ ವಿವಿಧ ದೇಶಗಳ ಔಷಧಗಳ ಬೇಡಿಕೆ ಪೂರೈಸಿದೆ ಎಂದರು. ಮೂಡುಬಿದಿರೆ ಸಿ.ಎಚ್ ಮೆಡಿಕಲ್ ಮಾಲಕ ಸಿ.ಎಚ್. ಅಬ್ದುಲ್ ಗಫೂರ್ ಮಾತನಾಡಿ, ಆಳ್ವಾಸ್ ಕಾಲೇಜು ಧನಾತ್ಮಕ ಯೋಚನೆಗಳಿಗೆ ಸಹಕಾರಿಯಾಗಿದೆ. ಫಾರ್ಮಸಿಯ ವಿಷಯಯಗಳು ಕಲಿಕೆಗೆ ಕಷ್ಟವಾಗಿದ್ದರೂ,…