Author: admin

2002 ರಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿದ್ದ ಟ್ರಸ್ಟಿಗೆ 2024 ರಿಂದ ಗಣನಾಥ ಶೆಟ್ಟಿ ಎಕ್ಕಾರು ಅವರನ್ನು ಅಧ್ಯಕ್ಷರನ್ನಾಗಿ ಮತ್ತು ಒಂಬತ್ತು ಕ್ರಿಯಾಶೀಲ ಸದಸ್ಯರನ್ನು ಕರ್ನಾಟಕ ಸರಕಾರವು ನೇಮಿಸಿತು. ಈ ಹಿಂದೆ ಒಂದೇ ಸ್ಥಳಕ್ಕೆ ಸೀಮಿತವಾಗಿದ್ದ ಟ್ರಸ್ಟ್ ಕಾರ್ಯಕ್ರಮಗಳು ಈಗ ರಾಜ್ಯಾದ್ಯಂತ ನಿರಂತರ ನಡೆಯುತ್ತಿರುವುದು ಗಮನಾರ್ಹ. ಕಳೆದ ಒಂದೂವರೆ ವರ್ಷದಲ್ಲಿ ಟ್ರಸ್ಟ್ 52 ಕಾರ್ಯಕ್ರಮಗಳನ್ನು ಏರ್ಪಡಿಸಿದೆ. ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಅರಿವಿನ ಬೆಳಕು, ಪದವಿಪೂರ್ವ ಪ್ರೌಢಶಾಲೆ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ರಂಗವಲ್ಲಿ ಮತ್ತು ಚಿತ್ರಕಲೆ ಮೂಲಕ ಕಾರಂತರು ರಂಗ ತಂಡಗಳ ಕಾರಂತರ ಕೃತಿಗಳ ನಾಟಕ ಪ್ರದರ್ಶನ ಕಥೆ ನಾಟಕ ಕಾದಂಬರಿಗಳ ಅಧ್ಯಯನ ಶಿಬಿರಗಳು, ಕನ್ನಡೇತರರಿಗೆ ಕನ್ನಡ ಕಲಿಕೆ, ರಾಜ್ಯ ಮತ್ತು ಜಿಲ್ಲಾಮಟ್ಟದ ಸ್ಪರ್ಧೆಗಳು ಪರಿಸರ ಕಾರ್ಯಕ್ರಮ ರಾಷ್ಟ್ರೀಯ ವಿಚಾರ ಸಂಕಿರಣಗಳು, ಕೃತಿ ಪರಿಚಯ ಕಾರ್ಯಕ್ರಮ, ಹಿರಿಯ ನಾಗರಿಕರಿಗೆ ಸ್ಪರ್ಧೆ ಮತ್ತು ಉಪನ್ಯಾಸ. ಕಾರಂತರ ಜನ್ಮ ದಿನೋತ್ಸವದ ಅಂಗವಾಗಿ ಲೇಖಕರ ಸಮ್ಮಿಲನ ಮತ್ತು ಕಾರಂತ ಸಾಹಿತ್ಯೋತ್ಸವವನ್ನು ಏರ್ಪಡಿಸಲಾಗಿದೆ. ಕಾರಂತರ ಸಿನಿಮಾ ಪ್ರದರ್ಶನ ಮತ್ತು ಚರ್ಚೆ, ನಾಡಿನ…

Read More

ಬೆಂಗಳೂರಿನಲ್ಲಿ ಡ್ರೈವರ್ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದ ಹೊಸಕಾಡು ನಿವಾಸಿ ಅಶೋಕ್ ರವರು ಕಳೆದ 3 ತಿಂಗಳಿನಿಂದ ಹೃದಯ ಸಂಬಂಧಿ ರೋಗದಿಂದ ಬಳಲುತ್ತಿದ್ದು, ಶುಶ್ರೂಷೆ ನಡೆಯುತ್ತಿದೆ. ಹೃದಯದಲ್ಲಿ ಸ್ಟಂಟ್ ಅಳವಡಿಸಿದ ಕಾರಣ ದುಡಿಯಲು ಸಾಧ್ಯವಾಗದೆ ಹಾಸಿಗೆ ಹಿಡಿದಿದ್ದು, ಆರ್ಥಿಕ ಸಮಸ್ಯೆ ತಲೆದೋರಿದ ಕಾರಣ ಅಶೋಕ್ ರವರ ಶ್ರೀಮತಿಯವರ ಮನವಿಯ ಮೇರೆಗೆ ಶಿವಾಯ ಫೌಂಡೇಶನ್ ವತಿಯಿಂದ 25,000 ರೂಪಾಯಿಗಳ ಧನಸಹಾಯ ಮಾಡಲಾಯಿತು. ಈ ಸಂಧರ್ಭ ಶಿವಾಯ ಫೌಂಡೇಶನ್ ನ ಗೌರವಾಧ್ಯಕ್ಷ ನವೀನ್ ಚಂದ್ರ ಜೆ ಶೆಟ್ಟಿ, ಅಧ್ಯಕ್ಷ ಪ್ರಶಾಂತ್ ಶೆಟ್ಟಿ ಪಲಿಮಾರು ಮತ್ತಿತರರು ಉಪಸ್ಥಿತರಿದ್ದರು.

Read More

ಬೆಂಗಳೂರು ಬಂಟರ ಸಂಘದ ಸಮಾಜ ಸೇವಾ ಸಮಿತಿ ಮತ್ತು ಸೇವಾದಳ ಆಯೋಜನೆ ಮಾಡಿರುವ ಸೇವಾ ಸಮಾಗಮ ಕಾರ್ಯಕ್ರಮದಲ್ಲಿ ಸುಮಾರು 46 ಮಂದಿಗೆ ಉಚಿತ ಹೊಲಿಗೆ ಯಂತ್ರವನ್ನು ವಿತರಿಸಲಾಯಿತು. ಈ ಸಂಧರ್ಭ ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಸಿಎ ಅಶೋಕ್ ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ವಿಜಯ್ ಶೆಟ್ಟಿ ಹಾಲಾಡಿ, ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ವೈ ಭರತ್ ಶೆಟ್ಟಿ, ಉಪಾಧ್ಯಕ್ಷ ಜಪ್ತಿ ಸಂತೋಷ್ ಶೆಟ್ಟಿ, ಮಹಿಳಾ ಉಪಾಧ್ಯಕ್ಷೆ ಕಾಂತಿ ಶೆಟ್ಟಿ, ಕೋಶಾಧಿಕಾರಿ ಅಶೋಕ್ ಶೆಟ್ಟಿ, ಸಮಾಜ ಸೇವಾ ಸಮಿತಿ ಮತ್ತು ಸೇವಾದಳದ ಛೇರ್ಮನ್ ಪ್ರತಾಪ್ ಶೆಟ್ಟಿ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Read More

ಭೂತಾನ್ ನಲ್ಲಿ ನಡೆದ ಇಂಟರ್ನ್ಯಾಷನಲ್ ಸಂಸ್ಕೃತಿ ಉತ್ಸವದಲ್ಲಿ ಪುಣೆಯ ಖ್ಯಾತ ಉದ್ಯಮಿ ಹಾಗೂ ಸಮಾಜಸೇವಕ ಕಟ್ಟಿಂಗೇರಿ ಸುಭಾಶ್ಚಂದ್ರ ಹೆಗ್ಡೆಯವರಿಗೆ ಸಮಾಜ ಸೇವೆ ಹಾಗೂ ಉದ್ಯಮ ಕೇತ್ರದಲ್ಲಿ ಮಾಡಿರುವ ಸಾಧನೆಗಾಗಿ ಗೌರವಿಸಿ ಸನ್ಮಾನಿಸಿದರು. ಈ ಸಂಧರ್ಭ ಭೂತಾನ್ ಲೋಕಸಭಾ ಸದಸ್ಯರಾದ ದಶೋ ಉಗ್ಯೆಮ್ ಲಾಮೋ ಉಪಸ್ಥಿತರಿದ್ದರು.

Read More

ರಾಜಕೀಯವೆಂದರೆ ಕೇವಲ ಅಧಿಕಾರದ ಅಲಂಕಾರವಲ್ಲ; ಅದು ಜನರ ನೋವುಗಳಿಗೆ ಸ್ಪಂದಿಸುವ ಹೃದಯದ ಧ್ವನಿ. ಕೆಲವರು ಹುದ್ದೆಗಳನ್ನು ಅಲಂಕರಿಸುತ್ತಾರೆ. ಆದರೆ ಕೆಲವರು ತಮ್ಮ ಕಾರ್ಯಗಳಿಂದಲೇ ಹುದ್ದೆಗಳಿಗೆ ಗೌರವ ತರುತ್ತಾರೆ. ಅಂತಹ ಅಪರೂಪದ ಜನನಾಯಕರ ಸಾಲಿನಲ್ಲಿ ಕರಾವಳಿ ಕರ್ನಾಟಕ ಹೆಮ್ಮೆಯಿಂದ ಉಚ್ಚರಿಸುವ ಹೆಸರು ಕೆ. ಜಯಪ್ರಕಾಶ್ ಹೆಗ್ಡೆ. ಸರಳತೆ, ಸಜ್ಜನಿಕೆ, ಪ್ರಾಮಾಣಿಕತೆ ಮತ್ತು ಜನಪರ ಚಿಂತನೆಯ ಮೂಲಕ ಸಾರ್ವಜನಿಕ ಜೀವನದಲ್ಲಿ ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸಿರುವ ಅವರು ಶಾಸಕನಾಗಿ, ಸಚಿವನಾಗಿ, ಸಂಸದರಾಗಿ ಹಾಗೂ ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಜನಸೇವೆಯ ಅನೇಕ ಸುವರ್ಣ ಅಧ್ಯಾಯಗಳನ್ನು ಬರೆದಿದ್ದಾರೆ. ಜೆ.ಎಚ್ ಪಟೇಲ್ ಅವರ ಸಚಿವ ಸಂಪುಟದಲ್ಲಿ ಬಂದರು ಹಾಗೂ ಮೀನುಗಾರಿಕಾ ಸಚಿವರಾಗಿ ಕಾರ್ಯ ನಿರ್ವಹಿಸಿದ ಸಂದರ್ಭದಲ್ಲಿ ಕರಾವಳಿ ಕರ್ನಾಟಕದ ಅಭಿವೃದ್ಧಿಗೆ ಹೊಸ ಚೈತನ್ಯ ನೀಡಿದರು. ಸಮುದ್ರವನ್ನು ಜೀವನಾಧಾರವಾಗಿಸಿಕೊಂಡ ಮೀನುಗಾರರ ಸಮಸ್ಯೆಗಳನ್ನು ಹತ್ತಿರದಿಂದ ಅರಿತು, ಮೀನುಗಾರಿಕಾ ಕ್ಷೇತ್ರದ ಆಧುನೀಕರಣ, ಮೀನುಗಾರರ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಅವರ ಬದುಕಿನ ಭದ್ರತೆಗೆ ಹಲವಾರು ಯೋಜನೆಗಳಿಗೆ ಚಾಲನೆ ನೀಡಿದರು. ಕರಾವಳಿಯ…

Read More

ಶಾಲಾ ಶುಲ್ಕ ಭರಿಸಲು ಅಸಾಧ್ಯವಾದ ಪರಿವಾರದ ಬಾಲಕಿಯ ಶಾಲಾ ಶುಲ್ಕವಾದ 39,000 ರೂಪಾಯಿಗಳನ್ನು ಭರಿಸಲು ಶಿವಾಯ ಫೌಂಡೇಶನ್ ವತಿಯಿಂದ ಸಹಾಯ ಮಾಡಲಾಯಿತು. ಈ ಹೆಣ್ಣು ಮಗುವಿನ ತಂದೆ ಕಿಡ್ನಿ ಸಮಸ್ಯೆಯಿಂದ ಬಳಳುತ್ತಿದ್ದು, ದೀರ್ಘ ಸಮಯದಿಂದ ಚಿಕಿತ್ಸೆ ಪಡೆಯುತ್ತಿದ್ದು, ಆರ್ಥಿಕ ಸಹಾಯಕ್ಕಾಗಿ ಶಿವಾಯ ಫೌಂಡೇಶನ್ ನಿಂದ ಸಹಾಯ ಯಾಚಿಸಿದ್ದರು. ಈ ಸಂದರ್ಭದಲ್ಲಿ ಶಿವಾಯ ಫೌಂಡೇಶನ್ ನ ಗೌರವಾಧ್ಯಕ್ಷರಾದ ನವೀನ್ ಚಂದ್ರ ಜೆ ಶೆಟ್ಟಿ ಪಡುಬಿದ್ರಿ, ಎಸ್.ಇ.ಝಡ್ ಇದರ ಮುಖ್ಯಸ್ಥರಾದ ಅಶೋಕ್ ಕುಮಾರ್ ಶೆಟ್ಟಿ, ಪ್ರಶಾಂತ್ ಶೆಟ್ಟಿ ಪಲಿಮಾರು, ಹರೀಶ್ ಕೋಟ್ಯಾನ್ ಪಡು ಇನ್ನ, ರವಿ ಶೆಟ್ಟಿ ಪಾದೆಬೆಟ್ಟು, ಸ್ಮೈಲ್ ಫೋಟೋಗ್ರಾಫಿಯ ಮಹೇಶ್ ದೇವಾಡಿಗ ಉಪಸ್ಥಿತರಿದ್ದರು.

Read More

ಬಂಟರ ಯಾನೆ ನಾಡವರ ಮಾತೃ ಸಂಘದ ಉಡುಪಿ ತಾಲೂಕು ಸಂಚಾಲಕರಾಗಿ ದಿನಕರ ಶೆಟ್ಟಿ ಹೆರ್ಗ ಅವರು ಆಯ್ಕೆಯಾಗಿದ್ದಾರೆ. ದಿನಕರ ಶೆಟ್ಟಿಯವರು ಉಡುಪಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ, ಹೆರ್ಗ ವ್ಯವಸಾಯ ಸೇವಾ ಸಹಕಾರಿ ಸಂಘ ಪರ್ಕಳ ಇಲ್ಲಿನ ಅಧ್ಯಕ್ಷರಾಗಿ, ಹೆರ್ಗ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Read More

ಬಂಟರ ಯಾನೆ ನಾಡವರ ಮಾತೃ ಸಂಘದ ಪುತ್ತೂರು ತಾಲೂಕು ಸಂಚಾಲಕರಾಗಿ ಸಹಕಾರ ರತ್ನ ದಂಬೆಕ್ಕಾನ ಸದಾಶಿವ ರೈಯವರು ಆಯ್ಕೆಯಾಗಿದ್ದಾರೆ. ನೂತನ ಸಂಚಾಲಕರಾಗಿ ಆಯ್ಕೆಯಾದ ದಂಬೆಕ್ಕಾನ ಸದಾಶಿವ ರೈಯವರು ಸಹಕಾರ ಕ್ಷೇತ್ರದಲ್ಲಿ ಅಪಾರವಾದ ಅನುಭವವನ್ನು ಹೊಂದಿದ್ದಾರೆ. ರೋಯಲ್ ಸೌಹಾರ್ದ ಸಹಕಾರಿ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದು, ಡಾ. ಪಿ.ಬಿ ಪ್ರತಿಷ್ಠಾನದ ರೂವಾರಿ, ಕೆಯ್ಯೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ, ಪುತ್ತೂರು ವಿಶ್ವ ಹಿಂದೂ ಪರಿಷತ್ ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ಪುತ್ತೂರು ತಾಲೂಕು ಬಂಟರ ಸಂಘದ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Read More

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಳ್ವಾಸ್ ನುಡಿಸಿರಿ ವೇದಿಕೆಯಲ್ಲಿ ಆಯೋಜಿಸಲಾದ ಪದವಿ ಪ್ರದಾನ ಸಮಾರಂಭದಲ್ಲಿ ಆಳ್ವಾಸ್‌ನ ವಿವಿಧ ಶಿಕ್ಷಣ ಸಂಸ್ಥೆಗಳ 2,627 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಕಾರ‍್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಹಾವೇರಿಯ ಕರ್ನಾಟಕ ಜಾನಪದ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಡಾ| ಚಿನ್ನಪ್ಪ ಗೌಡ ಪದವೀಧರರನ್ನು ಉದ್ದೇಶಿಸಿ ಮಾತನಾಡಿ, ಶಿಕ್ಷಣದ ನಿಜವಾದ ಉದ್ದೇಶವು ಕೇವಲ ಪದವಿ ಪಡೆಯುವುದಲ್ಲ. ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವುದಾಗಿದೆ. ಪದವಿ ಪ್ರಮಾಣಪತ್ರವು ಕೇವಲ ಒಂದು ಕಾಗದದ ತುಣುಕಾಗಿದ್ದು, ಅದಕ್ಕೆ ನಿಜವಾದ ಮೌಲ್ಯ ದೊರೆಯುವುದು ವ್ಯಕ್ತಿಯ ಜ್ಞಾನ, ಸಾಮರ್ಥ್ಯ, ಪ್ರಾಮಾಣಿಕತೆ ಹಾಗೂ ಜೀವನ ಮೌಲ್ಯಗಳಿಂದ ಮಾತ್ರ ಎಂದು ಅವರು ಅಭಿಪ್ರಾಯಪಟ್ಟರು. ಶಿಕ್ಷಣವು ಕೇವಲ ಶೈಕ್ಷಣಿಕ ಸಾಧನೆಗಳಿಗೆ ಸೀಮಿತವಲ್ಲ. ವಿದ್ಯಾರ್ಥಿಗಳು ಕಲಿಕೆಯ ಅವಧಿಯಲ್ಲಿ ರೂಪಿಸಿಕೊಂಡ ವ್ಯಕ್ತಿತ್ವ, ಜೀವನ ಮೌಲ್ಯಗಳು ಹಾಗೂ ಸಾಮಾಜಿಕ ಬದ್ಧತೆಯೇ ಅವರ ನಿಜವಾದ ಗುರುತು. ಆಳ್ವಾಸ್ ಶಿಕ್ಷಣ ಸಂಸ್ಥೆಗಳು ಶಿಕ್ಷಣ ಕ್ಷೇತ್ರದಲ್ಲಿ ವಿಶಿಷ್ಟ ಛಾಪನ್ನು ಮೂಡಿಸಿವೆ. ಆಳ್ವಾಸ್ ನೀಡುವ ಪ್ರತಿಯೊಂದು ಪ್ರಮಾಣಪತ್ರವೂ ಸಂಸ್ಥೆಯ ಪರಂಪರೆ, ಸಂಸ್ಕೃತಿ…

Read More

ರೋಟರಿ ಕ್ಲಬ್ ಕಾರ್ಕಳ ಇದರ ವತಿಯಿಂದ ವಿದ್ಯುತ್ ಸಂಪರ್ಕ ಇಲ್ಲದ ಶಾಲೆಗೆ ಹೋಗುತ್ತಿರುವ ವಿದ್ಯಾರ್ಥಿಗಳಿರುವ ಜೋಗುಳ ಬೆಟ್ಟುವಿನ ಮನೆಗೆ ಸೋಲಾರ್ ದೀಪದ ವ್ಯವಸ್ಥೆ ಮಾಡಿಕೊಡಲಾಯಿತು. ಸೋಲಾರ್ ದೀಪದ ಪ್ರಾಯೋಜಕರಾದ ರೋಟರಿ ಸಂಸ್ಥೆಯ ಸದಸ್ಯ ರೋ. ಸಮದ್ ಖಾನ್ ಸ್ವಿಚ್ ಆನ್ ಮಾಡುವುದರ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ರೋಟರಿಯ ಅಧ್ಯಕ್ಷರಾದ ಕೆ. ನವೀನ್ ಚಂದ್ರ ಶೆಟ್ಟಿ, ಮಾಜಿ ಸಹಾಯಕ ಗವರ್ನರ್ ಹರಿಪ್ರಕಾಶ್ ಶೆಟ್ಟಿ, ಕಮ್ಯುನಿಟಿ ಚೇರ್ಮನ್ ವಸಂತ್ ಎಂ, ರೋ. ಸುಬ್ರಹ್ಮಣ್ಯ ದೇವಾಡಿಗ, ರೋಟ್ರಾಕ್ಟರ್ ನಿಯಮ್ ಶೆಟ್ಟಿ ಉಪಸ್ಥಿತರಿದ್ದರು.

Read More