Author: admin

ಸುರತ್ಕಲ್ ನ ಸುಭಾಷಿತನಗರ ಅಸೋಸಿಯೇಷನ್ ಕಛೇರಿಯಲ್ಲಿ ನಾಗರೀಕ ಸುರಕ್ಷತೆಯ ಪಾಲನೆ, ಸೈಬರ್ ಕ್ರೈಮ್ ಹಾಗೂ ಮಾದಕ ವಸ್ತು ನಿಷೇದ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಯಿತು. ಸುರತ್ಕಲ್ ಆರಕ್ಷಕ ಠಾಣಾ ಸರ್ಕಲ್ ಇನ್ಸ್ ಪೆಕ್ಟರ್ ಪ್ರಮೋದ್ ಕುಮಾರ್, ಸಬ್ ಇನ್ಸ್ ಪೆಕ್ಟರ್ ರಘು ನಾಯ್ಕ್ ಹಾಗೂ ಇಲಾಖಾ ಸಿಬ್ಬಂದಿಗಳ ಸಹಯೋಗದೊಂದಿಗೆ ಮಾದಕ ದ್ರವ್ಯ, ಸೈಬರ್ ಕ್ರೈಮ್ ಅಪರಾಧ ತಡೆಗಳ ಬಗ್ಗೆ ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿ ಶಿಬಿರ ಹಾಗೂ ಪೊಲೀಸ್ ಇಲಾಖೆಯಿಂದ ಮನೆ ಮನೆ ಸಂಪರ್ಕ ಕಾರ್ಯಕ್ರಮದ ವಿವರವನ್ನು ಇಲಾಖಾ ವತಿಯಿಂದ ನೀಡಲಾಯಿತು ಹಾಗೂ ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ಸೂಕ್ತ ಪರಿಹಾರ ಮಾಹಿತಿಯನ್ನು ನೀಡಲಾಯಿತು. ಯಾವುದೇ ಸೈಬರ್ ಅಪರಾಧ ವಂಚನೆಗೆ ಒಳಗಾದಲ್ಲಿ ದೂರವಾಣಿ ಸಂಖ್ಯೆ1930 ಮತ್ತು 112ಕ್ಕೆ ಕರೆ ಮಾಡಿ ಸಮಸ್ಯೆ ಪರಿಹರಿಸಲು ಸೂಚಿಸಿದರು. ಸುಭಾಷಿತ ನಗರ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಷನ್ ವತಿಯಿಂದ ಏರ್ಪಡಿಸಲಾದ ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಾರ್ವಜನಿಕರು ಭಾಗವಹಿಸಿದರು. ಅಸೋಸಿಯೇಷನ್ ನ ಅಧ್ಯಕ್ಷರಾದ ರಮೇಶ್ ಶೆಟ್ಟಿ ಹಾಗೂ ಪದಾಧಿಕಾರಿಗಳು ಭಾಗವಹಿಸಿ ಕಾರ್ಯಕ್ರಮ…

Read More

ನಮ್ಮ ಸಮಾಜ, ಸಮುದಾಯ, ಸಂಸ್ಕ್ರತಿ, ಸಮಾಜಮುಖಿ ಚಿಂತನೆ ಮತ್ತು ನಾಯಕತ್ವದ ಮೂಲಕ ಬಾಂಧವರ ಒಗ್ಗೂಡುವಿಕೆಯಲ್ಲಿ ಸೃಷ್ಟಿಯಾದ ಸಂಘಟನೆ ವರ್ಷದಿಂದ ವರ್ಷಕ್ಕೆ ಬಲಯುತವಾಗಿ ಸಾಗುತ್ತಿದೆ. ನಮ್ಮ ಬಂಟ್ಸ್ ಅಸೋಸಿಯೇಷನ್ ಕೂಡಾ ಅದೇ ಉದ್ದೇಶದೊಂದಿಗೆ ಸ್ಥಾಪನೆಯಾಗಿ 14 ವರ್ಷಗಳ ತನಕ ಬಂದು, ಸಂಘದ ಮಾಜಿ ಅಧ್ಯಕ್ಷರುಗಳು, ದಾನಿಗಳು, ಸಮಾಜ ಬಾಂಧವರ ಸಹಕಾರದಿಂದ ಹಲವಾರು ಕಾರ್ಯ ಯೋಜನೆಗಳ ಮೂಲಕ, ಸಂಘಟನಾತ್ಮಕವಾಗಿ ಒಗ್ಗೂಡಿಸಿಕೊಂಡು ಬಂದ ನಮ್ಮೆಲ್ಲರ ಶ್ರಮಕ್ಕೆ ಸಿಕ್ಕಿದ ಯಶಸ್ಸು ಇದಾಗಿದೆ. ಮುಂದೆಯೂ ಸಂಘ ಬೆಳೆಯಬೇಕು ಮತ್ತಷ್ಟು ಬಾಂಧವರು ಸಂಘವನ್ನು ನಡೆಸುವ ಬೆಳೆಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಸಂಘದ ಪ್ರೌಢಾವಸ್ಥೆಯ ಈ ಕಾಲಘಟ್ಟದ ಸಂಭ್ರಮದಲ್ಲಿ ಹದಿನಾಲ್ಕನೇ ವಾರ್ಷಿಕೋತ್ಸವಕ್ಕೆ ಕಾಲಿಟ್ಟಿದ್ದೇವೆ. ಇದು ನಮ್ಮ ಮನೆಯ ಕಾರ್ಯಕ್ರಮ. ಎಲ್ಲರೂ ಒಂದಾಗಿ ಶಿಸ್ತು ಬದ್ದವಾಗಿ ಸಮಾರಂಭ ನಡೆಸುವ ಜವಾಬ್ದಾರಿ ಎಲ್ಲರಿಗೂ ಇದೆ. ಸಮಾಜ ಬಾಂಧವರನ್ನು ಒಗ್ಗೂಡಿಕೊಂಡು ಸರ್ವರ ಸಹಕಾರದಿಂದ ಈ ವಾರ್ಷಿಕೋತ್ಸವವನ್ನು ಸ್ಮರಣೀಯವಾಗಿಸುವ. ತಮ್ಮೆಲ್ಲರ ಸಹಕಾರದಿಂದ ಇದು ಸಾಧ್ಯ ಎಂದು ಪುಣೆ ಬಂಟ್ಸ್ ಅಸೋಸಿಯೇಷನ್ ಅಧ್ಯಕ್ಷರಾದ ರೋಹಿತ್ ಶೆಟ್ಟಿಯವರು ತಿಳಿಸಿದರು. ಪುಣೆ ಬಂಟ್ಸ್…

Read More

ಅವಿಭಜಿತ ದಕ್ಷಿಣ ಕನ್ನಡ, ಕರ್ನಾಟಕದಲ್ಲೇ ಎಲ್ಲೂ ಇಲ್ಲದ ನಮ್ಮ ಕಾಪು ಮಾರಿಯಮ್ಮ ದೇವಾಲಯ ನಿರ್ಮಾಣ ಮಾಡುವ ಭಾಗ್ಯ ನಮಗೆ ಒದಗಿ ಬಂತು. ಸಿಕ್ಕಿದ ಭಾಗ್ಯ ಎಂದು ತಿಳಿದು ಕಾಪು ಅಮ್ಮನ ಪ್ರೇರಣೆಯಂತೆ ನಡೆದಿದ್ದೇವೆ. ಕಾಪು ಮಾರಿಯಮ್ಮನ ಸೇವೆಯಲ್ಲಿ ಪುಣೆಯ ಬಹಳಷ್ಟು ದಾನಿಗಳ ಪಾತ್ರವಿದೆ. ಪವಾಡ ಕ್ಷೇತ್ರ ಕಾಪು ಮಾರಿಯಮ್ಮನ ಅನುಗ್ರಹ ತಮಗೆಲ್ಲರಿಗೂ ಸದಾ ಇರಲಿ. ನಾವು ಧಾರ್ಮಿಕ, ಸಾಮಾಜಿಕ ಕ್ಷೇತ್ರದಲ್ಲಿ ಸೇವೆಯಲ್ಲಿ ಇದ್ದೇವೆ. ಆದರೆ ಧಾರ್ಮಿಕ ಕ್ಷೇತ್ರದಲ್ಲಿ ಸೇವೆ ಮಾಡುವಾಗ ಧಾರ್ಮಿಕ ವಿಚಾರಗಳಿಗೆ ಮಾತ್ರ ಒತ್ತು ನೀಡುತ್ತೇವೆ. ಅದೇ ರೀತಿ ಸಮಾಜದ, ಸಂಘದ ಕಾರ್ಯದಲ್ಲಿ ಸಮಾಜಮುಖಿ ಕಾರ್ಯಗಳಿಗೆ ಒತ್ತು ನೀಡಿ ನಡೆಯುತ್ತೇವೆ. ಇದೇ ನಮ್ಮ ಧರ್ಮವಾಗಿದೆ. 51 ವರ್ಷಗಳ ಹಿಂದೆ ಸ್ಥಾಪನೆ ಮಾಡಿದ ಪುಣೆ ಬಂಟರ ಸಂಘದ ಸ್ಥಾಪಕರಲ್ಲಿ ಸಮಾಜದ ಮೇಲಿನ ಪ್ರೀತಿ, ಭಕ್ತಿ ಭಾವ, ಸಮಾಜ ಅಭಿವೃದ್ದಿ ಹೊಂದಬೇಕು ಎಂಬ ತುಡಿತ ಇತ್ತು. ಅದ್ದರಿಂದ ಸಂಘ ಸ್ಥಾಪನೆ ಆಗಿದೆ. ಅದೇ ರೀತಿ ಸ್ಥಾಪನೆಯಾದ ಸಂಘವನ್ನು ಉತ್ತರೋತ್ತರ ಅಭಿವೃದ್ದಿ ಪಥದಲ್ಲಿ ನಡೆಸಿಕೊಂಡು…

Read More

ಯಾವುದೇ ಕಲಾ ಪ್ರಕಾರವಿರಲಿ, ಅಲ್ಲಿ ಮೂಲ ನಂಬಿಕೆಗಳಿಗೆ ಧಕ್ಕೆಯಾಗಬಾರದು. ಸಿನಿಮಾ, ನಾಟಕ, ಯಕ್ಷಗಾನ ಅಥವಾ ಜನರನ್ನು ತಲುಪುವ ಯಾವುದೇ ಮಾಧ್ಯಮಗಳಲ್ಲಿ ಯಾವುದೇ ಮೂಲ ನಂಬಿಕೆಗಳನ್ನು ಸಮಾಜಕ್ಕೆ ತಲುಪಿಸುವ ಹಾದಿಯಲ್ಲಿ ಕೊಂಚ ಎಡವಟ್ಟಾದರೂ ಪರ-ವಿರೋಧದ ಚರ್ಚೆಗಳ ಜೊತೆಗೆ ಆಕ್ರೋಶ, ಅಸಮಾಧಾನ ಹಾಗೂ ಅಪಸ್ವರಗಳಿಗೆ ತುತ್ತಾಗಬೇಕಾಗುತ್ತದೆ. ಕೆಲವರಿಗೆ ನಂಬಿಕೆಗಳು ಗಟ್ಟಿಯಾದ ಅನುಭವವಾದರೆ ಮತ್ತೆ ಕೆಲವರಿಗೆ ನಂಬಿಕೆಗೆ ಧಕ್ಕೆಯಾದ ಅನುಭವ. ಇದು ಸಹಜವಾಗಿಯೇ ಸಮಾಜದಲ್ಲಿ ಸಂಘರ್ಷದ ಸನ್ನಿವೇಶ ಸೃಷ್ಟಿಸುತ್ತದೆ. ದೈವಾರಾಧನೆಯನ್ನೇ ಮುಂದಿಟ್ಟುಕೊಂಡು ಬಂದ ಇತ್ತೀಚಿನ ಕೆಲ ಸಿನಿಮಾಗಳು ಕಮರ್ಷಿಯಲ್ ಹಿಟ್ ಅನಿಸಿಕೊಂಡಿದ್ದರ ಜೊತೆಗೆ ಸೃಷ್ಟಿಸಿದ ಅನಾಹುತಗಳು ಕೂಡಾ ಅಷ್ಟೇ ದೊಡ್ಡದು.‌ ಇದೇ ಕಾರಣಕ್ಕೆ ದೈವಾರಾಧನೆಯನ್ನೇ ಕಥಾ ವಸ್ತುವಾಗಿ ಇಟ್ಟುಕೊಂಡು ಬರೋ ಸಿನಿಮಾಗಳ ಗೆಲುವು ಕೂಡ ಈ ಮಣ್ಣಿನ ಅಸ್ಮಿತೆಯಂತಿರೋ ದೈವ ನಂಬಿಕೆಗೆ ಭಾರೀ ಅಪಾಯ ತಂದೊಡ್ಡಬಹುದು ಅನ್ನೋ ಆತಂಕವಿದೆ‌‌. ಆದರೆ ತುಳು ಸಿನಿಮಾ ರಂಗದಲ್ಲಿ ಇತ್ತೀಚೆಗಷ್ಟೇ ತೆರೆಗೆ ಬಂದ ಸ್ವರಾಜ್ ಶೆಟ್ಟಿ, ಜೆ.ಪಿ ತೂಮಿನಾಡು, ಕೆ ಎಸ್ ಲಂಚುಲಾಲ್ ಅಭಿನಯದ ‘ಕಟ್ಟೆಮಾರ್’ ಎನ್ನುವ ಸಿನಿಮಾ ಈ…

Read More

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಆಯೋಜಿಸಲಾದ ರಾಷ್ಟ್ರ ನಿರ್ಮಾಣಕ್ಕಾಗಿ ನಾಯಕತ್ವ ಶಿಬಿರವನ್ನು ವಿದ್ಯಾಗಿರಿಯ ಕೃಷಿಸಿರಿ ವೇದಿಕೆಯಲ್ಲಿ ಉದ್ಘಾಟಿಸಲಾಯಿತು. ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ರಾಷ್ಟ್ರ ನಿರ್ಮಾಣದಲ್ಲಿ ಯುವಶಕ್ತಿಯ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಸಂವಿಧಾನದ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು. ಇಂದು ವಿಷಯಗಳನ್ನು ನೋಡುವ ದೃಷ್ಟಿಕೋನದಲ್ಲೇ ದೊಡ್ಡ ಬದಲಾವಣೆ ಕಂಡು ಬರುತ್ತಿದೆ. ಆ ಬದಲಾವಣೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯ ಪಾತ್ರ ಅಪಾರವಾಗಿದೆ. ರಾಷ್ಟ್ರ ನಿರ್ಮಾಣದ ದೃಷ್ಟಿಯಿಂದ ಆಯೋಜಿಸಿರುವ ಈ ನಾಯಕತ್ವ ಶಿಬಿರ ಅತ್ಯಂತ ಅರ್ಥಪೂರ್ಣವಾಗಿದೆ ಎಂದರು. ಸುಮಾರು 25 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಒಳಗೊಂಡ ಆಳ್ವಾಸ್ ಶಿಕ್ಷಣ ಸಂಸ್ಥೆ, ದೇಶದ ವಿವಿಧ ಭಾಷೆ, ಸಂಸ್ಕೃತಿ, ಆಚಾರ ವಿಚಾರಗಳನ್ನು ಪ್ರತಿನಿಧಿಸುವ ಮಕ್ಕಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸಿ ರಾಷ್ಟ್ರೀಯತೆ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುತ್ತಿರುವುದು ಶ್ಲಾಘನೀಯ ಕಾರ್ಯವೆಂದು ಪ್ರಶಂಸಿಸಿದರು. ಈ ನಿಟ್ಟಿನಲ್ಲಿ ಡಾ. ಮೋಹನ್ ಆಳ್ವ ಅವರ ಸೇವೆಗೆ ಅಭಿನಂದನೆ ಸಲ್ಲಿಸಿದರು. ನಾಯಕತ್ವವು…

Read More

ನವಿ ಮುಂಬಯಿ ಜೂಯಿ ನಗರದಲ್ಲಿರುವ ಬಂಟ್ಸ್ ಸೆಂಟರಿನಲ್ಲಿ ಬಾಂಬೆ ಬಂಟ್ಸ್ ಅಸೋಸಿಯೇಷನ್ ನ ಆಡಳಿತದೊಂದಿಗೆ ನಡೆಸಿಕೊಂಡು ಬರುತ್ತಿರುವ ‘ಬಂಟ್ಸ್ ಉನ್ನತ ಶಿಕ್ಷಣ’ ಹಗಲು ಮತ್ತು ರಾತ್ರಿ ಕಾಲೇಜಿನ ವತಿಯಿಂದ ನಡೆದ 77ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಮತ್ತು ಆಟೋಟ ಸ್ಪರ್ಧೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣಾ ಕಾರ್ಯಕ್ರಮವನ್ನು ಜನವರಿ 26 ಸೋಮವಾರದಂದು ಬೆಳಿಗ್ಗೆ 9.30 ಗಂಟೆಗೆ ಸರಿಯಾಗಿ ಕಾಲೇಜು ಕಟ್ಟಡದ ಮುಂಭಾಗದ ಸಭಾಂಗಣದಲ್ಲಿ ಅತ್ಯಂತ ಸಡಗರ, ಶಿಸ್ತು ಹಾಗೂ ರಾಷ್ಟೃಭಕ್ತಿಯಿಂದ ಆಚರಿಸಲಾಯಿತು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಬಾಂಬೆ ಬಂಟ್ಸ್ ಅಸೋಸಿಯೇಷನ್ ಅಧ್ಯಕ್ಷ ನ್ಯಾಯವಾದಿ ಡಿ.ಕೆ ಶೆಟ್ಟಿಯವರು ಧ್ವಜ ಅನಾವರಣಗೈದು ಕಾರ್ಯಕ್ರಮಕ್ಕೆ ಚಾಲನೆ ನೀಡಿದರೆ, ಸಮಾರಂಭದಲ್ಲಿ ಹಗಲು ಹಾಗೂ ರಾತ್ರಿ ಕಾಲೇಜುಗಳ ಪ್ರಾಂಶುಪಾಲರಾದ ಡಾ| ರಶ್ಮಿ ಚಿತ್ಲಾಂಗೆ, ಡಾ| ಎಸ್‌.ಎಸ್ ಭಂಡಾರಿ ಮತ್ತು ಉಪಾಧ್ಯಕ್ಷ ಐಕಳ ಕಿಶೋರ್ ಶೆಟ್ಟಿ, ಗೌ. ಕಾರ್ಯದರ್ಶಿ ನ್ಯಾ. ಶೇಖರ ರಾಜು ಶೆಟ್ಟಿ, ಗೌ. ಕೋಶಾಧಿಕಾರಿ ಸಿಎ ವಿಶ್ವನಾಥ ಶೆಟ್ಟಿ, ಉನ್ನತ ಶಿಕ್ಷಣ ಸಮಿತಿ ಕಾರ್ಯಾಧ್ಯಕ್ಷ ನ್ಯಾ. ರತ್ನಾಕರ…

Read More

ಸ್ವಾಮಿ ವಿವೇಕಾನಂದರು ಭಾರತೀಯ ಸಂಸ್ಕೃತಿ ಮತ್ತು ಸಂಸ್ಕಾರದ ಮಹಾನ್ ರಾಯಭಾರಿಯಾಗಿದ್ದರು. ಅವರ ತತ್ವ ಆದರ್ಶಗಳ ಬೆಳಕಿನಲ್ಲಿ ಮಕ್ಕಳು, ಯುವಜನರನ್ನು ಬೆಳೆಸಿ ಭಾರತೀಯ ಧರ್ಮ ಸಂಸ್ಕೃತಿ ಉಳಿಸಬೇಕಾಗಿದೆ ಎಂದು ಕರಿಂಜೆ ಶ್ರೀ ಜಗದ್ಗುರು ರಾಘವೇಂದ್ರ ಪೀಠದ ಶ್ರೀ ಮುಕ್ತಾನಂದ ಸ್ವಾಮೀಜಿ ನುಡಿದರು. ಕಿನ್ನಿಗೋಳಿ ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆಯ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ 163ನೇ ಜಯಂತೋತ್ಸವದ ಅಂಗವಾಗಿ ಅಳಿಯೂರು ಶ್ರೀ ಶನೈಶ್ವರ ದೇವಸ್ಥಾನದ ಮುಂಭಾಗದಲ್ಲಿ ನಡೆದ ವಿವೇಕ ಕಾಯಕ ರತ್ನ ಪ್ರಶಸ್ತಿ ಪ್ರಧಾನ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಆಶೀರ್ವಚನವಿತ್ತರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ ಮೋಹನ ಆಳ್ವ ಕಾರ್ಯಕ್ರಮ ಉದ್ಘಾಟಿಸಿದರು. ಸ್ವಾಮಿ ವಿವೇಕಾನಂದರ ಜೀವನವೇ ತಪಸ್ಸಾಗಿತ್ತು. ಶಿಕ್ಷಣ, ಕೃಷಿ, ಕಲೆ ಯಾವುದೇ ಕ್ಷೇತ್ರವಾಗಲಿ ಸಂಪೂರ್ಣ ಶ್ರದ್ಧೆಯೊಂದಿಗೆ ಮಾಡಿದ ಕೆಲಸವೇ ತಪಸ್ಸು. 54 ಕೋಟಿ ಯುವ ಜನರಿರುವ ಈ ದೇಶದಲ್ಲಿ ವಿಶೇಷವಾಗಿ ಗ್ರಾಮೀಣ ಪ್ರದೇಶದ ಯುವಕರು ಊರು ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದರು. ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆಯ ಅಧ್ಯಕ್ಷ ಡಾ|…

Read More

ಯುವಜನತೆ ಸಂವಿಧಾನದಲ್ಲಿ ಅಳವಡಿಸಿರುವ ಜವಾಬ್ದಾರಿಗಳನ್ನು ಅರಿತುಕೊಂಡು ಸದೃಢ ದೇಶ ಕಟ್ಟುವಲ್ಲಿ ಶ್ರಮಿಸಬೇಕು ಎಂದು ಸುಜ್ಞಾನ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷ ಡಾ| ರಮೇಶ್ ಶೆಟ್ಟಿ ಹೇಳಿದರು. ಸುಜ್ಞಾನ ಎಜುಕೇಶನಲ್ ಟ್ರಸ್ಟ್ ನಲ್ಲಿ 77ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ವಿಶ್ವಕ್ಕೆ ಸದ್ವಿಚಾರ, ಸಂಸ್ಕೃತಿ, ಸಂಸ್ಕಾರ ಸೇರಿದಂತೆ ಶ್ರೇಷ್ಠ ಮೌಲ್ಯಗಳನ್ನು ನೀಡಿರುವ ದೇಶ ನಮ್ಮದು. ಈ ಹಿರಿಮೆಯನ್ನು ಅರಿತು ನಾವೆಲ್ಲರೂ ಜಾತಿ, ಮತ, ಪ್ರಾಂತ್ಯದಂತಹ ಸಂಕುಚಿತ ಭಾವನೆಗಳನ್ನು ಮೀರಿ ದೇಶದ ಅಭಿವೃದ್ಧಿಗೆ ಹಾಗೂ ಉತ್ತಮ ಭವಿಷ್ಯಕ್ಕೆ ಕೊಡುಗೆ ನೀಡಬೇಕು ಎಂದರು. ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾದ ವಿನಯ್ ಕುಮಾರ್ ನಿರೂಪಿಸಿದರು. ಪ್ರಾಂಶುಪಾಲರಾದ ರಂಜನ್ ಬಿ.ಶೆಟ್ಟಿ, ಮುಖ್ಯೋಪಾಧ್ಯಾಯರಾದ ಪ್ರದೀಪ್ ಕುಮಾರ್ ಹಾಗೂ ಕಾಲೇಜಿನ ಭೋದಕ, ಭೋದಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

Read More

ಕನ್ನಡ ರಿಯಾಲಿಟಿ ಕಾರ್ಯಕ್ರಮ ಬಿಗ್ ಬಾಸ್ ನ ರನ್ನರ್ ಅಪ್ ಆಗಿರುವ ಪಡುಬಿದ್ರಿಯ ರಕ್ಷಿತಾ ಶೆಟ್ಟಿ ಅವರಿಗೆ ಪಡುಬಿದ್ರಿ ಬಂಟರ ಸಂಘದ ವತಿಯಿಂದ ಸನ್ಮಾನ ಸಮಾರಂಭವು ಸಂಘದ ಸಭಾಭವನದಲ್ಲಿ ಜರಗಿತು. ಪಡುಬಿದ್ರಿ ಬಂಟರ ಸಂಘದ ಅಧ್ಯಕ್ಷ ಡಾ| ದೇವಿಪ್ರಸಾದ್ ಶೆಟ್ಟಿ, ಮಾಜಿ ಅಧ್ಯಕ್ಷ ನವೀನ್ ಚಂದ್ರ ಜೆ. ಶೆಟ್ಟಿ ಬಂಟ್ಸ್ ವೆಲ್ಫೇರ್ ಟ್ರಸ್ಟ್ ನ ಅಧ್ಯಕ್ಷ ಡಾ. ವೈ ಎನ್ ಶೆಟ್ಟಿ ಅಭಿನಂದನಾ ಭಾಷಣಗೈದರು. ರಕ್ಷಿತಾ ಶೆಟ್ಟಿ ಬಿಗ್ ಬಾಸ್ ಮನೆಯಲ್ಲಿನ ತನ್ನ ನೆನಪುಗಳನ್ನು ಮೆಲುಕು ಹಾಕಿ, ಪದ್ಯವನ್ನೂ ಹಾಡಿ ಜನರನ್ನು ರಂಜಿಸಿದರು. ಈ ಸಂದರ್ಭ ಪಡುಬಿದ್ರಿ ಬಂಟರ ಸಂಘದ ಉಪಾಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಪಲ್ಲವಿ, ಸಿರಿಮುಡಿ ದತ್ತಿನಿಧಿಯ ಅಧ್ಯಕ್ಷ ಸಾಂತೂರು ಭಾಸ್ಕರ ಶೆಟ್ಟಿ, ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಶೆಟ್ಟಿ ಪಡುಹಿತ್ಲು, ಕೋಶಾಧಿಕಾರಿ ರವಿ ಶೆಟ್ಟಿ ಗುಂಡ್ಲಾಡಿ, ಯುವ ಬಂಟರ ಸಂಘದ ಅಧ್ಯಕ್ಷ ಸುಜಿತ್ ಶೆಟ್ಟಿ, ಸಂಘದ ಮಹಿಳಾ ಘಟಕದ ಉಪಾಧ್ಯಕ್ಷೆ ಶಾಲಿನಿ ಶೆಟ್ಟಿ, ಬಂಟ್ಸ್ ವೆಲ್ಫೇರ್…

Read More

ಬಂಟ್ಸ್ ಅಸೋಸಿಯೇಷನ್ ಪುಣೆ ವತಿಯಿಂದ 14ನೇ ವಾರ್ಷಿಕ ಸಮಾವೇಷವನ್ನು ಫೆಬ್ರವರಿ 6 ರಂದು ಮಧ್ಯಾಹ್ನ 2:30 ಗಂಟೆಯಿಂದ ಪುಣೆಯ ಬಾನೇರ್ ನಲ್ಲಿರುವ ಬಂಟರ ಭವನದಲ್ಲಿ ಆಯೋಜಿಸಲಾಗಿದೆ. ಅಧ್ಯಕ್ಷರಾದ ರೋಹಿತ್ ಡಿ ಶೆಟ್ಟಿ ನಗ್ರಿಗುತ್ತು ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದು, ಬೆಂಗಳೂರು ಬಂಟರ ಸಂಘದ ಅಧ್ಯಕ್ಷರಾದ ಸಿಎ ಅಶೋಕ್ ಶೆಟ್ಟಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಇದೇ ವೇಳೆ ಬಂಟ್ವಾಳ ಬಂಟರ ಸಂಘ ಹಾಗೂ ಮುಲುಂಡ್ ಬಂಟರ ಸಂಘದ ಮಾಜಿ ಅಧ್ಯಕ್ಷ ನಗ್ರಿಗುತ್ತು ವಿವೇಕ್ ಶೆಟ್ಟಿ ಹಾಗೂ ಪುಣೆ ಬಂಟರ ಸಂಘದ ಅಧ್ಯಕ್ಷರಾದ ಕೆ ಅಜಿತ್ ಹೆಗ್ಡೆ ಅವರು ಗೌರವಾನ್ವಿತ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು. ಸಂಘದ ಉಪಾಧ್ಯಕ್ಷರಾಗಿ ಡಾ. ಸುಧಾಕರ ಶೆಟ್ಟಿ ಹಾಗೂ ಸತೀಶ್ ರೈ ಕಲ್ಲಂಗಲ ಗುತ್ತು, ಗೌರವ ಕಾರ್ಯದರ್ಶಿಯಾಗಿ ದಿನೇಶ್ ಶೆಟ್ಟಿ, ಗೌರವ ಖಜಾಂಚಿಯಾಗಿ ಸಿಎ ಮನೋಹರ ಶೆಟ್ಟಿ, ಪಿ.ಆರ್.ಓ ಆಗಿ ಪ್ರದೀಪ್ ಶೆಟ್ಟಿ, ಮಹಿಳಾ ಘಟಕದ ಅಧ್ಯಕ್ಷೆಯಾಗಿ ರೇಷ್ಮಾ ಆರ್ ಶೆಟ್ಟಿ, ಕಾರ್ಯದರ್ಶಿಯಾಗಿ ಶ್ರೀಮತಿ ಶರ್ಮಿಳಾ ರೈ, ಸಾಂಸ್ಕೃತಿಕ…

Read More