Author: admin

ಸಹಕಾರಿ ಕ್ಷೇತ್ರದಲ್ಲಿ 120 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಪುತ್ತೂರಿನ ಹೆಮ್ಮೆಯ ‘ಪುತ್ತೂರು ಕೋ- ಓಪರೇಟಿವ್ ಟೌನ್ ಬ್ಯಾಂಕ್’ ತನ್ನ ಗ್ರಾಹಕರಿಗೆ ಆಧುನಿಕ ಬ್ಯಾಂಕಿಂಗ್ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಸಂಪೂರ್ಣ ಡಿಜಿಟಲೀಕರಣದತ್ತ ಮಹತ್ವದ ಹೆಜ್ಜೆ ಇಟ್ಟಿದೆ. ಇದರ ಭಾಗವಾಗಿ ಗ್ರಾಹಕರ ಖಾತೆಗೆ ನೇರವಾಗಿ ಹಣ ಪಾವತಿಸಲು ಅನುಕೂಲವಾಗುವ ಕ್ಯೂಆರ್ ಕೋಡ್ (QR Code) ಸೌಲಭ್ಯವನ್ನು ಬ್ಯಾಂಕ್‌ನ ಆಡಳಿತ ಮಂಡಳಿ ಸಭೆಯಲ್ಲಿ ಅನಾವರಣಗೊಳಿಸಲಾಯಿತು. ಬ್ಯಾಂಕ್‌ನ ಆಡಳಿತ ಮಂಡಳಿ ಸಭೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಮುಖ ಉದ್ಯಮಿ ಗ್ರಾಹಕರಿಗೆ ಕ್ಯೂಆರ್ ಕೋಡ್ ಕಾರ್ಡ್ ಮತ್ತು ಸೌಂಡ್ ಬಾಕ್ಸ್ ನೀಡಿ ಚಾಲನೆ ನೀಡಲಾಯಿತು. ಪುತ್ತೂರು ಕೋ-ಓಪರೇಟಿವ್ ಟೌನ್ ಬ್ಯಾಂಕ್ ಈಗಾಗಲೇ ಸಿಟಿಎಸ್ ಕ್ಲಿಯರಿಂಗ್ ಕ್ಷೇತ್ರಕ್ಕೆ ಕಾಲಿಟ್ಟಿದ್ದು, ಇನ್‌ವರ್ಡ್ ಮತ್ತು ಔಟ್‌ವರ್ಡ್ ತ್ವರಿತ ಕ್ಲಿಯರಿಂಗ್ ವ್ಯವಸ್ಥೆ ಜಾರಿಯಲ್ಲಿದೆ. ನೇರ ಹಣ ವರ್ಗಾವಣೆಗಾಗಿ ಆರ್‌ಟಿಜಿಎಸ್ ಮತ್ತು ಎನ್‌ಇಎಫ್‌ಟಿ ವ್ಯವಸ್ಥೆ, ಬ್ಯಾಂಕ್ ಐಎಫ್‌ಎಸ್‌ಸಿ ಕೋಡ್ ಹಾಗೂ ಮೊಬೈಲ್ ಬ್ಯಾಂಕಿಂಗ್ ಆಪ್ ಕೂಡ ಬಿಡುಗಡೆಯಾಗಿದೆ. ಇದೀಗ ವ್ಯಾಪಾರಸ್ಥರಿಗೆ ಅನುಕೂಲವಾಗುವಂತೆ ಕ್ಯೂಆರ್ ಕೋಡ್ ಸೌಲಭ್ಯವನ್ನು…

Read More

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಹೇರಂಜಾಲು ಶ್ರೀ ಗುಡೇ ಮಹಾಲಿಂಗೇಶ್ವರ ದೇವಸ್ಥಾನದ ಪವಿತ್ರ ಸನ್ನಿಧಿಯಲ್ಲಿ ನೂತನ ರಾಜಗೋಪುರ ಸಮರ್ಪಣೆ ಹಾಗೂ ಅತಿರುದ್ರ ಮಹಾಯಾಗ ನಡೆಯಿತು. ಪುಣ್ಯ ಮುಹೂರ್ತದ ಕಾರ್ಯಕ್ರಮದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮುಖ್ಯ ಅತಿಥಿಯಾಗಿ ಭಾಗವಹಿಸಿ, ದೇವಳದ ಧ್ವಜಸ್ಥಂಭವನ್ನು ಉದ್ಘಾಟಿಸಿದರು. ಈ ವೇಳೆ ಡಾ| ಮಲ್ಲಿಕಾರ್ಜುನ ಮಹಾಸ್ವಾಮಿಗಳು, ಶಾಸಕರಾದ ಬಾಲಚಂದ್ರ ಜಾರಕಿಹೊಳಿ, ಮಾಜಿ ಸಚಿವ ಜಯಪ್ರಕಾಶ್‌ ಹೆಗ್ಡೆ, ಮಾಜಿ ಶಾಸಕರಾದ ಗೋಪಾಲ ಪೂಜಾರಿ, ಉದ್ಯಮಿ ಜಯಶೀಲ ಶೆಟ್ಟಿ, ಪದ್ಮನಾಭ, ಜಿಲ್ಲಾಧಿಕಾರಿಗಳಾದ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್‌ ಸಿಇಒ ಪ್ರತೀಕ್‌ ಬಾಯಲ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹರಿರಾಮ್‌ ಶಂಕರ್‌, ಮುಖಂಡರಾದ ಕಿಶೋರ್‌ ಕುಮಾರ್‌ ಹೆಗ್ಡೆ, ವಿಜಯ್‌ ಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Read More

ಕಳೆದ ಮೂರು ವರ್ಷಗಳಿಂದ ಆಳ್ವಾಸ್ ಆನಂದಮಯ ಆರೋಗ್ಯಧಾಮ ಆಯೋಜಿಸಿಕೊಂಡು ಬರುತ್ತಿರುವ ಬೇಸಿಗೆ ಶಿಬಿರ ‘ಚಿಣ್ಣರ ಆರೋಗ್ಯ’ ಏಪ್ರಿಲ್ 01 ರಿಂದ 07 ರವರೆಗೆ ಮಿಜಾರಿನ ಶೋಭಾವನ ಆವರಣದಲ್ಲಿರುವ ಆನಂದಮಯ ಆರೋಗ್ಯಧಾಮದಲ್ಲಿ ನಡೆಯಲಿದೆ. ಈ ಶಿಬಿರವು ಪ್ರಕೃತಿ ಚಿಕಿತ್ಸೆಯ ತತ್ವಗಳು ಮತ್ತು ಆರೋಗ್ಯಕರ ಜೀವನಶೈಲಿಯ ಮೂಲಕ ಮಕ್ಕಳ ಮನಸ್ಸು ಮತ್ತು ದೇಹವನ್ನು ಪೋಷಿಸುವಂತೆ ವಿನ್ಯಾಸಗೊಳಿಸಲಾಗಿದೆ. ಮಕ್ಕಳು ಸರಳ ಮತ್ತು ನೈಸರ್ಗಿಕ ಚಿಕಿತ್ಸೆಗಳ ಬಗ್ಗೆ ಅನುಭವಾತ್ಮಕವಾಗಿ ಕಲಿಯುವ ಜೊತೆಗೆ ವಿವಿಧ ಮನೋರಂಜನಾತ್ಮಕ ಚಟುವಟಿಕೆಗಳು ಸದಾ ಮಕ್ಕಳನ್ನು ಚುರುಕಾಗಿಯೂ, ಕುತೂಹಲದಿಂದ ಕೂಡಿರುವಂತೆ ಮಾಡುತ್ತದೆ. ಭಾಗವಹಿಸುವವರಿಗೆ ಪೌಷ್ಟಿಕಾಂಶಯುಕ್ತ ಊಟ, ಆರೋಗ್ಯಕರ ತಿಂಡಿ ತಿನಿಸುಗಳು ಮತ್ತು ನೈಸರ್ಗಿಕ ಪಾನೀಯಗಳನ್ನು ಒದಗಿಸಲಾಗುತ್ತದೆ. ಶಿಬಿರದಲ್ಲಿ ಯೋಗಾಭ್ಯಾಸ, ಪ್ರಾಣಿ ಪಕ್ಷಿಗಳ ಆಸನಗಳು, ಸೂರ್ಯ ನಮಸ್ಕಾರ, ಸ್ಮರಣಶಕ್ತಿ ವೃದ್ಧಿಗೆ ಮೆಮೊರಿ ಗೇಮ್ಸ್, ಏಕಾಗ್ರತೆ ಹೆಚ್ಚಿಸಲು ಪ್ರಾಣಾಯಾಮ, ಉಸಿರಾಟ ವ್ಯಾಯಾಮಗಳು ಸೇರಿದಂತೆ ಹಲವಾರು ಚಟುವಟಿಕೆಗಳನ್ನು ಮಾಡಿಸಲಾಗುತ್ತದೆ. ಜೊತೆಗೆ ಕಲೆ, ಕರಕುಶಲ ಕಲೆ, ನೃತ್ಯ, ಸಂಗೀತ ಮತ್ತು ಚಿತ್ರಕಲೆ ಚಟುವಟಿಕೆಗಳ ಮೂಲಕ ಮಕ್ಕಳ ಸೃಜನಶೀಲತೆಯನ್ನು ಉತ್ತೇಜಿಸಲಾಗುತ್ತದೆ. ಆರೋಗ್ಯಕರ…

Read More

ಬ್ರಹ್ಮಾವರ ಜಿ.ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್‌ನಲ್ಲಿ ಯು.ಕೆ.ಜಿ ವಿದ್ಯಾರ್ಥಿಗಳಿಗೆ ಘಟಿಕೋತ್ಸವ ಸಮಾರಂಭವನ್ನು ಆಯೋಜಿಸಲಾಯಿತು. ಮುಖ್ಯ ಅತಿಥಿಯಾಗಿ ಉಡುಪಿಯ ಡಾ. ಎ.ವಿ ಬಾಳಿಗಾ ಮೆಮೋರಿಯಲ್ ಆಸ್ಪತ್ರೆಯ ಕೌನ್ಸಿಲರ್ ಮತ್ತು ಕಛೇರಿಯ ಆಡಳಿತಾಧಿಕಾರಿಯಾದ ಶ್ರೀಮತಿ ಸೌಜನ್ಯ ಶೆಟ್ಟಿಯವರು ಆಗಮಿಸಿದ್ದರು. ಅವರು ಮಾತನಾಡಿ, ತೇವ ಮಣ್ಣಿನಿಂದ ವಿವಿಧ ಆಕಾರಗಳನ್ನು ಮಾಡಬಹುದು, ಬಿಳಿ ಕಾಗದದಿಂದ ವಿಮಾನ, ಹೂವು ಇತ್ಯಾದಿಗಳನ್ನು ತಯಾರಿಸಬಹುದು. ಮಕ್ಕಳು ಚಿಕ್ಕ ವಯಸ್ಸಿನಲ್ಲಿ ಪೋಷಕರಿಂದ ಕಲಿಯುತ್ತಾರೆ. ಬೆಳೆದಂತೆ ಪೋಷಕರನ್ನು ಅನುಸರಿಸುತ್ತಾರೆ. ಪೋಷಕರು ಮಕ್ಕಳೊಂದಿಗೆ ಒಳ್ಳೆಯ ಸಂಬಂಧವನ್ನು ಕಾಪಾಡಿಕೊಳ್ಳಬೇಕೆಂದು ತಿಳಿಸಿ ಘಟಿಕೋತ್ಸವದ ವಿದ್ಯಾರ್ಥಿಗಳಿಗೆ ಅಭಿನಂದನೆ ತಿಳಿಸಿದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ ಎಲ್ಲಾ ಮಕ್ಕಳ ಭವಿಷ್ಯಕ್ಕೆ ಶುಭ ಹಾರೈಸಿ ಮಾತನಾಡಿ, ಮಕ್ಕಳಿಗೆ ಶಿಕ್ಷಣ ನೀಡಲು ನಮ್ಮ ಮೇಲೆ ವಿಶ್ವಾಸವಿಟ್ಟ ಪೋಷಕರಿಗೆ ಧನ್ಯವಾದ ಸಲ್ಲಿಸಿದರು. ನಾವು ಸದಾ ಮಕ್ಕಳನ್ನು ಹೆಚ್ಚು ಹೆಚ್ಚು ಚಟುವಟಿಕೆಗಳಲ್ಲಿ ಭಾಗವಹಿಸಲು ಉತ್ತೇಜಿಸುತ್ತೇವೆ. ನಾವು ಮಕ್ಕಳನ್ನು ಪ್ರೋತ್ಸಾಹಿಸಿದರೆ, ಮಕ್ಕಳಲ್ಲಿ ಆತ್ಮವಿಶ್ವಾಸ ಬೆಳೆಯುತ್ತದೆ. ಮಕ್ಕಳನ್ನು ಪ್ರೇರೇಪಿಸಿದ ಶಿಕ್ಷಕ ವೃಂದದವರಿಗೆ ಧನ್ಯವಾದ ಸಲ್ಲಿಸಿದರು. ಸಂಸ್ಥೆಯ ಪ್ರಾಂಶುಪಾಲರಾದ…

Read More

ತೃತೀಯ ವರ್ಷದ ಮೂಳೂರು ಅಡ್ಡೂರು ಜೋಡುಕರೆ ಗುರುಪುರ ಕಂಬಳಕ್ಕೆ ಶುಭ ಮುಹೂರ್ತ ನಿಗದಿಯಾಗಿದ್ದು ಕೆಸರಿನ ಗಮ್ಮತ್ತಿಗೆ ದಿನಗಣನೆ ಆರಂಭವಾಗಿದೆ. ಏಪ್ರಿಲ್ 4 ರಂದು ಕಂಬಳೋತ್ಸವ ಭರ್ಜರಿಯಾಗಿ ನಡೆಯಲಿದ್ದು, ಅದರ ಆಹ್ವಾನ ಪತ್ರಿಕೆಯನ್ನು ಮಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಬಿಡುಗಡೆ ಮಾಡಿದೆ. ಈ ಸಂದರ್ಭದಲ್ಲಿ ಗುರುಪುರ ಕಂಬಳದ ರೂವಾರಿ ಇನಾಯತ್ ಆಲಿ, ಕಂಬಳ ಸಮಿತಿಯ ಗೌರವಾಧ್ಯಕ್ಷ ಪದ್ಮನಾಭ ಕೋಟ್ಯಾನ್, ಸ್ಥಾಪಕಾಧ್ಯಕ್ಷ ರಾಜ್ ಕುಮಾರ್ ಶೆಟ್ಟಿ, ಕಾರ್ಯಾಧ್ಯಕ್ಷ ಜಗದೀಶ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಯಶವಂತ್ ಕುಮಾರ್ ಶೆಟ್ಟಿ, ವಿನಯ್ ಕುಮಾರ್ ಶೆಟ್ಟಿ, ಗಿರೀಶ್ ಆಳ್ವ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

Read More

ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ಪತ್ರಕರ್ತ, ಸಾಹಿತಿ ಚಿದಂಬರ ಬೈಕಂಪಾಡಿ ಅವರನ್ನು ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಪಿ.ಬಿ ಹರೀಶ್ ರೈಯವರ ಅಧ್ಯಕ್ಷತೆಯಲ್ಲಿ ಗೌರವಿಸಿದರು. ಹಿರಿಯ ಪತ್ರಕರ್ತ ಕೆ ಆನಂದ ಶೆಟ್ಟಿ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು, ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ ಬಿ.ಎನ್., ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ್ ನಾಯಕ್ ಇಂದಾಜೆ, ಪ್ರೆಸ್ ಕ್ಲಬ್ ಕಾರ್ಯಕಾರಿ ಸಮಿತಿ ಸದಸ್ಯ ಹರೀಶ್ ಮೋಟುಕಾನ, ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಉಪಾಧ್ಯಕ್ಷ ಮಹಮ್ಮದ್ ಆರಿಫ್ ಪಡುಬಿದ್ರಿಯವರು ಉಪಸ್ಥಿತರಿದ್ದರು.

Read More

ಮಹಿಳೆ ಕೇವಲ ವ್ಯಕ್ತಿತ್ವದ ಬಗ್ಗೆ ಗುರುತಿಸುವುದಕ್ಕಿಂತಲ್ಲಲೂ ಮಹಿಳೆ ಎಂಬುವುದು ಒಂದು ಜೀವನದ ಶಕ್ತಿ, ಮಹಿಳೆಯೆಂದರೆ ಮನೆ, ಪರಿಸರ, ದೇಶದ ಸಂಸ್ಕೃತಿ, ಸಂಸ್ಕಾರವನ್ನು ಉಳಿವಿನಡೆ ಕೊಂಡೊಯ್ಯುವ ಸಾಧನೆಗೆ ಪೂರಕವಾಗಿ ಬೆಳೆದು ನಿಂತ ದಿವ್ಯತೇಜ ಸ್ವರೂಪಿಣಿ. ಮಹಿಳೆಯರು ಇಂದು ತನ್ನ ದೈನಂದಿನ ಚಟುವಟಿಕೆಗಳೊಂದಿಗೆ ಸಮಾಜದಲ್ಲಿ ಬೆರೆತು ಪ್ರತೀ ವಿಷಯದಲ್ಲೂ ಪ್ರಖರತೆಯ ಬೆಳಕಿನಂತೆ ಮೂಡಿ ಬರುತ್ತಿರುವುದು ನಿಜಕ್ಕೂ ಶ್ಲಾಘನೀಯ ಎಂದು ಮೀರಾ ಭಯಂದರ್ ಜಿಲ್ಲೆಯ ಸಮಾಜ ಸೇವಕ ಹಾಗೂ ಬಿಜೆಪಿ ನೇತಾರ ಸಚ್ಚಿದಾನಂದ ಶೆಟ್ಟಿ ಮುನ್ನಲಾಯಿ ಗುತ್ತುರವರು ಅಭಿಪ್ರಾಯಪಟ್ಟರು. ಅವರು ಮಾರ್ಚ್ 22 ರಂದು ಸಂಜೆ ಮೀರಾರೋಡ್ ಪೂರ್ವದ ಭಾರತಿ ಪಾರ್ಕ್ ನ ಬಾಲಾಜಿ ಇಂಟರ್ ನ್ಯಾಶನಲ್ ಹೊಟೇಲ್ ಸಭಾಂಗಣದಲ್ಲಿ ತುಳು ಕನ್ನಡ ಅಸೋಸಿಯೇಷನ್ ಮೀರಾ ಭಯಂದರ್ ಸಂಸ್ಥೆಯ ಸಾಹಿತ್ಯ ಮತ್ತು ಕಲೆ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಿಶ್ವ ಮಹಿಳಾ ದಿನಾಚರಣೆ, ಹಳದಿ ಕುಂಕುಮ ಮತ್ತು ದಿ. ರವಿ ರಾ. ಅಂಚನ್ ದತ್ತಿ ನಿಧಿ ಸಂಸ್ಮರಣಾ ಪ್ರಶಸ್ತಿ ಪ್ರಧಾನ ಹಾಗೂ ಸನ್ಮಾನಗಳ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು…

Read More

ಸಾಲೆಗ್ ಪೋಪಿನಿ ಪಂಡ ಮುಡು ಮೂಜಿ ಬಾಲೆಗ್. ಅಕ್ಕ ಅಣ್ಣನಗೊಲ್ನೊಟ್ಟುಗು ಯಾನ್ ಲ ಸಾಲೆಗ್ ಪೋಪೆ ಪಂದ್ ಬೆರಿಯನೇ ಪೋವೊಂತಿನ ಆನ್. ಆಯನ ರಂದಾಟಿಕೆ ತೂದು ಅಪ್ಪೆಲ, ಅಜ್ಜಿಲ ಪೋವಡ್. ಸಾಲೆಗತಾ ಪಂದ್ ಕಡಪುಡೊಂದಿತ್ತೆರ್. ಐನ್ ವರ್ಸೊದಾಯೆ ಒಂಜಿನೇ ಕ್ಲಾಸ್‌ಡ್ ಕುಲ್ಲೊಂದಿತ್ತೆ. ತೋರ ಇತುಜೆಡಲ ಒಂತೆ ಉದ್ದನೇ ಇತ್ತೆ. ಒಂಜಿನೇ ಕ್ಲಾಸ್‌ದ ‘ಪಟ್ಟಿ’ಡ್ ಪಾಡ್ರೆ ಟೀಚರೆಗ್ ದಾಲ ತೊಂದ್ರೆ ತೋಜುಜಿ. ಅವ್ವೇ ಸಾಲೆಡ್ ಕಲ್ತುದು ದುಂಬು ಪೋತಿನ ಆಯನ ರಡ್ ಪಲಯಲ್ಲು ಒರ್ತಿ ಪಲಿ – ಕಲ್ಪುನೆಟ್ ಬಾರಿ ಉಸಾರ್‌ದ ಜೋಕುಲು ಪಂದ್ ಮಾತಾ ಮಾಸ್ಟ್ರುನಗಲೆಗ್ಲ ಮೋಕೆ. ಇಂಬೆ ಕಲ್ಪುನೆಟ್ ಬಡ್ಡ್ ಅತ್ತುಡ್ಲ ಒಂತೆ ಪೋಕಿರಿ ದೂಮಣ್ಣೆ.‌ ಐತ ಮಿತ್ತ್ ಟೀಚರ್‌ನಗುಲು ಆಯನ ಒಪ್ಪಪುಟಿನಗಲ್ನೊಟ್ಟುಗು ತಾರ್ಕನೆ ಮಲ್ಪರೆ ಪತಿಯೆರ್. ತುಲಾ ನಿನ್ನ ಪಲಯೆ ಆತ್ ಬಿರ್ಸೆ, ಪಲ್ದಿ ಈತ್ ಮಾರ್ಕ್ ಕನೊಂತುಲು. ಈ ದಾನಿ ಪಿರ? ಪಂದ್ ಕುಡ, ಈ ಅಗಲೆನ ಮರ್ಯಾದಿ ಕಲೆಪನಾ ಪಂದ್ ಪಾತೆರೊಡೇ ಕುಯಿಂಪರೆ ಸುರು ಮಲ್ತೆರ್.…

Read More

ಸವಣೂರು ಮುಗೇರು ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಮಾರ್ಚ್ 25 ಮತ್ತು 26ರಂದು 12ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ ಜಾತ್ರೋತ್ಸವ ಹಾಗೂ ಭಜನಾ ಸಂಭ್ರಮ (ಅರ್ಧ ಏಕಾಹ ಹಾಗೂ ಕುಣಿತ ಭಜನೆ) ನಡೆಯಲಿದೆ. ಮಾರ್ಚ್ 25ರಂದು ಬೆಳಿಗ್ಗೆ 6:30 ಕ್ಕೆ ಅರ್ಧ ಏಕಾಹ ಭಜನೆ ಪ್ರಾರಂಭ, ಬೆಳಿಗ್ಗೆ 10ಕ್ಕೆ ಊರ ಭಕ್ತಾದಿಗಳಿಂದ ಹೊರೆ ಕಾಣಿಕೆ ಸಮರ್ಪಣೆ, ಸಂಜೆ ತಂತ್ರಿಗಳ ಆಗಮನ, ವೈದಿಕ ಕಾರ್ಯಕ್ರಮ ನಡೆಯಲಿದೆ. ಸಂಜೆ 6:30 ಕ್ಕೆ ಅರ್ಧ ಏಕಾಹ ಭಜನೆ ಸಮಾರೋಪ, ಬಳಿಕ ಕುಣಿತ ಭಜನೆ ನಡೆಯಲಿದೆ. ರಾತ್ರಿ ಎಂಟರಿಂದ ಅನ್ನಸಂತರ್ಪಣೆ, ಮಾರ್ಚ್ 26ರಂದು ಬೆಳಿಗ್ಗೆ 6ರಿಂದ ಮಹಾಗಣಪತಿ ಹೋಮ, ನಾಗತಂಬಿಲ, ಕಲಶಾಭಿಷೇಕ ಸಹಿತ ವೈದಿಕ ಕಾರ್ಯಕ್ರಮ, ಮಧ್ಯಾಹ್ನ ಅನ್ನ ಸಂತರ್ಪಣೆ, ರಾತ್ರಿ ಎಂಟರಿಂದ ಶ್ರೀ ದೇವರ ಬಲಿ ಹೊರಟು ಉತ್ಸವ, ಶ್ರೀ ಭೂತ ಬಲಿ, ವಸಂತ ಕಟ್ಟೆ ಪೂಜೆ, ಸುಡುಮದ್ದು ಪ್ರದರ್ಶನ, ದರ್ಶನ ಬಲಿ, ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸಾದ, ಅನ್ನ ಸಂತರ್ಪಣೆ ನಡೆಯಲಿದೆ ಎಂದು ದೇವಾಲಯದ…

Read More

ಬಂಟರ ಸಂಘ ಬೆಳ್ಳೂರು ವಲಯದ ಮಾಜಿ ಅಧ್ಯಕ್ಷ ಕಿಶೋರ್ ಭಂಡಾರಿಯವರ ನಿಧನದ ಸುದ್ದಿ ನಿಜಕ್ಕೂ ಅತ್ಯಂತ ದುಃಖದಾಯಕ. ಬಂಟರ ಸಂಘ ಬೆಳ್ಳೂರು ವಲಯದ ಮಾಜಿ ಅಧ್ಯಕ್ಷರಾಗಿ ಅವರು ಸಲ್ಲಿಸಿದ ಸೇವೆ ಮತ್ತು ಅವರ ನಾಯಕತ್ವ ಸ್ಮರಣೀಯವಾದುದು. ಸಮಾಜದ ಏಳಿಗೆಗಾಗಿ ಶ್ರಮಿಸಿದ ಅವರ ಅಗಲಿಕೆ ಬೆಳ್ಳೂರು ವಲಯಕ್ಕೆ ಮಾತ್ರವಲ್ಲದೇ ಇಡೀ ಸಮುದಾಯಕ್ಕೆ ತುಂಬಲಾರದ ನಷ್ಟ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಮತ್ತು ಅವರ ಕುಟುಂಬದವರಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸೋಣ. ಇವರ ನಿಧನಕ್ಕೆ ಬಂಟ್ವಾಳ ಬಂಟರ ಸಂಘದ ಅಧ್ಯಕ್ಷ ಜಗನ್ನಾಥ ಚೌಟ ಬದಿಗುಡ್ಡೆ, ಮಾಜಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ರಂಗೋಲಿ, ಬಂಟರ ಸಂಘ ಬಿಸಿ ರೋಡ್ ವಲಯದ ಅಧ್ಯಕ್ಷ ಶಂಕರ ಶೆಟ್ಟಿಯವರು ಸಂತಾಪ ಸೂಚಿಸಿದ್ದಾರೆ.

Read More