Author: admin
ಓಪನ್ ವರ್ಲ್ಡ್ ಚಾಂಪಿಯನ್ ಶಿಪ್ : ಉದಯ ಶೆಟ್ಟಿ ಮಾರ್ಗದರ್ಶನದಲ್ಲಿ ಭಾರತೀಯ ಮಾಸ್ಟರ್ಸ್ ವೇಟ್ಲಿಫ್ಟಿಂಗ್ ತಂಡ ಸ್ಪರ್ಧೆ
ಭಾರತೀಯ ಮಾಸ್ಟರ್ಸ್ ವೇಟ್ಲಿಫ್ಟಿಂಗ್ ತಂಡವು ಜನವರಿ 30 ರಿಂದ ಫೆಬ್ರವರಿ 1ರವರೆಗೆ ಜರ್ಮನಿಯಲ್ಲಿ ನಡೆಯಲಿರುವ ಓಪನ್ ವರ್ಲ್ಡ್ ಚಾಂಪಿಯನ್ ಶಿಪ್ನಲ್ಲಿ ಭಾಗವಹಿಸಲಿದೆ. ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕ, ಇಂಡಿಯನ್ ಮಾಸ್ಟರ್ಸ್ ಫೆಡರೇಶನ್ನ ಅಧ್ಯಕ್ಷರು, ಮಾಜಿ ರಾಷ್ಟ್ರೀಯ ಚಾಂಪಿಯನ್, ಅಂತರರಾಷ್ಟ್ರೀಯ ರೆಫರಿ, ಶಿವ ಛತ್ರಪತಿ ಪ್ರಶಸ್ತಿ ಪುರಸ್ಕೃತರು ಮತ್ತು ಇಂಡಿಯನ್ ಮಾಸ್ಟರ್ಸ್ ಫೆಡರೇಶನ್ನ ಪ್ರಧಾನ ಕಾರ್ಯದರ್ಶಿಯಾದ ಉದಯ್ ಎಸ್ ಶೆಟ್ಟಿ ನೇತೃತ್ವದಲ್ಲಿ 12 ಸದಸ್ಯರ ಬಲಿಷ್ಠ ತಂಡವು ಚಾಂಪಿಯನ್ಶಿಪ್ನಲ್ಲಿ ಭಾರತವನ್ನು ಪ್ರತಿನಿಧಿಸಲಿದೆ. ತಂಡವು ಹೆಚ್ಚಿನ ಆತ್ಮವಿಶ್ವಾಸದಿಂದ ಚಾಂಪಿಯನ್ ಶಿಪ್ಗೆ ಪ್ರವೇಶಿಸುತ್ತಿದ್ದು, ಭಾಗವಹಿಸುವವರಲ್ಲಿ ಹೆಚ್ಚಿನವರು ಪ್ರಬಲ ಪದಕ ಸ್ಪರ್ಧಿಗಳು. ಅವರ ಸಿದ್ಧತೆ, ಅನುಭವ ಮತ್ತು ದೃಢ ಸಂಕಲ್ಪದೊಂದಿಗೆ ಭಾರತೀಯ ತಂಡವು ಬಹು ಪದಕಗಳನ್ನು ಗಳಿಸುವ ಮತ್ತು ಒಟ್ಟಾರೆ ಚಾಂಪಿಯನ್ಶಿಪ್ ಪ್ರಶಸ್ತಿಗಾಗಿ ಸ್ಪರ್ಧಿಸುವ ಭರವಸೆಯ ಅವಕಾಶವನ್ನು ಹೊಂದಿದೆ. ಜಾಗತಿಕ ವೇದಿಕೆಯಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ಉದಯ ಶೆಟ್ಟಿ ನೇತೃತ್ವದ ತಂಡಕ್ಕೆ ಸಮಸ್ತ ಬಂಟ ಸಮಾಜದ ಆಶೀರ್ವಾದವಿರಲಿ.
2002 ರಲ್ಲಿ ಕನ್ನಡ ಸಂಘ ಬಹರೈನ್ ನ ಕ್ರೀಡಾ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಹಾಗೂ ಪ್ರಸ್ತುತ ಆಸ್ಟ್ರೇಲಿಯಾದಲ್ಲಿ ನೆಲೆಸಿರುವ ಅನಂತರಾಮ್ ಶೆಟ್ಟಿ ಕೊಳ್ಕೆರೆ ಅವರು ಸಕುಟುಂಬ ಸಮೇತರಾಗಿ ಕನ್ನಡ ಭವನಕ್ಕೆ ಭೇಟಿ ನೀಡಿದರು. ಅನಂತರಾಮ್ ಶೆಟ್ಟಿ ಅವರು ಸಂಘದಲ್ಲಿ ಕಳೆದ ತಮ್ಮ ಅನುಭವಗಳನ್ನು ಸ್ಮರಿಸಿ, ಕನ್ನಡ ಭವನವನ್ನು ವೀಕ್ಷಿಸಿ ಸಂತೋಷ ವ್ಯಕ್ತಪಡಿಸಿದರು. ಕನ್ನಡ ಭವನದ ನಿರ್ಮಾಣ ಸಂದರ್ಭದಲ್ಲಿ ವೈಯಕ್ತಿಕವಾಗಿ ದೇಣಿಗೆಯನ್ನು ನೀಡಿ ಮಹತ್ವದ ಸಹಕಾರ ನೀಡಿದ್ದ ಅವರನ್ನು ಈ ಸಂದರ್ಭದಲ್ಲಿ ಸಂಘದ ವತಿಯಿಂದ ಶಾಲು, ಸ್ಮರಣಿಕೆ, ಕಾವೇರಿ ಸಂಚಿಕೆಯೊಂದಿಗೆ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಅಭ್ಯಾಗತರಾದ ಡಾ. ಬಲ್ವಿಂದರ್ ಸಿಂಗ್ ಅವರನ್ನು ಗೌರವಿಸಲಾಯಿತು. ಸಂಘದ ಅಧ್ಯಕ್ಷ ಅಜಿತ್ ಬಂಗೇರ, ನಿಕಟಪೂರ್ವ ಅಧ್ಯಕ್ಷ ಅಮರನಾಥ್ ರೈ ಹಾಗೂ ಮಾಜಿ ಅಧ್ಯಕ್ಷ ಪ್ರದೀಪ್ ಶೆಟ್ಟಿ ಅವರು ಉಪಸ್ಥಿತರಿದ್ದು, ಔಪಚಾರಿಕವಾಗಿ ಮಾತನಾಡಿದರು.
ಗಿಳಿಯಾರು ಜನಸೇವಾ ಟ್ರಸ್ಟ್ ಕಳೆದ ಕೆಲ ವರ್ಷಗಳಿಂದ ಸಾಮಾಜಿಕ, ಸಾಂಸ್ಕೃತಿಕ, ಧಾರ್ಮಿಕ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿ ಜನಾದರಣೆ ಗಳಿಸಿದವರಿಗೆ ನೀಡುವ ‘ಕೀರ್ತಿ ಕಲಶ’ ಮಹಾ ಗೌರವವನ್ನು ಈ ಬಾರಿ ಮಹಾರಾಷ್ಟ್ರದ ನಿವೃತ್ತ ಪೋಲಿಸ್ ಅಧಿಕಾರಿ ದಯಾ ನಾಯಕ್ ಅವರಿಗೆ ನೀಡಲಾಗುತ್ತದೆ ಎಂದು ಟ್ರಸ್ಟ್ ಪ್ರವರ್ತಕ ವಸಂತ್ ಗಿಳಿಯಾರ್ ತಿಳಿಸಿದ್ದಾರೆ. ವೃತ್ತಿಪರ ಹಾಗೂ ಸಾಮಾಜಿಕ ಕಾರ್ಯಗಳಲ್ಲಿ ಸಮಾಜ ಗುರುತಿಸುವ ಸಾಧನೆ ಮಾಡಿದ ಮೂವರು ಸಾಧಕರಿಗೆ ಪ್ರತಿ ವರ್ಷವೂ ನೀಡುವ ‘ಯಶೋಗಾಥೆ’ ಪುರಸ್ಕಾರವನ್ನು ಈ ಬಾರಿ ಹಿರಿಯ ತುಳು ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್, 25 ವರ್ಷಗಳಿಂದ ಸುದೀರ್ಘ ಕಲಾಸೇವೆ ಮಾಡುತ್ತಿರುವ ಯಶಸ್ವಿ ಕಲಾವೃಂದ ಹಾಗೂ ಸಾವಿರಾರು ಮಕ್ಕಳನ್ನು ಭೂವಿಗೆ ತಂದಿರುವ ಬಸ್ರೂರಿನ ಹಿರಿಯ ಸೂಲಗಿತ್ತಿ ಲಕ್ಷ್ಮಿ ಪೂಜಾರಿ ಗುಂಡಿಗೋಳಿ ಅವರಿಗೆ ನೀಡಲಾಗುತ್ತದೆ. ಬ್ರಹ್ಮಾವರದ ಗಾಂಧಿ ಮೈದಾನದಲ್ಲಿ ಫೆಬ್ರವರಿ 14 ರಂದು ಸಂಜೆ 6 ರಿಂದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ.ಮೋಹನ ಆಳ್ವ ಅವರ…
ಖ್ಯಾತ ಚುಟುಕು ಸಾಹಿತಿ, ಚುಟುಕು ಸಾಹಿತ್ಯ ಪರಿಷತ್ತು ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಹರೀಶ್ ಸುಲಾಯ ಒಡ್ಡಂಬೆಟ್ಟು ಅವರ ನೇನೋ ಕತೆಗಳ ಸಂಕಲನ ‘ಕೋಲ್ಮಿಂಚು’ ಜನವರಿ 25 ರಂದು ಭಾನುವಾರ ಕದ್ರಿ ದೇವಾಲಯದ ಅಭಿಷೇಕ ಕಲಾ ಮಂದಿರದಲ್ಲಿ ನಡೆದ ಸಾಹಿತ್ಯ ವೈಭವ 2026 ಕಾರ್ಯಕ್ರಮದಲ್ಲಿ ಬಿಡುಗಡೆಗೊಂಡಿತು. ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷರಾದ ಧರ್ಮದರ್ಶಿ ಹರಿಕೃಷ್ಣ ಪುನರೂರು ಅವರು ಈ ಕೃತಿಯನ್ನು ಲೋಕಾರ್ಪಣೆ ಮಾಡಿದರು. ಕಾರ್ಯಕ್ರಮವನ್ನು ಕರಾವಳಿ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಎಸ್ ಗಣೇಶ್ ರಾವ್ ಉದ್ಘಾಟಿಸಿದರು. ಚುಟುಕು ಸಾಹಿತ್ಯ ಪರಿಷತ್ತಿನ ಗೌರವಾಧ್ಯಕ್ಷರಾದ ಇರಾ ನೇಮು ಪೂಜಾರಿ ಮತ್ತು ಮಂಗಳೂರು ತಾಲೂಕಿನ ಅಧ್ಯಕ್ಷರಾದ ಗೋಪಾಲಕೃಷ್ಣ ಶಾಸ್ತ್ರಿಯವರು ಉಪಸ್ಥಿತರಿದ್ದರು.
ಕನ್ನಡ ಸಂಘ ಬಹರೈನ್ ವತಿಯಿಂದ ಕನ್ನಡ ಭವನದಲ್ಲಿ ಭಾರತದ 77ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ಸಂಘದ ಅಧ್ಯಕ್ಷ ಅಜಿತ್ ಬಂಗೇರ ಅವರು ರಾಷ್ಟ್ರಧ್ವಜಾರೋಹಣಗೈದು ಗೌರವ ಸಲ್ಲಿಸಿದರು. ಪ್ರಧಾನ ಕಾರ್ಯದರ್ಶಿ ರಾಮಪ್ರಸಾದ್ ಅಮ್ಮೆನಡ್ಕ ಅವರು ಬಹರೈನ್ ಧ್ವಜಾರೋಹಣ ನೆರವೇರಿಸಿದರು. ನಂತರ ರಾಷ್ಟ್ರಗೀತೆ ಹಾಡಲಾಯಿತು. ಅಧ್ಯಕ್ಷ ಅಜಿತ್ ಬಂಗೇರ ಅವರು ಗಣರಾಜ್ಯೋತ್ಸವದ ಮಹತ್ವವನ್ನು ವಿವರಿಸುವ ಸಂದೇಶ ನೀಡಿ, ಭಾರತದ ಸಂವಿಧಾನ, ಸ್ವಾತಂತ್ರ್ಯ ಮತ್ತು ಏಕತೆಯ ಮೌಲ್ಯಗಳನ್ನು ಸ್ಮರಿಸಿದರು. ಈ ಸಂದರ್ಭದಲ್ಲಿ ಸದಸ್ಯರಾದ ಸತೀಶ್ ಆಚಾರ್ಯ, ಮಲ್ಲಿಕಾರ್ಜುನ ಪಾಟೀಲ್, ಪೂರ್ಣಿಮ ಜಗದೀಶ್ ಹಾಗೂ ಈಶ್ವರ್ ಅಂಚನ್ ಅವರು ಗಣರಾಜ್ಯೋತ್ಸವದ ವಿಶೇಷತೆಯ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಪ್ರಧಾನ ಕಾರ್ಯದರ್ಶಿ ರಾಮಪ್ರಸಾದ್ ಅಮ್ಮೆನಡ್ಕ ಅವರು ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲಾ ಸದಸ್ಯರನ್ನು ಆತ್ಮೀಯವಾಗಿ ಸ್ವಾಗತಿಸಿ ಕೃತಜ್ಞತೆ ಸಲ್ಲಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಹಿರಿಯ ಸದಸ್ಯ ನಾಗೇಶ್ ನಾಯ್ಕ್ (ಉಡುಪಿ ರೆಸ್ಟೋರೆಂಟ್, ಸಲ್ಮಾಬಾದ್) ಅವರು ಉಪಹಾರವನ್ನು ಪ್ರಾಯೋಜಿಸಿ ಎಲ್ಲರಿಗೂ ಆತಿಥ್ಯ ನೀಡಿದರು. ಸದಸ್ಯ ಸಂತೋಷ್ ಆಚಾರ್ಯ ಛಾಯಾಗ್ರಾಹಕರಾಗಿ ಸಹಕರಿಸಿದರು.…
ಕ್ರೀಯಾಶೀಲ ನ್ಯಾಯಾಂಗದಿಂದ ಸದೃಢ ಪ್ರಜಾಪ್ರಭುತ್ವ ಎಂದ ಹೈಕೋರ್ಟ್ ನ್ಯಾಯಮೂರ್ತಿ ಎಚ್.ಪಿ ಸಂದೇಶ್ ಅವರು, ‘ಜಾತಿ ಮತ ಮೀರಿದ ಬಾಂಧವ್ಯ ಹಾಗೂ ಸಮಾನತೆಯೇ ದೇಶದ ಸುಭದ್ರತೆಯ ಅಡಿಪಾಯ’ ಎಂದು ಸಂದೇಶ ನೀಡಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಪುತ್ತಿಗೆ ಶ್ರೀಮತಿ ವನಜಾಕ್ಷಿ ಶ್ರೀಪತಿ ಭಟ್ ಬೃಹತ್ ವೇದಿಕೆಯಲ್ಲಿ ಸೋಮವಾರ ಹಮ್ಮಿಕೊಂಡ 77ನೇ ಗಣರಾಜ್ಯೋತ್ಸವ ಆಚರಣೆಯಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ವೈವಿಧ್ಯತೆಯಲ್ಲಿ ಏಕತೆಯೇ ದೇಶದ ಸುಭದ್ರತೆ. ಈ ಸದೃಢತೆಗೆ ನ್ಯಾಯಾಲಯದ ಕ್ರೀಯಾಶೀಲ ಪಾತ್ರ ಬಹುಮುಖ್ಯ. ಕಾನೂನು ಉಲ್ಲಂಘನೆ, ಅರಾಜಕತೆ ಮತ್ತಿತರ ಸಂದರ್ಭಗಳಲ್ಲಿ ನ್ಯಾಯಾಲಯವು ಪ್ರಜಾಪ್ರಭುತ್ವ ಚಿಂತನೆ ಮೂಲಕ ಪ್ರತೀ ನಾಗರಿಕರ ಹಕ್ಕುಗಳ ರಕ್ಷಣೆಗೆ ಬದ್ಧವಾಗಿದೆ. ಪ್ರಜಾಪ್ರಭುತ್ವದ ಕಾವಲು ನಾಯಿಯಂತೆ ನ್ಯಾಯಾಲಯ ಎಚ್ಚರದಿಂದ ಕಾರ್ಯ ನಿರ್ವಹಿಸುತ್ತದೆ ಎಂದು ವಿವರಿಸಿದರು. ಸ್ವಾತಂತ್ರ್ಯದ ಸದ್ಬಳಕೆಯಿಂದ ದೇಶದ ಅಭಿವೃದ್ಧಿ ಸಾಧ್ಯ ಎಂದ ಅವರು, ‘ಮಹಾತ್ಮ ಗಾಂಧೀಜಿ ಪ್ರತಿಪಾದಿಸಿದ ಸತ್ಯ ಮತ್ತು ಅಹಿಂಸೆ ನಮ್ಮ ಸ್ವಾತಂತ್ರ್ಯದ ಮೂಲ ಮಂತ್ರವಾಗಿದೆ. ಇದಕ್ಕೆ 1930ರಲ್ಲಿ ನಡೆದ ಉಪ್ಪಿನ ಸತ್ಯಾಗ್ರಹ ಹಾಗೂ 1942ರ ಕ್ವಿಟ್…
ಬ್ರಹ್ಮಾವರ: ಜಿ ಎಮ್ ವಿದ್ಯಾನಿಕೇತನ್ ಹಾಗೂ ಜಿ ಎಮ್ ಗ್ಲೋಬಲ್ ಸ್ಕೂಲ್ ಜಂಟಿಯಾಗಿ ೭೭ನೇ ಗಣರಾಜ್ಯೋತ್ಸವವನ್ನು ಅತ್ಯಂತ ಸಡಗರ, ಶಿಸ್ತು ಹಾಗೂ ರಾಷ್ಟ್ರಭಕ್ತಿಯಿಂದ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಪ್ರೊ. ಸುರೇಂದ್ರನಾಥ ಶೆಟ್ಟಿ, ನಿವೃತ್ತ ಪ್ರಾಧ್ಯಾಪಕರು, ರಾಜ್ಯಶಾಸ್ತ್ರ ವಿಭಾಗ ಎಂ.ಜಿ.ಎo ಕಾಲೇಜು, ಉಡುಪಿ ಇವರು ಆಗಮಿಸಿ ಧ್ವಜಾರೋಹಣವನ್ನು ನೆರವೇರಿಸಿ ವಿದ್ಯಾರ್ಥಿಗಳಲ್ಲಿ ವಿಶ್ವದ ಅತೀ ದೊಡ್ಡ ಪ್ರಜಾಪ್ರಭುತ್ವ ದೇಶ ನಮ್ಮದು ಎನ್ನುವ ಹೆಮ್ಮೆಯೊಂದಿಗೆ ನಮ್ಮ ದೇಶದ ಶ್ರೇಷ್ಟ ಸಂಸ್ಕೃತಿ, ಹಿರಿಮೆ-ಗರಿಮೆ, ಏಕತೆ, ಶ್ರೇಷ್ಟ ಮೌಲ್ಯಗಳನ್ನು ಜವಾಬ್ದಾರಿಯುತ ಪ್ರಜೆಗಳಾದ ವಿದ್ಯಾರ್ಥಿಗಳು ತಮ್ಮಲ್ಲಿ ಅಳವಡಿಸಿಕೊಂಡು ಸ್ವಾವಲಂಬಿಗಳಾಗಿ ಜೀವನವನ್ನು ನಡೆಸಬೇಕೆಂದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ ದೇಶದ ಪ್ರಜೆಗಳಾದ ನಾವು ಮೂಲಭೂತ ಜವಾಬ್ದಾರಿಗಳನ್ನು ಅರಿತುಕೊಂಡು ದೇಶದ ಅಭಿವೃದ್ಧಿಗಾಗಿ ಶ್ರಮಿಸಬೇಕೆಂದರು. ಗ್ಲೋಬಲ್ ಸ್ಕೂಲ್ನ ಪ್ರಾಂಶುಪಾಲೆಯಾದ ದೀಪ್ತಿ ಶೆಟ್ಟಿಯವರು ಗಣರಾಜ್ಯೋತ್ಸವದ ಶುಭ ಹಾರೈಸುವುದರೊಂದಿಗೆ ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕೆಂದರು. ಜಿ ಎಮ್ ವಿದ್ಯಾನಿಕೇತನ ಹಾಗೂ ಜಿ ಎಮ್ ಗ್ಲೋಬಲ್ ಸ್ಕೂಲ್ನ ವಿದ್ಯಾರ್ಥಿಗಳಿಂದ ನೃತ್ಯ, ಸಂಗೀತ, ಯಕ್ಷಗಾನ…
ನಮ್ಮ ಜೀವನ ವಿಧಾನವೇ ಸಂವಿಧಾನ. ಇದರ ಘನತೆ ಗೌರವವನ್ನು ಕಾಪಾಡಿಕೊಂಡು, ಅನುಷ್ಠಾನಗೊಳಿಸಿಕೊಂಡು ಹೋದಾಗ ಗಣರಾಜ್ಯ ದಿನಕ್ಕೆ ಅರ್ಥಬರಲು ಸಾಧ್ಯ. ಶಿಕ್ಷಣ ಕೇವಲ ಅಂಕ ಪಡೆಯುವುದಲ್ಲ. ಅದೊಂದು ಜವಾಬ್ದಾರಿ. ಉತ್ತಮ ನಾಗರಿಕನಾಗುವ ಸಂಕಲ್ಪ ತೊಟ್ಟಾಗ ನಮ್ಮ ದೇಶ ವಿಶ್ವಗುರುವಾಗಲು ಸಾಧ್ಯ ಎಂದು ಕಾರ್ಕಳ ರೋಟರಿ ಕ್ಲಬ್ಬಿನ ಅಂಗ ಸಂಸ್ಥೆ ಅನ್ಸ್ ಕಬ್ಬಿನ ಅಧ್ಯಕ್ಷೆಯಾಗಿರುವ ಶ್ರೀಮತಿ ಜಯಂತಿ ಎ ನಾಯಕ್ ಹೇಳಿದರು. ಅವರು ಕಾರ್ಕಳ ಜ್ಞಾನಸುಧಾ ಕ್ರೀಡಾಂಗಣದಲ್ಲಿ ಜರುಗಿದ ೭೭ನೇ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದರು. ಇದೇ ಸಂದರ್ಭ ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಿ.ಇ,ಒ ದಿನೇಶ್ ಎಂ ಕೊಡವೂರ್, ಪಿ ಆರ್ ಒ. ಶ್ರೀಮತಿ ಜ್ಯೋತಿ ಪದ್ಮನಾಭ ಭಂಡಿ, ಉಪಪ್ರಾಂಶುಪಾಲ ಶ್ರೀ ಸಾಹಿತ್ಯ, ಪ್ರೌಢ ಶಾಲಾ ವಿಭಾಗದ ಉಪಪ್ರಾಂಶುಪಾಲೆ ಶ್ರೀಮತಿ ವಾಣಿ ಕೆ, ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕ ಶ್ರೀ ಸಂತೋಷ್ ನೆಲ್ಲಿಕಾರು ಕಾರ್ಯಕ್ರಮ ನಿರ್ವಹಸಿ ವಂದಿಸಿದರು.
ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಕಾರ್ಕಳದಲ್ಲಿ 16ನೆಯ ರಾಷ್ಟ್ರೀಯ ಮತದಾರರ ದಿನಾಚರಣೆ 2026 ರ ಅಂಗವಾಗಿ ಮತದಾರರ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು. ಈ ಸಂದರ್ಭದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳ ಮತದಾನವು ಎಷ್ಟು ಮಹತ್ವವಾದದ್ದು ಎಂಬ ಅರಿವನ್ನು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲರು ಹಾಗೂ ಸಹ ಸಂಸ್ಥಾಪಕರಾದ ವಿದ್ವಾನ್ ಗಣಪತಿ ಭಟ್ ಉಪಸ್ಥಿತರಿದ್ದರು. ಕನ್ನಡ ಭಾಷಾ ಮುಖ್ಯಸ್ಥರಾದ ಶ್ರೀ ಶಿವಕುಮಾರ್ ಪ್ರತಿಜ್ಞಾವಿಧಿ ಬೋಧಿಸಿದರು. ಉಪನ್ಯಾಸಕ ವರ್ಗದವರು, ಬೋಧಕೇತರ ವರ್ಗದವರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾರ್ಕಳದ ಪ್ರತಿಷ್ಠಿತ ವಿದ್ಯಾ ಸಂಸ್ಥೆಯಾದ ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಕಾರ್ಕಳದಲ್ಲಿ 77 ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲರು ಹಾಗೂ ಸಹ ಸಂಸ್ಥಾಪಕರಾದ ವಿದ್ವಾನ್ ಗಣಪತಿ ಭಟ್ ಧ್ವಜಾರೋಹಣವನ್ನು ನೆರವೇರಿಸಿದರು. ದೇಶವು ಸ್ವಾತಂತ್ರ್ಯಗೊಂಡ ಬಳಿಕ ತನ್ನದೇ ಆದ ಆಡಳಿತ ವ್ಯವಸ್ಥೆಯನ್ನು ರೂಪಿಸಿಕೊಂಡದ್ದು ಸಂವಿಧಾನದ ರಚನೆಯಿಂದಾಗಿ. ಸಂವಿಧಾನ ಶಿಲ್ಪಿ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ರವರು ನಮ್ಮ ದೇಶಕ್ಕೆ ಒಂದು ಉತ್ತಮ ಸಂವಿಧಾನವನ್ನು ರಚಿಸಿಕೊಟ್ಟರು. ಅದನ್ನು ಉಳಿಸಿ ಬೆಳೆಸಿಕೊಂಡು ಹೋಗುವುದು ಭಾರತದ ಪ್ರಜೆಗಳಾದ ನಮ್ಮೆಲ್ಲರ ಆದ್ಯ ಕರ್ತವ್ಯ. ಜೀವನದಲ್ಲಿ ದೇಶಪ್ರೇಮವನ್ನು ಮೈಗೂಡಿಸಿಕೊಂಡು ಉತ್ತಮ ನಾಗರಿಕರಾಗಿ ಈ ಸಮಾಜದಲ್ಲಿ ಬಾಳಿ ಬದುಕಬೇಕು ಎಂದು ಧ್ವಜಾರೋಹಣವನ್ನು ನೆರವೇರಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತುಗಳನ್ನಾಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಹಿರಿಯ ವಾಸ್ತುಶಿಲ್ಪಿಗಳಾದ ಪ್ರೊ. ವಸಂತ ಭಟ್ ದೇಶದ ಸ್ವಾತಂತ್ರ್ಯಕ್ಕಾಗಿ, ಭಾರತವನ್ನು ಗಣತಂತ್ರ ರಾಷ್ಟ್ರವನ್ನಾಗಿಸುವಲ್ಲಿ ತಮ್ಮನ್ನು ಅರ್ಪಿಸಿಕೊಂಡ ಹೋರಾಟಗಾರರ ಬಗ್ಗೆ ತಿಳಿಸುತ್ತಾ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತುಗಳನ್ನಾಡಿದರು. ಈ ಸಂದರ್ಭದಲ್ಲಿ ಸಹಸಂಸ್ಥಾಪಕರಾದ ಶ್ರೀ ಅಶ್ವತ್ ಎಸ್ .ಎಲ್. ಹಿರಿಯ ವಾಸ್ತುಶಿಲ್ಪಿಗಳಾದ…















