Author: admin

ಯಕ್ಷಗಾನ ಕಲೆಗೆ ಅದರದೇ ಆದ ಮಹತ್ವವಿದೆ. ಮೂಲ ಚೌಕಟ್ಟಿಗೆ ಬದಲಾವಣೆಯಾಗದಂತೆ ಆ ಕಲೆಯನ್ನು ಪ್ರದರ್ಶಿಸಬೇಕು. ಇತ್ತೀಚೆಗೆ ಕೆಲವು ಪ್ರಸಂಗಗಳು ಯಕ್ಷಗಾನದ ಚೌಕಟ್ಟನ್ನು ಮೀರಿ ಪ್ರದರ್ಶನಗೊಳ್ಳುತ್ತಿರುವುದು ವಿಷಾದನೀಯ. ಯಕ್ಷಗಾನದಲ್ಲಿ ಬದಲಾವಣೆ ಹಾಗೂ ಮನೋರಂಜನೆ ಬೇಕು. ಆದರೆ ಅದಕ್ಕೊಂದು ಇತಿಮಿತಿ ಇರಬೇಕು ಎಂದು ಹೇರಂಬಾ ಇಂಡಸ್ಟ್ರೀಸ್ ಲಿ. ನ ಸಿಎಂಡಿ ಕನ್ಯಾನ ಸದಾಶಿವ ಶೆಟ್ಟಿ ತಿಳಿಸಿದರು. ಕುರ್ಲಾ ಪೂರ್ವದ ಮುಂಬಯಿ ಬಂಟರ ಸಂಘದ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ಸೆಪ್ಟೆಂಬರ್ 29ರಂದು ಜರಗಿದ ಅಜೆಕಾರು ಕಲಾಭಿಮಾನಿ ಬಳಗ ಮುಂಬಯಿಯ 23ನೇ ವಾರ್ಷಿಕೋತ್ಸವದ ತ್ರಯೋವಿಂಶತಿ ಕಲಾ ಸಂಭ್ರಮ ಯಕ್ಷರಕ್ಷಾ ಪ್ರಶಸ್ತಿ ಪ್ರಧಾನ ಸಮಾರಂಭ, ಕೋಟಿ – ಚೆನ್ನಯ ಯಕ್ಷಗಾನ ಪುಸ್ತಕ ಬಿಡುಗಡೆ ಹಾಗೂ ಪರಕೆದ ಪಲ್ಲೆಂಕಿ ಯಕ್ಷಗಾನ ಪ್ರದರ್ಶನದಲ್ಲಿ ಸಂಜೆ ನಡೆದ ಸಮಾರೋಪ ಸಮಾರಂಭವನ್ನು ಅವರು ಉದ್ಘಾಟಿಸಿ, ಪ್ರಸಿದ್ಧ ಯಕ್ಷಗಾನ ಕಲಾವಿದ ಪ್ರಾರ್ಥಿಸುಬ್ಬರಿಂದ ಹಿಡಿದು ಅನೇಕ ಪ್ರಸಿದ್ಧ ಹಿರಿಯ ಕಲಾವಿದರು ಯಕ್ಷಗಾನಕ್ಕಾಗಿ ಉತ್ತಮ ಕೊಡುಗೆ ನೀಡಿದ್ದಾರೆ. ಅವರ ಜೀವನವೇ ಯಕ್ಷಗಾನಕ್ಕಾಗಿ ಮುಡಿಪಾಗಿತ್ತು. ಅಂತಹ ಕಲೆಯನ್ನು ನಾವು…

Read More

ಗಾಂಧಿ ಜಯಂತಿ ದಿನದಂದು ಸುರತ್ಕಲ್ ಸುಭಾಷಿತ ನಗರದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿ ಕೊಳ್ಳಲಾಯಿತು. ಸ್ವಚ್ಛತಾ ಕಾರ್ಯಕ್ರಮ ಬೆಳಿಗ್ಗೆ ನಡೆಯಿತು. ಸುಭಾಷಿತ ನಗರ ವ್ಯಾಪ್ತಿಯಲ್ಲಿ ಸ್ವಚ್ಛತೆ ನಡೆಯಿತು. ಸುಭಾಷಿತ ನಗರ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಶನ್ ನ ಅಧ್ಯಕ್ಷ ರಮೇಶ್ ಶೆಟ್ಟಿ ಅವರ ನೇತೃತ್ವದಲ್ಲಿ ಸ್ವಚ್ಛತಾ ಅಭಿಯಾನ ನಡೆಯಿತು. ಅಸೋಸಿಯೇಶನ್ ನ ಉಪಾಧ್ಯಕ್ಷ ತಾರಾನಾಥ ಸಾಲ್ಯಾನ್, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಶೆಟ್ಟಿ, ಕೋಶಾಧಿಕಾರಿ ನರಸಿಂಹ ಸುವರ್ಣ, ಸಂಘಟನಾ ಕಾರ್ಯದರ್ಶಿ ಪುಷ್ಪರಾಜ ಶೆಟ್ಟಿ ಕುಡುಂಬೂರು, ಜೊತೆ ಕಾರ್ಯದರ್ಶಿ ಲಕ್ಷ್ಮೀ ಚಂದ್ರಶೇಖರ, ಜಗನ್ನಾಥ ಶೆಟ್ಟಿ ಬಾಳ ಹಾಗೂ ಅಸೋಸಿಯೇಶನ್ ನ ಸದಸ್ಯರು ಪಾಲ್ಗೊಂಡಿದ್ದರು. ಬಳಿಕ ಅಸೋಶಿಯನ್ ನ ಸರ್ವ ಸದಸ್ಯರ ಸಭೆ ರಮೇಶ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.

Read More

ಸುರತ್ಕಲ್ ಎನ್.ಐ.ಟಿ.ಕೆ ನಿವೃತ್ತ ಪ್ರಾಂಶುಪಾಲ ಡಾ| ಪಿ. ಸುಧಾಕರ ಶೆಟ್ಟಿ ಅವರ ಶ್ರದ್ಧಾಂಜಲಿ ಸಭೆಯು ಬೈಲೂರು ಮಹಿಷಮರ್ದಿನಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಡಾ. ಸುಧೀರ್ ರಾಜ್, ಮಟ್ಟಾರ್ ರತ್ನಾಕರ್ ಹೆಗ್ಡೆ, ಪ್ರೊ.ಕೆ.ಆರ್ ಕಾಮತ್ ನುಡಿನಮನ ಸಲ್ಲಿಸಿದರು. ಮಣಿಪಾಲ ಮಾಹೆಯ ಉಪಕುಲಪತಿ ಡಾ. ಎಚ್. ಎಸ್. ಬಲ್ಲಾಳ್, ಎಂಆರ್ ಜಿ ಗ್ರೂಪ್ ಚೇರ್ಮನ್ ಪ್ರಕಾಶ್ ಶೆಟ್ಟಿ, ಮಣಿಪಾಲ ಕೆಎಂಸಿ ಡೀನ್ ಡಾ. ಪದ್ಮರಾಜ್ ಹೆಗ್ಡೆ, ಕೆಎಂಸಿ ಮೆಡಿಕಲ್ ಸೂಪರಿಂಟೆಂಡೆಂಟ್ ಡಾ. ಅವಿನಾಶ್ ಶೆಟ್ಟಿ, ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಎಂಎಲ್‌ಸಿ ಮಂಜುನಾಥ್ ಭಂಡಾರಿ, ಮಾಜಿ ಸಚಿವರಾದ ಜಯಪ್ರಕಾಶ್ ಹೆಗ್ಡೆ, ನಾಗರಾಜ್ ಶೆಟ್ಟಿ, ಮಾಜಿ ಶಾಸಕರಾದ ಸುಕುಮಾರ್ ಶೆಟ್ಟಿ, ಹಾಲಾಡಿ ಶ್ರೀನಿವಾಸ್ ಶೆಟ್ಟಿ, ರಘುಪತಿ ಭಟ್, ಲಾಲಾಜಿ ಮೆಂಡನ್, ಆರೆಸ್ಸೆಸ್ ಮುಖಂಡ ಶಂಭು ಶೆಟ್ಟಿ, ಬಿಜೆಪಿ ಮುಖಂಡ ಕಿದಿಯೂರು ಉದಯಕುಮಾರ್ ಶೆಟ್ಟಿ, ಕಾಂಗ್ರೆಸ್ ಮುಖಂಡರಾದ ನವೀನ್ ಚಂದ್ರ ಜೆ. ಶೆಟ್ಟಿ, ಮುನಿಯಾಲು ಉದಯ ಕುಮಾರ ಶೆಟ್ಟಿ, ಕಿಶನ್ ಹೆಗ್ಡೆ…

Read More

ವಿದ್ಯಾಗಿರಿ: ನಾವು ಸೇವಿಸುವ ಆಹಾರ ಯಾವುದೇ ಬಾಹ್ಯ ಅಂಶಗಳಿಂದ ನಿರ್ಧರಿತವಾಗಿರಬಾರದು. ಆದರೆ ಭಾರತದಲ್ಲಿ ಆಹಾರ ವ್ಯವಸ್ಥೆಯು ಸಾರ್ವಜನಿಕ ನೀತಿಯನ್ನು ಅವಲಂಬಿಸಿದೆ. ಹಾಗಾಗಿ ನಾವು ಏನು ಬಯಸುತ್ತವೆಯೋ ಅದನ್ನು ಸೇವಿಸುವ ಬದಲು ನಮ್ಮ ನಡುವೆ ನಿರ್ಮಾಣಗೊಂಡಿರುವ ವ್ಯವಸ್ಥೆಗೆ ಒಳಗಾಗಿ ಆಹಾರವನ್ನು ತೆಗೆದುಕೊಳ್ಳುವ ಸ್ಥಿತಿಗೆ ನಾವು ಬಂದಿದ್ದೇವೆ ಎಂದು ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ.ಎಲ್. ಧರ್ಮ ಹೇಳಿದರು. ಐಎಪಿಇಎನ್ ಇಂಡಿಯಾದ ಮಂಗಳೂರು ಘಟಕದ ಸಹಕಾರದಲ್ಲಿ ಆಳ್ವಾಸ್ ಶಿಕ್ಷಣಪ್ರತಿಷ್ಠಾನ(ರಿ)ದ ಆತಿಥ್ಯದಲ್ಲಿ ಆಹಾರ, ಪೌಷ್ಟಿಕ ಮತ್ತು ಆಹಾರಪದ್ಧತಿಯ ಪದವಿ ಮತ್ತು ಸ್ನಾತಕೋತ್ತರ ವಿಭಾಗಗಳು ವಿದ್ಯಾಗಿರಿಯ ಸುಂದರಿ ಆನಂದ ಆಳ್ವ ಆವರಣದ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡ ‘ಕ್ಷೇಮ ಮತ್ತು ಅನಾರೋಗ್ಯದಲ್ಲಿ ಪೌಷ್ಟಿಕ ಚಿಕಿತ್ಸೆಯ ಸಮಗ್ರ ವಿಧಾನ’ ಕುರಿತ ಅಂತರರಾಷ್ಟ್ರೀಯ ವಿಚಾರಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇಂದು ವೈದ್ಯರು ತಿಳಿಸುವ ಆಹಾರದ ಬದಲು ನಮ್ಮ ಧಾರ್ಮಿಕ ಹಾಗೂ ರಾಜಕೀಯ ಮುಖಂಡರು ನಮ್ಮ ಆಹಾರವನ್ನು ನಿರ್ಧಾರ ಮಾಡುತ್ತಿದ್ದಾರೆ. ಝೊಮ್ಯಾಟೋ, ಸ್ವಿಗ್ಗಿ ಬಹುರಾಷ್ಟ್ರೀಯ ಆಹಾರ ವಿತರಣಾ ಕಂಪೆನಿಗಳು ನಮ್ಮ ಮೆನುವನ್ನು…

Read More

ಕರ್ನಾಟಕ ರಾಜ್ಯ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ಕೇಂದ್ರ ವೇದಿಕೆ (ರಿ) ಉಡುಪಿ ಜಿಲ್ಲೆ ಮತ್ತು ತಾಲೂಕು ಕಾನೂನು ಸೇವಾ ಸಮಿತಿಯು ಶಿಕ್ಷಕರ ದಿನಾಚರಣೆ ಪ್ರಯುಕ್ತ ಕೊಡ ಮಾಡುವ 2024- 25 ನೇ ಸಾಲಿನ ಉಡುಪಿ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಮೊಳಹಳ್ಳಿ ಇದರ ಸಹ ಶಿಕ್ಷಕ ಗಣೇಶ್ ಶೆಟ್ಟಿ ಭಾಜನರಾಗಿದ್ದಾರೆ. ಇವರು ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶನದಂತೆ ಕುಂದಾಪುರ ವಲಯದಿಂದ ಇವರು ಆಯ್ಕೆಯಾಗಿದ್ದು, ಸೆಪ್ಟೆಂಬರ್ 29 ರಂದು ಕುಂಭಾಶಿಯ ಶ್ರೀ ವಿನಾಯಕ ಸಭಾಭವನದಲ್ಲಿ ಜಿಲ್ಲಾ ನ್ಯಾಯಾಧೀಶರಿಂದ ಪ್ರಶಸ್ತಿ ಸ್ವೀಕರಿಸಿದರು.

Read More

ಬ್ರಹ್ಮಾವರದ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್ ನಲ್ಲಿ ಅ. 02 ರಂದು ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ, ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಭಾವಚಿತ್ರಕ್ಕೆ ಪುಷ್ಪಾರ್ಪಣೆಯನ್ನು ಮಾಡುವ ಮೂಲಕ ಗೌರವ ಸಲ್ಲಿಸಿದರು. ನಂತರ ಮಾತನಾಡಿ ಗಾಂಧೀಜಿಯವರ ಸತ್ಯ, ಅಹಿಂಸೆಯ ಸಿದ್ಧಾಂತವನ್ನು ಇಂದು ಇಡೀ ಮನುಕುಲವೇ ಅನುಸರಿಸಬೇಕಾಗಿದೆ. ಅದೇ ರೀತಿ ಲಾಲ್ ಬಹದ್ದೂರ್ ಶಾಸ್ತ್ರೀಯವರ ಸರಳತೆ, ಪ್ರಾಮಾಣಿಕತೆ, ನಾಯಕತ್ವದ ಗುಣಗಳು ನಮಗೆಲ್ಲರಿಗೂ ಆದರ್ಶವೆಂದರು. ಶಾಲಾ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್ ಮಾತನಾಡಿ ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗಮಾಡಿದ ಮಹಾನ್ ನಾಯಕರನ್ನು ನಾವು ನಿರಂತರ ಸ್ಮರಿಸಬೇಕು. ಗಾಂಧೀ ಚಿಂತನೆಗಳೇ ನಮಗೆ ದಾರಿದೀಪ, ಅವರು ಹಚ್ಚಿದ ದೀಪದಲ್ಲಿ ನಾವು ಮುನ್ನಡೆಯೋಣವೆಂದರು. ಕಾರ್ಯಕ್ರಮದಲ್ಲಿ ಶಾಲಾ ಮ್ಯಾನೇಜರ್ ತ್ಯಾಗೀಶ್ಚಂದ್ರ ಶೆಟ್ಟಿ, ಸಂಸ್ಥೆಯ ಶಿಕ್ಷಕ ವೃಂದ, ಸಹ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Read More

ಅಕ್ಟೋಬರ್ 2ರಂದು ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿರವರ ಜನ್ಮ ದಿನಾಚರಣೆಯ ಪ್ರಯುಕ್ತ ಲಯನ್ಸ್ ಕ್ಲಬ್, ಹಂಗಳೂರು ಹಾಗೂ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು, ಸುಣ್ಣಾರಿ, ಕುಂದಾಪುರ ಇದರ ಸಹಯೋಗದಲ್ಲಿ ಸ್ವಚ್ಛ ಭಾರತ್ ಸ್ವಸ್ಥ ಭಾರತ್ ಅಭಿಯಾನ 2024ರ ಸ್ವಚ್ಛತೆಯ ಸೇವಾ ಕಾರ್ಯಕ್ರಮವನ್ನು ಕೋಡಿ ಕಿನಾರ ಕಡಲ ತೀರದಲ್ಲಿ ಹಮ್ಮಿಕೊಂಡು ಕಡಲ ತಡಿಯ ಭಾಗದಲ್ಲಿರುವ ಪ್ಲಾಸ್ಟಿಕ್ ಹಾಗೂ ತ್ಯಾಜ್ಯ ವಸ್ತುಗಳನ್ನು ಸಂಪೂರ್ಣವಾಗಿ ಸ್ವಚ್ಛಮಾಡುವ ಅಭಿಯಾನವನ್ನು ನಮ್ಮ ಎಕ್ಸಲೆಂಟ್ ಸಂಸ್ಥೆಯು ಕೈಗೊಂಡಿರುವುದು ಹೆಮ್ಮೆಯ ವಿಚಾರವಾಗಿದೆ. ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ಮಂಡಳಿಯು, ಉಪನ್ಯಾಸಕರು, ಶಿಕ್ಷಕ – ಶಿಕ್ಷಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಸಹ ಈ ಕಾಯಕದಲ್ಲಿ ಪಾಲ್ಗೊಂಡಿರುತ್ತಾರೆ.

Read More

ದಿನದಿಂದ ದಿನಕ್ಕೆ ನಮ್ಮ ಮಹಾ ನಗರವಾದ ಮಂಗಳೂರಿನ ಮಧ್ಯಭಾಗದಿಂದ ಹಿಡಿದು ಸುತ್ತಮುತ್ತಲಿನ ಸುರತ್ಕಲ್, ಮುಲ್ಕಿ, ಉಡುಪಿ, ಬಿ.ಸಿ ರೋಡ್, ಪುತ್ತೂರು ಈ ಕಡೆ ತೊಕ್ಕೊಟ್ಟು, ಕೊಣಾಜೆ, ತಲಪಾಡಿ ಎಲ್ಲವೂ ದಾಪುಗಾಲು ಇಡುತ್ತಾ ಅಭಿವೃದ್ಧಿ ಹೊಂದುತ್ತಿದೆ. ಅಭಿವೃದ್ಧಿ ಎಂದರೆ ಅದು ಶೈಕ್ಷಣಿಕ, ವೈದ್ಯಕೀಯ, ಧಾರ್ಮಿಕ, ವಸತಿ ಸಮುಚ್ಚಯ ಇವುಗಳ ಬೆಳವಣಿಗೆಯ ವೇಗ ಮಿತಿಮೀರಿ ಓಡುತ್ತಿದೆ. ಆದರೆ ಇದನ್ನು ಸಮರ್ಪಕವಾಗಿ ನಡೆಸಿಕೊಳ್ಳಲು ನಮ್ಮ ನಗರಗಳ ಧಾರಣಶಕ್ತಿ ಹೇಗಿದೆ ಈ ಬಗ್ಗೆ ಒಮ್ಮೆ ಅವಲೋಕಿಸೋಣ. ಎಲ್ಲದಕ್ಕಿಂತ ಪ್ರಮುಖವಾಗಿ ಇವೆಲ್ಲದರಿಂದ ಬರುವಂತಹ ಕಸ ಅಥವಾ ವೇಸ್ಟೇಜ್ ವಿಲೇವಾರಿಯಲ್ಲಿ ನಮ್ಮ ಪಾತ್ರವೇನು? ಈ ಬಗ್ಗೆ ಈ ನಗರಗಳಲ್ಲಿ ವಾಸಿಸುವ ಪ್ರತಿಯೊಬ್ಬನೂ ಆಲೋಚಿಸಲೇಬೇಕಾಗಿದೆ. ನಾವು ಕಸ ಸಂಗ್ರಹದ ತೆರಿಗೆ ಕಟ್ಟಿ ಬೆಳಿಗ್ಗೆ ಶಿಸ್ತಿನಿಂದ ತೊಟ್ಟೆಯೋ ತೊಟ್ಟಿಯೋ ಹೊರಗೆ ಇಟ್ಟುಬಿಟ್ಟರೆ ನಮ್ಮ ಜವಾಬ್ದಾರಿ ಮುಗಿಯಿತು ಎಂದು ತಿಳಿದಿದ್ದೇವೆ. ಕಾರಣ ಪ್ರತಿಯೊಬ್ಬರೂ ಅವರ ಮನೆಯ ಒಳಗಿಂದ ವಾಸನೆಯ ಕಸವೂ ಬೇಡದ ವಸ್ತುಗಳೋ ಹೊರಗೆ ಹಾಕುವವರೆಗೆ ಮಾತ್ರ ತಮ್ಮ ತರಾತುರಿಯ ಜವಾಬ್ದಾರಿ ಎಂದು ತಿಳಿದಂತಿದೆ.…

Read More

ಈ ಸಾಲಿನ ರಾಜ್ಯ ಮಟ್ಟದಲ್ಲಿ ನಡೆದಿರುವ ಪಿಜಿ ಸಿಇಟಿ ಎಂಬಿಎ ಪ್ರವೇಶ ಪರೀಕ್ಷೆಯಲ್ಲಿ ಅಜ್ಜಾವರ ಗ್ರಾಮದ ಮೇನಾಲ ಸುಭೋದ್ ಶೆಟ್ಟಿ ಹಾಗೂ ಶ್ರೀಮತಿ ಶಿಲ್ಪಾ ಶೆಟ್ಟಿ ದಂಪತಿಗಳ ಪುತ್ರ ಪ್ರಣಾಮ್ ಶೆಟ್ಟಿ ಮೇನಾಲ ರಾಜ್ಯದಲ್ಲಿ 8ನೇ ರ‌್ಯಾಂಕ್ ಪಡೆದು ಸಾಧನೆ ಮೆರೆದಿದ್ದಾರೆ. ರಾಜ್ಯದಲ್ಲಿ ಒಟ್ಟು 47436 ಮಂದಿ ಪರೀಕ್ಷೆ ಬರೆದಿದ್ದು, ಅವರಲ್ಲಿ ಪ್ರಣಾಮ್ ಶೆಟ್ಟಿಯವರು 8ನೇ ಸ್ಥಾನ ಪಡೆದಿದ್ದಾರೆ. ಇವರು ಪುತ್ತೂರು ವಿವೇಕಾನಂದ ವಿದ್ಯಾ ಸಂಸ್ಥೆಯಲ್ಲಿ ಬಿ.ಕಾಂ ವಿದ್ಯಾಭ್ಯಾಸ ಪಡೆದಿದ್ದಾರೆ.

Read More

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.) ಮೂಡುಬಿದಿರೆಯು ಪ್ರತೀ ವರ್ಷ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಮಹತ್ವಾಕಾಂಕ್ಷೆಯ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ‘ಆಳ್ವಾಸ್ ವಿರಾಸತ್’ಗೆ ಈ ವರ್ಷ 30ರ ಹರೆಯ. ಈ ಸಂದರ್ಭದಲ್ಲಿ ಅಪೂರ್ವ ಮತ್ತು ವೈಭವದ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಸಂಘಟಿಸಿ ಸಂಸ್ಕೃತಿ ಪ್ರಿಯರಿಗೆ ರಸದೌತಣವನ್ನು ನೀಡಲು ಯೋಚಿಸಲಾಗಿದೆ. ಇದಕ್ಕಾಗಿ ಈಗಾಗಲೇ ಕಾರ್ಯಪ್ರವೃತ್ತರಾಗಿದ್ದು ‘ಆಳ್ವಾಸ್ ವಿರಾಸತ್-2024’ನ್ನು ಅತ್ಯಂತ ಯಶಸ್ವೀ ಉತ್ಸವವಾಗಿಸುವಲ್ಲಿ ಪ್ರಯತ್ನಿಸಲಾಗುತ್ತಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ ತಿಳಿಸಿದರು. ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ವಿದ್ಯಾಗಿರಿಯ ಆವರಣದಲ್ಲಿ ಆಳ್ವಾಸ್ ವಿರಾಸತ್-2024 ಡಿಸೆಂಬರ್ 10, 2024ನೇ ಮಂಗಳವಾರದಂದು ಪ್ರಾರಂಭವಾಗಿ ಡಿಸೆಂಬರ್ 15, 2024ನೇ ಭಾನುವಾರದಂದು ಮುಕ್ತಾಯಗೊಳ್ಳಲಿದೆ. ಮಂಗಳವಾರ, ಬುಧವಾರ, ಗುರುವಾರ, ಶುಕ್ರವಾರ, ಶನಿವಾರ ಮತ್ತು ಭಾನುವಾರಗಳು ಸೇರಿ ಒಟ್ಟು 6 ದಿನಗಳ ಕಾಲ ಈ ಸಾಂಸ್ಕøತಿಕ ಉತ್ಸವವು ವೈಭವೋಪೇತವಾಗಿ ಜರುಗಲಿದೆ. ಮೊದಲ 05 ದಿನಗಳು ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ಆಹಾರೋತ್ಸವ, ಕರಕುಶಲ ವಸ್ತುಗಳೇ ಮೊದಲಾದ ವಸ್ತು ಪ್ರದರ್ಶನಗಳಿಗೆ ಅವಕಾಶವಿದ್ದು ಕೊನೆಯ…

Read More