Author: admin
ಮೂಡುಬಿದಿರೆ: ಪ್ರಕೃತಿ ಚಿಕಿತ್ಸಾ ಪದ್ಧತಿಯು ಅತ್ಯುತ್ತಮ ಜೀವನವನ್ನು ನಡೆಸಲು ರಹದಾರಿಯಾಗಿದ್ದು ಇದರ ಮೂಲ ತತ್ವಗಳನ್ನು ಪಾಲಿಸುವುದರಿಂದ ಜೀವನ ಶೈಲಿ ಬದಲಾವಣೆಯಾಗುವುದಲ್ಲದೇ ಯೋಗಭ್ಯಾಸಗಳಿಂದ ಆಯುಷ್ಯ ವೃದ್ಧಿಯಾಗುತ್ತದೆ ಎಂದು ಪ್ರಕೃತಿ ಚಿಕಿತ್ಸಾ ತಜ್ಞ ಡಾ. ಮಹಮ್ಮದ್ ರಫೀಕ್ ತಿಳಿಸಿದರು. ಅವರು ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ಕಾಲೇಜು ಆಯೋಜಿಸಿದ್ದ 7ನೇ ರಾಷ್ಟಿçÃಯ ಪ್ರಕೃತಿ ಚಿಕಿತ್ಸಾ ದಿನದ ಆಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ಪ್ರಕೃತಿ ಚಿಕಿತ್ಸೆ ಮತ್ತು ಯೋಗವನ್ನು ಸರಿಯಾಗಿ ಪಾಲಿಸುವುದರಿಂದ ಮಾನಸಿಕ ಸ್ಥಿತಿಗತಿಗಳನ್ನು ಸಮತೋಲನದಲ್ಲಿಟ್ಟುಕೊಳ್ಳಬಹುದು. ಆ ಮೂಲಕ ಎಲ್ಲಾ ವರ್ಗದ ಮತ್ತು ವಯೋಮಾನದವರಿಗೂ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು. ಅಧ್ಯಕ್ಷತೆವಹಿಸಿ ಮಾತನಾಡಿದ ಡಾ ಗ್ರೀಷ್ಮಾ ವಿವೇಕ್ ಆಳ್ವ, ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಶಿಕ್ಷಣವನ್ನು ಪ್ರತಿಯೊಬ್ಬರು ಅಳವಡಿಸಿಕೊಂಡಲ್ಲಿ ಜೀವನವನ್ನು ಅನುಭವಿಸಲು ಮತ್ತು ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು. ಪ್ರಥಮ ವರ್ಷದ ವಿದ್ಯಾರ್ಥಿ ಯೋಗೀಶ್ವರನ್ ಕಾರ್ಯಕ್ರಮ ನಿರೂಪಿಸಿ, ಯೋಗ ವಿಭಾಗದ ಮುಖ್ಯಸ್ಥೆ ಡಾ ಅರ್ಚನಾ ಸ್ವಾಗತಿಸಿ, ಡಾನಿಯ ಹಾಗೂ ತಂಡದವರು ಪ್ರಾರ್ಥಸಿ,…
ಕಾರ್ಕಳ : ವಿದ್ಯಾರ್ಥಿಯ ಸಾಧನೆಯ ಹಿಂದೆ ಗುರುಗಳ ಪಾತ್ರ ಮಹತ್ವದ್ದು. ಅಂತಹ ಗುರುಗಳನ್ನು ಯಾವುದೇ ಕ್ಷೇತ್ರದಲ್ಲಿ ಮುನ್ನುಗ್ಗುವವರು ಆರಿಸಿಕೊಳ್ಳ ಬೇಕು. ಅಡೆತಡೆಗಳನ್ನು ಸಾಧನೆಯ ಏಣಿಯಾಗಿಸಿಕೊಂಡವರು ಸಾಧಕರಾಗಿ ಹೊರಬರುತ್ತಾರೆ ಎಂದು ಉಜಿರೆಯ ಎಸ್.ಡಿ.ಎಂ. ಕಾಲೇಜಿನ ಸ್ಪೋರ್ಟ್ಸ್ ಕ್ಲಬ್ ಕಾರ್ಯದರ್ಶಿ, ದೈ.ಶಿ.ವಿಭಾಗದ ಮುಖ್ಯಸ್ಥ ಶ್ರೀ ರಮೇಶ್ ಎಚ್ ಹೇಳಿದರು. ಅವರು ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನಲ್ಲಿ ಜರುಗಿದ ವಾರ್ಷಿಕ ಕ್ರೀಡಾಕೂಟ-2024ರ ಕ್ರೀಡಾಕೂಟದ ಧ್ವಜಾರೋಹಣವನ್ನು ನೆರವೇರಸಿ ಮಾತನಾಡಿದರು. ಶೈಕ್ಷಣಿಕ ಕ್ಷೇತ್ರ ಮಾತ್ರವಲ್ಲದೆ ಸಾಂಸ್ಕೃತಿಕವಾಗಿ, ಹಾಗೂ ಕ್ರೀಡೆಯನ್ನು ಉತ್ತೇಜಿಸುತ್ತಿರುವ ಇಲ್ಲಿನ ಆಡಳಿತ ಮಂಡಳಿಯ ಕಾರ್ಯ ಶ್ಲಾಘನೀಯ,ಇಲ್ಲಿನ ಕ್ರೀಡಾಂಗಣವು ರಾಜ್ಯ ಹಾಗೂ ರಾಷ್ಟ್ರೀಯ ಕ್ರೀಡಾಕೂಟ ನಡೆಸುವುದಕ್ಕೂ ಸುಯೋಗ್ಯವಾಗಿದೆ ಎಂದು ಕೊಂಡಾಡಿದರು. ಕ್ರೀಡಾಕೂಟವನ್ನು ಉದ್ಘಾಟಿಸಿದ ಕಾಮನ್ ವೆಲ್ತ್ ವೈಟ್ ಲಿಫ್ಟಿಂಗ್ ಪದಕ ವಿಜೇತ ಹಾಗೂ ಏಕಲವ್ಯ ಪ್ರಶಸ್ತಿ ಪುರಸ್ಕೃತ ಅಂತರಾಷ್ಟ್ರೀಯ ಕ್ರೀಡಾಪಟು ಶ್ರೀ ಗುರುರಾಜ್ ಪೂಜಾರಿ ಮಾತನಾಡಿ, ಕ್ರೀಡೆಯಲ್ಲಿ ತೊಡಗಿಕೊಂಡವರಿಗೆ ಇಂದು ಸರಕಾರದ ವಿವಿಧ ಸ್ತರಗಳಲ್ಲಿ ಉದ್ಯೋಗವನ್ನು ಪಡೆಯುವುದಕ್ಕೆ ಸಾದ್ಯವಿದೆ. ಅದರ ಸದುಪಯೋಗ ಪಡಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.…
ಕನ್ನಡ ನಾಡಿನ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯ ಪರಮಧ್ಯೇಯ ಹೊಂದಿರುವ ಡಾ. ವೇಮಗಲ್ ನಾರಾಯಣ ಸ್ವಾಮಿಯವರ ಒತ್ತಾಸೆಯಿಂದ ಆರಂಭವಾದ ‘ಡಾ. ವೇಮಗಲ್ ನಾರಾಯಣ ಸ್ವಾಮಿ ಸಾಂಸ್ಕೃತಿಕ ಪ್ರತಿಷ್ಠಾನ’ ವತಿಯಿಂದ ಪ್ರತಿ ವರ್ಷ ಸಾಮಾಜಿಕ ಮತ್ತು ಸಾಂಸ್ಕೃತಿಕ ಸೇವೆ ಮಾಡುತ್ತಿರುವ ಸಾಧಕರನ್ನು ಗುರುತಿಸಿ, ಗೌರವಿಸಿ ”ಸಂಸ್ಕೃತಿ ಸಿರಿ’ ಪ್ರಶಸ್ತಿಯೊಂದಿಗೆ 25000 ರೂಪಾಯಿ ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡ ಪ್ರಶಸ್ತಿಯನ್ನು ಬಂಟರ ಸಂಘ ಮುಂಬಯಿಯ ಪ್ರಧಾನ ಕಾರ್ಯದರ್ಶಿ, ಖ್ಯಾತ ಆರ್ಥಿಕ ಸಲಹೆಗಾರ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, 2024 ರ ಸಾಲಿನ ಬಂಟರತ್ನ ಪ್ರಶಸ್ತಿ ಪುರಸ್ಕೃತ, ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕದ ಅಧ್ಯಕ್ಷ ಡಾ| ಆರ್. ಕೆ. ಶೆಟ್ಟಿಯವರಿಗೆ ಪ್ರಧಾನಿಸಿ ಗೌರವಿಸಲಾಯಿತು. ನವೆಂಬರ್ 8 ರಂದು ರಂದು ಬೆಂಗಳೂರಿನ ಕಲಾಕ್ಷೇತ್ರದಲ್ಲಿ ನಡೆದ ಪ್ರಶಸ್ತಿ ಸಮಾರಂಭದಲ್ಲಿ ಬಸವಲಿಂಗಯ್ಯ, ಎಸ್. ಜಿ. ಸಿದ್ದರಾಮಯ್ಯ, ಮಲ್ಲೇಶ್ವರಪುರಂ ಜಿ, ವೆಂಕಟೇಶ್, ದೊಡ್ಡರಂಗೇಗೌಡ, ಯಲ್ಲಪ್ಪ ರೆಡ್ಡಿ, ಜಯಶ್ರೀ ಅರವಿಂದ್, ತಿಮ್ಮೇಶ್, ಬಿ.ಕೆ. ಶಿವರಾಂ, ವೇಮಗಲ್ ನಾರಾಯಣ ಸ್ವಾಮಿ, ಗೊಲ್ಲಹಳ್ಳಿ ಶಿವಪ್ರಸಾದ್,…
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿಯಿಂದ ಅರಮನೆ ಮೈದಾನದ ಗಾಯತ್ರಿ ವಿಹಾರ್ನಲ್ಲಿ “ವಾಗೀಶ್ವರಿ ಪೂಜೆ ಮತ್ತು ಲೇಖನ ಸಂಕಲ್ಪ” ನಡೆಯಿತು. ಈ ಸಂದರ್ಭದಲ್ಲಿ ಸಹಸ್ರಾರು ಜನರಿಂದ ಸಂಕಲ್ಪ ಪೂಜೆ ನಡೆಯಿತು. ರಾಜಧಾನಿಯಲ್ಲಿ ನೆಲೆಸಿರುವ ದ.ಕ. ಮತ್ತು ಉಡುಪಿ ಭಾಗದ ಹಲವು ಭಕ್ತರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ ಹಾಗೂ ಮಹಾಮಂಗಳಾರತಿ ಜರಗಿತು. ಈ ಸಂದರ್ಭ ಎಂಆರ್ಜಿ ಗ್ರೂಪ್ ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಮಾತನಾಡಿ, ಮಾರಿಯಮ್ಮನ ಜೀರ್ಣೋದ್ಧಾರ ಆರಂಭವಾಗಿ 5 ವರ್ಷವಾಯಿತು. 2025ರ ಫೆಬ್ರವರಿಯಲ್ಲಿ ಕಾಪುವಿನಲ್ಲಿ 9 ದಿನಗಳ ಅಭೂತಪೂರ್ವ ಬ್ರಹ್ಮಕಲಶೋತ್ಸವ ನಡೆಯಲಿದೆ ಎಂದರು. ಯುನಿರ್ವಸಲ್ ಸ್ಕೂಲ್ ಆಫ್ ಆಡ್ಮಿನಿಸ್ಟ್ರೇಶನ್ನ ಅಧ್ಯಕ್ಷ ಉಪೇಂದ್ರ ಶೆಟ್ಟಿ ಮಾತನಾಡಿ, ಲೇಖನ ಸಂಕಲ್ಪಕ್ಕೆ ಬೆಂಗಳೂರಿನಿಂದ 9999 ಹಸ್ತ ಪ್ರತಿಗಳ ಆವಶ್ಯಕತೆಯಿದೆ. ಈ ಹಿನ್ನಲೆಯಲ್ಲಿ ಮುಂದಿನ ದಿನಗಳಲ್ಲಿ ನಗರದ ವಿವಿಧೆಡೆ ಕಾರ್ಯಕ್ರಮ ನಡೆಯಲಿದೆ. ಇದಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಬೇಕು ಎಂದು ಮನವಿ ಮಾಡಿದರು. ಜೀರ್ಣೋದ್ಧಾರ ಕಾರ್ಯಕ್ರಮಗಳನ್ನು ನಾವು…
ಸಮಾಜ ಸೇವೆ ಮಾಡಲು ಬದುಕಿನಲ್ಲಿ ಸಿಕ್ಕಿದ ಯೋಗ ಎಂದು ಭಾವಿಸಿದ್ದೇನೆ. ಬಡವರಿಗೆ ಮಾಡುವ ದಾನದಿಂದ ತೃಪ್ತನಾಗಿದ್ದೇನೆ. ನನ್ನ ಸಾಧನೆಗೆ ಸಮಾಜದ ಸರ್ವರ ಸಹಕಾರ ಇದೆ ಎಂದು ಉದ್ಯಮಿ, ಕರ್ನಾಟಕ ಸುವರ್ಣ ಸಂಭ್ರಮ ಪ್ರಶಸ್ತಿ ಪುರಸ್ಕೃತ ಕನ್ಯಾನ ಸದಾಶಿವ ಕೆ. ಶೆಟ್ಟಿ ಹೇಳಿದರು. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ವತಿಯಿಂದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು. ಸಮಾಜದಲ್ಲಿ ನೊಂದ ಬಹಳಷ್ಟು ಮಂದಿ ಸಹಾಯ ಕೇಳಿಕೊಂಡು ಬರುತ್ತಾರೆ. ಅನೇಕ ಸಂಘ ಸಂಸ್ಥೆಗಳು, ಧಾರ್ಮಿಕ ಕೇಂದ್ರಗಳಿಗೆ ನನ್ನಿಂದಾದ ಸಹಾಯ ಮಾಡುತ್ತಿದ್ದೇನೆ. ಆರ್ಥಿಕವಾಗಿ ಕೆಳಸ್ತರದ ಕುಟುಂಬದಿಂದ ಬಂದು ಶಿಕ್ಷಣದ ಮೂಲಕ ಹಂತ ಹಂತವಾಗಿ ಉದ್ಯಮ ಕ್ಷೇತ್ರದಲ್ಲಿ ಬೆಳೆದು ನಿಂತಿದ್ದೇನೆ. ಹಲವಾರು ಮಂದಿ ಸಹಾಯ ಮಾಡಿದ್ದಾರೆ. ಬಂದ ಹಾದಿಯನ್ನು ಮರೆಯುವುದಿಲ್ಲ. ಪಟ್ಲ ಫೌಂಡೇಶನ್ ಟ್ರಸ್ಟ್ ಹೊಸ ಪರಿಕಲ್ಪನೆಯೊಂದಿಗೆ ಅಧ್ಬುತವಾಗಿ ಸನ್ಮಾನ ಮಾಡಿದ್ದಾರೆ. ಇದರಿಂದ ಪರಮಾನಂದವಾಗಿದೆ. ಜೀವನ ಪಾವನವಾಯಿತು ಎಂದವರು ಸಂತಸ ವ್ಯಕ್ತಪಡಿಸಿದರು. ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಅತಿಥಿಯಾಗಿ ಮಾತನಾಡಿ, ಕನ್ಯಾನ ಸದಾಶಿವ…
ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ, ಕರ್ನಾಟಕ ಪ್ರೌಢ ಶಾಲಾ ಸಹಶಿಕ್ಷಕರ ಸಂಘ ಕುಂದಾಪುರ ತಾಲೂಕು ಘಟಕ ಮತ್ತು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಯಡಾಡಿ- ಮತ್ಯಾಡಿ ಇವರ ಜಂಟಿ ಪ್ರಾಯೋಜಕತ್ವದಲ್ಲಿ ಉಚಿತ ಎನ್.ಎಂ.ಎಂ.ಎಸ್ ತರಬೇತಿ ಕಾರ್ಯಾಗಾರ ವಿದ್ಯಾರಣ್ಯ ಶಾಲೆಯಲ್ಲಿ ನಡೆಯಿತು. ಈ ಕಾರ್ಯಾಗಾರವು ವಿದ್ಯಾರಣ್ಯ ಶಾಲೆಯ ಸಹಕಾರದೊಂದಿಗೆ ಆರು ವಾರಗಳು ನಡೆಯಲಿದ್ದು, ಸಂಪನ್ಮೂಲ ವ್ಯಕ್ತಿಗಳು ಮಕ್ಕಳಿಗೆ ತರಬೇತಿ ನೀಡಲಿದ್ದಾರೆ. ಕಾರ್ಯಕ್ರಮ ಉದ್ಘಾಟಿಸಿದ ಎನ್.ಎಂ.ಎಂ.ಎಸ್ ಜಿಲ್ಲಾ ನೋಡೆಲ್ ಆಗಿರುವ ಚಂದ್ರ ನಾಯ್ಕ್ ಮಾತನಾಡುತ್ತಾ “ಮಕ್ಕಳು ಈ ಕಾರ್ಯಾಗಾರದ ಸದುಪಯೋಗವನ್ನು ಪಡೆದುಕೊಂಡು ಹೆಚ್ಚು ಮಕ್ಕಳು ಆಯ್ಕೆಯಾಗಿ ತಾಲೂಕಿಗೆ ಕೀರ್ತಿ ತರಬೇಕು. ಪ್ರಸ್ತುತ ವರ್ಷ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಆರ್ಥಿಕವಾಗಿ ಬಡತನವನ್ನು ಹೊಂದಿರುವ ಪ್ರತಿಭಾನ್ವಿತ ಮಕ್ಕಳು ಬಡತನದ ಕಾರಣವಾಗಿ ಶಿಕ್ಷಣವನ್ನು ಅರ್ಧಕ್ಕೆ ನಿಲ್ಲಿಸದೆ ಮುಂದುವರಿಸಬೇಕು ಎನ್ನುವ ಉದ್ದೇಶದಿಂದ ಸರ್ಕಾರ ಈ ಎನ್.ಎಂ.ಎಂ.ಎಸ್ ಯೋಜನೆಯನ್ನು ಜಾರಿಗೆ ತಂದಿದ್ದು, ಇಂದು ಈ ಯೋಜನೆಯಿಂದ ಹಲವಾರು ಪ್ರತಿಭಾನ್ವಿತ ಮಕ್ಕಳು ಶಿಕ್ಷಣವನ್ನು ಮುಂದುವರಿಸಲು…
ವಿದ್ಯಾಗಿರಿ: ದೌರ್ಜನ್ಯ ಕುರಿತು ಕೇವಲ ನೊಂದ ಮಹಿಳೆ ಮಾತ್ರವಲ್ಲ, ಅವರ ಪರವಾಗಿ ಯಾರು ಬೇಕಾದರೂ ದೂರು ನೀಡಬಹುದು. ಮಹಿಳೆ ಮೇಲೆ ಮಹಿಳೆಯೇ ದೌರ್ಜನ್ಯ ಎಸಗಿದರೂ ಅಪರಾಧ ಎಂದು ಹೊಳ್ಳ ಆ್ಯಂಡ್ ಹೊಳ್ಳ ಅಸೋಸಿಯೇಟ್ಸ್ನ ಮೇಘನಾ ಆರ್. ಬಲ್ಲಾಳ್ ಹೇಳಿದರು. ಆಳ್ವಾಸ್ (ಸ್ವಾಯತ್ತ) ಕಾಲೇಜು ಆಂತರಿಕ ಗುಣಮಟ್ಟ ಮೌಲ್ಯಮಾಪನ ಘಟಕ (ಐಕ್ಯೂಎಸಿ), ಲೈಂಗಿಕ ದೌರ್ಜನ್ಯ ತಡೆ ಘಟಕ, ಸಮಾಜಕಾರ್ಯ ವಿಭಾಗವು ಬೋಧನಾಂಗ ಅಭಿವೃದ್ಧಿ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡ ‘ ಸಂಸ್ಥೆಯ ಆವರಣದಲ್ಲಿ ಜವಾಬ್ದಾರಿಯುತ ಸಂಸ್ಕೃತಿಯ ನಿರ್ಮಾಣ’ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಮೂಡುಬಿದಿರೆ ಮನೆತನದ ಅಬ್ಬಕ್ಕ ನಮ್ಮ ಹೆಮ್ಮೆ. ಆಕೆಯ ಸಾಧನೆ ಎಲ್ಲರಿಗೂ ಮಾದರಿಯಾಗಬೇಕು ಎಂದರು. ದೇಶದಲ್ಲಿ 1990 ಬಳಿಕ ಮಹಿಳೆಯರು ಕೆಲಸಕ್ಕೆ ಬರುವ ಸಂಖ್ಯೆ ಹೆಚ್ಚಾಯಿತು. ರಾಜಸ್ಥಾನದ ಭವಾರಿ ದೇವಿ ಅತ್ಯಾಚಾರಕ್ಕೆ ಒಳಗಾದ ಸಂದರ್ಭದಲ್ಲಿ ವಿಶಾಖ ಸಂಸ್ಥೆಯ ಹೋರಾಟದ ಫಲವಾಗಿ ಕಾಯಿದೆ ರೂಪಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿತು. ಹೀಗಾಗಿ ‘ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ (ತಡೆ, ಮುಂಜಾಗ್ರತೆ…
ರಾಜ್ಯ ಮಟ್ಟದ 14 ವರ್ಷ ವಯೋಮಿತಿಯ ಪ್ರಾಥಮಿಕ ಬಾಲಕ ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟ ಆಳ್ವಾಸ್ ಶಾಲೆಗೆ 11 ಪದಕದೊಂದಿಗೆ ತಂಡ ಪ್ರಶಸ್ತಿ
ಮೂಡುಬಿದಿರೆ : ಶಾಲಾ ಶಿಕ್ಷಣ ಮತ್ತು ಸಾಕ್ಷಾರತಾ ಇಲಾಖೆ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಉಪನಿರ್ದೇಶಕರ ಕಛೇರಿ ಶಾಲಾ ಶಿಕ್ಷಣ ಇಲಾಖೆ ಶಿವಮೊಗ್ಗ ಜಿಲ್ಲೆ, ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ 14 ವರ್ಷ ವಯೋಮಿತಿಯ ಪ್ರಾಥಮಿಕ ಬಾಲಕ ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಶಾಲೆಯ ಕ್ರೀಡಾಪಟುಗಳು ಒಟ್ಟು 03 ಚಿನ್ನ, 06 ಬೆಳ್ಳಿ ಮತ್ತು 02 ಕಂಚಿನ ಪದಕಗಳೊಂದಿಗೆ 11 ಪದಕದೊಂದಿಗೆ 14 ವರ್ಷ ವಯೋಮಿತಿಯ ಬಾಲಕ ಬಾಲಕಿಯರ ತಂಡ ಪ್ರಶಸ್ತಿಯನ್ನು ಪಡೆದುಕೊಂಡಿತು. ಫಲಿತಾಂಶ: ಪ್ರೌಢ ಶಾಲಾ 14 ವರ್ಷ ವಯೋಮಿತಿಯ ಬಾಲಕ ಮತ್ತು ಬಾಲಕಿಯರ ಫಲಿತಾಂಶ : ಅಮೂಲ್ಯ – 80ಮೀ ಹರ್ಡಲ್ಸ್ (ಪ್ರಥಮ), 4*100ಮೀ ರಿಲೇ (ದ್ವಿತೀಯ), ಪ್ರೇಕ್ಷಾ ಎಲ್ ಗೌಡ – ಎತ್ತರ ಜಿಗಿತ (ದ್ವಿತೀಯ), ಅನುಶ್ರೀ – 600ಮೀ (ದ್ವಿತೀಯ), ಕೌಶಿಕ್ – 80ಮೀ ಹರ್ಡಲ್ಸ್ (ಪ್ರಥಮ), ಉದ್ದ ಜಿಗಿತ (ತೃತೀಯ), ಲೋಹಿತ್ ಗೌಡ – ಗುಂಡು…
ಸಮಾಜದ ಋಣ ತೀರಿಸುವ ಕಾರ್ಯವನ್ನು ಪ್ರತಿಯೊಬ್ಬರೂ ಮಾಡಬೇಕು. ಅದು ಶಿಕ್ಷಣ, ಸಮಾಜ ಸೇವೆ, ಸಾಂಸ್ಕೃತಿಕ ರಂಗವೇ ಇರಬಹುದು. ಆದರೆ ಯಕ್ಷಗಾನ, ಜಾನಪದ ಕಲೆಗಳಿಗೆ ಪ್ರೋತ್ಸಾಹ ನೀಡಿ, ಸಾಧಕರನ್ನು ಗುರುತಿಸಿ ಅಭಿನಂದಿಸುವುದರಲ್ಲಿ ಸಿಗುವ ಆತ್ಮ ತೃಪ್ತಿ ಇನ್ನಾವುದೇ ಸೇವೆಯಿಂದ ಸಿಗುವುದು ದುರ್ಲಭ. ಹೀಗಾಗಿ ಕಲಾ ಸೇವೆಯಲ್ಲಿಯೇ ಬದುಕಿನ ಸಾರ್ಥಕ್ಯವನ್ನು ಕಂಡುಕೊಂಡಿದ್ದೇನೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಹೆಬ್ರಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆದ ಯಕ್ಷಲೋಕ ಹೆಬ್ಬೇರಿ ಸಂಸ್ಥೆಯ ೫ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದರು. ನಾವು ಸಮಾಜದ ಋಣ ತೀರಿಸುವ ಕೆಲಸ ಮಾಡಬೇಕು. ಅದೇ ಉದ್ದೇಶದಿಂದ ಹಲವಾರು ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದೇನೆ. ಯಕ್ಷಗಾನ ಆಸಕ್ತಿ ನನಗೆ ವರವಾಗಿ ಪರಿಣಮಿಸಿದೆ. ೬೦ರ ವರ್ಷದಲ್ಲಿ ಯಕ್ಷಗಾನವನ್ನು ಗುರು ಸಂಜೀವ ಸುವರ್ಣರ ಬಳಿ ಕಲಿತು ೪೦೦ಕ್ಕೂ ಅಧಿಕ ಪ್ರದರ್ಶನ ಮಾಡಿದ್ದೇನೆ. ಯಕ್ಷಲೋಕದ ಗುರು ಸುಬ್ರಹ್ಮಣ್ಯ ಪ್ರಸಾದ್ ಅವರೊಡನೆಯೂ ಪಾತ್ರವನ್ನು ಮಾಡಿದ ಸಂತೃಪ್ತಿಯಿದೆ. ಈ…
ಬಾಗಲಕೋಟೆಯಲ್ಲಿ ನವೆಂಬರ್ 17 ರಂದು ನಡೆಯಲಿರುವ 71ನೇ ಅಖಿಲ ಭಾರತ ಸಹಕಾರಿ ಸಪ್ತಾಹ ಸಮಾರಂಭದಲ್ಲಿ ದ.ಕ ಹಾಲು ಒಕ್ಕೂಟ ನಿಯಮಿತ ಮಂಗಳೂರು ಇದರ ನಿರ್ದೇಶಕರು ಹಾಗೂ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ನಿ ಉಪ್ಪುಂದ ಇದರ ಅಧ್ಯಕ್ಷರಾದ ಎಸ್ ಪ್ರಕಾಶ್ಚಂದ್ರ ಶೆಟ್ಟಿಯವರು ರಾಜ್ಯ ಮಟ್ಟದ ಸಹಕಾರಿ ರತ್ನ ಪ್ರಶಸ್ತಿಯನ್ನು ಕರ್ನಾಟಕ ಸರ್ಕಾರದಿಂದ ಸ್ವೀಕರಿಸಲಿದ್ದಾರೆ.















