Author: admin

ವಿದ್ಯಾಗಿರಿ: ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ಹಿರಿಯ ವಿದ್ಯಾರ್ಥಿನಿ ಕ್ಯಾಪ್ಟನ್ ಶರಣ್ಯಾ ರಾವ್ ಎಚ್ ಈ ಬಾರಿಯ ಗಣರಾಜ್ಯೋತ್ಸವದಲ್ಲಿ ಭೂಸೇನೆಯ ‘ನಾರಿಶಕ್ತಿ’ ತಂಡವನ್ನು ಕರ್ತವ್ಯ ಪಥ್‍ನಲ್ಲಿ ಮುನ್ನಡೆಸಲಿದ್ದಾರೆ. ಗಣರಾಜ್ಯೋತ್ಸವ ಪರೇಡ್‍ನಲ್ಲಿ ಪಾಲ್ಗೊಳ್ಳುವ ಗೌರವವು ದೇಶದ ಅತ್ಯುನ್ನತ ಸೇವೆ ಸಲ್ಲಿಸುವ ಅವಕಾಶಗಳಲ್ಲಿ ಒಂದಾಗಿದೆ. ಕೊಡಗು ಜಿಲ್ಲೆಯ ವಿರಾಜಪೇಟೆಯ ಕುಕ್ಕಲೂರು ಗ್ರಾಮದ ಹರೀಶ್ ರಾವ್ ಮತ್ತು ಮೈತ್ರಿ ರಾವ್ ಪುತ್ರಿ ಶರಣ್ಯಾ ರಾವ್ 2020-21ರಲ್ಲಿ ಆಳ್ವಾಸ್‍ನ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದಲ್ಲಿ ಪ್ರಥಮ ರ್ಯಾಂಕ್ ಪಡೆದು ಉತ್ತೀರ್ಣರಾಗಿದ್ದರು. ಬಾಸ್ಕೆಟ್ ಬಾಲ್ ಆಟಗಾರ್ತಿಯಾಗಿ ರಾಷ್ಟ್ರಮಟ್ಟದಲ್ಲಿ ಪ್ರಶಸ್ತಿಗಳನ್ನು ಗಳಿಸಿದ್ದ ಅವರು, ಆಳ್ವಾಸ್  ಶಿಕ್ಷಣ ಪ್ರತಿಷ್ಠಾನದ ಮಹತ್ವಾಕಾಂಕ್ಷಿ ಯೋಜನೆಯಾದ ಕ್ರೀಡಾ ದತ್ತು ಶಿಕ್ಷಣದ ವಿದ್ಯಾರ್ಥಿನಿಯಾಗಿದ್ದರು. ಮೂರು ವರ್ಷಗಳ ಹಿಂದೆ ಸೇನೆಗೆ ಆಯ್ಕೆಗೊಂಡ ಅವರು ಪ್ರಸ್ತುತ ಸೇನೆಯಲ್ಲಿ ಸೂಪರ್‍ನ್ಯೂಮರರಿ ಆಫೀಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕ್ಯಾ.ಶರಣ್ಯಾ ರಾವ್ ಸಾಧನೆಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ, ಟ್ರಸ್ಟಿ ವಿವೇಕ ಆಳ್ವ, ಪ್ರಾಚಾರ್ಯ ಡಾ ಕುರಿಯನ್ ಅಭಿನಂದಿಸಿದ್ದಾರೆ.…

Read More

ವಿದ್ಯಾಗಿರಿ (ಮೂಡುಬಿದಿರೆ): ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ನಡೆಸುವ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ, 29ನೇ ವರ್ಷದ ‘ಆಳ್ವಾಸ್ ವಿರಾಸತ್ 2023’  ಡಿ.14ರಿಂದ 17ರ ವರೆಗೆ ಮೂಡುಬಿದಿರೆಯ ಪುತ್ತಿಗೆ ಗ್ರಾಮದ ವಿವೇಕಾನಂದ ನಗರದ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ನಡೆಯಲಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ. ವೀರೇಂದ್ರ ಹೆಗ್ಗಡೆ ಶುಭಾಶೀರ್ವಾದೊಂದಿಗೆ ನಡೆಯುವ ವಿರಾಸತ್ ಅನ್ನು ದೇಶಕ್ಕಾಗಿ ದೇಹತ್ಯಾಗಿ ಮಾಡಿದ ವೀರಯೋದ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಅವರಿಗೆ ಅರ್ಪಣೆ ಮಾಡಲಾಗಿದೆ. ಮೊದಲ ದಿನವಾದ ಡಿ.14ರಂದು ಸಂಜೆ 5.30ಕ್ಕೆ ರಾಜ್ಯಪಾಲರಿಗೆ ಗೌರವ ರಕ್ಷೆ ನಡೆಯಲಿದೆ. ಬಳಿಕ 5.45ಕ್ಕೆ ರಾಜ್ಯಪಾಲರಾದ ಥಾವರ್‍ಚಂದ್ ಗೆಹ್ಲೋಟ್ ವಿರಾಸತ್ ಉದ್ಘಾಟಿಸುವರು. ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ. ವೀರೇಂದ್ರ ಹೆಗ್ಗಡೆ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಶಾಸಕರಾದ ಉಮನಾಥ ಎ.ಕೋಟ್ಯಾನ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ., ಮಾಜಿ ಸಚಿವ ಅಭಯಚಂದ್ರ ಜೈನ್, ಭಾರತ ಸ್ಕೌಟ್ ಗೈಡ್ಸ್ ರಾಜ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯಾ, ಕರ್ನಾಟಕ ಚಿತ್ರಕಲಾ ಪರಿಷತ್ ಅಧ್ಯಕ್ಷ ಡಾ.ಬಿ.ಎಲ್. ಶಂಕರ್,…

Read More

ಬಂಟರ ಯಾನೆ ನಾಡವರ ಮಾತೃಸಂಘದ ಅಧೀನದಲ್ಲಿರುವ ಶ್ರೀ ರಾಮಕೃಷ್ಣ ವಿದ್ಯಾರ್ಥಿನಿ ಭವನ ಅಮೃತ ಮಹೋತ್ಸವದ ಸಂಭ್ರಮದಲ್ಲಿದ್ದು, ಅಮೃತ ಮಹೋತ್ಸವದ ಉದ್ಘಾಟನೆ ಸೆ. ೨೪ರಂದು ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ ಮಾಲಾಡಿ ಅಜಿತ್ ಕುಮಾರ್ ರೈ ಕೊಡಿಯಲ್‌ಗುತ್ತು, ಕಾರ್ಯಕ್ರಮವನ್ನು ಶ್ರೀ ಕ್ಷೇತ್ರದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಉದ್ಘಾಟಿಸುವರು. ವಿಬಿಎಂಎಸ್ ಮಹಿಳಾ ಸೌಹಾರ್ದ ಸಹಕಾರಿ ಸಂಘವನ್ನು ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಸಮಾಜ ಕಲ್ಯಾಣ ಕಾರ್ಯಕ್ರಮಗಳಿಗೆ ಅದಮ್ಯ ಚೇತನ ಪ್ರತಿಷ್ಠಾನದ ಸಿಇಒ ತೇಜಸ್ವಿನಿ ಅನಂತ ಕುಮಾರ್, ಸ್ತ್ರೀ ಸಶಕ್ತಿಕರಣ ಯೋಜನೆಯನ್ನು ಉದ್ಯಮಿ ಸದಾಶಿವ ಶೆಟ್ಟಿ ಕನ್ಯಾನ, ಸುಜಾತ ಎಸ್. ಶೆಟ್ಟಿ, ಎಸ್‌ಆರ್‌ವಿ ಭವನದ ಧ್ವಾರ ಮತ್ತು ಪ್ರಯಾಣಿಕರ ತಂಗುದಾಣವನ್ನು ಬಂಟ್ಸ್ ಕತಾರ್ ಅಧ್ಯಕ್ಷ ಡಾ. ಪದ್ಮಶ್ರೀ ಆರ್. ಶೆಟ್ಟಿ ಉದ್ಘಾಟಿಸುವರು. ಸ್ಮರಣ ಸಂಚಿಕೆ ಅಮೃತ ಸಿರಿಯನ್ನು ಉದ್ಯಮಿ ಉಪೇಂದ್ರ ಶೆಟ್ಟಿ, ಪ್ರಗತಿ ಯು. ಶೆಟ್ಟಿ ಬಿಡುಗಡೆಗೊಳಿಸುವರು ಎಂದರು. ಈ ಸಂದರ್ಭದಲ್ಲಿ ಸಾಧಕಿಯರಾದ ವಿಧಾನ ಪರಿಷತ್…

Read More

ವಿದ್ಯಾಗಿರಿ: ‘ಹೆಣ್ಣು ಮಕ್ಕಳ ರಕ್ಷಣೆಯು ಭ್ರೂಣದಿಂದಲೇ ಆರಂಭಗೊಳ್ಳಬೇಕು’ ಎಂದು ಆಳ್ವಾಸ್ ಆರೋಗ್ಯ ಕೇಂದ್ರದ ಸ್ವ್ರೀರೋಗ ತಜ್ಞೆ ಡಾ ರೇವತಿ ಭಟ್ ಹೇಳಿದರು. ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ಅಂಗವಾಗಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾಗಿರಿ ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಬುಧವಾರ ಆಳ್ವಾಸ್ ಕಾಲೇಜಿನ ಸಮಾಜಕಾರ್ಯ ವಿಭಾಗವು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ‘ಹೆಣ್ಣು ಮಕ್ಕಳ ರಕ್ಷಣೆಗಾಗಿ ಆಂದೋಲನ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಹೆಣ್ಣು ಮಕ್ಕಳ ರಕ್ಷಣೆಗಾಗಿ ಜಾಗೃತಿಯ ಜೊತೆಗೆ ನಿರಂತರ ಕಾರ್ಯಕ್ರಮಗಳು ಅವಶ್ಯ. ಭ್ರೂಣದ ಲಿಂಗ ಪತ್ತೆ ಅಪರಾಧ ಎಂದರು. ಹೆಣ್ಣು ಇಲ್ಲದ ಸಮಾಜವನ್ನು ಊಹಿಸಲೂ ಸಾಧ್ಯವಿಲ್ಲ. ಆಕೆ ಸೃಷ್ಟಿಕರ್ತೆ. ಅದೇ ರೀತಿಯಲ್ಲಿ ಗಂಡು ಇಲ್ಲದೆಯೂ ಸಮಾಜ ಇಲ್ಲ ಎಂದ ಅವರು, ಹೆಣ್ಣು ಗಂಡು ಎಂಬ ಭೇದ ಅಥವಾ ತಾತ್ಸರವನ್ನು ಮಾಡಬಾರದು ಎಂದರು. ದಕ್ಷಿಣ ಕನ್ನಡ ಮುಂದುವರಿದಿದ್ದರೂ, ಇಲ್ಲಿನ ಹೆಣ್ಣು ಮಕ್ಕಳ ಲಿಂಗಾನುಪಾತವು ಆತಂಕ ಮೂಡಿಸುತ್ತದೆ. ಶಿಕ್ಷಣ ನೀಡುವ ಮೂಲಕ…

Read More

ವಿದ್ಯಾಗಿರಿ (ಮೂಡುಬಿದಿರೆ): ಸೈನಿಕ ಸವೆಸುವ ಜೀವನ, ನಾವೆಲ್ಲಾ ಸಾಧಿಸಿ ನಡೆಸುವ ಉತ್ಕ್ರುಷ್ಟ ಜೀವನಕ್ಕಿಂತಲೂ ಶ್ರೇಷ್ಠವಾದುದು ಹಾಗೂ ಅನುಕರಣೀಯ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ. ಗಣೇಶ್ ಕಾರ್ಣಿಕ್ ಹೇಳಿದರು. ಅವರು ಆಳ್ವಾಸ್ ಕಾಲೇಜು ಚಿಗುರು ವಿದ್ಯಾರ್ಥಿ ವೇದಿಕೆ ಶುಕ್ರವಾರ ಕಾಲೇಜಿನ ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಹಮ್ಮಿಕೊಂಡ ‘ಯೋಧನ ಮನ’ ಕಾರ್ಯಕ್ರಮದಲ್ಲಿ ಮಾತನಾಡಿದರು. ‘ಸಾಧಿಸಬೇಕು ಎಂಬ ಛಲ ಪ್ರತಿಯೊಬ್ಬರಲ್ಲಿ ಇರಬೇಕು. ಎಲ್ಲರಲ್ಲೂ ಗುರಿ ಸಾಧಿಸುವ ಛಲ ಇದ್ದಾಗ ದೇಶ ಯಶಸ್ಸು ಕಾಣಲು ಸಾಧ್ಯ’. ಉತ್ಸಾಹ ಇದ್ದಾಗ ಮಾತ್ರ ಬದುಕು ಸುಂದರವಾಗಲು ಸಾಧ್ಯ ಎಂದರು. ‘ಗುರಿ ಸಾಧಿಸುವ ನಿಟ್ಟಿನಲ್ಲಿ ಛಲ ಮುಖ್ಯ. ಇದನ್ನು ನಾವು ಯೋಧರಲ್ಲಿ ಕಾಣಬಹುದು. ಅಂತಹ ಶಿಸ್ತುಬದ್ಧ ಬದುಕು ರೂಢಿಸಿಕೊಳ್ಳಬೇಕು’ ಎಂದರು. ಈ ದೇಶದ ಪ್ರತಿಯೊಬ್ಬ ಪ್ರಜೆಯು ಹಗ್ಗ ಜಗ್ಗಾಟದಲ್ಲಿರುವ ಎರಡು ಗುಂಪುಗಳಂತೆ ವಿರುದ್ಧ ದಿಕ್ಕಿನಲ್ಲಿ ಹಗ್ಗವನ್ನು ಜಗ್ಗದೆ, ರಥವನ್ನು ಎಲ್ಲರೂ ಸೇರಿ ಭಕ್ತಿಯಿಂದ ಒಂದೆಡೆಗೆ ಒಯ್ಯುವಂತೆ, ನಮ್ಮ ಮನಸ್ಥಿತಿ ಹೊಂದಿರಬೇಕು ಎಂದರು . ನಾವೆಲ್ಲ ಜೊತೆಯಾಗಿ ಒಂದೆ ಮನಸ್ಸಿನಿಂದ,…

Read More

ಏನೇ ತಿನ್ನಲೀ ಮೊದಲು ನಾವು ರುಚಿಯನ್ನು ಇಷ್ಟ ಪಡುತ್ತೇವೆ. ಬಳಿಕ ಆರೋಗ್ಯದ ಬಗ್ಗೆ ಯೋಚಿಸುತ್ತೇವೆ. ಆರೋಗ್ಯಕರ ಎಂದುಕೊಂಡಿರುವ ಎಲ್ಲಾ ಆಹಾರಗಳು ಪರಿಪೂರ್ಣವಾಗಿರುವುದಿಲ್ಲ. ಪ್ರತಿಯೊಂದರಲ್ಲೂ ಒಂದಲ್ಲ ಒಂದು ರೀತಿಯ ಕೊರತೆಗಳು ಇರುತ್ತವೆ. ಜತೆಗೆ ಒಂದಷ್ಟು ಕಶ್ಮಲಗಳೂ ದೇಹ ಸೇರುತ್ತವೆ. ಇದರಿಂದ ಆರೋಗ್ಯ, ಸೌಂದರ್ಯ ಹಾಳಾಗುವ ವಿಚಾರ ಎಲ್ಲರಿಗೂ ಗೊತ್ತೇ ಇದೆ. ಇದನ್ನು ನಿರ್ಲಕ್ಷ್ಯಸಿದರೆ ಕ್ಯಾನ್ಸರ್‌ನಂಥ ಮಾರಕ ಕಾಯಿಲೆಗೂ ಕಾರಣವಾಗುತ್ತದೆ. ಹೀಗಾಗಿ ದೇಹದಲ್ಲಿರುವ ಕಶ್ಮಲವನ್ನು ಹೊರ ಹಾಕಲೇಬೇಕು. ಇದಕ್ಕೆ ಕೆಲವು ಪಾನೀಯಗಳು ಹೆಚ್ಚು ಉಪಯುಕ್ತ. ಸೇಬು, ಬೀಟ್ರೂಟ್‌, ಕ್ಯಾರೆಟ್‌ನೊಂದಿಗೆ ಅಗತ್ಯವಿದ್ದಷ್ಟು ನೀರು ಸೇರಿಸಿ ಜ್ಯೂಸ್‌ ಮಾಡಿ ಕುಡಿದರೆ ದೇಹಾರೋಗ್ಯ ವೃದ್ಧಿಸುವುದು ಮಾತ್ರವಲ್ಲ ತ್ವಚೆಯ ಕಾಂತಿಯೂ ಹೆಚ್ಚಾಗುತ್ತದೆ. ಈ ಜ್ಯೂಸ್‌ಗೆ ಸಕ್ಕರೆ ಬಳಸಬಾರದು. ಸ್ವಲ್ಪ ಜೇನು ಸೇರಿಸಿ ಕುಡಿಯಬಹುದು. ಇದು ದೇಹದಲ್ಲಿರುವ ಕಶ್ಮಲವನ್ನು ಹೊರಹಾಕುತ್ತದೆ. ಸೌತೆಕಾಯಿ, ಪುದೀನಾ, ನಿಂಬೆ ರಸದೊಂದಿಗೆ ನೀರು ಹಾಕಿ ತಯಾರಿಸುವ ಜ್ಯೂಸ್‌ ಕೂಡ ದೇಹದಲ್ಲಿ ನೀರಿನಾಂಶವನ್ನು ರಕ್ಷಿಸುತ್ತದೆ. ತ್ವಚೆಯ ಆರೋಗ್ಯ ಕಾಪಾಡುತ್ತದೆ ಮತ್ತು ಕಶ್ಮಲಗಳನ್ನು ಹೊರಹಾಕಲು ಸಹಾಯಮಾಡುತ್ತದೆ. ಹುರಿಗಡಲೆ ದೇಹದಲ್ಲಿರುವ ಕಶ್ಮಲವನ್ನು…

Read More

ಒಂದು ಕಾಲದಲ್ಲಿ ಬಂಟರಿಗೆ ಕೃಷಿಯೇ ಆಧಾರವಾಗಿತ್ತು. ಕೂಡು ಕುಟುಂಬದೊಂದಿಗೆ ಪ್ರೀತಿ ಬಾಂಧವ್ಯದೊಂದಿಗೆ ನೆಮ್ಮದಿಯ ಜೀವನ ನಡೆಸುತ್ತಿದ್ದ ಬಂಟರು ಬದಲಾದ ಕಾಲಘಟ್ಟದಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಬದುಕಲಾರಭಿಸಿದರು. ಕೋಲ, ನೇಮ ಬಲಿ ಮೊದಲಾದ ಆಚರಣೆಗಳಿಂದ ನಮ್ಮ ಸಂಸ್ಕೃತಿ ಪರಂಪರೆಯನ್ನು ಉಳಿಸಿಕೊಂಡು ಬಂದಿರುವ ಬಂಟರು ಮುಂದೆಯೂ ಇದನ್ನು ಉಳಿಸಿಕೊಂಡು ಹೋಗಬೇಕಾಗಿದೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ ತಿಳಿಸಿದರು. ಸುರತ್ಕಲ್ ಗೋವಿಂದ ದಾಸ ಕಾಲೇಜ್ ನ ಮೈದಾನದಲ್ಲಿ ಬಂಟರ ಸಂಘ (ರಿ,) ಸುರತ್ಕಲ್ ಬಂಟರ ಯಾನೆ ನಾಡವರ ಮಾತೃ ಸಂಘ ಮತ್ತು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ನಡೆದ ಬಂಟರ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಬಂಟರಲ್ಲಿನ ಕೂಡು ಕುಟುಂಬ ಇಂದು ಕಡಿಮೆಯಾದರೂ ಇಂತಹ ಕ್ರೀಡಾಕೂಟಗಳನ್ನು ಬಂಟರ ಸಂಘಗಳು ಆಯೋಜಿಸುವಾಗ ನಾವು ಒಂದೇ ಸೂರಿನಡಿ ಸೇರಿದಾಗ ಪ್ರೀತಿ ಬಾಂಧವ್ಯ ಹುಟ್ಟುತ್ತದೆ. ಇಂತಹ ಕಾರ್ಯಕ್ರಮ‌ ನಿರಂತರವಾಗಿ ನಡೆಯಲಿ. ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದವರು ತಿಳಿಸಿದರು. ಬಂಟರ ಯಾನೆ…

Read More

ನಮ್ಮ ಬಂಟ ಜನಾಂಗದ ವ್ಯಕ್ತಿಯೋರ್ವ ಉತ್ತಮ ಅವಕಾಶಗಳನ್ನು ಅರಸುತ್ತಾ ವಿಶ್ವದ ಯಾವ ಮೂಲೆಗೆ ಹೋಗಿ ಅಲ್ಲಿ ನೆಲೆ ನಿಂತು ತಮ್ಮ ಉದ್ಯೋಗವಿರಲಿ, ವ್ಯಾಪಾರ ವ್ಯವಹಾರಗಳಿರಲಿ ಅವರು ತಮ್ಮ ಜನ್ಮಭೂಮಿ ಹಾಗೂ ಜಾತಿ ವಿಶೇಷತೆಗಳ ಪ್ರತ್ಯೇಕತೆಯನ್ನು ಉಳಿಸಿಕೊಂಡು ವಿವಿಧ ಕ್ಷೇತ್ರಗಳಲ್ಲಿ ತಮ್ಮ ವಿಶಿಷ್ಟ ಪ್ರತಿಭಾ ಸಾಮರ್ಥ್ಯ, ಕಾರ್ಯದಕ್ಷತೆ, ಕಠಿಣ ಪರಿಶ್ರಮಗಳಿಂದ ವಿಶ್ವದ ಉದ್ದಗಲ ತಮ್ಮ ಕೀರ್ತಿಯನ್ನು ಪಸರಿಸಿದ್ದಾರೆ. ಅಂಥಹ ವಿಶೇಷ ವ್ಯಕ್ತಿತ್ವಗಳ ಸಾಲಿಗೆ ಸೇರುವ ಸಾಧಕರು ಶ್ರೀ ದೀಪಕ್ ಶೆಟ್ಟಿ ಚುಚ್ಚಿ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಅರೆಶಿರೂರು ಗ್ರಾಮದ ಚುಚ್ಚಿ ಎಂಬ ಹಳ್ಳಿಯಲ್ಲಿ 1971ರಲ್ಲಿ ಜನಿಸಿದ ದೀಪಕ್ ಶೆಟ್ಟರು ಇಂಜಿನಿಯರಿಂಗ್ ಪದವಿಧರು. ವಿಜಯಾ ಬ್ಯಾಂಕ್ ನ ಚೀಫ್ ಮ್ಯಾನೇಜರ್ ಸದಾನಂದ ಕೆ ಶೆಟ್ಟಿ ಹಾಗೂ ಸುಶೀಲಾ ಸದಾನಂದ ಶೆಟ್ಟಿ ದಂಪತಿಯರ ಸುಪುತ್ರ. ಸಕಲೇಶಪುರ ಬಂಟರ ಸಂಘದ ಮಾಜಿ ಅಧ್ಯಕ್ಷ ಹಾಗೂ ಲಯನ್ಸ್ ಕ್ಲಬ್ ಮಾಜಿ ಗವರ್ನರ್ ಬಿ.ವಿ ಹೆಗ್ಡೆ ಮತ್ತು ಕೊಳ್ಕೆಬೈಲ್ ಮಾಲತಿ ಹೆಗ್ಡೆ ದಂಪತಿಯ ಪುತ್ರಿ ಅಕ್ಷಯಾ ಶೆಟ್ಟಿ ಅವರನ್ನು…

Read More

ಮುಂಬಾಯಿ , ಸೆ.18: ವಲಸೆ ಬಂದ ಜನರಲ್ಲಿ ನಮ್ಮವರು ಅನ್ನುವ ಭಾವನೆ ಹೆಚ್ಚಾಗಿರುತ್ತದೆ. ಪರವೂರಲ್ಲಿ ಎಲ್ಲರನ್ನೂ ತಮ್ಮವರನ್ನಾಗಿಸಿ ಬಾಳುವ ಮೂಲಕ ಬಂಧುತ್ವದ ಕೊರತೆ ನೀಗಿಸುತ್ತಾ ಎಲ್ಲರೂ ಬಂಧುಗಳಾಗುತ್ತಾರೆ. ಕರ್ಮಭೂಮಿಯಲ್ಲಿ ಬದುಕು ಕಟ್ಟಿಕೊಳ್ಳುವ ಜೊತೆಗೆ ಮಂದಿರವನ್ನೂ ಕಟ್ಟಿಕೊಂಡಿರುವುದು ಪುಣ್ಯದ ಕೆಲಸವಾಗಿದೆ. ದೇವಸ್ಥಾನ ಕಟ್ಟುವ ಭಾಗ್ಯ ಎಲ್ಲರಿಗೂ ಸಿಗದು ಇಂತಹ ಯೋಗ ಬರೇ ಭಾಗ್ಯವಂತರಿಗೆ ಮಾತ್ರ ಪ್ರಾಪ್ತಿಸುವುದು. ಶ್ರೀಕೃಷ್ಣನು ಸತ್ಯ, ಧರ್ಮ, ನ್ಯಾಯ, ನೀತಿದಾಯಕನಾಗಿದ್ದು ಈ ಬದುಕೇ ಶ್ರೀಕೃಷ್ಣನಿಗೆ ಪ್ರೀತಿದಾಯಕ. ಕೃಷ್ಣನು ಸರ್ವವ್ಯಾಪಿ, ಸರ್ವಸ್ಪರ್ಶಿ ಆಗಿದ್ದು ಕೃಷ್ಣನ ಲೀಲೆಯಲ್ಲಿ ಎಂದೂ ದುಃಖವಿಲ್ಲ ಆದರೆ ಕಷ್ಟವಿದೆ. ದುಃಖ ಮತ್ತು ಕಷ್ಟಗಳಿಗೆ ವ್ಯತ್ಯಾಸವಿದ್ದು ಕಷ್ಟಗಳು ಜೀವನ ಪರೀಕ್ಷೆಗಾಗಿ ಬರುತ್ತಿದ್ದು ಇದು ಪವಿತ್ರಗ್ರಂಥ ಭಗವದ್ಗೀತೆ ಓದಿದಾಗ ನಿವಾರಣೆಯಾಗುವುದು. ಉಡುಪಿಯಲ್ಲಿದ್ದಂತಹ ಕೃಷ್ಣನನ್ನು ಮುಂಬಯಿಯಲ್ಲೂ ಕಾಣುವಂತೆ ಮಾಡಿದ ತಾವೆಲ್ಲರೂ ಧನ್ಯರು ಎಂದು ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ತಿಳಿಸಿದರು. ಬಾಂಬೇ ಸೌತ್ ಕೆನರಾ ಬ್ರಾಹ್ಮೀಣ್‍ಸ್ ಅಸೋಸಿಯೇಶನ್ ಮತ್ತು ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್ ಸಂಸ್ಥೆಗಳ ಪುನರಾಭಿವೃದ್ಧಿಯೊಂದಿಗೆ ನವೀಕೃತ ಗೋಕುಲ ಮಂದಿರಕ್ಕೆ ಇಂದಿಲ್ಲಿ…

Read More

ಕುಂದಾಪುರ ಮುಖ್ಯರಸ್ತೆಯ ಗಾಂಧಿ ಮೈದಾನದ ಎದುರುಗಡೆ ಸುಸಜ್ಜಿತವಾಗಿ “ಯುವ ಮನೀಶ್ ಬ್ಯುಸಿನೆಸ್ ಹೋಟೆಲ್” ಸಜ್ಜುಗೊಂಡಿದ್ದು, ಇದೇ ಬರುವ ಭಾನುವಾರ ದಿನಾಂಕ 28.01.2024 ರಂದು ಪೂರ್ವಾಹ್ನ 10.30 ಕ್ಕೆ ಸರಿಯಾಗಿ ಉದ್ಘಾಟನಾ ಸಮಾರಂಭವು ಗಣ್ಯಾತಿ ಗಣ್ಯರ ಉಪಸ್ಥಿತಿಯಲ್ಲಿ ನೆರವೇರಲಿರುವುದು. ಘನ ಕರ್ನಾಟಕ ಸರಕಾರದ ಲೋಕೋಪಯೋಗಿ ಸಚಿವ ಆದರಣೀಯ ಶ್ರೀ ಸತೀಶ್ ಜಾರಕಿಹೊಳಿ ಅವರ ದಿವ್ಯಹಸ್ತದಿಂದ ಉದ್ಘಾಟನೆಗೊಳ್ಳಲಿದೆ. ಈ ಕಾರ್ಯಕ್ರಮದಲ್ಲಿ ಗುಬ್ಬಲಗುಡ್ಡ ಕೆಂಪಯ್ಯ ಸ್ವಾಮಿ ಮಠ ಘಟಪ್ರಭಾ ಇಲ್ಲಿನ ಪೂಜ್ಯ ಡಾ. ಮಲ್ಲಿಕಾರ್ಜುನ ಸ್ವಾಮೀಜಿ ಆಶೀರ್ವಚನ ನೀಡಲಿದ್ದು, ಕರ್ನಾಟಕ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ದಿವ್ಯಾಂಗ, ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ ಕರ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಕಾನೂನು ಸಂಸದೀಯ ಹಾಗೂ ಪ್ರವಾಸೋದ್ಯಮ ಸಚಿವ ಎಚ್ ಕೆ ಪಾಟೀಲ್ ಇವರು ದೀಪ ಪ್ರಜ್ವಲನೆ ಮಾಡಲಿದ್ದು, ಅರಬಾವಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿಯವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಗೌರವ ಅತಿಥಿಗಳಾಗಿ ಸರ್ವ ಶ್ರೀ ಪ್ರತಾಪ್ ಚಂದ್ರ ಶೆಟ್ಟಿ ಮಾಜಿ…

Read More