Author: admin
ಇಂದಿನ ವಿವಾಹಗಳು ತರಕಾರಿಗಳಂತೆ ಆಗಿದ್ದು, ಮಾರುಕಟ್ಟೆಯಿಂದ ಖರೀದಿ ಮಾಡುವಾಗ ಎಲ್ಲವೂ ತಾಜಾವಾಗಿಯೇ ಇರುತ್ತದೆ. ಆದರೆ ದಿನ ಕಳೆದ ಹಾಗೆ ಕೊಳೆತು ನಾರಲು ಪ್ರಾರಂಭವಾಗುತ್ತವೆ. ಬಾಳಿಕೆ ಬಾರದ ಸಂಬಂಧಗಳು! ಒಟ್ಟಿನಲ್ಲಿ ಹೇಳುವುದಾದರೆ ಮೂರು ಗಂಟಿನ ನಂಟಿಗೆ ಮೂರು ಕಾಸಿನ ಕಿಮ್ಮತ್ತು ಇಲ್ಲದಂತಾಗಿದೆ. ಪ್ರಸ್ತುತ ನಮ್ಮ ದೇಶದಲ್ಲಿ ನಿರುದ್ಯೋಗಕ್ಕಿಂತ ಹೆಚ್ಚಾಗಿ ಈ ಸಮಸ್ಯೆಯೇ ಕಾಡುತ್ತಿದೆ ಎಂದರೆ ಅತಿಶಯೋಕ್ತಿಯಾಗದು. ಈ ಸಮಸ್ಯೆಗೆ ಕಾರಣ ಹುಡುಕಲು ಹೊರಟರೆ ಹಲವಾರು ಕಾರಣಗಳು ಬಿಚ್ಚಿಕೊಳ್ಳುತ್ತವೆ. ಆದರೆ ಪ್ರತಿಯೊಂದು ಕಾರಣವೂ ಬಾಲಿಷದಂತೆ ಭಾಸವಾಗುತ್ತದೆ ವಿನಃ ಯಾವುದೂ ಗಂಭೀರವಾದದ್ದು ಎಂದು ಅನಿಸುವುದೇ ಇಲ್ಲ. ಮುಂದೊಂದು ದಿನ ಇದರ ಪರಿಣಾಮದಿಂದ ಮದುವೆಯೇ ಬೇಡ ಎಂಬ ಮನಸ್ಥಿತಿ ಬಹುತೇಕರಲ್ಲಿ ಮೂಡಿದರು ಯಾವುದೇ ಸಂದೇಹವಿಲ್ಲ. ಪ್ರತಿಯೊಂದು ಸಂಬಂಧಗಳ ಭದ್ರ ಬುನಾದಿಯೇ ನಂಬಿಕೆ. ಅಡಿಪಾಯ ಭದ್ರವಾಗಿದ್ದರೆ ಆ ಕಟ್ಟಡ ಸುರಕ್ಷಿತವಾಗಿರುತ್ತದೆ. ಅಂತೆಯೇ ಸಂಬಂಧಗಳ ನಡುವೆ ನಂಬಿಕೆ ಎಂಬ ಅಡಿಪಾಯ ಗಟ್ಟಿಯಾಗಿದ್ದರೆ ಆ ಸಂಬಂಧವು ಕಟ್ಟಡದಂತೆಯೇ ಗಟ್ಟಿಯಾಗಿರುತ್ತದೆ. ಆದರೆ ಇತ್ತೀಚಿಗೆ ಯಾಕೋ ನಂಬಿಕೆ ಪ್ರತಿಯೊಂದು ಸಂಬಂಧಗಳ ನಡುವೆಯೂ ಕುಸಿದು ಬೀಳುತ್ತಿದೆ…
ಪಣಂಬೂರು ಬೀಚ್ ಬಳಿಕ ಕುಂದಾಪುರದ ತ್ರಾಸಿಯ ಕಡಲ ಕಿನಾರೆಯು ರಾಜ್ಯದ ಎರಡನೇ ‘ಸ್ಕೈ ಡೈನಿಂಗ್’ (ಗಗನದಲ್ಲಿ ಊಟ) ತಾಣವಾಗಲಿದೆ. ನೆಲ ಮಟ್ಟದಿಂದ ಸುಮಾರು 60-70 ಅಡಿ ಎತ್ತರದಲ್ಲಿ ತ್ರಾಸಿ ಮರವಂತೆ ಕಡಲು ಸೌಪರ್ಣಿಕಾ ನದಿ ಮಧ್ಯೆ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯ ಅತ್ಯದ್ಭುತ ಸೊಬಗನ್ನು ಕಣ್ತುಂಬಿಕೊಳ್ಳುವ ಜತೆಗೆ, ರುಚಿಕರವಾದ ತಿನಿಸುಗಳನ್ನು ಸವಿಯುವ ಅವಕಾಶ ಇದಾಗಿದೆ. ಉಡುಪಿ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯಿಂದ ಕಾರ್ಯಾದೇಶ ನೀಡಲಾಗಿದ್ದು, ಅದಕ್ಕೆ ಬೇಕಾದ ಅನುಮತಿ, ಸುರಕ್ಷೆ ಕ್ರಮಗಳ ಪರಿಶೀಲನೆಯೂ ಆಗಿದೆ. ಇದಕ್ಕೆ ಅಗತ್ಯ ಸಿದ್ಧತೆಗಳೂ ನಡೆಯುತ್ತಿದ್ದು, 15-20 ದಿನಗಳೊಳಗೆ ಈ ‘ಸ್ಕೈ ಡೈನಿಂಗ್’ ಆರಂಭಗೊಳ್ಳುವ ಸಾಧ್ಯತೆಯಿದೆ. ಇದರಿಂದಾಗಿ ತ್ರಾಸಿ ಮರವಂತೆ ಬೀಚ್ ಮತ್ತಷ್ಟು ಆಕರ್ಷಣೀಯವಾಗಲಿದೆ. ಟೀಮ್ ಮಂತ್ರಾಸ್ ಇಂಟರ್ನ್ಯಾಶನಲ್ ಸಂಸ್ಥೆಯು ಸ್ಕೈ ಡೈನಿಂಗ್ ಯೋಜನೆಯನ್ನು ನಿರ್ವಹಿಸಲಿದೆ. ಪಾರದರ್ಶಕ ಗಾಜು ಮತ್ತು ಕಬ್ಬಿಣದಿಂದ ನಿರ್ಮಿಸಲಾದ ಕ್ಯಾಬಿನ್ ಅನ್ನು ಕ್ರೇನ್ ಬಳಸಿ ಸುಮಾರು 60-70 ಅಡಿ ಎತ್ತರಕ್ಕೆ ಏರಿಸಲಾಗುತ್ತದೆ. ಏಕಕಾಲದಲ್ಲಿ 16 ಮಂದಿ ಕುಳಿತು ಆಹಾರ ಸೇವಿಸುವ ಅವಕಾಶವಿದೆ. ಇಷ್ಟು ಎತ್ತರದಿಂದ…
ವಿದ್ಯಾಗಿರಿ (ಮೂಡುಬಿದಿರೆ): ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 26ರಂದು ನಡೆದ ದಕ್ಷಿಣ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಮೂಡುಬಿದಿರೆ ತಾಲ್ಲೂಕನ್ನು ಪ್ರತಿನಿಧಿಸಿದ ಆಳ್ವಾಸ್ ಕಾಲೇಜು ತಂಡವು ಸಮಗ್ರ ಪ್ರಶಸ್ತಿಗೆ ಭಾಜನವಾಗಿದೆ. ಪುರುಷ ಮತ್ತು ಮಹಿಳಾ ಸೇರಿದಂತೆ ಎರಡೂ ವಿಭಾಗಗಳ ಅಥ್ಲೆಟಿಕ್ಸ್ನಲ್ಲಿ ಒಟ್ಟು 23 ಚಿನ್ನ, 10 ಬೆಳ್ಳಿ, 02 ಕಂಚಿನ ಪದಕಗಳೊಂದಿಗೆ ಒಟ್ಟು 35 ಪದಕ, ಕುಸ್ತಿಯಲ್ಲಿ 16 ಚಿನ್ನ, 08 ಬೆಳ್ಳಿ, 08 ಕಂಚಿನ ಪದಕಗಳೊಂದಿಗೆ ಒಟ್ಟು 32 ಪದಕ, ಯೋಗದಲ್ಲಿ 05 ಚಿನ್ನ, 04 ಬೆಳ್ಳಿ, 02 ಕಂಚಿನ ಪದಕಗಳೊಂದಿಗೆ ಒಟ್ಟು 11 ಪದಕ ಹಾಗೂ ಕಬಡ್ಡಿ, ಬಾಲ್ ಬ್ಯಾಡ್ಮಿಂಟನ್ ಮತ್ತು ಖೋ-ಖೋ ಪಂದ್ಯಾಟಗಳ ಪುರುಷ ಮತ್ತು ಮಹಿಳಾ ವಿಭಾಗಗಳಲ್ಲಿ ಪ್ರಥಮ ಸ್ಥಾನ ಹಾಗೂ ವಾಲಿವಾಲ್ ಪುರುಷರ ವಿಭಾಗದಲ್ಲಿ ದ್ವಿತೀಯ, ತ್ರೋಬಾಲ್ ಮಹಿಳೆಯರ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಆಳ್ವಾಸ್ ಪಡೆದುಕೊಂಡಿದೆ. ಮಂಗಳೂರು, ಉಡುಪಿ, ಚಾಮರಾಜನಗರ, ಕೊಡಗು ಜಿಲ್ಲೆಗಳಲ್ಲಿ ನಡೆಯುವ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಆಳ್ವಾಸ್ ಕಾಲೇಜಿನ…
ಪುತ್ತೂರು ಬಂಟರ ಭವನದಲ್ಲಿ ತಾಲೂಕು ಮಹಿಳಾ ಬಂಟರ ಸಂಘದ ಮಾಸಿಕ ಸಭೆಯು ಸೆಪ್ಟೆಂಬರ್ 10 ರಂದು ಜರಗಿತು. ಕುತ್ತಾಡಿ ಸತೀಶ್ ರೈ ತನ್ನ ಸಹೋದರಿ ಸ್ವರ್ಣಲತಾ ಜೆ ರೈ ರವರ ಮೂಲಕ ಮಹಿಳಾ ಬಂಟರ ವಿಭಾಗದ ನೇತೃತ್ವದಲ್ಲಿ 5 ಜನ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದ ಸಂಪೂರ್ಣ ವೆಚ್ಚವನ್ನು ಕಳೆದ 6 ವರ್ಷಗಳಿಂದ ನೀಡುತ್ತಿದ್ದು, ಈ ವರ್ಷವೂ ಕೂಡ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ವೆಚ್ಚವನ್ನು ಮಹಿಳಾ ಬಂಟರ ಮಾಸಿಕ ಸಭೆಯಲ್ಲಿ ವಿತರಿಸಲಾಯಿತು. ಪುತ್ತೂರು ಬಂಟರ ಸಂಘದ ಅಧ್ಯಕ್ಷ ಹೇಮನಾಥ ಶೆಟ್ಟಿ ಕಾವು, ಕೋಶಾಧಿಕಾರಿ ಸಂತೋಷ್ ಶೆಟ್ಟಿ, ಮಹಿಳಾ ವಿಭಾಗದ ಅಧ್ಯಕ್ಷೆ ಗೀತಾ ಮೋಹನ ರೈ, ಬಂಟರ ಯಾನೆ ನಾಡವರ ಮಾತೃ ಸಂಘದ ನಿರ್ದೇಶಕಿ ವಾಣಿ ಎಸ್ ಶೆಟ್ಟಿ, ನಿಕಟಪೂರ್ವ ಕಾರ್ಯದರ್ಶಿ ಹರಿಣಾಕ್ಷಿ ಜೆ ಶೆಟ್ಟಿ, ಸಂಘದ ಪದಾಧಿಕಾರಿ ಜಯಂತಿ ಎಂ ರೈ, ಉಪಸ್ಥಿತರಿದ್ದರು. ಭವ್ಯ ಅಮ್ಮಣ್ಣ ರೈ ಪ್ರಾರ್ಥಿಸಿದರು. ಪ್ರಧಾನ ಕಾರ್ಯದರ್ಶಿ ಕುಸುಮಾ ಪಿ ಶೆಟ್ಟಿ ವರದಿ ವಾಚಿಸಿದರು. ಕೋಶಾಧಿಕಾರಿ ಅರುಣಾ ಡಿ. ರೈ ಆಟಿದ…
ದೈಹಿಕ ಶಕ್ತಿ ಆರೋಗ್ಯಪೂರ್ಣ ಜೀವನಕ್ಕೆ ಕ್ರೀಡೆ ಒಂದು ರೀತಿಯಲ್ಲಿ ಉತ್ತಮ ವ್ಯಾಯಾಮ ಇದ್ದ ಹಾಗೆ. ಜಾತಿ ಧರ್ಮ ಎನ್ನದೇ ಬೇಧ ಭಾವ ಇಲ್ಲದೆ ನಡೆಯುವ ಇಂತಹ ಕ್ರೀಡಾ ಅಯೋಜನೆಗಳು ದ್ವೇಷ ಭಾವವನ್ನು ಕೂಡಾ ದೂರ ಮಾಡುವ ವೇದಿಕೆ ಇದು. ಕ್ರೀಡೆಯ ಮೇಲಿನ ಪ್ರೀತಿ, ಆಸಕ್ತಿ ತೋರುವ ಮಕ್ಕಳು ಕಠಿನ ಪರಿಶ್ರಮದಿಂದ ಸಾಧನೆ ಮಾಡಬೇಕು. ಹೆಚ್ಚೆಚ್ಚು ಕ್ರೀಡಾ ಸ್ಪರ್ಧೆಗಳಲ್ಲಿ ಭಾಗಿಗಲಾಗಬೇಕು. ತುಳುಕೂಟದ ರಜತ ಮಹೋತ್ಸವದ ಅಂಗವಾಗಿ ತುಳುಕೂಟದ ಎಲ್ಲಾ ಸದಸ್ಯರ ಸಹಕಾರದಿಂದ ತುಳುವರನ್ನು ಒಟ್ಟು ಸೇರಿಸಿಕೊಂಡು ಹೊಸ ರೂಪದಲ್ಲಿ ಪಂದ್ಯಾಟಗಳನ್ನು ಆಯೋಜಿಸಿದ್ದಾರೆ. ತುಳುವರಿಗಾಗಿ ಸಮಾಜಕ್ಕಾಗಿ ಆಯೋಜನೆ ಮಾಡುವ ಕೂಟಗಳಲ್ಲಿ ಎಲ್ಲಾ ತುಳು ಬಾಂಧವರು ಭಾಗಿಗಳಾಗಬೇಕು. ಇಲ್ಲಿ ಸೇರಿರುವ ಎಲ್ಲರಲ್ಲಿಯೂ ಪ್ರೀತಿಯ ಸಾಮರಸ್ಯ ಬೆಳೆಯಲಿ ಎಂದು ಪುಣೆ ಬಂಟ್ಸ್ ಅಸೋಸಿಯೇಷನ್ ನ ನಿಕಟ ಪೂರ್ವ ಅಧ್ಯಕ್ಷರಾದ ಗಣೇಶ್ ಹೆಗ್ಡೆ ಪುಣ್ಚೂರ್ ನುಡಿದರು. ಪುಣೆ ತುಳುಕೂಟದ ರಜತ ಮಹೋತ್ಸವಕ್ಕೆ ಪೂರಕವಾಗಿ 25 ವಿವಿಧ ಕಾರ್ಯಕ್ರಮಗಳು ನಡೆಯಯುತ್ತಿದ್ದು ಅದರ ಭಾಗವಾಗಿ ಸೆಪ್ಟೆಂಬರ್ 21 ಮತ್ತು 22 ರಂದು…
ಉಡುಪಿ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಎಕ್ಸಲೆಂಟ್ ಕುಂದಾಪುರದ ವಿದ್ಯಾರ್ಥಿನಿ ನವಮಿ ಎಸ್ ಶೆಟ್ಟಿ ರಾಜ್ಯ ಮಟ್ಟಕ್ಕೆ ಆಯ್ಕೆ:
ಪದವಿ ಪೂರ್ವ ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ ಮತ್ತು ಎಸ್.ಎನ್.ವಿ ಪದವಿ ಪೂರ್ವ ಕಾಲೇಜು ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಕಾಲೇಜು ವಿಭಾಗದ ಬಾಲಕ-ಬಾಲಕಿಯರ ಕರಾಟೆ ಸ್ಪರ್ಧೆಯಲ್ಲಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು, ಕುಂದಾಪುರದ ವಿದ್ಯಾರ್ಥಿನಿ ನವಮಿ ಎಸ್ ಶೆಟ್ಟಿ ವಿಜಯಶಾಲಿಯಾಗುವುದರ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ ಮತ್ತು ಆಶಿತ್ ಶೆಟ್ಟಿ ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದುಕೊಂಡಿರುತ್ತಾನೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ- ಬೋಧಕೇತರ ವೃಂದದವರು, ವಿದ್ಯಾರ್ಥಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಯುವ ಉದ್ಯಮಿ, ಸಮಾಜಸೇವಕ, ಪುತ್ತೂರು ಕಂಬಳ ಸಮಿತಿಯ ಉಪಾಧ್ಯಕ್ಷ ರೋಶನ್ ರೈ ಬನ್ನೂರು ಅವರನ್ನು ಪುತ್ತೂರು ನಗರಸಭೆ ಸದಸ್ಯರನ್ನಾಗಿ ಸರಕಾರವು ನಾಮ ನಿರ್ದೇಶನ ಮಾಡಿ ಆದೇಶಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರ ಸಭೆಗೆ ಈಗಾಗಲೇ 4 ಅಭ್ಯರ್ಥಿಗಳನ್ನು ನಾಮ ನಿರ್ದೇಶನ ಮಾಡಲಾಗಿದ್ದು, ಉಳಿದ 1 ಸ್ಥಾನಕ್ಕೆ ಬನ್ನೂರು ನಿವಾಸಿ ರೋಶನ್ ರೈರವರನ್ನು ನೇಮಕ ಮಾಡಿ ಆದೇಶಿಸಲಾಗಿದೆ.
ಪೋಷಕಾಂಶಗಳಿಂದ ಸಮೃದ್ಧವಾಗಿರುವ ತೆಂಗಿನ ಕಾಯಿಯನ್ನು ಪ್ರತಿನಿತ್ಯ ಸೇವಿಸುವುದರಿಂದ ನಮ್ಮ ದೇಹದ ರೋಗನಿರೋಧಕ ಶಕ್ತಿ ಹೆಚ್ಚುವುದಲ್ಲದೆ, ಜ್ಞಾಪಕ ಶಕ್ತಿಯೂ ಹೆಚ್ಚುತ್ತದೆ. ಹಸಿ ತೆಂಗಿನಕಾಯಿಯಲ್ಲಿ ತಾಮ್ರ, ಸೆಲೆನಿಯಂ, ಪೊಟ್ಯಾಸಿಯಂ, ಮೆಗ್ನೀಸಿಯಂ, ಸತು, ಫೋಲೇಟ್, ವಿಟಮಿನ್ ಸಿ, ಥಯಾಮಿನ್ ಮುಂತಾದ ಪೋಷಕಾಂಶಗಳು ಸಮೃದ್ಧವಾಗಿವೆ. ಇದು ಬ್ಯಾಕ್ಟೀರಿಯಾ ವಿರೋಧಿ ಮತ್ತು ಆಂಟಿ ಫಂಗಲ್ ಗುಣಗಳನ್ನು ಸಹ ಹೊಂದಿದೆ. ಹಾಗಾದರೆ ಬೆಳಿಗ್ಗೆ ಎದ್ದು ಒಂಚೂರು ಹಸಿ ಕೊಬ್ಬರಿ ತಿನ್ನುವುದರಿಂದ ಆಗುವ ಪ್ರಯೋಜನಗಳೇನು ಅಂತ ತಿಳಿಯೋಣ. ತೆಂಗಿನಕಾಯಿಯಲ್ಲಿ ಹೆಚ್ಚಿನ ಫೈಬರ್ ಅಂಶವಿದ್ದು ಮಲ ಬದ್ಧತೆಯನ್ನು ತಡೆಯಲು ಸಹಾಯ ಮಾಡುತ್ತದೆ ಮತ್ತು ಕರುಳಿನ ಚಲನೆಯನ್ನು ಉತ್ತೇಜಿಸುತ್ತದೆ. ಅನಾರೋಗ್ಯವನ್ನು ತಡೆಯಲು ಸಹಾಯ ಮಾಡುತ್ತದೆ. ಪದೇ ಪದೇ ವಾಂತಿ ಸಮಸ್ಯೆ ಕಾಡುತ್ತಿದ್ದರೆ ಕೊಬ್ಬರಿಯನ್ನು ಬಾಯಿಯಲ್ಲಿ ಇಟ್ಟುಕೊಂಡು ಸ್ವಲ್ಪ ಹೊತ್ತು ಜಗಿಯಿರಿ. ಇದರಿಂದ ಪ್ರಯೋಜನವಾಗಲಿದೆ. ತೆಂಗಿನಕಾಯಿಯಲ್ಲಿ ಕಂಡು ಬರುವ ಪ್ರೋಟೀನ್ ಮತ್ತು ಕಬ್ಬಿಣ, ಕೂದಲಿನ ಬೆಳವಣಿಗೆಯನ್ನು ಬೆಂಬಲಿಸಿ ಕೂದಲಿಗೆ ಹೊಳಪು ನೀಡುತ್ತದೆ. ಇದರಿಂದ ಕೂದಲು ತೆಳುವಾಗುವುದನ್ನು ಮತ್ತು ಕೂದಲು ಉದುರುವುದನ್ನು ತಡೆಯಬಹುದು. ಹಸಿ ತೆಂಗಿನಕಾಯಿಯ ಲಾರಿಕ್…
ವಿದ್ಯಾಗಿರಿ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಮಂಗಳೂರು ವಲಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮೂಡುಬಿದಿರೆಯ ಆಳ್ವಾಸ್ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಚಾಂಪಿಯನ್ ಆಗಿದೆ. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಆಶ್ರಯದಲ್ಲಿ ಮಂಗಳೂರಿನ ಕಣಚೂರ್ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಪಂದ್ಯಾಟ ನಡೆದಿದ್ದು, ಫೈನಲ್ ನಲ್ಲಿ ಮಂಗಳೂರಿನ ಕರಾವಳಿ ಫಾರ್ಮಸಿ ಕಾಲೇಜಿನ ವಿರುದ್ಧ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ಅಲೈಡ್ ಹೆಲ್ತ್ ಸೈನ್ಸಸ್ 2-0 ಅಂತರದಿಂದ ಗೆಲುವು ಸಾಧಿಸಿದೆ. ಅತ್ಯುತ್ತಮ ಹೊಡೆತಗಾರ ಪ್ರಶಸ್ತಿಗೆ ಆಳ್ವಾಸ್ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ನ ವಿದ್ಯಾರ್ಥಿ ರಕ್ಷಿತ್ ಎಸ್. ಕೆ ಭಾಜನರಾಗಿದ್ದಾರೆ . ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ನಡೆಯಲಿರುವ ಅಂತರ ವಲಯ ಟೂರ್ನಿಗೆ ಆಳ್ವಾಸ್ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಅರ್ಹತೆಯನ್ನು ಪಡೆದಿದೆ.
ಅಮೇರಿಕ ಪ್ರವಾಸ ಕೈಗೊಂಡಿದ್ದ ಯಕ್ಷಧ್ರುವ ಪಟ್ಲ ಫೌಂಡೇಶನ್ ಸ್ಥಾಪಕ ಪಟ್ಲಗುತ್ತು ಸತೀಶ್ ಶೆಟ್ಟಿ ಅವರು ತಮ್ಮ ತಂಡದ ಜೊತೆ ಮಂಗಳವಾರ ರಾತ್ರಿ ತಾಯ್ನಾಡಿಗೆ ಮರಳಿದ್ದು ಬಜ್ಪೆ ವಿಮಾನ ನಿಲ್ದಾಣದಲ್ಲಿ ಟ್ರಸ್ಟ್ ನ ಪದಾಧಿಕಾರಿಗಳು ಸ್ವಾಗತ ಕೋರಿದರು. ಪಟ್ಲ ಸತೀಶ್ ಶೆಟ್ಟಿ ಅವರ ನೇತೃತ್ವದಲ್ಲಿ 9 ಮಂದಿಯ ತಂಡ ಅಮೇರಿಕ ದೇಶದ ಬೇರೆ ಬೇರೆ ತಾಣಗಳಲ್ಲಿ ಯಕ್ಷಗಾನ ಪ್ರದರ್ಶಿಸಿ 75 ದಿನಗಳ ಬಳಿಕ ತಾಯ್ನಾಡಿಗೆ ಮರಳಿದ್ದಾರೆ. ಈ ವೇಳೆ ತಮ್ಮ ಅಮೇರಿಕ ಪ್ರವಾಸದ ಕಥನವನ್ನು ಮಾಧ್ಯಮ ಪ್ರತಿನಿಧಿಗಳೊಂದಿಗೆ ಹಂಚಿಕೊಂಡ ಅವರು, “ವಿದೇಶಗಳಲ್ಲಿ ತುಳುನಾಡಿನ ಗಂಡುಮೆಟ್ಟಿನ ಕಲೆಯಾಗಿರುವ ಯಕ್ಷಗಾನ ಪ್ರದರ್ಶನ ಮತ್ತು ಕಾರ್ಯಾಗಾರವನ್ನು ಹಮ್ಮಿಕೊಂಡಿದ್ದು ಹೆಮ್ಮೆ ಅನಿಸುತ್ತಿದೆ. ಅಲ್ಲಿನ ಜನರು ಕೂಡ ಯಕ್ಷಗಾನ ನಾಟ್ಯ ಮತ್ತು ಭಾಗವತಿಕೆಗೆ ಮನಸೋತು ಕಲಿಯಲು ಆಸಕ್ತಿ ತೋರಿಸಿರುವುದು ಖುಷಿಯ ವಿಚಾರ” ಎಂದರು. “ಅಮೇರಿಕಾದ ಎರಡು ನಗರಗಳಲ್ಲಿ ಪಟ್ಲ ಫೌಂಡೇಶನ್ ದಿನವನ್ನಾಗಿ ಅಲ್ಲಿನ ಮೇಯರ್ ಘೋಷಣೆ ಮಾಡಿದ್ದಾರೆ. ಇದು ಅವಿಸ್ಮರಣೀಯ ಅನುಭವ. ನಮ್ಮ ಕಲೆಗೆ ಇಂದು ವಿಶ್ವವ್ಯಾಪಿ ಮನ್ನಣೆ ಸಿಗುತ್ತಿದೆ.…















