Author: admin
ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ ಉಪಕ್ರಮದ ಅನ್ವಯ ನಗರದ ರೆಡ್ ಕ್ರಾಸ್ ಸಂಸ್ಥೆಯ ಶತಮಾನೋತ್ಸವ ಭವನ ನಿರ್ಮಾಣ ಕಾಮಗಾರಿಗೆ 10 ಲಕ್ಷ ರೂ. ಗಳ ನೆರವು ನೀಡಲಾಗಿದೆ. ನಗರದ ಜಿಲ್ಲಾ ಪಂಚಾಯತ್ನ ಮಿನಿ ಸಭಾಂಗಣದಲ್ಲಿ ಬ್ಯಾಂಕ್ ಆಫ್ ಇಂಡಿಯಾದ ಎಚಿಡಿ ಹಾಗೂ ಸಿಇಒ ಅಟನ್ ಕುಮಾರ್ ದಾಸ್ ಅವರು ಭಾರತೀಯ ರೆಡ್ ಕ್ರಾಸ್ ಅವರು ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಎ. ಶಾಂತಾರಾಮ ಶೆಟ್ಟಿ ಹಾಗೂ ಉಪಾಧ್ಯಕ್ಷ ಜಿಲ್ಲಾ ಪಂಚಾಯತ್ ಸಿಇಒ ಡಾ| ಕುಮಾರ್ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭ ಮಾತನಾಡಿದ ಡಾ| ಕುಮಾರ್ ಅವರು, ಬ್ಯಾಂಕ್ ಆಫ್ ಇಂಡಿಯಾದಿಂದ ಭಾರತೀಯ ರೆಡ್ ಕ್ರಾಸ್ ಸೊಸೈಟಿಗೆ ಅತ್ಯಂತ ಸೂಕ್ತ ಸಮಯದಲ್ಲಿ ಆರ್ಥಿಕ ಸಹಕಾರ ನೀಡುತ್ತಿರುವುದು ಸ್ವಾಗತಾರ್ಹ, ಇದರಿಂದ ಶತಮಾನೋತ್ಸವ ಭವನ ನಿರ್ಮಾಣಕ್ಕೆ ಅನುಕೂಲವಾಗಲಿದೆ ಎಂದು ಸಂತಸ ವ್ಯಕ್ತಪಡಿಸಿ, ಇದು ಇತರ ಬ್ಯಾಂಕುಗಳಿಗೂ ಮಾದರಿಯಾಗಲಿದೆ ಎಂದರು. ಬ್ಯಾಂಕ್ ಆಫ್ ಇಂಡಿಯಾದ ಜನರಲ್…
ಸಾಮಾಜಿಕ ಕಳಕಳಿ ಹೊಂದಿರುವ ಐಕಳ ಹರೀಶ್ ಶೆಟ್ಟಿಯವರ ಕನಸಿನಂತೆ ಮೂಲ್ಕಿಯಲ್ಲಿ ತೆರೆದ ಸಭಾಂಗಣ ನಿರ್ಮಾಣವಾಗುತ್ತಿದ್ದು, ಈ ಸಭಾಂಗಣವಕ್ಕೆ ಸಂಪೂರ್ಣ ಸಹಕಾರ ನೀಡುತ್ತೇನೆ ಎಂದು ದಾನಿಗಳಾದ ತೋನ್ಸೆ ಆನಂದ ಶೆಟ್ಟಿ ಹೇಳಿದರು. ಅವರು ಮೂಲ್ಕಿಯ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ರಾಷ್ಟ್ರೀಯ ಹೆದ್ದಾರಿ ಬಳಿ ಇರುವ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ತೋನ್ಸೆ ಶಶಿರೇಖಾ ಆನಂದ ಶೆಟ್ಟಿ ಓಪನ್ ಏರ್ ಗಾರ್ಡನ್ ಹೆಸರಿನಲ್ಲಿ ಹೊರಾಂಗಣ ಸಭಾ ವೇದಿಕೆ ನಿರ್ಮಾಣದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ ಜಾಗತಿಕ ಬಂಟರ ಸಂಘದ ಅಧ್ಯಕ್ಷರಾಗಿ ಐಕಳ ಹರೀಶ್ ಶೆಟ್ಟಿಯವರು ಅಧಿಕಾರ ಸ್ವೀಕಾರ ಮಾಡಿದ ನಂತರ ಸಂಘದಲ್ಲಿ ಅನೇಕ ಸಮಾಜಮುಖಿ ಕಾರ್ಯಗಳ ಮೂಲಕ ಸಂಘದ ಚಿತ್ರಣವೇ ಬದಲಾಗಿದೆ. ಇದೀಗ ಮೆಹೆಂದಿ, ಮದುವೆ ಮತ್ತಿತರ ಎಲ್ಲಾ ಕಾರ್ಯಕ್ರಮಗಳಿಗೆ ಉಪಯೋಗವಾಗುವಂತಹ ಉತ್ತಮವಾದ ತೆರೆದ ಸಭಾಂಗಣ ನಿರ್ಮಾಣವಾಗುತ್ತಿದ್ದು ಸಂಘಕ್ಕೆ ಹೊಸ ರೂಪ ಸಿಗಲಿದೆ ಎಂದರು. ಜಾಗತಿಕ ಬಂಟರ ಸಂಘದ ಮಹಾದಾನಿ ಕನ್ಯಾನ ಸದಾಶಿವ ಶೆಟ್ಟಿ ಮಾತನಾಡಿ, ಐಕಳ ಹರೀಶ್ ಶೆಟ್ಟಿಯವರ ನಾಯಕತ್ವದಲ್ಲಿ ಸಂಘ ಹೆಮ್ಮರವಾಗಿ…
ಮಾತೃ ಸಂಘ ತಾಲೂಕು ಸಮಿತಿ ಹಾಗೂ ತಾಲೂಕು ಬಂಟರ ಸಂಘ ಪುತ್ತೂರು ಇವರ ಮಾರ್ಗದರ್ಶನದೊಂದಿಗೆ ನೆಲ್ಯಾಡಿ ವಲಯ ಬಂಟರ ಸಂಘ ಇದರ ಆಶ್ರಯದಲ್ಲಿ ಕಡಬ ತಾಲೂಕಿನ ಗೋಳಿತೋಟ್ಟು ಗ್ರಾಮದ ಶ್ರೀಮತಿ ಲೀಲಾವತಿ ವಿಠಲ ಶೆಟ್ಟಿ ಇವರ ಪುತ್ರಿ ಕು ಶ್ರುತಿ ಇವರ ವಿವಾಹಕ್ಕೆ ತಾಲೂಕು ಬಂಟರ ಸಂಘದ ಅಧ್ಯಕ್ಷರಾದ ಶ್ರೀ ಶಶಿ ಕುಮಾರ್ ರೈ ಬಾಲ್ಯೊಟ್ಟು ಇವರ ಮುಖಾಂತರ ಆರ್ಥಿಕ ಸಹಾಯ ನೀಡಲಾಯಿತು. ಈ ಸಂಧರ್ಭದಲ್ಲಿ ನೆಲ್ಯಾಡಿ ವಲಯ ಬಂಟರ ಸಂಘದ ಅಧ್ಯಕ್ಷರಾದ ಶ್ರೀ ಪ್ರತಾಪ್ ಚಂದ್ರ ರೈ, ಶ್ರೀ ಸತೀಶ ರೈ ಕೊಣಾಲು ಗುತ್ತು, ಶ್ರೀ ನಿತ್ಯಾನಂದ ಶೆಟ್ಟಿ ಮನವಳಿಕೆ, ತಾಲೂಕು ಮಹಿಳಾ ಬಂಟರ ಸಂಘದ ಕೋಶಾಧಿಕಾರಿ ಶ್ರೀಮತಿ ವಾಣಿ ಎಸ್ ಶೆಟ್ಟಿ, ರತ್ನಾಕರ ಶೆಟ್ಟಿ ಕೊಲ್ಯೊಟ್ಟು ಅಶ್ವಮೇಧ, ಸುಂದರ ಶೆಟ್ಟಿ ಉಪಸ್ಥಿತರಿದ್ದರು.
ಬಂಟರ ಸಂಘ ಪಿಂಪ್ರಿ – ಚಿಂಚ್ವಾಡ್ ವತಿಯಿಂದ ಸಮಾಜ ಬಾಂಧವರ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು ಹಾಗೂ ಕಳೆದ ಶೈಕ್ಷಣಿಕ ಸಾಲಿನಲ್ಲಿ ಶೇಕಡಾ ೭೫ ಮತ್ತು ಹೆಚ್ಚು ಅಂಕಗಳನ್ನು ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳ ಸತ್ಕಾರ ಸಮಾರಂಭವು ಜೂನ್ ೧೮ ರಂದು ಸಂಘದ ಕಿರು ಸಭಾಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷರಾದ ರಾಕೇಶ್ ಶೆಟ್ಟಿ ಬೆಳ್ಳಾರೆ ಇವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬಂಟ್ಸ್ ಅಸೋಸಿಯೇಷನ್ ಪುಣೆ ಇದರ ಪ್ರಧಾನ ಕಾರ್ಯದರ್ಶಿ ಅರವಿಂದ ರೈ ಉಪಸ್ಥಿತರಿದ್ದರು. ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಸಂಘದ ಅಧ್ಯಕ್ಷರಾದ ರಾಕೇಶ್ ಶೆಟ್ಟಿ ಬೆಳ್ಳಾರೆ ಮಾತನಾಡಿ, ನಮ್ಮ ಸಂಘದ ಮೂಲಕ ಪ್ರತೀ ವರ್ಷ ಆರ್ಥಿಕವಾಗಿ ಕಷ್ಟದಲ್ಲಿರುವ ವಿದ್ಯಾರ್ಥಿಗಳಿಗೆ ಸಾಧ್ಯವಾದಷ್ಟು ಆರ್ಥಿಕ ನೆರವನ್ನು ನೀಡುತ್ತಾ ಬಂದಿರುತ್ತೇವೆ. ಯಾಕೆಂದರೆ ಸಮಾಜದ ಯಾವುದೇ ಮಕ್ಕಳು ವಿದ್ಯೆಯಿಂದ ವಂಚಿತರಾಗಬಾರದೆಂಬ ಉದ್ದೇಶ ಸಂಘದ್ದಾಗಿದೆ. ಮಕ್ಕಳು ವಿದ್ಯಾವಂತರಾದರೆ ಅವರ ಕುಟುಂಬ ಅಭಿವೃದ್ಧಿಯಾಗುವುದರಲ್ಲಿ ಸಂಶಯವಿಲ್ಲ. ಉತ್ತಮ ಸಮಾಜದ ನಿರ್ಮಾಣಕ್ಕೆ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದಾಗಿದೆ. ಸಂಘದ ಈ ಕಾರ್ಯಕ್ಕೆ ಸಂಘದ…
ಯಕ್ಷಗಾನ ಕಲಾ ಕ್ಷೇತ್ರಕ್ಕೆ ಮಹಿಳೆಯರ ಪ್ರವೇಶವಾಗಿ ದಶಕಗಳೇ ಕಳೆದವು. ಅದರಲ್ಲೂ ವಿದ್ಯಾರ್ಥಿನಿಯರು, ಯುವತಿಯರು ಯಕ್ಷಗಾನ ರಂಗದ ಕಡೆ ಹೆಚ್ಚೆಚ್ಚು ಆಕರ್ಷಿತರಾಗುತ್ತಿರುವುದು ಕಲೆಯ ಬೆಳವಣಿಗೆ ದೃಷ್ಟಿಯಿಂದ ಆರೋಗ್ಯಕರ ಬೆಳವಣಿಗೆ ಎನ್ನಬಹುದು. ಈ ನಿಟ್ಟಿನಲ್ಲಿ ನೋಡಿದರೆ ತನ್ನ ವಿದ್ಯಾರ್ಥಿ ದೆಸೆಯಿಂದಲೇ ಮುಖಕ್ಕೆ ಬಣ್ಣ ಹಚ್ಚಿ ರಂಗು ರಂಗಿನ ವೇಷಭೂಷಣಗಳನ್ನು ಧರಿಸಿಕೊಂಡು ರಂಗ ಮಂಟಪದಲ್ಲಿ ಆತ್ಮವಿಶ್ವಾಸದಿಂದ ತನ್ನ ಕಲಾಪ್ರದರ್ಶನ ನೀಡುತ್ತಿದ್ದ ಪೃಥ್ವಿ ಹೆಗ್ಡೆ ಸ್ನಾತಕೋತ್ತರ ಪದವೀಧರೆ. ಪೃಥ್ವಿಯ ತಾಯಿ ಶ್ರೀಮತಿ ಪೂರ್ಣಿಮಾ ಹೆಗ್ಡೆ ಹಾಗೂ ಅವರ ಸೋದರ ಸಂಬಂಧಿಕರೆಲ್ಲಾ ಯಕ್ಷಗಾನ ಕಲೆಯ ಬಗ್ಗೆ ಆಸಕ್ತಿ ಗೌರವ ಹೊಂದಿದವರಾಗಿದ್ದ ಕಾರಣ ಪೃಥ್ವಿಗೆ ಯಕ್ಷಗಾನ ರಂಗ ಪ್ರವೇಶ ನಿರಾಳವಾಯಿತು. ತನ್ನ ಬಾಲ್ಯದ ದಿನಗಳಿಂದಲೇ ಚುರುಕು ಸ್ವಭಾವದವಳಾಗಿದ್ದ ಬಾಲಕಿ, ವಿದ್ಯಾರ್ಥಿ ಜೀವನದಲ್ಲಿ ದೈನಂದಿನ ಅಭ್ಯಾಸದ ಜೊತೆಗೆ ಪಾಠೇತರ ಚಟುವಟಿಕೆಗಳಲ್ಲಿ ಮುಂದಿದ್ದು ಇತರ ವಿದ್ಯಾರ್ಥಿಗಳಿಂದ ಭಿನ್ನ ಆಕರ್ಷಣೆ ಹೊಂದಿದ್ದಳು. ಈಕೆಯ ವಿಶೇಷ ಪ್ರತಿಭೆಯನ್ನು ಗುರುತಿಸಿದ ಅಧ್ಯಾಪಕರು ಈಕೆಯ ಸುಪ್ತ ಪ್ರತಿಭೆಯನ್ನು ಬೆಳಕಿಗೆ ತರುವಲ್ಲಿ ಆಸಕ್ತಿ ತೋರಿದ ಪರಿಣಾಮ ಪೃಥ್ವಿ ಬರಹ, ಭಾಷಣ,…
ಬಂಟರ ಸಂಘ ಬಂಟ್ವಾಳ ತಾಲೂಕಿನ ವತಿಯಿಂದ ದಿನಾಂಕ 07-01-2024ರಂದು ಜರಗಲಿರುವ ಜಿಲ್ಲಾ ಮಟ್ಟದ ಕ್ರೀಡೋತ್ಸವ ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಶ್ರೀ ಐಕಳ ಹರೀಶ್ ಶೆಟ್ಟಿಯವರನ್ನು ಬಂಟರ ಸಂಘ ಬಂಟ್ವಾಳ ತಾಲೂಕು ಇದರ ಅಧ್ಯಕ್ಷ ಹಾಗೂ ಪ್ರಸ್ತುತ ಒಕ್ಕೂಟದ ಜೊತೆ ಕಾರ್ಯದರ್ಶಿಯವರಾದ ಶ್ರೀ ಚಂದ್ರಹಾಸ್ ಡಿ. ಶೆಟ್ಟಿಯವರು ಆಮಂತ್ರಣ ಪತ್ರಿಕೆ ನೀಡಿ ಪ್ರೀತಿಪೂರ್ವಕವಾಗಿ ಆಹ್ವಾನಿಸಿದರು. ಈ ಸಂದರ್ಭದಲ್ಲಿ ಒಕ್ಕೂಟದ ಗೌರವ ಕಾರ್ಯದರ್ಶಿ ಶ್ರೀ ಜಯಕರ್ ಶೆಟ್ಟಿ ಇಂದ್ರಾಳಿ, ಬಂಟರ ಸಂಘ ಬಂಟ್ವಾಳ ತಾಲೂಕಿನ ಪದಾಧಿಕಾರಿಗಳಾದ ಶ್ರೀ ಜಗನ್ನಾಥ್ ಚೌಟ, ಶ್ರೀ ಲೋಕೇಶ್ ಶೆಟ್ಟಿ ಕೆ, ಶ್ರೀ ಪದ್ಮನಾಭ ಶೆಟ್ಟಿ, ಶ್ರೀ ರಂಜನ್ ಶೆಟ್ಟಿ, ಶ್ರೀ ಭಾಸ್ಕರ್ ಶೆಟ್ಟಿ, ಒಕ್ಕೂಟದ ಆಹ್ವಾನಿತ ಸದಸ್ಯರಾದ ಶ್ರೀ ರವಿರಾಜ್ ಶೆಟ್ಟಿ ಜತ್ತಬೆಟ್ಟು, ಆಡಳಿತಾಧಿಕಾರಿ ಶ್ರೀ ಸಚ್ಚಿದಾನಂದ ಹೆಗ್ಡೆ ಕೊಳ್ಕೆಬೈಲ್ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
ಇಂಜಿನಿಯರ್ಸ್ ಡೇ ಅಂಗವಾಗಿ, ಸಾಲಿಗ್ರಾಮದ ಇಂಜಿನಿಯರ್ ನಾಗರಾಜ್ ಸೋಮಯಾಜಿ ಯವರನ್ನು ಸಾಲಿಗ್ರಾಮದ ಅವರ ಕಛೇರಿಗೆ ತೆರಳಿ ಸನ್ಮಾನಿಸಲಾಯಿತು. ಈ ಸಂದರ್ಭ ಲಯನ್ಸ್ ಕ್ಲಬ್ ನ ಅಧ್ಯಕ್ಷರಾದ ಲಯನ್ ರಾಜಾರಾಮ್ ಶೆಟ್ಟಿ ಕಲ್ಕಟ್ಟೆ, ಕಾರ್ಯದರ್ಶಿ ಲಯನ್ ಅಜಿತ್ ಶೆಟ್ಟಿ ಕೊತ್ತಾಡಿ, ಕೋಶಾಧಿಕಾರಿ ಲಯನ್ ವಡ್ಡರ್ಸೆ ಬಾಲಕೃಷ್ಣ ಶೆಟ್ಟಿ, ಸ್ಥಾಪಕಾಧ್ಯಕ್ಷರಾದ ಲಯನ್ adv ಬನ್ನಾಡಿ ಸೋಮನಾಥ ಹೆಗ್ಡೆ, ಮಾಜಿ ಅಧ್ಯಕ್ಷರಾದ ಲಯನ್ Adv ಕೊತ್ತಾಡಿ ಉದಯ್ ಕುಮಾರ್ ಶೆಟ್ಟಿ, ಲಯನ್ ಯಾಳಕ್ಲು ಚಂದ್ರ ಶೇಖರ್ ಶೆಟ್ಟಿ, ಲಯನ್ ಬನ್ನಾಡಿ ಸುಭಾಶ್ಚಂದ್ರ ಶೆಟ್ಟಿ ಕೆ, ಲಯನ್ ಕೊಮೆ ವಸಂತ್ ಶೆಟ್ಟಿ ಅಚ್ಲಾಡಿ, ಲಯನ್ ಕೊಮೆ ಸುರೇಂದ್ರ ಶೆಟ್ಟಿ ಅಚ್ಲಾಡಿ, ಲಯನ್ ಅಕ್ಷಯ್ ಹೆಗ್ಡೆ, ಲಯನ್ ಬನ್ನಾಡಿ ಅಶಿತ್ ಕುಮಾರ್ ಶೆಟ್ಟಿ, ಲಯನ್ ಬನ್ನಾಡಿ ಜೀವನ್ ಬಿ.ಬಿ., ಲಯನ್ ಗುಂಡ ಶೆಟ್ಟಿ ಮಾನಂಬಳ್ಳಿ, ಲಯನ್ Adv ಬನ್ನಾಡಿ ವಿನಯ್ ಕುಮಾರ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.
ಸಂಘ ಸಮಾಜಕ್ಕೆ ದಾರಿ ದೀಪದಂತೆ ನಡೆಯಬೇಕು. ಅದೇ ರೀತಿ ಬಾಂಧವರಲ್ಲಿ ಸಂಘಟನೆ ನಮ್ಮ ಹೆಮ್ಮೆ ಎಂಬ ಭಾವನೆ ಕೂಡಾ ತುಂಬಿರಬೇಕು. ಇದು ಹೊಂದಿಕೊಂಡು ನಡೆದರೆ ಸಂಸ್ಥೆ ಮತ್ತಷ್ಟು ಅಬಿವೃದ್ದಿಯ ಪಥದಲ್ಲಿ ಸಾಗಲು ಸಾದ್ಯ. ಅಭಿವೃದ್ದಿಯಲ್ಲಿ ನಾವು ಎಲ್ಲಿಂದ ಎಲ್ಲಿಗೆ ಸಾಗಿ ಬಂದಿದ್ದೇವೆ ಎಂಬುದನ್ನು ಅವಲೋಕಿಸಿದಾಗ ನಮ್ಮ ಈ ಬೆಳವಣಿಗೆಗೆ ಮತ್ತು ಉತ್ತುಂಗಕ್ಕೆ ಏರಲು ಮುಖ್ಯವಾಗಿ ಅದರ ಹಿಂದಿರುವ ಅರ್ಥಿಕತೆಯ ಬೇರು ಹೋಟೆಲ್ ಉದ್ಯಮ. ಅದೆಷ್ಟೋ ಹೋಟೆಲು ಉದ್ಯಮಿಗಳ ಸಹಕಾರದಿಂದ ನಮ್ಮ ಸಮಾಜದ ಉದ್ದೇಶ ಏನಿದೆಯೋ ಅದು ಈಡೇರಿದೆ. ಹೆಗ್ಗುರುತಾಗಿ ನಮ್ಮ ಸಮಾಜಕ್ಕೆ ವರದಾನವಾಗಿ ಸಿಕ್ಕಿದ ಹೋಟೆಲ್ ಉದ್ಯಮ ಇನ್ನಷ್ಟು ಬದಲಾವಣೆಯೊಂದಿಗೆ ನಮ್ಮ ಯುವ ಜನತೆ ಪ್ರಾಧಾನ್ಯತೆ ನೀಡಿ ಮುನ್ನಡೆಸುವ ಅವಶ್ಯಕತೆ ಇದೆ. ನಮ್ಮ ಹಿರಿಯರು ಕಷ್ಟಪಟ್ಟು ಬೆಳೆಸಿದ ಉದ್ಯಮವು ಬಂಟ ಸಮಾಜದ ಉದ್ದಾರದ ಹಾಗೂ ಸಮಾಜದ ಪ್ರಗತಿಗೆ ಮತ್ತು ನಮ್ಮ ಅಸ್ತಿತ್ವದ ಮೂಲ ಬೇರಾಗಿದೆ. ಇಂದಿನ ಯುವ ಜನಾಂಗಕ್ಕೆ ಅದರ ಮಹತ್ವವನ್ನು ತಿಳಿಸಿ, ಉಳಿಸಿ ಬೆಳೆಸುವುದು ನಮ್ಮೆಲ್ಲರ ಅದ್ಯ ಕರ್ತವ್ಯ ಕೂಡ…
ಮೂಡುಬಿದಿರೆ: ಮಂಡ್ಯದ ವಿಶ್ವಮಾನವ ಪದವಿಪೂರ್ವ ಕಾಲೇಜಿನಲ್ಲಿ ಶಾಲಾ ಶಿಕ್ಷಣ ಇಲಾಖೆ ಈಚೆಗೆ ಹಮ್ಮಿಕೊಂಡ ಮೈಸೂರು ವಿಭಾಗೀಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಿಜೇತರಾದ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ದ್ವಿತೀಯ ಪಿಯುಸಿಯ ವಿಭಾ ನಾಯಕ ಭಾವಗೀತೆ ಸ್ಪರ್ಧೆ ಹಾಗೂ ಯುವಿಕ ಎಲ್ ಮತ್ತು ತಿರುಪತಿ ವಿಟಿ ರಸಪ್ರಶ್ನೆಯಲ್ಲಿ ದ್ವಿತಿಯ ಸ್ಥಾನ ಪಡೆದು, ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿಜೇತ ವಿದ್ಯಾರ್ಥಿಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ. ಮೋಹನ್ ಆಳ್ವ, ಪ್ರಾಚಾರ್ಯರು ಅಭಿನಂದಿಸಿದ್ದಾರೆ.
ಬ್ರಹ್ಮಾವರದ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್ ನಲ್ಲಿ ಅ. 12 ರಂದು ಶಿಕ್ಷಕ ರಕ್ಷಕ ಸಂಘದ ವಾರ್ಷಿಕ ಮಹಾಸಭೆ ನಡೆಯಿತು. ಕಾರ್ಯಕ್ರಮಕ್ಕೆ ಉಡುಪಿ ಡಾ. ಎ. ವಿ. ಬಾಳಿಗ ಆಸ್ಪತ್ರೆಯ ಖ್ಯಾತ ಮನೋವೈದ್ಯ ಡಾ. ವಿರುಪಾಕ್ಷ ದೇವರಮನೆ ಆಗಮಿಸಿದ್ದರು. ಅವರು ಹೊಸ ಜನರೇಶನ್ ಪೇರೆಂಟಿಂಗ್ ವಿಷಯದ ಕುರಿತು ಪೋಷಕರಿಗೆ ಮಾಹಿತಿಯನ್ನು ನೀಡಿ, ನಾವು ಮಕ್ಕಳಿಗೆ ಸಮಯವನ್ನು ನೀಡಬೇಕು. ನಮ್ಮ ದಿನಚರಿಯ ಭಾಗದಲ್ಲಿ ಮಕ್ಕಳ ನೆನಪು ಇರಬೇಕು ಎಂದರು. ಶಾಲಾ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್ ಪೋಷಕರ ಪ್ರಶ್ನೆಗಳಿಗೆ ಉತ್ತರಿಸಿ ಮಾತನಾಡಿ ಮಕ್ಕಳು ಇಂದು ಮೊಬೈಲ್ ದಾಸರಾಗಿದ್ದಾರೆ. ಅವರಿಗೆ ತಾತ್ವಿಕ ಜೀವನದ ಅರಿವನ್ನು, ಸರಿ ತಪ್ಪುಗಳನ್ನು ಗುರುತಿಸುವ ಸಾಮರ್ಥ್ಯವನ್ನು ಬೆಳೆಸಬೇಕೆಂದರು. ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಶ್ರೀಮತಿ ಶ್ರೀನಿಧಿ ಸಚಿನ್ ಕುಮಾರ್ ಜಿ ಎಮ್ ವಿದ್ಯಾಸಂಸ್ಥೆಯ ಪ್ರತಿಯೊಂದು ಮಗುವಿಗೂ ಮೌಲ್ಯ ಶಿಕ್ಷಣದ ಜೊತೆಗೆ ವೈಯಕ್ತಿಕ ಅಭಿವೃದ್ಧಿಗೆ ಪ್ರಾಮುಖ್ಯತೆಯನ್ನು ಕೊಡುತ್ತಿದೆ. ಇದು ನಮಗೆಲ್ಲರಿಗೂ ಹೆಮ್ಮೆ ಎಂದರು. ಪಿಟಿಎ ಉಪಾಧ್ಯಕ್ಷ ನಾಗರಾಜ ಸೋಮಯಾಜಿ ಮಾತನಾಡಿ ನಾವೆಲ್ಲರೂ…