Author: admin
ಜನವರಿ 22 ರಂದು ಪುಣೆ ಪಿಂಪ್ರಿ ಚಿಂಚ್ವಾಡ್ ಬಂಟರ ಸಂಘದಿಂದ “ಸೀತಾರಾಮ ಕಲ್ಯಾಣ” ಹರಿಕಥೆ, ಶ್ರೀರಾಮ ದೇವರಿಗೆ ಮಹಾಪೂಜೆ .
ಅಯೋಧ್ಯೆಯಲ್ಲಿ ಭಾರತೀಯರ ಶತ ಶತಮಾನಗಳ ಪ್ರಯತ್ನಗಳ ಮೂಲಕ ಇದೀಗ 2024 ಜನವರಿ 22 ರಂದು ಭವ್ಯ ರಾಮ ಮಂದಿರ ನಿರ್ಮಾಣಗೊಂಡು ಪ್ರಭು ಶ್ರೀರಾಮನ ಪ್ರಾಣ ಪ್ರತಿಷ್ಠಾ ಮಹೋತ್ಸವವು ಜರುಗಲಿದ್ದು ಅದೇ ಪುಣ್ಯ ಮುಹೂರ್ತದಲ್ಲಿ ಪುಣೆ ಪಿಂಪ್ರಿ ಚಿಂಚ್ವಾಡ್ ಬಂಟರ ಸಂಘದ ಆಶ್ರಯದಲ್ಲಿ ಸಂಘದ ಸಭಾಭವನದಲ್ಲಿ ಪ್ರಸಿದ್ಧ ಹರಿದಾಸರಾದ “ವಿಶ್ವೇಶ ದಾಸ” ಬಿರುದಾಂಕಿತ ವಿದ್ವಾನ್ ಕೈರಬೆಟ್ಟು ವಿಶ್ವನಾಥ್ ಭಟ್ ಅವರಿಂದ “ಸೀತಾರಾಮ ಕಲ್ಯಾಣ” ಎಂಬ ಹರಿಕಥೆಯು ಬೆಳಿಗ್ಗೆ 10-30 ರಿಂದ ನಡೆಯಲಿದೆ. ಮಧ್ಯಾಹ್ನ 12.22 ಕ್ಕೆ ಅಯೋಧ್ಯಾ ರಾಮನ ಪ್ರಾಣ ಪ್ರತಿಷ್ಠಾ ಸಮಯದಲ್ಲಿ ರಾಮದೇವರಿಗೆ ರಾಮ ಭಜನೆ, ರಾಮನಾಮ ಉದ್ಘೋಷದೊಂದಿಗೆ ಮಹಾ ಮಂಗಳಾರತಿಯು ನಡೆಯಲಿದೆ. ಆನಂತರ ಪ್ರಸಾದ ಭೋಜನವು ನಡೆಯಲಿದೆ. ಹಾರ್ಮೋನಿಯಂನಲ್ಲಿ ಶೇಖರ್ ಸಸಿಹಿತ್ಲು, ತಬಲಾದಲ್ಲಿ ಜನಾರ್ಧನ ಸಾಲಿಯಾನ್, ಸಂಗೀತ ಸಹಕಾರ ವಿಖ್ಯಾತ ವಿ ಭಟ್ ಅವರು ನೀಡಲಿದ್ದಾರೆ ಎಲ್ಲಾ ಶ್ರೀರಾಮ ಭಕ್ತರು ಸಂಪ್ರದಾಯದ ಉಡುಪು, ಕೇಸರಿ ಶಾಲು ಧರಿಸಿ ಬಂದು ಭಾಗವಹಿಸಿ ಈ ಪುಣ್ಯ ಸತ್ಕಾರ್ಯದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು…
ಕರ್ನಾಟಕ ಮಿಲ್ಕ್ ಫೆಡರೇಶನ್ (K.M.F) ಬೆಂಗಳೂರು ಕೇಂದ್ರ ಕಛೇರಿಗೆ ನಡೆಸಿದ ನೇಮಕಾತಿಯ ಪರೀಕ್ಷೆಯಲ್ಲಿ ಅತ್ಯುತ್ತಮ ಮೆರಿಟ್ ಅಂಕಗಳೊಂದಿಗೆ ಮೈಸೂರು ಜಿಲ್ಲೆಯ ವಿಜಯನಗರ ನಿವಾಸಿ ಶಿಲ್ಪಾ ಹೆಚ್.ಎಂ ರವರು ಆಯ್ಕೆ ಆಗಿದ್ದಾರೆ. ಈ ಮೂಲಕ ಭಾಗ್ಯೆಶ್ ರೈ ನೇತೃತ್ವದ ವಿದ್ಯಾಮಾತಾ ಅಕಾಡೆಮಿಯ ಸಾಧನೆಯ ಮುಕುಟಕ್ಕೆ ಇನ್ನೊಂದು ಗರಿ ಲಭಿಸಿದಂತಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯಲ್ಲಿ ಸಹಕಾರ ಸಂಘಗಳ ಬಗ್ಗೆ ವಿದ್ಯಾಮಾತ ಅಕಾಡೆಮಿಯಲ್ಲಿ ವಿಶೇಷ ತರಬೇತಿಯನ್ನು ನೀಡಲಾಗುತ್ತಿದ್ದು ರಾತ್ರಿ 8 ರಿಂದ 9 ಗಂಟೆವರೆಗಿನ ನಿತ್ಯ 1 ಗಂಟೆಗಳ ಆನ್ಲೈನ್ ತರಬೇತಿಯನ್ನು ಶಿಲ್ಪಾರವರಿಗೆ ನೀಡಲಾಗುತ್ತಿತ್ತು. ಅತ್ಯಧಿಕ ಮೆರಿಟ್ ನೊಂದಿಗೆ ಗ್ರೇಡ್ 2 ಹುದ್ದೆಗೆ ಆಗಿರುತ್ತಾರೆ. ಸಹಕಾರ ತತ್ವ, ಸಾಮಾನ್ಯ ಜ್ಞಾನ ಇತ್ಯಾದಿಗಳ ಬಗ್ಗೆ ವಿಶೇಷ ತರಬೇತಿಯನ್ನು ನೀಡುವುದರ ಮೂಲಕ ಸ್ಥಳೀಯ ಸಹಕಾರಿ ಬ್ಯಾಂಕ್, K.M.F ಇತ್ಯಾದಿ ಪರೀಕ್ಷೆಗಳನ್ನು ಪಾಸ್ ಮಾಡಲು ಉತ್ತೇಜಿಸಲಾಗುತ್ತಿದೆ. ಈ ಕಾರಣದಿಂದ ಕಳೆದ K.M.F ನ ಮಂಗಳೂರು ವಿಭಾಗಕ್ಕೂ 3 ಜನ ಅಭ್ಯರ್ಥಿಗಳು ಅತ್ಯಧಿಕ ಅಂಕಗಳೊಂದಿಗೆ ಆಯ್ಕೆಯಾಗಿದ್ದರು. ಇದೀಗ ಬೆಂಗಳೂರು ವಿಭಾಗಕ್ಕೆ ಆಯ್ಕೆ…
ಲಯನ್ಸ್ ಕ್ಲಬ್ ಬನ್ನಾಡಿ ವಡ್ಡರ್ಸೆ ವತಿಯಿಂದ ಬನ್ನಾಡಿ ದಿ.ಸುಬ್ಬಣ್ಣ ಹೆಗ್ಡೆ ಜನ್ಮ ಶತಾಬ್ದಿ ಸ್ಮಾರಕ ಭವನದಲ್ಲಿ ಮದರ ತೆರೆಸಾ ಅವರ 112ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಬನ್ನಾಡಿ ವಡ್ಡರ್ಸೆ ಲಯನ್ಸ್ ಕ್ಲಬ್ ನ ಅಧ್ಯಕ್ಷರಾದ ಲಯನ್ ರಾಜಾರಾಮ ಶೆಟ್ಟಿ ಕಲ್ಕಟ್ಟೆ, ಕಾರ್ಯದರ್ಶಿ ಲಯನ್ ಅಜಿತ್ ಶೆಟ್ಟಿ ಕೊತ್ತಾಡಿ, ಕೋಶಾಧಿಕಾರಿ ಲಯನ್ ಬಾಲಕೃಷ್ಣ ಶೆಟ್ಟಿ ವಡ್ಡರ್ಸೆ, ಮಾಜಿ ವಲಯಾಧ್ಯಕ್ಷರಾದ ಲಯನ್ ಬನ್ನಾಡಿ ಸೋಮನಾಥ ಹೆಗ್ಡೆ, ಬನ್ನಾಡಿ ವಡ್ಡರ್ಸೆ ಲಯನ್ಸ್ ಕ್ಲಬ್ ನ ಮಾಜಿ ಅಧ್ಯಕ್ಷರಾದ ಲಯನ್ ಕೊತ್ತಾಡಿ ಉದಯ ಕುಮಾರ್ ಶೆಟ್ಟಿ, ಹಾಗೂ ಕ್ಲಬ್ ನ ಇತರ ಸದಸ್ಯರಾದ ಲಯನ್ ಚಂದ್ರ ಶೇಖರ ಶೆಟ್ಟಿ ಯಾಳಹಕ್ಲು, ಲಯನ್ ಸುಭಾಷ್ ಶೆಟ್ಟಿ ಬನ್ನಾಡಿ, ಲಯನ್ ಪ್ರಭಾಕರ್ ಶೆಟ್ಟಿ ಬನ್ನಾಡಿ, ಲಯನ್ ಶ್ರೀಧರ್ ಶೆಟ್ಟಿ ಉಪ್ಲಾಡಿ, ಲಯನ್ ರಾಜೀವ್ ಶೆಟ್ಟಿ ಅಚ್ಲಾಡಿ, ಲಯನ್ ಜೀವನ ಬಿ.ಬಿ ಉಪ್ಲಾಡಿ, ಲಯನ್ ವಿನಯ್ ಶೆಟ್ಟಿ ಬನ್ನಾಡಿ, ಲಯನ್ ಅಶಿತ್ ಶೆಟ್ಟಿ ಬನ್ನಾಡಿ ಇವರುಗಳು ಉಪಸ್ಥಿತರಿದ್ದರು
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಉಪಾಧ್ಯಕ್ಷ ಹಾಗೂ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಕರ್ನಿರೆ ಇದರ ಬ್ರಹ್ಮ ಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಶ್ರೀ ಕರ್ನಿರೆ ವಿಶ್ವನಾಥ ಶೆಟ್ಟಿ ದಂಪತಿಗಳು ತಮ್ಮ ಮಕ್ಕಳ ಸಹಿತ ಶ್ರೀ ವಿಷ್ಣುಮೂರ್ತಿ ದೇವರಿಗೆ ಚಿನ್ನ ಲೇಪಿತ ಬಿಂಬಕ್ಕೆ ಕವಚವನ್ನು ಸಮರ್ಪಿಸಿದರು. ಈ ಸಂಧರ್ಭದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಶ್ರೀ ಐಕಳ ಹರೀಶ್ ಶೆಟ್ಟಿ, ಗಿರೀಶ್ ಶೆಟ್ಟಿ ತೆಳ್ಳಾರ್, ಕರ್ನಿರೆ ಗುತ್ತು ಹರಿಶ್ಚಂದ್ರ ಶೆಟ್ಟಿ ಉಪಸ್ಥಿತರಿದ್ದರು.
ಬಂಟರ ಸಂಘ ಮುಂಬಯಿ ಇಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಅದರ ನೂತನ ಗೌರವ ಕೋಶಾಧಿಕಾರಿಯಾಗಿ ಮುಂಬಯಿಯ ಪ್ರತಿಷ್ಠಿತ ರಮೇಶ್ ಶೆಟ್ಟಿ ಎಂಡ್ ಕಂ. ಲೆಕ್ಕಪರಿಶೋಧಕ ಹಾಗೂ ವ್ಯಾಪಾರೋದ್ಯಮ ಸಂಬಂಧಿ ತೆರಿಗೆ ಸಲಹೆಗಾರ ಸಂಸ್ಥೆಯ ಸಿಎ ರಮೇಶ್ ಶೆಟ್ಟಿ ಅವರು ಅವಿರೋಧವಾಗಿ ಆಯ್ಕೆಯಾದರು. ಬಾಲ್ಯದ ದಿನಗಳಿಂದಲೇ ತೀಕ್ಷ್ಣ ಹಾಗೂ ಕುಶಾಗ್ರಮತಿಯಾಗಿದ್ದ ರಮೇಶ್ ಶೆಟ್ಟಿ ತನ್ನ ಪ್ರಾಥಮಿಕ ಶಿಕ್ಷಣವನ್ನು ಕೈನಾಲ್ ಪ್ರಾಥಮಿಕ ಶಿಕ್ಷಣ ಸಂಸ್ಥೆ ಮತ್ತು ಮುಂಡ್ಕೂರು ಪ್ರಾಥಮಿಕ ಶಾಲೆಗಳಲ್ಲಿ ಪೂರೈಸಿದರು. ಹೈಸ್ಕೂಲು ಮತ್ತು ಪದವಿ ಪೂರ್ವ ಶಿಕ್ಷಣವನ್ನು ಮುಂಡ್ಕೂರಿನ ಪ್ರಸಿಧ್ಧ ವಿವಿಪಿಸಿಯಲ್ಲಿ ಮುಗಿಸಿದ ಬಳಿಕ ಮುಂದಿನ ಶಿಕ್ಷಣ ಪಡೆಯಲು ಮುಂಬಯಿಗೆ ಆಗಮಿಸಿದ ಯುವಕ ರಮೇಶ್ ಅವರು ವಡಲಾದ ಪ್ರತಿಷ್ಠಿತ ಎಸ್ ಐ ಡಬ್ಲ್ಯೂ ಎಸ್ ಕಾಲೇಜಿನಲ್ಲಿ ವಾಣಿಜ್ಯ ಪದವಿ ಪೂರೈಸಿದವರು. ಅಲ್ಲಿಗೆ ತನ್ನ ಶಿಕ್ಷಣವನ್ನು ಕೊನೆಗೊಳಿಸದೆ ಉನ್ನತ ಶಿಕ್ಷಣ ಪಡೆಯುವ ಮಹತ್ವಾಕಾಂಕ್ಷೆಯಿಂದ ಐಸಿಎಐ ಮುಖಾಂತರ ವಿಶೇಷ ತರಬೇತಿ ಪಡೆದು ಸಿಎ ಪದವಿ ಮುಗಿಸಿದರು. ಬಳಿಕ ಆ ದಿನಗಳಲ್ಲಿ ಬಹಳ ಬೇಡಿಕೆಯಲ್ಲಿದ್ದ ಉದ್ಯಮದಲ್ಲಿ ತನ್ನನ್ನು…
ಕಳೆದ ನಾಲ್ಕು ದಶಕಗಳಿಂದ ಮುಂಬಯಿಯ ಸಾಂಸ್ಕೃತಿಕ ಕ್ಷೇತ್ರದಲ್ಲಿ ವೈವಿಧ್ಯಮಯ, ಹಾಗೂ ಅರ್ಥಪೂರ್ಣ ತುಳು ಸಮ್ಮೇಳನ, ತುಳುವರ ಹಬ್ಬಗಳ ಆಚರಣೆ ಮತ್ತು ತುಳುವರ ಆಚಾರ ವಿಚಾರಗಳನ್ನು ತಿಳಿಸುವ ಭಿನ್ನ ರೀತಿಯ ಕಾರ್ಯಕ್ರಮಗಳನ್ನು ನಿರಂತರ ನೀಡುತ್ತಾ ಬಂದಿರುವ ಮುಂಬಯಿ ತುಳು ಕನ್ನಡಿಗರ ಹೆಮ್ಮೆಯ ಸಂಸ್ಥೆ “ಕಲಾ ಜಗತ್ತು ಮುಂಬಯಿ” ಜುಲೈ 23 ರಂದು ಸಾಂತಾಕ್ರೂಸ್ ಪೇಜಾವರ ಮಠ ಸಭಾಗೃಹದಲ್ಲಿ ಏರ್ಪಡಿಸಲಿರುವ ‘ಆಟಿದ ಪೊರ್ಲು ತಿರ್ಲ್ ‘ ತೋನ್ಸೆ ವಿಜಯಕುಮಾರ್ ಶೆಟ್ಟಿಯವರ ನೂತನ ಪರಿಕಲ್ಪನೆಯ ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ತಾ.08/07/2023 ರಂದು ಸಂಜೆ ಬಿಲ್ಲವ ಭವನದಲ್ಲಿ ಏರ್ಪಡಿಸಲಾಗಿತ್ತು. ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಪ್ರಸಿದ್ಧ ನಾಟಕ ನಿರ್ದೇಶಕ ಶ್ರೀ ವಿಜಯಕುಮಾರ್ ಶೆಟ್ಟಿ ತೋನ್ಸೆ ಅವರು ಮಾತನಾಡುತ್ತಾ, ಈ ಕಾರ್ಯಕ್ರಮದ ಉದ್ದೇಶ ನಮ್ಮ ತುಳುನಾಡಿನ ಸಂಸ್ಕೃತಿಯನ್ನು ಇಂದಿನ ಪೀಳಿಗೆಗೆ ಪರಿಚಯಿಸುವುದು ಮಾತ್ರವಲ್ಲದೆ ತುಳುವರ ಆರಾಧನೆ, ಆಚರಣೆಗಳ ಬಗ್ಗೆಯೂ ತಿಳುವಳಿಕೆಯನ್ನು ನೀಡುವುದಾಗಿದೆ. ಈ ಕಾರ್ಯಕ್ರಮಕ್ಕೆ ಒಳನಾಡಿನ ಹೆಸರಾಂತ ವಾಗ್ಮಿಗಳು ಆಗಮಿಸಲಿದ್ದು ಇದರ ಪ್ರಯೋಜನವನ್ನು ತುಳುವ ಕನ್ನಡಿಗರು ಪಡೆಯುವಂತಾಗಬೇಕು ಎಂದು ಅವರು…
ಮುಂಬಯಿಯ ಪ್ರತಿಷ್ಠಿತ ಜಾತೀಯ ಸಂಘಟನೆ ಬೋಂಬೆ ಬಂಟ್ಸ್ ಎಸೋಸಿಯೇಶನ್ ಸಂಸ್ಥೆಯ ಮಾಜಿ ಅಧ್ಯಕ್ಷರಾದ ಜಯ ಎನ್ ಶೆಟ್ಟಿ ಅವರಿಗೆ ಬೋಂಬೆ ಬಂಟ್ಸ್ ಎಸೋಸಿಯೇಶನ್ ವತಿಯಿಂದ ಶ್ರದ್ಧಾಂಜಲಿ ಸಭೆಯು ಜ 20 ರಂದು ಶನಿವಾರ ಸಂಜೆ 4:00ಗೆ ಸಯನ್ ನಿತ್ಯಾನಂದ ಸಭಾಗೃಹದಲ್ಲಿ ಜರಗಲಿದೆ. ಬೋಂಬೆ ಬಂಟ್ಸ್ ಎಸೋಸಿಯೇಶನ್ ಅಧ್ಯಕ್ಷ ಸಿಎ ಸುರೇಂದ್ರ ಕೆ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಶ್ರದ್ಧಾಂಜಲಿ ಸಭೆಗೆ ಸದಸ್ಯರೆಲ್ಲರೂ ಹಾಗೂ ಜಯ ಎನ್ ಶೆಟ್ಟಿ ಅವರ ಅಭಿಮಾನಿಗಳು ಬಂಧು-ಬಳಗವು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿರಬೇಕಾಗಿ ಪತ್ರಿಕಾ ಪ್ರಕಟಣೆಯಲ್ಲಿ ಬೋಂಬೆ ಬಂಟ್ಸ್ ಎಸೋಸಿಯೇಶನ್ ಉಪಾಧ್ಯಕ್ಷ ನ್ಯಾ. ಡಿ ಕೆ ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಐಕಳ ಕಿಶೋರ್ ಶೆಟ್ಟಿ, ಗೌರವ ಕೋಶಾಧಿಕಾರಿ ಸಿಎ ವಿಶ್ವನಾಥ್ ಶೆಟ್ಟಿ, ಜೊತೆ ಕಾರ್ಯದರ್ಶಿ ಅಡ್ವಕೇಟ್ ಗುಣಾಕರ್ ಶೆಟ್ಟಿ, ಜೊತೆ ಕೋಶಾಧಿಕಾರಿ ಸಿಎ ದಿವಾಕರ್ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ ತೇಜಾಕ್ಷಿ ಎಸ್ ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷೆ ದೃಶ್ಯ ಶೆಟ್ಟಿ ಹಾಗೂ ಸಮಿತಿ ಸದಸ್ಯರು, ಮಾಜಿ ಅಧ್ಯಕ್ಷರುಗಳು,…
ಮುಂಬಯಿ ಮಹಾನಗರದ ಪ್ರತಿಷ್ಠಿತ ಸಮಾಜಸೇವಾ ಸಂಸ್ಥೆ ಬಂಟರ ಸಂಘ ಮುಂಬಯಿ ಇದರ 2023 – 26 ರ ಮೂರು ವರ್ಷಗಳ ಅವಧಿಗೆ ಬಂಟರ ಸಂಘದ ಶ್ರೀಮತಿ ರಾಧಾಬಾಯಿ ಟಿ ಭಂಡಾರಿ ಸಭಾಗೃಹದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ನೂತನ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಹಾಗೂ ನಿರ್ಗಮನ ಮತ್ತು ನೂತನ ಆಗಮನ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ನಡೆಯಿತು. ಸಭೆಯಲ್ಲಿ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿಯವರು ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆಯಾಗಿ ಚಿತ್ರಾ ಆರ್ ಶೆಟ್ಟಿಯವರನ್ನು ಆಯ್ಕೆ ಮಾಡಿರುವುದಾಗಿ ಪ್ರಕಟಿಸಿದರು. ಡಿಸೆಂಬರ್ 2 ರಂದು ಸಂಜೆ ಬಂಟರ ಭವನದಲ್ಲಿ ನಡೆದ ಸಭೆಯಲ್ಲಿ ಸಂಘದ ಎಲ್ಲಾ ವಿಶ್ವಸ್ಥರು, ಮಾಜಿ ಅಧ್ಯಕ್ಷರು, ನಿರ್ಗಮನ ಮತ್ತು ನೂತನ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಮಹಿಳಾ ವಿಭಾಗದ ಉಪ ಕಾರ್ಯಾಧ್ಯಕ್ಷೆಯಾಗಿ ಕಾರ್ಯ ನಿರ್ವಹಿಸಿದ್ದ ಚಿತ್ರಾ ಆರ್ ಶೆಟ್ಟಿಯವರನ್ನು ಸಂಘದ ಮಹಿಳಾ ವಿಭಾಗದ ನೂತನ ಕಾರ್ಯಾಧ್ಯಕ್ಷೆಯಾಗಿ ಆಯ್ಕೆಯಾಗಿರುವುದನ್ನು ಅನುಮೋದಿಸಿ ಪುಷ್ಪ ಗೌರವ ನೀಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಬಂಟರ ಸಂಘದ ಮಾಜಿ ಅಧ್ಯಕ್ಷ, ಜಾಗತಿಕ…
ಜ್ಞಾನಸರೋವರ ಅಂತರ್ರಾಷ್ಟ್ರೀಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ಪದಗ್ರಹಣ ಸಮಾರಂಭವನ್ನು ನಡೆಸಲಾಯಿತು. ಕಾರ್ಯಕ್ರಮದಲ್ಲಿ ಜ್ಞಾನಸರೋವರ ಅಂತರಾಷ್ಟ್ರೀಯ ವಸತಿ ಶಾಲೆಯ ಸಂಸ್ಥಾಪಕರಾದ ಶ್ರೀ ಸುಧಾಕರ ಎಸ್ ಶೆಟ್ಟಿಯವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಮಾತನಾಡುತ್ತ, ನಾಯಕತ್ವ ಎನ್ನುವುದು ಒಂದು ರೀತಿಯ ಜವಾಬ್ದಾರಿಯೇ ಹೊರತು ಅಧಿಕಾರವಲ್ಲ ಎಂದು ಹೇಳುವುದರ ಜೊತೆಗೆ ಪೋಷಕರು ತಮ್ಮ ಮಕ್ಕಳಿಗೆ ಸರಿಯಾದ ಮಾರ್ಗದರ್ಶನವನ್ನು, ಆತ್ಮ ವಿಶ್ವಾಸವನ್ನು ತುಂಬಬೇಕು ಎಂದು ಹೇಳಿದರು. ಯಾವುದೇ ಧರ್ಮ ಬೇಧವಿಲ್ಲದೆ ನಾವೆಲ್ಲರೂ ಸಮಾನರು, ನಾವೆಲ್ಲರೂ ಒಂದೇ ಎನ್ನುವಂತಹ ಮನೋಭಾವನೆ ವಿದ್ಯಾರ್ಥಿಗಳಲ್ಲಿ ಮೂಡಿ ಬರಬೇಕು ಎಂದು ಅವರು ಹೇಳಿದರು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮೈಸೂರಿನ ಸರ್ಕಲ್ ಇನ್ಸ್ಪೆಕ್ಟರ್ ಶ್ರೀಮತಿ ಸ್ವರ್ಣ ಜಿ ಎಸ್ ರವರು ಮಾತನಾಡುತ್ತ ನಾಯಕತ್ವ ಎಂಬುದು ಒಂದು ಹಡಗಿನಂತೆ ವಿದ್ಯಾರ್ಥಿಗಳು ನಾವಿಕರಂತೆ ಎಂದು ಹೇಳುವುದರ ಜೊತೆಗೆ ಜ್ಞಾನಸರೋವರ ಅಂತರ್ರಾಷ್ಟ್ರೀಯ ವಸತಿ ಶಾಲೆಯು, ಅಂತರರಾಷ್ಟ್ರೀಯ ಮಟ್ಟದ ಶಾಲೆ ಆಗಿದ್ದರೂ ನಮ್ಮ ಭಾರತೀಯ ಸಂಸ್ಕೃತಿಯನ್ನು ಬಿಟ್ಟುಕೊಟ್ಟಿಲ್ಲ ಎಂಬುದರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಹಾಗೆ ತಮ್ಮ ಹದಿಮೂರು ವರ್ಷದ ವೃತ್ತಿಜೀವನದಲ್ಲಿ…
ಆಳ್ವಾಸ್ ದೂರ ಶಿಕ್ಷಣ ಕಲಿಕಾರ್ಥಿ ಸಹಾಯ ಕೇಂದ್ರ: ಶೈಕ್ಷಣಿಕ ಪ್ರವೇಶಾತಿಗೆ ಆಹ್ವಾನ ದೂರ ಶಿಕ್ಷಣ, ಆಳ್ವಾಸ್ನಲ್ಲಿ ಅವಕಾಶ
ವಿದ್ಯಾಗಿರಿ: ಆಳ್ವಾಸ್ ಪದವಿ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಸಹಯೋಗದ ‘ಆಳ್ವಾಸ್ ದೂರ ಶಿಕ್ಷಣ ಕಲಿಕಾರ್ಥಿ ಸಹಾಯ ಕೇಂದ್ರ’ವು 2023- 2024ರ ಜನವರಿ ಆವೃತ್ತಿಯ ಪ್ರಥಮ ವರ್ಷದ ಶೈಕ್ಷಣಿಕ ಕಾರ್ಯಕ್ರಮಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಿದೆ. ಸ್ನಾತಕೋತ್ತರ (ಪಿಜಿ)ದಲ್ಲಿ ಎಂ.ಎ- ಶಿಕ್ಷಣ, ಕನ್ನಡ, ಇಂಗ್ಲಿಷ್, ಹಿಂದಿ, ತೆಲುಗು, ಇತಿಹಾಸ, ರಾಜ್ಯಶಾಸ್ತ್ರ, ಸಾರ್ವಜನಿಕ ಆಡಳಿತ, ಉರ್ದು, ಸಂಸ್ಕೃತ, ಸಮಾಜಶಾಸ್ತ್ರ, ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ಅಧ್ಯಯನ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಹಾಗೂ ಎಂ.ಎಸ್.ಡಬ್ಲ್ಯೂ, ಎಂ.ಬಿ.ಎ-ಆನ್ಲೈನ್ ಪ್ರವೇಶ ಪರೀಕ್ಷೆ ಮೂಲಕ (ಫೈನಾನ್ಸ್, ಮಾರ್ಕೆಟಿಂಗ್, ಎಚ್.ಆರ್. ಆಪರೇಷನ್. ಟೂರಿಸಂ ಕಾಪ್ರೊರೇಟ್ ಲಾ, ಇನ್ಫರ್ಮನೇಷನ್ ಟೆಕ್ನಾಲಜಿ, ಆಸ್ಪತ್ರೆ ಮತ್ತುಆರೋಗ್ಯ ಕಾಳಜಿ ನಿರ್ವಹಣೆ.), ಎಂ.ಕಾಂ ಡ್ಯುಯೆಲ್ ಸ್ಪೆಷಲೈಜೇಷನ್ ( ಅಕೌಂಟಿಂಗ್ ಮತ್ತು ಫೈನಾನ್ಸ್ / ಎಚ್ಆರ್ ಎಂ ಮಾರ್ಕೆಟಿಂಗ್ ಮ್ಯಾನೇಜ್ಮೆಂಟ್ ಮತ್ತು ಎಚ್ಆರ್ಎಂ / ಫೈನಾನ್ಸ್), ಎಂ.ಸಿ.ಎ, ಎಂ.ಲಿಬ್.ಐ.ಎಸ್ಸಿ, ಎಂ.ಎಸ್ಸಿ (ಭೌತಶಾಸ್ತ್ರ, ರಸಾಯನ ಶಾಸ್ತ್ರ, ಗಣಿತ, ಬಯೋಕೆಮಿಸ್ಟ್ರಿ, ಬಯೋಟೆಕ್ನಾಲಜಿ, ಕ್ಲಿನಿಕಲ್ ನ್ಯೂಟ್ರಿಷನ್ ಮತ್ತು ಡಯಟಿಷಿಯನ್, ಪರಿಸರ…