Author: admin
ಆಕರ್ಷಕ ಪಥಸಂಚಲನ, ಕ್ರೀಡಾ ಜ್ಯೋತಿ ಆಗಮನ, ಧ್ವಜಾರೋಹಣ, ಕ್ರೀಡಾ ಪ್ರತಿಜ್ಞೆ ಸ್ವೀಕಾರ – ಇತ್ಯಾದಿಗಳೊಂದಿಗೆ 2023 – 24 ನೇ ಸಾಲಿನ ಕರ್ನಾಟಕ ವಿದ್ಯಾಸಂಸ್ಥೆಗಳು ಮಾಣಿ ಇದರ ವಾರ್ಷಿಕ ಕ್ರೀಡೋತ್ಸವದ ಉದ್ಘಾಟನೆ ಕಾರ್ಯಕ್ರಮ ನಡೆಯಿತು. ನಿವೃತ್ತ ಮುಖ್ಯ ಶಿಕ್ಷಕರಾದ ಬಿ. ಕೆ. ಭಂಡಾರಿ ಮುಖ್ಯ ಅತಿಥಿಯಾಗಿ ಆಗಮಿಸಿ “ಪಾಠ ಮತ್ತು ಆಟ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ, ಆಟಗಳಿಂದ ಆತ್ಮಸ್ಥೈರ್ಯ ಮತ್ತು ಮಾನಸಿಕ ಕ್ಷಮತೆ ಹೆಚ್ಚಾಗುತ್ತದೆ” ಎಂದರು. ಇನ್ನೋರ್ವ ಮುಖ್ಯ ಅತಿಥಿಯಾದ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಲಯನ್ಸ್ ಕ್ಲಬ್ ಮಾಣಿ ಇದರ ಸ್ಥಾಪಕಾಧ್ಯಕ್ಷರಾದ ಲಯನ್ ಗಂಗಾಧರ್ ರೈ ವಿದ್ಯಾರ್ಥಿಗಳಿಗೆ ಶುಭ ಹಾರೈಕೆ ಮಾಡಿದರು. ವಿದ್ಯಾಭಿವರ್ಧಕ ಸಂಘ (ರಿ) ಮಾಣಿ ಇದರ ಅಧ್ಯಕ್ಷರಾದ ರೊ. ಕಿರಣ್ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಸಂಚಾಲಕರಾದ ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಹಾಜಿ. ಇಬ್ರಾಹಿಂ, ಗ್ರಾ.ಪಂ. ಸದಸ್ಯರಾದ ಬಾಲಕೃಷ್ಣ ಆಳ್ವ ಕೊಡಾಜೆ ಮತ್ತು ಮೆಲ್ವಿನ್ ಕಿಶೋರ್ ಮಾರ್ಟಿಸ್, ಶಿಕ್ಷಕ – ರಕ್ಷಕ ಸಂಘದ…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯವರ ನೇತೃತ್ವದಲ್ಲಿ ಅಕ್ಟೋಬರ್ 28 ಮತ್ತು 29ರಂದು ಉಡುಪಿಯಲ್ಲಿ ನಡೆಯಲಿರುವ ವಿಶ್ವ ಬಂಟರ ಸಮ್ಮೇಳನ-2023 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಬುಧವಾರ ಸಂಜೆ ನಗರದ ಗೋಲ್ಡ್ ಫಿಂಚ್ ಖಾಸಗಿ ಹೋಟೆಲ್ ನಲ್ಲಿ ಜರುಗಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಮಾತನಾಡಿ, “ಐಕಳ ಹರೀಶ್ ಶೆಟ್ಟಿಯವರು ಬಂಟ ಸಮಾಜದ ಅತ್ಯಧ್ಭುತ ನಾಯಕ. ಅವರಲ್ಲಿನ ಸಂಘಟನಾ ಶಕ್ತಿ ಇತರರಿಗೆ ಮಾದರಿ. ಇಂದು ವಿಶ್ವ ಬಂಟರ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಿದ್ದೇವೆ. ಇದು ಬಂಟ ಸಮಾಜದ ಮನೆ ಮನೆಗೆ ತಲುಪಲಿ ಆ ಮೂಲಕ ಒಂದೇ ವೇದಿಕೆಯಡಿಯಲ್ಲಿ ಸಮಾಜದ ಎಲ್ಲರೂ ಪಾಲ್ಗೊಳ್ಳುವಂತಾಗಲಿ, ಸಮ್ಮೇಳನದಿಂದ ಸಮಾಜಕ್ಕೆ ಪ್ರಯೋಜನವಾಗಲಿ” ಎಂದು ಶುಭ ಹಾರೈಸಿದರು. ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಮಾತನಾಡಿ, “ಕಾರ್ಯಕ್ರಮ ಖಂಡಿತಾ ಯಶಸ್ವಿಯಾಗುತ್ತದೆ. ಆದರೆ ದೊಡ್ಡ ಸಂಖ್ಯೆಯಲ್ಲಿ…
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ತುಳು ಕನ್ನಡಿಗರು ಒಂದಿಲ್ಲೊಂದು ಕ್ಷೇತ್ರದಲ್ಲಿ ತಮ್ಮದೇ ಆದ ವಿಶಿಷ್ಟ ಪ್ರತಿಭಾ ಸಂಪನ್ನತೆಯಿಂದ ಗುರುತಿಸಿಕೊಂಡವರು. ಅದು ವ್ಯಾಪಾರ ಉದ್ಯಮವಿರಲಿ, ವೈದ್ಯಕೀಯ ತಾಂತ್ರಿಕ ಕ್ಷೇತ್ರಗಳಿರಲಿ, ರಾಜಕೀಯ ರಂಗವಿರಲಿ ನಮ್ಮವರು ಸಾಧಿಸಿದ ವಿಕ್ರಮಗಳು ಜಗಜ್ಜಾಹೀರಾಗಿ ವಿಶ್ವದ ಮೂಲೆ ಮೂಲೆಗಳಿಂದ ಪ್ರಶಂಸೆಗೆ ಪಾತ್ರವಾಗಿದೆ. ಆದರೆ ಇನ್ನೊಂದು ವರ್ಗದ ಜನ ಸಾಹಿತ್ಯ, ಕಲೆ, ಶಿಕ್ಷಣ, ಸಾಂಸ್ಕೃತಿಕ ಸಂಘಟನೆ, ಸಂಗೀತ, ನಾಟಕ, ಯಕ್ಷಗಾನ, ಚಿತ್ರಕಲೆ, ಸಮಾಜಸೇವೆ ಹೀಗೆ ಭಿನ್ನವಾದ ತಮಗೆ ಅಭಿರುಚಿ ಇರುವ ಮನಸ್ಸಿಗೆ ಖುಷಿ ನೀಡುವ ಒಟ್ಟಾರೆಯಾಗಿ ಹೇಳುವುದಾದರೆ ತಮಗೆ ದೈವದತ್ತವಾಗಿಯೋ, ಪಾರಂಪರಿಕ ಹಿನ್ನೆಲೆಯಿಂದಲೋ ಬಂದ ಸ್ವಸಾಮರ್ಥ್ಯ ಪ್ರತಿಭೆಗಳನ್ನು ಅರ್ಥಮಾಡಿಕೊಂಡು ನಿರಂತರ ಸಾಧನೆ ಅಧ್ಯಯನ ಮೂಲಕ ಗುರಿ ಮೀರಿದ ಸಾಧನೆಗಳಿಂದ ಗುರುತಿಸಿಕೊಂಡಿರುತ್ತಾರೆ. ತಾವು ಹುಟ್ಟಿದ ನೆಲದಲ್ಲಿ ಆರ್ಥಿಕ ಪ್ರಗತಿಗೆ ತೊಡಕಾದಾಗ ಅಥವಾ ಸಂಪನ್ಮೂಲಗಳ ಕೊರತೆ ಕಂಡಾಗ ಅವರು ತಮ್ಮ ಬದುಕನ್ನು ಕಟ್ಟಿಕೊಳ್ಳಲು ಕೌಟುಂಬಿಕ ಜೀವನದಲ್ಲಿ ಏಳಿಗೆ ಕಂಡುಕೊಳ್ಳಲು ಹುಟ್ಟಿದ ಊರನ್ನು ಬಿಟ್ಟು ಭವಿಷ್ಯದ ಕನಸಿನ ಮೂಟೆ ಕಟ್ಟಿಕೊಂಡು ನಗರಗಳನ್ನೋ ಕೊಲ್ಲಿ ರಾಷ್ಟಗಳನ್ನೋ ಸೇರಿ…
ತುಳುನಾಡಿನ ಧಾರ್ಮಿಕ ಆಚರಣೆಗಳ ಹಿನ್ನೆಲೆಯಿರುವ 28ನೇ ವರ್ಷದ ಶಿರ್ವ ನಡಿಬೆಟ್ಟು ಸೂರ್ಯ-ಚಂದ್ರ ಸಂಪ್ರದಾಯ ಬದ್ಧ ಜೋಡುಕರೆ ಕಂಬಳವು ಡಿ. 3 ರಂದು ನಡಿಬೆಟ್ಟು ಕಂಬಳ ಗದ್ದೆಯಲ್ಲಿ ನಡೆಯಿತು. ಎಲ್ಲೂರು ಶ್ರೀ ವಿಶ್ವೇಶ್ವರ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ಎಲ್ಲೂರುಗುತ್ತು ಪ್ರಫುಲ್ಲ ಶೆಟ್ಟಿ ದೀಪ ಬೆಳಗಿಸಿ ಜೋಡುಕರೆಗೆ ಕಾಯಿ ಒಡೆಯುವುದರ ಮೂಲಕ ಕಂಬಳವನ್ನು ಉದ್ಘಾಟಿಸಿದರು. ನಡಿಬೆಟ್ಟು ಚಾವಡಿಯ ದೈವ ಜುಮಾದಿಗೆ ಪೂಜೆ ಪುರಸ್ಕಾರ ನಡೆದ ಬಳಿಕ ಬಂಟ ಕೋಲ ನಡೆದು ಮೆರವಣಿಗೆಯಲ್ಲಿ ಕೊಂಬು, ವಾದ್ಯ ಘೋಷಗಳೊಂದಿಗೆ ಮನೆಯ ಕೋಣಗಳನ್ನು ಗದ್ದೆಗಿಳಿಸಲಾಯಿತು. ಹಗ್ಗ ಕಿರಿಯ ವಿಭಾಗದಲ್ಲಿ 29 ಜತೆ ಕೋಣಗಳು ಮತ್ತು ಸಬ್ ಜೂನಿಯರ್ ವಿಭಾಗದಲ್ಲಿ 22 ಜತೆ ಒಟ್ಟು 51 ಜತೆ ಕೋಣಗಳು ಕಂಬಳದಲ್ಲಿ ಭಾಗವಹಿಸಿದ್ದವು. ಕೋಣಗಳ ಸ್ಪರ್ಧೆ ಮುಗಿದ ಬಳಿಕ ಮನೆತನದ ಕೋಣಗಳನ್ನು ಗದ್ದೆಗಿಳಿಸಿ ಓಡಿಸುವುದರೊಂದಿಗೆ ಸಾಂಪ್ರದಾಯಿಕ ಕಂಬಳ ಸಂಪನ್ನಗೊಂಡಿತು. ಕಾರ್ಯಕ್ರಮದಲ್ಲಿ ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ತಿಂಗಳೆ…
ಕಾಂಗ್ರೆಸ್ ಬೆಂಬಲಿತ ಅಧ್ಯಕ್ಷ ಕೆ.ಆರ್.ಪಾಟ್ಕರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಶಿರ್ವ ಗ್ರಾ.ಪಂ. ಅಧ್ಯಕ್ಷ ಗಾದಿಗೆ ಚುನಾವಣೆ ನಡೆದು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ರತನ್ ಕುಮಾರ್ ಶೆಟ್ಟಿ ಕಲ್ಲೊಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಹುದ್ದೆಗಾಗಿ ಕಾಂಗ್ರೆಸ್ ಬೆಂಬಲಿತ ರತನ್ ಕುಮಾರ್ ಶೆಟ್ಟಿ ಮತ್ತು ಬಿಜೆಪಿ ಬೆಂಬಲಿತರಾಗಿ ಶ್ರೀನಿವಾಸ ಶೆಣೈ ನಾಮಪತ್ರ ಸಲ್ಲಿಸಿದ್ದರು. ಅಧ್ಯಕ್ಷರಾಗಿ ರತನ್ ಕುಮಾರ್ ಶೆಟ್ಟಿ 20-14 ಮತಗಳ ಅಂತರದಲ್ಲಿ ಜಯ ಶಾಲಿಯಾಗಿದ್ದಾರೆ. 34 ಸದಸ್ಯಬಲದ ಶಿರ್ವ ಗ್ರಾ.ಪಂ. ನಲ್ಲಿ ಕಾಂಗ್ರೆಸ್ ಬೆಂಬಲಿತ 19 ಗ್ರಾ.ಪಂ.ಸದಸ್ಯರಿದ್ದು, ಅನಿರೀಕ್ಷಿತ ಬೆಳವಣಿಗೆಯಲ್ಲಿ ಬಿಜೆಪಿಯ ಒಂದು ಮತ ಕಾಂಗ್ರೆಸ್ ಪಾಲಾಗಿದೆ. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮತ್ತು ಕಾಪು ಕ್ಷೇತ್ರಾಧ್ಯಕ್ಷ ನವೀನ್ಚಂದ್ರ ಜೆ. ಸುವರ್ಣ ಉಪಸ್ಥಿತರಿದ್ದು ರತನ್ಕುಮಾರ್ ಶೆಟ್ಟಿಯವರನ್ನು ಅಭಿನಂದಿಸಿದ್ದಾರೆ. ಚುನಾಣಾಧಿಕಾರಿಯಾಗಿ ಉಡುಪಿ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಗುರುಪ್ರಸಾದ್ ಚುನಾವಣೆಯ ಪ್ರಕ್ರಿಯೆ ನಡೆಸಿಕೊಟ್ಟರು.
ಬಂಟರ ಸಂಘ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮತ್ತು ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇವರ ಸಹಯೋಗದೊಂದಿಗೆ ಜನವರಿ 21 ರಂದು ಭಾನುವಾರ ಬೆಳಿಗ್ಗೆ 8.30 ಕ್ಕೆ ಗೋವಿಂದದಾಸ ಕಾಲೇಜ್ ಕ್ರೀಡಾಂಗಣದಲ್ಲಿ ಬಂಟರ ಕ್ರೀಡೋತ್ಸವ ನಡೆಯಲಿದೆ. ಕ್ರೀಡಾಕೂಟವನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಉದ್ಘಾಟಿಸಲಿದ್ದಾರೆ. ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಡಾ. ವೈ ಭರತ್ ಶೆಟ್ಟಿ, ಮನಪಾ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಕರ್ನಾಟಕ ಪ್ರದೇಶ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾ. ಬ್ರಿಜೇಶ್ ಚೌಟ, ಬಂಟರ ಯಾನೆ ನಾಡವರ ಮಾತೃ ಸಂಘದ ಪ್ರಧಾನ ಕಾರ್ಯದರ್ಶಿ ಕೆ ಎಂ ಶೆಟ್ಟಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ತೆರಿಗೆ ಹಣಕಾಸು ನಿರ್ಧರಣೆ ಸ್ಥಾಯಿ ಸಮಿತಿಯ ಅಧ್ಯಕ್ಷ…
ವಿದ್ಯಾಗಿರಿ: ‘ಜೀವನದಲ್ಲಿ ಎಲ್ಲವೂ ಯಶಸ್ವಿ ಆಗಬೇಕಾಗಿಲ್ಲ ಸೋಲನ್ನೂ ಧೈರ್ಯದಿಂದ ಎದುರಿಸುವ ಛಲವನ್ನು ಬೆಳಸಿಕೊಳ್ಳಬೇಕು’ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು. ವಿದ್ಯಾಗಿರಿಯ ಮುಂಡ್ರೆದೆಗುತ್ತು ಕೆ. ಅಮರನಾಥ ಶೆಟ್ಟಿ – ಕೃಷಿ ಸಿರಿ ವೇದಿಕೆಯಲ್ಲಿ ಆಳ್ವಾಸ್ ಇಂಗ್ಲಿಷ್ ಮಾಧ್ಯಮ ಶಾಲೆಯ ವಾರ್ಷಿಕೋತ್ಸವವನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು. ವಿಧ್ಯಾರ್ಥಿಗಳ ಏಳಿಗೆಗೆ ಶ್ರಮಪಡುವ ಶಿಕ್ಷಕರೇ ನಿಜವಾದ ಶಿಕ್ಷಕರು. ಶಾಲೆಗಳಲ್ಲಿ ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆ ವರೆಗೆ ಏನು ಕಲಿಯುತ್ತೀರೋ, ಅಷ್ಟೇ ಮುಖ್ಯ ಅದರ ಬಳಿಕ ನೀವು ಏನನ್ನು ಕಲಿಯುತ್ತೀರಿ ಎಂಬುದು ಎಂದು ಹೇಳಿದರು. ಆಳ್ವಾಸ್ನ ರಾಜ್ಯ ಪಠ್ಯಕ್ರಮದಡಿಯ ಒಂದೇ ಶಾಲೆಯಲ್ಲಿ 1800 ವಿದ್ಯಾರ್ಥಿಗಳು ಕಲಿಯುತ್ತಿರುವುದು ನಮ್ಮ ಗುಣಮಟ್ಟವನ್ನು ತಿಳಿಸುತ್ತದೆ. ನಮ್ಮ ವಿದ್ಯಾರ್ಥಿಗಳ ಸಾಧನೆಯೇ ಆಳ್ವಾಸ್ನ ಸಾಧನೆ. ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್ ಮಾತನಾಡಿ, ಆಳ್ವಾಸ್ ವಿದ್ಯಾರ್ಥಿಗಳ ಬಹುಭಾಷಾ ಅಭಿವೃದ್ಧಿಗೆ ಪೂರಕವಾದ ವಾತವರಣವನ್ನು ಶಾಲೆಯ ಆವರಣದಲ್ಲಿ ಬಹುಮುಖಿ ಆಯಾಮದಲ್ಲಿ ಸೃಷ್ಠಿಲಾಗಿದೆ. ಇದು ವಿದ್ಯಾರ್ಥಿಗಳ ಬೌದ್ಧಿಕ, ಸಾಮಾಜಿಕ, ಭಾವನಾತ್ಮಕ…
ಕುಂದ ವರ್ಮನೆಂಬ ಅರಸ ಪಂಚ ಗಂಗಾವಳಿಯ ಹತ್ತಿರ ಕುಂದೇಶ್ವರ ದೇವಾಲಯವನ್ನು ಕಟ್ಟಿಸಿದ್ದು, ಅದರಿಂದಾಗಿ ಕುಂದಾಪುರವೆಂದು ಹೆಸರು ಬಂತು ಎನ್ನಲಾಗುವ ಪರಂಪರೆಯನ್ನು ಮೈಗೂಡಿಸಿಕೊಂಡ ದೇವಸ್ಥಾನ ದೈವಸ್ಥಾನಗಳ ನೆಲೆ ಬೀಡು. ಕಡಲು ನದಿಗಳ ಸುಂದರ ಸಂಗಮ, ಆಕಾಶಕ್ಕೆ ಸಡ್ಡು ಹೊಡೆದು ನಿಂತ ಗುಡ್ಡ ಬೆಟ್ಟಗಳಿಂದ ಆವೃತವಾದ ನಯನ ಮನೋಹರ ಪಶ್ಚಿಮ ಘಟ್ಟಗಳ ದಟ್ಟ ಹಸಿರ ನಿಸರ್ಗದ ಮಡಿಲಲ್ಲಿ ಜಲಧಾರೆಯಾಗಿ ಹರಿವ ನದಿ ತೊರೆಗಳ ನಾಡು. ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಅನರ್ಘ ರತ್ನಗಳನ್ನು ನೀಡಿದ ವಿಶಿಷ್ಟತೆಯ ತವರು ಕುಂದಾಪುರ. ನಾಟಕ, ಯಕ್ಷಗಾನ, ಸಾಹಿತ್ಯ, ಶಿಕ್ಷಣ, ಹೀಗೆ ಹಲವಾರು ಕ್ಷೇತ್ರದಲ್ಲಿ ಮುಂಚೂಣಿಯಲ್ಲಿ ಕಂಗೊಳಿಸುವ ಕುಂದಾಪುರದ ಆಡು ಭಾಷೆ ಕುಂದಾಪ್ರ ಕನ್ನಡ. ಆಷಾಢ ಅಮಾವಾಸ್ಯೆ ಅಂದರೆ ಕರ್ಕಾಟಕ ಅಮಾವಾಸ್ಯೆಯಂದು ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯ ಸಂಭ್ರಮ. ವಿಶ್ವ ಕುಂದಾಪುರ ಕನ್ನಡ ದಿನಾಚರಣೆಯ ಸಂಭ್ರಮದಲ್ಲಿ ಮನದಂಗಳದ ಭಾಷೆ ಕುಂದ ಕನ್ನಡದ ಸೊಬಗು. ಕುಂದಾಪ್ರ ಕನ್ನಡ ಭಾಷಿ ಅಲ್ಲ ಬದ್ಕ್ ಎಂಬ ಘೋಷ ವಾಕ್ಯವೇ ಇಲ್ಲಿನ ಜನರ ಭಾಷಾ ಪ್ರೀತಿಯನ್ನು ತೋರುತ್ತದೆ.…
ಹಳ್ಳಿಯ ಸೊಗಡು ಪಚ್ಚೆ ಪೈರಿನ ಪರಿಸರ. ದಿನನಿತ್ಯ ಶಿವನ ಧ್ಯಾನ, ಕೈ ಮುಗಿದು ಮುನ್ನಡೆದರೆ ಯಶಸ್ಸಿನ ಸಿಂಚನ. ಅರ್ಜುನಾಪುರದಲ್ಲಿ ನಿತ್ಯ ಜನಜಾತ್ರೆ. ಊರಿನಲ್ಲಿ ಕಳೆಗಟ್ಟಿದೆ ಸಂಭ್ರಮ. ದೇವರುಗಳ ನಾಡು ಮುಡುಬಿದಿರೆಯ ಹೃದಯ ಭಾಗದಿಂದ ಹನ್ನೊಂದೂವರೆ ಕಿ.ಮೀ ದೂರದ ಅರ್ಜುನಾಪುರದಲ್ಲಿ ನೆಲೆನಿಂತು ನಂಬಿ ಬಂದ ಭಕ್ತರ ಮೊಗದಲ್ಲಿ ನಗೆಯ ಅಲೆ ತೋರ್ಪಡಿಸುವ ಶ್ರೀ ಮಹಾಲಿಂಗೇಶ್ವರನ ಸಾನಿಧ್ಯ ತುಳುನಾಡಿನ ಜನರ ಚಿತ್ತದಲ್ಲಿ ನಾಟಿ ನಿಂತಿದೆ. ಶಿರ್ತಾಡಿ ಗ್ರಾಮದ ಗಡಿಭಾಗದಲ್ಲಿ ವಾಲ್ಪಾಡಿ ಗ್ರಾಮಕ್ಕೆ ತಾಗಿಕೊಂಡು ಬೆಳೆದು ನಿಂತಿರುವ ಸಂಪೂರ್ಣ ಶಿಲಾಮಯ ದೇಗುಲ ಆಸ್ತಿಕ ಭಕ್ತರ ಕೇಂದ್ರ ಬಿಂದು. ಅರ್ಜುನಾಪುರದ ಈ ಕ್ಷೇತ್ರದಲ್ಲಿ ಮಧ್ಯಮ ಪಾಂಡವ ಅರ್ಜುನ ತಪಸ್ಸು ಮಾಡಿರುವನೆಂಬುದು ಪ್ರತೀತಿ. ಐದು ಸಾವಿರ ವರ್ಷಗಳ ಹಿಂದೆಯೂ ಜನವಸತಿ ಪ್ರದೇಶವಾಗಿ ಈ ಭಾಗ ಗುರುತಿಸಲ್ಪಟ್ಟಿತ್ತು ಎಂಬುದು ಇತಿಹಾಸ ತಜ್ಞರ ಅಭಿಪ್ರಾಯ. ಲಿಂಗರೂಪಿಯಾಗಿ ಆರಾಧನೆಗೊಳ್ಳುತ್ತಾ ನಂಬಿದವರಿಗೆ ಇಷ್ಟಾರ್ಥ ಸಿದ್ಧಿಯನ್ನು ಕಲ್ಪಿಸುತ್ತಾ ಬಂದಿರುವ ಅರ್ಜುನಾಪುರದ ಮಹಾಲಿಂಗೇಶ್ವರನಿಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ವಿಜಯನಗರದ ಶ್ರೀ ಕೃಷ್ಣದೇವರಾಯ ವೈಭವದಿಂದ ಆಡಳಿತ ನಡೆಸುತ್ತಿದ್ದ 1529…
ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಮಾನವಿಕ ವಿಭಾಗದ ವತಿಯಿಂದ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಸಂವಿಧಾನ ದಿನಾಚರಣೆಯನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಬೆಂಗಳೂರಿನ ವಿಶ್ವವಿದ್ಯಾಲಯ ಕಾನೂನು ಕಾಲೇಜಿನ ಅಧ್ಯಕ್ಷ ಡಾ. ವಿ. ಸುದೇಶ್, ಸಂವಿಧಾನವು ಒಂದು ದೇಶದ ಮೂಲಭೂತ ಕಾನೂನು. ಸಂವಿಧಾನವು ತಟಸ್ಥವಾಗಿದೆ ಮತ್ತು ರಾಷ್ಟ್ರದ ನ್ಯಾಯ ವ್ಯವಸ್ಥೆ, ಸ್ವಾತಂತ್ರ್ಯ ಮತ್ತು ಪ್ರಮುಖ ಮೌಲ್ಯಗಳನ್ನು ಸ್ಥಾಪಿಸಲು ನ್ಯಾಯಯುತ ಸಾಧನವಾಗಿದೆ. ಸಂವಿಧಾನವು ಹಕ್ಕುಗಳು ಮತ್ತು ಜವಾಬ್ದಾರಿಗಳು, ಆಡಳಿತ ಮಂಡಳಿ ಮತ್ತು ದೇಶದ ಮೌಲ್ಯಗಳು ಹಾಗೂ ಸಂವಿಧಾನದ ಮೂಲ ತತ್ವಗಳ ನಡುವಿನ ಸಂಬಂಧವನ್ನು ಸ್ಥಾಪಿಸುತ್ತದೆ ಎಂದರು. ಕರ್ನಾಟಕ ರಾಜ್ಯ ಉಚ್ಛ ನ್ಯಾಯಾಲಯದ ವಕೀಲ ಆಕಾಶ್ ವೈ ರಾಜ್ ಮಾತನಾಡಿ, ಭಾರತೀಯ ಸಂವಿಧಾನವು ಭಾರತದ ನಾಗರಿಕರಿಗೆ ಮೂಲಭೂತ ಹಕ್ಕುಗಳ ವಿಸ್ತೃತ ಪಟ್ಟಿಯನ್ನು ಒದಗಿಸಿದೆ. ಸಂವಿಧಾನವು ಪ್ರತಿಯೊಬ್ಬ ಪ್ರಜೆಗೂ ಮಾರ್ಗಸೂಚಿಯಾಗಿ ಕಾರ್ಯನಿರ್ವಹಿಸುತ್ತದೆ ಎಂದರು. ಪ್ರಾಂಶುಪಾಲ ಡಾ. ಕುರಿಯನ್ ಮಾತನಾಡಿ, ದೇಶದ ಸಂವಿಧಾನ ಜಗತ್ತಿನಲ್ಲೇ ಬಹಳ ಶ್ರೇಷ್ಠವಾದದ್ದು. ವಿಜ್ಞಾನ ತಂತ್ರಜ್ಞಾನಗಳ ಆವಿಷ್ಕಾರದ ಸಾಧನೆಗಳೆಷ್ಟೇ ಇದ್ದರೂ ಸಂವಿಧಾನದ ಉದ್ದೇಶಗಳು…