Author: admin

ಶ್ರೀ ಕ್ಷೇತ್ರ ಗಣೇಶಪುರದಲ್ಲಿ ಬ್ರಹ್ಮಕಲಶೋತ್ಸವ, ಬ್ರಹ್ಮರಥ ಸಮರ್ಪಣೆ, ನಾಗಮಂಡಲ, ಜಾರಂದಾಯ ನೇಮೋತ್ಸವ, ಭಜನಾ ಸಂಭ್ರಮೋತ್ಸವ ಕಾರ್ಯಕ್ರಮವು ಏಪ್ರಿಲ್ 18 ರಿಂದ 26ರವರೆಗೆ ನಡೆಯಲಿದ್ದು, ಈ ಸಂದರ್ಭದಲ್ಲಿ ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ಬ್ರಹ್ಮರಥ ಸಮರ್ಪಣೆ ನಡೆಯಲಿದೆ ಎಂದು ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಧರ್ಮೇಂದ್ರ ಗಣೇಶಪುರ ಹೇಳಿದ್ದಾರೆ. ಅವರು ದೇವಳದಲ್ಲಿ ನಡೆದ ಕಾರ್ಯಕ್ರಮದ ಮಾಹಿತಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. 1960ರ ದಶಕದಲ್ಲಿ ತುಳುನಾಡಿನ ಪಾರಂಪರಿಕ ಪಟ್ಟಣವಾಗಿದ್ದ ಪಣಂಬೂರು ನವ ಮಂಗಳೂರು ಬಂದರ್ ಆಗಿ ಪರಿವರ್ತನೆಗೊಂಡಾಗ ಅಲ್ಲಿನ ನಿವಾಸಿಗಳು ಕಾಟಿಪಳ್ಳಕ್ಕೆ ಬಂದು ನೆಲೆಸಿದರು. 1988ನೇ ಇಸವಿಯಲ್ಲಿ ಪುನನಿರ್ವಸಿತ ಕಾಟಿಪಳ್ಳ ಕೈಕಂಬ ಪ್ರದೇಶದಲ್ಲಿ ಸರಕಾರದಿಂದ ಮಂಜೂರಾದ ಜಮೀನಿನಲ್ಲಿ ಕಾಟಿಪಳ್ಳ, ಕೃಷ್ಣಾಪುರ, ಬಾಳ, ಕುತ್ತೆತ್ತೂರು, ಕಾನ, ಕಟ್ಲ, ಸೂರಿಂಜೆ, ಮಧ್ಯ ಇತ್ಯಾದಿ ಪರಿಸರದ ಗ್ರಾಮಸ್ಥರು ಸೇರಿಕೊಂಡು ಶ್ರೀ ಮಹಾಗಣಪತಿ ದೇವಸ್ಥಾನವನ್ನು ನಿರ್ಮಿಸಿದರು. ಬಲಮುರಿ ಶ್ರೀ ಮಹಾಗಣಪತಿ ದೇವರು ನೆಲೆಯಾದ ಪುಣ್ಯ ಪ್ರದೇಶಕ್ಕೆ ಯತಿಶ್ರೇಷ್ಠರಾದ ಪೇಜಾವರ ವಿಶ್ವೇಶ್ವತೀರ್ಥ ಶ್ರೀಪಾದರು ಶ್ರೀ ಕ್ಷೇತ್ರ ಗಣೇಶಪುರ ಎಂಬ ನಾಮಕರಣವನ್ನು ಮಾಡಿದರು.…

Read More

ಶ್ರೀ ಗುರುದೇವ ಸೇವಾ ಬಳಗ ಮತ್ತು ಶ್ರೀ ವಜ್ರಮಾತಾ ಮಹಿಳಾ ವಿಕಾಸ ಕೇಂದ್ರ ಪುಣೆ ಇದರ ವತಿಯಿಂದ ರಾಮನವಮಿ ಆಚರಣೆಯು ಏಪ್ರಿಲ್ 6 ರಂದು ಮತ್ತು ಹನುಮ ಜಯಂತಿ ಆಚರಣೆಯು ಏಪ್ರಿಲ್ 12ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಿತು. ರಾಮನವಮಿ ಆಚರಣೆಯು ಬಳಗದ ಪ್ರಮುಖರಾದ ಶ್ರೀಮತಿ ಪ್ರೇಮಾ ಸಂಜಯ್ ಶೆಟ್ಟಿ ದಂಪತಿಗಳ ಆಯೋಜನೆಯಲ್ಲಿ ಬಿಬ್ವೆವಾಡಿಯಲ್ಲಿ ಹಾಗೂ ಹನುಮ ಜಯಂತಿ ಆಚರಣೆಯು ಬಳಗದ ಪ್ರಮುಖರಾದ ಜಗದೀಶ್ ಹೆಗ್ಡೆ, ಸ್ವರ್ಣಲತಾ ಜೆ ಹೆಗ್ಡೆ ದಂಪತಿಗಳ ಆಯೋಜನೆಯಲ್ಲಿ ಲುಲ್ಲಾ ನಗರದಲ್ಲಿ ಜರಗಿತು. ಕಾರ್ಯಕ್ರಮದ ಅಂಗವಾಗಿ ದೇವರಿಗೆ ದೀಪ ಬೆಳಗಿಸಿ, ನಂತರ ಶ್ರೀ ವಜ್ರಮಾತ ಮಹಿಳಾ ವಿಕಾಸ ಕೇಂದ್ರದ ಸದೆಸ್ಯೆಯರು ಹಾಗೂ ಬಳಗದ ಸದಸ್ಯರಿಂದ ದಾಮೋದರ ಬಂಗೇರರವರ ಮಾರ್ಗದರ್ಶನದಲ್ಲಿ ಬಳಗದ ಭಜನಾ ಮಂಡಳಿಯಿಂದ ಭಜನೆ ನಡೆಯಿತು. ನಂತರ ಸೇರಿದ ಭಕ್ತರೆಲ್ಲರೂ ಸಾಮೂಹಿಕವಾಗಿ ಹನುಮಾನ್ ಚಾಲೀಸವನ್ನು ಪಠಿಸಿದರು. ಹನುಮ ಪೂಜೆಯ ನಂತರ ಮಹಾಮಂಗಳಾರತಿ ಪ್ರಸಾದ ವಿತರಣೆ ನಡೆಯಿತು. ಕಾರ್ಯಕ್ರಮದ ಆಯೋಜಕ ದಂಪತಿಗಳು, ಪುಣೆ ಶ್ರೀ ಗುರುದೇವ ಸೇವಾ ಬಳಗದ…

Read More

ಅಸ್ತ್ರ ಪ್ರೊಡಕ್ಷನ್ ಬ್ಯಾನರ್ ನಲ್ಲಿ ಲಂಚು ಲಾಲ್ ಕೆ ಎಸ್ ನಿರ್ಮಿಸಿರುವ, ಅಶ್ವಥ್ ನಿರ್ದೇಶನದ ‘ಮೀರಾ’ ತುಳು ಚಲನಚಿತ್ರ ಮಂಗಳೂರಿನ ಭಾರತ್ ಮಾಲ್ ನ‌ ಭಾರತ್ ಸಿನಿಮಾಸ್ ನಲ್ಲಿ ಶುಕ್ರವಾರ ಬಿಡುಗಡೆಗೊಂಡಿತು. ಮಾಜಿ ಮೇಯರ್ ಮನೋಜ್ ಕುಮಾರ್ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಬಿಡುಗಡೆಗೊಳಿಸಿದರು. ತುಳುವಿನಲ್ಲಿ ಬಿಡುಗಡೆಗೊಂಡಿರುವ ಮೀರಾ ಸಿನಿಮಾದಲ್ಲಿ ನಮ್ಮ ಮನೆಯ ಸುತ್ತಮುತ್ತಲಿನ ಕಥೆ ಇದೆ. ಸಿನಿಮಾವನ್ನು ಎಲ್ಲರೂ ನೋಡಿ ಪ್ರೋತ್ಸಾಹಿಸಬೇಕು ಎಂದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ತುಳುವಿನಲ್ಲಿ ಈಗ ಉತ್ತಮ ಸದಭಿರುಚಿಯ ಸಿನಿಮಾಗಳು ಬರುತ್ತಿದೆ. ಅದರಲ್ಲೂ ಮೀರಾ ಸಿನಿಮಾ ಮಹಿಳಾ ಪ್ರಧಾನ ಸಿನಿಮಾವಾಗಿದ್ದು, ಮನೆಮಂದಿ ಎಲ್ಲರೂ ಇಂತಹ ಸಿನಿಮಾವನ್ನು ನೋಡಿ ಪ್ರೋತ್ಸಾಹಿಸಬೇಕೆಂದರು.ನಟ, ನಿರ್ದೇಶಕ ರಾಹುಲ್ ಮಾತನಾಡಿ, ನಗರದಲ್ಲೀಗ ಫ್ಲೆಕ್ಸ್ ಗಳನ್ನು ಅಳವಡಿಸಲು ಮಹಾನಗರ ಪಾಲಿಕೆ ನಿಷೇಧ ಏರಿರುವುದರಿಂದು ತುಳು ಸಿನಿಮಾ ರಂಗದ ಮೇಲೆ ನೇರ ಪರಿಣಾಮ ಬೀರಿದೆ. ಹೀಗಾಗಿ ತುಳು ಸಿನಿಮಾ ರಂಗದ ನಿರ್ಮಾಪಕರು ಪರ್ಯಾಯ ವ್ಯವಸ್ಥೆಯನ್ನು ಮಾಡಿಕೊಳ್ಳಬೇಕಾಗಿದೆ ಎಂದರು.…

Read More

ಪುಣೆ ಬಂಟರ ಸಂಘದ ಯುವ ವಿಭಾಗದ ಕಾರ್ಯಾಧ್ಯಕ್ಷರಾಗಿ 2025 – 2027 ರ ಅವಧಿಗೆ ಬಹುಮುಖ ಪ್ರತಿಭೆಯ ಅಭಿನಂದನ್ ಎಸ್ ಶೆಟ್ಟಿಯವರು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಏಪ್ರಿಲ್ 14 ರಂದು ಓಣಿಮಜಲು ಜಗನ್ನಾಥ ಶೆಟ್ಟಿ ಸಾಂಸ್ಕೃತಿಕ ಬಂಟರ ಭವನದಲ್ಲಿ ಪುಣೆ ಬಂಟರ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು ಬಾಳಿಕೆಯವರ ಅಧ್ಯಕ್ಷತೆಯಲ್ಲಿ ನಡೆದ ಸಂಘದ ವಿಶೇಷ ಮಹಾಸಭೆಯಲ್ಲಿ ಸಂಘದ ನೂತನ ಕಾರ್ಯಕಾರಿ ಸಮಿತಿ, ಮಹಿಳಾ ವಿಭಾಗ, ಯುವ ವಿಭಾಗ ಹಾಗೂ ದಕ್ಷಿಣ, ಉತ್ತರ, ಪೂರ್ವ ಹಾಗೂ ಪಶ್ಚಿಮ ಪ್ರಾದೇಶಿಕ ಸಮಿತಿಗಳ ಕಾರ್ಯಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು. ಪುಣೆಯ ಸಿಂಹಘಡ್ ಕಾಲೇಜಿನಲ್ಲಿ ಬಿಬಿಎ ವ್ಯಾಸಂಗ ಪೂರೈಸಿ, ಪುಣೆಯ MIT ಕಾಲೇಜಿನಲ್ಲಿ ಎಂಬಿಎ ಪದವಿ ಗಿಟ್ಟಿಸಿಕೊಂಡಿದ್ದಾರೆ. ಪ್ರಸ್ತುತ ಐಟಿ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದಾರೆ. ಅಭಿನಂದನ್ ಶೇಖರ್ ಶೆಟ್ಟಿಯವರು ವಿದ್ಯಾರ್ಥಿ ಜೀವನದಲ್ಲಿ ಆದರ್ಶ ವಿದ್ಯಾರ್ಥಿಯಾಗಿದ್ದುಕೊಂಡು ಕಾಲೇಜಿನ ಶಿಕ್ಷಕರ ಅಚ್ಚುಮೆಚ್ಚಿನ ವಿದ್ಯಾರ್ಥಿಯಾಗಿ ಪ್ರಶಂಸೆಯನ್ನು ಪಡೆದಿರುವುದು ಮಾತ್ರವಲ್ಲದೆ ಕಾಲೇಜಿನಿಂದ “ಸ್ಟೂಡೆಂಟ್ ಆಫ್ ದ ಇಯರ್ ಅವಾರ್ಡ್ -2019” ನ್ನು…

Read More

ಪ್ರತಿಷ್ಠಿತ ಪುಣೆ ಬಂಟರ ಸಂಘದ 2025 – 2027 ರ ಅವಧಿಗೆ ನೂತನ ಅಧ್ಯಕ್ಷರಾಗಿ ಹೋಟೆಲ್ ಉದ್ಯಮಿ, ಸಮಾಜಸೇವಕ, ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕ ಕೆಂಜಾರು ಅಜಿತ್ ಹೆಗ್ಡೆಯವರು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಏಪ್ರಿಲ್ 14 ರಂದು ಸಂಘದ ಓಣಿಮಜಲು ಜಗನ್ನಾಥ ಶೆಟ್ಟಿ ಸಾಂಸ್ಕೃತಿಕ ಬಂಟರ ಭವನದಲ್ಲಿ ನಡೆದ ವಿಶೇಷ ಮಹಾಸಭೆಯಲ್ಲಿ ಈ ಆಯ್ಕೆ ನಡೆದಿದ್ದು, ಎರಡು ವರ್ಷಗಳಿಗಾಗಿ ನೂತನ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು. ಕೆಂಜಾರು ಅಜಿತ್ ಹೆಗ್ಡೆಯವರು ಪುಣೆಯಲ್ಲಿ ಪ್ರತಿಷ್ಠಿತ ಹೋಟೆಲ್ ಉದ್ಯಮಿಯಾಗಿ ಮಾತ್ರವಲ್ಲದೇ ಉದ್ಯಮದ ಯಶಸ್ಸಿನೊಂದಿಗೆ ಸಾಮಾಜಿಕ ಚಟುವಟಿಕೆಗಳಲ್ಲಿಯೂ ಗುರುತಿಸಿಕೊಂಡಿದ್ದಾರೆ. ಸಿಂಪೋಣಿ ಗ್ರೂಪ್ ಆಫ್ ಹೋಟೆಲ್ಸ್ ನ ಆಡಳಿತ ನಿರ್ದೇಶಕರಾಗಿದ್ದಾರೆ. ಪುಣೆ ಬಂಟರ ಸಂಘದಲ್ಲಿ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು, ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಪ್ರತಿಷ್ಠಿತ ಸಂಘದ ಭವನದ ನಿರ್ಮಾಣ ಹಂತದಲ್ಲಿ ಗುರುತರ ಸೇವೆಯನ್ನು ಸಲ್ಲಿಸಿದ್ದಾರೆ. ಅಲ್ಲದೆ ಸಂಘದ ಮೂಲಕ ವರ್ಷವಿಡೀ ಹತ್ತು ಹಲವು ಕಾರ್ಯಕ್ರಮಗಳನ್ನು ಸಂಘಟಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಾ ಬಂದಿದ್ದಾರೆ. ಪುಣೆಯಲ್ಲಿನ ವಿವಿಧ ಸಂಘ ಸಂಸ್ಥೆಗಳಲ್ಲಿಯೂ…

Read More

ಪ್ರತಿಷ್ಠಿತ ಪುಣೆ ಬಂಟರ ಸಂಘದ 2025 – 2027 ರ ಅವಧಿಗೆ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆಯಾಗಿ ಶಮ್ಮಿ ಅಜಿತ್ ಹೆಗ್ಡೆಯವರು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಏಪ್ರಿಲ್ 14 ರಂದು ಸಂಘದ ಓಣಿಮಜಲು ಜಗನ್ನಾಥ ಶೆಟ್ಟಿ ಸಾಂಸ್ಕೃತಿಕ ಬಂಟರ ಭವನದಲ್ಲಿ ನಡೆದ ವಿಶೇಷ ಮಹಾಸಭೆಯಲ್ಲಿ ಈ ಆಯ್ಕೆ ನಡೆದಿದ್ದು, ಎರಡು ವರ್ಷಗಳಿಗಾಗಿ ಮಹಿಳಾ ವಿಭಾಗದ ನೂತನ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು.ಶಮ್ಮಿಅಜಿತ್ ಹೆಗ್ಡೆಯವರು ಪುಣೆ ಬಂಟರ ಸಂಘದ ಮಹಿಳಾ ವಿಭಾಗದಲ್ಲಿ ಹಲವಾರು ವರ್ಷಗಳಿಂದ ಸಕ್ರಿಯವಾಗಿ ಗುರುತಿಸಿಕೊಂಡು ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಸಮಾಜದ ಮಹಿಳೆಯರ ಅಪಾರವಾಗಿ ಶ್ರಮಿಸಿದ್ದಾರೆ. ಈ ಹಿಂದೆ ಸಮಿತಿಯ ವಿವಿಧ ವಿಭಾಗಗಳಲ್ಲಿ ಗಣನೀಯ ಸೇವೆಯನ್ನು ಸಲ್ಲಿಸಿದ್ದಾರೆ.

Read More

ಮೇ.14ರಂದು ಖಂಡಿಗೆ ಮೀನು ಹಿಡಿಯುವ ಜಾತ್ರೆಯೊಂದಿಗೆ ಕಂಡೇವುದ ಆಯನ ಪ್ರಾರಂಭಗೊಳ್ಳಲಿದ್ದು, ಎರಡು ದಿನಗಳ ಕಾಲ ನಡೆಯಲಿರುವ ವಾರ್ಷಿಕ ಉತ್ಸವದ ಸಂದರ್ಭದಲ್ಲಿ ಚೇಳಾಯರು ಖಂಡಿಗೆ ಧರ್ಮರಸು ಶ್ರೀ ಉಳ್ಳಾಯ ಹಾಗೂ ಪರಿವಾರ ದೈವಗಳ ವಾರ್ಷಿಕ ಜಾತ್ರೆ ನಡೆಯಲಿದೆ ಎಂದು ತೋಕೂರು ಗುತ್ತು ಉದಯ್ ಕುಮಾರ್ ಶೆಟ್ಟಿ ಪತ್ರಿಕಾಗೋಷ್ಟಿಯಲ್ಲಿ ಹೇಳಿದರು. ಮೇ 14ರಂದು ಬೆಳಿಗ್ಗೆ ಗಂಟೆ 9ಕ್ಕೆ ಮೂಲಸ್ಥಾನದಲ್ಲಿ ಶುದ್ಧಕಲಶ, ಗಣಹೋಮ, ಬೆಳಿಗ್ಗೆ ಗಂಟೆ 11ಕ್ಕೆ ಸಂಕ್ರಮಣ ಪೂಜೆ, 12 ಗಂಟೆಗೆ ಮಹಾ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ಗಂಟೆ 8ಕ್ಕೆ ಮಹಾ ಅನ್ನಸಂತರ್ಪಣೆ, ರಾತ್ರಿ 9 ಗಂಟೆಗೆ ಬ್ರಹ್ಮಸ್ಥಾನದಲ್ಲಿ ಬ್ರಹ್ಮರಿಗೆ ತಂಬಿಲ, ಕುಮಾರ ಸಿರಿಗಳ ದರ್ಶನ, ಧರ್ಮದ ಶ್ರೀ ಉಳ್ಳಾಯ ಹಾಗೂ ಪರಿವಾರ ದೈವಗಳ ಭಂಡಾರ ಮೂಲಸ್ಥಾನ ಹೋಗುವುದು. ಸಿಡಿಮದ್ದು ಪ್ರದರ್ಶನ ನಂತರ ಧ್ವಜಾರೋಹಣ ನಡೆಯಲಿದೆ. ಮೇ 15 ಗುರುವಾರದಂದು ಬೆಳಿಗ್ಗೆ ಗಂಟೆ 5-00ಕ್ಕೆ ಧರ್ಮರಸು ಶ್ರೀ ಉಳ್ಳಾಯ, ಇಷ್ಟದೇವತೆ, ಬಬ್ಬರ್ಯ ಹಾಗೂ ಪರಿವಾರ ದೈವಗಳಿಗೆ ನೇಮೋತ್ಸವ ನಂತರ ನಂದಿಗೋಣ ಕುಮಾರ ಸಿರಿಗಳ ಭೇಟಿ,…

Read More

ಪುಣೆ ಬಂಟರ ಸಂಘದ ದಕ್ಷಿಣ ಪ್ರಾದೇಶಿಕ ಸಮಿತಿಯ 2025- 2027 ರ ಅವಧಿಗೆ ನೂತನ ಕಾರ್ಯಾಧ್ಯಕ್ಷರಾಗಿ ಹೋಟೆಲ್ ಉದ್ಯಮಿ, ಸಮಾಜ ಸೇವಕ ಸುಧಾಕರ ಸಿ ಶೆಟ್ಟಿಯವರು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಏಪ್ರಿಲ್ 14 ರಂದು ಓಣಿಮಜಲು ಜಗನ್ನಾಥ ಶೆಟ್ಟಿ ಸಾಂಸ್ಕೃತಿಕ ಬಂಟರ ಭವನದಲ್ಲಿ ಪುಣೆ ಬಂಟರ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು ಬಾಳಿಕೆಯವರ ಅಧ್ಯಕ್ಷತೆಯಲ್ಲಿ ನಡೆದ ಸಂಘದ ವಿಶೇಷ ಮಹಾಸಭೆಯಲ್ಲಿ ಸಂಘದ ನೂತನ ಕಾರ್ಯಕಾರಿ ಸಮಿತಿ ಆಯ್ಕೆ ಹಾಗೂ ದಕ್ಷಿಣ, ಉತ್ತರ, ಪೂರ್ವ ಹಾಗೂ ಪಶ್ಚಿಮ ಪ್ರಾದೇಶಿಕ ಸಮಿತಿಗಳ ಕಾರ್ಯಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು. ಸುಧಾಕರ ಸಿ ಶೆಟ್ಟಿಯವರು ಪುಣೆ ನಗರದಲ್ಲಿ ಹೋಟೆಲ್ ಉದ್ಯಮದಲ್ಲಿ ತನ್ನನ್ನು ತೊಡಗಿಸಿಕೊಂಡು ಸತತ ಪರಿಶ್ರಮದಿಂದ ಯಶಸ್ಸನ್ನು ಗಳಿಸಿದವರು. ಜೊತೆ ಜೊತೆಗೆ ಸಮಾಜಮುಖಿ ಚಿಂತನೆಯೊಂದಿಗೆ ವಿವಿಧ ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಆಸಕ್ತಿಯನ್ನು ಬೆಳೆಸಿಕೊಂಡು ಜನಾನುರಾಗಿಯಾಗಿ ಗುರುತಿಸಿಕೊಂಡಿದ್ದಾರೆ. ಹಲವಾರು ವರ್ಷಗಳಿಂದ ಕಾತ್ರಜ್ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಂಘದಲ್ಲಿ ಧಾರ್ಮಿಕ ಸೇವೆಯನ್ನು ಸಲ್ಲಿಸಿಕೊಂಡು ದೇವಸ್ಥಾನದ…

Read More

ಕನ್ನಡ ಎನ್ನುವುದು ಒಂದು ಭಾಷೆಯಲ್ಲ, ಅದು ಸಂಸ್ಕೃತಿ. ಕನ್ನಡದ ಒಳಗೆ ಶತಮಾನದಿಂದ ಹರಿದು ಬಂದ ಜ್ಞಾನ ಧಾರೆಯಿದೆ. ಕನ್ನಡ ಕಲಿಕೆಯಿಂದ ಅದನ್ನು ಕೈವಶ ಮಾಡಿಕೊಳ್ಳಲು ಸಾಧ್ಯ ಎಂಬುದಾಗಿ ಕನ್ನಡ ವಿಭಾಗ, ಮುಂಬಯಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರಾದ ಡಾ| ಜಿ.ಎನ್ ಉಪಾಧ್ಯ ಅವರು ನುಡಿದರು. ಅವರು ಕನ್ನಡ ವಿಭಾಗ ಎಪ್ರಿಲ್ 13ರ ಆದಿತ್ಯವಾರದಂದು ನಡೆದ ಕನ್ನಡ ಸರ್ಟಿಫಿಕೇಟ್ ಕೋರ್ಸಿನ ವಿದ್ಯಾರ್ಥಿಗಳ ಸಮಾವೇಶದ ಅಧ್ಯಕ್ಷ ಸ್ಥಾನವನ್ನು ವಹಿಸಿ ಮಾತನಾಡಿದರು. ಕನ್ನಡ ವಿಭಾಗ ದೊಡ್ಡ ಪ್ರಮಾಣದಲ್ಲಿ ಕನ್ನಡೇತರರಿಗೆ, ಕನ್ನಡ ಬಾರದವರಿಗೆ ಕನ್ನಡ ಕಲಿಕಾ ತರಗತಿಗಳನ್ನು ನಡೆಸಿಕೊಂಡು ಬರುತ್ತಿದೆ. ಈ ಯೋಜನೆಗೆ ನಗರ ಉಪನಗರಗಳಲ್ಲಿ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕನ್ನಡದ ಅಸ್ಮಿತೆಯನ್ನು ಉಳಿಸಿ ಬೆಳೆಸಲು ಇದೊಂದು ಮಹತ್ವದ ಉಪಕ್ರಮ ಎಂದು ಕನ್ನಡ ಕಲಿತ ಮಕ್ಕಳಿಗೆ ಶುಭಾಶಯ ಕೋರಿದರು. ಕಳೆದ ಅನೇಕ ವರ್ಷಗಳಿಂದ ಕನ್ನಡ ಕಲಿಕಾ ಯೋಜನೆಯ ಸಂಚಾಲಕರಾಗಿ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ| ಪೂರ್ಣಿಮಾ ಶೆಟ್ಟಿ ಅವರು ಯಶಸ್ವಿಯಾಗಿ ನಿರ್ವಹಿಸಿಕೊಂಡು ಬಂದಿದ್ದಾರೆ. ಸರ್ಟಿಫಿಕೇಟ್ ಕೋರ್ಸಿನ ಶಿಕ್ಷಕರಾದ…

Read More

2024-25 ರ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ 600 ರಲ್ಲಿ 590 ಅಂಕ ಪಡೆದ ಉಪ್ಪುಂದ ಕಟ್ಕೆರೆ ವಿಜಯ್ ಕುಮಾರ್ ಶೆಟ್ಟಿ ಮತ್ತು ವಂಡ್ಸೆ ಕೊರ್ಗಿ ಮನೆ ಅಂಬಿಕಾ ಶೆಟ್ಟಿ ದಂಪತಿಗಳ ಪುತ್ರ ಅಭಿಜಿತ್ ಶೆಟ್ಟಿಯವರ ಸಾಧನೆಯನ್ನು ಗುರುತಿಸಿ ಬೈಂದೂರು ಬಂಟರ ಸಂಘದ ವತಿಯಿಂದ ಅಧ್ಯಕ್ಷ ಸಾಲ್ಗದ್ದೆ ಶಶಿಧರ ಶೆಟ್ಟಿಯವರ ನೇತೃತ್ವದಲ್ಲಿ ಪದಾಧಿಕಾರಿಗಳು ಹಾಗೂ ಗಣ್ಯರು ವಿದ್ಯಾರ್ಥಿಯ ಮನೆಗೆ ತೆರಳಿ ಅಭಿನಂದಿಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಉದಯ್ ಕುಮಾರ್ ಶೆಟ್ಟಿ ಅಡಿಕೆ ಕೊಡ್ಲು ಫಲ ಪುಷ್ಪಗಳೊಂದಿಗೆ ಗೌರವಿಸಿ ಶುಭಕೋರಿದರು. ಉದ್ಯಮಿ, ಸಂಘದ ಉಪಾಧ್ಯಕ್ಷ ಜಗದೀಶ್ ಶೆಟ್ಟಿಯವರು ನಗದು ಪ್ರೋತ್ಸಾಹ ನೀಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಉದ್ಯಮಿ ಹರ್ಜಿ ಕರುಣಾಕರ ಶೆಟ್ಟಿ, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ವಿಕೆ ಶಿವರಾಂ ಶೆಟ್ಟಿ, ಉದ್ಯಮಿ ರಿತೇಶ್ ಶೆಟ್ಟಿ ಕುಕನಾಡು, ಹಿರಿಯರಾದ ಸುಧಾಕರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಸಂಘದ ಉಪಾಧ್ಯಕ್ಷ ಕರುಣಾಕರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Read More