Author: admin

ಮುಂಬಯಿಯ ಪ್ರಸಿದ್ಧ ಹೊಟೇಲ್ ಉದ್ಯಮಿ, ಅಜಂತಾ ಕ್ಯಾಟರರ್ಸ್ ಹಾಗೂ ಕೃಷ್ಣ ಪ್ರೇಮ ಕನ್ಸಲ್ಟೆನ್ಸಿಯ ಆಡಳಿತ ನಿರ್ದೇಶಕ, ಸಮಾಜಸೇವಕ, ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕ ಜಯರಾಮ್ ಶೆಟ್ಟಿ ಇನ್ನಾ ಇವರು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರ ವಿಶೇಷ ಮನವಿಗೆ ಸ್ಪಂದಿಸಿ ಜಾಗತಿಕ ಬಂಟರ ಸಂಘಗಳ ಒಕ್ಕೂಟಕ್ಕೆ ಪೋಷಕ ಸದಸ್ಯರಾಗಿ ಸೇರ್ಪಡೆಗೊಂಡಿದ್ದಾರೆ. ಹಲವಾರು ಪ್ರಶಸ್ತಿ ಪುರಸ್ಕಾರಕ್ಕೆ ಭಾಜನರಾಗಿರುವ ಇವರಿಗೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ಅಮ್ಮನ ದಯೆ ಇವರ ಮತ್ತು ಇವರ ಕುಟುಂಬದ ಮೇಲೆ ಸದಾ ಇರಲಿ ಎಂದು ಹಾರೈಸಿ, ಒಕ್ಕೂಟದ ಪರವಾಗಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Read More

ಶ್ರೀರಾಮ ಶಾಲೆ ವೇದಶಂಕರ ನಗರ ಉಪ್ಪಿನಂಗಡಿಯಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಉಪ್ಪಿನಂಗಡಿ ಘಟಕದ ಮೇಲ್ವಚಾರಣೆಯಲ್ಲಿ 2025-26 ನೇ ಸಾಲಿನ “ಯಕ್ಷ ಶಿಕ್ಷಣ” ಯೋಜನೆಯು ಜೂನ್ 27 ರಂದು ಉಚಿತ ಯಕ್ಷಗಾನ ತರಬೇತಿ ಕಾರ್ಯಕ್ರಮವು ಉರಿಮಜಲು ರಾಮ ಭಟ್ ವೇದಿಕೆಯಲ್ಲಿ ಉದ್ಘಾಟನೆಗೊಂಡಿತು. ಕಾರ್ಯಕ್ರಮವನ್ನು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಉಪ್ಪಿನಂಗಡಿ ಘಟಕದ ಅಧ್ಯಕ್ಷ ಕೆ ಜಗದೀಶ್ ಶೆಟ್ಟಿಯವರು ಉದ್ಘಾಟಿಸಿ, ಪಟ್ಲ ಫೌಂಡೇಶನ್ ಸ್ಥಾಪನೆಯ ಉದ್ದೇಶ, ಕಾರ್ಯವೈಖರಿಯನ್ನು ತಿಳಿಸಿದರು. ಪಟ್ಲ ಫೌಂಡೇಶನ್ ಉಪ್ಪಿನಂಗಡಿ ಘಟಕದ ಸದಸ್ಯರಾದ ಸುಧಾಕರ್ ಶೆಟ್ಟಿ ಗಾಂಧೀಪಾರ್ಕ್ ಇವರು ಮಾತನಾಡಿ, ಮಕ್ಕಳು ಕಲೆಯನ್ನು ಉಳಿಸಿಕೊಂಡು, ಉತ್ತಮ ಸಂಸ್ಕಾರ ಬೆಳೆಸಿಕೊಂಡು ಹೋಗಬೇಕಾದರೆ ಇಂತಹ ತರಬೇತಿಗಳು ಅಗತ್ಯ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶಾಲಾ ಸಂಚಾಲಕರಾದ ಯು.ಜಿ ರಾಧಾ ಮಾತನಾಡಿ, ಉಚಿತ ಯಕ್ಷಗಾನ ತರಬೇತಿಯಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತರಬೇತಿಯ ಸದುಪಯೋಗ ಪಡೆದುಕೊಳ್ಳಬೇಕು ಎಂದರು. ಯಕ್ಷಗಾನ ನಾಟ್ಯ ಗುರುಗಳಾದ ಸತೀಶ್ ಆಚಾರ್ಯ ಮಾಣಿ ಇವರಿಗೆ ಸ್ವಸ್ತಿಕ ನೀಡಿ ಗುರುವಂದನೆ ಮಾಡಿ…

Read More

ದುರ್ಗಾ ಸಂಜೀವನಿ ಮಣಿಪಾಲ್ ಆಸ್ಪತ್ರೆಯ ಪಂಚಮ ಸಂಭ್ರಮ ಮತ್ತು ಎಮ್.ಆರ್.ಪಿ.ಎಲ್ ಕೊಡುಗೆಯಾಗಿ ನೀಡಿದ ‘ಹೋಮ್ ಕೇರ್ ವ್ಯಾನ್’ ಮನೆ ಬಾಗಿಲಿಗೆ ಆರೋಗ್ಯ ಸೇವೆ ವಾಹನದ ಉದ್ಘಾಟನಾ ಕಾರ್ಯಕ್ರಮ ಕಟೀಲು ಆಸ್ಪತ್ರೆಯಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷರಾದ ಡಾ. ಎಚ್.ಎಸ್ ಬಲ್ಲಾಳ್ (ಉಪ ಕುಲಪತಿಗಳು, ಮಾಹೆ ಮಣಿಪಾಲ) ಮಾತನಾಡಿ, ಕೇವಲ 5 ವರ್ಷದಲ್ಲಿ ದುರ್ಗಾ ಸಂಜೀವನಿ ಮಣಿಪಾಲ್ ಆಸ್ಪತ್ರೆ ಗಣನೀಯವಾದ ಮೈಲುಗಲ್ಲು ಸ್ಥಾಪಿಸಿದೆ. ಮಾದರಿ ಆಸ್ಪತ್ರೆಯಾಗಿ ಜನರ ಮೆಚ್ಚುಗೆ ಗಳಿಸಿದೆ ಎಂದರು. ವೇದಿಕೆಯಲ್ಲಿ ಕಟೀಲು ದೇವಳದ ಅನುವಂಶಿಕ ಪ್ರಧಾನ ಅರ್ಚಕ ವೇದಮೂರ್ತಿ ವೆಂಕಟರಮಣ ಅಸ್ರಣ್ಣ ಆಶೀರ್ವಚನ ನೀಡಿದರು. ಲೆಫ್ಟಿನೆಂಟ್ ಜನರಲ್ ಡಾ. ಎಮ್.ಡಿ ವೆಂಕಟೇಶ್, ಕಟೀಲು ದುರ್ಗಾ ಪರಮೇಶ್ವರಿ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷ ಸನತ್ ಕುಮಾರ್ ಶೆಟ್ಟಿ, ಸಂಜೀವನಿ ಟ್ರಸ್ಟ್ ಅಧ್ಯಕ್ಷ ಡಾ. ಸುರೇಶ್ ರಾವ್, ಡಾ. ಆನಂದ್ ವೇಣುಗೋಪಾಲ್ (ಮಾಹೆ ಮಣಿಪಾಲದ ಮುಖ್ಯ ಕಾರ್ಯನಿರ್ವಹಣಾಧಿಕಾರಿ), ಡಾ. ಅರವಿಂದ್ (ಎಚ್.ಆರ್ – ಎಮ್.ಆರ್.ಪಿ.ಎಲ್), ಕೆ.ಎಮ್.ಸಿ ಆಸ್ಪತ್ರೆಯ ಡೀನ್ ಡಾ. ಉಣ್ಣಿ ಕೃಷ್ಣನ್, ಡಾ.…

Read More

ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ ಜೈ ತುಳು ಸಿನಿಮಾ ನವಂಬರ್ 14 ರಂದು ರಾಜ್ಯಾದ್ಯಂತ ತೆರೆಕಾಣಲಿದೆ. ಶಿವರಾಜ್ ಕುಮಾರ್ ಅವರು ಬೆಂಗಳೂರಿನಲ್ಲಿ ಬಿಡುಗಡೆಯ ದಿನಾಂಕವನ್ನು ಬಿಡುಗಡೆಗೊಳಿಸಿದರು. “ಜೈ” ಸಿನಿಮಾ ತುಳುವಿನಲ್ಲಿ ಬಿಗ್ ಬಜೆಟ್ ನ ಸಿನಿಮಾ ಆಗಿದ್ದು, ಸಿನಿಮಾಕ್ಕೆ ಮಂಗಳೂರನ್ನು ಕೇಂದ್ರೀಕರಿಸಿ ವಿವಿಧ ಪ್ರದೇಶಗಳಲ್ಲಿ ಚಿತ್ರೀಕರಣ ನಡೆದಿದೆ. ಜಿಲ್ಲೆಯ ಖ್ಯಾತನಾಮ ಕಲಾವಿದರು ಸಿನಿಮಾದಲ್ಲಿದ್ದಾರೆ. ಗಿರಿಗಿಟ್, ಗಮ್ಜಾಲ್, ಸರ್ಕಸ್ ಚಿತ್ರಗಳ ಯಶಸ್ಸಿನ ಬಳಿಕ ರೂಪೇಶ್ ಶೆಟ್ಟಿ ಅವರು ಮತ್ತೊಂದು ಬಿಗ್ ಬಜೆಟ್ ನ ಸಿನಿಮಾಕ್ಕೆ ಕೈ ಹಾಕಿದ್ದಾರೆ. ಜೈ ಸಿನಿಮಾ ಆರ್.ಎಸ್ ಸಿನಿಮಾಸ್, ಶೂಲಿನ್ ಫಿಲಂಸ್, ಮುಗ್ರೋಡಿ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗುತ್ತಿದೆ. ರೂಪೇಶ್ ಶೆಟ್ಟಿ ಸಿನಿಮಾದ ನಿರ್ದೇಶಕರಾಗಿದ್ದು, ಕತೆ ಹಾಗೂ ಸಂಭಾಷಣೆಯನ್ನು ಪ್ರಸನ್ನ ಶೆಟ್ಟಿ ಬೈಲೂರು ಬರೆದಿದ್ದಾರೆ. ಕ್ಯಾಮರಾ ವಿನುತ್ ಕೆ, ಸಂಗೀತ ಲೊಯ್ ವೆಲೆಂಟಿನ್ ಸಲ್ದಾನ, ಸಂಕಲನ ರಾಹುಲ್ ವಸಿಷ್ಠ, ನಿರ್ಮಾಪಕರು ಅನಿಲ್ ಶೆಟ್ಟಿ, ಸುಧಾಕರ ಶೆಟ್ಟಿ ಮುಗ್ರೋಡಿ, ಮಂಜುನಾಥ ಅತ್ತಾವರ, ಸಹ ನಿರ್ಮಾಪಕರು ದೀಕ್ಷಿತ್ ಆಳ್ವ,…

Read More

ಅಡ್ಯಾರ್ ನಲ್ಲಿ ನಡೆದ ಯಕ್ಷಧ್ರುವ ಪಟ್ಲ ಫೌಂಡೇಶನ್ ನ ಪಟ್ಲ ದಶಮ ಸಂಭ್ರಮದಲ್ಲಿ ದುಡಿದವರಿಗೆ ಕೃತಜ್ಞತೆ ಸಲ್ಲಿಸುವ ನಿಟ್ಟಿನಲ್ಲಿ ಬೆಂದೂರ್ ವೆಲ್ ನಲ್ಲಿರುವ ಸೆಬಾಸ್ಟಿಯನ್ ಮಿನಿ ಹಾಲ್ ನಲ್ಲಿ ಧನ್ಯೋತ್ಸವ ಕಾರ್ಯಕ್ರಮ‌ ನಡೆಯಿತು. ಪಟ್ಲ ದಶಮ ಸಂಭ್ರಮದ ಅಧ್ಯಕ್ಷರಾದ ಬರೋಡಾ ಶಶಿ ಕೇಟರಿಂಗ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ ನ ಸಿಎಂಡಿ ಶಶಿಧರ ಬಿ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ದಶಮಾನೋತ್ಸವದ ಮುಖ್ಯ ಧ್ಯೇಯವಾಗಿ ಕನಿಷ್ಠ 10 ಕೋಟಿ ರೂಪಾಯಿ ದೇಣಿಗೆ ಸಂಗ್ರಹಿಸುವ ಸಂಕಲ್ಪ ಮಾಡಲಾಗಿತ್ತು. ದಾನಿಗಳ, ಹಿತೈಷಿಗಳ ನೆರವಿನಿಂದ ನಾವು ನಮ್ಮ ಗುರಿಯನ್ನು ಸಾಧಿಸಿ ಮುನ್ನಡೆದಿದ್ದೇವೆ. ಇದು ಇಲ್ಲಿಗೆ ನಿಲ್ಲುವುದಿಲ್ಲ. ಈ ಯೋಜನೆ 25 ಕೋಟಿ ರೂಪಾಯಿ ತಲುಪುವವರೆಗೆ ನಾವು ನಮ್ಮ ಪ್ರಯತ್ನ ಮುಂದುವರಿಸುತ್ತೇವೆ ಎಂದರು. ಕಲಾವಿದರ ಶ್ರೇಯೋಭಿವೃದ್ದಿಗಾಗಿ ಹತ್ತು ವರ್ಷಗಳ ಹಿಂದೆ ಹುಟ್ಟಿಕೊಂಡ ಸಂಸ್ಥೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇಂದು ಅಗಾಧವಾಗಿ ಬೆಳೆದಿದೆ. ಟ್ರಸ್ಟ್ ಗೆ ಎಲ್ಲರ ಸಹಕಾರ ಬೇಕಾಗಿದೆ ಎಂದರು. ಟ್ರಸ್ಟ್ ನ ಗೌರವಾಧ್ಯಕ್ಷ, ಮಹಾದಾನಿ ಮುಂಬಯಿ ಹೇರಂಭ…

Read More

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಮಂದಾರ್ತಿ ನೀರ್ಜೆಡ್ಡು ಮೂಲದ ಸಮಾಜ ಸೇವಕಿ ಶ್ರೀಮತಿ ಆಶಾ ಎ ಹೆಗ್ಡೆ ಅವರನ್ನು ಬ್ರಹ್ಮಾವರ ತಾಲೂಕು ತುಳುವ ಮಹಾಸಭೆಯ ಸಂಚಾಲಕಿಯಾಗಿ ನೇಮಕ ಮಾಡಲಾಗಿದೆ. ಆಶಾ ಹೆಗ್ಡೆ ಅವರು ಭಂಡಾರ್ಕರ್ಸ್ ಕಾಲೇಜಿನಲ್ಲಿ ಪದವಿ ಹಾಗೂ ಡಿ.ಎಂ.ಎಲ್.ಟಿ (DMLT) ಪೂರ್ಣಗೊಳಿಸಿದ್ದಾರೆ. ತಮ್ಮ ವೃತ್ತಿಜೀವನದಲ್ಲಿ ಅವರು ಆರೋಗ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದು, ಶ್ರೀದೇವಿ ಕ್ಲಿನಿಕಲ್ ಲ್ಯಾಬೋರೇಟರಿ ಸಾಲಿಗ್ರಾಮ, ಶ್ರೀದೇವಿ ಹೆಲ್ತ್ ಕೇರ್ ಮಂದಾರ್ತಿ ಮತ್ತು ಪ್ರಧಾನಮಂತ್ರಿ ಜನೌಷಧಿ ಕೇಂದ್ರವನ್ನು ಮಂದಾರ್ತಿಯಲ್ಲಿ ಹೊಂದಿದ್ದಾರೆ. ಆರೋಗ್ಯ ಸೇವೆಯ ಜೊತೆಗೆ ಸಮಾಜಮುಖಿ ಸೇವೆಯನ್ನೂ ಸಮಾನವಾಗಿ ನಿರ್ವಹಿಸುತ್ತಿರುವ ಇವರು ಮಾನವ ಹಕ್ಕುಗಳು ಮತ್ತು ಮಹಿಳಾ ಮಕ್ಕಳ ಕಲ್ಯಾಣ ಸಂಸ್ಥೆಯಲ್ಲಿ ಕರ್ನಾಟಕದ ಉಪಾಧ್ಯಕ್ಷೆಯಾಗಿ, ಸಹಕಾರ ಭಾರತಿಯ ಉಡುಪಿ ಜಿಲ್ಲಾ ಮಹಿಳಾ ಪ್ರಮುಖರಾಗಿ, ಸನ್ನಿಧಿ ಮಹಿಳಾ ಸೌಹಾರ್ದ ಸಹಕಾರಿಯ ನಿರ್ದೇಶಕಿಯಾಗಿ, ವಿವಿಧ ದೇವಸ್ಥಾನಗಳಲ್ಲಿ ಸದಸ್ಯೆಯಾಗಿ, ಗಣೇಶೋತ್ಸವದ ಗೌರವ ಸಲಹೆಗಾರ್ತಿಯಾಗಿ ಸೇವೆ ಸಲ್ಲಿಸುತ್ತಿದ್ದು, ಜೀವ ವಿಮಾ ಕಂಪನಿಗಳ ಅನುಮೋದಿತ ವಿಮಾ ಏಜೆಂಟ್ ಆಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಸಮಾಜದ ವಿವಿಧತೆಯ ನಡುವೆ…

Read More

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಉಡುಪಿ ಘಟಕ ವತಿಯಿಂದ ಗೌರವಾರ್ಪಣಾ ಕಾರ್ಯಕ್ರಮ ಉಡುಪಿ ಪುರಭವನದಲ್ಲಿ ನಡೆಯಿತು. ಪ್ರೊ. ಪವನ್ ಕಿರಣ್ ಕೆರೆ ಇವರು ಫೌಂಡೇಷನ್’ನ ಕಾರ್ಯವೈಖರಿಯ ಬಗ್ಗೆ ಆಶಯ ಭಾಷಣದಲ್ಲಿ ನುಡಿದರು. ಮಾನವ ಹಕ್ಕುಗಳ ಆಯೋಗ ಅಧ್ಯಕ್ಷರಾದ ಟಿ. ಶ್ಯಾಮ್ ಭಟ್ ಇವರನ್ನು ಗಣ್ಯರ ಉಪಸ್ಥಿತಿಯಲ್ಲಿ ಗೌರವಿಸಲಾಯಿತು. ಮಾಹೆ ಮಣಿಪಾಲ ಇದರ ಡಾ. ಹೆಚ್. ಯಸ್ ಬಲ್ಲಾಳ್, ಪ್ರೊ ಎಂ. ಎಲ್. ಸಾಮಗ, ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಡಿ, ಉಡುಪಿ ಘಟಕದ ಗೌರವಾಧ್ಯಕ್ಷರಾದ ಪುರುಷೋತ್ತಮ ಶೆಟ್ಟಿ, ಸಂಚಾಲಕರಾದ ಸುಧಾಕರ ಆಚಾರ್ಯ, ಮಹಿಳಾ ಘಟಕದ ಸದಸ್ಯೆಯರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಕೇಂದ್ರೀಯ ಘಟಕಕ್ಕೆ ಗೌರವನಿಧಿಯನ್ನು ಸಮರ್ಪಿಸಲಾಯಿತು. ಉಡುಪಿ ಘಟಕದ ಅಧ್ಯಕ್ಷರಾದ ಇಂದ್ರಾಳಿ ಜಯಕರ ಶೆಟ್ಟಿ ಇವರು ಸ್ವಾಗತಿಸಿ, ಶಿಲ್ಪಾ ಜೋಷಿ ಕಾರ್ಯಕ್ರಮ ನಿರ್ವಹಿಸಿದರು. ಸಾಂಸ್ಕೃತಿಕ ಕಾರ್ಯಕ್ರಮ ಅಂಗವಾಗಿ ತೆಂಕು ಬಡಗುತಿಟ್ಟಿನ ಕಲಾವಿದರಿಂದ ದಕ್ಷಯಜ್ಞ ಯಕ್ಷಗಾನ ಪ್ರದರ್ಶನ ನಡೆಯಿತು.

Read More

ಕಳೆದ ಹಲವಾರು ವರ್ಷಗಳಿಂದ ಗ್ರಾಮೀಣ ಪ್ರದೇಶದ ಯುವ ಜನತೆಗೆ ಅವರ ಬದುಕನ್ನು ಕಟ್ಟಿಕೊಳ್ಳಲು ನಿರಂತರವಾಗಿ ಮಾರ್ಗದರ್ಶನ ಮಾಡುತ್ತಾ, ಹಲವಾರು ಸರಕಾರಿ ನೇಮಕಾತಿಗಳಲ್ಲಿ ನೇಮಕಗೋಳ್ಳುವಂತೆ ಮಾಡಿದ ಕೀರ್ತಿಯನ್ನು ಹೊತ್ತು ಮುನ್ನಡೆಯುತ್ತಿರುವ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯಾದ ವಿದ್ಯಾಮಾತಾ ಅಕಾಡೆಮಿಯಲ್ಲಿ ನವೋದಯ, ಸೈನಿಕ, ಮೊರಾರ್ಜಿ ಸೇರಿದಂತೆ ವಿವಿಧ ವಸತಿ ಶಾಲೆಗಳ ಪ್ರವೇಶ ಪರೀಕ್ಷೆಗಳಿಗೆ ಪೂರ್ವ ಸಿದ್ದತಾ ತರಬೇತಿಗಳು ಪ್ರಾರಂಭಗೊಂಡವು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಹ್ವಾನಿತಾರಾಗಿದ್ದ ಜೆ.ಸಿ.ಐ ಪುತ್ತೂರು ಇದರ ಸದಸ್ಯರು, ಶಿಶು ಮಂದಿರ ಪುತ್ತೂರು ಇದರ ಶ್ರೀ ಕೃಷ್ಣ ಜನ್ಮಾಷ್ಠಮಿ 2025ರ ಉಪಾಧ್ಯಕ್ಷರು, ಲಶ್ ಪ್ಯಾಶನ್ ಇದರ ಮಾಲಿಕರಾದ ಮಾಲಿನಿ ಕಶ್ಯಪ್ ರವರು ಮಾತನಾಡಿ, ಸ್ಥಳೀಯ ಮಟ್ಟದಲ್ಲಿ ಚಿಕ್ಕ ವಯಸ್ಸಿನ ಮಕ್ಕಳಿಗೆ ಪೂರಕವಾದ ತರಬೇತಿ ನೀಡಿ ಉತ್ತಮ ರೀತಿಯಲ್ಲಿ ಮಾರ್ಗದರ್ಶನ ನೀಡುತ್ತಿರುವ ಕಾರ್ಯ ಎಲ್ಲರಿಗೂ ಪ್ರೇರಣೆಯಾಗಿದ್ದು, ನಾವೆಲ್ಲರೂ ವಿದ್ಯಾಮಾತಾ ಅಕಾಡೆಮಿಯ ಕಾರ್ಯಕ್ಕೆ ಕೈ ಜೋಡಿಸಬೇಕು ಎಂದು ಸಂಸ್ಥೆಯ ಕಾರ್ಯ ಚಟುವಟಿಕೆಗಳನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವಿದ್ಯಾಮಾತಾ ಅಕಾಡೆಮಿಯ ಆಡಳಿತ…

Read More

ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ ಆಫ್ ಇಂಡಿಯಾ ಸಂಸ್ಥೆಯವರು ನಡೆಸಿದ ಸಿ ಎ ಫೌಂಡೇಶನ್ ಫಲಿತಾಂಶವು 06 ಜುಲೈ 2025 ರಂದು ಪ್ರಕಟಗೊಂಡಿದ್ದು, ಕಾರ್ಕಳ ಕ್ರಿಯೇಟಿವ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ಗಮನಾರ್ಹ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ಪೂರ್ಣ ಭಟ್ ಕೆ.ಎಲ್, ಸೃಜನ್ ಎಸ್. ಭಟ್, ಅಫ್ಸರ್ ಫಾಹಿಮ್, ಬಸವ ಪ್ರಸಾದ್ ಕಾಜಿ, ಪ್ರಭವ್ ಗೋಪಾಲ್ ಶೆಟ್ಟಿ, ಸೌರವ್ ರವಿ ಶೇಟ್, ಆರ್ಯ ಬಿ.ವಿ, ಹೆಗ್ಡೆ ಪ್ರತ್ವಿಕ್, ಶ್ರದ್ಧಾ ಪ್ರಕಾಶ್ ಅಂಗಡಿ, ರೇಷ್ಮ ಜಿ.ಕೆ, ಶ್ರೀಕಾರ್ ದುಬೀರ ರವರು ಕ್ರಮವಾಗಿ 264, 249, 238, 238, 233, 225, 212, 212, 210, 204, 202, ಅಂಕಗಳನ್ನು ಗಳಿಸುವುದರ ಮೂಲಕ ಅರ್ಹತೆಯನ್ನು ಗಳಿಸಿಕೊಂಡಿರುತ್ತಾರೆ. ಪರೀಕ್ಷೆ ಬರೆದಿರುವ 20 ವಿದ್ಯಾರ್ಥಿಗಳಲ್ಲಿ 11 ವಿದ್ಯಾರ್ಥಿಗಳು ಮೊದಲ ಪ್ರಯತ್ನದಲ್ಲೇ ಅರ್ಹತೆಯನ್ನು ಗಳಿಸಿರುತ್ತಾರೆ. ರಾಷ್ಟ್ರೀಯ ಮಟ್ಟದ ಒಟ್ಟು ಫಲಿತಾಂಶದಲ್ಲಿ 15% ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, ಅದರಲ್ಲಿ ಕ್ರಿಯೇಟಿವ್ ವಿದ್ಯಾ ಸಂಸ್ಥೆಯಲ್ಲಿ ಪರೀಕ್ಷೆ ತೆಗೆದುಕೊಂಡ ಒಟ್ಟು ವಿದ್ಯಾರ್ಥಿಗಳಲ್ಲಿ 55% ವಿದ್ಯಾರ್ಥಿಗಳು ತೇರ್ಗಡೆ ಹೊಂದಿರುವುದು…

Read More

ಕಾರ್ಕಳ : ಯೋಜನಾ ಬದ್ಧ ಅಧ್ಯಯನ, ಶಿಸ್ತುಬದ್ದ ಕಲಿಕೆಯಿಂದ ಉನ್ನತ ಗುರಿಗಳನ್ನು ತಲುಪಲು ವಾಣಿಜ್ಯ ವಿದ್ಯಾರ್ಥಿಗಳಿಗೆ ಬಹು ಅವಕಾಶಗಳಿವೆ. ಜಾಗತೀಕರಣ ಮತ್ತು ತಂತ್ರಜ್ಞಾನಗಳ ಬಳಕೆಯಿಂದ ವಾಣಿಜ್ಯ ಕ್ಷೇತ್ರದಲ್ಲಿ ಇಂದು ಉದ್ಯೋಗಾವಕಾಶಗಳು ಹೆಚ್ಚಿನ ಯುವಜನತೆಯನ್ನು ಆಕರ್ಷಿಸುತ್ತಿವೆ ಎಂದು ತ್ರಿಷಾ ಸಮೂಹ ಸಂಸ್ಥೆಗಳ ಸAಸ್ಥಾಪಕರಾದ ಸಿ.ಎ ಗೋಪಾಲಕೃಷ್ಣ ಭಟ್ ಹೇಳಿದರು. ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ನಡೆದ ವೃತ್ತಿಪರ ಕೋರ್ಸುಗಳ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದರು. ಬಿ.ಕಾಂ ಪದವಿಯ ಜೊತೆಗೆ ಸಿ.ಎ ಮಾಡಬಹುದು. ವಾಣಿಜ್ಯ ಶಾಸ್ತçದ ವಿದ್ಯಾರ್ಥಿಗಳಿಗೆ ಲಭ್ಯವಿರುವ ಅತ್ಯಂತ ಪ್ರತಿಷ್ಠಿತ ಮತ್ತು ಹೆಚ್ಚು ಪ್ರತಿಫಲ ನೀಡುವ ವೃತ್ತಿ ಆಯ್ಕೆಗಳಲ್ಲಿ ಚಾರ್ಟಡ್ ಅಕೌಂಟೆoಟ್, ಕoಪೆನಿ ಸೆಕ್ರೆಟರಿ, ಎ.ಸಿ.ಸಿ.ಎ, ಸಿ.ಐ,ಎಂ,ಎ, ಎನ್.ಸಿ.ಎಫ್.ಎಂ, ಸಿ.ಎಂ.ಎ ಈ ಎಲ್ಲಾ ಕೋರ್ಸುಗಳ ಸಂಪೂರ್ಣ ಮಾಹಿತಿಯನ್ನು ನೀಡಿದರು. ಇದೇ ಸಂದರ್ಭ ಕಾಲೇಜಿನ ಉಪಪ್ರಾಂಶುಪಾಲರಾದ ಶ್ರೀಮತಿ ಉಷಾ ರಾವ್ ಯು, ಪಿ.ಆರ್.ಒ ಶ್ರೀಮತಿ ಜ್ಯೋತಿ ಪದ್ಮನಾಭ ಭಂಡಿ, ಡೀನ್ ಶ್ರೀ ಮಿಥುನ್ ಯು, ವಾಣಿಜ್ಯ ವಿಭಾಗದ…

Read More