Author: admin
ಮಂಗಳೂರು ವಿ.ವಿ ಅಂತರ್ ಕಾಲೇಜು ಬಾಡಿಬಿಲ್ಡಿಂಗ್ ಚಾಂಪಿಯನ್ಶಿಫ್ ಆಳ್ವಾಸ್ಗೆ ಸಮಗ್ರ ತಂಡ ಪ್ರಶಸ್ತಿ12ನೇ ಬಾರಿ ಪಟ್ಟ
ಮೂಡುಬಿದಿರೆ: ಬ್ರಹ್ಮಾವರದ ಎಸ್.ಎಂ.ಎಸ್ ಕಾಲೇಜು ಹಾಗೂ ಮಂಗಳೂರು ವಿಶ್ವ ವಿದ್ಯಾಲಯದ ಜಂಟಿ ಆಶ್ರಯದಲ್ಲಿ ಜರುಗಿದ ಮಂಗಳೂರು ವಿ.ವಿ ಅಂತರ್ ಕಾಲೇಜು ಬಾಡಿ ಬಿಲ್ಡಿಂಗ್ ಚಾಂಪಿಯನ್ ಶಿಪ್ನಲ್ಲಿ ಆಳ್ವಾಸ್ ಕಾಲೇಜು ಸಮಗ್ರ ತಂಡ ಪ್ರಶಸ್ತಿಯನ್ನು ಪಡೆಯಿತು. ಆಳ್ವಾಸ್ ಕಾಲೇಜಿನ ಕಿಶಾನ್ ಶೆಟ್ಟಿ ಮಿಸ್ಟರ್. ಯೂನಿವರ್ಸಿಟಿ ಪಟ್ಟವನ್ನು ಪಡೆದುಕೊಂಡರು. ಎಂಟು ವಿವಿಧ ದೇಹತೂಕ ವಿಭಾಗಗಳಲ್ಲಿ ಜರುಗಿದ ಈ ಸ್ಪರ್ಧಾ ಕೂಟದಲ್ಲಿ, ಆಳ್ವಾಸ್ ಕಾಲೇಜು ಒಟ್ಟು 3 ಚಿನ್ನ 3 ಬೆಳ್ಳಿ ಮತ್ತು ಒಂದು ಕಂಚಿನ ಪದಕವನ್ನು ಪಡೆದುಕೊಂಡಿದೆ. 10 ಕೆ.ಜಿ ದೇಹತೂಕ ವಿಭಾಗದಲ್ಲಿ ಧನಂಜಯ, 90 ಕೆ.ಜಿಯಲ್ಲಿ ಕಿಶನ್ ಶೆಟ್ಟಿ, 90+ ಕೆ.ಜಿಯಲ್ಲಿ ಕಿಶೋರ್ ಕುಮಾರ್ ಚಿನ್ನದ ಪದಕ ಪಡೆದುಕೊಂಡರೆ, 75 ಕೆ.ಜಿಯಲ್ಲಿ ಅರುಣ್.ಟಿ, 85 ಕೆ.ಜಿಯಲ್ಲಿ ಸುಲೈಮಾನ್, 90 ಕೆ.ಜಿಯಲ್ಲಿ ದರ್ಶನ್ ಬೆಳ್ಳಿಯ ಪದಕ ಪಡೆದರೆ, 65 ಕೆ.ಜಿ ವಿಭಾಗದಲ್ಲಿ ಗುಡ್ಡಪ್ಪ ಕಂಚಿನ ಪದಕವನ್ನು ಪಡೆದುಕೊಂಡರು. ಕಳೆದ 12 ವರ್ಷಗಳಿಂದ ಸಮಗ್ರ ಪ್ರಶಸ್ತಿಯನ್ನು ಪಡೆಯುತ್ತಾ ಬಂದಿರುವ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳ ಸಾಧನೆಯನ್ನು ಸಂಸ್ಥೆಯ…
ಕರ್ನಾಟಕ ಸಂಘ ಶಾರ್ಜಾ ದ ಪ್ರತಿಷ್ಠಿತ ಮಯೂರ ವಿಶ್ವ ಮಾನ್ಯ ಕನ್ನಡಿಗ ಪ್ರಶಸ್ತಿ ಶ್ರೀ ಮೋಹನ್ ನರಸಿಂಹ ಮೂರ್ತಿ ಮಡಿಲಿಗೆ
ಕರ್ನಾಟಕ ಸಂಘ ಶಾರ್ಜಾದ ಆಶ್ರಯದಲ್ಲಿ 2023 ನವೆಂಬರ್ 18 ರಂದು ಶಾರ್ಜಾ ಈವಾನ್ ಹೋಟೆಲ್ ನಲ್ಲಿ ಆಯೋಜಿಸಲಾಗಿದ್ದ ಕರ್ನಾಟಕ ರಾಜ್ಯೋತ್ಸವ, 21ನೇ ವಾರ್ಷಿಕೋತ್ಸವ ಮತ್ತು ಮಯೂರ ವಿಶ್ವಮಾನ್ಯ ಕನ್ನಡಿಗ ಪ್ರಶಸ್ತಿ ಪ್ರದಾನ ಸಮಾರಂಭ ಅದ್ಧೂರಿಯಾಗಿ ನಡೆಯಿತು. ಕಾರಯಕಾರಿ ಸಮಿತಿಯ ಸರ್ವ ಸದಸ್ಯರು ಕನ್ನಡ ಧ್ವಜಾರೋಹಣ, ಜ್ಯೋತಿ ಬೆಳಗಿಸಿ, ಸ್ವಾಗತದೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ಯು.ಎ.ಇ.ಯ ವಿವಿಧ ತಂಡಗಳಾದ ಸಿಂಫೋನಿ ಮ್ಯೂಸಿಕ್ ಸ್ಕೂಲ್, ಬಿಲ್ಲವಾಸ್ ಫ್ಯಾಮಿಲಿ, ರಸ್ ಅಲ್ ಕೈಮಾ ಕರ್ನಾಟಕ ಸಂಘ, ನೃತ್ಯ ಕಣ್ಮಣಿಗಳು, ರಮಣ ಲಾಸ್ಯ, ಪದ್ಮಶಾಲಿ ಸಮುದಾಯ, ಸ್ಮೈಲ್ ಕ್ರಿಯೇಶನ್ಸ್, ಗೋಲ್ಡಲ್ ಸ್ಟಾರ್ ಮ್ಯೂಸಿಕ್ ಶಾರ್ಜಾ, ಇವರುಗಳಿಂದ ಆಕರ್ಷಕ ಜಾನಪದ ನೃತ್ಯ, ಮಂಗಳೂರಿನಿಂದ ಆಗಮಿಸಿದ ಗಾಯಕ ಶ್ರೀ ಮಹ್ಮದ್ ಇಕ್ಬಾಲ್ ಮತ್ತು ಶ್ರೀ ಹರೀಶ್ ಶೇರಿಗಾರ್ ಮತ್ತು ಸನ್ನಿಧಿ ವಿಶ್ವನಾಥ್ ರ ಸಂಗೀತ ರಸಮಂಜರಿ ಕಾರ್ಯಕ್ರಮ ನಡೆಯಿತು. ಶಾರ್ಜಾ ಕರ್ನಾಟಕ ಸಂಘದ ದ್ವೀದಶಮಾನೋತವದ ಸವಿ ನೆನೆಪಿಗಾಗಿ ಗಣೇಶ್ ರೈ ಪ್ರಧಾನ ಸಂಪಾದಕತ್ವದಲ್ಲಿ, ಸ್ಮರ ಸಂಚಿಕೆ ಸಮಿತಿಯ ಆಶ್ರಯದಲ್ಲಿ ಮುದ್ರಣವಾಗಿದ್ದ…
ಬಂಟ್ಸ್ ಫೋರಮ್ ಮೀರಾ ಭಾಯಂದರ್ ವತಿಯಿಂದ ಸ್ನೇಹ ಸಮ್ಮಿಲನ ಕಾರ್ಯಕ್ರಮವು ಇತ್ತೀಚಿಗೆ ಬಹು ವಿಜೃಂಭಣೆಯಿಂದ ನಡೆದಿವೆ. ಇದರ ಯಶಸ್ಸಿಗೆ ಶ್ರಮಿಸಿದ ಸರ್ವ ಸದಸ್ಯರು ಹಾಗೂ ಮುಂದಾಳತ್ವ ವಹಿಸಿದ್ದ ಅಧ್ಯಕ್ಷರಾದ ಇನ್ನಾ ಚಂದ್ರಹಾಸ ಕೆ. ಶೆಟ್ಟಿ ಮತ್ತು ಪದಾಧಿಕಾರಿಗಳಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ಸಂಸ್ಥೆಯ ಪ್ರಗತಿಗೆ ಸದಸ್ಯರ ಒಮ್ಮತದ ಸಹಕಾರ ಅಗತ್ಯ. ಸಂಸ್ಥೆಯ ಉನ್ನತಿಗೆ ಸಹಕಾರವನ್ನು ನೀಡಿದ ಅಧ್ಯಕ್ಷರನ್ನು ಇಂದು ಸದಸ್ಯರ ಸಮ್ಮುಖದಲ್ಲಿ ಸನ್ಮಾನಿಸುವ ಕಾರ್ಯಕ್ರಮವೊಂದನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಂಟ್ಸ್ ಫೋರಮಿನ ಗೌರವಾಧ್ಯಕ್ಷ ಸಂತೋಷ್ ರೈ ಬೆಳ್ಳಿಪಾಡಿ ಹೇಳಿದರು. ಅವರು ಜು.1 ರಂದು ಸಂಸ್ಥೆಯು ಮೀರಾರೋಡ್ ರೈಲ್ವೆ ಸ್ಟೇಶನ್ ಬದಿಯಲ್ಲಿರುವ ಸುರಭಿ ಹೋಟೇಲಿನ ಸಭಾಗೃಹದಲ್ಲಿ ಆಯೋಜಿಸಿದ್ದ ಕೌಟಂಬಿಕ ಸ್ನೇಹಕೂಟ ಕಾರ್ಯಕ್ರಮದಲ್ಲಿ ಭಾಗವಹಿಸಿ, ಅಧ್ಯಕ್ಷರನ್ನು ಸನ್ಮಾನಿಸಿ ಮಾತನಾಡಿದರು. ಸನ್ಮಾನ ಸ್ವೀಕರಿಸಿದ ಅಧ್ಯಕ್ಷ ಚಂದ್ರಹಾಸ ಶೆಟ್ಟಿಯವರು ಮಾತನಾಡುತ್ತಾ ಅಧ್ಯಕ್ಷನಾಗಿ ನನ್ನ ಕರ್ತವ್ಯವನ್ನು ಸರ್ವರ ಸಹಕಾರದಿಂದ ನಿಭಾಯಿಸಿದ್ದೇನೆಂಬ ಸಂತೃಪ್ತಿ ಇದೆ. ಎಲ್ಲಾದರೂ ಅಪ್ಪಿತಪ್ಪಿ ತಿಳಿಯದೆ ತಪ್ಪಾಗಿದ್ದರೆ ಕ್ಷಮಿಸಿ ಮುಂದಿಗೂ ತಮ್ಮ ಸಹಕಾರವಿರಲಿ ಎಂದು ಹೇಳಿದರು. ಆರಂಭದಲ್ಲಿ ಮಹಿಳಾ ವಿಭಾಗದ…
ಪ್ರಸಂಗ ಮುಹೂರ್ತ ಪೂಜೆ, ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಕನ್ನಡ ಸಂಘ ಬಹರೈನ್ ಸಭಾಂಗಣದಲ್ಲಿ ನೆರವೇರಿತು. ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಶ್ರೀ ಪುರುಷೋತ್ತಮ ಕೆ.ಭಂಡಾರಿ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಶುಭಕೋರಿದರು. ಅರ್ಚಕರಾದ ಶ್ರೀಕೃಷ್ಣ ಅಡಿಗ ಕದ್ರಿ, ಶ್ರೀ ಸತ್ಯ ಶಂಕರ ಬರೆ ಆಶೀರ್ವಚನ ನೀಡಿದರು. ಪಟ್ಲ ಸಂಭ್ರಮ 2023 ಮುಂಬರುವ ಅಕ್ಟೋಬರ್ 20 ಕ್ಕೆ ಅದ್ದೂರಿಯಾಗಿ ಸ್ಥಳೀಯ ಇಂಡಿಯನ್ ಕ್ಲಬ್ ಸಭಾಂಗಣದಲ್ಲಿ ಜರುಗಲಿದೆ. ಈ ವರ್ಷದ ಯಕ್ಷಗಾನ ಅಭ್ಯಾಸಕ್ಕೆ ಪ್ರಸಂಗ ಮುಹೂರ್ತವು ನೆರವೇರಿತು. ಬಹರೈನ್ ಸೌದಿಯ ಯಕ್ಷಗಾನ ಕಲಾವಿದರು, ಅತಿಥಿಕಲಾವಿದರನ್ನೊಳಗೊಂಡು ಅಭಿನವ ವಾಲ್ಮೀಕಿ ಶ್ರೀ ಬೊಟ್ಟಿಕೆರೆ ಪುರುಷೋತ್ತಮ ಪೂಂಜ ವಿರಚಿತ ಮಾನಿಷಾದ ಯಕ್ಷಗಾನ ನಾಟ್ಯಗುರು ಶ್ರೀ ದೀಪಕ್ ರಾವ್ ಪೇಜಾವರ ನಿರ್ದೇಶನದಲ್ಲಿ ಪ್ರದರ್ಶನ ಕಾಣಲಿದೆ. ಯಕ್ಷಧ್ರುವ ಪಟ್ಲ ಸತೀಶ ಶೆಟ್ಟಿಯವರ ಸಿರಿಕಂಠದ ಭಾಗವತಿಕೆಯೊಂದಿಗೆ ತಾಯ್ನಾಡ ತೆಂಕುಬಡಗಿನ ಸುಪ್ರಸಿದ್ಧ ಕಲಾವಿದ ಶಶಿಕಾಂತ ಶೆಟ್ಟಿ ಕಾರ್ಕಳ , ಖ್ಯಾತ ಹಿರಿಯ ಕಲಾವಿದ ಶೇಖರ್ ಡಿ.ಶೆಟ್ಟಿಗಾರ್ ದುಬೈ, ಹಿಮ್ಮೇಳವಾದಕ ರೋಹಿತ್ ಉಚ್ಚಿಲ ಅತಿಥಿ ಕಲಾವಿದರಾಗಿ…
83ನೇ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಪುರುಷ ಹಾಗೂ ಮಹಿಳಾ ಅಥ್ಲೇಟಿಕ್ಸ್ ಕ್ರೀಡಾಕೂಟ ಪದಕ ಮುಡಿಗೇರಿಸಿಕೊಂಡ ಆಳ್ವಾಸ್, ಮಂಗಳೂರು ವಿ.ವಿ. ಚಾಂಪಿಯನ್ಸ್
ವಿದ್ಯಾಗಿರಿ: 83ನೇ ಅಖಿಲ ಭಾರತ ಅಂತರ್ವಿವಿ ಪುರುಷ ಹಾಗೂ ಮಹಿಳೆಯರ ಅಥ್ಲೇಟಿಕ್ಸ್ ಚಾಂಪಿಯನ್ಷಿಪ್ನಲ್ಲಿ ಮಂಗಳೂರು ವಿವಿ ಸಮಗ್ರ ಚಾಂಪಿಯನ್ಷಿಪ್ ಪಟ್ಟ ಪಡೆದುಕೊಂಡಿತು. ಪುರುಷ ಹಾಗೂ ಮಹಿಳೆಯರ ಎರಡು ವಿಭಾಗದಲ್ಲಿ ಮಂಗಳೂರು ವಿವಿ 48(ಪುರುಷ) ಹಾಗೂ 56(ಮಹಿಳೆಯರ) ಅಂಕಗಳೊಂದಿಗೆ ಒಟ್ಟು 104 ಅಂಕ ಪಡೆದರೆ, ಕ್ಯಾಲಿಕಟ್ ವಿವಿ ಪುರುಷರಲ್ಲಿ 53 ಅಂಕ ಹಾಗೂ ಮಹಿಳೆಯರಲ್ಲಿ 41 ಅಂಕ ಪಡೆದು ಒಟ್ಟು 94 ಅಂಕ ಗಳಿಸಿ ರನ್ನರ್ಸ್ಅಪ್ ಸ್ಥಾನ ಪಡೆಯಿತು. ಮಂಗಳೂರು ವಿವಿ ಎರಡು ವಿಭಾಗಗಳಲ್ಲಿ ಒಟ್ಟು 4 ಚಿನ್ನ, 3 ಬೆಳ್ಳಿ, 7 ಕಂಚಿನ ಪದಕ ಪಡೆದುಕೊಂಡಿತು. ಪದಕ ಪಡೆದ ಎಲ್ಲಾ ವಿದ್ಯಾರ್ಥಿಗಳು ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳು. ಪುರುಷ ಹಾಗೂ ಮಹಿಳೆಯರ ಮಂಗಳೂರು ವಿವಿ ತಂಡದ ಒಟ್ಟು 72 ಜನರ ಆಟಗಾರರಲ್ಲಿ 59 ಕ್ರೀಡಾಪಟುಗಳು ಆಳ್ವಾಸ್ನ ವಿದ್ಯಾರ್ಥಿಗಳಾಗಿದ್ದರು. ಚೆನ್ನೈನ ತಮಿಳನಾಡು ಫಿಸಿಕಲ್ ಎಜ್ಯೂಕೇಷನ್ ಆ್ಯಂಡ್ ಸ್ಪೋಟ್ರ್ಸ ವಿವಿಯಲ್ಲಿ ಶನಿವಾರ ಮುಕ್ತಾಯಗೊಂಡ 83ನೇ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯದ ಪುರುಷರ ಅಥ್ಲೇಟಿಕ್ಸ್ ಕ್ರೀಡಾಕೂಟದಲ್ಲಿ 48…
ಭಾರತವು ಒಂದು ವೈವಿಧ್ಯಮಯ ರಾಷ್ಟ್ರ. ವೈವಿಧ್ಯತೆಯಲ್ಲಿ ಏಕತೆಯು ಇಲ್ಲಿನ ವೈಶಿಷ್ಟ್ಯವಾಗಿದೆ. ಜಗತ್ತಿನ ಯಾವ ರಾಷ್ಟ್ರದಲ್ಲಿಯೂ ಕಂಡರಿಯದಷ್ಟು ಜಾತಿ, ಧರ್ಮ, ಭಾಷೆ, ಮತ್ತು ಜೀವನ ವೈವಿಧ್ಯಗಳು ಈ ದೇಶದಲ್ಲಿದೆ. ಆದರೂ ಕೂಡ ಇಂದು ನಾವು ಭಾರತವನ್ನು ಒಂದು ರಾಷ್ಟ್ರವೆಂದೇ ಗುರುತಿಸುತ್ತೇವೆ. ಈ ರೀತಿಯ ರಾಷ್ಟ್ರದಲ್ಲಿ ಜನರನ್ನು ಸಂಘಟಿಸಿ ಆಡಳಿತ ನಡೆಸುವುದು ಅಷ್ಟೊಂದು ಸುಲಭದ ಕಾರ್ಯವಲ್ಲ. ಭಾರತವು ಜಾತ್ಯಾತೀತ ರಾಷ್ಟ್ರವೆಂದು ಕರೆಯಲ್ಪಟ್ಟರೂ ಜಾತೀಯತೆಯು ಇಂದು ಎಲ್ಲಾ ಕಡೆ ಗೋಚರಿಸುತ್ತಿದೆ. ವೈಜ್ಞಾನಿಕ ಪ್ರಗತಿಯಲ್ಲಿ ಮುನ್ನಡೆಯುತ್ತಿರುವ ಈ ರಾಷ್ಟ್ರದಲ್ಲಿಂದು ಸ್ವಾರ್ಥ ಮತ್ತು ಸಂಕುಚಿತ ಮನೋಭಾವನೆ ಮನೆ ಮಾಡಿಕೊಂಡಿದೆ. ದೇಶದ ಹಿತ ಚಿಂತನೆಯ ಜನರ ಕೊರತೆ ಎದ್ದು ಕಾಣುತ್ತಿದೆ. ಆದುದರಿಂದ ರಾಷ್ಟ್ರವನ್ನು ಒಗ್ಗೂಡಿಸುವಂತಹ ಏಕತಾ ಸೂತ್ರವೊಂದನ್ನು ನಾವಿಂದು ಗುರುತಿಸಬೇಕಾಗಿದೆ. ಇಲ್ಲದೆ ಇದ್ದರೆ ದೇಶಕೆ ಮುಂದೆ ಅಪಾಯ ತಪ್ಪಿದ್ದಲ್ಲ. ಆ ಬಗ್ಗೆ ನಮ್ಮ ಚಿಂತನೆ ಅಗತ್ಯವಲ್ಲವೇ? ನಮ್ಮ ದೇಶದಲ್ಲಿ ಏಕತಾ ಮನೋಭಾವನೆಯನ್ನು ಪ್ರಚೋದಿಸಬೇಕಾದ ಧರ್ಮದ ವಿಚಾರಗಳು ಇಂದು ವ್ಯಕ್ತಿ ವ್ಯಕ್ತಿಗಳ ಮಧ್ಯೆ ದ್ವೇಷ ಭಾವನೆಯನ್ನು ಉಂಟು ಮಾಡುವ ಅನುಚಿತ ಸಾಧನವಾಗಿದೆ.…
ಅಮೇರಿಕಾದ ಪ್ರತಿಷ್ಠಿತ ತುಳು ಸಂಸ್ಥೆ ಆಲ್ ಅಮೇರಿಕಾ ತುಳು ಅಸೋಸಿಯೇಷನ್ (ರಿ) AATA ದ ನೂತನ ಅಧ್ಯಕ್ಷರಾಗಿ ಫ್ಲೋರಿಡಾದ ಶ್ರೀಮತಿ ಶ್ರೀವಲ್ಲಿ ರೈ ಮಾರ್ಟೆಲ್ ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. AATA ಸಂಸ್ಥೆಯ ವಾರ್ಷಿಕ ಬಿಸು ಪರ್ಬದ-2023 ಸಂದರ್ಭಕ್ಕೂ ಮುನ್ನ ಈ ಆಯ್ಕೆ ಪ್ರಕ್ರಿಯೆಯನ್ನು ಪ್ರತಿಜ್ಞಾ ವಿಧಿ ಸ್ವೀಕರಿಸುವುದರೊಂದಿಗೆ ಅಂತಿಮಗೊಳಿಸಲಾಯಿತು. ಅಂತರ್ಜಾಲ ತಾಣ ವೇದಿಕೆಯಲ್ಲಿ ನಡೆದ ಬಿಸು ಪರ್ಬ-2023 ಆಚರಣೆಯ ನೆನಪಲ್ಲಿ ಗೌರವ ಅತಿಥಿಯಾಗಿ ನಿಟ್ಟೆ ವಿಶ್ವವಿದ್ಯಾಲಯದ ತುಳು ಅಧ್ಯಯನ ಪೀಠದ ಮುಖ್ಯಸ್ಥೆ ಡಾ. ಸಾಯೀಗೀತ ಅವರು ಅಬ್ಬಕ್ಕ ಗೇನದ ಚಾವಡಿ ಹೆಸರಿನಲ್ಲಿ ತುಳು ಅಂತರ್ಜಾಲ ಗ್ರಂಥಾಲಯವನ್ನು ಉದ್ಘಾಟಿಸಿ ”ಜ್ಞಾನಸುಧೆಯು ದಶದಿಕ್ಕುಗಳಿಂದ ಹರಿದು ಬರಲಿ , ತುಳುವಿನ ಶ್ರೇಷ್ಠ ಜ್ಞಾನವು ವಿಶ್ವದೆಲ್ಲೆಡೆ ಪಸರಿಸಲಿ” ಎಂದು ಹಾರೈಸಿದರು. ಕಾರ್ಯಕ್ರಮದ ಇನ್ನೋರ್ವ ಅತಿಥಿ ಸಾಫ್ಟ್ವೇರ್ ಉದ್ಯಮಿ, ಎಂ ರಿಸಲ್ಟ್ ನ ಸಂಸ್ಥಾಪಕ ಹಾಗೂ ಅಧ್ಯಕ್ಷ ಶೇಖರ್ ನಾಯ್ಕ್ ಮಾತನಾಡಿ, ”ಕಠಿಣ ಶ್ರಮ ಹಾಗೂ ಧ್ರಡ ನಿರ್ಧಾರ ಯಶಸ್ಸಿನ ಹಾದಿಯನ್ನು ಸುಗಮಗೊಳಿಸುತ್ತದೆ” ಎಂದರು. ಪ್ರಖ್ಯಾತ ಸಂಶೋಧಕ ಹಾಗೂ…
ವಕೀಲ ವೃತ್ತಿಯ ಜತೆ ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಪ್ರವೃತ್ತಿಯನ್ನು ಮೈಗೂಡಿಸಿಕೊಂಡ ವಿಶೇಷ ವ್ಯಕ್ತಿಯೋರ್ವರನ್ನು ನಾವು ಪರಿಚಯಿಸುತ್ತಿದ್ದೇವೆ. ಸಾಮಾಜಿಕ ಸಂಘಟಕ, ಯಕ್ಷಸಾಧಕ, ಸತತ ಎರಡು ಬಾರಿ ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯರಾಗಿ ಹಾಗೂ ಸದ್ಯ ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸ್ಥಾಯಿ ಸಮಿತಿಯ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿರುವ ಮಜಿಬೈಲ್ ನ ಹಿರಿಮೆಯ ಗರಿ ನ್ಯಾಯವಾದಿ ಯಂ. ದಾಮೋದರ ಶೆಟ್ಟಿಯವರು ಮಂಜೇಶ್ವರದ ಮೂಡಂಬೈಲು ದಿ. ಲಕ್ಷಣ ಮತ್ತು ದಿ.ತಿಮ್ಮಕ್ಕ ದಂಪತಿಗಳ ಸುಪುತ್ರನಾಗಿ ಜನಿಸಿ ಪ್ರಾಥಮಿಕ ಶಿಕ್ಷಣವನ್ನು ಮೂಡಂಬೈಲ್ ಶಾಲೆ, ಪ್ರೌಡ ಶಿಕ್ಷಣವನ್ನು ಮೀಯಪದವು ಶಾಲೆ ಮತ್ತು ಪದವಿಪೂರ್ವ ಶಿಕ್ಷಣವನ್ನು ಕೆನರಾ ಕಾಲೇಜು ಉರ್ವ ಹಾಗೂ ಪದವಿ ಶಿಕ್ಷಣವನ್ನು ಸರಕಾರಿ ಕಾಲೇಜಿನಲ್ಲಿ ಪೂರೈಸಿದರು. ಜೀವನ ನಿರ್ವಹಣೆಗಾಗಿ ಸಿಂಡಿಕೇಟ್ ಬ್ಯಾಂಕ್ ನಲ್ಲಿ ದುಡಿದು ನಂತರ ಕಲಿತಂತಹ ಕಾನೂನು ಪದವಿಯನ್ನು ಸದುಪಯೋಗಪಡಿಸುವ ಉದ್ದೇಶದಿಂದ ವಕೀಲ ವೃತ್ತಿಯನ್ನು ತೊಡಗಿಸಿಕೊಂಡು ಓರ್ವ ಆದರ್ಶ ಕಾನೂನು ತಜ್ಞರಾಗಿ ಸೇವಾಕೈಂಕರ್ಯವನ್ನು ಮುಂದುವರಿಸುತ್ತಿದ್ದಾರೆ. ಯಕ್ಷ ಸಾಧನೆ : ಬಾಲ್ಯದಿಂದಲೂ ಯಕ್ಷಗಾನದ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದ ಇವರು ಕಾಲೇಜು…
ಎಂ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸರಕಾರಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಪ್ರತಿದಿನ ಸಂಜೆ ರೋಗಿಗಳ ಜೊತೆಗಾರರಿಗೆ ಊಟ ನೀಡುವ ಕಾರುಣ್ಯ ಯೋಜನೆಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಪ್ರತೀ ವರ್ಷ ಒಂದು ತಿಂಗಳ 2,25,000 ರೂ. ದೇಣಿಗೆ ನೀಡುತ್ತಿದ್ದು, 2021ನೇ ಸಾಲಿನ ದೇಣಿಗೆಯ ಎರಡನೇ ಕಂತಿನ 1,75,000/- ರೂ. ಮೊತ್ತದ ಚೆಕ್ಕನ್ನು ಬಂಟ್ಸ್ ಹಾಸ್ಟೆಲ್ ಸಭಾಂಗಣದಲ್ಲಿ ನಡೆದ ಸಮಾಜ ಕಲ್ಯಾಣ ಸಹಾಯಧನ ಚೆಕ್ ವಿತರಣಾ ಸಮಾರಂಭದಲ್ಲಿ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರು ಹಸ್ತಾಂತರಿಸಿದರು. ಒಕ್ಕೂಟದ ಅಧ್ಯಕ್ಷರಾದ ಶ್ರೀ ಐಕಳ ಹರೀಶ್ ಶೆಟ್ಟಿ, ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಉಪೇಂದ್ರ ಆರ್ ಶೆಟ್ಟಿ, ಕರ್ನಿರೆ ವಿಶ್ವನಾಥ್ ಶೆಟ್ಟಿ, ಮುಂಬೈ ಉದ್ಯಮಿಗಳಾದ ಕರುಣಾಕರ್ ಶೆಟ್ಟಿ ಮಧ್ಯಗುತ್ತು, ಆದರ್ಶ್ ಶೆಟ್ಟಿ, ಅಶೋಕ್ ಶೆಟ್ಟಿ, ಮೋಹನ್ ದಾಸ್ ಶೆಟ್ಟಿ, ಇಂದ್ರಾಳಿ ಜಯಕರ್ ಶೆಟ್ಟಿ ಮತ್ತು ಗಣ್ಯರು ಉಪಸ್ಥಿತರಿದ್ದರು. ಮೊಹಮ್ಮದ್ ಆರಿಫ್ ಮತ್ತು ಹಮೀದ್ ಅತ್ತೂರು ಚೆಕ್ ಸ್ವೀಕರಿಸಿದರು.
ಬಂಟರ ಯಾನೆ ನಾಡವರ ಮಾತೃ ಸಂಘದ ಶತಮಾನೋತ್ಸವ ಕಟ್ಟಡ ನಿರ್ಮಾಣ ಸಮಿತಿಯ ಅಧ್ಯಕ್ಷರಾಗಿ ಎಂ.ಆರ್.ಜಿ. ಸಮೂಹ ಸಂಸ್ಥೆಗಳ ಅಧ್ಯಕ್ಷರಾಗಿ ಕೆ. ಪ್ರಕಾಶ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಮಂಗಳೂರಿನಲ್ಲಿ ನಡೆದ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಬಂಟರ ಯಾನೆ ನಾಡವರ ಮಾತೃ ಸಂಘದ ಶತಮಾನೋತ್ಸವ ಕಟ್ಟಡ ನಿರ್ಮಾಣ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾದ ಎಮ್ಆರ್ಜಿ ಸಮೂಹ ಸಂಸ್ಥೆಗಳ ಅಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ ಇವರನ್ನು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಮಾಲಾಡಿ ಅಜಿತ್ ಕುಮಾರ್ ರೈಯವರು ಹಾಗೂ ಎ ಜೆ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ.ಎ ಜೆ ಶೆಟ್ಟಿ, ಮುಂಬಯಿ ಹೇರಂಭ ಇಂಡಸ್ಟ್ರೀಸ್ ಸಂಸ್ಥೆಯ ಆಡಳಿತ ನಿರ್ದೇಶಕ ಕನ್ಯಾನ ಸಧಾಶಿವ ಶೆಟ್ಟಿ, ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ, ರವಿ ಎಸ್ ಶೆಟ್ಟಿ ಸಾಯಿರಾಧ ಮುಂಬಯಿ, ಮುಂಬಯಿ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ,…