Author: admin

ಬೋಂಬೆ ಬಂಟ್ಸ್ ಅಸೋಸಿಯೇಷನ್ ಇದರ ಮಹಿಳಾ ವಿಭಾಗದ ವತಿಯಿಂದ ಜನವರಿ 18ರಂದು ಶನಿವಾರ ಮಧ್ಯಾಹ್ನ ಗಂಟೆ 2ಕ್ಕೆ ನವಿಮುಂಬಯಿ ಜೂಹಿನಗರದಲ್ಲಿರುವ ಬಂಟ್ಸ್ ಸೆಂಟರ್ ನ ಸೌಮ್ಯಲತಾ ಸದಾನಂದ ಶೆಟ್ಟಿ ಸಭಾಗೃಹದಲ್ಲಿ ‘ಹಳದಿ ಕುಂಕುಮ’ ಕಾರ್ಯಕ್ರಮ ನಡೆಯಲಿದೆ. ಅಸೋಸಿಯೇಷನ್ ಅಧ್ಯಕ್ಷ ಸಿಎ ಸುರೇಂದ್ರ ಕೆ. ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ತೇಜಾಕ್ಷಿ ಎಸ್. ಶೆಟ್ಟಿ ಅವರ ನೇತೃತ್ವದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬಂಟರ ಸಂಘದ ನವಿ ಮುಂಬಯಿ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಗೀತಾ ಎಸ್.ಶೆಟ್ಟಿ, ಸಮಾಜ ಸೇವಕಿ ನೀನಾ ಕುರ್ಕಾಲ್ ಮತ್ತು ಕನ್ನಡ ವೆಲ್ಫೇರ್ ಸೊಸೈಟಿ ಘಾಟ್ಕೋಪರ್ ಇದರ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಜಲಾ ಅಜಿತ್ ಶೆಟ್ಟಿ ಆಗಮಿಸಲಿದ್ದಾರೆ. ಮಧ್ಯಾಹ್ನ ಗಂಟೆ 2ರಿಂದ 2.30 ರವರೆಗೆ ಭಜನೆ, 2:30 ರಿಂದ ಶ್ರೀ ಮಹಾಲಕ್ಷ್ಮೀ ಬಂಟ ಮಹಿಳಾ ಯಕ್ಷಕಲಾ ಬಳಗ ಮುಂಬಯಿ ಇವರಿಂದ ಯಕ್ಷಗುರು ದೇವಲ್ಕುಂದ ಭಾಸ್ಕರ ಶೆಟ್ಟಿಯವರ ನಿರ್ದೇಶನದಲ್ಲಿ ‘ಸೀತಾಪಹರಣ’ ಎಂಬ ಯಕ್ಷಗಾನ ತಾಳಮದ್ದಳೆಯನ್ನು…

Read More

ಬಂಟ್ಸ್ ಅಸೋಸಿಯೇಶನ್ ಪುಣೆ ವತಿಯಿಂದ ಸಮಾಜ ಕಲ್ಯಾಣ ಸೇವಾ ಕಾರ್ಯದ ಪ್ರಯುಕ್ತ ಪುಣೆಯ ಸಮಸ್ತ ಬಂಟ ಸಮಾಜ ಬಾಂಧವರಿಗಾಗಿ ಮಲ್ಟಿಸ್ಪೆಷಾಲಿಟಿ ಉಚಿತ ಆರೋಗ್ಯ ತಪಾಸಣ ಶಿಬಿರವು ಜನವರಿ 19ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಗುರುನಾನಕ್ ಮೆಡಿಕಲ್ ಫೌಂಡೇಶನ್‌ನ ಗುರುನಾನಕ್ ದರ್ಬಾರ್ ಹಾಲ್, ಹಾಲಿವುಡ್ ಗುರುದ್ವಾರ ಕ್ಯಾಂಪ್ ಪುಣೆ ಇಲ್ಲಿ ನಡೆಯಲಿದೆ. ಪುಣೆ ಬಂಟ್ಸ್ ಅಸೋಸಿಯೇಶನ್ ಅಯೋಜನೆಯಲ್ಲಿ ಗುರುನಾನಕ್ ಮೆಡಿಕಲ್ ಫೌಂಡೇಶನ್ ಸಹಯೋಗದೊಂದಿಗೆ ನಡೆಯಲಿರುವ ಈ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಸ್ತ್ರೀರೋಗ ಶಾಸ್ತ್ರ, ಮಕ್ಕಳ ರೋಗ ತಪಾಸಣೆ, ಕಣ್ಣು ಹಲ್ಲು ತಪಾಸಣೆ, ಔಷಧ ಮತ್ತು ರೋಗಶಾಸ್ತ್ರದ ಬಗ್ಗೆ ಮಾಹಿತಿ, ತುರ್ತು ರೋಗಿಗಳಿಗೆ ಉಚಿತ ಈಸಿಜಿ ಮತ್ತು ಉಚಿತ ಸಕ್ಕರೆ ತಪಾಸಣೆ ನಡೆಯಲಿದೆ.ಪುಣೆ ಬಂಟ್ಸ್ ಅಸೋಸಿಯೇಶನ್ ಅಧ್ಯಕ್ಷ ರೋಹಿತ್ ಶೆಟ್ಟಿ ನಗ್ರಿಗುತ್ತು ಮತ್ತು ಕಾರ್ಯಕಾರಿ ಸಮಿತಿ, ಮಹಿಳಾ ವಿಭಾಗ, ಯುವ ವಿಭಾಗದವರ ಆಯೋಜನೆಯಲ್ಲಿ ನಡೆಯಲಿರುವ ಶಿಬಿರವು ಬಂಟ್ಸ್ ಅಸೋಸಿಯೇಶನ್ ಉಪಾಧ್ಯಕ್ಷ ಡಾ. ಸುಧಾಕ‌ರ್ ಶೆಟ್ಟಿಯವರ ಸಂಯೋಜನೆಯಲ್ಲಿ ನಡೆಯಲಿದೆ. ಆರೋಗ್ಯ ತಪಾಸಣಾ…

Read More

“ನಾನು ತುಳುನಾಡಿನವ, ಮೂಲ್ಕಿ ಬಳಿಯ ಬಪ್ಪನಾಡು ನನ್ನ ಹುಟ್ಟೂರು. ನಾನು ವರ್ಷಕ್ಕೆ ನಾಲ್ಕು ಬಾರಿ ಇಲ್ಲಿಗೆ ಭೇಟಿ ಕೊಡುತ್ತೇನೆ. ನಾನು ತುಳುವ ಎನ್ನುವುದೇ ನನಗೆ ಹೆಮ್ಮೆ. ತುಳು ಸಿನಿಮಾದಲ್ಲಿ ಅಭಿನಯಿಸಬೇಕು ಅನ್ನುವ ಆಸೆ ಹಿಂದಿನಿಂದಲೂ ಇತ್ತು. ಆದರೆ ಕಾಲ ಕೂಡಿ ಬಂದಿರಲಿಲ್ಲ. ಈಗ ರೂಪೇಶ್ ಶೆಟ್ಟಿ ನಿರ್ದೇಶನದಲ್ಲಿ ಬರುತ್ತಿರುವ ‘ಜೈ’ ಸಿನಿಮಾ ಕಥೆ ಕೇಳಿ ಇಷ್ಟಪಟ್ಟು ನಟಿಸುತ್ತಿದ್ದೇನೆ” ಎಂದು ಬಾಲಿವುಡ್ ಸ್ಟಾರ್ ನಟ ಸುನಿಲ್ ಶೆಟ್ಟಿ ಪತ್ರಿಕಾಗೋಷ್ಟಿಯಲ್ಲಿ ಹೇಳಿದರು. “ಕಾಮಿಡಿ ಸಿನಿಮಾಗಳಲ್ಲಿ ಅಭಿನಯ ಮಾಡಬೇಕು ಅನ್ನುವ ಆಸೆ ಇದೆ. ನನಗೆ ತುಳು ಸಿನಿಮಾದಲ್ಲಿ ಪೂರ್ಣ ಪ್ರಮಾಣದಲ್ಲಿ ಕಾಮಿಡಿಯನ್ ಆಗಿ ಅಭಿನಯಿಸಬೇಕು. ಆದರೆ ಈಗ ‘ಜೈ’ ಸಿನಿಮಾದಲ್ಲಿ ಅತಿಥಿ ಪಾತ್ರ ಸಿಕ್ಕಿದೆ. ಮುಂದಿನ ದಿನಗಳಲ್ಲಿ ಅವಕಾಶ ಸಿಕ್ಕರೆ ನೋಡೋಣ” ಎಂದರು.ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದಲ್ಲಿ ಜೈ ತುಳು ಸಿನಿಮಾದಲ್ಲಿ, ಬಾಲಿವುಡ್ ನಟ ಸುನೀಲ್ ಶೆಟ್ಟಿ ನಟಿಸುತ್ತಿದ್ದಾರೆ. ಸದ್ಯ ಮಂಗಳೂರಿನಾದ್ಯಂತ ಶೂಟಿಂಗ್ ನಡೆಯುತ್ತಿದ್ದು ಇನ್ನು ಕೆಲವು ದಿನಗಳ ಕಾಲ ಶೂಟಿಂಗ್…

Read More

ಮುಂಬಯಿಯ ಪ್ರತಿಭಾವಂತ ಬಾಲಕ, ಐಲೇಸಾದ ಸ್ಪೀಕರ್ ಬಾಯ್ ಎಂದೇ ಪ್ರಸಿದ್ಧಿ ಪಡೆದ ಪೋರ, ಕಲಿಕೆಯ ಜೊತೆ ಇತರ ಹವ್ಯಾಸವನ್ನು ಮೈಗೂಡಿಸಿಕೊಂಡು ಸದಾ ಹೊಸತನದಲ್ಲಿ ತನ್ನನ್ನು ತಾನು ತೊಡಗಿಸಿಕೊಳ್ಳುತ್ತಾ ಜಾಹೀರಾತು ಕ್ಷೇತ್ರದಲ್ಲಿ 11 ಭಾಷೆಗಳಲ್ಲಿ ಡಬ್ಬಿಂಗ್ ಮಾಡಿದ ಹೆಗ್ಗಳಿಕೆಯ ಜೊತೆಗೆ ಹಾಡು, ಕೋಡಿಂಗ್ ಬಗ್ಗೆ ಹೆಚ್ಚಿನ ಆಸಕ್ತಿಯ ಸುವಿಧ್ ಇವರು ಇತ್ತೀಚಿಗೆ ವಾಯ್ಸ್ ಕ್ಷೇತ್ರದಲ್ಲಿ ಇಂಡಿಯಾ ವಾಯ್ಸ್ ಫೆಸ್ಟ್ ಅವಾರ್ಡ್ ಪಡೆದುಕೊಂಡಿದ್ದಾರೆ. ಜೊತೆಗೆ ಇವರು ಹಾಡಿದ ಹಾಡುಗಳು ಯೂಟ್ಯೂಬ್ ನಲ್ಲಿವೆ. ಕನ್ನಡ, ತುಳು ನಾಟಕದಲ್ಲೂ ಕೈಯಾಡಿಸಿದ್ದಾರೆ. ಡಾ| ಭರತ್ ಕುಮಾರ್ ಪೊಲಿಪು ಅವರ ಶಾಕುಂತಲಾ, ಅಹಲ್ಯಾ,ಬಲ್ಲಾಳರ ಮಾಯಾವಿ ಸರೋವರ, ಬಂಟರ ಸಂಘದ ಸಿಟಿ ರೀಜನಲ್ ನಡೆಸಿಕೊಡುವ ನಾಟಕದಲ್ಲೂ ನಟಿಸುವುದರ ಜೊತೆಗೆ 10ನೇ ತರಗತಿಯಲ್ಲಿ 94.4 ಶೇಕಡಾ ಅಂಕದೊಂದಿಗೆ ತೇರ್ಗಡೆಯಾಗಿದ್ದಾರೆ.ಇವರ ಕಿರುಪ್ರಾಯದ ಸಾಧನೆಯನ್ನು ಗುರುತಿಸಿ ನಮನೋತ್ಸವ 2025 ಸಂಭ್ರಮದಲ್ಲಿ ‘ನಮನ ಸಿರಿ ಯುವ ಪುರಸ್ಕಾರ’ ಪ್ರಶಸ್ತಿಯೊಂದಿಗೆ ಸನ್ಮಾನಿಸಿ ಗೌರವಿಸಲ್ಪಡಲಿದ್ದಾರೆ. ಸುವಿಧ್ ರಂಗಕರ್ಮಿ ಸುರೇಂದ್ರ ಕುಮಾರ್ ಶೆಟ್ಟಿ ಮಾರ್ನಾಡ್ ಮತ್ತು ಭಾಂಡೂಪ್ ನ್ಯಾಷನಲ್ ಕಾಲೇಜಿನ ಉಪನ್ಯಾಸಕಿ…

Read More

ಸೇವಾ ಚೇತನ ಟ್ರಸ್ಟ್ (ರಿ.), ಮೂಡುಬಗೆ ಅಂಪಾರು ಇದರ ನಾಲ್ಕನೇ ವಾರ್ಷಿಕೋತ್ಸವದ ಪ್ರಯುಕ್ತ ಜನವರಿ 11ರಂದು ಅಂಪಾರು ಮೂಡುಬಗೆ ಶಾನ್ಕಟ್ಟು ಮೈದಾನದಲ್ಲಿ ನಡೆದ ‘ನಮ್ಮೂರ ಸಂಭ್ರಮ’ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಚಿಂತಕ, ವಾಗ್ಮಿ ಪ್ರಾಧ್ಯಾಪಕ ಕುಂದಾಪುರದ ಡಾ| ಬಿ. ಬಿ .ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉಪ- ಪ್ರಾಂಶುಪಾಲ ಡಾ| ಚೇತನ್ ಶೆಟ್ಟಿ ಕೋವಾಡಿ ಅವರಿಗೆ 2024ರ ನಮ್ಮೂರ ‘ಶಿಕ್ಷಣ ರತ್ನ’ ಪ್ರಶಸ್ತಿಯನ್ನು ಹಿರಿಯ ಉದ್ಯಮಿ ಶ್ರೀ ಆನಗಳ್ಳಿ ಕರುಣಾಕರ ಹೆಗ್ಡೆ ಪ್ರದಾನ ಮಾಡಿದರು. ಸೌತ್ ಫೀಲ್ಡ್ ಪೇಂಟ್ಸ್ ಆಡಳಿತ ನಿರ್ದೇಶಕ ಶ್ರೀ ಎಸ್.ಎಸ್. ಹೆಗ್ಡೆ ನಮ್ಮೂರ ಸಂಭ್ರಮವನ್ನು ಉದ್ಘಾಟಿಸಿರು. ಈ ಸಂದರ್ಭ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಗುರುರಾಜ ಶೆಟ್ಟಿ ಗಂಟಿಹೊಳೆ, ಬೆಂಗಳೂರು ಬಂಟರ ಸಂಘದ ಅಧ್ಯಕ್ಷರಾದ ಶ್ರೀ ಸಿ.ಎ. ಅಶೋಕ ಶೆಟ್ಟಿ, ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಶ್ರೀ ಪ್ರವೀಣ್ ಶೆಟ್ಟಿ, ಹುಬ್ಬಳ್ಳಿ ಧಾರವಾಡ ಬಂಟರ ಸಂಘದ ಅಧ್ಯಕ್ಷರಾದ ಶ್ರೀ ಸುಗ್ಗಿ ಸುಧಾಕರ ಶೆಟ್ಟಿ, ಆಸ್ಟ್ರೇಲಿಯಾದ ಉದ್ಯಮಿ ಆಜ್ರಿ…

Read More

ವಿದ್ಯಾಗಿರಿ: ಸಂಕಲ್ಪ ಶಕ್ತಿ, ಕ್ರಿಯಾ ಶಕ್ತಿ ಹಾಗೂ ಜ್ಞಾನ ಶಕ್ತಿ ಸಮ್ಮಿಳಿತಗೊಂಡಾಗ ಜಗತ್ತಿನಲ್ಲಿ ಯಾವುದು ಅಸಾಧ್ಯವಲ್ಲ. ನಮ್ಮಿಂದ ಅಸಾಧ್ಯ ಎಂಬ ವಿಚಾರವು ಸೃಷ್ಟಿಯಲ್ಲೇ ಇಲ್ಲ. ಸಕಾರತ್ಮಕ ಮನಸ್ಥಿತಿ ಇಂದಿನ ಯುವ ಸಮುದಾಯದ ಮಂತ್ರವಾಗಬೇಕು ಎಂದು ಗದಗದ ರಾಮಕೃಷ್ಣ ಆಶ್ರಮದ ಅಧ್ಯಕ್ಷ ಸ್ವಾಮಿ ನಿರ್ಭಯಾನಂದ ಸರಸ್ವತಿ ಹೇಳಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಟೀಮ್ ಮ್ಯಾಟ್ರಿಕ್ಸ್ ಸಹಯೋಗದಲ್ಲಿ ಶುಕ್ರವಾರ ನಡೆದ “ನಾಯಕನ ಹೆಜ್ಜೆಯಲ್ಲಿ – ಸ್ವಾಮಿ ವಿವೇಕಾನಂದರ ಭೋದನೆಗಳನ್ನು ಜೀವನದಲ್ಲಿ ಹೇಗೆ ಅಳವಡಿಸುವುದು’ ಎಂಬ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನನ್ನಿಂದ ಅಸಾಧ್ಯ ಎನ್ನುವುದು ಪ್ರಪಂಚದ ಅತ್ಯಂತ ದೊಡ್ಡ ತಪ್ಪು ಎಂದು ವಿವೇಕಾನಂದರು ಹೇಳಿದ್ದಾರೆ. ನಮ್ಮಲ್ಲಿ ಯಶಸ್ಸಿಗೆ ಬೇಕಾದ ಎಲ್ಲಾ ಸತ್ವಗಳು ಇರುತ್ತವೆ. ಅದನ್ನು ನಾವು ಸರಿಯಾದ ರೀತಿಯಲ್ಲಿ ಆಯೋಜಿಸಿದಾಗ ಯಶಸ್ಸು ಕಟ್ಟಿಟ್ಟ ಬುತ್ತಿ. ತಮ್ಮ ಎಲ್ಲಾ ನ್ಯೂನತೆಗಳನ್ನು ಮೀರಿ, ಸಾಧನೆ ಮೆರೆದ ಮೇಡಂ ಕ್ಯೂರಿ, ಥಾಮಸ್ ಅಲ್ವಾ ಎಡಿಸನ್, ನೆಪೋಲಿಯನ್, ಅಬ್ರಹಾಂ ಲಿಂಕನ್ ಮತ್ತಿತರರ ಸಾಧನೆಗಳನ್ನು ವಿವರಿಸಿದರು.…

Read More

ಜೈನ ಜಟ್ಟಿಗೇಶ್ವರ ದೇವಸ್ಥಾನ ಅರಸನಕೆರೆ ಮೆಟ್ಟಿನಹೊಳೆ ಇದರ ವಾರ್ಷಿಕ ಉತ್ಸವದ ಅಂಗವಾಗಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮ ಆಡಳಿತ ಮೋಕ್ತೆಸರರಾದ ಕರುಣಾಕರ ಶೆಟ್ಟಿ ನೆಲ್ಯಾಡಿ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕಾಲ್ತೋಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಅಣ್ಣಪ್ಪ ಶೆಟ್ಟಿ ಶುಭ ಸಂಶನೆಗೈದರು. ಬೈಂದೂರು ಬಂಟರ ಸಂಘದ ಅಧ್ಯಕ್ಷ ಶಶಿಧರ್ ಶೆಟ್ಟಿ ಸಾಲ್ಗದ್ದೆ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಿದರು. ವೇದಿಕೆಯಲ್ಲಿ ಉದ್ಯಮಿ ಬಿಎಸ್ ಸುರೇಶ್ ಶೆಟ್ಟಿ, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯ ಮಹಾಲಿಂಗ ನಾಯ್ಕ, ಸರ್ಕಾರಿ ನೌಕರ ಸಂಘದ ತಾಲೂಕು ಅಧ್ಯಕ್ಷ ಶೇಖರ ಪೂಜಾರಿ ಇವರುಗಳನ್ನು ಅಭಿನಂದಿಸಲಾಯಿತು. ಇದೇ ಸಂದರ್ಭದಲ್ಲಿ ಮೆಟ್ಟಿನಹೊಳೆ ಶಾಲೆಯಲ್ಲಿ ಉತ್ತಮ ಸೇವೆ ಸಲ್ಲಿಸಿ ಈಗ ಬಿ ಆರ್ ಪಿ ಆಗಿರುವ ಮಂಜುನಾಥ ದೇವಾಡಿಗ ಅನ್ನ ಸಂತರ್ಪಣೆ ಸೇವಾಕರ್ತರಾದ ಮೋಹಿನಿ ಶೆಟ್ಟಿ ನೆಲ್ಯಾಡಿ, ರಾಘವೇಂದ್ರ ಕುಲಾಲ್ ಸಿದ್ದು ಮನೆ, ಮುತ್ತು ನಾರಾಯಣ ದೇವಾಡಿಗ ಅಂಬಾಗಿಲು, ಅನುಷಾ ಅಭಿಷೇಕ್ ದೇವಡಿಗ ಬಿಜೂರು ಹಾಗೂ ಯೋಗಾಸನದ ಪ್ರತಿಭೆ…

Read More

ಬ್ರಹ್ಮಾವರ ವ್ಯ.ಸೇ.ಸ. ಸಂಘದ ನೂತನ ಅಧ್ಯಕ್ಷರಾಗಿ ರಾಜೇಶ್ ಶೆಟ್ಟಿ ಬಿರ್ತಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಅಭೂತಪೂರ್ವ ದಿಗ್ವಿಜಯ ಸಾಧಿಸಿದ್ದ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಎಲ್ಲಾ ಸ್ಥಾನಗಳಲ್ಲೂ ಜಯ ಗಳಿಸಿದ್ದರು. ಇದೀಗ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಬಿರ್ತಿ ರಾಜೇಶ್ ಶೆಟ್ಟಿ, ಉಪಾಧ್ಯಕ್ಷರಾಗಿ ಗಣೇಶ್ ಶೆಟ್ಟಿ ಹಂದಾಡಿ ಸರ್ವಾನುಮತದಿಂದ ಆಯ್ಕೆಯಾಗಿದ್ದು, ಪದಗ್ರಹಣ ಕಾರ್ಯಕ್ರಮವು ಜನವರಿ 16 ರಂದು ಸಂಜೆ 4ಗಂಟೆಗೆ ನಡೆಯಿತು.

Read More

ಕರ್ನಾಟಕ ಸರಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಚಿಣ್ಣರಲೋಕ ಮೋಕೆದ ಕಲಾವಿದೆರ್ ಸೇವಾಬಂಧು ವತಿಯಿಂದ ಕರಾವಳಿ ಕಲೋತ್ಸವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸರಪಾಡಿ ಯಕ್ಷಗಾನ ಅಭಿಮಾನಿ ಬಳಗದ ಸಹಕಾರದಲ್ಲಿ ಹಿರಿಯ ಯಕ್ಷಗಾನ ಕಲಾವಿದ ಸರಪಾಡಿ ಅಶೋಕ ಶೆಟ್ಟಿಯವರ ಯಕ್ಷ ಪಯಣದ 50ರ ಸಂಭ್ರಮ ಮತ್ತು ಪುಸ್ತಕ ಬಿಡುಗಡೆ ಸಮಾರಂಭ ‘ಸುವರ್ಣ ಸರಪಾಡಿ’ ಕಾರ್ಯಕ್ರಮ ಬಿ.ಸಿ.ರೋಡಿನ ಗೋಲ್ಡನ್ ಪಾರ್ಕ್ ಮೈದಾನದಲ್ಲಿ ನಡೆಯಿತು.ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ದೀಪ ಪ್ರಜ್ವಲನೆ ಮಾಡಿ ಮಾತನಾಡಿ, ‘ಇಂದು ಯಕ್ಷಗಾನದಲ್ಲಿ ಪಾತ್ರೋಚಿತವಾದ ಮಾತುಗಳನ್ನು ಅದ್ಭುತ ಅಭಿನಯದ ಮೂಲಕ ಮಾಡುವ ಕಲಾವಿದರ ಪೈಕಿ ಸರಪಾಡಿ ಅಶೋಕ ಶೆಟ್ಟರು ಅಗ್ರಪಂಕ್ತಿಗೆ ಸೇರುತ್ತಾರೆ. ಅವರು ಯಕ್ಷಗಾನವಷ್ಟೇ ಅಲ್ಲ, ರಾಜಕೀಯ, ಸಮಾಜ ಸೇವೆಯಲ್ಲೂ ಮಿಂಚಿದವರು, ಕಲಾವಿದರಿಗಾಗಿ ಸ್ಪಂದಿಸಿದವರು’ ಎಂದು ಶ್ಲಾಘಿಸಿದರು. ಅಭಿನಂದನಾ ಭಾಷಣದಲ್ಲಿ ಕರ್ನಾಟಕ ಜಾನಪದ ಯಕ್ಷಗಾನ ಮತ್ತು ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಹಾಗೂ ಯಕ್ಷಾಂಗಣ ಮಂಗಳೂರು ಕಾರ್ಯಾಧ್ಯಕ್ಷ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಮಾತನಾಡಿ,…

Read More

ನಮ್ಮ ಕಾಲೇಜಿನಲ್ಲಿ ಹಳ್ಳಿಯ ಪ್ರದೇಶಗಳಿಂದ ವಿದ್ಯಾರ್ಥಿಗಳು ಹೆಚ್ಚಾಗಿ ಬರುತ್ತಿದ್ದರು. ಆಗ ಹೆಣ್ಣು ಮಕ್ಕಳು ಉನ್ನತ ಅಧ್ಯಯನ ಮಾಡುತ್ತಿದ್ದುದೇ ಕಡಿಮೆ.‌ ನಾವು ಆಪ್ತತೆಯಿಂದಲೇ ಕಲಿಸಿದೆವು. ಅದರ ಪರಿಣಾಮ ಇಂದು ಈ ಮಕ್ಕಳಿಂದ ಇಂದಿಗೂ ನಮಗೆ ಆ ಪ್ರೀತಿ ಸಿಕ್ಕಿದೆ. ನಾವು ಗಳಿಸಿದ್ದು ವಿದ್ಯಾರ್ಥಿಗಳ ಪ್ರೀತಿ ವಿಶ್ವಾಸವನ್ನು ಮಾತ್ರ. ಒಬ್ಬ ಶಿಕ್ಷಕಿಯಾಗಿ ವಿದ್ಯಾರ್ಥಿಗಳೇ ನನ್ನ ಆಸ್ತಿ.‌ ಇಷ್ಟು ಅಲ್ಪ ಸಮಯದಲ್ಲಿ ಇವರು ಅಭಿನಂದನೆ, ಗುರುವಂದನೆಯಲ್ಲಿ ತೊಡಗಿಸಿಕೊಂಡ ರೀತಿಗೆ ಬೆರಗಾಗಿದ್ದೇನೆ. ಈ ವಿದ್ಯಾರ್ಥಿಗಳೆಲ್ಲರೂ ದೂರ ದೂರದಿಂದ ಇಂದು ಇಲ್ಲಿಗೆ ಬಂದು ತೋರಿದ ಆದರಾಭಿಮಾನಕ್ಕೆ ಮೂಕಳಾಗಿದ್ದೇನೆ ಎಂದು ಶ್ರೀ ವೆಂಕಟರಮಣ ಮಹಿಳಾ ಕಾಲೇಜಿನ ನಿವೃತ್ತ ಉಪನ್ಯಾಸಕಿ, ಪ್ರಾಂಶುಪಾಲರಾಗಿದ್ದ ಪ್ರೊ. ಮಿತ್ರಪ್ರಭಾ ಹೆಗ್ಡೆ ನುಡಿದರು. ಅವರು ಜನವರಿ 12 ಆದಿತ್ಯವಾರದಂದು ನವೋದಯ ಕನ್ನಡ ಸೇವಾ ಸಂಘದ ಸಭಾಂಗಣದಲ್ಲಿ ನಡೆದ ಎಸ್.ವಿ.ಟಿ ಹಳೆ ವಿದ್ಯಾರ್ಥಿ ಬಳಗ ಮುಂಬಯಿ ಸಮಾಗಮದಲ್ಲಿ ಗುರುವಂದನೆಯನ್ನು ಸ್ವೀಕರಿಸಿ ಮಾತನಾಡಿದರು. ಅವರು ಮಾತನ್ನು ಮುಂದುವರೆಸುತ್ತಾ, ನನ್ನ‌ ವಿದ್ಯಾರ್ಥಿನಿಯರು ಬೇರೆ ಬೇರೆ ಕ್ಷೇತ್ರದಲ್ಲಿ ಸಾಧನೆಗಳನ್ನು‌ ಮಾಡಿದ್ದಾರೆ‌ ಎನ್ನಲು ಅಭಿಮಾನವಾಗುತ್ತದೆ.…

Read More