Author: admin

ವಿಶ್ವದರ್ಶನ ಕನ್ನಡ ದಿನಪತ್ರಿಕೆ ಮತ್ತು ಪ್ರಜಾ ದರ್ಶನ ಪತ್ರಿಕೆಯ ಮಾಧ್ಯಮ ಸಹಯೋಗದಲ್ಲಿ ರಾಷ್ಟ್ರಪ್ರಶಸ್ತಿ ಹಾಗೂ ರಾಜ್ಯಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಧಾರವಾಡದ ರಂಗಾಯಣ ಸಭಾಭವನದಲ್ಲಿ ವಿಜ್ರಂಭಣೆಯಿಂದ ಜರುಗಿತು. ಕಾರ್ಯಕ್ರಮವು ದೇವರ ಸ್ತುತಿಯೊಂದಿಗೆ ದೀಪ ಬೆಳಗುವುದರೊಂದಿಗೆ ಉದ್ಘಾಟನೆ ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ವಿಧ್ಯುಕ್ತವಾಗಿ ಚಾಲನೆ ದೊರೆಯಿತು. ಗಂಡು ಮೆಟ್ಟಿದ ನಾಡು ಹುಬ್ಬಳ್ಳಿ. ಭಾವೈಕ್ಯತೆಯ ಸಂಗಮವಾಗಿ ಸಂಸ್ಕೃತಿಯ ನೆಲೆಬೀಡು ಹುಬ್ಬಳ್ಳಿಯು ಮುಖ್ಯ ತಾಣ. ಬಹುಸಂಖ್ಯಾತರು ವಾಸಿಸುವ ನಿಸರ್ಗ ರಮಣೀಯ ತಾಣ. ಕವಿಶ್ರೇಷ್ಠರು, ಮಠಮಂದಿರಗಳು, ದಾಸ, ಸಾಹಿತ್ಯ ಶ್ರೇಷ್ಠ, ಸಂಸ್ಕೃತಿಯ ನೆಲೆಬೀಡು, ಮಠಾಧೀಶರ ತವರೂರಾದ ಹುಬ್ಬಳ್ಳಿಯ ರಮಣೀಯ ತಾಣದಲ್ಲಿ ಸಾಹಿತ್ಯ ಸಿಂಚನವಾದ “ಎಸ್. ಎಸ್ ಪಾಟೀಲ್ ಅವರ ಸಾರಥ್ಯದಲ್ಲಿ ಜಗತ್ತಿನಾದ್ಯಂತ ಪ್ರಸರಣ ಹೊಂದುತ್ತಿರುವ “ವಿಶ್ವದರ್ಶನ ಕನ್ನಡ ದಿನಪತ್ರಿಕೆ” ವರುಷ ಪೂರೈಸಿದ ಸಂದರ್ಭದಲ್ಲಿ ವಿಶಿಷ್ಟ ಕಾರ್ಯಕ್ರಮದ ಅನಾವರಣ ನಡೆಯಿತು. ಇಂದಿನ ದಿನಮಾನಸದಲ್ಲಿ ಪತ್ರಿಕೆಗಳ ಶ್ರಮ ಬೆಟ್ಟದಷ್ಟಿದೆ. ಪತ್ರಿಕೆಯ ಓದುಗರ ಮತ್ತು ಸಾಹಿತ್ಯದ ಬಗ್ಗೆ ಆಸಕ್ತಿ ಇರುವಂತಹ ಅಪಾರ ಜ್ಞಾನ ಹೊಂದಿರುವ ತಂದೆ-ತಾಯಿಗಳು ಮಕ್ಕಳಿಗೆ ಶೈಕ್ಷಣಿಕ ಮತ್ತು ಸಾಹಿತ್ಯ ಪರವಾದಂತಹ…

Read More

ತುಳುನಾಡ ಪೌಂಡೇಶನ್ ಪುಣೆ ಹಾಗೂ ಕನ್ನಡ ಮಾಧ್ಯಮ ಹೈಸ್ಕೂಲಿನ ಹಿರಿಯ ವಿದ್ಯಾರ್ಥಿಗಳ ಜಂಟಿ ಆಯೋಜನೆಯಲ್ಲಿ ಡಾ. ಕಲ್ಮಾಡಿ ಶ್ಯಾಮರಾವ್ ಕನ್ನಡ ಮಾಧ್ಯಮ ಹೈಸ್ಕೂಲಿನ ತಳ ಮಹಡಿಯಲ್ಲಿ ರಕ್ತದಾನ ಶಿಬಿರ ನಡೆಯಿತು. ಸಂಘದ ಸಲಹಾ ಸಮಿತಿ ಸದಸ್ಯರಾದ ಚಂದ್ರಶೇಖರ ಶೆಟ್ಟಿ ನಿಟ್ಟೆ ಅವರು ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ರಕ್ತದಾನ ಒಂದು ಪುಣ್ಯದ ಕಾರ್ಯವಾಗಿದೆ. ರಕ್ತದಾನದ ಮೂಲಕ ಎಷ್ಟೋ ಜನರ ಜೀವವನ್ನು ಉಳಿಸಬಹುದಾಗಿದೆ. ವಿಜ್ಞಾನ ಯುಗದಲ್ಲಿ ಯಾವುದೇ ಪದಾರ್ಥಗಳನ್ನು ಕೃತಕವಾಗಿ ತಯಾರಿಸಬಹುದು. ಆದರೆ ರಕ್ತವನ್ನು ಕೃತಕವಾಗಿ ತಯಾರಿಸಲು ಸಾಧ್ಯವಿಲ್ಲ. ಆದುದರಿಂದ ರಕ್ತದಾನ ಶ್ರೇಷ್ಠವಾದ ದಾನವಾಗಿದೆ ಎಂದರು. ಸಂಘದ ಗೌರವಾಧ್ಯಕ್ಷ ತಾರಾನಾಥ ರೈ ಮೇಗಿನಗುತ್ತು ಸ್ವಾಗತಿಸಿ ಮಾತನಾಡಿ, ರಕ್ತದಾನ ಶ್ರೇಷ್ಠವಾದ ಮಹಾದಾನವಾಗಿದೆ. ಸಮಾಜದ ಜನರ ಬದುಕಿಗೆ ನೆರವಾಗುವ ಇಂತಹ ಕಾರ್ಯಗಳು ನಡೆಯುತ್ತಿರಲಿ. ಕಾರ್ಯಕ್ರಮಕ್ಕೆ ಅವಕಾಶ ಮಾಡಿಕೊಟ್ಟ ಕನ್ನಡ ಮಾಧ್ಯಮ ಹೈಸ್ಕೂಲಿನ ಹಿರಿಯ ವಿದ್ಯಾರ್ಥಿಗಳಿಗೆ ಹಾಗೂ ಅಧ್ಯಾಪಕ ವೃಂದಕ್ಕೂ ವಂದನೆಗಳು ಎಂದರು. ಕನ್ನಡ ಮಾಧ್ಯಮ ಹೈಸ್ಕೂಲಿನ ಮುಖ್ಯೋಪಾಧ್ಯಾಯರಾದ ಚಂದ್ರಕಾಂತ ಹಾರಕೂಡೆಯವರು ಮಾತನಾಡಿ, ನಮ್ಮ ಶಾಲೆಯ ಹಿರಿಯ…

Read More

ಸೇನಾಪುರ ಗ್ರಾಮದ ಗುಡ್ಡಮ್ಮಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆನುವಂಶಿಕ ಮೊಕ್ತೇಸರರನ್ನಾಗಿ ಉದ್ಯಮಿ ಅರುಣ್‌ ಕುಮಾರ್‌ ಶೆಟ್ಟಿ ಅವರನ್ನು ನೇಮಿಸಿ ರಾಜ್ಯ ಧಾರ್ಮಿಕ ಪರಿಷತ್ತು, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ಆದೇಶ ಹೊರಡಿಸಿದೆ. 52 ವರ್ಷಗಳಿಗಿಂತಲೂ ಅಧಿಕ ಕಾಲ ಅರುಣ್‌ ಶೆಟ್ಟಿ ಅವರೇ ಈ ದೇವಸ್ಥಾನದ ಆಡಳಿತ ನಡೆಸುತ್ತಿದ್ದರು. ಖಾಸಗಿ ಆಡಳಿತದಲ್ಲಿದ್ದ ದೇವಸ್ಥಾನ ದತ್ತಿ ಇಲಾಖೆಯ ಅಧೀನಕ್ಕೆ ಒಳಪಟ್ಟು, ಬಳಿಕ ಆದಾಯದಲ್ಲಿ “ಎ’ ಶ್ರೇಣಿಯಲ್ಲಿ ಗುರುತಿಸಲ್ಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಆನುವಂಶಿಕ ಮೊಕ್ತೇಸರರು ಎಂದು ತಮ್ಮ ಮನೆತನವನ್ನು ಘೋಷಿಸಬೇಕೆಂದು ಅವರು ಇಲಾಖೆಗೆ ಮನವಿ ಮಾಡಿದ್ದರು. 10 ವರ್ಷಗಳ ಬಳಿಕ ಈ ಬಗ್ಗೆ ಆದೇಶ ಹೊರಬಿದ್ದಿದ್ದು ಈ ದೇವಾಲಯಕ್ಕೆ ಆನುವಂಶಿಕ ಮೊಕ್ತೇಸರರನ್ನು ನೇಮಕ ಮಾಡುವ ವಿಚಾರದಲ್ಲಿ ಸೂಕ್ತ ನಿರ್ಣಯ ತೆಗೆದುಕೊಳ್ಳಲೆಂದೇ ಅ. 13ರಂದು 4ನೇ ರಾಜ್ಯ ಧಾರ್ಮಿಕ ಪರಿಷತ್ತಿನ ಮೊದಲ ಸಭೆ ಸೇರಿತ್ತು. ಅದರಲ್ಲಿ ವಿಸ್ತೃತ ಚರ್ಚೆ ನಡೆದು, ಅಭಿಪ್ರಾಯಗಳ ಮಂಡನೆಯಾಗಿ, ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ…

Read More

ಪ್ರಸ್ತುತ ಕಾಡುತ್ತಿರುವ ಸರ್ವವ್ಯಾಪಿ ಸಮಸ್ಯೆಯು ನಮ್ಮ ಕೆಲಸದ ವಿಧಾನ, ಆರೋಗ್ಯದ ಬಗ್ಗೆ ನಾವು ಕಾಳಜಿ ವಹಿಸುವ ರೀತಿ, ಮಕ್ಕಳಿಗೆ ವಿದ್ಯಾಭ್ಯಾಸ ಮಾಡುತ್ತಿರುವ ರೀತಿ, ನಮ್ಮ ಸ್ನೇಹಿತರ ಜೊತೆ, ಆತ್ಮೀಯರ ಜೊತೆ ನಮ್ಮ ವರ್ತನೆ – ಹೀಗೆ ಹಲವು ಹತ್ತು ವಿಷಯಗಳಲ್ಲಿ ಬದಲಾವಣೆ ತಂದಿದೆ, ಕೆಲವೇ ಕೆಲವರು ಈ ಸ್ಥಿತ್ಯಂತರ ಶಾಶ್ವತವಲ್ಲವೆಂದು ನಂಬಿ, ಈ ಅವಕಾಶವನ್ನು ಬಳಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ವ್ಯಾಪಾರ ವ್ಯವಹಾರಗಳು ಅವನತಿ ಹಂತದಲ್ಲಿವೆ. ಇ-ಕಾಮರ್ಸ್ ಉದ್ಯಮ ಅರಳುತ್ತಿದೆ. ಆದರೆ ಪ್ರವಾಸೋಧ್ಯಮ ಭಯಾನಕ ಕುಸಿತ ಕಂಡಿದೆ. ಪ್ರಕೃತಿಯನ್ನು ಅರ್ಥ ಮಾಡಿಕೊಂಡರೆ ನಾವು ಅನೇಕ ವಿಷಯಗಳನ್ನು ಕಲಿಯಬಹುದು. ಪ್ರಕೃತಿಯಲ್ಲಿ ಸರಳತೆ, ಸಂಕೀರ್ಣತೆ ಎರಡು ಮೇಳೈಸಿವೆ. ಉಳಿವಿಗಾಗಿ ನಿರಂತರ ಹೋರಾಟ ನಡೆಯುತ್ತಿದ್ದರೂ ಪ್ರಪಂಚದ ಜೀವಿಗಳಲ್ಲಿ ಹೊಂದಾಣಿಕೆಯಿದೆ. ಜೀವನ ಎಲ್ಲರಿಗೂ ಒಂದೇ ಬಗೆಯ ಅವಕಾಶಗಳನ್ನು ನೀಡುತ್ತದೆ. ಅವುಗಳನ್ನು ಬಳಸಿಕೊಳ್ಳುವುದು ಒಬ್ಬ ವ್ಯಕ್ತಿಯ ಮನೋರೂಡಿಯನ್ನು ಅವಲಂಬಿಸಿದೆ. ಸ್ಥಿರವಾದ ಮನಸ್ಥಿತಿ ಹೊಂದಿರುವ ಒಂದು ಗುಂಪಿನ ಜನರು ತಮ್ಮ ಸಾಮರ್ಥ್ಯ ಸ್ಥಿರವಾಗಿದೆ, ಅದನ್ನು ಬದಲಾಯಿಸಲು ಸಾಧ್ಯವಿಲ್ಲವೆಂದು ನಂಬುತ್ತಾರೆ. ಆದರೆ ಪರಿಸ್ಥಿತಿಗೆ ತಕ್ಕಂತೆ…

Read More

ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ಜೆ.ಸಿ.ಐ ಪುತ್ತೂರು ವತಿಯಿಂದ ಗಣರಾಜ್ಯೋತ್ಸವದ ಪ್ರಯುಕ್ತ ವ್ಯಕ್ತಿತ್ವ ವಿಕಸನ ತರಬೇತಿ ಶಿಬಿರವು ನಡೆಯಿತು. ಈ ಕಾರ್ಯಕ್ರಮವನ್ನು ಜೆ.ಸಿ.ಐ ಪುತ್ತೂರು ಪೂರ್ವಾಧ್ಯಕ್ಷರಾದ ಶಶಿರಾಜ್ ರೈರವರು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಜೆ.ಸಿ.ಐ ಪುತ್ತೂರು ಅಧ್ಯಕ್ಷರಾದ ಮೋಹನ್ ಕೆ ರವರು ವಿದ್ಯಾಮಾತಾ ಅಕಾಡೆಮಿಯು ಮಾಡುತ್ತಿರುವ ಸಮಾಜಮುಖಿ ಕಾರ್ಯಗಳಿಗೆ ತಮ್ಮ ಸಹಕಾರವಿದೆ. ವಿದ್ಯಾರ್ಥಿಗಳು ವ್ಯಕ್ತಿತ್ವ ವಿಕಸನ ತರಬೇತಿಯ ಮೂಲಕ ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಕರೆ ನೀಡಿದರು. ವಿದ್ಯಾಮಾತಾ ಅಕಾಡೆಮಿಯ ಆಡಳಿತ ನಿರ್ದೇಶಕ, ಜೆ.ಸಿ.ಐ ಪುತ್ತೂರಿನ ತರಬೇತಿ ವಿಭಾಗದ ಉಪಾಧ್ಯಕ್ಷರಾದ ಭಾಗ್ಯೇಶ್ ರೈರವರು ಅತಿಥಿಗಳನ್ನು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಜೆ.ಸಿ.ಐ ಪುತ್ತೂರು ತರಬೇತಿ ವಿಭಾಗದ ನಿರ್ದೇಶಕ ಸುಪ್ರೀತ್.ಕೆ.ಸಿರವರು ವ್ಯಕ್ತಿತ್ವ ವಿಕಸನ ಶಿಬಿರದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ, ತರಬೇತಿಯಲ್ಲಿರುವ ಅಭ್ಯರ್ಥಿಗಳಿಗೆ ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಬೇಕಾದ ಸಮಯ ಪಾಲನೆ ಇತ್ಯಾದಿಗಳ ಬಗ್ಗೆ ತರಬೇತಿಯನ್ನು ನೀಡಿದರು. ವಿದ್ಯಾಮಾತಾ ಅಕಾಡೆಮಿಯಲ್ಲಿ 2023ರ ಸಾಲಿನಲ್ಲಿ ತರಬೇತಿಯನ್ನು ಪಡೆದು ಎಚ್.ಡಿ.ಎಫ್.ಸಿ ಬ್ಯಾಂಕ್ ಅಸಿಸ್ಟೆಂಟ್ ಮ್ಯಾನೇಜರ್…

Read More

ಸಮಾಜದ ಸರ್ವ ವರ್ಗ ಗೌರವಿಸುವ ವೃತ್ತಿ ಅದು ಶಿಕ್ಷಕ ವೃತ್ತಿ. ಕಾರಣ ಒಂದು ಆರೋಗ್ಯವಂತ ಸಮಾಜ ತನ್ಮೂಲಕ ರಾಷ್ಟ್ರ ನಿರ್ಮಾಣದ ಕಾರ್ಯದಲ್ಲಿ ಬಹುದೊಡ್ಡ ಪಾತ್ರ ಉತ್ತಮ ಶಿಕ್ಷಕರದ್ದು. ಇಂದಿನ ಮಕ್ಕಳು ನಾಳಿನ ಜನಾಂಗ ಅವರನ್ನು ಯೋಗ್ಯ ನಾಗರೀಕರನ್ನಾಗಿ ರಾಷ್ಟ್ರದ ಯೋಗ್ಯ ಪ್ರಜೆಗಳನ್ನಾಗಿ ರೂಪಿಸುವ ಹೊಣೆಗಾರಿಕೆ ಶಿಕ್ಷಕರಿಗಿದೆ. ಹೀಗೆ ತನ್ನ ವೃತ್ತಿ ಗೌರವ ಹಾಗೂ ಸಾಮಾಜಿಕ ಹೊಣೆಗಳನ್ನು ಅರ್ಥ ಮಾಡಿಕೊಂಡು ತನ್ನ ಜೀವನದ ಮೂರೂವರೆ ದಶಕಗಳ ಕಾಲ ಶಿಕ್ಷಣ ಕ್ಷೇತ್ರಕ್ಕೆ ಸಾರ್ಥಕ ಸೇವೆ ಸಲ್ಲಿಸಿ, ನಿವೃತ್ತರಾದ ಮೇಲೂ ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಓರ್ವ ಸಂಪನ್ಮೂಲ ವ್ಯಕ್ತಿಯಾಗಿ ಗುರುತಿಸಿಕೊಂಡು ತಾಲೂಕು ಮಟ್ಟದ, ಜಿಲ್ಲಾ ಮಟ್ಟದ ಹಾಗೂ ರಾಜ್ಯಸ್ತರದ ಪ್ರಶಸ್ತಿಗಳಿಗೆ ಭಾಜನರಾದ ಅಪರೂಪದ ನಿವೃತ್ತ ಶಿಕ್ಷಕ ಕೆ.ರವೀಂದ್ರ ರೈ. ಸಾಹಿತಿಯಾಗಿ, ಸಂಘಟಕರಾಗಿ, ಕಾರ್ಯಕ್ರಮ ಸಂಯೋಜಕರಾಗಿ, ನಿರ್ವಾಹಕರಾಗಿ, ಕೃಷಿಕರಾಗಿ ಬಹುಮುಖಿ ಸಾಧನೆಯ ಮುಖಾಂತರ ಜನರ ಪ್ರೀತಿ ವಿಶ್ವಾಸವನ್ನು ಗಳಿಸಿದ ಹರೇಕಳದ ರಾಮಕೃಷ್ಣ ಫ್ರೌಢ ಶಾಲೆಯ ಸರ್ವಾಂಗೀಣ ಅಭಿವೃದ್ಧಿಯ ಹರಿಕಾರ ಕೆ.ರವೀಂದ್ರ ರೈ ಅವರು ನಾಲ್ಕು ಗೋಡೆಗಳ ಮಧ್ಯೆ…

Read More

ಶಿರ್ವ ಪದವು ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಶಿರ್ವ ಗ್ರಾ.ಪಂ. ಅಧ್ಯಕ್ಷರಾಗಿ ಆಯ್ಕೆಯಾದ ರತನ್ ಕುಮಾರ್ ಶೆಟ್ಟಿಯವರ ಅಭಿನಂದನಾ ಸಮಾರಂಭವು ಮಾಜಿ ಸಚಿವ ವಿನಯ ಕುಮಾರ್ ಸೊರಕೆಯವರ ಅಧ್ಯಕ್ಷತೆಯಲ್ಲಿ ಶಿರ್ವ ಪದವು ಸಮಾಜ ಮಂದಿರದಲ್ಲಿ ನಡೆಯಿತು. ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಗ್ರಾ.ಪಂ. ಅಧ್ಯಕ್ಷ ರತನ್ ಕುಮಾರ್ ಶೆಟ್ಟಿ ಮತ್ತು ಸುನಾಲಿನಿ ಶೆಟ್ಟಿ ದಂಪತಿಯನ್ನು ಸಮ್ಮಾನಿಸಿ ಮಾತನಾಡಿ ಯುವ ಕಾರ್ಯಕರ್ತ ರತನ್ ಶೆಟ್ಟಿಯವರ ಅಧಿಕಾರವಧಿಯಲ್ಲಿ ಗ್ರಾಮವು ಸರ್ವತೋಮುಖ ಅಭಿವೃದ್ಧಿಯನ್ನು ಹೊಂದಲಿ. ಗ್ರಾಮದ ಜನತೆಗೆ ಉತ್ತಮ ಸೇವೆ ದೊರೆಯುವಂತಾಗಲಿ ಎಂದು ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಶಿರ್ವ ಗ್ರಾ.ಪಂ. ಉಪಾಧ್ಯಕ್ಷೆ ಗ್ರೇಸಿ ಕಾರ್ಡೋಜಾ, ಗ್ರಾ.ಪಂ. ಸದಸ್ಯ ನವೀನ್ ಕುಮಾರ್, ನಂದಳಿಕೆ ಚಾವಡಿ ಮನೆಯ ಸುಹಾಸ್ ಹೆಗ್ಡೆ, ಶಿರ್ವ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಸಚ್ಚಿದಾನಂದ ಹೆಗ್ಡೆ, ಉದ್ಯಮಿಗಳಾದ ಸುಧೀರ್ ಶೆಟ್ಟಿ ಅಟ್ಟಿಂಜ, ರಾಜೇಶ್ ಶೆಟ್ಟಿ ಶಬರಿ, ರಾಜೇಶ್ ಪೂಜಾರಿ ಭಾಗವಹಿಸಿದ್ದರು. ಶೇಖರ ಶೆಟ್ಟಿ ನಡಾಯಿ, ನವೀನ್ ಶೆಟ್ಟಿ ಗಂಗೆಜಾರು, ರಮೇಶ್ ಶೆಟ್ಟಿ ಕಡಂಬು,…

Read More

ಬೆಳಗಾವಿ ಬಂಟರ ಸಂಘದ ವಾರ್ಷಿಕ ಕ್ರೀಡಾಕೂಟವು ಸಿ.ಪಿ.ಈಡ್ ಕ್ರೀಡಾಂಗಣದಲ್ಲಿ ಅದ್ಧೂರಿಯಾಗಿ ಸಂಪನ್ನಗೊಂಡಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಬೆಳಗಾವಿ ಉತ್ತರ ವಿಭಾಗದ ಶಾಸಕರಾದ ಆಸಿಪ್ ಶೇಟ್ ಕ್ರೀಡೋತ್ಸವವನ್ನು ಉದ್ಘಾಟಿಸಿ, ಬಂಟ ಸಮಾಜದ ಕಾರ್ಯವೈಖರಿ, ನಿರಂತರ ಶ್ರಮ, ಅವಿರತವಾದ ಹೋರಾಟದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕ್ರೀಡೋತ್ಸವದ ವಿವಿಧ ವಿಭಾಗಗಳಲ್ಲಿ ಕ್ರಿಕೆಟ್, ವಾಲಿಬಾಲ್, ತ್ರೋ ಬಾಲ್, ಹಗ್ಗ ಜಗ್ಗಾಟ, ರನ್ನಿಂಗ್ ರೇಸ್ ಇನ್ನಿತರ ಸ್ಪರ್ಧೆಗಳು ಇದ್ದವು. ಪುರುಷರು, ಮಹಿಳೆಯರು, ಮಕ್ಕಳು ಅತೀ ಉತ್ಸಾಹದಿಂದ ಭಾಗವಹಿಸಿದರು. ಕ್ರೀಡೋತ್ಸವದಲ್ಲಿ ಬಂಟರ ಸಂಘದ ಸ್ಥಾಪಕ ಅಧ್ಯಕ್ಷರಾದ ವಿಠ್ಠಲ ಎಸ್ ಹೆಗಡೆ, ಅಧ್ಯಕ್ಷರಾದ ವಿಜಯ್ ಕುಮಾರ್ ಶೆಟ್ಟಿ, ಉಪಾಧ್ಯಕ್ಷರಾದ ಪ್ರಸನ್ನ ಶೆಟ್ಟಿ, ಕಾರ್ಯದರ್ಶಿ ಚೇತನ್ ಶೆಟ್ಟಿ, ಮಾಜಿ ಅಧ್ಯಕ್ಷರಾದ ಆನಂದ್ ಎನ್ ಶೆಟ್ಟಿ, ಚಂದ್ರಶೇಖರ್ ಶೆಟ್ಟಿ, ಕ್ರೀಡಾ ಸಮಿತಿಯ ಉಳ್ತೂರು ಸಂತೋಷ್ ಶೆಟ್ಟಿ, ಅಭಿಷೇಕ್ ಶೆಟ್ಟಿ, ಕೀರ್ತಿಪ್ರಸಾದ್ ಶೆಟ್ಟಿ, ಸಂಘಟನಾ ಕಾರ್ಯದರ್ಶಿಯಾದ ಪ್ರಭಾಕರ್ ಶೆಟ್ಟಿ, ಹಿರಿಯ ಸದಸ್ಯರಾದ ಉದಯ್ ಕುಮಾರ್ ಶೆಟ್ಟಿ, ಪ್ರಕಾಶ್ ಶೆಟ್ಟಿ, ಬಾಲಕೃಷ್ಣ ಶೆಟ್ಟಿ, ಸುರೇಶ್ ಶೆಟ್ಟಿ ಹಾಗೂ…

Read More

ವಿದ್ಯಾಗಿರಿ: ಸಜ್ಜಾದ ‘ಸಿರಿ ಸೊಬಗಿನ ಸಾಂಸ್ಕೃತಿಕ ನಗರಿ’ ವಿದ್ಯಾಗಿರಿ (ಮೂಡುಬಿದಿರೆ): ಸಾಂಸ್ಕೃತಿಕ ಸಿರಿ-ಸೊಬಗಿನ, ವೈವಿಧ್ಯತೆಯಲ್ಲಿ ಏಕತೆಯ ಸಂದೇಶ ಸಾರುವ, ಕಣ್ಮನಗಳಿಗೆ ರಸದೌತಣ ನೀಡುವ, ಪ್ರತಿ ವರ್ಷವೂ ವಿಭಿನ್ನ ಹಾಗೂ ಅನನ್ಯವಾದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ, 29ನೇ ವರ್ಷದ ‘ಆಳ್ವಾಸ್ ವಿರಾಸತ್ 2023’ಗೆ ವಿದ್ಯಾಗಿರಿ ಸಜ್ಜಾಗಿದೆ. ಅಬಾಲವೃದ್ಧರಾಗಿ ಸರ್ವರ ಪಂಚೇಂದ್ರಿಯಗಳಿಗೆ ರಸದೌತಣ ನೀಡುವ, ಮನ ತಣಿಸುವ ವಿರಾಸತ್, ಈ ಬಾರಿ ಡಿ.14ರಿಂದ 17ರ ವರೆಗೆ ಮೂಡುಬಿದಿರೆಯ ಪುತ್ತಿಗೆ ಗ್ರಾಮದ ವಿವೇಕಾನಂದ ನಗರದ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ನಡೆಯಲಿವೆ. ಸಮೀಪದ ಕೃಷಿಸಿರಿ ವೇದಿಕೆ ಸೇರಿದಂತೆ ಆವರಣದಲ್ಲಿ ‘ಸಪ್ತ ಮೇಳ’ಗಳ ಸಂಗಮವು ಜನರಿಗೆ ಖುಷಿ ನೀಡಿದರೆ, ದೀಪಾಲಂಕಾರ, ಕಲಾಕೃತಿಗಳು, ಪುಷ್ಪ- ಫಲಗಳಿಂದ ನಂದನವನವೇ ಸೃಷ್ಟಿಯಾಗಿದೆ.‘ನೋಡಲೆರಡು ಕಣ್ಣು ಸಾಲದಮ್ಮಾ…’ ಎಂದು ವಿದ್ಯಾಗಿರಿಯು ಕೈ ಬೀಸಿ ಕರೆಯುತ್ತಿದೆ. ವಿದ್ಯಾಗಿರಿ ‘ಸಿರಿ ಸೊಬಗಿನ ಸಾಂಸ್ಕೃತಿಕ ನಗರಿ’ಯೇ ಎಂಬ ಅಚ್ಚರಿ ಮೂಡುವಂತಿದೆ. ರಥಾರತಿ:ಈ ಬಾರಿಯ ವಿರಾಸತ್‍ನ ವಿಶೇಷ ‘ರಥಾರತಿ’. ಮುಖ್ಯ ವೇದಿಕೆಯ…

Read More

ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ.) ಮಂಗಳೂರು ಇದರ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯವರ ಸಮರ್ಥ ಸಾರಥ್ಯದಲ್ಲಿ ‘ವಿಶ್ವ ಬಂಟರ ಸಮ್ಮೇಳನ -2023’ ರ ಪ್ರಯುಕ್ತ ಅ.28 ರಂದು ಉಡುಪಿ ಅಜ್ಜರಕಾಡು ಮೈದಾನದಲ್ಲಿ ಶ್ರೀಮತಿ ನಳಿನ ಭೋಜ ಶೆಟ್ಟಿ ವೇದಿಕೆಯಲ್ಲಿ ನಡೆಯಲಿರುವ ‘ವಿಶ್ವ ಬಂಟರ ಕ್ರೀಡಾ ಕೂಟ ‘ ಹಾಗೂ ಅ.29 ರಂದು ಉಡುಪಿಯ ಶ್ರೀಮತಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದ ವಠಾರದಲ್ಲಿ ಶ್ರೀ ಕನ್ಯಾನ ಸದಾಶಿವ ಶೆಟ್ಟಿ ವೇದಿಕೆಯಲ್ಲಿ ನಡೆಯಲಿರುವ ವಿಶ್ವ ಬಂಟರ ಸಾಂಸ್ಕೃತಿಕ ವೈಭವ’ ಕಾರ್ಯಕ್ರಮದಲ್ಲಿ ಸಾಧಕರನ್ನು ಸನ್ಮಾನಿಸಲಾಗುವುದು. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮತ್ತು ಪದಾಧಿಕಾರಿಗಳು ಉಪಸ್ಥಿತಿಯಲ್ಲಿ ಒಕ್ಕೂಟದಿಂದ ಅ.28 ರಂದು ಶನಿವಾರ ಮತ್ತು ಅ.29 ರಂದು ರವಿವಾರ ಉಡುಪಿಯಲ್ಲಿ ವಿಶ್ವ ಬಂಟರ ಕ್ರೀಡಾ ಕೂಟ ಹಾಗೂ ವಿಶ್ವ ಬಂಟರ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ಜರಗಲಿದ್ದು, ಈ ಅಭೂತಪೂರ್ವ ಕಾರ್ಯಕ್ರಮದಲ್ಲಿ ಸ್ವಾಮೀಜಿಗಳು, ಅಂತಾರಾಷ್ಟ್ರೀಯ ಮಟ್ಟದ ಉದ್ಯಮಿಗಳು, ರಾಜಕಾರಣಿಗಳು, ಸಿನಿಮಾ ತಾರೆಯರು, ಅಂತಾರಾಷ್ಟ್ರೀಯ…

Read More