Author: admin
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಿಂದ ಉದ್ಯೋಗವನ್ನರಸಿಕೊಂಡು ಬಂದ ತುಳು ಕನ್ನಡಿಗರು ಸಮಾಧಾನಕರ ಉದ್ಯೋಗ ಗಿಟ್ಟಿಸಿಕೊಂಡ ಮೇಲೆ ಅಲ್ಲಿಗೇ ಸುಮ್ಮನಾಗುವುದಿಲ್ಲ. ಸದಾ ಉತ್ತಮ ಅವಕಾಶಗಳಿಗಾಗಿ ಹುಡುಕಾಟ ನಡೆಸುತ್ತಲೇ ಇರುತ್ತಾರೆ. ಈ ಮಾತು ಇತರ ಕ್ಷೇತ್ರಗಳಿಗೂ ಅನ್ವಯಿಸುತ್ತದೆ. ವ್ಯಾಪಾರ ವ್ಯವಹಾರಗಳಿರಲಿ, ಮನರಂಜನೆಯ ಕ್ಷೇತ್ರಗಳಿರಲಿ ಅಥವಾ ವೈದ್ಯಕೀಯ, ತಾಂತ್ರಿಕ, ಕೈಗಾರಿಕಾ ವಿಭಾಗಗಳೇ ಇರಲಿ ತಾವು ಸಾರ್ವಜನಿಕವಾಗಿ ಗುರುತಿಸಿಕೊಳ್ಳುವುದರ ಜೊತೆಗೆ ಆರ್ಥಿಕ ಭದ್ರತೆ ಹೊಂದುವವರೆಗೂ ಸಾಧನೆ ಮುಂದುವರಿಯುತ್ತದೆ. ಇನ್ನು ಕೆಲವು ಪದವೀಧರ ಯುವಕರು ತಮ್ಮ ಶಿಕ್ಷಣ ಅರ್ಹತೆಗಳಿಗೆ ಸರಿ ಹೊಂದುವ ಸಾಕಷ್ಟು ಆದಾಯ ವರಮಾನ ತರುವ ಉದ್ಯೋಗ, ಸಿಕ್ಕಿದ ಮೇಲೆ ತಮಗೆ ಬಾಲ್ಯದಿಂದಲೂ ಇದ್ದ ಆಸಕ್ತಿ ಹವ್ಯಾಸಗಳಿಗೆ ಸೂಕ್ತ ವೇದಿಕೆ ಸಿಕ್ಕುವ ನಿರೀಕ್ಷೆ ಹೊಂದಿರುತ್ತಾರೆ. ಸಿಕ್ಕಿತೆಂದರೆ ಅದನ್ನು ಇನ್ನಷ್ಟು ಬೆಳೆಸಿಕೊಂಡು ನಗರದ ಏಕತಾನತೆಯ ಬದುಕು ಬೇಸರ ತರದಂತೆ ತಮ್ಮ ಹವ್ಯಾಸಗಳಲ್ಲಿ ಆನಂದ ಕಾಣುತ್ತಾರೆ.. ಇನ್ನು ಕೆಲವರು ತಮ್ಮ ವಿದ್ಯಾಭ್ಯಾಸ ಮುಂದುವರಿಸಿಕೊಂಡು ಸ್ನಾತಕೋತ್ತರ ಪಿ ಎಚ್ ಡಿ ಅಧ್ಯಯನ ಸಂಶೋಧನೆ ನಡೆಸಿ ಯಶಸ್ಸು ಸಂಪಾದಿಸಿಕೊಂಡು ತಮ್ಮ ವ್ಯಕ್ತಿತ್ವಕ್ಕೆ ವಿಶೇಷ…
ಅಖಿಲ ಭಾರತ ತುಳು ಒಕ್ಕೂಟದ ಸಭೆಯು ಒಕ್ಕೂಟದ ಅಧ್ಯಕ್ಷರಾದ ಎ ಸಿ ಭಂಡಾರಿ ಅವರ ಅಧ್ಯಕ್ಷತೆಯಲ್ಲಿ ದೇರಳಕಟ್ಟೆ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇತ್ತೀಚಿಗೆ ನಡೆಯಿತು. ಶಾಲಾ ಮಕ್ಕಳ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಸಭೆಯಲ್ಲಿ ವಿದ್ಯಾರತ್ನ ಎಜುಕೇಶನ್ ಟ್ರಸ್ಟ್ ಅಧ್ಯಕ್ಷರಾದ ರವೀಂದ್ರ ಶೆಟ್ಟಿಯವರು ಸ್ವಾಗತಿಸಿದರು. ಒಕ್ಕೂಟದ ಕಾರ್ಯದರ್ಶಿಗಳಾದ ಕರುಣಾಕರ್ ಶೆಟ್ಟಿಯವರು ಉಳ್ಳಾಲ ತಾಲೂಕು ಸಮಿತಿಯ ರಚನೆ ಬಗ್ಗೆ ಮಾಹಿತಿ ನೀಡಿ, ಪ್ರಥಮವಾಗಿ ಓರ್ವ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿ ಅವರನ್ನು ಆಯ್ಕೆ ಮಾಡುವಂತೆ ಸೂಚಿಸಿದರು. ಅದರಂತೆ ಕೆ. ಟಿ ಸುವರ್ಣರ ಸೂಚನೆಯಂತೆ ನಿವೃತ್ತ ಮುಖ್ಯ ಉಪಾಧ್ಯಾಯರಾದ ಕೆ. ರವೀಂದ್ರ ರೈ ಅವರನ್ನು ಅಧ್ಯಕ್ಷರನ್ನಾಗಿ, ಆನಂದ ಕೆ ಅಸೈಗೋಳಿ ಅವರನ್ನು ಪ್ರಧಾನ ಕಾರ್ಯದರ್ಶಿಯನ್ನಾಗಿ ಸಮಿತಿಯು ಸರ್ವಾನುಮತದಿಂದ ಆಯ್ಕೆ ಮಾಡಿತು. ನಂತರ ಪದಾಧಿಕಾರಿಗಳ ಆಯ್ಕೆ ನಡೆಯಿತು. ಈ ಸಂದರ್ಭದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಕನ್ನಡ ಪ್ರಾಧ್ಯಾಪಕರಾದ ಪ್ರೊ. ಶಿವರಾಮ ಶೆಟ್ಟಿ ಹಾಗೂ ವಿಜೇತ್ ಮಂಜನಾಡಿ ಸಭೆಯನ್ನು ಉದ್ದೇಶಿಸಿ ಮಾತನಾಡಿ ಸಲಹೆ ಸೂಚನೆಗಳನ್ನು ನೀಡಿದರು. ಸಭಾಧ್ಯಕ್ಷರಾದ ಎ.ಸಿ…
ಸಾಗರ ಬಂಟರ ಸಂಘದ ಕಟ್ಟಡ ನಿರ್ಮಾಣಕ್ಕಾಗಿ ಉದ್ಯಮಿ, ದಾನಿ ಹಾಗೂ ಸಮಾಜ ಸೇವಕ ಎಂ.ಆರ್. ಜಿ ಗ್ರೂಪ್ ವ್ಯವಸ್ಥಾಪಕ ನಿರ್ದೇಶಕ ಶ್ರೀಯುತ “ಬಂಜಾರ ಗೋಲ್ಡ್ ಪಿಂಚ್ ಕೊರಂಗ್ರಪಾಡಿ ಪ್ರಕಾಶ್ ಕೆ ಶೆಟ್ಟಿ” ಅವರು 25 ಲಕ್ಷ ರೂಪಾಯಿ ದೇಣಿಗೆ ನೀಡಿದರು. ಮಾರ್ಗದರ್ಶಿಗಳಾದ ಶ್ರೀಯುತ ಗುರ್ಮೆ ಸುರೇಶ್ ಶೆಟ್ಟಿ ಮತ್ತು ಬೆಂಗಳೂರು ಬಂಟರ ಸಂಘದ ಮಾಜಿ ಅಧ್ಯಕ್ಷ ಹಾಗೂ ಸಮುದಾಯದ ಒಳಿತಿಗಾಗಿ ಶ್ರಮಿಸುತ್ತಿರುವ ಶ್ರೀಯುತ ಉಪೇಂದ್ರ ಶೆಟ್ಟಿ ಮತ್ತು ಭಾರತಿ ಶೆಟ್ಟಿ ಅವರ ಮುಖಾಂತರ ಶ್ರೀಯುತ ಪ್ರಕಾಶ್ ಶೆಟ್ಟಿ ಅವರನ್ನು ಅವರ ಕಚೇರಿಯಲ್ಲಿ ಸಾಗರ ಬಂಟರ ಸಂಘದ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಸಂಘದ ಎಲ್ಲಾ ಪದಾಧಿಕಾರಿಗಳೊಂದಿಗೆ ಭೇಟಿ ಮಾಡಿದರು. ಸಂಘದ ಎಲ್ಲಾ ಪದಾಧಿಕಾರಿಗಳೊಂದಿಗೆ ಆತ್ಮೀಯವಾಗಿ ಮಾತನಾಡಿದ ಪ್ರಕಾಶ್ ಶೆಟ್ಟಿ ಅವರಿಗೆ ಕಟ್ಟಡದ ಬಗ್ಗೆ ಮಾಹಿತಿಯನ್ನು ಅಧ್ಯಕ್ಷರು ನೀಡಿದರು. ನಂತರ ಪ್ರಕಾಶ್ ಶೆಟ್ಟಿ ಅವರು ಮಾತನಾಡುತ್ತಾ ನಮ್ಮ ದೇಶ ವಿದೇಶದಲ್ಲಿರುವ ಸಮಸ್ತ ಬಂಟರ ಕುಂದು ಕೊರತೆಗಳ ಬಗ್ಗೆ ಚರ್ಚಿಸುತ್ತಾ ಹಾಗೂ ಬಂಟರ ಸಮುದಾಯದ…
“ಇರೋದು ಒಂದೇ ಬದುಕು, ನಮ್ ಇಷ್ಟದಂಗೆ ನಾವ್ ಬಾಳ್ಬೇಕು, ಎಲ್ಲದ್ರಲ್ಲೂ ಎಲ್ಲದಕ್ಕೂ ಹೊಂದಾಣಿಕೆ ಮಾಡ್ಕೊಂಡ್ ಬಾಳಕಾಗಲ್ಲ. ಎಷ್ಟು ದಿನ ಇರ್ತಿವೋ ಗೊತ್ತಿಲ್ಲ! ಎಲ್ಲದಕ್ಕೂ ಅನುಸರಿಸಿಕೊಂಡು ಹೋಗು ಅನ್ನೋ ಮಾತನ್ನೇ ಓಬಿರಾಯನ ಕಾಲದಿಂದಲೂ ಕೇಳಿ-ಕೇಳಿ ಸಾಕಾಗಿದೆ. ನನಗೆ ಸ್ವತಂತ್ರ ಬೇಕು, ನನ್ನ ಬದುಕು ನನ್ನ ನಿರ್ಧಾರ ಅಷ್ಟೇ!’. ಇತ್ತೀಚಿನ ದಿನಗಳಲ್ಲಿ ತನ್ನದೇ ಬದುಕು ಕಟ್ಟಿಕೊಳ್ಳಲು ಹಂಬಲಿಸುವ ಮಕ್ಕಳು ಹೇಳುವ ಮಾತುಗಳಿವು. ಸ್ವ-ಇಚ್ಛೆಯ ಬದುಕಿನ ಹಂಬಲ ಅವರದು. ಆದರೆ ಹಿರಿಯರು ಹೇಳುವ ಕಿವಿಮಾತು, “ನೋಡಿ ಮಕ್ಕಳೇ ನೀವು ಬೆಳೆಯುತ್ತಿದ್ದೀರಿ, ಸ್ವಲ್ಪ ತಗ್ಗಿ ಬಗ್ಗಿ ನಡೆಯಬೇಕು, ಯಾರನ್ನೂ ಎದುರು ಹಾಕಿಕೊಳ್ಳಬಾರದು. ನೀವಂತೂ ನಿಮ್ಮದೇ ರೂಲ್ಸ್ ರೆಗ್ಯುಲೇಷನ್ಸ್ ಅಂತ ಫಾಲೋ ಮಾಡಿ, ಸುಮ್ನೆ ಇಲ್ಲ ಸಲ್ಲದ್ದರ ಬಗ್ಗೆ ದಾವಂತ ಪಡುತ್ತೀರಿ’ ಎನ್ನುವುದು ಸರ್ವೇಸಾಮಾನ್ಯ ವಿಷಯವಾಗಿ ಹೋಗಿದೆ. ಅದರಲ್ಲೂ ಮದುವೆಯಾಗಿ ಹೋಗುವ ಹೆಣ್ಣು ಮಕ್ಕಳ ಪಾಲಿಗೆ ಹೊಂದಾಣಿಕೆಯ ಮಹಾಮಂತ್ರವನ್ನು ಪಠಿಸಿಯೇ ಕಳಿಸುವುದು. ನಮಗೆಲ್ಲಾ ಗೊತ್ತಿರುವಂತೆ ಮನುಷ್ಯ ಸಂಘ ಜೀವಿ. ಎಲ್ಲರೊಂದಿಗೆ ಬೆರೆತು ಬಾಳಬೇಕಾದುದು ಬದುಕಿನ ನಿಯಮ. ಆದರೆ ಹೊಂದಿಕೊಂಡು…
ತಾಯಿ ವಾತ್ಸಲ್ಯದ , ತ್ಯಾಗದ ವಿಶಿಷ್ಟ ಸಾಹಿತ್ಯವಿರುವ ಹಾಡು ”ಮತ್ತೇನಿಲ್ಲಾ” ಇದೆ ತಿಂಗಳ 17 ರಂದು ಸಂಜೆ 7.30 ಕ್ಕೆ ಐಲೇಸಾ ಡಿಜಿಟಲ್ ವೇದಿಕೆಯಲ್ಲಿ ಬಿಡುಗಡೆಯಾಗಲಿದೆ . ಮುಂಬೈ ರಂಗ ಮತ್ತು ಧ್ವನಿ ಕಲಾವಿದ ಸುರೇಂದ್ರ ಮಾರ್ನಾಡ್ ಅವರ ಸಾಹಿತ್ಯದ ಈ ಹಾಡನ್ನು ಪ್ರಸಿದ್ಧ ಗಾಯಕ ರಾಮಚಂದ್ರ ಹಡಪದ ಸಂಗೀತ ಸಂಯೋಜಿಸಿ ತಾನೇ ಹಾಡಿದ್ದಾರೆ . ಬೆಂಗಳೂರಿನ ಉದ್ಯಮಿ ಕಾರ್ಕಳ ರೆಂಜಾಳದ ವಲೆರಿಯನ್ ರಾಡ್ರಿಗಸ್ ಹಾಡನ್ನು ಪ್ರಾಯೋಜಿಸಿದ್ದು ಐಲೇಸಾ ದಿ ವಾಯ್ಸ್ ಆಫ್ ಓಷನ್ (ರಿ) ಸಂಸ್ಥೆಯ ಮೂಲಕ ಸಂಗೀತ ಪ್ರಿಯರಿಗೆ ಸಮರ್ಪಿಸಿದ್ದಾರೆ. ಸಚ್ಚು ಮಾರ್ನಾಡ್ ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದು , ಛಾಯಾಗ್ರಹಣದಲ್ಲಿ ಸಂದೀಪ ಮೂಡಬಿದ್ರೆ ಅವರು ತಮ್ಮ ಕೈ ಚಳಕ ತೋರಿಸಿದ್ದಾರೆ ಗೋಪಾಲ್ ಪಟ್ಟೆ ಜಯಂತ್ ಐತಾಳ್ , ವಿನಾಯಕ್ ಮಲ್ಯ ಸಂಕಲನದಲ್ಲಿ ಹಾಡು ಅದ್ಭುತವಾಗಿ ಮೂಡಿ ಬಂದಿದೆ. ಸಾಂಸಾರಿಕ ಜೀವನದಲ್ಲಿ ಹೆಣ್ತನದ ,ತಾಯ್ತನದ ತ್ಯಾಗವನ್ನು ವಿಸ್ತರಿಸುತ್ತಾ ಹೋಗುವ ಈ ಹಾಡು ತಾಯಿ ತನಗಾಗಿ ಏನನ್ನೂ ಬಯಸದೆ ಎಲ್ಲವನ್ನೂ ಮಕ್ಕಳ…
ಬಂಟರ ಯಾನೆ ನಾಡವರ ಮಾತೃ ಸಂಘ ಮತ್ತು ಸಿದ್ದಿ ವಿನಾಯಕ ಪ್ರತಿಷ್ಠಾನದ ಆಶ್ರಯದಲ್ಲಿ 17 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವವು ಸೆಪ್ಟೆಂಬರ್ 19 ರಿಂದ 21 ರವರೆಗೆ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಗಳ ಸರ್ವ ಬಂಟ ಸಮಾಜದ ಸಹಕಾರದಲ್ಲಿ ಬಂಟ್ಸ್ ಹಾಸ್ಟೇಲ್ ನಲ್ಲಿ ಶ್ರದ್ದಾ ಭಕ್ತಿಯಿಂದ ನಡೆಯಲಿದೆ. ಗಣೇಶೋತ್ಸವ ಪ್ರಯುಕ್ತ ಪ್ರತಿಭಾನ್ವೇಷಣೆಯಲ್ಲಿ ವೈವಿಧ್ಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಇದರ ಪೂರ್ವಭಾವಿ ಸಭೆ ಬಂಟ್ಸ್ ಹಾಸ್ಟೇಲ್ ನ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ಜರಗಿತು. ಸಭೆಯ ಅಧ್ಯಕ್ಷತೆಯನ್ನು ಬಂಟರ ಯಾನೆ ನಾಡವರ ಮಾತೃ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಎಂ. ಶೆಟ್ಟಿ ವಹಿಸಿದ್ದರು. ಕೊರೋನದಿಂದ ಕಳೆದ ಮೂರು ವರ್ಷಗಳಿಂದ ಸಾರ್ವಜನಿಕ ಗಣೇಶೋತ್ಸವವನ್ನು ಆಚರಿಸಲು ಸಾಧ್ಯವಾಗಿಲ್ಲ. ಈ ವರ್ಷ ನಾವು 17 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವವನ್ನು ಎಲ್ಲರನ್ನೂ ಸೇರಿಸಿ ಆಚರಿಸುತ್ತೀದ್ದೇವೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದರು. ಸಮುದಾಯದ ಎಲ್ಲರನ್ನೂ ಒಂದೇ ಸೂರಿನಡಿಯಲ್ಲಿ ಸೇರಿಸಲು ಕೆಲವು ಕಾರ್ಯಕ್ರಮಗಳನ್ನು ಆಯೋಜಿಸಿದ್ದೇವೆ. ಇದಕ್ಕೆ ಸಮಿತಿ, ಉಪ ಸಮಿತಿಗಳನ್ನು ರಚಿಸಿದ್ದೇವೆ.…
ಈ ಜಗತ್ತಿನ ಭರವಸೆಯು ಯುವಜನರ ಮೇಲಿದೆ. ದೇಶವೊಂದರ ಯುವಶಕ್ತಿ ಸರಿಯಾದ ಮಾರ್ಗದಲ್ಲಿ ಸಾಗಿದರೆ ಮಾತ್ರ ಆ ದೇಶ ಪ್ರಗತಿಯತ್ತ ಸಾಗಲು ಸಾಧ್ಯಎಂದು ನಂಬಿದ್ದ ವಿವೇಕಾನಂದರ ಮಾತು ನೆನಪಿಗೆ ಬರುತ್ತದೆ. ಈ ನಿಟ್ಟಿನಲ್ಲಿ ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ. ಎಂದು ಯುವ ಜನತೆಯನ್ನು ಬಡಿದೆಬ್ಬಿಸಿದ ಮಹಾನ್ ಚೇತನ ವಿಶ್ವಸಂತ ವಿವೇಕಾನಂದರು. ಆದರೆ ಪ್ರಸ್ತುತ ಈ ಮಾತು ಏಳಿ, ಎದ್ದೇಳಿ ಮೊಬೈಲ್ ಗೀಳಿನಲ್ಲಿ ಮುಳುಗಿದ ಯುವಜನತೆಯೇ ವ್ಯಸನಗಳ ತೊಟ್ಟಿಲಲ್ಲಿ ಮಲಗಿರುವ ಯುವ ಜನತೆಯೇ ಏಳಿ, ಎದ್ದೇಳಿ ಎಂದು ಸಾರುವಂತಾಗಿದೆ. ಯುವ ಜನತೆ ಸಾಮಾಜಿಕ ಜಾಲತಾಣದಲ್ಲಿ ತಮಗೆ ಎಷ್ಟು ಲೈಕ್ ಬಂದಿದೆ ಎಂದು ನೋಡುತ್ತಾ ಮೈಮರೆಯುತ್ತಿದೆ ತನ್ನ ಸಾಧನೆ ಏನು ಎಷ್ಟು ಎಂದು ಗಮನಿಸುತ್ತಿಲ್ಲ. ಜನ ಹೊರ ಜಗತ್ತಿನಲ್ಲಿ ನಿಜವಾಗಿಯೂ ತನ್ನನ್ನು ಎಷ್ಟು ಲೈಕ್ ಮಾಡುತ್ತಿದ್ದಾರೆ ಎಂಬುದನ್ನು ಗಮನಿಸುತ್ತಿಲ್ಲ. ತಮ್ಮ ಫೇಸ್ಬುಕ್ನಲ್ಲಿ ಎಷ್ಟು ಜನ ಸ್ನೇಹಿತರಿದ್ದಾರೆ ಇ ನ್ಸ್ಟಾಗ್ರಾಮ್ನಲ್ಲಿ ಎಷ್ಟು ಜನ ಫಾಲೋವರ್ಸ್ ಇದ್ದಾರೆ ಎಂಬುದರ ಬಗ್ಗೆ ತಲೆಕೆಡಿಸಿಕೊಳ್ಳುತ್ತಿದೆ ಹೊರತು ನಿಜ ಜೀವನದಲ್ಲಿ…
ಬಹು ರತ್ನಾನೀ ವಸುಂಧರಾ ಎಂಬ ಆರ್ಯೊಕ್ತಿ ಒಂದಿದೆ. ಅರ್ಥಾತ್ ನಮ್ಮ ಪುಣ್ಯ ಭೂಮಿಯ ಪುಣ್ಯ ಗರ್ಭದಲ್ಲಿ ಅದೆಷ್ಟೋ ಅನರ್ಘ್ಯ ರತ್ನಗಳು ಅಡಕವಾಗಿದ್ದು ಕಾಲ ಕಾಲಕ್ಕೆ ಅವಕಾಶ ಸಾಧಿಸಿ ಪ್ರಕಟವಾಗುತ್ತವೆಯಂತೆ. ನಮ್ಮ ತುಳುನಾಡಿಗಂತೂ ಈ ಮಾತು ಹೆಚ್ಚು ಅನ್ವಯವಾಗುತ್ತದೆ. ಇದೀಗ ಬಂಟರ ಸಂಘ ಮುಂಬಯಿಯ ಅಂಧೇರಿ ಬಾಂದ್ರಾ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷರಾಗಿ ಆಯ್ಕೆಯಾದ ಸೂರಜ್ ಶೆಟ್ಟಿ ಅವರು ಬಾಲ್ಯದ ದಿನಗಳಿಂದಲೇ ಧಾರ್ಮಿಕ ಪ್ರವೃತ್ತಿಯವರು. ಕ್ರೀಡೆ ಮತ್ತು ಸಮಾಜ ಸೇವೆಯ ಕ್ಷೇತ್ರದಲ್ಲಿ ವಿಶೇಷ ಅಭಿರುಚಿ ಹೊಂದಿದ್ದರು. ಬೆಳೆಯುತ್ತಲೇ ಅವರ ಒಂದೊಂದೇ ಗುಣ ವಿಶೇಷಗಳು ಪ್ರಕಟವಾಗತೊಡಗಿದವು. ಬಾಲ್ಯದ ದಿನಗಳಿಂದಲೂ ಕ್ರಿಯಾಶೀಲ ವ್ಯಕ್ತಿತ್ವ ಹೊಂದಿ ಪ್ರತಿಭಾವಂತರಾಗಿದ್ದ ಸೂರಜ್ ಅವರು ಹಲವು ಪ್ರತಿಕೂಲ ಪರಿಸ್ಥಿತಿಗಳನ್ನು ಎದುರಿಸುತ್ತಲೇ ಹೇಗಾದರೂ ವಿದ್ಯಾವಂತನಾಗಬೇಕೆಂಬ ಹಂಬಲದಿಂದ ರಾತ್ರಿ ಹಗಲು ಅಭ್ಯಸಿಸಿ ತನ್ನ ಹೈಸ್ಕೂಲು ಶಿಕ್ಷಣ ಮುಗಿಸಿ ಮುಂದೆ ಏನಾದರೂ ಉದ್ಯೋಗ ಮಾಡುತ್ತಾ ಆರ್ಥಿಕ ಸ್ವಾವಲಂಬಿಯಾಗಬೇಕೆನ್ನುವ ಛಲದಿಂದ ರಾಷ್ಟ್ರದ ವಾಣಿಜ್ಯ ನಗರಿ ಮುಂಬಯಿ ಸೇರಿಕೊಂಡು ಪದವಿ ಪೂರ್ವ ಶಿಕ್ಷಣ ಪೂರೈಸಿದರು. ಮುಂದೆ ತನ್ನ ಉದ್ಯಮಕ್ಕೆ ಅನುಕೂಲವಾಗುವ…
ಲಯನ್ ಪ್ರಥಮ ಉಪ ಜಿಲ್ಲಾ ಗವರ್ನರ್ ಗೌರವಾನ್ವಿತ ಲಯನ್ ನೇರಿ ಕರ್ನೇಲಿಯೋ MJF ಇವರು ಲಯನ್ಸ್ ಕ್ಲಬ್ ಬನ್ನಾಡಿ ವಡ್ಡರ್ಸೆ ಗೆ ಅಧೀಕೃತ ಭೇಟಿ ನೀಡಿದರು. ಬನ್ನಾಡಿ ಸುಬ್ಬಣ್ಣ ಹೆಗ್ಡೆ ಸಭಾ ಭವನ ದಲ್ಲಿ ಜರುಗಿದ ಕಾರ್ಯಕ್ರಮಕ್ಕೆ, ಲಯನ್ಸ್ ಕ್ಲಬ್ ಬನ್ನಾಡಿ ವಡ್ಡರ್ಸೆಯ ಅಧ್ಯಕ್ಷರಾದ ಲಯನ್ ರಾಜಾರಾಮ್ ಶೆಟ್ಟಿ ಕಲ್ಕಟ್ಟೆ, ಕಾರ್ಯದರ್ಶಿ ಲಯನ್ ಅಜಿತ್ ಕುಮಾರ್ ಶೆಟ್ಟಿ ಕೊತ್ತಾಡಿ, ಕೋಶಾಧಿಕಾರಿ ಲಯನ್ ವಡ್ಡರ್ಸೆ ಬಾಲಕೃಷ್ಣ ಶೆಟ್ಟಿ & ಪದಾಧಿಕಾರಿಗಳು ಹಾಗೂ ಸದಸ್ಯರು ಅವರನ್ನು ಆತ್ಮೀಯವಾಗಿ ಸ್ವಾಗತಿಸಿಕೊಂಡರು. ಲಯನ್ ಬನ್ನಾಡಿ ಪ್ರಭಾಕರ ಶೆಟ್ಟಿ ಯವರ ಪ್ರಾರ್ಥನೆ ಮೂಲಕ ಸಭಾ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಕ್ಲಬ್ ನ ಕಾರ್ಯದರ್ಶಿ ಲಯನ್ ಅಜಿತ್ ಶೆಟ್ಟಿ ಕೊತ್ತಾಡಿ ಇವರು ಕ್ಲಬ್ ನ ಸೇವಾ ಚಟುವಟಿಕೆಗಳ ವರದಿ ಯನ್ನು ವಾಚಿಸಿದರು. ಲಯನ್ ಬನ್ನಾಡಿ ಸುಭಾಶ್ಚಂದ್ರ ಶೆಟ್ಟಿ ಕೆ ಇವರು ಲಯನ್ ಫ್ಲಾಗ್ ಸೆಲ್ಯುಟೇಷನ್ ಹಾಗೂ ಲಯನ್ ಸುಭಾಸ್ ಶೆಟ್ಟಿ ಮಧುವನ ಇವರು ಲಯನ್ ಕೋಡ್ ಆಫ್ ಕಂಡಕ್ಟ್ ವಾಚಿಸಿದರು. ಸಭಾ…
ಯಕ್ಷ ಪ್ರಿಯ ಬಳಗ ಮೀರಾ ಭಾಯಂದರ್ ಇದರ ವತಿಯಿಂದ ‘ಶ್ರೀ ರಾಮ’ ಯಕ್ಷಗಾನ : ರವೀಂದ್ರ ಶೆಟ್ಟಿ ಕೊಟ್ರಪಾಡಿ ಗುತ್ತು ಮತ್ತು ವಸಂತಿ ಶಿವ ಶೆಟ್ಟಿ ಅವರಿಗೆ ಯಕ್ಷ ರತ್ನ ಪ್ರಶಸ್ತಿ ಗೌರವ
ಯುವ ಯಕ್ಷಗಾನ ಕಲಾವಿದ, ಸಂಘಟಕ, ಯಕ್ಷಗಾನ ಆಸಕ್ತರಿಗೆ ಯಕ್ಷ ಗುರುವಾಗಿ ನಗರದಲ್ಲಿ ಗುರುತಿಸಿಕೊಂಡಿರುವ ನಾಗೇಶ್ ಪೊಳಲಿ ಸ್ಥಾಪಿಸಿರುವ ಯಕ್ಷ ಪ್ರಿಯ ಬಳಗ ಮೀರಾ ಭಾಯಂದರ್ ಇದರ ವತಿಯಿಂದ ಅಯೋಧ್ಯ ರಾಮ ಮಂದಿರ ಉದ್ಘಾಟನಾ ಪ್ರಯುಕ್ತ ಯಕ್ಷ ಪ್ರಿಯ ಬಳಗ ತಂಡದ ಕಲಾವಿದರಿಂದ ‘ಶ್ರೀ ರಾಮ’ ಎನ್ನುವ ಯಕ್ಷಗಾನ ಕಥಾ ಭಾಗವನ್ನು ಜನವರಿ 22 ರಂದು ಬಾಲಾಜಿ ಇಂಟರ್ನ್ಯಾಷನಲ್ ಹಾಲ್ ಭಾರತಿ ಪಾರ್ಕ್, ಮೀರಾ ರೋಡ್ ಇಲ್ಲಿ ನಡೆಯಿತು. ಯಕ್ಷಗಾನದ ಮಧ್ಯಾಂತರದಲ್ಲಿ ಬಿಜೆಪಿ ಪಕ್ಷದ ಮೀರಾ-ಭಾಯಂದರ್ ನ ದಕ್ಷಿಣ ಭಾರತೀಯ ಘಟಕದ ಅಧ್ಯಕ್ಷ, ಮುಂಬಯಿ ಬಂಟರ ಸಂಘದ ಮೀರಾ ಭಾಯಂದರ್ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷರಾದ ಬಳ್ಕುಂಜೆ ಗುತ್ತು ಗುತ್ತಿನಾರ್ ರವೀಂದ್ರ ದೇಜು ಶೆಟ್ಟಿ ಕೊಟ್ರಪಾಡಿ ಗುತ್ತು ಮತ್ತು ಬಂಟರ ಸಂಘದ ಮೀರಾ ಭಾಯಂದರ್ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆಯಾಗಿ ಆಯ್ಕೆಯಾದ ವಸಂತಿ ಶಿವ ಶೆಟ್ಟಿ ಇವರನ್ನು ಯಕ್ಷ ಪ್ರಿಯ ಬಳಗದ ವತಿಯಿಂದ ಯಕ್ಷ ರತ್ನ ಪ್ರಶಸ್ತಿಯನ್ನು ಕೊಟ್ಟು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಯಕ್ಷಗಾನದ…