Author: admin
ರಂಗಭೂಮಿಯಲ್ಲಿ ನೂತನ ವಿಶ್ವದಾಖಲೆ ಮಾಡುತ್ತಿರುವ ತೋನ್ಸೆ ವಿಜಯ್ ಕುಮಾರ್ ಶೆಟ್ಟಿಯವರಿಗೆ ಅದ್ಭುತ ಯಶಸ್ಸು ದೊರೆಯಲಿ: ರಾಜೇಂದ್ರ ವಿ. ಶೆಟ್ಟಿ
ವಿಜಯ್ ಕುಮಾರ್ ಶೆಟ್ಟಿಯವರು ಕಲಾ ಕ್ಷೇತ್ರದ ಅಭಿನಯ ಚಕ್ರವರ್ತಿ, ಬಂಟ ಸಮಾಜದ ಹೆಮ್ಮೆಯ ಕಲಾವಿದ, ಅದ್ಭುತ ಸಾಧಕ, ಗೌರವಾನ್ವಿತ ವ್ಯಕ್ತಿತ್ವದ, ಬಹುಮುಖ ಪ್ರತಿಭೆಯ ವಿಜಯ್ ಕುಮಾರ್ ಶೆಟ್ಟಿ ಅವರ ಕಲಾ ಜೀವನ ಚರಿತ್ರೆ, ಸಾಧನೆ ಬಗ್ಗೆ ಸಾಕ್ಷ್ಯ ಚಿತ್ರವನ್ನು ಮಾಡುವ ದೊಡ್ಡ ಆಶಯವನ್ನು ನಾನು ಹೊಂದಿದ್ದೇನೆ. ಅದನ್ನು ಶೀಘ್ರದಲ್ಲಿ ಮಾಡುವ ಭರವಸೆಯನ್ನು ನಿಮಗೆ ನೀಡುತ್ತಿದ್ದೇನೆ. ನೂತನ ವಿಶ್ವ ದಾಖಲೆಯತ್ತ ಹೆಜ್ಜೆಯನ್ನಿಡುತ್ತಿರುವ ವಿಜಯ್ ಕುಮಾರ್ ಶೆಟ್ಟಿ ಅವರು ಕಲಾ ಕ್ಷೇತ್ರದಲ್ಲಿ ಸಾಧನೆಯ ಶಿಖರವನ್ನೇರಲಿ. ಕಲಾ ಸೇವೆಯಲ್ಲಿ ಕಲಾ ಜಗತ್ತು ಮತ್ತಷ್ಟು ಕೀರ್ತಿಯನ್ನು ಹೊಂದಲಿ ಎಂದು ಉದ್ಯಮಿ ಪಂಜುರ್ಲಿ ಗ್ರೂಪ್ ಆಫ್ ಹೊಟೇಲ್ಸ್ ನ ಸಿಎಂಡಿ ರಾಜೇಂದ್ರ ವಿ. ಶೆಟ್ಟಿ ನುಡಿದರು. ಅವರು ಮಾರ್ಚ್ 28 ರಂದು ಡೊಂಬಿವಲಿ ಪೂರ್ವದ ಸಾವಿತ್ರಿಬಾಯಿ ಪುಲೆ ಸಭಾಗೃಹದಲ್ಲಿ ಕಲಾ ಜಗತ್ತು ಕ್ರಿಯೇಷನ್ಸ್ ಇವರ ಕಲೋತ್ಸವ ವಿಜಯೋತ್ಸವದ ನಾಲ್ಕನೇ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಬಂಟರ ಸಂಘ ಮುಂಬಯಿ ಡೊಂಬಿವಲಿ ಪ್ರಾದೇಶಿಕ…
ಶ್ರೀ ಧರ್ಮರಸು ಕೊಡಮಣಿತ್ತಾಯ ಕುಕ್ಕಿನಂತಾಯ ದೈವಸ್ಥಾನ, ಬ್ರಹ್ಮ ಬೈದರ್ಕಳ ಗರಡಿ ನಡ್ಯೋಡಿ ಬೆಟ್ಟ ಗರಡಿ ಸಾಣೂರು ಇದರ ಪುನರ್ ಪ್ರತಿಷ್ಠೆ ಬ್ರಹ್ಮಕಲಶೋತ್ಸವ ಪ್ರಯುಕ್ತ ಧಾರ್ಮಿಕ ಸಭೆ ಐವೆರ್ ಸತ್ಯೋ ಧರ್ಮ ಚಾವಡಿಯಲ್ಲಿ ನಡೆಯಿತು. ಧಾರ್ಮಿಕ ಸಭಾಕಾರ್ಯಕ್ರಮದಲ್ಲಿ ಭಾಗವಹಿಸಿ ಆಶೀರ್ವಚನ ನೀಡಿದ ಶ್ರೀ ಕ್ಷೇತ್ರ ಒಡಿಯೂರುವಿನ ಶ್ರೀ ಗುರುದೇವಾನಂದ ಸ್ವಾಮೀಜಿ ಮಾತನಾಡಿ ಜೇವನದ ದೀಪ ಬೆಳಗಬೇಕಾದರೆ ಧರ್ಮ ಸಾನ್ನಿಧ್ಯಗಳು ಸುಸ್ಥಿತಿಯಲ್ಲಿರಬೇಕು ಎಂದರು. ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶೀಯ ಅರ್ಚಕ ಲಕ್ಷ್ಮೀನಾರಾಯಣ ಅಸ್ರಣ್ಣರು ಉದ್ಘಾಟನೆ ನೆರವೇರಿಸಿ ಧಾರ್ಮಿಕ ಉಪನ್ಯಾಸ ನೀಡಿದರು. ಮಣಿಪಾಲ ವೈಷ್ಣವಿ ದೇವಸ್ಥಾನದ ಆಡಳಿತ ಮೊಕ್ತೇಸರ ಜಯರಾಜ್ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಶ್ರೀ ಬ್ರಹ್ಮಶ್ರೀ ಮುರಳೀಧರ ತಂತ್ರಿಗಳು ತೆಂಕ ಎಡಪದವು, ವೇ. ಮೂ. ಶ್ರೀರಾಮ್ ಭಟ್, ಉದಯ ಕೃಷ್ಣಯ್ಯ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಉದಯ ಶೆಟ್ಟಿ ಮುನಿಯಾಲು, ಮುಂಬಯಿ ಉದ್ಯಮಿ ಬಿ. ವಿವೇಕ್ ಶೆಟ್ಟಿ ಬೊಳ್ಯ ಗುತ್ತು, ರಮೇಶ್ ಟಿ. ಶೆಟ್ಟಿ ಮುದೆಲಾಡಿ ಮನೆ ಸಾಣೂರು, ಸುರೇಂದ್ರ…
ತುಳುನಾಡಿನ ಮಹಾದಾನಿ ಕುಳೂರು ಕನ್ಯಾನ ಸದಾಶಿವ ಶೆಟ್ಟಿಯವರ ಮಾತೃಶ್ರೀ ಕನ್ಯಾನ ಲೀಲಾವತಿ ಶೆಟ್ಟಿ (90) ಅವರು ಮಾರ್ಚ್ 28 ರಂದು ಗುರುವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಕನ್ಯಾನ ದಿವಂಗತ ಪಕೀರ ಶೆಟ್ಟಿಯವರ ಪತ್ನಿಯಾಗಿರುವ ಇವರು ಮಕ್ಕಳಾದ ಸದಾಶಿವ ಶೆಟ್ಟಿ, ಚಂದ್ರಹಾಸ ಶೆಟ್ಟಿ, ರಘುರಾಮ ಶೆಟ್ಟಿ, ರವೀಂದ್ರ ಶೆಟ್ಟಿ, ವಿಜಯಲಕ್ಷ್ಮಿ ಶೆಟ್ಟಿ, ದಿವಾಕರ ಶೆಟ್ಟಿ, ನಿತ್ಯಾನಂದ ಶೆಟ್ಟಿ ಹಾಗೂ ಅಪಾರ ಬಂಧು ಬಳಗವನ್ನಗಲಿದ್ದಾರೆ. ಸದಾಶಿವ ಶೆಟ್ಟಿಯವರ ಕೊಡುಗೈ ದಾನದಂತಹ ಸಾಮಾಜಿಕ ಕಾರ್ಯಗಳಿಗೆ ಸದಾ ಸ್ಫೂರ್ತಿಯಾಗಿದ್ದ ಇವರು ಊರಿನಲ್ಲಿ ನಡೆಯುವ ಮಹತ್ಕಾರ್ಯಗಳಲ್ಲಿ ಮಕ್ಕಳೊಡನೆ ಪಾಲ್ಗೊಳ್ಳುತ್ತಿದ್ದರು. ಲೀಲಾವತಿ ಶೆಟ್ಟಿ ನಿಧನಕ್ಕೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ ಮತ್ತು ಪದಾಧಿಕಾರಿಗಳು, ಮುಂಬಯಿ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ ಮತ್ತು ಪದಾಧಿಕಾರಿಗಳು, ಬಾಂಬೇ ಬಂಟ್ಸ್ ಅಸೋಸಿಯೇಷನ್ ಅಧ್ಯಕ್ಷ ಸಿಎ ಸುರೇಂದ್ರ ಕೆ ಶೆಟ್ಟಿ ಮತ್ತು ಪದಾಧಿಕಾರಿಗಳು, ತುಳುಕೂಟ ಫೌಂಡೇಶನ್ ನಾಲಾಸೋಪಾರ ಅಧ್ಯಕ್ಷ ಶಶಿಧರ್ ಕೆ ಶೆಟ್ಟಿ…
ವಿದ್ಯಾರ್ಥಿಗಳಿಗೆ ಜ್ಞಾನ, ಕೌಶಲದೊಂದಿಗೆ ನಮ್ಮ ಸಂಸ್ಕೃತಿ, ಸಂಸ್ಕಾರಗಳನ್ನೂ ಕಲಿಸುವ ಮೂಲಕ ಸಮಾಜದ ಅಶಕ್ತರು ಹಾಗೂ ಮನುಕುಲದ ಒಳಿತಿಗಾಗಿ ಕೆಲಸ ಮಾಡಲು ಪ್ರೇರೇಪಿಸಬೇಕು ಎಂದು ಮಣಿಪಾಲ್ ಸ್ಕೂಲ್ ಆಫ್ ಆರ್ಕಿಟೆಕ್ಚರ್ ಆಂಡ್ ಪ್ಲಾನಿಂಗ್ ನ ನಿರ್ದೇಶಕಿ ಪ್ರೊ.ಡಾ. ರಮಾದೇವಿ ನಂದಿನೇನಿ ಹೇಳಿದರು. ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ಆಲ್ ಕಾರ್ಗೋ ಲಾಜಿಸ್ಟಿಕ್ ಕಂಪನಿ ಮಂಗಳೂರು ಪ್ರಾಯೋಜಕತ್ವದಲ್ಲಿ ಕುಂತಳನಗರ ಸ್ಕಿಲ್ ಡೆವಲಪ್ ಮೆಂಟ್ ಸೆಂಟರ್ ನಲ್ಲಿ ನಡೆಯುತ್ತಿರುವ ಉಚಿತ ಕಂಪ್ಯೂಟರ್ ಸಾಕ್ಷರತಾ ತರಬೇತಿಯ 14ನೇ ಬ್ಯಾಚ್ ನ ವಿದ್ಯಾರ್ಥಿಗಳ ಪ್ರಮಾಣಪತ್ರ ವಿತರಣೆ ಹಾಗೂ 15 ನೇ ಬ್ಯಾಚ್ ನ ಓರಿಯಂಟೇಶನ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ತೆಂಕನಿಡಿಯೂರು ಸರಕಾರಿ ಪದವಿ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದ ಪ್ರಿನ್ಸಿಪಾಲ್ ಡಾ. ಸುರೇಶ್ ರೈ ಕೆ. ಮಾತನಾಡಿ, ಮಹಿಳೆಯರು, ಯುವಕರು ಮತ್ತು ವಿದ್ಯಾರ್ಥಿಗಳ ಕೌಶಲಾಭಿವೃದ್ಧಿಗಾಗಿ ನಿರಂತರ ಕಾರ್ಯಕ್ರಮ ಆಯೋಜಿಸುತ್ತಿರುವ ಉಡುಪಿ ಗ್ರಾಮೀಣ ಬಂಟರ ಸಂಘ ಯಾವ ಜಾತಿ ಸಂಘಗಳೂ ಮಾಡದ ಕೆಲಸ ಮಾಡುತ್ತಿದೆ ಎಂದರು.…
ನಾಟಕಗಳು ಜನಮಾನಸ ತಲುಪುವಲ್ಲಿ ಕಲಾವಿದರ ಪಾತ್ರ ಅತೀ ಮುಖ್ಯವಾಗಿದ್ದು, ರಂಗಭೂಮಿ ಬೆಳೆಯಲು ಪ್ರೇಕ್ಷಕರ ಪ್ರೋತ್ಸಾಹ ಅಗತ್ಯ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ನೂತನ ರವೀಂದ್ರ ಮಂಟಪದಲ್ಲಿ ರಂಗಭೂಮಿ ಉಡುಪಿ ವತಿಯಿಂದ ಎಂಜಿಎಂ ಕಾಲೇಜು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ನಡೆದ ವಿಶ್ವರಂಗಭೂಮಿ ದಿನಾಚರಣೆ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. 4 ದಶಕಗಳ ಹಿಂದೆ ರಂಗ ಚಟುವಟಿಕೆಗಳಲ್ಲಿ ಮಹಿಳೆಯರು ಅತೀ ವಿರಳ ಸಂಖ್ಯೆಯಲ್ಲಿದ್ದ ಸಂದರ್ಭದಲ್ಲಿ ಡಾ. ಮಾಧವಿ ಭಂಡಾರಿಯವರು ನಾಟಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿದ್ದು, ಇಂದಿನ ಯುವ ಜನತೆಗೆ ಪ್ರೇರಣೆಯಾಗಿದ್ದಾರೆ ಎಂದು ಹೇಳಿದರು. ಕಮಲಾಬಾಯಿ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಸುದರ್ಶನ ನಾಯಕ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಹಿರಿಯ ರಂಗಕರ್ಮಿ, ಪಿಪಿಸಿ ನಿವೃತ್ತ ಪ್ರಾಂಶುಪಾಲೆ ಡಾ. ಮಾಧವಿ ಎಸ್. ಭಂಡಾರಿ ಅವರನ್ನು ಸನ್ಮಾನಿಸಲಾಯಿತು. ಕಲಾವಿದ ರಾಘವೇಂದ್ರ ರಾವ್, ರಂಗಭೂಮಿ ಉಪಾಧ್ಯಕ್ಷ ರಾಜ್ ಗೋಪಾಲ್ ಉಪಸ್ಥಿತರಿದ್ದರು. ವಿವೇಕಾನಂದ ಎನ್. ರಂಗಭೂಮಿ ಸಂದೇಶ ವಾಚಿಸಿದರು.…
ಮಾ. 28 ಬ್ರಹ್ಮಾವರದ ಜಿ ಎಮ್ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ನಲ್ಲಿ ಯು.ಕೆ.ಜಿ ವಿದ್ಯಾರ್ಥಿಗಳಿಗೆ ಘಟಿಕೋತ್ಸವ ಸಮಾರಂಭವನ್ನು ಆಯೋಜಿಸಲಾಗಿತ್ತು. ಮಣಿಪಾಲ ಎಜುಕೇರ್ ಅಕಾಡೆಮಿಯ ಪ್ರಾಂಶುಪಾಲೆ ಶ್ರೀಮತಿ ಗ್ಲಾಡಿಯಸ್ ಶಿರಿ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ಸಮಾಜದಲ್ಲಿ ಉತ್ತಮ ಪ್ರಜೆಯಾಗಬೇಕಾದರೆ ಬಾಲ್ಯದ ದಿನಗಳಲ್ಲಿ ಕಲಿತಿರುವ ಉತ್ತಮ ಸಂಸ್ಕಾರ, ಮೌಲ್ಯಗಳು ಮುಖ್ಯವಾಗುತ್ತದೆ. ಹಾಗಾಗಿ ಉತ್ತಮ ಮೌಲ್ಯಗಳನ್ನು ಮಕ್ಕಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಲು ಪೋಷಕರು ಪ್ರೇರೇಪಿಸಬೇಕೆಂದರು. ಶಾಲಾ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್ ಮಾತನಾಡಿ ಆತ್ಮವಿಶ್ವಾಸವನ್ನು ಹೆಚ್ಚಿಸುವಂತಹ ಚಟುವಟಿಕೆಗಳಲ್ಲಿ ಮಕ್ಕಳು ತೊಡಗಿಸಿಕೊಳ್ಳುವಂತೆ ಪೆÇೀಷಕರು ಪ್ರೋತ್ಸಾಹಿಸುವುದರ ಜೊತೆಗೆ ಹೆಚ್ಚಿನ ಸಮಯವನ್ನು ಮಕ್ಕಳಿಗಾಗಿ ಮೀಸಲಿಡಬೇಕೆಂದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಶಾಲೆ, ಶಿಕ್ಷಕರ ಜೊತೆ ಪೋಷಕರ ಪಾತ್ರ ಬಹುಮುಖ್ಯವಾದದ್ದು ಎಂದರು. ಕಾರ್ಯಕ್ರಮದಲ್ಲಿ ಪೋಷಕರು, ಶಿಕ್ಷಕ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಅತ್ತೂರು ಶ್ರೀ ಅರಸು ಕುಂಜಿರಾಯ ದೈವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಮಾರ್ಚ್ 28ರಿಂದ ಮಾ.31 ರವರೆಗೆ ನಡೆಯಲಿದೆ. ಮಾ.28 ರಂದು ಅರಸು ಕುಂಜಿರಾಯರ ಭಂಡಾರ ಆಗಮನ. 10.30ಕ್ಕೆ ಶ್ರೀ ಅರಸು ಕುಂಜಿರಾಯರಿಗೆ ನವಕ ಪ್ರಧಾನ ಕಲಶಾಭಿಷೇಕ ಬೆಳಿಗ್ಗೆ 11 ಗಂಟೆಗೆ ಧ್ವಜರೋಹಣ, ಸಂಜೆ 6.00 ಗಂಟೆಗೆ ದೇಲಂತಬೆಟ್ಟು ಗ್ರಾಮದ ಶಿಬರೂರು ಶ್ರೀ ಉಳ್ಳಾಯ ಹಾಗೂ ಕೊಡಮಣಿತ್ತಾಯ ದೈವದ ಭಂಡಾರ ಆಗಮನ, 6.30 ಕಿಲೆಂಜೂರು ಶ್ರೀ ಸರಳ ಧೂಮಾವತಿ ದೈವದ ಭಂಡಾರ ಆಗಮನ, 7.00 ಗಂಟೆಗೆ ಮೂಡ್ರಗುತ್ತು ಶ್ರೀ ಕಾಂತೇರಿ ಧೂಮಾವತಿ – ಬಂಟ ದೈವಗಳ ಭಂಡಾರ ಆಗಮನ, 7.30 ಕ್ಕೆ ಕೊಯಿಕುಡೆ ಶ್ರೀ ಜಾರಂದಾಯ ದೈವದ ಬಂಟ ದೈವದ ಭಂಡಾರ ಆಗಮನ, ರಾತ್ರಿ 11.00 ಗಂಟೆಗೆ ಶ್ರೀ ಅರಸು ಕುಂಜಿರಾಯರ ನೇಮೋತ್ಸವ. ಮಾ.29 ರಂದು ಬೆಳಿಗ್ಗೆ 5.00 ಗಂಟೆಗೆ ಶ್ರೀ ಉಳ್ಳಾಯ ದೈವದ ನೇಮೋತ್ಸವ, ರಾತ್ರಿ 8.00 ಗಂಟೆಗೆ ಕೊಡಮಣಿತ್ತಾಯ ದೈವದ ನೇಮೋತ್ಸವ, ರಾತ್ರಿ 11.00 ಗಂಟೆಗೆ ಶ್ರೀ…
ಎಪ್ರಿಲ್ 7 ರಂದು ಥಾಣೆ ಯಲ್ಲಿ ದಕ್ಷಿಣ ಕನ್ನಡ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿಯ ಅಭ್ಯರ್ಥಿಗಳೊಂದಿಗೆ ತುಳು ಕನ್ನಡಿಗರ ಸಭೆ.
ಮುಂಬೈ, ಥಾಣೆ ಜಿಲ್ಲೆ ಮತ್ತು ನವಿ ಮುಂಬಯಿಯ ತುಳು ಕನ್ನಡಿಗರ ಒಗ್ಗೂಡುವಿಕೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಚಿಕ್ಕಮಗಳೂರಿನ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯವರೊಂದಿಗೆ ವಿಶೇಷ ಸಭೆಯೊಂದನ್ನು ಎಪ್ರಿಲ್ 7ರಂದು ಥಾಣೆಯಲ್ಲಿ ಆಯೋಜಿಸಿಕೊಂಡಿದ್ದು ಈ ಬಗ್ಗೆ ಮಾ 27 ರಂದು ಉತ್ತರ ಮುಂಬೈ ಲೋಕಸಭಾ ಕ್ಷೇತ್ರದ ಸಂಸದ ಗೋಪಾಲ್ ಸಿ ಶೆಟ್ಟಿ ಅವರನ್ನು ಅವರ ನಿವಾಸದಲ್ಲಿ ಪನ್ವೇಲ್ ಮಹಾನಗರ ಪಾಲಿಕೆಯ ನಗರ ಸೇವಕ ಸಂತೋಷ್ ಜಿ ಶೆಟ್ಟಿ ಭೇಟಿಯಾಗಿ ಎಪ್ರಿಲ್ 7 ರಂದು ಥಾಣೆಯಲ್ಲಿ ನಡೆಯಲಿರುವ ತುಳು ಕನ್ನಡಿಗರ ಸಭೆಯ ಅಧ್ಯಕ್ಷತೆಯನ್ನು ವಹಿಸುವಂತೆ ವಿನಂತಿಸಿ, ಕಾರ್ಯಕ್ರಮದ ಪೂರ್ಣ ಮಾಹಿತಿಯನ್ನು ನೀಡಿದರು. ಈ ಸಂದರ್ಭದಲ್ಲಿ ಎರ್ಮಾಳ್ ಹರೀಶ್ ಶೆಟ್ಟಿ, ಪನ್ವೇಲ್ ಕರ್ನಾಟಕ ಸಂಘದ ಅಧ್ಯಕ್ಷ ಭಾಸ್ಕರ್ ಶೆಟ್ಟಿ ಪದ್ಮ ಹಾಗೂ ಪನ್ವೆಲ್ ಥಾಣೆ ಪರಿಸರದ ತುಳು ಕನ್ನಡಿಗರು ಪಾಲ್ಗೊಂಡಿದ್ದರು.
ನಾವು ಕಾಣುವ ಜೀವಸಂಕುಲದಲ್ಲಿ ಪ್ರಾಣಿ ಮತ್ತು ಪಕ್ಷಿಗಳೆಂಬ ಎರಡು ಪ್ರಭೇದಗಳಿವೆ. ಜೀವನ ಕ್ರಮ ಹಾಗೂ ವೈವಿಧ್ಯಗಳಲ್ಲಿ ಎರಡೂ ಅನನ್ಯತೆಯನ್ನು ಹೊಂದಿವೆ. ಪ್ರಾಣಿಗಳಲ್ಲಿ ಸಿಂಹ ಬಲಿಷ್ಠವೆನಿಸಿದರೆ, ಪಕ್ಷಿ ಸಂಕುಲದಲ್ಲಿ ಹದ್ದು ತನ್ನ ಮೇರು ಸ್ಥಾನವನ್ನು ಪಡೆದುಕೊಂಡಿದೆ. ನಾವು ಹದ್ದಿನ ಮನಃಸ್ಥಿತಿಯಿಂದ ಅಮೂಲ್ಯವಾದ ಪಾಠಗಳನ್ನು ಕಲಿಯಬಹುದು ಮತ್ತು ಯಶಸ್ಸನ್ನು ಸಾಧಿಸಲು ನಮ್ಮ ಸ್ವಂತ ಜೀವನಕ್ಕೆ ಅನ್ವಯಿಸಿಕೊಳ್ಳಬಹುದು. ಆಕಾಶವನ್ನು ಮುಟ್ಟಬಲ್ಲ ಸಾಮರ್ಥ್ಯ ಇರುವ ಪಕ್ಷಿ ಒಂದಿದೆ ಎಂದಾದರೆ ಅದು ಹದ್ದು. ಹದ್ದು ಒಬ್ಬಂಟಿಯಾಗಿ ಬಾನೆತ್ತರಕ್ಕೆ ಹಾರುತ್ತದೆ. ಯಾವುದೇ ಕಾರಣಕ್ಕೂ ಪಾರಿವಾಳ, ಗಿಳಿ, ಕಾಗೆಗಳ ಜತೆಗಲ್ಲ. ಇದೇ ರೀತಿ ಯಾವುದೇ ಯಶಸ್ಸನ್ನು ಗಳಿಸಬೇಕಾದರೆ ಮೊದಲು ನಮ್ಮ ಮನಃಸ್ಥಿತಿ ಗಟ್ಟಿಯಾಗಿರಬೇಕು. ಸ್ವ-ಪ್ರಯತ್ನ, ಪರಿಶ್ರಮ ಮುಖ್ಯ. ಕಾಲೆಳೆಯುವವರಿಂದ ದೂರವಿದ್ದು, ನಕಾರಾತ್ಮಕ ಮನಃಸ್ಥಿತಿಯವರಿಂದ ಆದಷ್ಟು ಅಂತರವನ್ನು ಕಾಪಾಡಿಕೊಳ್ಳುವುದು ಉತ್ತಮ. ಆತ್ಮವಿಶ್ವಾಸದಿಂದ ಏನನ್ನಾದರೂ ಸಾಧಿಸಬಲ್ಲೆ ಎನ್ನುವ ಛಾತಿ ನಮ್ಮದಾಗಬೇಕು. ಹದ್ದು ನಿಖರ ದೃಷ್ಟಿ ಹಾಗೂ ಗುರಿಯನ್ನು ಹೊಂದಿರುತ್ತದೆ. ಸುಮಾರು ಮೂರು ಕಿಲೋ ಮೀಟರ್ ದೂರದ ತನ್ನ ಬೇಟೆಯನ್ನು ನಿಖರವಾಗಿ ಗುರುತಿಸುತ್ತದೆ. ಅದರ ಲೇಸರ್ನಂತಹ…
ನಾಗರಿಕ ಸೇವೆ ಸ್ಪರ್ಧಾತ್ಮಕ ಪರೀಕ್ಷೆ: ಆಳ್ವಾಸ್ನಲ್ಲಿ ಕೋಚಿಂಗ್ ಆಳ್ವಾಸ್ ಜತೆ ಸಾಧನಾ ಕೋಚಿಂಗ್ ಕೇಂದ್ರ ಒಡಂಬಡಿಕೆ
ಮೂಡುಬಿದಿರೆ: ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ನಾಗರಿಕ ಸೇವೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ನಿಟ್ಟಿನಲ್ಲಿ ಬೆಂಗಳೂರಿನ ವಿಜಯನಗರದ ಸಾಧನಾ ಕೋಚಿಂಗ್ ಕೇಂದ್ರದ ಜೊತೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಗುರುವಾರ ಇಲ್ಲಿ ಮಹತ್ವದ ಒಡಂಬಡಿಕೆ ಮಾಡಿಕೊಂಡಿದೆ. ಒಡಂಬಡಿಕೆಗೆ ಸಹಿ ಮಾಡಿದ ಬಳಿಕ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ, ‘ಸ್ಪರ್ಧಾತ್ಮಕ ಪರೀಕ್ಷೆಗಳಾದ ಯುಪಿಎಸ್ಸಿ, ಐಎಎಸ್, ಐಪಿಎಸ್, ಕೆಪಿಎಸ್ಸಿ ಸೇರಿದಂತೆ ಪ್ರಮುಖ ನಾಗರಿಕ ಸೇವೆಗಳ ಪರೀಕ್ಷೆಗೆ ನಮ್ಮ ಕ್ಯಾಂಪಸ್ನಲ್ಲೇ ಗುಣಮಟ್ಟದ ಕೋಚಿಂಗ್ ನೀಡಲಾಗುವುದು’ ಎಂದರು. ‘ವಿವಿಧ ಹಂತದ ಪರೀಕ್ಷೆಗಳಿಗೆ ತರಬೇತಿ ನೀಡಲು ತರಬೇತುದಾರರನ್ನು ನೇಮಕ ಮಾಡಲಾಗುವುದು ಹಾಗೂ ಅಧ್ಯಯನಕ್ಕೆ ಪೂರಕವಾಗಿ ಗ್ರಂಥಾಲಯವನ್ನು ಅಭಿವೃದ್ಧಿ ಪಡಿಸಲಾಗುವುದು. ಗ್ರಾಮೀಣ ಭಾಗದ, ಆರ್ಥಿಕವಾಗಿ ಹಿಂದುಳಿದ ಸೇರಿದಂತೆ ತಳಸ್ತರದ ವಿದ್ಯಾರ್ಥಿಗಳು ಉನ್ನತ ಆಡಳಿತಾತ್ಮಕ ಹುದ್ದೆಗಳಿಗೆ ತೆರಳಬೇಕು ಎಂಬುದು ನಮ್ಮ ಆಶಯ. ಈ ನಿಟ್ಟಿನಲ್ಲಿ ಒಡಂಬಡಿಕೆ ಮಾಡಲಾಗಿದೆ’ ಎಂದು ವಿವರಿಸಿದರು. 2011ರಲ್ಲಿ ಡಾ. ಜ್ಯೋತಿ ಅವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಆರಂಭಗೊಂಡ ಸಾಧನಾ ಕೋಚಿಂಗ್ ಈಗಾಗಲೇ ರಾಜ್ಯದ…