Author: admin

ರಾಷ್ಟ್ರೀಯ ಸ್ವಯಂಸೇವಕ ಸಂಘ, ಧಾರ್ಮಿಕ ಕ್ಷೇತ್ರ, ಭಾರತೀಯ ಜನತಾಪಕ್ಷ ಸೇರಿದಂತೆ ವಿವಿಧ ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸಾರ್ವಜನಿಕ ಬದುಕಿಗೆ ಕಾಲಿಟ್ಟ ದಕ್ಷಿಣ ಕನ್ನಡ ಜಿಲ್ಲೆಯ ಸದಾ ಕ್ರಿಯಾಶೀಲ, ಸಂಘಟನಾ ಚತುರ, ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಂಸದರಾದ ನಳಿನ್ ಕುಮಾರ್ ಕಟೀಲ್ ಹೆಸರು ಬಿಜೆಪಿ ವಲಯದಲ್ಲಿ ಸದಾ ಚಾಲ್ತಿಯಲ್ಲಿದೆ. ಧರ್ಮ ಜಾಗರಣಾ, ಆರ್.ಎಸ್.ಎಸ್, ಭಾಜಾಪದ ಜಿಲ್ಲಾ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿ ಜವಾಬ್ದಾರಿ ಹೊತ್ತ ಸಂದರ್ಭದಲ್ಲೇ ನಳಿನ್ ಕುಮಾರ್ ಕಟೀಲ್ ಹೆಸರು ಜಿಲ್ಲೆಯ ಮೂಲೆ ಮೂಲೆಯ ತಳಮಟ್ಟದ ಕಾರ್ಯಕರ್ತರಿಗೆ ಬಹಳ ಹತ್ತಿರದ ನಂಟು ಹೊಂದಿತ್ತು. ಜಿಲ್ಲೆಯಲ್ಲಿ ಸುಮಾರು ಎರಡುವರೆ ದಶಕಗಳ ಹಿಂದೆ ತಲೆಯೆತ್ತಿದ ಪರಿಸರದ ಮಾರಕ ಅವೈಜ್ಞಾನಿಕ ಯೋಜನೆಗಳ ವಿರುದ್ಧ ಸಂಘಟಿತ ಹೋರಾಟ, ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳ ನೂರಾರು ಬ್ರಹ್ಮಕಲಶೋತ್ಸವದ ಅಧ್ಯಕ್ಷ ಗೌರವಾಧ್ಯಕ್ಷರಾಗಿ ಮಾದರಿ ಬ್ರಹ್ಮಕಲಶೋತ್ಸವನ್ನು ಹಾಗೂ ಸಂಘಟನಾ ಚಾತುರ್ಯತೆಯನ್ನು ಜಿಲ್ಲೆಗೆ ಪಸರಿಸಿ ಮಾದರಿ ಬ್ರಹ್ಮಕಲಶೋತ್ಸವದ ರೂವಾರಿಯಾಗಿ, ಎತ್ತಿನಹೊಳೆ ಯೋಜನೆಯ ವಿರುದ್ಧದ ಹೋರಾಟ ಸಂಘಟನೆಯ ಪ್ರಚಾರಕರಾಗಿ ಸಂಘಟನಾತ್ಮಕ ಹಿನ್ನೆಲೆಯಲ್ಲಿ ಪಕ್ಷದ…

Read More

ಹಿರ್ಗಾನ ವ್ಯವಸಾಯ ಸೇವಾ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಹಿರ್ಗಾನದ ಸಿರಿಯಣ್ಣ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉದ್ಯಮಿ, ಪ್ರಗತಿಪರ ಕೃಷಿಕರಾಗಿರುವ ಸಿರಿಯಣ್ಣ ಶೆಟ್ಟಿಯವರು ಕಳೆದ ಸಾಲಿನಲ್ಲೂ ಸಂಘದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಆ ಮೊದಲು ಸಂಘದ ನಿರ್ದೇಶಕರಾಗಿ, ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದಾರೆ. ಜನವರಿ 8ರಂದು ಸಂಘದ ಕಚೇರಿಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಚುನಾವಣಾ ಅಧಿಕಾರಿಯಾಗಿ ಸಹಕಾರ ಅಭಿವೃದ್ಧಿ ಅಧಿಕಾರಿ ಜಯಂತಿ ಎಸ್. ಕಾರ್ಯ ನಿರ್ವಹಿಸಿದರು. ಈ ಸಂದರ್ಭ ಉದ್ಯಮಿ ಚೇತನ್ ಶೆಟ್ಟಿ, ವಾಸು ಶೆಟ್ಟಿ, ಸಂಘದ ಮಾಜಿ ನಿರ್ದೇಶಕ ಎಂ. ರತ್ನಾಕರ ರಾವ್, ಸಂಘದ ನಿರ್ದೇಶಕರಾದ ಶಂಕರ ನಾಯಕ್, ಹರೀಶ್ ಶೆಟ್ಟಿ, ತಾರನಾಥ ಶೆಟ್ಟಿ, ಉಮೇಶ್ ನಾಯ್ಕ್, ಪ್ರಕಾಶ್ ಗೋಕುಲ್ ನಾಯ್ಕ್, ಕಲ್ಯಾಣಿ ಶೆಟ್ಟಿ, ರತ್ನಾವತಿ ಎನ್. ನಾಯಕ್, ಅನಿಲ್ ಪೂಜಾರಿ ಉಪಸ್ಥಿತರಿದ್ದರು. ಜಿಲ್ಲಾ ಬ್ಯಾಂಕ್ ಪ್ರತಿನಿಧಿ ಜಯಂತ್ ಕುಮಾರ್ ಸ್ವಾಗತಿಸಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ವಾಘಲೆ ಕಾರ್ಯಕ್ರಮ ನಿರ್ವಹಿಸಿದರು.

Read More

ಜಡ್ಕಲ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮ – 2025ರ ಅಂಗವಾಗಿ ಪ್ರತಿಭಾ ಸಿಂಚನ ಕಾರ್ಯಕ್ರಮ ಜರಗಿತು. ಬೆಳಗ್ಗೆ ಜಡ್ಕಲ್ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಭಾರತಿ ಜೆ ಶೆಟ್ಟಿ ಧ್ವಜಾರೋಹಣಗೈದರು. ಜಡ್ಕಲ್ ಸೈಂಟ್ ಜಾರ್ಜ್ ಚರ್ಚ್ ಧರ್ಮಗುರು ಮಾಣಿ ವಿದ್ಯಾರ್ಥಿಗಳ ಪಥಸಂಚಲನದ ಗೌರವ ವಂದನೆ ಸ್ವೀಕರಿಸಿದರು. ಸಂಜೆ ಸಭಾ ಕಾರ್ಯಕ್ರಮವನ್ನು ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ ಉದ್ಘಾಟಿಸಿದರು. ಜಡ್ಕಲ್ ಗ್ರಾಮ ಪಂಚಾಯತ್ ಅಧ್ಯಕ್ಷೆ ಪಾರ್ವತಿ ಬೆಳಾರಿ ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಪಂಚಾಯಿತಿ ಸದಸ್ಯರಾದ ದೇವದಾಸ್ ವಿಜೆ, ಲಕ್ಷ್ಮಿ ಚಂದನ್, ಬೆಂಗಳೂರಿನ ಸ್ವಯಂಸ್ಪೂರ್ತಿ ಫೌಂಡೇಶನ್ ಅಧ್ಯಕ್ಷ ನಾಗರಾಜ ಶೆಟ್ಟಿ, ಎಸ್‌ಡಿಎಂಸಿ ಅಧ್ಯಕ್ಷ ಮಂಜುನಾಥ ನಾಯಕ್, ಉಪಾಧ್ಯಕ್ಷ ರಾಘವೇಂದ್ರ ಬೆಳಾರಿ, ಸಂಘಟಕ ರಾಜೇಂದ್ರ ಶೆಟ್ಟಿ, ಕೊಲ್ಲೂರು ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಶೈಲಜಾ, ವಿದ್ಯಾರ್ಥಿ ನಾಯಕ ಸುಧನ್ವ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ರೋಸಮ್ಮ ಸೆಬಾಸ್ಟಿಯನ್ ಸ್ವಾಗತಿಸಿದರು. ಶಿಕ್ಷಕಿ ಗೀತಾ ವರದಿ ವಾಚಿಸಿದರು. ಶಿಕ್ಷಕಿ ಸುಮಲತಾ ಕಾರ್ಯಕ್ರಮ ನಿರೂಪಿಸಿದರು.

Read More

ಗ್ಲೋಬಲ್ ಹೆಲ್ತ್ ಕೇರ್ ವೆಲ್ನೆಸ್ ಅವಾರ್ಡ್ಸ್ ಮತ್ತು ಸಮಿಟ್ -2025 ರಲ್ಲಿ ಕೊಡ ಮಾಡುವ ಮೆಡಿಕಲ್ ಎಂಟರ್ಪ್ರಿನರ್ ಆಫ್ ದಿ ಇಯರ್ ಪ್ರಶಸ್ತಿಗೆ ಜನ ವೈದ್ಯದ ಸಂಸ್ಥಾಪಕ ಡಾ. ಅಬಿತ್. ಬಿ. ಶೆಟ್ಟಿ ಆಯ್ಕೆಯಾಗಿದ್ದಾರೆ. ಜನವರಿ 26ರಂದು ಚೆನ್ನೈನ ಸಿಟಿ ಸೆಂಟರ್ ನ ರಾಡಿಸನ್ ಹೋಟೆಲ್ ನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ.ಬೆಂಗಳೂರಿನಲ್ಲಿ ಮನೆ ಭೇಟಿ ಮಾಡಿ ಚಿಕಿತ್ಸೆ ನೀಡುವ “ಜನವೈದ್ಯ”ಎಂಬ ವ್ಯವಸ್ಥೆಯನ್ನು ಪ್ರಾರಂಭಿಸಿದ್ದು, ತನ್ಮೂಲಕ ಕಳೆದ ಮೂರೂವರೆ ವರ್ಷಗಳಲ್ಲಿ 2500ಕ್ಕೂ ಹೆಚ್ಚು ರೋಗಿಗಳಿಗೆ ಸೇವೆ ಸಲ್ಲಿಸಿದ್ದಾರೆ. 2024ರ ನವೆಂಬರ್ ನಿಂದ ಕಾರ್ಕಳದಲ್ಲೂ ಜನವೈದ್ಯ ಸೇವೆಯನ್ನು ಪ್ರಾರಂಭಿಸಿದ್ದಾರೆ. ಇವರು ಮೂಲತಃ ಕಾರ್ಕಳ ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ನಿವಾಸಿಯಾಗಿದ್ದು, ಭಾಸ್ಕರ ಶೆಟ್ಟಿ ಮತ್ತು ಅಮೃತ ಶೆಟ್ಟಿ ದಂಪತಿ ಪುತ್ರ, ಪ್ರಸ್ತುತ ಮುಂಬೈನಲ್ಲಿ ವಾಸವಾಗಿದ್ದು, ಸೇಥ್ ಜಿಎಸ್ ವೈದ್ಯಕೀಯ ಕಾಲೇಜು ಮತ್ತು ಕೆಇಎಂ ಆಸ್ಪತ್ರೆಯಲ್ಲಿ ಎಂಡಿ ಸಮುದಾಯ ವೈದ್ಯಕೀಯದಲ್ಲಿ ಉನ್ನತ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

Read More

ಬಂಟರ ಸಂಘ ಬೆಂಗಳೂರು ಈ ಬಾರಿ ಯುವ ಬಂಟರ ಸಮಿತಿ ಬಂಟರನ್ನು ಒಗ್ಗೂಡಿಸಿ ಅದ್ದೂರಿಯಾಗಿ 31ನೇ ಡಿಸೆಂಬರ್ 2024 ರಂದು ಸಂಘದ ಆವರಣದಲ್ಲಿ ಹೊಸ ವರ್ಷಾಚರಣೆಯನ್ನು ಹಮ್ಮಿಕೊಂಡಿತ್ತು. ನವೆಂಬರ್ 22ರಂದು ಗಣ್ಯರ ಸಮ್ಮುಖದಲ್ಲಿ ಪೋಸ್ಟರ್ ಲೋಕಾರ್ಪಣೆ ಮಾಡಿ ಸಮಾಜದ ಜನರ ಜೊತೆ ಕಾರ್ಯಕ್ರಮ ಸಂಬಂಧಿಸಿದ ವಿಚಾರಗಳನ್ನು ಹಂಚಿಕೊಳ್ಳುತ್ತಾ ಬಂದಿದ್ದ ತಂಡ ಜನರ ಮನ ಮುಟ್ಟಲು ಎಲ್ಲಾ ತರದಲ್ಲೂ ಪ್ರಯತ್ನಿಸಿತ್ತು.31ರ ಸಂಜೆ ಕಿಕ್ಕಿರಿದು ತುಂಬಿದ್ದ ಬಂಟರ ಬಳಗ, ದೀಪಾಲಂಕಾರಗೊಂಡು ಮಿರುಗುತ್ತಿದ್ದ ಬಂಟರ ಸಂಘದ ಆವರಣದಲ್ಲಿ ಸಂಜೆ 7 ರಿಂದಲೇ ಕಾರ್ಯಕ್ರಮಗಳು ಪ್ರಾರಂಭವಾದವು. ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಸಿಎ ಅಶೋಕ್ ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ವಿಜಯ ಶೆಟ್ಟಿ ಹಾಲಾಡಿ, ಕೋಶಾಧಿಕಾರಿ ಅಶೋಕ್ ಕುಮಾರ್ ಶೆಟ್ಟಿ, ಯುವ ಸಮಿತಿ ಅಧ್ಯಕ್ಷ ಅಜಿತ್ ವಿ ಶೆಟ್ಟಿ ಹಾಗೂ ಸಂಚಾಲಕ ಪ್ರಸಾದ್ ಶೆಟ್ಟಿ ಅರೆಹೊಳೆ ಸಮೇತರಾಗಿ ಸಂಘದ ಎಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ವೇದಿಕೆ ಅಲಂಕರಿಸಿ ನೆರೆದ ಬಂಟ ಬಂಧುಗಳಿಗೆ ಸ್ವಾಗತಿಸಿ ಕಾರ್ಯಕ್ರಮಕ್ಕೆ…

Read More

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಪುತ್ತೂರು ತಾಲೂಕು ಮಹಿಳಾ ಬಂಟರ ಸಂಘಕ್ಕೆ ಒಂದು ಲಕ್ಷ ರೂಪಾಯಿ ಧನಸಹಾಯ ನೀಡಿದರು. ದೇಣಿಗೆಯ ಚೆಕ್ಕನ್ನು ನೀಡಿ ಸಮಾಜಮುಖಿ ಕೆಲಸ ಕಾರ್ಯ ನಿರ್ವಹಿಸುವಂತೆ ಹೇಳಿ ಶುಭ ಹಾರೈಸಿದರು. ಈ ಸಂಧರ್ಭ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಇಂದ್ರಾಳಿ ಜಯಕರ ಶೆಟ್ಟಿ, ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಪುತ್ತೂರು ಯುವ ಬಂಟರ ಸಂಘದ ಅಧ್ಯಕ್ಷ ಹರ್ಷ ಕುಮಾರ್ ರೈ, ಕಾರ್ಯದರ್ಶಿ ಪ್ರಜ್ವಲ್ ರೈ ಸೊರಕೆ, ಪುತ್ತೂರು ಬಂಟರ ಸಂಘದ ಮಾಜಿ ಕಾರ್ಯದರ್ಶಿ ಮೊಹನ ರೈ ನರಿಮೊಗರು, ಮಹಿಳಾ ಬಂಟರ ವಿಭಾಗದ ಅಧ್ಯಕ್ಷೆ ಗೀತಾ ಮೋಹನ್ ರೈ, ಪ್ರಧಾನ ಕಾರ್ಯದರ್ಶಿ ಕುಸುಮಾ ಪಿ ಶೆಟ್ಟಿ ಉಪಸ್ಥಿತರಿದ್ದರು.

Read More

ಕಿಡ್ನಿ ಪೈಲೂರ್ ಪ್ರಕರಣದಲ್ಲಿ ಈಗ ಮೊವ್ವತ್ತರೊಳಗಿನ ಮಕ್ಕಳೂ ಜಾಸ್ತಿಯಾಗಿ ಸಿಲುಕುತ್ತಿದ್ದಾರೆ. ಕಿಡ್ನಿ ಡಯಾಲಿಸೀಸ್ ವಾರ್ಡಿಗೊಮ್ಮೆ ನೀವು ಎಂಟ್ರಿ ಕೊಟ್ಟರೆ ಈ ಕರಾಳ ಸತ್ಯ ನಿಮಗೂ ಅರ್ಥವಾದೀತು. ಸ್ಟಿಂಗ್ ಎನ್ನುವ ಹೆಸರಿನ ಬಣ್ಣ ಬಣ್ಣದ ಪೇಯವೊಂದು ಮಕ್ಕಳ ಕೈಗೆ ಬಹಳ ಸುಲಭವಾಗಿ ಸಿಗುತ್ತಿದೆ, ಕೇವಲ ಮೂರೇ ಮೂರು ದಿವಸ ಯಾವುದೇ ಮಗು ಸ್ಟಿಂಗ್ ಕುಡಿದರೆ ಅದರ ಅಡಿಕ್ಷನ್ ಶುರುವಾಗುತ್ತದೆ ಮತ್ತು ಆ ಮಗುವಿನ ಕರಾಳ ಅಂತ್ಯವೂ ಸಮೀಪಿಸುತ್ತದೆ! ಅಂಗಡಿ, ಬೇಕರಿಗಳ ಮತ್ತು ಮಾಲ್ ಗಳಲ್ಲಿ ಇದನ್ನ ಮಾರಾಟಕ್ಕಿಟ್ಟವರಿಗೆ ಮನೆಯಲ್ಲಿ ಮಕ್ಕಳಿದ್ದರೆ, ಕನಿಷ್ಠ ಪಾಪ ಪ್ರಜ್ಜೆ ಇದ್ದರೆ ದಯವಿಟ್ಟು ಸ್ಟಿಂಗ್ ಎನ್ನುವ ವಿಷವನ್ನ ಮಾರಾಟ ಮಾಡಿ ಪಾಪವನ್ನು ಕೊಳ್ಳಬೇಡಿ! ಯಾರದೋ ಮನೆಯ ಬೆಳಕು ಆರಲಿಕ್ಕೆ ನೀವೂ ಕಾರಣರಾಗುತ್ತೀರಿ ಎನ್ನುವುದನ್ನ ಮರೆಯಬೇಡಿ. ನಮ್ಮ ಟೀಮ್ ಅಭಿಮತ ಇದನ್ನ ಯಾವುದೇ ಅಂಗಡಿಯಲ್ಲಿ ಮಾರಾಟ ಮಾಡುವುದನ್ನ ಗಮನಿಸಿದರೂ ಅವರಿಗೆ ಮನವರಿಕೆ ಮಾಡಿ ಇನ್ನುಮುಂದೆ ಮಾರಾಟ ಮಾಡದಂತೆ ಒತ್ತಾಯಿಸುತ್ತದೆ. ನಾನೂ ರೆಡ್ ಬುಲ್ ಕುಡಿಯುತ್ತೇನೆ! ರಾತ್ರಿ ಪ್ರಯಾಣದ ವೇಳೆಯಲ್ಲಿ ನಿದ್ದೆ…

Read More

‘ಗ್ರಹ ಪಂಕ್ತಿಯಲ್ಲಿ ಅತ್ಯಂತ ಪ್ರಭಾವಶಾಲಿಯಾದ ಶನಿ ಗ್ರಹದ ಕಾರಣದಿಂದ ವಿವಿಧ ಬಗೆಯ ಜಾತಕ ದೋಷಗಳು ಸಂಭವಿಸುತ್ತವೆ. ಅದರ ನಿವಾರಣೆಗಾಗಿ ಉಳ್ಳವರು ದುಬಾರಿ ಶನಿ ಶಾಂತಿ ಪೂಜೆಗಳನ್ನು ಮಾಡಿಸುವುದು ವಾಡಿಕೆಯಾಗಿದೆ. ಆದರೆ ಶನಿಕಥಾ ಪ್ರವಚನ, ಪಠಣ, ಕೀರ್ತನ ಮತ್ತು ಅವುಗಳನ್ನು ಭಕ್ತಿಪೂರ್ವಕ ಶ್ರವಣ ಮಾಡುವುದರಿಂದ ಜನಸಾಮಾನ್ಯರೂ ಬಹು ಸುಲಭವಾಗಿ ಶನಿದೋಷ ಮುಕ್ತರಾಗಲು ಸಾಧ್ಯ’ ಎಂದು ಯಕ್ಷಗಾನ ಅರ್ಥಧಾರಿ ಮತ್ತು ಪ್ರವಚನಕಾರ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಹೇಳಿದರು. ಬಜ್ಪೆ ಶ್ರೀ ಶನೈಶ್ಚರ ದೇವಸ್ಥಾನದ ವಾರ್ಷಿಕ ಜಾತ್ರಾ ಸಂದರ್ಭದಲ್ಲಿ ‘ಶ್ರೀ ಶನೈಶ್ಚರ ಮಹಾತ್ಮೆ – ಯಕ್ಷ ಕಾವ್ಯ ಕಥನ’ ಕಾರ್ಯಕ್ರಮದಲ್ಲಿ ಪ್ರವಚನಕಾರರಾಗಿ ಅವರು ಮಾತನಾಡಿದರು. ಖ್ಯಾತ ಹರಿದಾಸ ಮತ್ತು ಗಾಯಕ ತೋನ್ಸೆ ಪುಷ್ಕಳ ಕುಮಾರ್ ಹಾಗೂ ಮಹಿಳಾ ಭಾಗವತರು ಭವ್ಯಶ್ರೀ ಕುಲ್ಕುಂದ ಕಾವ್ಯ ಗಾಯನ ಮಾಡಿದರು. ವರುಣ್ ಆಚಾರ್ಯ ಮತ್ತು ಸಮರ್ಥ್ ಉಡುಪ ಚೆಂಡೆ ಮದ್ದಲೆಗಳಲ್ಲಿ ಸಹಕರಿಸಿದರು. ಭಾಸ್ಕರ ರೈ ಕುಕ್ಕುವಳ್ಳಿ ವ್ಯಾಖ್ಯಾನ ನೀಡಿದರು.ಶ್ರೀ ಶನೈಶ್ಚರ ದೇವಸ್ಥಾನದ ಧರ್ಮದರ್ಶಿ ಆನಂದ ಪೂಜಾರಿ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.…

Read More

ಕ್ರಿಯೇಟಿವ್ ಪ.ಪೂ. ಕಾಲೇಜು, ಕಾರ್ಕಳ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಲಯ, ಸಿದ್ಧಾಪುರ, ಶೈಕ್ಷಣಿಕ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗಾಗಿ ಸನಿವಾಸ ಪ್ರೇರಣಾ ಶಿಬಿರ – 2025 ಉದ್ಘಾಟನೆಗೊಳಿಸಲಾಯಿತು. ಶಿರಸಿಯ ಸಿದ್ಧಾಪುರ ಕಾನಸೂರಿನಲ್ಲಿರುವ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಶಿಬಿರಕ್ಕೆ ವಿದ್ಯುಕ್ತ ಚಾಲನೆ ನೀಡಲಾಯಿತು. ಉದ್ಘಾಟಕರಾಗಿ ಆಗಮಿಸಿ ಮಾತನಾಡಿದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ, ಕಾರ್ಕಳ ಇದರ ಸಹ ಸಂಸ್ಥಾಪಕರಾದ ಗಣಪತಿ ಭಟ್ ಕೆ.ಎಸ್. ಮಾತನಾಡಿ ಹತ್ತನೆಯ ತರಗತಿಯ ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಏನಾಗಬೇಕೆಂದು ಕನಸು ಕಾಣುತ್ತಾರೋ ಅದನ್ನು ನನಸು ಮಾಡಲು ಮುಂದಿನ ಪಿ.ಯು.ಸಿ ಶಿಕ್ಷಣ ಅತ್ಯಂತ ಪ್ರಮುಖವಾದದ್ದು. ದೂರದರ್ಶಿತ್ವದೊಂದಿಗೆ ಮುಂದಿನ ಹೆಜ್ಜೆ ಇರಿಸಿ, ಉತ್ತಮ ಫಲಿತಾಂಶವೂ ಇಂತಹ ಶಿಬಿರಗಳಿಂದ ದೊರಕುತ್ತದೆ. ಶಿರಸಿ – ಸಿದ್ಧಾಪುರದ ಭಾಗದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಳ್ಳುವಂತೆ ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಂ.ಎಚ್. ನಾಯ್ಕ ಅವರು ಮುಂದಿನ ಶೈಕ್ಷಣಿಕ ಫಲಿತಾಂಶದಲ್ಲಿ ನಮ್ಮ ಜಿಲ್ಲೆ ಪ್ರಥಮ ಸ್ಥಾನಿಯಾಗಿ ಮೂಡಿಬರುವಂತೆ ಪ್ರಯತ್ನ…

Read More

ಮೂಡುಬಿದಿರೆ: ಹೊರಗಿನ ಪ್ರಪಂಚವನ್ನು ತೆರೆದ ಕಣ್ಣುಗಳಿಂದ ಕಂಡಾಗ ಅನೇಕ ಸಂಗತಿಗಳು ನಮ್ಮ ಮನಸ್ಸನ್ನು ತಟ್ಟಿ ಯೋಚನೆಗೀಡು ಮಾಡಿದಾಗ ಅಂತಹ ಸಂಗತಿಗಳೇ ನಮ್ಮನ್ನು ಕವಿತ್ವದೆಡೆಗೆ ಸೆಳೆಯುತ್ತವೆ ಎಂದು ಆಳ್ವಾಸ್ ಪದವಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಯೋಗೀಶ್ ಕೈರೋಡಿ ನುಡಿದರು. ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮೂಡುಬಿದಿರೆ ತಾಲೂಕು ಘಟಕ ಮತ್ತು ಶ್ರೀ ಮಹಾವೀರ ಪ.ಪೂ ಕಾಲೇಜಿನ ಸಹಯೋಗದಲ್ಲಿ ಕಾಲೇಜಿನ ಸಭಾಂಗಣದಲ್ಲಿ ನಡೆದ ಕನ್ನಡ ಚಿಂತನ ಕಾರ್ಯಕ್ರಮದಲ್ಲಿ ಅವರು ‘ಕನ್ನಡ ಕಾವ್ಯ ಮತ್ತು ಜೀವನಪ್ರೀತಿ’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು. ಭಾವನಾತ್ಮಕ ಸಂಗತಿಗಳಿರಬಹುದು, ನೋವಿನ ಘಟನೆಗಳೇ ಇರಬಹುದು, ಸಂತೋಷದ ಕ್ಷಣಗಳೇ ಇರಬಹುದು ಆ ಸಂದರ್ಭಗಳಲ್ಲಿ ನಮ್ಮನ್ನು ಕಾಡುವ ಸಂವೇದನೆ, ಜೀವನಪ್ರೀತಿ ಕವಿಮನಸ್ಸಿಗೆ ಮೂಲ. ಒಳ್ಳೆಯ ಬರಹವೂ ಕಾವ್ಯವಾಗಬಲ್ಲುದು ಮತ್ತು ಕಾವ್ಯ ರಚಿಸದಿದ್ದರೂ ಜೀವನ ಪ್ರೀತಿಯ ಸಂವೇದನೆ ಇರುವವರೆಲ್ಲರೂ ಕವಿಗಳೇ ಆಗಿರುತ್ತಾರೆ ಎಂದರು. ಸಭಾಧ್ಯಕ್ಷತೆಯನ್ನುವಹಿಸಿದ್ದ ಕ.ಸಾ.ಪ. ಮೂಡುಬಿದಿರೆತಾಲೂಕು ಘಟಕದ ಅಧ್ಯಕ್ಷ ಪ್ರೊ. ಕೆ.ವೇಣುಗೋಪಾಲ ಶೆಟ್ಟಿಯವರು ಮಾತನಾಡಿ, ಇಂದಿನ ಯುವಜನತೆಯಲ್ಲಿ ಭಾವನಾತ್ಮಕ ಸಂಬಂಧಗಳು…

Read More