Author: admin
ವಿದ್ಯಾಗಿರಿ: ಉಚಿತ ವೈದ್ಯಕೀಯ ಶಿಬಿರಗಳು ಸಾಮಾನ್ಯ ಜನರಿಗೆ ಸಹಕಾರಿ. ಮೂಡುಬಿದಿರೆಯಲ್ಲಿ ಇಂತಹ ಅನೇಕ ಶಿಬಿರಗಳನ್ನು ಆಯೋಜಿಸುವ ಡಾ.ಎಂ ಮೋಹನ ಆಳ್ವ ಅವರ ಕಾರ್ಯವೈಖರಿಗೆ ಅವರೇ ಸಾಟಿ ಎಂದು ಎಸ್ಕೆಎಫ್ಎ ಲಿಕ್ಸರ್ ಇಂಡಿಯಾ ಆಡಳಿತ ನಿರ್ದೇಶಕ ರಾಮಕೃಷ್ಣ ಜಿ. ಆಚಾರ್ ಹೇಳಿದರು. ಇಲ್ಲಿನ ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಗುರುವಾರ ರಾಮಕೃಷ್ಣ ಆಚಾರ್ ಚಾರಿಟೇಬಲ್ ಟ್ರಸ್ಟ್, ಶ್ರೀ ಕಾಳಿಕಾಂಬ ಸೇವಾ ಸಮಿತಿ, ಶ್ರೀ ಕಾಳಿಕಾಂಬ ಮಹಿಳಾ ಸಮಿತಿ, ಚಿನ್ನದ ಕೆಲಸಗಾರರ ಹಿತರಕ್ಷಣಾ ವೇದಿಕೆ, ಶ್ರೀಗುರು ಕಾಷ್ಠಶಿಲ್ಪ ಸಮಿತಿ ಹಾಗೂ ಮಂಗಳೂರಿನ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಮತ್ತು ನೇತ್ರಾಜ್ಯೋತಿ ಚಾರಿಟಬಲ್ ಟ್ರಸ್ಟ್ ಸಹಯೋಗದಲ್ಲಿ ನಡೆದ ‘ಉಚಿತ ನೇತ್ರ ತಪಾಸಣಾ ಶಿಬಿರ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು. ‘ಸಮಾಜ ಸೇವೆಯನ್ನು ಮಾಡುವ ಬಗೆಯಲ್ಲಿ ಆಳ್ವರು ಅನೇಕ ಜನರಿಗೆ ಆದರ್ಶವಾಗಿದ್ದಾರೆ’ ಎಂದು ಅವರು ಶ್ಲಾಘಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ್ ಆಳ್ವ ಮಾತನಾಡಿ, ‘’ ಇದು ಈ ತಿಂಗಳಿನ…
ಐಕಳಬಾವ ವಿಕಾಸ್ ಎಚ್ ಶೆಟ್ಟಿ ಅವರು ನೆರೂಲ್ ಜಿಮ್ಖಾನಾ ನೆರೂಲ್ ನವಿ ಮುಂಬೈನ ಗೌರವ ಪ್ರಧಾನ ಕಾರ್ಯದರ್ಶಿಯಾಗಿ 2024ರಿಂದ 2027ರವರೆಗೆ ಸತತ ಎರಡನೇ ಅವಧಿಗೆ ಆಯ್ಕೆಯಾಗಿದ್ದಾರೆ. ಮೊದಲು ಅವರನ್ನು 2021ರಿಂದ 2024 ರ ಅವಧಿಗೆ ನೇಮಕ ಮಾಡಲಾಗಿತ್ತು. ಫೆಬ್ರವರಿ 24 ರಂದು ಚುನಾವಣೆ ನಡೆದಿತ್ತು. ವಿಕಾಸ್ ಎಚ್ ಶೆಟ್ಟಿಯವರು ಈ ಹಿಂದೆ ನೆರೂಲ್ ಜಿಮ್ಖಾನಾದ ಕಾರ್ಯದರ್ಶಿ, ಕೋಶಾಧಿಕಾರಿ ಮತ್ತು ಉಪಾಧ್ಯಕ್ಷರಾಗಿ ವಿವಿಧ ಹುದ್ದೆಗಳನ್ನು ಅಲಕರಿಸಿದ್ದರು. ನೆರೂಲ್ ಜಿಮ್ಖಾನಾ ನೆರೂಲ್ ಪಶ್ಚಿಮ ನವಿ ಮುಂಬೈನಲ್ಲಿ ನೋಂದಾಯಿತ ಚಾರಿಟೇಬಲ್ ಟ್ರಸ್ಟ್ ಆಗಿದ್ದು, ಕ್ರೀಡೆ, ಅರೋಗ್ಯ ಮತ್ತು ಮನರಂಜನೆಯನ್ನು ಉತ್ತೇಜಸುತ್ತಿದೆ ಮತ್ತು ನವಿ ಮುಂಬೈನಲ್ಲಿ ಸಾಮಾಜಿಕ ಚಟುವಟಿಕೆಗಳಿಗೆ ಅಪಾರವಾದ ಕೊಡುಗೆ ನೀಡುತ್ತಾ ಬಂದಿದೆ. ನೆರೂಲ್ ಜಿಮ್ಖಾನ 4,000ಕ್ಕೂ ಹೆಚ್ಚು ಪ್ರಾಥಮಿಕ ಸದಸ್ಯರನ್ನು ಹೊಂದಿದ್ದು ಮತ್ತು ಸುಮಾರು 13,500 ಕುಟುಂಬ ಸದಸ್ಯರನ್ನು ಒಳಗೊಂಡಿದೆ. ವಿಕಾಸ್ ಶೆಟ್ಟಿ ಅವರು ದಿವಂಗತ ಐಕಳಬಾವ ಶ್ರೀಮತಿ ಸರ್ವಾಣಿ ಶೆಟ್ಟಿ ಮತ್ತು ಕೆಂಜೂರು ಉಪ್ಪರಿಗೆ ಮನೆ ಹಿರಿಯಣ್ಣ ಎಸ್. ಶೆಟ್ಟಿ ದಂಪತಿಯ ಪುತ್ರರಾಗಿದ್ದಾರೆ.…
ಬಂಟರ ಯಾನೆ ನಾಡವರ ಮಾತೃ ಸಂಘ (ರಿ), ಕುಂದಾಪುರ ತಾಲೂಕು ಸಮಿತಿ ಮತ್ತು ಕುಂದಾಪುರ ತಾಲೂಕು ಮಹಿಳಾ ವಿಭಾಗ ಇದರ ಸಹಭಾಗಿತ್ವದಲ್ಲಿ ಸಾಮೂಹಿಕ ‘ಸತ್ಯನಾರಾಯಣ ಪೂಜೆ’ಯು ಬಂಟರ ಯಾನೆ ನಾಡವರ ಸಂಕೀರ್ಣದಲ್ಲಿರುವ ಎಸ್. ಎಸ್. ಹೆಗ್ಡೆ ಸಭಾಭವನದಲ್ಲಿ ನಡೆಯಿತು. ಸಾಮೂಹಿಕ ‘ಸತ್ಯನಾರಾಯಣ ಪೂಜೆ’ ಯನ್ನು ನಿವೃತ್ತ ವಿಜಯ ಬ್ಯಾಂಕ್ ಮ್ಯಾನೇಜರ್ ಮತ್ತು ರೆಡ್ ಕ್ರಾಸ್ ಕುಂದಾಪುರ ಇದರ ಕಾರ್ಯದರ್ಶಿ ಶಿವರಾಮ ಶೆಟ್ಟಿ ಮತ್ತು ಶ್ರೀಮತಿ ಆಶಾ ಎಸ್. ಶೆಟ್ಟಿ ಕುಂದಾಪುರ ದಂಪತಿಯವರಿಂದ ನೆರವೇರಿಸಲಾಯಿತು. ಸೇವಾಕರ್ತರನ್ನು ಬಂಟರ ಯಾನೆ ನಾಡವರ ಮಾತೃ ಸಂಘ (ರಿ) ದ.ಕ. ಮಂಗಳೂರು ಇದರ ಜೊತೆ ಕಾರ್ಯದರ್ಶಿಗಳಾದ ಸಂಪಿಗೇಡಿ ಸಂಜೀವ ಶೆಟ್ಟಿ ಸನ್ಮಾನಿಸಿದರು. ತಾಲೂಕು ಸಮಿತಿಯ ಸಂಚಾಲಕರಾದ ಆವರ್ಸೆ ಸುಧಾಕರ ಶೆಟ್ಟಿ ಸ್ವಾಗತಿಸಿದರು. ಕುಂದಾಪುರ ತಾಲೂಕು ಸಂಘ ಮಹಿಳಾ ವಿಭಾಗದ ಅಧ್ಯಕ್ಷರಾದ ಶ್ರೀಮತಿ ಹೇಮಾವತಿ ಹೆಗ್ಡೆ ಮತ್ತು ತಾಲೂಕು ಸಮಿತಿ ಸದಸ್ಯರಾದ ಕಾವ್ರಾಡಿ ಸಂಪತ್ ಕುಮಾರ್ ಶೆಟ್ಟಿ, ಸೀತಾರಾಮ ಶೆಟ್ಟಿ ಕೆದೂರು, ಕಿರಣ ಹೆಗ್ಡೆ ಅಂಪಾರು, ನಿವೃತ್ತ ಮುಖ್ಯೋಪಾಧ್ಯಾಯರಾದ…
ಕಳೆದ 50 ವರ್ಷಗಳಿಂದ ಸಮಾಜಮುಖಿ ಕಾರ್ಯಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಧಾರ್ಮಿಕ, ಸಾಮಾಜಿಕ, ಕ್ಷೇತ್ರದಲ್ಲಿ ಅಭೂತಪೂರ್ವ ಸಾಧನೆಯನ್ನು ಮಾಡಿದ ಅರಿಯಡ್ಕ ಚಿಕ್ಕಪ್ಪ ನಾಯ್ಕ್ ಅವರನ್ನು ಅಬುಧಾಬಿಯ ಉದ್ಯಮಿ ಮಿತ್ರಂಪಾಡಿ ಜಯರಾಮ ರೈರವರು ತನ್ನ ಹಾಗೂ ಮನೆಯವರ ಪರವಾಗಿ ಸನ್ಮಾನಿಸಿ ಗೌರವಿಸಿದರು. ನವತಿ ಸಂಭ್ರಮದಲ್ಲಿರುವ ಪುತ್ತೂರಿನ ಉದ್ಯಮಿ ಅರಿಯಡ್ಕ ಚಿಕ್ಕಪ್ಪ ನಾಯ್ಕ್ ಅವರ ಕೊಂಬೆಟ್ಟಿನಲ್ಲಿರುವ ನಿವಾಸಕ್ಕೆ ಮಾ.25 ರಂದು ಆಗಮಿಸಿದ ಮಿತ್ರಂಪಾಡಿ ಜಯರಾಮ ರೈ ಶಾಲು ಹೊದಿಸಿ, ಸ್ಮರಣಿಕೆ, ಫಲಪುಷ್ಪ ನೀಡಿ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಉದ್ಯಮಿ ಎಂ.ಆರ್ ಜಯಕುಮಾರ್ ರೈ, ಪುತ್ತೂರು ತಾಲೂಕು ಯುವ ಬಂಟರ ಸಂಘದ ಅಧ್ಯಕ್ಷ ಡಾ. ಹರ್ಷ ಕುಮಾರ್ ರೈ ಮಾಡಾವು, ಚಿಕ್ಕಪ್ಪ ನಾಯ್ಕ್ ರವರ ಪುತ್ರಿ ಚೈತನ್ಯ ರೈ ಮಂಗಳೂರು ಉಪಸ್ಥಿತರಿದ್ದರು. ಚಿಕ್ಕಪ್ಪ ನಾಯ್ಕ್ ಅವರ ನವತಿ ಸಂಭ್ರಮ ಕಾರ್ಯಕ್ರಮದಲ್ಲಿ ಅನಿವಾರ್ಯವಾಗಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ. ಆ ಕಾರಣಕ್ಕೆ ಅವರನ್ನು ಭೇಟಿಯಾಗಿ ಗೌರವಿಸಿದ್ದೇನೆ ಎಂದು ಮಿತ್ರಂಪಾಡಿ ಜಯರಾಮ್ ರೈ ಅವರು ತಿಳಿಸಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಕೇಂದ್ರ ಮಹಿಳಾ ಘಟಕ ಇದರ ಸಪ್ತಮ ವಾರ್ಷಿಕೋತ್ಸವ ಹಳೆಯಂಗಡಿ ಸಮೀಪದ ಶ್ರೀ ಪಾವಂಜೆ ಕ್ಷೇತ್ರದಲ್ಲಿ ನಡೆಯಿತು. ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿಯವರ ಉಪಸ್ಥಿತಿಯಲ್ಲಿ ಮುಖ್ಯ ಅತಿಥಿಗಳಾಗಿ ನ್ಯಾಯವಾದಿ ನಾರಾಯಣ ಪಾಟಾಳಿ, ಕಲಾ ಪೋಷಕರಾದ ಶಕುಂತಳಾ ರಮಾನಂದ ಭಟ್, ಸಂಧ್ಯಾ ಜಯದೇವ ಐತಾಳ್, ಪಟ್ಲ ಫೌಂಡೇಶನ್ ನ ಟ್ರಸ್ಟಿ ಸಹನಾ ರಾಜೇಶ್ ರೈ, ಜೆಸಿಐ ಸುರತ್ಕಲ್ ಘಟಕದ ಅಧ್ಯಕ್ಷೆ ಜ್ಯೋತಿ ಪ್ರವೀಣ್ ಶೆಟ್ಟಿ ಉಪಸ್ಥಿತರಿದ್ದರು. ಸಮಾರಂಭದಲ್ಲಿ ಶ್ರೀಕುಮಾರ ಸಾಂಸ್ಕೃತಿಕ ಪ್ರತಿಷ್ಠಾನ (ರಿ) ಹಳುವಳ್ಳಿ ಇದರ ನಿರ್ದೇಶಕಿ ಜ್ಯೋತಿ ಟಿ ಎನ್ ಕಳಸ, ಧೀಶಕ್ತಿ ಮಹಿಳಾ ಯಕ್ಷ ಬಳಗ ಪುತ್ತೂರು ಇದರ ನಿರ್ದೇಶಕಿ ಪದ್ಮಾ ಕೆ ಆರ್ ಆಚಾರ್ಯ ಪುತ್ತೂರು, ಯಕ್ಷಗಾನ ತಾಳಮದ್ದಲೆ ಕಲಾವಿದೆ ರೇವತಿ ನವೀನ್ ಕುಳಾಯಿ ಇವರನ್ನು ಸನ್ಮಾನಿಸಲಾಯಿತು. ಪಟ್ಲ ಪೌಂಡೇಶನ್ ಟ್ರಸ್ಟ್ ನ ಕೋಶಾಧಿಕಾರಿ ಸುದೇಶ್ ಕುಮಾರ್ ರೈ ಉಪಸ್ಥಿತರಿದ್ದರು. ಮಹಿಳಾ ಕೇಂದ್ರೀಯ ಘಟಕದ ಅಧ್ಯಕ್ಷೆ…
ಶಿಬರೂರು ಬ್ರಹ್ಮಕಲಶೋತ್ಸವ ಮತ್ತು ನಾಗಮಂಡಲ ಪೂರ್ವಭಾವಿ ಸಭೆ ; ನಟಿ ಶಿಲ್ಪಾ ಶೆಟ್ಟಿಯಿಂದ ಬೆಳ್ಳಿಕಲಶ ಸಮರ್ಪಣೆ
ಶಿಬರೂರುನಲ್ಲಿ ನಡೆಯುವ ಮೂರನೇ ಬ್ರಹ್ಮಕಲಶೋತ್ಸವ ನೋಡುವ ಭಾಗ್ಯ ನನಗೆ ಸಿಕ್ಕಿದೆ, ಊರ ಪರವೂರ ಗ್ರಾಮಸ್ಥರ ಸಹಕಾರದಿಂದ ಮುಂದಿನ ಎಪ್ರೀಲ್ ನಲ್ಲಿ ನಡೆಯುವ ಬ್ರಹ್ಮಕಲಶೋತ್ಸವ ಮತ್ತು ನಾಗಮಂಡಲ ವಿಜೃಂಭಣೆಯಿಂದ ನಡೆಯಲಿದೆ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಶಿಬರೂರುಗುತ್ತು ಗುತ್ತಿನಾರ್ ಉಮೇಶ್ ಎನ್ ಶೆಟ್ಟಿ ಹೇಳಿದರು. ಅವರು ಶಿಬರೂರು ಶ್ರೀ ಉಳ್ಳಾಯ ಮತ್ತು ಕೊಡಮಣಿತ್ತಾಯ ದೈವಸ್ಥಾನದಲ್ಲಿ ಏಪ್ರೀಲ್ 26 ರಂದು ನಡೆಯಲಿರುವ ಬ್ರಹ್ಮಕಲಶೋತ್ಸವ ಮತ್ತು ನಾಗಮಂಡಲದ ಪೂರ್ವಭಾವಿಯಾಗಿ ಶಿಬರೂರು ದೈವಸ್ಥಾನದಲ್ಲಿ ನಡೆದ ಪೂರ್ವಭಾವಿಯಾಗಿ ಸಭೆಯಲ್ಲಿ ಮಾತನಾಡಿದರು. ಜೀರ್ಣೋದ್ದಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಪ್ರಭಾಕರ ಎಸ್ ಶೆಟ್ಟಿ ಕೋಂಜಾಲಗುತ್ತು ಮಾತನಾಡಿ ಶಿಬರೂರು ಬ್ರಹ್ಮಕಲಶೋತ್ಸವಕ್ಕೆ ಮುಂಬಯಿ ಭಕ್ತರು ಕೈ ಜೋಡಿಸುತ್ತಿದ್ದು, ಉದ್ಯಮಿಗಳ ಸಹಕಾರ ಹರಿದು ಬರುತ್ತಿದೆ. ಕೊಡಮಣಿತ್ತಾಯನ ಶಕ್ತಿ ಏನೆಂಬುದು ಭಕ್ತರಿಗೆ ತಿಳಿದಿದೆ. ಕೊಡಮಣಿತ್ತಾಯನಿಗೆ ಈಗಾಗಲೇ ಚಿನ್ನದ ಪಲಕ್ಕಿ ಅರ್ಪಿಸುವ ನಿರ್ಧಾರ ಮಾಡಿದ್ದು, ದಾನಿಗಳ ಸಹಕಾರದಿಂದ ಅದು ಕೂಡ ಪೂರ್ಣಗೊಳ್ಳಲಿದೆ ಎಂದರು. ಸಮಿತಿಯ ಕಾರ್ಯಾಧ್ಯಕ್ಷ ಪ್ರದ್ಯುಮ್ನ ರಾವ್ ಕೈಯೂರುಗುತ್ತು ಮಾತನಾಡಿ ಶಿಬರೂರಿನಲ್ಲಿ ನಡೆಯಲಿರುವ ಉತ್ಸವ ವಿಜೃಂಭಣೆಯಿಂದ…
ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಅವಶ್ಯ ಇರುವ ಶಿಕ್ಷಣವನ್ನು ಕೊಡಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆಯಬೇಕು. ಮೌಲ್ಯಯುತ ಶಿಕ್ಷಣ ನಮ್ಮ ಗುರಿಯಾಗಬೇಕು. ಈ ನಿಟ್ಟಿನಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆ ಪ್ರಾಮಾಣಿಕ ಪ್ರಯತ್ನ ನಡೆಸಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಹೇಳಿದರು. ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಮಂಗಳವಾರ ಪ್ರೆಸ್ ಕ್ಲಬ್ನ ಗೌರವ ಅತಿಥಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ‘ಆಧುನಿಕ ಕಾಲಘಟ್ಟದಲ್ಲಿ ಎಲ್ಲವೂ ವ್ಯಾಪಾರೀಕರಣಗೊಳ್ಳುತ್ತಿದ್ದು, ಆರೋಗ್ಯ ಹಾಗೂ ಶಿಕ್ಷಣ ಕ್ಷೇತ್ರವೂ ಇದರಿಂದ ಹೊರತಾಗಿಲ್ಲ. ಕಳೆದ ದಿನಗಳು ಒಳ್ಳೆಯ ಸಮಯಗಳಾಗಿ ಸಂತಸ ಉಂಟು ಮಾಡಿದೆ. ಭವಿಷ್ಯದಲ್ಲಿ ಆಧುನಿಕ ಜಗತ್ತಿಗೆ ನಾನು ಎಷ್ಟರ ಮಟ್ಟಿಗೆ ಒಗ್ಗಿಕೊಳ್ಳುತ್ತೇನೆ ಎಂಬುದು ಬದುಕಿನ ಸವಾಲು ಎಂದರು. ಹಾಸ್ಟೆಲ್ ಶಿಕ್ಷಣಕ್ಕೆ ಆದ್ಯತೆ ಬದುಕಿನಲ್ಲಿ ಕೆಲವೊಂದು ಕಾರ್ಯಗಳು ಹುಚ್ಚು ಮನಸ್ಸಿನ ಸಾಹಸ ಎಂದು ಅನಿಸಿದರೂ ಯಶಸ್ಸಿಗೆ ಅದೇ ಮುಖ್ಯ ಕಾರಣವಾಯಿತು. ಬಾಲ್ಯ, ವಿದ್ಯಾಭ್ಯಾಸ, ವೃತ್ತಿ ಜೀವನ ಹೀಗೆ 72 ವರ್ಷ ಕಳೆದರೂ ಹುಚ್ಚು ಮನಸ್ಸು ಕಡಿಮೆ ಆಗಲೇ…
ಸುಳ್ಯ ಬಂಟರ ಸಂಘದ ಮಹಿಳಾ ವಿಭಾಗದ ಆಶ್ರಯದಲ್ಲಿ ಮಾ.20 ರಂದು ವಿಶ್ವ ಮಹಿಳಾ ದಿನಾಚರಣೆ ಮತ್ತು ಮಹಿಳೆಯರಿಗೆ ಯೆನಪೋಯ ಆಸ್ಪತ್ರೆಯ ಸಹಯೋಗದಲ್ಲಿ ಉಚಿತ ಸ್ಥನ ಕ್ಯಾನ್ಸರ್, ಗರ್ಭಕಂಠ ಕ್ಯಾನ್ಸರ್ ಪತ್ತೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಬಂಟರ ಮಹಿಳಾ ಘಟಕದ ಅಧ್ಯಕ್ಷೆ ಇಂದಿರಾ ಆರ್. ರೈ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಗುಣವತಿ ಕೊಲ್ಲಂತಡ್ಕ, ಸವಿತಾ ಗಿರೀಶ್, ರೂಪಶ್ರೀ ಜೆ ರೈ, ನಿವೃತ್ತ ಶಿಕ್ಷಕಿ ಕಮಲಾಕ್ಷಿ ಶೆಟ್ಟಿ, ಶ್ರದ್ಧಾ ಎಲ್ ರೈ, ಉಷಾ ಬಿ ರೈ ಪಾಜೆಪಲ್ಲ ಹಾಗೂ ಯೆನಪೋಯ ಮಹಿಳಾ ಕ್ಲಿನಿಕ್ ನ ವೈದ್ಯಾಧಿಕಾರಿ, ಶ್ರೀಮತಿ ಶಶಿಕಲಾ ಹರಿಪ್ರಸಾದ್ ಹಾಗೂ ಸಿಬ್ಬಂದಿಗಳು ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಿದರು. ಸುಳ್ಯ ಬಂಟರ ಸಂಘದ ಅಧ್ಯಕ್ಷ ಜಯಪ್ರಕಾಶ್ ರೈ, ಮತ್ತಿತರ ನಿರ್ದೇಶಕರು, ಸದಸ್ಯರು ಭಾಗವಹಿಸಿದ್ದರು. ವೇದಾ ಶೆಟ್ಟಿ ಸ್ವಾಗತಿಸಿ ಉಷಾ ಶೆಟ್ಟಿ ಮತ್ತು ಮೀರಾ ಎಂ ರೈ ಕಾರ್ಯಕ್ರಮ ನಿರೂಪಿಸಿದರು. ಸುಳ್ಯ ತಾಲೂಕಿನ…
ಮಹಿಳೆಯು ಮನೆ ಕೆಲಸದೊಂದಿಗೆ ಸಮಾಜ ಸೇವೆಯಲ್ಲಿ ತೊಡಗಿದಾಗ ಎಲ್ಲವನ್ನೂ ಎದುರಿಸುವ ಶಕ್ತಿವಂತಳಾಗುತ್ತಾಳೆ : ವಿನೋದ ಡಿ ಶೆಟ್ಟಿ.
ಕಾಂದಿವಲಿ ಪಶ್ಚಿಮದಲ್ಲಿ ಬಹಳಷ್ಟು ವರ್ಷಗಳಿಂದ ಈ ಭಾಗದಲ್ಲಿ ವಾಸ್ತವ್ಯವಿರುವ ಎಲ್ಲಾ ತುಳು ಕನ್ನಡಿಗರ ಆಶೋತ್ತರಗಳಿಗೆ ಸ್ಪಂದಿಸಿ ಸದಾ ಕ್ರಿಯಾಶೀಲವಾಗಿದ್ದುಕೊಂಡ ಕಾಂದಿವಲಿ ಕನ್ನಡ ಸಂಘ (ರಿ), ದಹಾನುಕರ್ ವಾಡಿ, ತನ್ನ ಸ್ವಂತ ಕಛೇರಿಯನ್ನು ಹೊಂದಿದ್ದು , ಬಹಳಷ್ಟು ಸದಸ್ಯ ಸಂಪತ್ತಿನೊಂದಿಗೆ, ಸಾಂಸ್ಕೃತಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ನೆಲೆಯಲ್ಲಿ ತುಳು ಕನ್ನಡಿಗರ ಸೇವೆಯನ್ನು ಗೈಯುತ್ತಾ ಬಂದಿರುತ್ತದೆ. ಈ ಸಂಸ್ಥೆಯ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ಜರಗಿದ್ದು, ನಿಕಟಪೂರ್ವ ಅಧ್ಯಕ್ಷರಾದ ಪೊಲ್ಯ ಜಯಪಾಲ ಶೆಟ್ಟಿಯವರು ಅಧ್ಯಕ್ಷರಾಗಿ ಪುನರಾಯ್ಕೆಗೊಂಡರೆ, ಮಹಿಳಾ ವಿಭಾಗದ ನೂತನ ಕಾರ್ಯಾಧ್ಯಕ್ಷೆಯಾಗಿ, ಹಲವಾರು ಸಂಘ ಸಂಸ್ಥೆಗಳಲ್ಲಿ ದುಡಿದು ಅಪಾರ ಅನುಭವವನ್ನು ಹೊಂದಿದ, ಬಂಟರ ಸಂಘ ಮುಂಬಯಿ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆ ವಿನೋದ ದೇವದಾಸ್ ಶೆಟ್ಟಿಯವರು ಆಯ್ಕೆಗೊಂಡರು. ವಿನೋದ ಶೆಟ್ಟಿಯವರು ಪುನರಾಯ್ಕೆಗೊಂಡ ಬಳಿಕದ ಪ್ರಪ್ರಥಮ ಕಾರ್ಯಕ್ರಮವಾಗಿ ಇತ್ತೀಚೆಗೆ, ವಸಾಯಿಯಲ್ಲಿರುವ ಶ್ರದ್ಧಾನಂದ ಮಹಿಳಾ ಆಶ್ರಮ (ವಸಾಯಿ ವೃದ್ಧಾಶ್ರಮ)ಕ್ಕೆ ಭೇಟಿ ನೀಡಿ, ಒಂದು ದಿನವನ್ನು ಆಶ್ರಮ ವಾಸಿಗಳ ಜತೆ ಕಳೆದರು. ಆಶ್ರಮದ ಆ ದಿನದ…
ವಿದ್ಯಾಗಿರಿ: ‘ಉದ್ಯೋಗದಲ್ಲಿ ಯಶಸ್ವಿಯಾಗಲು ಕೇವಲ ಕೌಶಲ ಮತ್ತು ತಾಂತ್ರಿಕತೆ ಮಾತ್ರವಲ್ಲ, ಮೌಲ್ಯ ಅತಿ ಮುಖ್ಯ’ ಎಂದು ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್ ಹೇಳಿದರು. ಡೆಲಾಯಿಟ್ ಕಂಪೆನಿಯಲ್ಲಿ ಅತ್ಯುತ್ತಮ ವೇತನದ ಉದ್ಯೋಗಕ್ಕೆ ಆಯ್ಕೆಯಾದ ವಿಭಾಗದ ವಿದ್ಯಾರ್ಥಿನಿ ಸುಚಿತಾ ಎಂ. ಅವರಿಗೆ ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ವಾಣಿಜ್ಯ ವಿಭಾಗದ ವತಿಯಿಂದ ಮಂಗಳವಾರ ಹಮ್ಮಿಕೊಂಡ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಪೋಷಕರು ಮಕ್ಕಳ ಪದವಿಪೂರ್ವ ಶಿಕ್ಷಣದವರೆಗೆ ತೀವ್ರ ಅಸ್ಥೆ ವಹಿಸುತ್ತಾರೆ. ಆದರೆ, ವಿದ್ಯಾರ್ಥಿಗಳ ಪದವಿ ಹಾಗೂ ಉನ್ನತ ಶಿಕ್ಷಣದ ಬಗ್ಗೆ ಒತ್ತು ನೀಡುವುದು ಅಗತ್ಯವಾಗಿದೆ ಎಂದರು. ನಾವು ಶಿಕ್ಷಣ ಪಡೆಯುವುದು ಯಾಕೆ? ಎಂಬ ಸ್ಪಷ್ಟತೆ ಇದ್ದರೆ, ವಿದ್ಯಾರ್ಥಿಗಳು ಯಶಸ್ಸು ಕಾಣಲು ಸಾಧ್ಯ. ಕೇವಲ ಯಶಸ್ಸು ಕಾಣುವುದು ಮಾತ್ರವಲ್ಲದೆ ಮುಂದಿನ ದಿನಗಳಲ್ಲಿ ಸಮಾಜಕ್ಕೆ ಏನನ್ನು ಕೊಡುಗೆ ನೀಡುತ್ತೇವೆ ಎಂಬುದು ಕೂಡ ಮುಖ್ಯ ಎಂದರು . ಉದ್ಯೋಗ ಮಾಡಲು ಅರ್ಹತೆ ಇದೆ ಎಂಬುದನ್ನು ಎದುರಿನ ವ್ಯಕ್ತಿಗಳಿಗೆ ಸಾಬೀತುಪಡಿಸುವುದಕ್ಕಿಂತ ತನ್ನೊಳಗೆ ಆತ್ಮವಿಶ್ವಾಸ ವೃದ್ಧಿಸುವುದು ಮುಖ್ಯ ಎಂದರು. ಆಳ್ವಾಸ್ ಕಾಲೇಜಿನ ಆಡಳಿತಾಧಿಕಾರಿ…