Author: admin
ಪುಣೆ ಬಂಟರ ಸಂಘದ ಉತ್ತರ ಪ್ರಾದೇಶಿಕ ಸಮಿತಿಯ ಪ್ರಾಯೋಜಕತ್ವದಲ್ಲಿ ಪುಣೆ ಬಂಟರ ಸಂಘದ ಓಣಿಮಜಲು ಜಗನ್ನಾಥ ಶೆಟ್ಟಿ ಸಾಂಸ್ಕೃತಿಕ ಭವನದ ಲತಾ ಸುಧೀರ್ ಶೆಟ್ಟಿ ವೇದಿಕೆಯಲ್ಲಿ ಕಾಪು ರಂಗತರಂಗ ಕಲಾವಿದರಿಂದ ಸಮಾಜರತ್ನ ಕಾಪು ಲೀಲಾಧರ ಶೆಟ್ಟಿ ಸಾರಥ್ಯದ ಪ್ರಸನ್ನ ಶೆಟ್ಟಿ ಬೈಲೂರು ರಚಿಸಿರುವ ಶರತ್ ಉಚ್ಚಿಲ ನಿರ್ದೇಶನದಲ್ಲಿ ತುಳು ಸಾಂಸಾರಿಕ ಹಾಸ್ಯಮಯ ನಾಟಕ “ಅಧ್ಯಕ್ಷೆರ್ ” ತುಂಬಿದ ಸಭಾಗೃಹದಲ್ಲಿ ಯಶಸ್ವಿ ಪ್ರದರ್ಶನಗೊಂಡಿತು. ನಾಟಕ ಪ್ರದರ್ಶನದ ಮಧ್ಯಂತರದಲ್ಲಿ ಪುಣೆ ಬಂಟರ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು ಬಾಳಿಕೆ ಇವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆದಿದ್ದು ಹೋಟೆಲ್ ಉದ್ಯಮಿ, ಕಲಾಪೋಷಕ ಪುಣೆ ಬಂಟರ ಸಂಘದ ವಿಶ್ವಸ್ತರಾದ ಪಾದೂರು ಹೊಸಮನೆ ಮಾಧವ ಆರ್ ಶೆಟ್ಟಿ ಹಾಗೂ ಪುಷ್ಪ ಎಂ ಶೆಟ್ಟಿ ದಂಪತಿಗಳನ್ನು ಸಮಾಜಕ್ಕೆ ಸಲ್ಲಿಸುವ ವಿಶೇಷ ಸೇವೆಗಾಗಿ ಸಂಘದ ಉತ್ತರ ಪ್ರಾದೇಶಿಕ ಸಮಿತಿಯ ವತಿಯಿಂದ ಶಾಲು ಹೊದೆಸಿ ನೆನನಪಿನ ಕಾಣಿಕೆ ನೀಡಿ ಸಮ್ಮಾನಿಸಲಾಯಿತು. ರಂಗತರಂಗ ತಂಡದ ಸಾರಥಿ ಕಾಪು ಲೀಲಾಧರ ಶೆಟ್ಟಿಯವರನ್ನು…
ಬ್ರಹ್ಮಾವರ ಜ. 26: ಬ್ರಹ್ಮಾವರದ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್ನಲ್ಲಿ 75ನೇ ಗಣರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಶಾಲಾ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್ ಧ್ವಜಾರೋಹಣವನ್ನು ನೆರವೇರಿಸಿ, ಸಂವಿಧಾನದ ಪೂರ್ವ ಪೀಠಿಕೆಯನ್ನು ವಾಚಿಸಿ ಮಾತನಾಡಿ ಇಂದು ನಮ್ಮ ದೇಶದ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸುವುದು ದೇಶದ ಸೈನಿಕರನ್ನು ಗೌರವಿಸುವುದು ನಮ್ಮ ಜವಾಬ್ದಾರಿಯಾಗಿದೆ. ನಾವು ನಮ್ಮ ಕರ್ತವ್ಯವನ್ನು ಅರಿತು, ಶಾಂತಿ ಯನ್ನು ಕಾಪಾಡಿಕೊಂಡು ದೇಶದ ಪ್ರಗತಿಗೆ ಶ್ರಮಿಸಬೇಕೆಂದರು. ಕಾರ್ಯಕ್ರಮದ ಮುಖ್ಯ ಅತಿಥಿ ಭಾರತೀಯ ಸೇನೆಯ ನಿವೃತ್ತ ಸೈನಿಕ ಹವಾಲ್ದಾರ್ ಸುಬ್ರಹ್ಮಣ್ಯ ಉಪಾಧ್ಯ ತಮ್ಮ ವೃತ್ತಿ ಜೀವನದ ಅನುಭವವನ್ನು ಹಂಚಿಕೊಂಡು ಮಾತನಾಡಿ ಸೈನಿಕ ವೃತ್ತಿಯು ಜೀವನದಲ್ಲಿ ಶಿಸ್ತನ್ನು ಅಳವಡಿಸಿಕೊಂಡು ಸಮಾಜದಲ್ಲಿ ಹೇಗೆ ಬದುಕಬೇಕೆನ್ನುವುದನ್ನು ತಿಳಿಸಿಕೊಡುತ್ತದೆ. ಆದರೆ ಕರಾವಳಿಯ ಜನರು ಈ ವ್ರತ್ತಿಯಲ್ಲಿ ಹೆಚ್ಚು ಆಸಕ್ತಿಯನ್ನು ತೋರಿಸುತ್ತಿಲ್ಲ. ಇದಕ್ಕೆ ಸೈನ್ಯ ಸೇರ್ಪಡೆಗೆ ಬೇಕಾದ ಮಾಹಿತಿ ಕೊರತೆ ಎಂದರು. ಜಿ ಎಮ್ ಗ್ಲೋಬಲ್ ಸ್ಕೂಲ್ ನ ಪ್ರಾಂಶುಪಾಲರಾದ ಪ್ರಣವ್ ಶೆಟ್ಟಿ ಗಣರಾಜ್ಯೋತ್ಸವವು ಕೇವಲ ಸಂಭ್ರಮಕ್ಕೆ ಸೀಮಿತವಾಗಿರದೆ ನಮ್ಮ ಸಾಂಸ್ಕೃತಿಕ…
ಶ್ರೀಮಂತರೆಲ್ಲ ದಾನಿಗಳಾಗಿರುವುದಿಲ್ಲ. ಹಾಗಾಗಿರುತ್ತಿದ್ದರೆ ಬಂಗಾರದ ಹೂವಿಗೆ ಪರಿಮಳ ಸೇರಿದಂತಾಗುತ್ತಿತ್ತು. ಇದಕ್ಕೆ ಹೃದಯ ಶ್ರೀಮಂತಿಕೆ ಬೇಕಾಗುತ್ತದೆ. ಕೊಟ್ಟದ್ದು ತನಗೆ ಬಚ್ಚಿಟ್ಟದ್ದು ಪರರಿಗೆ ಎಂಬ ಸತ್ಯದ ಅರಿವು ಇದ್ದ ಉದ್ಯಮಿ ಶ್ರೀ ಸದಾಶಿವ ಶೆಟ್ಟಿ ಕನ್ಯಾನ ಅವರು ಹೃದಯ ಶ್ರೀಮಂತಿಕೆ ಇರುವಲ್ಲಿ ಉಳಿದ ಸಿರಿವಂತಿಕೆ ತಾನೇ ತಾನಾಗಿ ಬಂದು ಸೇರಿಕೊಳ್ಳುತ್ತದೆ ಎಂಬ ಸಿದ್ಧಾಂತದಲ್ಲಿ ಆಚಲ ನಂಬಿಕೆ ಇಟ್ಟವರು. ಆರ್ಥಿಕ ಶ್ರೀಮಂತರಾದರೂ, ದಾನ ಗುಣವೂ ರಕ್ತದಲ್ಲಿ ಸೇರಿಕೊಂಡಿರುವ ಅಪರೂಪದ ವ್ಯಕ್ತಿತ್ವ ಶೆಟ್ಟರದ್ದು. ದನಿ ಉಡುಗಿ ಹೋದ ಬಡವರ ದನಿಯಾಗಿ, ಧಣಿಯಾಗಿ, ದಾನಿಯಾಗಿ ಬಡವರ ದಮನಿಸದೆ ದನಿ ಅಡಗಿಸದೆ ದಾನದಿತಾರನಾಗಿ ಖ್ಯಾತಿವೆತ್ತ ಮಾನವತಾವಾದಿ ಶ್ರೀ ಕೂಳೂರು ಕನ್ಯಾನ ಸದಾಶಿವ ಶೆಟ್ಟರು. ಉದಾರ ದಾನಿ ಸದಾಶಿವ ಕೆ ಶೆಟ್ಟರು ಕಾಸರಗೋಡು ಜಿಲ್ಲೆಯ ಮಂಜೇಶ್ವರ ಬಳಿಯ ಕನ್ಯಾನದ ಕೂಳೂರಿನವರು. ಫಕೀರ ಶೆಟ್ಟಿ ಲೀಲಾವತಿ ದಂಪತಿಯರಿಗೆ ಸುಪುತ್ರನಾಗಿ ಜನಿಸಿದ ಶೆಟ್ಟರು ತನ್ನ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಹುಟ್ಟೂರಿನಲ್ಲಿ ಪೂರೈಸಿ ಪದವಿ ವ್ಯಾಸಂಗವನ್ನು ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಲ್ಲಿ ಮುಗಿಸಿದರು. ಬಳಿಕ…
ಸತತ 3 ಬಾರಿ ಗಾಂಧಿ ಗ್ರಾಮ ಪುರಸ್ಕಾರ ಪಡೆದ 80 ಬಡಗಬೆಟ್ಟು ಗ್ರಾ.ಪಂ ಸರ್ವ ಸದಸ್ಯರು ಸಿಬ್ಬಂದಿಗಳಿಗೆ ಅಭಿನಂದನಾ ಸಮಾರಂಭ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ
80ನೇ ಬಡಗಬೆಟ್ಟು ಗ್ರಾಮ ಪಂಚಾಯತ್ ಗೆ ಸತತ ಮೂರು ಬಾರಿ “ಗಾಂಧಿ ಗ್ರಾಮ ಪುರಸ್ಕಾರ” ಲಭಿಸಿದ್ದು ಹೆಮ್ಮೆಯ ವಿಚಾರವಾಗಿದ್ದು, ಇದಕ್ಕೆ ಕಾರಣಿಕರ್ತರಾದ 80 ಬಡಗಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರನ್ನು 80 ಬಡಗಬೆಟ್ಟು ಮೂಡುಮನೆ ಇವರ ವತಿಯಿಂದ ಇಂದು ದಿನಾಂಕ 14-10-2023 ರಂದು ಅಭಿನಂದಿಸಲಾಯಿತು. ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮನ್ನು ಉದ್ಘಾಟಿಸಿ 80 ಬಡಗಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರನ್ನು ಅಭಿನಂದಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಆರ್ಬಿ ವೈಷ್ಣವಿ ದುರ್ಗಾ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಜಯರಾಜ್ ಹೆಗ್ಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. 80 ಬಡಗಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೇಶವ ಕೋಟ್ಯಾನ್, ಉಪಾಧ್ಯಕ್ಷರಾದ ರೂಪಾ ನಾಯಕ್, 80 ಬಡಗಬೆಟ್ಟು ಶಾಲಾ ಮುಖ್ಯೋಪಾಧ್ಯಾಯರಾದ ಸುರೇಶ್, 80 ಬಡಗಬೆಟ್ಟು ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ವಿದ್ವಾನ್ ವೆಂಕಟಾಚಲ ಭಟ್, ರಾಷ್ಟ್ರೀಯ ಮಹಿಳಾ ಆಯೋಗದ…
ಮೂಡುಬಿದಿರೆ: ಕಣ್ಣು ಹಾಯಿಸಿದಷ್ಟೂ ಕೇಸರಿ, ಬಿಳಿ, ಹಸಿರು ವರ್ಣ, ಸಾಗರದ ಅಲೆಗಳಂತೆ ಹಾರಾಡಿದ ತ್ರಿವರ್ಣ ಧ್ವಜ, ಬಾನೆತ್ತರಕ್ಕೆ ಚಿಮ್ಮಿದ ತ್ರಿವರ್ಣ ರಂಗಿನ ಚಿತ್ತಾರ, ಉಕ್ಕಿ ಬಂದ ದೇಶಪ್ರೇಮದ ಭಕ್ತಿ, ಮಕ್ಕಳಲ್ಲಿ ಮನೆ ಮಾಡಿದ ಸಂಭ್ರಮ, ಮಾಜಿ ಸೈನಿಕರಿಂದ ಧ್ವಜಕ್ಕೆ ವಂದನೆ, ತ್ರಿವರ್ಣದಲ್ಲಿ ಬರೆದ ‘ಆಳ್ವಾಸ್’. ಅಮೃತ ಕಾಲದದಲ್ಲಿ ಕಂಗೊಳಿಸಿದ ‘ಮಿನಿ ಭಾರತ’. ಗಣರಾಜ್ಯೋತ್ಸವ ಅಮೃತ ಕಾಲದ ಈ ಅಮೃತ ಘಳಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ವಿದ್ಯಾಗಿರಿ ಆವರಣದ ಶ್ರೀಮತಿ ವನಜಾಕ್ಷಿ ಶ್ರೀಪತಿ ಭಟ್ ವೇದಿಕೆಯಲ್ಲಿ ಹಮ್ಮಿಕೊಂಡ 75ನೇ ಗಣರಾಜ್ಯೋತ್ಸವ ಆಚರಣೆಯಲ್ಲಿ ಕಂಡುಬಂತು. ವಂದೇ ಮಾತರಂ ಗಾಯನದ ಬಳಿಕ ಕಾರ್ಯಕ್ರಮದ ಮುಕುಟಕ್ಕೆ ಕಿರೀಟ ಇಟ್ಟಂತೆ ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್ ಆರೋಹಣ ಮಾಡಿದ ತ್ರಿವರ್ಣ ಧ್ವಜದ ಎತ್ತರದಲ್ಲಿ ಹಾರಾಡಿತು. ರಾಷ್ಟ್ರಗೀತೆ ‘ಜನ ಗಣ ಮನ’ ಮೊಳಗಿತು. ‘ಕೋಟಿ ಕಂಠೋಂಸೇ ನಿಖ್ಲೇ…’ ಗಾನಕ್ಕೆ ಸೇರಿದ್ದ 30 ಸಾವಿರಕ್ಕೂ ಅಧಿಕ ಮಂದಿ ಪುಟಾಣಿ ಧ್ವಜಗಳನ್ನು ಬೀಸುತ್ತಾ ದನಿಗೂಡಿಸಿದರು. ಅಕ್ಷರಶಃ ಅಮೃತ ಕಾಲವೇ ಅನುರಣಿಸಿತು. ‘ಪ್ರಜಾಪ್ರಭುತ್ವವೇ ದೇಶದ ಸೌಂದರ್ಯ.…
ಮುಂಬಯಿ, ಡಿ.10: ಸಾರ್ವಜನಿಕ ವಲಯ, ಸಂಘ-ಸಂಸ್ಥೆಗಳಲ್ಲಿ ಸೋಲು-ಗೆಲುವು, ಸವಾಲುಗಳೆಲ್ಲವೂ ಸಾಮಾನ್ಯವಾಗಿದ್ದು, ಇವೆಲ್ಲವನ್ನು ಚಾಣಾಕ್ಷತನದಿಂದ ಎದುರಿಸಿದಾಗಲೇ ಸಾಧನೆ ಸಿದ್ಧಿ ಸಾಧ್ಯ. ಸ್ವಸಂಸ್ಕೃತಿ, ಪರಂಪರೆಗಳನ್ನು ಉಳಿಸಿ ಬೆಳೆಸಲು ಸ್ವಸಮಾಜದ ಸಂಸ್ಥೆಗಳು ಆಧಾರ ಸ್ತಂಭಗಳಾಗಿವೆ. ಆದುದರಿಂದ ನಾವು ಮಾತೃಸಂಸ್ಥೆಗಳಲ್ಲಿ ಸಕ್ರೀಯರಾಗಿಸಿ ತಮ್ಮತನ, ಅಸ್ಮಿತೆಯನ್ನು ನಿರ್ಣಾಯಕವಾಗಿಸಬೇಕು. ನಮ್ಮ ಜನರ ಸಂಬಂಧಗಳನ್ನು ಅರ್ಥ ಮಾಡಿಕೊಳ್ಳಬೇಕು. ಆ ಮೂಲಕ ಅಶಕ್ತರನ್ನು ಸಮರ್ಥರನ್ನಾಗಿಸಲು ಬಂಟರು ಶ್ರಮಿಸಬೇಕು ಎಂದು ಬಂಟ್ಸ್ ಸಂಘ ಬೆಂಗಳೂರು ಸಂಸ್ಥಾಪಕ, ಅಧ್ಯಕ್ಷ ಮುರಳೀಧರ ಹೆಗ್ಡೆ ತಿಳಿಸಿದರು. ಗುಜರಾತ್ ಅಹಮದಾಬಾದ್ನ ಗುಜರಾತ್ ವಿಶ್ವವಿದ್ಯಾಲಯದ ಸೆನೆಟ್ ಸಭಾಂಗಣದಲ್ಲಿ ಮೂವತ್ತು ಸಂವತ್ಸರ ಸೇವಾ ಸಂಭ್ರಮದಲ್ಲಿನ ಬಂಟ್ಸ್ ಸಂಘ ಅಹಮದಾಬಾದ್ (ರಿ.) ಗುಜರಾತ್ ಸಂಸ್ಥೆ ತ್ರಿದಶಮನೋತ್ಸವ ಸಂಭ್ರಮಿಸಿದ್ದು ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿದ್ದು ದೀಪ ಬೆಳಗಿಸಿ ಸಮಾರಂಭಮಕ್ಕೆ ಚಾಲನೆಯನ್ನೀಡಿ ಹೆಗ್ಡೆ ಮಾತನಾಡಿದರು. ಬಿಎಸ್ಎ ಅಧ್ಯಕ್ಷ ನಿತೇಶ್ ಎಸ್.ಶೆಟ್ಟಿ ಶಿರ್ವಾಕೋಡು ಅಧ್ಯಕ್ಷತೆಯಲ್ಲಿ ನಡೆಸಲ್ಪಟ್ಟ ಸಮಾರಂಭದಲ್ಲಿ ತುಳು ಸಂಘ ಬರೋಡಾ ಅಧ್ಯಕ್ಷ ಶಶಿಧರ ಬಿ.ಶೆಟ್ಟಿ, ಬಂಟ್ಸ್ ಸಂಘ ಮುಂಬಯಿ ಉನ್ನತ ಶಿಕ್ಷಣ ಸಮಿತಿ ಕಾರ್ಯಾಧ್ಯಕ್ಷ ಆದರ್ಶ್ ಬಿ.ಶೆಟ್ಟಿ, ಮುಲುಂಡ್…
ಬ್ಯಾಂಕಿಂಗ್ ಉದ್ಯಮದ ಉಗಮ ಸ್ಥಾನ, ತೊಟ್ಟಿಲು, ತವರೂರು ಎಂದೇ ಖ್ಯಾತಿ ಪಡೆದಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಬ್ಯಾಂಕಿಂಗ್ ದಿಗ್ಗಜರುಗಳಲ್ಲಿ ಮೂಲ್ಕಿ ಸುಂದರರಾಮ ಶೆಟ್ಟಿ ಅವರ ಹೆಸರು ಅವಿಸ್ಮರಣೀಯ. ಒಬ್ಬ ವ್ಯಕ್ತಿ ಸಮಾಜಕ್ಕೆ ಸಲ್ಲಿಸಿದ ಮಹತ್ವದ ಸೇವೆಯನ್ನು ಮುಂದಿನ ಜನಾಂಗ ನೆನಪಿನಲ್ಲಿಟ್ಟುಕೊಳ್ಳಬೇಕು. ವೈಜ್ಞಾನಿಕವಾಗಿಯೂ ಇದೊಂದು ಪ್ರಬುದ್ಧ ಸಿದ್ಧಾಂತವೆಂದರೂ ತಪ್ಪಾಗಲಾರದು. ಸಮಸ್ತ ಬಂಟ ಸಮಾಜ ಅವರನ್ನು ಸ್ಮರಿಸುವುದು ನಿಜಕ್ಕೂ ಔಚಿತ್ಯಪೂರ್ಣ. 1962 ರಿಂದ 1979ರವರೆಗೆ ವಿಜಯ ಬ್ಯಾಂಕ್ನ ಅಧ್ಯಕ್ಷರಾಗಿ ಅನೇಕ ಸಾಧನೆಗಳನ್ನು ಮಾಡಿ ಬ್ಯಾಂಕ್ಗೆ ಭದ್ರ ಬುನಾದಿಯನ್ನು ಹಾಕಿಕೊಟ್ಟ ಮಹಾನ್ ಚೇತನ. ಇಂದು ವಿಜಯ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ ದೊಂದಿಗೆ ವಿಲೀನವಾದರೂ ಸುಂದರಾಮ ಶೆಟ್ಟಿ ಹೆಸರು ಬ್ಯಾಂಕ್ನೊಂದಿಗೆ ಅಚ್ಚಳಿಯದೇ ಉಳಿದಿದೆ. ರಾಜಮರ್ಜಿಯ ಸಮೃದ್ಧ ಮನೆತನದಲ್ಲಿ ಹುಟ್ಟಿದರೂ ಕೆಳವರ್ಗದ ಜನರ ನೋವು ನಲಿವುಗಳಿಗೆ ಸ್ಪಂದಿಸುವ ಹೃದಯ ಸುಂದರರಾಮ ಶೆಟ್ಟಿ ಅವರಿಗಿತ್ತು. ಅವರಿಗೆ ಬ್ಯಾಂಕ್ನ ಲಾಭವನ್ನು ಹೆಚ್ಚಿಸುವುದೊಂದೇ ಉದ್ಯಮದ ಉದ್ದೇಶವಾಗಿರಲಿಲ್ಲ. ಉದ್ಯಮವು ಸಮಾಜದ ಅನೇಕರಿಗೆ ಉದ್ಯೋಗಾವಕಾಶಗಳನ್ನು ನೀಡುವುದರೊಂದಿಗೆ ಸಾಮಾಜಿಕ ಹಿತಕ್ಕಾಗಿ, ಲೋಕ ಕಲ್ಯಾಣಕ್ಕಾಗಿ ಸ್ಥಾಪಿಸಲ್ಪಡಬೇಕು…
ಸಿಎ ಸುರೇಂದ್ರ ಕೆ ಶೆಟ್ಟಿಯವರು ಮುಂಬಯಿ ನಗರದ ಉದ್ಯಮಿಗಳು, ಸಂಘಟಕರು ಹಾಗೂ ಕಲಾವಿದರಿಗೆ ಚಿರಪರಿಚಿತರು. ಎಲ್ಲರೊಂದಿಗೂ ಸುಲಭವಾಗಿ ಬೆರೆಯುವ ಸುಖ ಕಷ್ಟ ವಿಚಾರಿಸುವ ಸಜ್ಜನ. ಆದರೆ ಶಿಸ್ತಿನ ಸಿಪಾಯಿ. ವಿದ್ಯಾರ್ಥಿ ದೆಸೆಯಿಂದಲೇ ಕುಶಾಗ್ರಮತಿಯಾಗಿದ್ದ ಕಾರಣ ಆ ಕಾಲಕ್ಕೆ ತುಂಬಾ ಜಟಿಲವೆಂಬ ಭಾವನೆಯಿದ್ದ ಸಿಎ ಪದವಿಯನ್ನು ನಿರಾಯಾಸವಾಗಿ ಗಳಿಸಿದ ಮೇಧಾವಿ. ಸಾಹಿತ್ಯ ಸಂಸ್ಕೃತಿ ಪ್ರೇಮಿ, ಯಕ್ಷಗಾನ ಕಲೋಪಾಸಕ, ಹವ್ಯಾಸಿ ಕಲಾವಿದ. ಕವಿ ಮುದ್ದಣನ ಜನ್ಮಭೂಮಿ ಹಾಗೂ ಆದಿ ಆಲಡೆ ಇರುವ ಪುಣ್ಯಭೂಮಿ ನಂದಳಿಕೆ ಕ್ಷೇತ್ರ ಸುರೇಂದ್ರ ಶೆಟ್ಟಿ ಅವರ ತೀರ್ಥರೂಪರ ಮನೆತನ ಇರುವ ಸ್ಥಳ. ಇಲ್ಲಿನ ಕೊರಗಬೆಟ್ಟು ಕುಟ್ಟಿ ಲೋಕಯ್ಯ ಶೆಟ್ಟಿ ಹಾಗೂ ಬೇಲಾಡಿ ತಂಕರ ಬೆಟ್ಟು ಮನೆತನದ ಶ್ರೀಮತಿ ಕೃಷ್ಣಿ ಕೆ ಶೆಟ್ಟಿ ದಂಪತಿಯರ ಮುದ್ದಿನ ಮಗನಾಗಿ ಜನಿಸಿದ ಸುರೇಂದ್ರ ಶೆಟ್ಟರು ಎಳವೆಯಿಂದಲೇ ಉತ್ತಮ ಶಿಸ್ತನ್ನು ಪಾಲಿಸಿಕೊಂಡು ಬರುತ್ತಾ ಕ್ರಮೇಣ ಓರ್ವ ಬಹುಮುಖ ಪ್ರತಿಭೆಯ ವಿದ್ಯಾರ್ಥಿ ಎಂಬಂತೆ ಶಾಲಾ ಕಾಲೇಜು ವಿದ್ಯಾರ್ಥಿ ಜೀವನದಲ್ಲಿ ಗುರುತಿಸಿಕೊಂಡರು. ತನ್ನ ಉದ್ಯೋಗದಲ್ಲಿ ಶಿಸ್ತು, ಸಮಯಪ್ರಜ್ಞೆ, ಸಕಾಲಿಕ…
ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿಯ ಕಿಸಾನ್ ಘಟಕದ ಕಾರ್ಯಾಧ್ಯಕ್ಷರಾಗಿ ಮುಂಬಯಿಯ ಸಮಾಜ ಸೇವಕ, ಕಾಂಗ್ರೆಸ್ ಪಕ್ಷದ ನಾಯಕ ಸುರೇಶ್ ಶೆಟ್ಟಿ ಯೆಯ್ಯಾಡಿಯವರನ್ನು ಅಖಿಲ ಭಾರತ ಕಾಂಗ್ರೆಸ್ಸಿನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಆದೇಶ ಹಾಗೂ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಮಹಾರಾಷ್ಟ್ರ ಪ್ರಭಾರಿ ಪ್ರಕಾಶ್ ಗಾಳೆ ಅವರ ಶಿಫಾರಸ್ಸಿನ ಮೇರೆಗೆ ಮಹಾರಾಷ್ಟ್ರ ಪ್ರದೇಶ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ನಾನಾ ಪಾಟೋಲೆ ನಿಯಕ್ತಿಗೊಳಿಸಿದ್ದಾರೆ. ಸುರೇಶ್ ಶೆಟ್ಟಿ ಯೆಯ್ಯಾಡಿ ಈ ಮೊದಲು ಮುಂಬಯಿಯ ವಿಭಾಗೀಯ ಕಾಂಗ್ರೆಸ್ ಸಮಿತಿಯಲ್ಲಿ ಬ್ಲಾಕ್ ಕಾರ್ಯದರ್ಶಿಯಾಗಿ, ಬ್ಲಾಕ್ ಉಪಾಧ್ಯಕ್ಷರಾಗಿ, ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿಯ ಪರ್ಯಾವರಣ ವಿಭಾಗದಲ್ಲಿ ಉಪಾಧ್ಯಕ್ಷರಾಗಿ ಹಾಗೂ ಇಂಟಕ್ ನ ರಾಜ್ಯ ಉಪಾಧ್ಯಕ್ಷರಾಗಿ ಪಕ್ಷದಲ್ಲಿ ಕೆಲಸವನ್ನು ಮಾಡಿರುತ್ತಾರೆ. ಕರ್ನಾಟಕದಲ್ಲಿ ನಡೆದ ಲೋಕಸಭಾ ಹಾಗೂ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಸಕ್ರಿಯವಾಗಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ದುಡಿದವರಾಗಿದ್ದಾರೆ. ಮುಂಬಯಿಯಲ್ಲೂ ಜಾತಿ ಸಂಘಟನೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ಫು, ಕನ್ನಡ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕದ…
ಬದುಕೆಂಬ ಗಾಡಿಗೆ ಇಂಧನವಾಗಿ ನಿನಗೇನು ಬೇಕು? ಹಣ, ಅಂತಸ್ತು, ಅಧಿಕಾರ, ಸಂಬಂಧ? ಇಷ್ಟಾದರೆ ಸಾಕೇ? ಇನ್ನೂ ಏನಾದರೂ ಬೇಕೇ ಮುನ್ನಡೆಸಲು? ವೃದ್ಧರೊಬ್ಬರಿಗೆ ಕನಸಿನಲ್ಲಿ ಬಂದ ದೇವರು ಕೇಳಿದ ಪ್ರಶ್ನೆ ಇದು. ಆ ಕ್ಷಣದಲ್ಲಿ ವಿಚಿತ್ರ ಎನಿಸಿತು ವೃದ್ಧರಿಗೆ. ಹೌದಲ್ಲ, ನನಗೆ ಇನ್ನೇನು ಬೇಕು? ಉತ್ತರ ಸಿಗಲಿಲ್ಲ. ದೇವರಲ್ಲಿ ನಾಳೆ ಉತ್ತರಿಸುತ್ತೇನೆ, ಒಂದು ದಿನ ಸಮಯ ಕೊಡು ಎಂದು ಮನವಿ ಮಾಡಿದರು. ದೇವರು ತಥಾಸ್ತು ಎಂದ. ಈ ಅಜ್ಜ ಅದ್ಭುತವಾಗಿ ಬದುಕಿದವ. ಮಕ್ಕಳು, ಮೊಮ್ಮಕ್ಕಳು, ಅವರ ಮಕ್ಕಳು ಹೀಗೆ ಎಲ್ಲರನ್ನೂ ನೋಡಿದ್ದರು. ಎಲ್ಲರ ಬದುಕನ್ನೂ, ಬೆಳವಣಿಗೆಯನ್ನೂ ಕಣ್ತುಂಬಿಕೊಂಡಿದ್ದರು. ದುಃಖ, ಸುಖ, ಸಂತೋಷ ಎಲ್ಲವೂ ಮಿಶ್ರವಾಗಿತ್ತು. ಎಲ್ಲವನ್ನೂ ಸ್ವಾಭಾವಿಕ ಎಂಬುವಂತೆ ಸ್ವೀಕರಿಸಿದ್ದರು. ಹಾಗಾಗಿ ಹೆಚ್ಚು ತಲೆ ಕೆಡಿಸಿಕೊಳ್ಳದೇ ಬದುಕಿದವರು. ಬೆಳಗ್ಗೆ ಎದ್ದವರೇ ತಮ್ಮ ಬದುಕಿನ ಕ್ಷಣಗಳನ್ನೆಲ್ಲ ನೆನಪಿಸಿಕೊಂಡರು. ಎಲ್ಲವೂ ಚೆನ್ನಾಗಿಯೇ ಕಾಣುತ್ತಿದ್ದವು. ಎಲ್ಲ ಸುಖವೂ ಸಿಕ್ಕಿದೆಯಲ್ಲ. ಇನ್ನೇನೂ ಬಾಕಿ ಇಲ್ಲ ಎನಿಸಿತು. ಇವೆಲ್ಲವನ್ನೂ ಪಡೆದ ಬಗೆಯನ್ನು ನೆನಪಿಗೆ ತಂದುಕೊಳ್ಳತೊಡಗಿದರು. ಎಲ್ಲವೂ ಸಿನೆಮಾ ಎಂಬಂತೆ ಕಣ್ಣು…