Author: admin

ಬಂಟರ ಯಾನೆ ನಾಡವರ ಮಾತೃ ಸಂಘದ ಆಶ್ರಯದಲ್ಲಿ ಶ್ರೀ ಸಿದ್ದಿ ವಿನಾಯಕ ಪ್ರತಿಷ್ಠಾನದಿಂದ ನಡೆಯುವ 18 ನೇ ವರ್ಷದ ಶ್ರೀ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಬಂಟ್ಸ್ ಹಾಸ್ಟೆಲ್ ನ ಗೀತಾ ಎಸ್ ಎಂ ಶೆಟ್ಟಿ ಸಭಾಭವನದಲ್ಲಿ ಜರಗಿತು. ಮಂಗಳೂರಿನ ಬಂಟ್ಸ್ ಹಾಸ್ಟೆಲ್ ನಲ್ಲಿ ಸೆಪ್ಟೆಂಬರ್ 7ರಿಂದ 9ರವರೆಗೆ ಸಾರ್ವಜನಿಕ ಶ್ರೀ ಗಣೇಶೋತ್ಸವ ನಡೆಯಲಿದೆ. ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಅವರು ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿ, 20 ವರ್ಷಗಳ ಹಿಂದೆ ಆರಂಭಗೊಂಡ ಇಲ್ಲಿನ ಗಣೇಶೋತ್ಸವ ದೇವರ ಆಶೀರ್ವಾದ ಹಾಗೂ ನೂರಾರು ಕಾರ್ಯಕರ್ತರ ಸಹಕಾರದಿಂದ ಜಿಲ್ಲೆಯ ಮಾದರಿ ಗಣೇಶೋತ್ಸವ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಬಾರಿಯ ಗಣೇಶೋತ್ಸವವೂ ಎಂದಿನಂತೆ ಶೃದ್ದಾ ಭಕ್ತಿಯಿಂದ ಜರಗಲಿದ್ದು ಯಶಸ್ವಿಯಾಗಿ ನಡೆಯಲು ಸರ್ವರ ಸಹಕಾರ ಯಾಚಿಸಿದರು. ಶ್ರೀ ಸಿದ್ದಿ ವಿನಾಯಕ ಪ್ರತಿಷ್ಠಾನದ ಟ್ರಸ್ಟಿ ಡಾ.ಆಶಾಜ್ಯೋತಿ ರೈ ಅವರು 3 ದಿನಗಳ ಕಾಲ ನಡೆಯುವ ವಿವಿಧ ಕಾರ್ಯಕ್ರಮಗಳ…

Read More

ಲಕುಮಿ ಸಿನಿ ಕ್ರಿಯೇಷನ್ಸ್ ಮತ್ತು ಲೋ ಬಜೆಟ್ ಪ್ರೊಡಕ್ಷನ್ ನಿರ್ಮಾಣದಲ್ಲಿ ಹರ್ಷಿತ್ ಸೊಮೇಶ್ವರ ನಿರ್ದೇಶನದಲ್ಲಿ ತಯಾರಾದ “ಅನರ್ಕಲಿ” ತುಳು ಸಿನಿಮಾದ ಉದ್ಘಾಟನಾ ಕಾರ್ಯಕ್ರಮ ಶುಕ್ರವಾರ ಭಾರತ್ ಸಿನಿಮಾಸ್ ನಲ್ಲಿ ನಡೆಯಿತು. ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತಾಡಿದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು, “ತುಳು ಭಾಷೆಯ ಉಳಿವಿಗಾಗಿ ತುಳು ನಾಟಕ ಮತ್ತು ಸಿನಿಮಾಗಳ ಪಾತ್ರ ಹೆಚ್ಚಿನದಾಗಿದೆ. ಇದ್ಕಕಾಗಿ ಶ್ರಮ ಪಡುತ್ತಿರುವ ಲೈಟ್ ಬಾಯ್ ನಿಂದ ಹಿಡಿದು ಎಲ್ಲರನ್ನೂ ಈ ಸಂದರ್ಭದಲ್ಲಿ ನೆನೆಯಬೇಕಿದೆ. “ಅನರ್ಕಲಿ” ತುಳು ಸಿನಿಮಾ ಚೆನ್ನಾಗಿದೆ ಎಂದು ಈಗಾಗಲೇ ಪ್ರೇಕ್ಷಕರು ಬೆನ್ನು ತಟ್ಟಿದಾರೆ. ಒಂದು ಒಳ್ಳೆಯ ಪ್ರಯತ್ನವನ್ನು ತುಳುನಾಡಿನ ಪ್ರೇಕ್ಷಕರು ಖಂಡಿತಾ ಬೆಂಬಲಿಸುತ್ತಾರೆ. ಎಲ್ಲರೂ ಸಿನಿಮಾ ನೋಡಿ ಪ್ರೋತ್ಸಾಹಿಸಿ” ಎಂದರು. ನವನೀತ್ ಶೆಟ್ಟಿ ಕದ್ರಿ ಮಾತನಾಡಿ, “ನಾವು ಬಾಲ್ಯದಲ್ಲಿ ನೋಡುತ್ತಿದ್ದ ಅನರ್ಕಲಿ ವೇಷವನ್ನು ಮತ್ತೊಮ್ಮೆ ತುಳುನಾಡಿನ ಜನರಿಗೆ ಪರಿಚಯಿಸಲು ಚಿತ್ರತಂಡ ಮುಂದಾಗಿದೆ. ಚಿತ್ರ ನೋಡಿದವರು ಪ್ರಶಂಸೆಯ ಮಾತನಾಡಿದ್ದಾರೆ. ಇದು ನಿಜಕ್ಕೂ ಖುಷಿಯ…

Read More

ಕ್ರೀಡೆಗಳು ಬದುಕಿನ ಅವಿಭಾಜ್ಯ ಅಂಗ. ಪಠ್ಯದೊಂದಿಗೆ ಕ್ರೀಡೆಯಂತಹ ಸಹಪಠ್ಯ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ತೊಡಗಿ ಕೊಂಡಾಗ ಅವರಲ್ಲಿ ಸ್ವಯಂ ಶಿಸ್ತು ಬೆಳೆಯುತ್ತದೆ. ಇಂದಿನ ದಿನಗಳಲ್ಲಿ ದೇಹ ಮತ್ತು ಮನಸ್ಸು ಸದೃಢವಾಗಲು ವಿದ್ಯಾರ್ಥಿಗಳು ಆಟವಾಡುವುದನ್ನು ರೂಡಿಸಿಕೊಳ್ಳುವ ಅಗತ್ಯವಿದೆ ಎಂದು ಮೊಳಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಂದ್ರಶೇಖರ್ ಶೆಟ್ಟಿ ದ್ಯಾವಲ್ ಬೆಟ್ಟು ಹೇಳಿದರು. ಅವರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮೊಳಹಳ್ಳಿಯಲ್ಲಿ ಹಾಲಾಡಿ ವೃತ್ತ ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಮತ್ತು ಬಾಲಕಿಯರ ತ್ರೋಬಾಲ್ ಪಂದ್ಯಾಟದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ವಿಶಾಲಾಕ್ಷಿ ಶೆಟ್ಟಿ ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ಸದಸ್ಯರಾದ ಜಯಂತಿ ಎಂ ಶೆಟ್ಟಿ, ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ವಾಣಿ ಆರ್ ಶೆಟ್ಟಿ ಹಾಲಾಡಿ, ಶಿಕ್ಷಣ ಸಂಯೋಜಕರಾದ ಶೇಖರ್ ಯು, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕುಂದಾಪುರ ವಲಯಾಧ್ಯಕ್ಷರಾದ ಗಣೇಶ್ ಕುಮಾರ್ ಶೆಟ್ಟಿ, ಕುಂದಾಪುರ ವಲಯದ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಸುಕನ್ಯ, ಉಡುಪಿ…

Read More

ಮೂಡುಬಿದಿರೆ:ಉದ್ಯಮಶೀಲತೆಯನ್ನು ಪ್ರೋತ್ಸಾಹಿಸುವ ಧ್ಯೇಯದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಮಂಗಳೂರಿನ ದಿ ಇಂಡಸ್ ಅನ್ಟ್ರಾಪ್ರೀನ್ಯೂವರ್ಸ್ ಘಟಕ(ಟಿಐಇ) ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಶೈಕ್ಷಣಿಕ ಒಡಂಬಡಿಕೆ ಮಾಡಿಕೊಳ್ಳಲಿವೆ. ಈ ಒಡಂಬಡಿಕೆಯ ಭಾಗವಾಗಿ ಇಂಡಸ್ ಅನ್ಟ್ರಾಪ್ರೀನ್ಯೂವರ್ಸ್ ಸಂಸ್ಥೆಯ ‘ಟಿಐಇ ಎಲೈಟ್’’ ಎಂಬ ವಿನೂತನ ಕಾರ್ಯಕ್ರಮವು ಆಳ್ವಾಸ್‍ನ ಸಂಸ್ಥೆಗಳಲ್ಲಿ 2024-25ನೇ ಶೈಕ್ಷಣಿಕ ಅವಧಿಯಲ್ಲಿ ಅನುಷ್ಠಾನಗೊಳ್ಳಲಿದೆ. ಟಿಐಇ ಜೊತೆಗಿನ ಒಡಂಬಡಿಕೆಯ ಮೂಲಕ ಆಳ್ವಾಸ್ ಸಂಸ್ಥೆಯು ಕರಾವಳಿ ಭಾಗದ ಏಕೈಕ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಶೈಕ್ಷಣಿಕ ವಲಯ ಹಾಗೂ ಉದ್ಯೋಗ ಮಾರುಕಟ್ಟೆಯ ನಡುವಿನ ಅಂತರವನ್ನು ಕಡಿಮೆ ಮಾಡಿ, ವಿದ್ಯಾರ್ಥಿಗಳಿಗೆ ಔದ್ಯೋಗಿಕವಲಯದ ಸ್ಪಷ್ಟ ಚಿತ್ರಣವನ್ನು ವಿದ್ಯಾಭ್ಯಾಸದ ಅವಧಿಯಲ್ಲಿ ನೀಡಲು ಈ ಒಡಂಬಡಿಕೆ ಸಹಕಾರಿಯಾಗಲಿದೆ. ಮಂಗಳೂರಿನ ಟಿಐಇ ಸಂಸ್ಥೆಯು 1960ರ ಕರ್ನಾಟಕ ಸೊಸೈಟಿ ನಿಬಂಧನೆಗಳ ಅಡಿಯಲ್ಲಿ ನೋಂದಾಯಿಸಲ್ಪಟ್ಟ ಲಾಭರಯಿತ ಸಂಸ್ಥೆಯಾಗಿದ್ದು, ಕರಾವಳಿ ಭಾಗದಲ್ಲಿ ಹೆಚ್ಚಿನ ಉದ್ದಿಮೆಗಳು ಸ್ಥಾಪನೆಗೆ ಪ್ರೋತ್ಸಾಹ ನೀಡುವುದರ ಮೂಲಕ ಈ ಭಾಗವನ್ನು ಭಾರತದ ಸಿಲಿಕಾನ್ ಬೀಚ್ ಮಾಡುವ ಗುರಿಯನ್ನು ಹೊಂದಿದೆ. ಮಂಗಳೂರು ಹಾಗೂ ಉಡುಪಿ ಭಾಗದ 100ಕ್ಕೂ ಅಧಿಕ ಕಂಪೆನಿಗಳು ಈ…

Read More

ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ) ಇದರ ಆಡಳಿತ ಮಂಡಳಿಯ ಸಭೆಯು ಮಂಗಳೂರಿನ ಬಂಟ್ಸ್ ಹಾಸ್ಟೇಲ್ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಮೂಲ್ಕಿಯಲ್ಲಿ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣವಾಗುತ್ತಿರುವ ತೋನ್ಸೆ ಶ್ರೀಮತಿ ಶಶಿರೇಖಾ ಆನಂದ ಶೆಟ್ಟಿ ವೇದಿಕೆಯಲ್ಲಿ, ಕನ್ಯಾನ ಸದಾಶಿವ ಶೆಟ್ಟಿ ಹವಾ ನಿಯಂತ್ರಿತ ಸಭಾಂಗಣ ರಚನೆಯಾಗಲಿದೆ ಎಂದರು. ಸುಮಾರು 1,200 ಆಸನಗಳ ಸೌಲಭ್ಯ ಇರುವ ಸುಸಜ್ಜಿತ ಹವಾ ನಿಯಂತ್ರಿತ ಸಭಾಂಗಣವನ್ನು ನಿರ್ಮಿಸಲು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. 2025 ರ ಎಪ್ರಿಲ್ ತಿಂಗಳಲ್ಲಿ ಸಭಾಂಗಣವನ್ನು ನಿರ್ಮಾಣ ಮಾಡಿ ಸಮಾಜಕ್ಕೆ ಅರ್ಪಿಸಲಾಗುವುದು. ಇದಕ್ಕೆ ಸಮಾಜದ ಎಲ್ಲರ ಸಹಕಾರ ಅಗತ್ಯ ಎಂದು ಐಕಳ ಹರೀಶ್ ಶೆಟ್ಟಿ ತಿಳಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಒಕ್ಕೂಟದ ಮಹಾದಾನಿ ಕನ್ಯಾನ ಸದಾಶಿವ ಶೆಟ್ಟಿ ಅವರು ಮಾತನಾಡಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟಕ್ಕೆ ಒಂದು ಸುಸಜ್ಜಿತ ಹವಾ ನಿಯಂತ್ರಿತ ಸಭಾಂಗಣದ ಅಗತ್ಯ ಇದೆ. ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ದಾನಿಗಳ…

Read More

ಅಖಿಲ ಭಾರತ ತುಳು ಒಕ್ಕೂಟವು ತುಳು ಭಾಷೆ, ಸಂಸ್ಕೃತಿ ಅಭಿವೃದ್ಧಿ ನೆಲೆಯಲ್ಲಿ ಸ್ಥಾಪಿಸಲ್ಪಟ್ಟಿದ್ದು ದೇಶದಾದ್ಯಂತ ಸುಮಾರು 46 ತುಳು ಸೇವಾ ಸಂಸ್ಥೆಗಳು ಇದರ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿವೆ. ತುಳು ಭಾಷೆಗೆ ಸಂಬಂಧಿಸಿದಂತೆ ಕಾರ್ಯಕ್ರಮಗಳು, ಸಮಾರಂಭಗಳು, ಸಮ್ಮೇಳನಗಳು ದೇಶ ವಿದೇಶದಲ್ಲಿ ನಡೆಯುತ್ತಿದೆ. ಇದೇ ಬರುವ ಅಗಸ್ಟ್ 24, ಶನಿವಾರದಂದು ತುಳುನಾಡ ಜಾನಪದ ಉಚ್ಛಯ ಕಾರ್ಯಕ್ರಮ ನಡೆಯಲಿದ್ದು ಇದಕ್ಕೆ ತುಳುವರ ಸಹಕಾರ ನಿರೀಕ್ಷಿಸುತ್ತಿದ್ದೇವೆ ಎಂದು ಸಂಘಟನೆಯ ಅಧ್ಯಕ್ಷ ಎ.ಸಿ ಭಂಡಾರಿ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. ಅಂದು ಬೆಳಗ್ಗೆ 8.30ಕ್ಕೆ ಮಂಗಳೂರು ವಿಶ್ವವಿದ್ಯಾನಿಲಯದಿಂದ ಪುರಭವನದವರೆಗೆ ತುಳುವೆರ ದಿಬ್ಬಣ ಮೆರವಣಿಗೆ ನಡೆಯಲಿದೆ. ಇದರಲ್ಲಿ ಸುಮಾರು 8 ಜಾನಪದ ಕಲಾಕೂಟಗಳು ಭಾಗವಹಿಸಲಿವೆ. ಈ ಸಮಾರಂಭವನ್ನು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ಉದ್ಘಾಟಿಸಲಿದ್ದು, ಅತಿಥಿಗಳಾಗಿ ಲಯನ್ ದಿವಾಕರ ಶೆಟ್ಟಿ ಸಾಂಗ್ಲಿ, ನಗ್ರಿಗುತ್ತು ರೋಹಿತ್‌ ಶೆಟ್ಟಿ, ಕರ್ನೂರು ಮೋಹನ್ ರೈ, ಅಶೋಕ್ ಪಕ್ಕಳ ಮುಂಬಯಿ ಇವರುಗಳು ಉಪಸ್ಥಿತರಿರಲಿದ್ದಾರೆ. ಇದೇ ಸಂದರ್ಭದಲ್ಲಿ ಕಂಬಳ ಕೂಟದಲ್ಲಿ ಹೆಸರುವಾಸಿಯಾದ ನಂದಳಿಕೆ ಶ್ರೀಕಾಂತ…

Read More

ಕರಾವಳಿ ಕರ್ನಾಟಕದ ಹೆಸರಾಂತ ಸಾಹಿತಿ, ಕವಿ, ಲೇಖಕ ಮತ್ತು ಯಕ್ಷಗಾನ ವಿದ್ವಾಂಸ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಅವರ ನೂತನ ಕೃತಿಗಳೆರಡು ಮುಂಬಯಿ ವಿದ್ಯಾ ವಿಹಾರ್ ಪೂರ್ವದ ಶ್ರೀ ಅಂಬಿಕಾ ಆದಿನಾಥೇಶ್ವರ ಗಣಪತಿ ಮಂದಿರದಲ್ಲಿ ಆಗಸ್ಟ್ 24 ರಂದು ಶನಿವಾರ ಸಂಜೆ ಗಂ.4 ಕ್ಕೆ ಅನಾವರಣಗೊಳ್ಳಲಿವೆ. ಯಕ್ಷಗುರು ಅಜೆಕಾರು ಬಾಲಕೃಷ್ಣ ಶೆಟ್ಟಿ ಅವರ ನೇತೃತ್ವದ ಅಜೆಕಾರು ಕಲಾಭಿಮಾನಿ ಬಳಗದ ವತಿಯಿಂದ ಪ್ರಸಕ್ತ ವರ್ಷ ನಡೆಯಲಿರುವ ಸರಣಿ ತಾಳಮದ್ದಳೆ ಉದ್ಘಾಟನಾ ಸಮಾರಂಭದಲ್ಲಿ ಈ ಕಾರ್ಯಕ್ರಮವನ್ನು ಅಳವಡಿಸಿಕೊಳ್ಳಲಾಗಿದೆ. ‘ಸೃಷ್ಟಿಸಿರಿಯಲ್ಲಿ ಪುಷ್ಪವೃಷ್ಠಿ’ ಕನ್ನಡ ಕವನ ಸಂಕಲನ : ಕವಿ ಕುಕ್ಕುವಳ್ಳಿಯವರು ಬೇರೆ ಬೇರೆ ಸಂದರ್ಭಗಳಲ್ಲಿ ರಚಿಸಿದ ವಿವಿಧ ಕನ್ನಡ ಕವನಗಳು ಭಾವ ಸಿರಿ, ಗಾನಸಿರಿ, ಭಕ್ತಿಸಿರಿ ಎಂಬ ಮೂರು ವಿಭಾಗಗಳಲ್ಲಿ ಪ್ರಕಟವಾಗಿರುವ ‘ಸೃಷ್ಟಿ ಸಿರಿಯಲ್ಲಿ ಪುಷ್ಪವೃಷ್ಠಿ’ : ಭಾವ ಅನುಭಾವ ಗೀತೆಗಳ ಗುಚ್ಛವನ್ನು ಅಂಬಿಕಾ ಮಂದಿರದ ಧರ್ಮದರ್ಶಿ ವೇ.ಮೂ ಪೆರ್ಣಂಕಿಲ ಹರಿದಾಸ ಭಟ್ ಅನಾವರಣಗೊಳಿಸುವರು. ‘ಸೀಯನ’ ತುಳು ಗೊಂಚಿಲ್ : ಮಾತೃಭಾಷೆ ತುಳುವಿನಲ್ಲಿ ಸಬಿ ಸೀಯನ,…

Read More

ಬಂಟರು ಸ್ವಾಭಿಮಾನಿಗಳು. ನಮ್ಮಲ್ಲಿ ಕೆಲವರು ಆರ್ಥಿಕವಾಗಿ ಮಾತ್ರ ಬಡವರು ಹೃದಯ ವೈಶಾಲ್ಯರು. ನಾವೆಲ್ಲಾ ಒಟ್ಟಾಗಿ ಒಂದೇ ಮನಸ್ಸಿನಿಂದ ಇದ್ದರೆ ಇಡೀ ಸಮಾಜವೇ ಸದೃಢವಾಗುವುದು ಎಂದು ಪುತ್ತೂರು ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಹೇಳಿದರು. ತಾನು ಅಧ್ಯಕ್ಷನಾಗಿ ಆಯ್ಕೆಗೊಂಡ ಕೂಡಲೇ ತಾಲೂಕಿನ ಎಲ್ಲಾ ಗ್ರಾಮದಲ್ಲಿ ಇರುವ ಬಂಟರ ಮಾಹಿತಿ ಸಂಗ್ರಹ ಕಾರ್ಯ ನಡೆಸಲು ತೀರ್ಮಾನಿಸಿದೆ. ಇದು ನನ್ನ ಬಹು ಸಮಯದ ಕನಸು. ಅದಕ್ಕೆ ಎಲ್ಲಾ ಬಂಟರು ಪೂರ್ಣ ಸಹಕಾರ ನೀಡಬೇಕು ಎಂದರು. ಆರ್ಥಿಕವಾಗಿ ಕಷ್ಟದಲ್ಲಿರುವ ಬಡವರಿಗೆ ಸಹಾಯ ಮಾಡಲು ಇದು ಸಹಕಾರಿಯಾಗಲಿದೆ. ತಾಲೂಕಿನಾದ್ಯಂತ ಗ್ರಾಮ ಸಮಿತಿ ರಚಿಸಲು ತೀರ್ಮಾನಿಸಿದ್ದು ಅದರಂತೆ ಬಡಗನ್ನೂರು ಗ್ರಾಮದ ಬಂಟ ಸಮಾಜ ಬಾಂಧವರ ಸಭೆಯಲ್ಲಿ ಮಾತನಾಡಿದ ಇವರು ಗ್ರಾಮ ಮಟ್ಟದಲ್ಲಿ ಸಮಿತಿಗಳು ಸಕ್ರೀಯಗೊಂಡರೆ ಮಾತ್ರ ಸಂಘಟನೆಯು ಬಲಿಷ್ಠವಾಗುವುದು ಎಂದು ಹೇಳಿದರು. ಈ ಸಂದರ್ಭದಲ್ಲಿ ಬಂಟರ ಬಡಗನ್ನೂರು ಗ್ರಾಮ ಸಮಿತಿ ರಚನೆ ಮಾಡಲಾಯಿತು. ಅಧ್ಯಕ್ಷರಾಗಿ ಸುಧಾಕರ್ ಶೆಟ್ಟಿ ಮಂಗಳಾದೇವಿ, ಕಾರ್ಯದರ್ಶಿಯಾಗಿ ಪ್ರಕಾಶ್ ರೈ ಕೊಯಿಲ, ಕೋಶಾಧಿಕಾರಿಯಾಗಿ…

Read More

ಮೂಡುಬಿದಿರೆ: ಕಡೂರಿನಲ್ಲಿ ಸ್ನೇಹಮಯಿ ಯೋಗ ಕೇಂದ್ರದ ಸಹಯೋಗದಲ್ಲಿ ಕರ್ನಾಟಕ ಯೋಗಾಸನ ಸ್ಪೋಟ್ರ್ಸ್ ಅಸೋಸಿಯೇಷನ್ ಆಗಸ್ಟ್ 16ರಿಂದ 18 ವರೆಗೆ ನಡೆದ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದು, 8 ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕಿಯರ ವಿಭಾಗ: 18 ರಿಂದ 28 ವಯೋಮಿತಿಯ ರಿದಮಿಕ್ ಪೇರ್ ಯೋಗಾಸನ: ನಿರ್ಮಲ ಸುಭಾμï ಕೊಡ್ಲಿಕರ್, ಅನನ್ಯ ಸಂಬಯ್ಯಾ ಹಿರೇಮಠ (ಪ್ರಥಮ), 18 ರಿಂದ 28 ವಯೋಮಿತಿಯ ಆರ್ಟಿಸ್ಟಿಕ್ ಪೇರ್ ಯೋಗಾಸನ: ನಿರ್ಮಲ ಸುಭಾμï ಕೊಡ್ಲಿಕರ್, ಅನನ್ಯ ಸಂಬಯ್ಯಾ ಹಿರೇಮಠ (ದ್ವಿತೀಯ), 18 ರಿಂದ 28 ವಯೋಮಿತಿಯ ಆರ್ಟಿಸ್ಟಿಕ್ ಯೋಗಾಸನ: ನಿರ್ಮಲ ಸುಭಾμï ಕೊಡ್ಲಿಕರ್ (ದ್ವಿತೀಯ), 18 ರಿಂದ 28 ವಯೋಮಿತಿಯ ಟ್ರಡಿಷನಲ್ ಯೋಗಸನ: ಅನನ್ಯ ಸಂಬಯ್ಯಾ ಹಿರೇಮಠ್ (ತೃತೀಯ), ಬಾಲಕರ ವಿಭಾಗ: 14 ರಿಂದ 18 ವಯೋಮಿತಿಯ ರಿದಮಿಕ್ ಪೇರ್ ಯೋಗಾಸನ: ಸುಶೀಲ್ ಕುಮಾರ್ ಚೌಹಾನ್ (ಪ್ರಥಮ), 14 ರಿಂದ 18…

Read More

ಬಾಷೆ, ಪ್ರೀತಿ, ಮೋಹ ತಿಳಿಸುವಲ್ಲಿ ಮೊದಲಾಗಿ ನಮ್ಮ ಮನೆಯೇ ಪಾಠಶಾಲೆ ಮತ್ತು ಮೊದಲ ಗುರುವೇ ತಾಯಿ. ಇದು ನಮ್ಮ ತುಳುನಾಡ ತಾಯಂದಿರು ತಿಳಿದುಕೊಳ್ಳಬೇಕು. ಇಂದಿನ ಮಕ್ಕಳು ಬೇರೆ ಎಲ್ಲಾ ಬಾಷೆಗಳನ್ನು ಶಾಲೆ ಅಥವಾ ಪರಿಸರದಲ್ಲಿ ಕಲಿತುಕೊಳ್ಳುತ್ತಾರೆ. ಆದರೆ ನಮ್ಮ ಮಾತೃ ಭಾಷೆ ಮನೆಯಿಂದಲೇ ಬರಬೇಕು. ಇದು ತಂದೆ ತಾಯಂದಿರ ಕರ್ತವ್ಯವಾಗಿದೆ. ಇದರಿಂದ ನಮ್ಮ ತುಳುನಾಡ ಸಂಸ್ಕ್ರತಿ ಸಂಸ್ಕಾರ ಮಕ್ಕಳಿಗೆ ತಿಳಿದುಕೊಳ್ಳಲು ಮತ್ತು ಉಳಿಯಲು ಸಾದ್ಯ. ತುಳುನಾಡ ಸಂಸ್ಕ್ರತಿ, ಆಚಾರ ವಿಚಾರಗಳ ಬಗ್ಗೆ ಅರಿತು ಜೀವನದಲ್ಲಿ ಮುನ್ನಡೆಯುವ ನಾವು ಗರ್ವದಿಂದ ಹೇಳಬಹುದು ನಾನೊಬ್ಬ ತುಳುವ ಎಂದು. ಅಂತಹ ಶಕ್ತಿ ತುಳು ಭಾಷೆಗಿದೆ. ನಮ್ಮ ತುಳುನಾಡ ಜಾನಪದ ಸಂಸ್ಕ್ರತಿ, ದೈವಾರಾಧನೆ, ನಾಗಾರಾಧನೆ ಆಚಾರ ವಿಚಾರ ಸಂಸ್ಕಾರ ಇವೆಲ್ಲವನ್ನು ಅರಿತವರು ನಮ್ಮ ಮಕ್ಕಳಿಗೆ ತಿಳಿಸಿಕೊಡುವ ಕಾರ್ಯ ಮಾಡಬೇಕು ಹಾಗೂ ಮಕ್ಕಳಲ್ಲಿ ತಿಳಿದುಕೊಳ್ಳುವ ಮನಸ್ಸು ಮೂಡಿ ಬರಬೇಕು. ಇದು ಮಾತೃ ಹೃದಯದಿಂದ ಮಾತ್ರ ಸಾದ್ಯ ಎಂದು ಸದಾನಂದ ಗ್ರೂಪ್ ಆಫ್ ಹೋಟೆಲ್ಸ್ ನ ಸಿ.ಎಂ.ಡಿ ಸದಾನಂದ ಕೆ…

Read More