Author: admin
ಹೌದು ಧರೆಯಲ್ಲಿ ಮಿಂಚಬೇಕಿದ್ದ ನಕ್ಷತ್ರವೊಂದು ಸ್ವರ್ಗದ ಪಾಲಾಗಿದೆ. ಸೂರ್ಯನು ಬೇಸರದಿ ಮೋಡದ ಮರೆಗೆ ಸರಿದು ಹೋಗಿದ್ದಾನೆ. ಹೊರಗಡೆ ದೋ ಎನ್ನುವ ಮಳೆಯ ನಡುವೆ “ಪ್ರಕಾಶ” ಕೂಡ ಮರೆಯಾಗಿದ್ದಾನೆ. ನಿಜ.. ಆಕಾಶವೂ ಕೂಡ ಇಂದು ಬಿಕ್ಕಿ ಬಿಕ್ಕಿ ಅಳುತ್ತಿದೆ. ಮರಣವನ್ನು ಯಾರೂ ನೋಡಿಲ್ಲ. ಬಹುಶಃ ಅದು ಸುಂದರವಾಗಿರಬಹುದು.. ಏಕೆಂದರೆ, ಒಮ್ಮೆ ಅದನ್ನು ಭೇಟಿಯಾಗಲು ಹೋದವರು ಮತ್ತೆ ಜೀವಿಸಲು ಮರೆತುಬಿಡುತ್ತಾರೆ. ನಿನಗೆ ಅದನ್ನು ನೋಡುವ ಆಸೆಯಾಯಿತೆ ? ಆದರೆ ನೀ ಹೋಗುವಾಗ ನಿನ್ನ ಮುದ್ದಿನ ಮಗಳು ಕುಶಿಯ ಮುಖ ನಿನ್ನ ಎದುರು ಬರಲಿಲ್ಲವೇ? ಆಕೆ ಕರೆಯುವ ಪಪ್ಪ ಎಂಬ ಮುದ್ದಿನ ಧ್ವನಿ ಕೂಡ ಕೇಳಿಸಲಿಲ್ಲವೇ? ತುಂಬಿದ ಸಂಸಾರದ ಹೊಣೆಗಾರಿಕೆಯ ಅರಿವಿರಲಿಲ್ಲವೇ? ನಿನ್ನ ಹಿಂದೆ ನಿನ್ನ ಹೆಗಲಾಗಿ ನಿಂತಿರುವ ಸಿಬ್ಬಂದಿಗಳ ಅಣ್ಣ ಎಂಬ ಕರೆ ಕೇಳಲಿಲ್ಲವೇ? ನಿನ್ನ ಒಡಹುಟ್ಟಿದವರ ಮಮತೆ ನಿನ್ನನ್ನು ಕಟ್ಟಿ ಹಾಕಲಿಲ್ಲವೇ? ಜೀವಕ್ಕೆ ಜೀವ ನೀಡುವ ನಿನ್ನ ಗೆಳೆಯರ ನಗು ನಿನಗೆ ಕೇಳಿಸಲಿಲ್ಲವೇ? ನಿನ್ನ ಇಷ್ಟದ ಬಿರಿಯಾನಿಯ ಸ್ವಾದದ ನೆನಪು ಬರಲಿಲ್ಲವೇ? ನೀನೇ…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಸಮಾಜ ಕಲ್ಯಾಣ ಕಾರ್ಯಕ್ರಮ ಮೂಲ್ಕಿ ಬಳಿಯ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದ ಪ್ರವೀಣ ಭೋಜ ಶೆಟ್ಟಿ ಆಡಳಿತ ಕಚೇರಿಯ ಆವರಣದಲ್ಲಿ ಜರುಗಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ಮಾತಾಡಿದ ಸಭಾಪತಿ ಯು.ಟಿ. ಖಾದರ್ ಅವರು, “ನಮ್ಮ ದೇಶ ಬಲಿಷ್ಠವಾಗಲು ನಾವು ಶಾಸಕರು, ಮಂತ್ರಿಗಳು ಬಲಿಷ್ಠರಾದರೆ ಸಾಲದು, ಎಸಿ ರೂಮ್ ನಲ್ಲಿ ಕೂತ ಅಧಿಕಾರಿಗಳು ಬಲಿಷ್ಠರಾದರೆ ಸಾಲದು, ಕ್ಲಾಸ್ ರೂಮಲ್ಲಿ ಕೂತಿರುವ ವಿದ್ಯಾರ್ಥಿಗಳು ಜ್ಞಾನದಲ್ಲಿ ಬಲಿಷ್ಠರಾದರೆ ಮಾತ್ರ ದೇಶ ಬಲಿಷ್ಠವಾದಂತೆ. ಮಕ್ಕಳು ಬಡತನದಲ್ಲಿ ಹುಟ್ಟಿ ಬೆಳೆಯಬಹುದು, ಆದರೆ ಇಂತಹ ಸಂಘಟನೆಗಳು ಹಮ್ಮಿಕೊಳ್ಳುವ ಸಮಾಜ ಕಲ್ಯಾಣ ಕಾರ್ಯಕ್ರಮಗಳ ಪ್ರಯೋಜನ ಪಡೆದುಕೊಂಡು ಸಮಾಜಕ್ಕೆ ನಿಮ್ಮಿಂದಾದ ಸೇವೆ ಸಲ್ಲಿಸಬೇಕು. ಬಂಟ ಸಮಾಜ ಎಲ್ಲಾ ಜಾತಿ, ಧರ್ಮದ ಜನರನ್ನು ಒಗ್ಗಟ್ಟಿನಿಂದ ಕೊಂಡೊಯ್ಯುವ ಸಮಾಜ. ಭೂ ಮಸೂದೆಯಲ್ಲಿ ಆಸ್ತಿ ಪಾಸ್ತಿ ನಷ್ಟವಾದರೂ ವಿಚಲಿತರಾಗದೆ ಎದ್ದು ನಿಂತವರು ಬಂಟರು” ಎಂದರು. ಬಳಿಕ ಮಾತಾಡಿದ ಒಕ್ಕೂಟದ ಮಹಾದಾನಿ ಕೂಳೂರು ಕನ್ಯಾನ ಸದಾಶಿವ ಶೆಟ್ಟಿ…
ಪುಣೆ ಬಂಟರ ಸಂಘದ ಯುವ ವಿಭಾಗದಿಂದ ಸಮಾಜ ಬಾಂಧವರಿಗಾಗಿ ಆಯೋಜಿಸಿದ ವಾರ್ಷಿಕ ಬಾಕ್ಸ್ ಕ್ರಿಕೆಟ್ ಪಂದ್ಯಾವಳಿಯು ಯುವ ವಿಭಾಗದ ಕಾರ್ಯಾಧ್ಯಕ್ಷ ಯಶ್ ರಾಜ್ ಶೆಟ್ಟಿಯವರ ನೇತೃತ್ವದಲ್ಲಿ ಗ್ರೀನ್ ಬಾಕ್ಸ್ ಟರ್ಫ್ಸ್, ಭಂಡಾರ್ಕಾರ್ ರೋಡ್, ಪುಣೆ ಇಲ್ಲಿ ನಡೆಯಿತು . ಪಂದ್ಯಾಟದಲ್ಲಿ ಕಟೀಲ್ ವಾರಿಯರ್ಸ್ ಪ್ರಶಸ್ತಿಯನ್ನು ಜಯಿಸಿದ್ದು 25000 ನಗದು ಹಾಗೂ ಟ್ರೋಪಿಯನ್ನು ಪಡೆದುಕೊಂಡಿತು. ದೇಹು ರೋಡ್ ಬಿ ತಂಡವು ರನ್ನರ್ ಅಪ್ ಪ್ರಶಸ್ತಿಯನ್ನು ಪಡೆದುಕೊಂಡು 15000 ನಗದು ಹಾಗೂ ಟ್ರೋಪಿಯನ್ನು ಪಡೆದುಕೊಂಡಿತು. ಬೆಳಗ್ಗೆ ಪುಣೆ ಬಂಟರ ಸಂಘದ ಮಾಜಿ ಅಧ್ಯಕ್ಷ ಹಾಗೂ ಪುಣೆ ಕೊನೊಟ್ ಬೋಟ್ ಕ್ಲಬ್ ಇದರ ಅಧ್ಯಕ್ಷರಾದ ಮೊಳಹಳ್ಳಿ ಬಾಲಕೃಷ್ಣ ಹೆಗ್ಡೆಯವರು ಪಂದ್ಯಾಟವನ್ನು ಉದ್ಘಾಟಿಸಿದರು. ಈ ಸಂದರ್ಭ ಅತಿಥಿಗಳಾಗಿ ರಾಷ್ಟ್ರೀಯ ಮಹಿಳಾ ಆಯೋಗ ನವದೆಹಲಿ ಇದರ ಸದಸ್ಯರಾದ ಶ್ಯಾಮಲಾ ಕುಂದರ್, ಪುಣೆ ಮಹಾನಗರ ಪಾಲಿಕೆಯ ಶಿಕ್ಷಣ ಸಮಿತಿ ಕಾರ್ಯಾಧ್ಯಕ್ಷೆ ಮಂಜುಶ್ರೀ ಖರ್ಡೆಕರ್ ಉಪಸ್ಥಿತರಿದ್ದರು. ಸಂಜೆ ಪುಣೆ ಬಂಟರ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ ಇನ್ನಾ ಕುರ್ಕಿಲ್ ಬೆಟ್ಟು ಇವರ…
ಪುಣೆ ಬಂಟರ ಸಂಘದ ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆ ಹಾಗೂ ಓಣಿಮಜಲು ದಿವಂಗತ ಜಗನ್ನಾಥ್ ಶೆಟ್ಟಿಯವರ ಸೊಸೆ ಶ್ರೀಮತಿ ಜಯಂತಿ ಜೆ. ಶೆಟ್ಟಿ ಮತ್ತು ಉನ್ನತ ಅಲಂಕೃತ ಅಧಿಕಾರಿ ಮತ್ತು ನಿವೃತ್ತ ಸಿ.ಅರ್.ಪಿ.ಎಫ್ ಪೋಲಿಸ್ ಮಹಾನೀರಿಕ್ಷಕ ಶ್ರೀ ಜಯಾನಂದ ಶೆಟ್ಟಿ ಇವರ ವೈವಾಹಿಕ ಜೀವನದ ಸುವರ್ಣ ಮಹೋತ್ಸವ ಕಾರ್ಯಕ್ರಮವು ಪುಣೆ ಬಂಟರ ಭವನದಲ್ಲಿ ಜರಗಿತು. ಈ ಸಂದರ್ಭದಲ್ಲಿ ಜಯಾನಂದ ಶೆಟ್ಟಿ ಹಾಗೂ ಜಯಂತಿ ಶೆಟ್ಟಿ ದಂಪತಿಗಳನ್ನು ಪುಣೆ ಬಂಟರ ಸಂಘದ ವತಿಯಿಂದ ಶಾಲು, ಸ್ಮರಣಿಕೆ ನೀಡಿ ಹೂಹಾರ ಹಾಕಿ ಶುಭಾಶಯ ಕೋರಿ ಸತ್ಕರಿಸಲಾಯಿತು. ಈ ಸಂದರ್ಭದಲ್ಲಿ ಪುಣೆ ಬಂಟರ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು ಬಾಳಿಕೆ, ಪುಣೆ ಕರ್ನಾಟಕ ಸಂಘದ ಅಧ್ಯಕ್ಷ ಕುಶಾಲ್ ಹೆಗ್ಡೆ, ಪುಣೆ ತುಳುಕೂಟ ಅಧ್ಯಕ್ಷ ದಿನೇಶ್ ಎ ಶೆಟ್ಟಿ, ಪುಣೆ ಗುರುದೇವ ಸೇವಾ ಬಳಗದ ಅಧ್ಯಕ್ಷ ಪ್ರಭಾಕರ್ ಶೆಟ್ಟಿ, ಮಹಿಳಾ ಕಾರ್ಯಾಧ್ಯಕ್ಷೆ ಸುಲತಾ ಎಸ್.ಶೆಟ್ಟಿ ಮತ್ತು ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು. ವರದಿ :…
ಪ್ರತಿಷ್ಠಿತ ಜಾತೀಯ ಸಂಘಟನೆಗಳಲ್ಲೊಂದಾದ ಬಾಂಬೆ ಬಂಟ್ಸ್ ಅಸೋಸಿಯೇಷನ್ ಮುಂಬಯಿ ಇದರ 40 ನೇ ವಾರ್ಷಿಕ ಮಹಾಸಭೆಯು ಜೂಯಿ ನಗರದ ಬಂಟ್ಸ್ ಸೆಂಟರ್ ನ ಶಶಿಕಲಾ ಮನಮೋಹನ್ ಶೆಟ್ಟಿ ಕಾಂಪ್ಲೆಕ್ಸ್ ನ ಸೌಮ್ಯಲತಾ ಸದಾನಂದ ಶೆಟ್ಟಿ ಸಭಾಗೃಹದಲ್ಲಿ ಅಸೋಸಿಯೇಷನ್ ನ ಅಧ್ಯಕ್ಷ ಸಿ.ಎ ಸುರೇಂದ್ರ ಕೆ.ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಪ್ರಾರ್ಥನೆಯೊಂದಿಗೆ ಮಹಾಸಭೆಗೆ ಚಾಲನೆ ನೀಡಲಾಯಿತು. ಗೌರವ ಪ್ರಧಾನ ಕಾರ್ಯದರ್ಶಿ ಐಕಳ ಕಿಶೋರ್ ಶೆಟ್ಟಿ ಅವರು ಗತ ಸಾಲಿನ ಮತ್ತು ವಾರ್ಷಿಕ ವರದಿ ವಾಚಿಸಿದರು. ಗೌರವ ಕೋಶಾಧಿಕಾರಿ ವಿಶ್ವನಾಥ್ ಎಸ್. ಶೆಟ್ಟಿ ಅವರು ವಾರ್ಷಿಕ ಲೆಕ್ಕಪತ್ರವನ್ನು ಮಂಡಿಸಿದರು. ವೇದಿಕೆಯಲ್ಲಿ ಬಾಂಬೆ ಬಂಟ್ಸ್ ಅಸೋಸಿಯೇಷನ್ ಉಪಾಧ್ಯಕ್ಷ ಡಿ.ಕೆ. ಶೆಟ್ಟಿ, ಗೌರವ ಪ್ರದಾನ ಕಾರ್ಯದರ್ಶಿ ವಿಶ್ವನಾಥ್ ಶೆಟ್ಟಿ, ಜತೆ ಕಾರ್ಯದರ್ಶಿ ಗುಣಕರ್ ಡಿ. ಶೆಟ್ಟಿ, ಜತೆ ಕೋಶಾಧಿಕಾರಿ ಸಿಎ ದಿವಾಕರ್ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ ತೇಜಾಕ್ಷಿ ಎಸ್. ಶೆಟ್ಟಿ, ಯುವ ವಿಭಾಗದ ಕಾರ್ಯಧ್ಯಕ್ಷೆ ದೃಶ್ಯಾ ಕೆ. ಶೆಟ್ಟಿ ಅವರು ಉಪಸ್ಥಿತರಿದ್ದರು. ಮಹಾಸಭೆಯ ಅಧ್ಯಕ್ಷತೆ ವಹಿಸಿದ್ದ…
ಬಂಟರ ಸಂಘ ಬಂಟ್ವಾಳ ಮತ್ತು ಮುಂಬಯಿಯ ಆಲ್ ಕಾರ್ಗೋ ಲಾಜಿಸ್ಟಿಕ್ಸ್ ಸಂಸ್ಥೆಯ ಅಧ್ಯಕ್ಷ ಶಶಿಕಿರಣ್ ಶೆಟ್ಟಿ ಅವರ ಸಹಯೋಗದಲ್ಲಿ ಶಿಕ್ಷಣ ಮತ್ತು ಸಾಮಾಜಿಕ ಕಲ್ಯಾಣ ಕಾರ್ಯಕ್ರಮದಡಿ ಬಂಟ್ವಾಳ ತಾಲೂಕಿನ ಸರ್ವ ಸಮಾಜದ ಸುಮಾರು 1,750 ವಿದ್ಯಾರ್ಥಿಗಳಿಗೆ 52 ಲಕ್ಷ ರೂ. ವಿದ್ಯಾರ್ಥಿ ವೇತನವನ್ನು ಬ್ರಹ್ಮರಕೋಟ್ಲುವಿನಲ್ಲಿರುವ ಬಂಟ್ವಾಳ ಬಂಟರ ಭವನದಲ್ಲಿ ವಿತರಿಸಲಾಯಿತು. ಕಾರ್ಯಕ್ರಮವನ್ನು ಮುಂಬಯಿ ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ ಕೆ. ಶೆಟ್ಟಿ ಅವರು ಉದ್ಘಾಟಿಸಿದರು. ಈ ಸಂದರ್ಭ ಮುಂಬಯಿ ಬಂಟರ ಸಂಘ ನಡೆಸುತ್ತಿರುವ ಸಾಮಾಜಿಕ ಸೇವಾ ಚಟುವಟಿಕೆಗಳನ್ನು ವಿವರಿಸಿದ ಅವರು, ನೆರವು ಅಗತ್ಯವುಳ್ಳ ಕುಟುಂಬವನ್ನು ದತ್ತು ಪಡೆಯುವುದು, ವಿದ್ಯಾರ್ಥಿಗಳಿಗೆ ಬಡ್ಡಿ ರಹಿತ ಸಾಲ ಮೂಲಕ ನೇರವಾಗಿ ವಿದ್ಯಾ ಸಂಸ್ಥೆಗಳಿಗೆ ಫೀಸ್ ಪಾವತಿ ಮಾಡುವುದು. ಮೊದಲಾದ ಶಿಕ್ಷಣದ ಕುರಿತು ಕಾಳಜಿ ಮೂಲಕ ಬಂಟರ ಸಂಘ ಸಮಾಜಕ್ಕೆ ನೆರವಾಗುತ್ತಿದೆ ಎಂದು ಅವರು ಹೇಳಿದರು. ದೇಶ ಕಟ್ಟಲು ಪೂರಕ : ಯು.ಟಿ.ಖಾದರ್ ಈ ಸಂದರ್ಭ ವಿಧಾನ ಸಭಾಧ್ಯಕ್ಷ ಹಾಗೂ ಕ್ಷೇತ್ರದ ಶಾಸಕ ಯು.ಟಿ. ಖಾದರ್ ಅವರನ್ನು…
ಮುಂಬಯಿ ಮಾರುಕಟ್ಟೆಗೆ ‘ಉಡುಪಿ ಕೇದಾರ ಕಜೆ ಅಕ್ಕಿ’ ಬಿಡುಗಡೆ ಸಮಾರಂಭ ಅಂದೋಲನ ನಿವಾರಣೆ ಕೃಷಿ ಆಯ್ಕೆ ಮದ್ದುವಾಗಿದೆ: ಸಂಸದ ಗೋಪಾಲ್ ಶೆಟ್ಟಿ (ಚಿತ್ರ / ವರದಿ : ರೋನ್ಸ್ ಬಂಟ್ವಾಳ್)
ಮುಂಬಯಿ, ಆ.07: ದೊಡ್ಡಮಟ್ಟದ ಕೃಷಿ ಕ್ರಾಂತಿ ಯೋಜನೆಯೊಂದಿಗೆ ಶಾಸಕ ರಘುಪತಿ ಭಟ್ ರಾಜ್ಯದಲ್ಲಿ ಸಮೂಹ ಕೃಷಿ ಮಾಡಿದ ಪರಿಕಲ್ಪನೆ ರಾಷ್ಟ್ರಕ್ಕೇ ಮಾದರಿಯಾಗಿದೆ. ಇವರ ಪರಿಕಲ್ಪನೆ ದೇಶದ ಎಲ್ಲಾ ರೈತರು ಸ್ವೀಕರಿಸಿ ಭಾರತವನ್ನು ಕೃಷಿಪ್ರಧಾನ ರಾಷ್ಟ್ರವಾಗಿಸಿ ವಿಶ್ವಕ್ಕೆ ಮಾದರಿಯಾಗಿಸಬೇಕು. ಎಂದೆರಡು ದಶಕಗಳ ಬಳಿಕ ನಮ್ಮ ರಾಷ್ಟ್ರದ ಕೃಷಿ ಕ್ರಾಂತಿ ಬಗ್ಗೆ ಅಧ್ಯಾಯನ ಮಾಡಿದಾಗ ನಿಜವಾಗಿಯೂ ರಘುಪತಿ ಭಟ್ ಅವರ ಹೆಸರು ಮೇಲ್ತುದಿಯಲ್ಲಿರಲಿದೆ. ರಾಷ್ಟ್ರದ 75 ವರ್ಷಗಳ ಇತಿಹಾಸ ಕಂಡಾಗ ಹಿಂದೆ ನಾವು ಕೃಷಿ ಪ್ರಧಾನ ಆಹಾರಗಳನ್ನು ಆಮದು ಮಾಡುತ್ತಿದ್ದು ಇತ್ತೀಚಿ ವರ್ಷಗಳಿಂದ ರಫ್ತು ಮಾಡುತ್ತಿದ್ದೇವೆ ಇದೇ ರಾಷ್ಟ್ರದ ಕೃಷಿಕ್ಷೇತ್ರದ ಹಸಿರು ಕ್ರಾಂತಿಯಾಗಿದೆ. ಜಾಗತಿಕ ಸಮಸ್ಯೆಗಳೇ ಕೃಷಿಕರ ಸಂಕಷ್ಟಕ್ಕೆ ಕಾರಣವಾಗಿದ್ದರೂ ಇಂದು ಭಾರತೀಯ ಕೃಷಿಕರು ಲಾಭದಲ್ಲಿದ್ದಾರೆ. ಅಂದೋಲನದಿಂದ ದೇಶವು ವಿನಾಶದತ್ತ ಸಾಗುತ್ತಿದ್ದು ಇದರ ನಿವಾರಣೆ ಕೃಷಿ ಪ್ರಧಾನವೇ ಮದ್ದು ಆಗಿದೆ. ಜಾಗ ಒದಗಿಸಿದ ಜನರ ವಿಶ್ವಾಸಕ್ಕೆ ವಂದಿಸುವೆ. ಇದು ವಿಶ್ವಾಸದ ಭರವಸೆ ಆಗಿದೆ ಎಂದು ಉತ್ತರ ಮುಂಬಯಿ ಲೋಕಸಭಾ ಕ್ಷೇತ್ರದ ಸಂಸದ ಗೋಪಾಲ್ ಸಿ.ಶೆಟ್ಟಿ…
ನಾವು ಬಂಟರ ಮನೆತನದವರು ಎಂದು ಸದಾ ಹೇಳಲು ಪ್ರೌಢಿಮೆ (ಸ್ವಾಭಿಮಾನ) ಆಗುತ್ತದೆ. ನನ್ನ ಈ ಮಟ್ಟದ ಯಶಸ್ಸಿಗೆ ಸ್ವಸಮುದಾಯದಲ್ಲಿ ಪ್ರೀತಿ ಮತ್ತು ಸಹಾನುಭೂತಿ ಹಂಚಿಕೊಳ್ಳಲು ಅಭಿಮಾನ ಪಡುತ್ತೇನೆ. ನಾನು ಸಾಮಾಜಿಕ, ಶೈಕ್ಷಣಿಕ ಸೇವಾಂಕ್ಷಿಯಾಗಲು ಇಷ್ಟಪಡುತ್ತಿದ್ದು ಬಂಟರ ಸಂಘ ಮುಂಬಯಿ ಬೃಹತ್ ಪರಿಗಣಿತ ವಿಶ್ವವಿದ್ಯಾಲಯ (ಡೀಮ್ಡ್ ಯುನಿವರ್ಸಿಟಿ) ನಿರ್ಮಿಸುವ ಕನಸು ಕಂಡಿದ್ದೇನೆ. ಅದರಿಂದ ಬಂಟರ ಮತ್ತು ನಾಡಿನ ಭಾವೀ ಯುವ ಪೀಳಿಗೆಯ ಉನ್ನತ ವಿದ್ಯಾಭ್ಯಾಸಕ್ಕೆ ಅವಕಾಶ ದೊರೆಯುವ ಆಶಯ ಕಂಡಿದ್ದೇನೆ ಎಂದು ಬಂಟ ಸಮುದಾಯದ ಹಿರಿಯ ಧುರೀಣ, ಪ್ರತಿಷ್ಠಿತ ಉದ್ಯಮಿ, ಕೊಡುಗೈದಾನಿ ಎಸ್.ಎಂ ಸಮೂಹದ ಕಾರ್ಯಾಧ್ಯಕ್ಷ ಎಸ್.ಎಂ ಶೆಟ್ಟಿ ತಿಳಿಸಿದರು. ಬಂಟರ ಸಂಘ ಮುಂಬಯಿ ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ.ಭಂಡಾರಿ ಸಭಾಗೃಹದಲ್ಲಿ ಸಂಭ್ರಮಿಸಿದ ವಾರ್ಷಿಕ ಸ್ನೇಹ ಸಮ್ಮಿಲನ ಸಂಭ್ರಮ, ಪ್ರಶಸ್ತಿ ಪ್ರದಾನ, ಸಾಧಕರಿಗೆ ಸಮ್ಮಾನ, ವೈವಿಧ್ಯಮಯ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ, ಬಂಟ್ಸ್ ಬೊರಿವಿಲಿ ಶಿಕ್ಷಣ ಯೋಜನೆಗೆ ಸಾಂಕೇತಿಕವಾಗಿ ಚಾಲನೆಯನ್ನಿತ್ತು, ಬಂಟರ ಸಂಘವು ಕೊಡಮಾಡಿದ ‘ಜೀವಮಾನ ಸಾಧನಾ ಶ್ರೇಷ್ಠ…
ಪನ್ವೇಲ್ ಪೂರ್ವದ ಸೆಕ್ಟರ್ 5/A ಗುರುದ್ವಾರದ ಹಿಂದೆ ಸಂತ ಶ್ರೀ ವೃಂದಾವನ ಬಾಬಾ ಸಮಾಧಿ ಮಂದಿರರದಲ್ಲಿ ತುಳು ಕನ್ನಡಿಗರು ಸ್ಥಾಪಿಸಿರುವ ವೃಂದಾವನ ಬಾಬಾ ಭಜನೆ ಮಂಡಳಿಯ ಸದಸ್ಯರು, ಅಯ್ಯಪ್ಪ ಭಕ್ತರು ಹಾಗೂ ನ್ಯೂ ಪನ್ವೇಲ್ ನಗರ ಸೇವಕ ಸಂತೋಷ ಜಿ ಶೆಟ್ಟಿ ಇವರೆಲ್ಲರ ಒಗ್ಗಟ್ಟಿನಲ್ಲಿ ಪ್ರಾರಂಭಗೊಂಡಿರುವ ಶ್ರೀ ವೃಂದಾವನ ಬಾಬಾ ಅಯ್ಯಪ್ಪ ಭಕ್ತ ವೃಂದದ 19 ನೇ ವರ್ಷದ ಶ್ರೀ ಅಯ್ಯಪ್ಪ ಮಹಾಪೂಜೆಯು ಜನವರಿ 1 ರ ಸೋಮವಾರ ಭಕ್ತಿ ಸಂಭ್ರಮದೊಂದಿಗೆ ನಡೆಯಿತು. ಬೆಳಗ್ಗೆ ಮಹಾಗಣಪತಿ ಹೋಮ ಬಳಿಕ ಶ್ರೀ ವೃಂದಾವನ ಬಾಬಾ ಭಜನಾ ಮಂಡಳಿಯವರಿಂದ ಭಜನೆ ನಡೆಯಿತು. ಅನಂತರ ಜಯ ಗುರುಸ್ವಾಮಿ ಮಹಾಮಂಗಳಾರತಿಯನ್ನು ನಡೆಸಿದರು. ಮಧ್ಯಾಹ್ನ ಮಹಾಪ್ರಸಾದ ಅನ್ನಸಂತರ್ಪಣೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಅಯ್ಯಪ್ಪ ಸ್ವಾಮಿಯ ಭಕ್ತರು ಪಾಲ್ಗೊಂಡಿದ್ದರು. ಮಧ್ಯಾಹ್ನ ನಂತರ ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿ ಪುಣೆ ಹಾಗೂ ಊರಿನ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ “ಕೋರ್ದಬ್ಬು ಬಾರಗ” ಎಂಬ ತುಳು ಐತಿಹಾಸಿಕ ಯಕ್ಷಗಾನ ಪ್ರಸಂಗ ನಡೆಯಿತು. ಪೂಜಾ ಕಾರ್ಯಕ್ಕೆ ಆಗಮಿಸಿದ…
ಮಂಗಳೂರು ತಾಲೂಕಿನ ಎಕ್ಕಾರು ಎಕ್ಕಾರು ಬಂಟರ ಸಂಘದ ಎಕ್ಕಾರು ಸುಜಾತ ಶೆಟ್ಟಿ ಹಾಗೂ ಕನ್ಯಾನ ಸದಾಶಿವ ಶೆಟ್ಟಿ ಬಯಲು ರಂಗ ಮೈದಾನ ಉದ್ಘಾಟನೆ, ಗೌರವಾರ್ಪಣೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ನವೆಂಬರ್ 26 ಆದಿತ್ಯವಾರದಂದು ಎಕ್ಕಾರು ಬಂಟರ ಭವನದ ನಡ್ಯೋಡಿ ಗುತ್ತು ಶಾರದಾ ಭಾಸ್ಕರ್ ಶೆಟ್ಟಿ ಸಭಾಂಗಣದಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಪೂರ್ವಾಹ್ನ ಗಂಟೆ 9 ರಿಂದ ಸ್ಥಳೀಯ ಬಂಟ ಕಲಾ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ “ಭಾರತ ದರ್ಶನ” ನಡೆಯಲಿದೆ. ಪೂರ್ವಾಹ್ನ ಗಂಟೆ 9.30 ರಿಂದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಸಮಾರಂಭದ ಅಧ್ಯಕ್ಷತೆಯನ್ನು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ವಹಿಸಲಿದ್ದಾರೆ. ಕಾರ್ಯಕ್ರಮವನ್ನು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶೀಯ ಮೊಕ್ತೇಸರ ಕೊಡೆತ್ತೂರು ಗುತ್ತು ಸನತ್ ಕುಮಾರ್ ಶೆಟ್ಟಿ ಉದ್ಘಾಟಿಸಲಿದ್ದಾರೆ. ಬಯಲು ರಂಗ ಮೈದಾನವನ್ನು ಹೇರಂಭ ಇಂಡಸ್ಟ್ರೀಸ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕ ಕನ್ಯಾನ ಸದಾಶಿವ ಶೆಟ್ಟಿ ಲೋಕಾರ್ಪಣೆ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಮಹಾನ್ ಸಾಧಕ,…