Author: admin

ಎರಡು ದಿನಗಳ ಕಾಲ ಅರಮನೆ ಮೈದಾನದಲ್ಲಿ ನಡೆದ “ಬೆಂಗಳೂರು ಕಂಬಳ ನಮ್ಮ-ಕಂಬಳ”ಕ್ಕೆ ರವಿವಾರ ರಾತ್ರಿ ತೆರೆ ಬಿತ್ತು. ರಿಷಬ್‌ ಶೆಟ್ಟಿ ಅಭಿನಯದ “ಕಾಂತಾರ’ ಚಿತ್ರದಲ್ಲಿ ಓಡಿದ್ದ ಕೋಣ ಚಿನ್ನದ ಪದಕ ಪಡೆದುಕೊಂಡಿತು. ಬೊಳಂಬಳ್ಳಿ ಪರಮೇಶ್ವರ್‌ ಭಟ್ಟ ಅವರ ಅಪ್ಪು ಕುಟ್ಟಿ 6.5 ಕೋಲು ನೀರು ಚಿಮ್ಮಿಸಿ ಕೆನೆಹಲಗೆ ವಿಭಾಗದಲ್ಲಿ ಮೊದಲ ಚಿನ್ನದ ಪದಕ ಪಡೆದಿದೆ. ಇನ್ಮುಂದೆ ಮುಂಬಯಿಯಲ್ಲೂ ಆಯೋಜಿಸುವ ಚಿಂತನೆ ವ್ಯಕ್ತವಾಗಿದೆ. ಜತೆಗೆ ಪ್ರೀಮಿಯರ್‌ ಲೀಗ್‌ನಂತೆ ಕಂಬಳದ ಲೀಗ್‌ ನಡೆಸುವ ಮುನ್ಸೂಚನೆ ಮೇಲ್ಮೋಟಕ್ಕೆ ಕಂಡ ಬರುತ್ತಿದೆ. ಕಂಬಳ ಆಯೋಜನೆ ಬಗ್ಗೆ ಮಾಹಿತಿಯನ್ನು ಸಂಬಂಧಪಟ್ಟವರು ಪಡೆದುಕೊಂಡಿದ್ದಾರೆ. ಕಂಬಳವನ್ನು ರಜಾದಿನಗಳಲ್ಲಿ ಹಮ್ಮಿಕೊಂಡ ಕಾರಣ 8 ಲಕ್ಷಕ್ಕೂ ಅಧಿಕ ಮಂದಿ ವೀಕ್ಷಿಸಿ ಸಂಭ್ರಮಿಸಿದರು. ಕೊನೆಯ ದಿನದ ಕಂಬಳದಲ್ಲಿ ಎಲ್ಲಿ ನೋಡಿದರೂ ಜನರ ದಂಡು, ನೂಕು ನುಗ್ಗಲು, ಜಾತ್ರೆಯ ವಾತಾವರಣ ವಿಶೇಷವಾಗಿತ್ತು. ವೀಕ್ಷಕರ ವಿವರಣೆಗೆ 30 ಮಂದಿ! ಕಂಬಳದಲ್ಲಿ ಕೋಣಗಳು ಓಡುವುದು ಎಷ್ಟು ಮುಖ್ಯವೋ ವೀಕ್ಷಕ ವಿವರಣೆ ಕೂಡ ಅಷ್ಟೇ ಮುಖ್ಯ. ಈ ಬಾರಿ ಬೆಂಗಳೂರು ಕಂಬಳಕ್ಕೆ…

Read More

ಯಕ್ಷಗಾನ ಕಲಾವಿದರಿಗೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿನ ಯೋಜನೆಗಳಲ್ಲಿ ಒಂದಾದ ಯಕ್ಷಾಶ್ರಯದಡಿ ಮನೆ ನಿರ್ಮಾಣಕ್ಕೆ ಆರ್ಥಿಕ ಸಹಾಯವನ್ನು ಟ್ರಸ್ಟ್ ಕಚೇರಿಯಲ್ಲಿ ವಿತರಿಸಲಾಯಿತು. ಸುಂಕದಕಟ್ಟೆ ಮೇಳದ ಜಯೇಂದ್ರ ಕಿದೂರ್, ಸಸಿಹಿತ್ಲು ಮೇಳದ ಗುಡ್ಡಪ್ಪ ಸುವರ್ಣ ಇವರುಗಳಿಗೆ 2ನೇ ಕಂತು ಮತ್ತು ಬಪ್ಪನಾಡು ಮೇಳದ ನಾಗಪ್ಪ ಪಡುಮಲೆ ಇವರಿಗೆ ಕೊನೆಯ ಕಂತಿನ ಮೊತ್ತದ ಚೆಕ್ಕನ್ನು ಸ್ಥಾಪಕಾಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿಯವರು ವಿತರಿಸಿದರು. ಈ ಸಂದರ್ಭದಲ್ಲಿ ಫೌಂಡೇಶನ್ನಿನ ಪ್ರಧಾನ ಕಾರ್ಯದರ್ಶಿ ಅಡ್ಯಾರ್ ಪುರುಷೋತ್ತಮ ಭಂಡಾರಿ, ಕೋಶಾಧಿಕಾರಿ ಸಿಎ ಸುದೇಶ್ ಕುಮಾರ್ ರೈ, ಜತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕನಗರ, ಬಪ್ಪನಾಡು ಮೇಳದ ದಿನೇಶ್ ಕೊಡಪದವು ಜತೆಗಿದ್ದರು.

Read More

ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹೆಚ್ಚಿಸಿ ಸ್ಫೂರ್ತಿ ತುಂಬಲು ವಿದ್ಯಾರ್ಥಿ ವೇತನ ಸಹಕಾರಿಯಾಗುತ್ತದೆ. ಆತ್ಮವಿಶ್ವಾಸದಿಂದ ಸಿಕ್ಕ ಅವಕಾಶವನ್ನು ಸದ್ಬಳಕೆ ಮಾಡಿಕೊಂಡು ನಿಶ್ಚಿತ ಗುರಿ ಇರಿಸಿಕೊಂಡು ಮುನ್ನುಗ್ಗಿದರೆ ಯಶಸ್ಸು ಕಾಣಬಹುದು ಎಂದು ಜೆಸಿಬಿ ಇಂಡಿಯಾ ಸೌತ್ ಎಷ್ಯಾ ಆಂಡ್ ಆಫ್ರಿಕಾ ಈಸ್ಟ್ ಸಿಇಓ ಮತ್ತು ಎಂಡಿ ದೀಪಕ್ ಶೆಟ್ಟಿ ಅಭಿಪ್ರಾಯಪಟ್ಟರು. ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು, ಉಡುಪಿ ತಾಲೂಕು ಸಮಿತಿ ವ್ಯಾಪ್ತಿಯ ಬಂಟರ ಸಂಘಗಳ ಆಶ್ರಯದಲ್ಲಿ ಅಮ್ಮಣಿ ರಾಮಣ್ಣ ಶೆಟ್ಟಿ ಸ್ಮಾರಕ ಸಭಾಭವನದಲ್ಲಿ ರವಿವಾರ ನಡೆದ ದಿ. ಕೆ. ಸತೀಶ್ಚಂದ್ರ ಹೆಗ್ಡೆ ವಿದ್ಯಾರ್ಥಿವೇತನ ವಿತರಣೆ, ಬಂಟ ಸಮ್ಮಿಲನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ದತ್ತು ಸ್ವೀಕಾರ ಕಾರ್ಯಕ್ರಮವನ್ನು ರಿಮೋಟ್ ಒತ್ತುವ ಮೂಲಕ ಉದ್ಘಾಟಿಸಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು, ಕಷ್ಟದಲ್ಲಿರುವವರನ್ನು ಗುರುತಿಸಿ ಅವರಿಗೆ ಸಹಾಯಹಸ್ತ ನೀಡುವುದು ದೇವರು ಮೆಚ್ಚುವ ಕಾರ್ಯ. ನಮ್ಮ ಬದುಕು ದೇವರಿಗೆ ಸಮರ್ಪಣೆಯಾಗುವಂತೆ ಇರಬೇಕು ಎಂದು ಹೇಳಿದರು. ವಿದ್ಯಾರ್ಥಿವೇತನಕ್ಕೆ ಚಾಲನೆ ನೀಡಿದ ಜಾಗತಿಕ ಬಂಟರ ಸಂಘದ ಅಧ್ಯಕ್ಷ ಐಕಳ ಹರೀಶ್…

Read More

ಕಾರ್ಕಳದ ಯುವ ಉದ್ಯಮಿ ಮತ್ತು ಅಮ್ಮ ಚಾರಿಟೇಬಲ್ ಟ್ರಸ್ಟ್ (ರಿ) ಇದರ ಸ್ಥಾಪಕ ಅವಿನಾಶ್ ಜಿ ಶೆಟ್ಟಿ ಮತ್ತು ಅವರ ಧರ್ಮಪತ್ನಿ ಐಶ್ವರ್ಯ ಶೆಟ್ಟಿ ಕಳೆದ ಹಲವು ವರ್ಷಗಳಿಂದ ವಿಭಿನ್ನವಾದ ರೀತಿಯಲ್ಲಿ ಶೈಕ್ಷಣಿಕ ಸಪೋರ್ಟ್ ಸಿಸ್ಟಮನ್ನು ರೂಪಿಸುತ್ತಾ ಬಂದಿದ್ದಾರೆ. ಈ ಬಾರಿ ಕೂಡ ಅವರು ಕಾರ್ಕಳದ ಗಾಂಧಿ ಮೈದಾನದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ‘ಅಂಬಾ ಭವಾನಿ ಕ್ರಾಕರ್ಸ್’ ಎಂಬ ಹೆಸರಿನ ಒಂದು ಪಟಾಕಿ ಅಂಗಡಿಯನ್ನು ತೆರೆದರು. ಅಲ್ಲಿ ಅವರ ಅನೇಕ ಬಂಧುಗಳು ಮತ್ತು ಸ್ನೇಹಿತರು ಹಗಲು ರಾತ್ರಿ ದುಡಿದರು. ಅದರಲ್ಲಿ ಬಂದ ಲಾಭಕ್ಕೆ ತಮ್ಮ ಒಂದಿಷ್ಟು ಪಾಲನ್ನು ಸೇರಿಸಿ ನಾಲ್ವತ್ತು ವಿದ್ಯಾರ್ಥಿಗಳಿಗೆ ತಲಾ ಐದು ಸಾವಿರದಂತೆ ಒಟ್ಟು ಎರಡು ಲಕ್ಷ ರೂ ಮೊತ್ತದ ವಿದ್ಯಾರ್ಥಿ ವೇತನವನ್ನು ಈ ವರ್ಷ ಅವರು ನೀಡಿದರು. ಕಳೆದ ಹತ್ತು ವರ್ಷಗಳಿಂದ ಅವರು ಈ ರೀತಿಯ ಶೈಕ್ಷಣಿಕ ಸಪೋರ್ಟ್ ಸಿಸ್ಟಮನ್ನು ರೂಪಿಸಿರುವುದು ನಿಜಕ್ಕೂ ಶ್ಲಾಘನೀಯ ಆಗಿದೆ. ಕಾರ್ಕಳದ ಗಾಂಧಿ ಮೈದಾನದಲ್ಲಿ ನವೆಂಬರ್ 26ರಂದು ನಡೆದ ಈ ವಿದ್ಯಾರ್ಥಿವೇತನಗಳ…

Read More

ಬರೋಡಾ (ಆರ್ ಬಿ ಐ), ಆ.15: ಗುಜರಾತ್ ರಾಜ್ಯದ ಬರೋಡಾ ಮಹಾನಗರದಲ್ಲಿನ ಇಂಡಿಯಾ ಬುಲ್ಸ್ ಮೆಘಾ ಮಾಲ್‍ನಲ್ಲಿ ತುಳು ಸಂಘ ಬರೋಡಾ ನಿರ್ಮಿತ ವಿಶ್ವದ ಪ್ರಪ್ರಥಮ ಹಾಗೂ ಏಕೈಕ ತುಳು ಚಾವಡಿ ಇದರ ಸಭಾಗೃಹದಲ್ಲಿ ಇಂದಿಲ್ಲಿ ಸೋಮವಾರ ತುಳು ಸಂಘ ಬರೋಡಾ ಸಂಸ್ಥೆಯು ಸ್ವಾತಂತ್ರ್ಯ ಭಾರತದ ಅಮೃತ ಮಹೋತ್ಸವದೊಂದಿಗೆ ರಾಷ್ಟ್ರದ 76ನೇ ಸ್ವಾತಂತ್ರ್ಯೋತ್ಸವವನ್ನು ಅದ್ದೂರಿಯಾಗಿ ಸಂಭ್ರಮಿಸಿತು. ತುಳು ಸಂಘ ಬರೋಡಾ ಇದರ ಅಧ್ಯಕ್ಷ ಶಶಿಧರ ಬಿ.ಶೆಟ್ಟಿ (ಬೆಳ್ತಂಗಡಿ) ಇವರ ಮಾರ್ಗದರ್ಶನದಲ್ಲಿ ನಡೆಸಲ್ಪಟ್ಟ ಸಂಘದ ಸಾಂಸ್ಕೃತಿಕ ಕೇಂದ್ರದ ತುಳು ಚಾವಡಿ ಸಭಾಗೃಹದಲ್ಲಿ ನಡೆಸಲ್ಪಟ್ಟ ಸಂಭ್ರಮದಲ್ಲಿ ಸಂಘದ ಬಾಲ ಪ್ರತಿಭೆಗಳಾದ ಕು| ದೀಕ್ಷಿತ್ ಶೆಟ್ಟಿ, ಕು| ವಿಶ್ಮಿತಾ ಪೂಜಾರಿ, ಕು| ಕಾವ್ಯ ಶೆಟ್ಟಿ ಅತಿಥಿಗಳಾಗಿದ್ದು ದೀಪ ಪ್ರಜ್ವಲಿಸಿ ಕಾರ್ಯಕ್ರಮ ಉದ್ಘಾಟಿಸಿದರು. ನಾವು ಭಾರತದ ಪುಣ್ಯಭೂಮಿಯಲ್ಲಿ ಹುಟ್ಟು ಪಡೆದಿರುವುದೇ ನಮ್ಮ ಸೌಭಾಗ್ಯವಾಗಿದೆ. ವಿಶ್ವದಲ್ಲೇ ಇಂತಹ ಪುಣ್ಯಭೂಮಿ ಮತ್ತೊಂದಿಲ್ಲ ಅನ್ನುವುದು ಪ್ರತೀಯೋರ್ವ ಭಾರತೀಯನಿಗೆ ಹೆಮ್ಮೆಯೆಣಿಸಬೇಕು. ಆದುದರಿಂದ ನಾವೆಲ್ಲರೂ ಭಾರತಾಂಭೆಯ ಪ್ರತಿಷ್ಠೆಯ ಮಕ್ಕಳಾಗಿ ಸಾಮರಸ್ಯ, ಸೌಹಾರ್ದತೆಯಿಂದ ಬಾಳಬೇಕು. ಅಸಂಖ್ಯಾತ…

Read More

ಪೆರ್ಡೂರಿನಲ್ಲಿ 1991 ರಲ್ಲಿ ಅಸ್ತಿತ್ವಕ್ಕೆ ಬಂದ ಬಂಟರ ಸಂಘ ಪೆರ್ಡೂರು ಮಂಡಲದ ನೇತೃತ್ವದಲ್ಲಿ ಸಮಾಜಮುಖಿ ಚಿಂತಕ ಕೆ. ಶಾಂತಾರಾಮ ಸೂಡ ಅವರ ಮುಂದಾಳತ್ವದಲ್ಲಿ ಸಮಾಜ ಬಾಂಧವರು ಹಾಗೂ ದಾನಿಗಳ ನೆರವಿನೊಂದಿಗೆ ಪೆರ್ಡೂರಿನಲ್ಲಿ ಅತ್ಯಾಧುನಿಕ ಸೌಲಭ್ಯದ ಶ್ರೀಮತಿ ಸರ್ವಾಣಿ ಪಳ್ಳಿ ಶ್ರೀನಿವಾಸ ಹೆಗ್ಡೆ ಸಮುದಾಯ ಭವನ ಜ. 14 ರಂದು ಲೋಕಾರ್ಪಣೆಗೊಳ್ಳಲಿದೆ. ಉಡುಪಿ – ಆಗುಂಬೆ ರಾ. ಹೆ. 169(ಎ) ಕ್ಕೆ ತಾಗಿಕೊಂಡು ಪೆರ್ಡೂರು ಸಮೀಪ ಜೋಗಿಬೆಟ್ಟಿನ 3.5 ಎಕರೆ ಪ್ರದೇಶದಲ್ಲಿ ಭವನ ನಿರ್ಮಾಣಗೊಂಡಿದೆ. ಉಡುಪಿ, ದ.ಕ. ಜಿಲ್ಲೆ ಮಾತ್ರವಲ್ಲದೇ ರಾಜ್ಯ ಹಾಗೂ ಹೊರ ರಾಜ್ಯದ ಜನರನ್ನು ಆಕರ್ಷಿಸುವಂತೆ ಸಮುದಾಯ ಭವನ ಸಿದ್ಧಗೊಂಡಿದ್ದು ಸಹಸ್ರ ಸಂಖ್ಯೆಯಲ್ಲಿ ಜನ ಸೇರುವ ಮದುವೆ ಇನ್ನಿತರ ಕಾರ್ಯಕ್ರಮಗಳಿಗೆ ಯೋಗ್ಯವಾಗಿದೆ. ಅತ್ಯಾಕರ್ಷಕ ಒಳಾಂಗಣ ವಿನ್ಯಾಸ, 900 ಕ್ಕೂ ಅಧಿಕ ಜನ ಕುಳಿತುಕೊಳ್ಳುವ ಹವಾನಿಯಂತ್ರಿತ ಸಭಾಂಗಣ, 600 ಕ್ಕೂ ಹೆಚ್ಚು ಜನ ಕುಳಿತುಕೊಳ್ಳಬಹುದಾದ ಊಟದ ಹವಾನಿಯಂತ್ರಿತ ಹಾಲ್, ವಿಶಾಲ ವೇದಿಕೆ, ಗ್ರೀನ್ ರೂಮ್, ಸಸ್ಯಾಹಾರ ಹಾಗೂ ಮಾಂಸಹಾರಕ್ಕೆ ಪ್ರತ್ಯೇಕ…

Read More

ಆವಿಷ್ಕಾರದ ಫಲಸಮುದಾಯಕ್ಕೆ ತಲುಪಲಿ: ಎಮಿಲಿ ಮೂಡುಬಿದಿರೆ:‘ಆವಿಷ್ಕಾರದ ಫಲ ಸಮುದಾಯಕ್ಕೆ ತಲುಪಿದಾಗ ಸಾರ್ಥಕ’ಎಂದು ಅಮೆರಿಕ ಫ್ಲಾರಿಡಾದ ಹೂಡಿಕೆ ಬ್ಯಾಂಕರ್ ಎಮಿಲಿ ಆಳ್ವ ಹೇಳಿದರು. ಭಾರತೀಯ ವಿಜ್ಞಾನ ಸಮಾಜ (ಇಂಡಿಯನ್ ಸೈನ್ಸ್ ಸೊಸೈಟಿ) ಸಹಯೋಗದಲ್ಲಿ ಆಳ್ವಾಸ್ ಕೇಂದ್ರೀಯ ಶಾಲೆ (ಸಿಬಿಎಸ್‍ಸಿ)ಯಲ್ಲಿ ಶನಿವಾರ ನಡೆದ ‘ಭಾರತೀಯ ವಿಜ್ಞಾನ ಮತ್ತು ಎಂಜಿನಿಯರಿಂಗ್ ಮೇಳ (ಇನ್‍ಸೆಫ್)’ದ ಪ್ರಾದೇಶಿಕ ಮೇಳ ಮತ್ತು ವಿಜ್ಞಾನ ವಿಸ್ತರಣಾ ಕಾರ್ಯಕ್ರಮ’ದಲ್ಲಿ ಪ್ರಶಸ್ತಿಗಳನ್ನು ವಿತರಿಸಿ ಅವರು ಮಾತನಾಡಿದರು. ‘ಕುತೂಹಲ ಹಾಗೂ ಸೃಜನಶೀಲತೆಯು ವಿಜ್ಞಾನದ ಮಡಕೆಯಲ್ಲಿ ಇರುತ್ತವೆ. ಸಮುದಾಯದಲ್ಲಿ ಅವಶ್ಯಕತೆ ಇರುವ ಜನರಿಗೆ ಅದನ್ನು ಉಣಬಡಿಸಿದಾಗ ಸಾರ್ಥಕವಾಗುತ್ತದೆ’ ಎಂದರು. ‘ಸಂಶೋಧನೆಗಳು ಸಮುದಾಯದ ಸಮಸ್ಯೆಗಳಿಗೆ ಸ್ಪಂದಿಸಬೇಕು. ವಿಜ್ಞಾನವು ಬದುಕಿನಲ್ಲಿ ಬದಲಾವಣೆತರಬೇಕು. ಪರಿವರ್ತನೆಗೆ ಕಾರಣವಾಗಬೇಕು. ನಿಮ್ಮೆಲ್ಲರಲ್ಲಿ ಅಂತಹ ಆತ್ಮವಿಶ್ವಾಸ ಇದೆ. ಅದು ಫಲಪ್ರದಗೊಳ್ಳಲಿ’ ಎಂದು ಹಾರೈಸಿದರು. ಆಳ್ವಾಸ್ ಶಿಕ್ಷಣ ಪ್ರತಿμÁ್ಠನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ‘ಸ್ಪರ್ಧೆಯಲ್ಲಿ ಎಲ್ಲರೂ ಗೆದ್ದವರು. ಪ್ರಶಸ್ತಿ ಬಾರದೇ ಇದ್ದರೂ, ನಿಮ್ಮ ಸದುದ್ದೇಶ, ಪ್ರಯತ್ನ ಒಳಿತು ಮಾಡುತ್ತದೆ. ಸೋಲು ಜೀವನ ಕಲಿಸುತ್ತದೆ. ಬದುಕಿಗೆ ಬಲ…

Read More

ದಿನಾಂಕ 02-10-2023 ಗಾಂಧಿ ಜಯಂತಿ ಪ್ರಯುಕ್ತ ಜಮ್ಮು-ಕಾಶ್ಮೀರದ ರಾಜಧಾನಿ ಶ್ರೀನಗರದ ಶೇರ್-ಇ-ಕಾಶ್ಮೀರ್‌ ಇಂಟರ್‌ನ್ಯಾಷನಲ್‌ ಕಾನ್ಫರೆನ್ಸ್‌ ಸೆಂಟರ್‌ನಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಷನ್‌ ದೆಹಲಿ ಘಟಕ, ಸುಳ್ಯದ ಬೆಳ್ಳಾರೆಯ ನಿನಾದ ಸಾಂಸ್ಕೃತಿಕ ಕೇಂದ್ರ ಮತ್ತು ಜಮ್ಮು-ಕಾಶ್ಮೀರ ಸರ್ಕಾರದ ಕಲೆ, ಸಂಸ್ಕೃತಿ ಮತ್ತು ಭಾಷಾ ಇಲಾಖೆ ಆಯೋಜಿಸಿದ್ದ ಹಿಂದಿ ಯಕ್ಷಗಾನ ಮತ್ತು ಪಜ್ಜೆ-ಗೆಜ್ಜೆ ತುಳು-ಕನ್ನಡ ಶಾಸ್ತ್ರೀಯ, ಜಾನಪದ ನೃತ್ಯ ಪ್ರಕಾರ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್‌ ಗವರ್ನರ್‌ ಮನೋಜ್‌ ಸಿನ್ಹಾ ಅವರು ಮಾತನಾಡಿ “ಮಹಾಭಾರತ ಯುದ್ಧಕ್ಕೆ ಮುನ್ನ ಯಕ್ಷನು ಯುಧಿಷ್ಠಿರನ ಬಳಿ ಜಗತ್ತಿನಲ್ಲಿ ನಿನಗೆ ಅತ್ಯಂತ ಅಚ್ಚರಿಯ ವಿಷಯ ಯಾವುದು ಎಂಬ ಪ್ರಶ್ನೆ ಕೇಳುತ್ತಾನೆ. ಅದಕ್ಕೆ ಯುಧಿಷ್ಠಿರ, ಜಗತ್ತಿನಲ್ಲಿ ಇಷ್ಟೊಂದು ಸಾವು-ನೋವುಗಳಾಗುತ್ತಿದ್ದರೂ ಬದುಕಿನ ಬಗ್ಗೆ ಜನರಿಗೆ ಏಕಿಷ್ಟು ಆಸಕ್ತಿ ಎನ್ನುವುದೇ ಅಚ್ಚರಿ ಎಂದು ಉತ್ತರಿಸಿದ್ದ. ಯಕ್ಷನು ಈಗ ಜಮ್ಮು-ಕಾಶ್ಮೀರಕ್ಕೆ ಬಂದು ನನ್ನಲ್ಲಿ, ನಿನಗೆ ಮಹದಚ್ಚರಿಯ ವಿಷಯ ಯಾವುದು ಎಂದು ಕೇಳಿದರೆ, ಇಷ್ಟು ಮಂದಿ ಕರ್ನಾಟಕದಿಂದ ಬಂದು ಶ್ರೀನಗರದಲ್ಲಿ ವೈಭವಯುತವಾಗಿ…

Read More

ಗುರುಪುರ ಬಂಟರ ಮಾತೃ ಸಂಘದ ಯುವ ವಿಭಾಗದ ವತಿಯಿಂದ ಜರಗಿದ ಗಂಜಿಮಠದ ರಾಜ್‍ಅಕಾಡೆಮಿ ಶಾಲಾ ಮೈದಾನದಲ್ಲಿ ನಡೆದ ಬಂಟ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಕ್ರೀಡಾ, ಶಿಕ್ಷಣ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಅಪ್ರತಿಮ ಸಾಧನೆ ಮಾಡಿದ ಡಾ| ಎ. ಸದಾನಂದ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.ಸನ್ಮಾನ ಸ್ವೀಕರಿಸಿ, ಮಾತನಾಡಿದ ಅವರು ಗುರುಪುರ ಬಂಟರ ಮಾತೃ ಸಂಘದ ಸಂಘಟನೆ ಕಾರ್ಯಗಳು ನಿಜವಾಗಿಯೂ ಮೆಚ್ಚುವಂಥದ್ದು. ಕ್ರೀಡೆಯಲ್ಲಿ ವಿಜಯಿಯಾದವರು ಸೋತವರನ್ನು ಅಭಿನಂದಿಸಿದರೆ ಅವರ ಹೃದಯ ವೈಶಾಲ್ಯತೆಯನ್ನು ತೋರಿಸುತ್ತದೆ. ನಾನು ಒಬ್ಬ ಕ್ರೀಡಾಪಟುವಾಗಿರುವುದರಿಂದ ಈ ಕ್ರೀಡಾಕೂಟದಲ್ಲಿ ಭಾಗವಹಿಸಿರುವುದು ಸಂತೋಷವಾಗಿದೆ. ಬಂಟರು ಒಟ್ಟಾಗಿ ಸಮಾಜದ ಏಳಿಗೆಗೆ ದುಡಿಯೋಣ ಎಂದು ಹೇಳಿದರು. ಈ ಸಂದರ್ಭದಲ್ಲಿ ಡಾಕ್ಟರೇಟ್ ಪದವಿ ಪಡೆದ ರಿತೇಶ್ ಪಕ್ಕಳ ಪೆರ್ಮಂಕಿಗುತ್ತು, ಕಲಾಕ್ಷೇತ್ರದಲ್ಲಿ ಸಾಧನೆಗೈದ ಶ್ರೀದರ್ ಶೆಟ್ಟಿ ತೆಕ್ಕಿಬೆಟ್ಟು, ಕ್ರೀಡಾಕ್ಷೇತ್ರದಲ್ಲಿ ಅನುಷ್ ನಾಯ್ಕ್, ಶಿಕ್ಷಣ ಕ್ಷೇತ್ರದಲ್ಲಿ ನಿಷ್ಕರ್ಷ್ ಚೌಟ ಅವರನ್ನು ಸನ್ಮಾನಿಸಲಾಯಿತು. ಅನಾರೋಗ್ಯದಿಂದ ಬಳಲುತ್ತಿರುವ ಬಡಕುಟುಂಬದ ಕವಿರಾಜ್ ಶೆಟ್ಟಿಯವರಿಗೆ ಸಂಘದ ವತಿಯಿಂದ ಸಹಾಯಧನ ನೀಡಲಾಯಿತು. ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಬೆಳಿಗ್ಗೆ ನಡೆದ…

Read More

‘ಹೆಣ್ಣು-ಗಂಡು ಜೈವಿಕ ಸತ್ಯ: ಮೇಲು-ಕೀಳಲ್ಲ’ ವಿದ್ಯಾಗಿರಿ: ‘ಹೆಣ್ಣು ಮತ್ತು ಗಂಡು ಎಂಬುದು ಜೈವಿಕ ಸತ್ಯವೇ ಹೊರತು ಮೇಲು-ಕೀಳಲ್ಲ. ಗಂಡಿನೊಳಗೊಂದು ಹೆಣ್ಣು ಹಾಗೂ ಹೆಣ್ಣಿನೊಳಗೊಂದು ಗಂಡು ಮನಸ್ಸು ಇದ್ದಾಗ ಮಾತ್ರ ಸಮಗ್ರ ವ್ಯಕ್ತಿತ್ವ ರೂಪುಗೊಳ್ಳಲು ಸಾಧ್ಯ’ಎಂದು ಶಿವಮೊಗ್ಗದ ಸಹ್ಯಾದ್ರಿ ಪದವಿ ಪೂರ್ವಕಾಲೇಜು ಪ್ರಾಧ್ಯಾಪಕಿ ಡಾ. ಶುಭಾ ಮರವಂತೆ ಹೇಳಿದರು. ಆಳ್ವಾಸ್ ಪದವಿ ಪೂರ್ವಕಾಲೇಜಿನ ಆಂತರಿಕ ಸಮಿತಿ ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ‘ಮಹಿಳಾ ದೌರ್ಜನ್ಯ ತಡೆ ಅರಿವು ಕಾರ್ಯಕ್ರಮ’ದಲ್ಲಿ ಅವರು ಮಾತನಾಡಿದರು. ನಾವೆಲ್ಲ ಪರಸ್ಪರ ಅರಿತಾಗ ಸಮಸ್ಯೆ ಇತ್ಯರ್ಥವಾಗುತ್ತದೆ. ಗಂಡು ಹೆಣ್ಣನ್ನು ಹಾಗೂ ಹೆಣ್ಣು ಗಂಡನ್ನು ಅರಿತಿರಬೇಕು. ವಿದ್ಯಾರ್ಥಿಗಳು ಪ್ರಶ್ನಿಸುವ ಗುಣ ಬೆಳೆಸಿಕೊಳ್ಳಬೇಕು. ಅಕ್ರಮ, ದೌರ್ಜನ್ಯವನ್ನು ನಿರ್ದಾಕ್ಷಿಣ್ಯವಾಗಿ ಖಂಡಿಸಬೇಕು ಎಂದರು. ‘ಹಣ್ಣು ಹಣ್ಣು ಮುದುಕಿ ಬಾಲ್ಯದಲ್ಲೇ ಸತ್ತು ಹೋದಳು’ ಎನ್ನುವ ಕತೆಯಂತೆ ಹೆಣ್ಣಿನ ಬದುಕಾಗಿದೆ. ಆಕೆಯ ಬಾಲ್ಯ, ಯೌವ್ವನವನ್ನು ಸಮಾಜ ಕಿತ್ತುಕೊಳ್ಳುತ್ತಿದೆ. ಅದನ್ನು ಮೀರಿ ಮುನ್ನಡೆಯಬೇಕು. ಸಾಧನೆ ಮಾಡಬೇಕು. ಮಡಿವಂತಿಕೆ ಬೇಡ’ ಎಂದು ಹೆಣ್ಣು ಮಕ್ಕಳನ್ನು ಅವರು ಹುರಿದುಂಬಿಸಿದರು. ‘ಗಂಡು ಆಕಾಶ ತತ್ವ…

Read More