Author: admin
ನವರಾತ್ರಿ ಹಬ್ಬವನ್ನು ಕರ್ನಾಟಕದಲ್ಲಿ ನಾಡಹಬ್ಬ ದಸರಾ ಎಂದೂ, ಪಶ್ಚಿಮ ಬಂಗಾಲದಲ್ಲಿ ದುರ್ಗಾಪೂಜಾ ಎಂದೂ ಕರೆಯಲಾಗುತ್ತದೆ. ಈ ಸಂದರ್ಭದಲ್ಲಿ ದೇವಿಯ ಒಂಬತ್ತು ವಿವಿಧ ರೂಪಗಳನ್ನು ಆರಾಧಿಸಲಾಗುತ್ತದೆ. ವಿಜಯದಶಮಿಯ ದಿನ ಶಮೀ ವೃಕ್ಷಕ್ಕೆ ಪೂಜೆಯನ್ನು ಸಲ್ಲಿಸಿ ಶಮೀಯನ್ನು ವಿನಿಯೋಗ ಮಾಡಲಾಗುತ್ತದೆ. “ಶಮೀ ಶಮಯತೇ ಪಾಪಂ” ಎಂಬುದಾಗಿ ಶಮೀಯು ಪಾಪನಾಶಕ ಎಂಬ ನಂಬಿಕೆಯೂ ಇದೆ. ದಸರಾವನ್ನು ದಶಹರಾ ಎಂಬುದಾಗಿ ಕರೆಯಲಾಗುತ್ತದೆ. ಮಹಿಷಾಸುರನ ಮಾಯೆಯನ್ನು ಗುರುತಿಸಿ ಆತನ ಆಸುರೀ ಪಾಶದಿಂದ ಮುಕ್ತರಾಗಲು ಶಕ್ತಿಯ ಉಪಾಸನೆ ಅಗತ್ಯ. ಅದಕ್ಕೋಸ್ಕರ ನವರಾತ್ರಿಯ ಒಂಬತ್ತು ದಿನವೂ ಶಕ್ತಿಯ ಉಪಾಸನೆ ಮಾಡಿ ದಶಮಿಯಂದು ವಿಜಯೋತ್ಸವ ಆಚರಿಸಲಾಗುತ್ತದೆ. ಇದನ್ನು ದಶಹರಾ ಅಥವಾ ದಸರಾ ಎನ್ನುತ್ತಾರೆ. ದಶ ಎಂದರೆ ಹತ್ತು ಮತ್ತು ಹರ ಎಂದರೆ ಸೋತಿವೆ ಎಂದರ್ಥ. ಇಲ್ಲಿ ದುಷ್ಟರ ನಾಶವಾಗಿ ಶಿಷ್ಟರ ಸಂರಕ್ಷಣೆಯಾಗುತ್ತದೆ. ದಸರಾದ ಮೊದಲ ಒಂಬತ್ತು ರಾತ್ರಿಗಳಲ್ಲಿ ಎಲ್ಲಾ ದಿಕ್ಕುಗಳು ದೇವಿಯ ಶಕ್ತಿಯಿಂದ ಸಂಪನ್ನವಾಗಿರುತ್ತದೆ. ಅಂದರೆ ದಶದಿಕ್ಪಾಲಕರು, ಗಣರು ಮುಂತಾದವರ ಮೇಲೆ ದೇವಿಯ ನಿಯಂತ್ರಣ ಇರುತ್ತದೆ. ಹತ್ತೂ ದಿಕ್ಕುಗಳ ಮೇಲೆ ವಿಜಯವು ದೊರಕಿರುತ್ತದೆ.…
ಹುಬ್ಬಳ್ಳಿ ಧಾರವಾಡದ ಕೆಸಿಡಿ ವಿಜ್ಞಾನ ಮಹಾವಿದ್ಯಾಲಯದ ಮೈದಾನದಲ್ಲಿ ಆರ್ ಎಸ್ ಸಿ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಬುಧವಾರ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹುದ್ದೂರ್ ಶಾಸ್ತ್ರಿಜೀ ಜಯಂತಿ ಅಂಗವಾಗಿ ದಿ. ಅಕ್ಕಮ್ಮ ಶೆಟ್ಟಿ ಸ್ಮರಣಾರ್ಥ ಆಯೋಜಿಸಲಾಗಿದ್ದ 30 ಯಾರ್ಡ್ ಹೊನಲು ಬೆಳಕಿನ ಕ್ರಿಕೆಟ್ ಟೂರ್ನಿಯಲ್ಲಿ ದುರ್ಗಾ ನಿವಾಸ ತಂಡ ಚಾಂಪಿಯನ್ ಆಗಿ ಹಾಗೂ ಓಜೋನ್ ತಂಡ ರನ್ನರ್ ಅಪ್ ಪ್ರಶಸ್ತಿ ತಮ್ಮದಾಗಿಸಿಕೊಂಡರು. ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ದುರ್ಗಾನಿವಾಸ ತಂಡ 6 ಓವರ್ ನಲ್ಲಿ 4 ವಿಕೆಟ್ ಕಳೆದುಕೊಂಡು 66 ರನ್ ಗಳಿಸಿತು. ಈ ಗುರಿ ಬೆನ್ನು ಹತ್ತಿದ ಓಜೋನ್ ತಂಡ 3 ವಿಕೆಟ್ ಕಳೆದುಕೊಂಡು 48 ರನ್ ಗಳಿಸಿತು. ಇದರಿಂದ ದುರ್ಗಾನಿವಾಸ ತಂಡ 18 ರನ್ ಗಳಿಂದ ಜಯಗಳಿಸಿ ಚಾಂಪಿಯನ್ ಪಟ್ಟ ತನ್ನದಾಗಿಸಿಕೊಂಡಿತು. ಆರ್ ಎಸ್ ಸಿ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್ ನ ಅಧ್ಯಕ್ಷ, ಹೋಟೆಲ್ ಉದ್ಯಮಿ ರತ್ನಾಕರ ಶೆಟ್ಟಿ ಮಾತನಾಡಿ, ಇಂದಿನ ಯುವ ಜನಾಂಗ…
ಎಕ್ಸಲೆಂಟ್ ವಿದ್ಯಾಸಂಸ್ಥೆಯು ಕೇವಲ ಶಿಕ್ಷಣಕ್ಷೇತ್ರದಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿದದ್ದಲ್ಲದೆ, ಸಾಂಸ್ಕೃತಿಕ, ಪ್ರತಿಭಾ ಕಾರಂಜಿ ಹಾಗೂ ಕ್ರೀಡಾಕ್ಷೇತ್ರದಲ್ಲೂ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿಯೂ ತನ್ನ ಹಿರಿಮೆಯ ಛಾಪನ್ನು ಮೂಡಿಸಿ ಅದೆಷ್ಟೊ ಪ್ರಶಸ್ತಿಗಳನ್ನು ತನ್ನ ಮೂಡಿಗೇರಿಸಿಕೊಂಡಿದೆ. ಅಂತಹ ಸಾಧನೆಗಳ ಹಾದಿಯ ದಾಖಲೆಗಳ ಸರಮಾಲೆಗಳ ಗರಿಯತ್ತ ಸಾಗುತ್ತಾ, ದಿನಾಂಕ 01-10-2024ರಂದು ಪದವಿ ಪೂರ್ವ ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ ಹಾಗೂ ಡಾ. ಎನ್.ಎಸ್.ಎ.ಎಂ ಪದವಿ ಪೂರ್ವ ಕಾಲೇಜು, ನಿಟ್ಟೆ, ಕಾರ್ಕಳ ಇವರ ಸಹಭಾಗಿತ್ವದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪುಟ್ಬಾಲ್ ಪಂದ್ಯಾಟದಲ್ಲಿ ಕುಂದಾಪುರ ವಲಯವು ಉಡುಪಿ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದು ಮುಂದೆ ನಡೆಯುವ ರಾಜ್ಯ ಮಟ್ಟದ ಪುಟ್ಬಾಲ್ ಪಂದ್ಯಾಟದಲ್ಲಿ ನಮ್ಮ ಸಂಸ್ಥೆಯ ವಿದ್ಯಾರ್ಥಿಗಳು ಆಯ್ಕೆಗೊಂಡಿರುತ್ತಾರೆ. ನಮ್ಮ ಎಕ್ಸಲೆಂಟ್ ವಿದ್ಯಾಸಂಸ್ಥೆಯ ಪುಟ್ಬಾಲ್ ಪ್ರತಿಭೆಗಳಾದ ಪ್ರಥಮ್ ಎಸ್ ಶೆಟ್ಟಿ ಮತ್ತು ಎಲಿಕ್ ಅಬ್ರಾನ್ ದಾಲ್ಮೇದಾ ರವರು ಜಿಲ್ಲಾತಂಡದ ಅತ್ಯುತ್ತಮ ಆಟಗಾರರಾಗಿ ಹೊರಹೊಮ್ಮಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವುದು ಹೆಮ್ಮೆ ಹಾಗೂ ಸಂತಸದ ವಿಷಯವಾಗಿದೆ. ಈ…
ಯುಎಇ ಮಲ್ಟಿ ಸ್ಟಾರ್ ಸಂಘಟಿಸಿದ್ದ ಪ್ರತಿಷ್ಠಿತ ‘ಯುಎಇ ಐಡೋಲ್ 24’ ಜೂನಿಯರ್ ವಿಭಾಗದ ಸ್ಪರ್ಧೆಯು ದುಬೈನ ಸ್ವಿಸ್ ಇಂಟರ್ನ್ಯಾಷನಲ್ ಸ್ಕೂಲ್ ಸಭಾಂಗಣದಲ್ಲಿ ಸೆಪ್ಟೆಂಬರ್ 28 ರಂದು ನಡೆಯಿತು. ಯು.ಎ.ಇ ಜೂನಿಯರ್ ಐಡೊಲ್ ಸಂಗೀತ ಸ್ವರ್ಧೆಯು ಜೂನಿಯರ್ ವಿಭಾಗದಲ್ಲಿ ನಡೆಯಿತು. ಜೂನಿಯರ್ ವಿಭಾಗದಲ್ಲಿ ಸನ್ನಿಧಿ ಶೆಟ್ಟಿ ಚಾಂಪಿಯನ್ ಆಗಿ ಯು.ಎ.ಇ ಜೂನಿಯರ್ ಐಡೊಲ್ – 24 ಪ್ರಶಸ್ತಿ ಮುಡಿಗೇರಿಸಿಕೊಂಡರು. ಸಬ್ ಜೂನಿಯರ್ ವಿಭಾಗದಲ್ಲಿ ಮಹದ್ವಿನ್ ಕೌಶಿಕ್ ಪ್ರಶಸ್ತಿ ತಮ್ಮದಾಗಿಸಿಕೊಂಡರು. ಕಾರ್ಯಕ್ರಮದಲ್ಲಿ ತೀರ್ಪುಗಾರರಾಗಿ ನಟ, ಸಂಗೀತ ಸಾಧುಕೋಕಿಲ, ಪ್ರಸಿದ್ಧ ಹಿನ್ನೆಲೆ ಗಾಯಕಿ ಅನುರಾಧಾ ಭಟ್, ಸಿನಿಮಾ ನಟ ರಾಪರ್ ಚಂದನ್ ಶೆಟ್ಟಿ ಭಾಗವಹಿಸಿದ್ದರು. ಸಂಜೆ ನಡೆದ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಯುಎಇ ಕನ್ನಡ ಸಂಘದ ಅಧ್ಯಕ್ಷ ಸರ್ವೋತ್ತಮ ಶೆಟ್ಟಿ ವಿಜೇತರಿಗೆ ಬಹುಮಾನ ವಿತರಿಸಿದರು. ಈ ವೇಳೆ ತೀರ್ಪುಗಾರರು ಮಲ್ಟಿ ಸ್ಟಾರ್ ಸಂಘಟನೆಯ ಪ್ರಮುಖರಾದ ಮಮತಾ ಮತ್ತು ಸಿಂಥಿಲ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಗೀತ ಕಾರ್ಯಕ್ರಮವನ್ನು ಖ್ಯಾತ ನಿರೂಪಕಿ ಅನುಪಮಾ ಭಟ್ ನಿರೂಪಿಸಿದರು. ಸಭಾ ಕಾರ್ಯಕ್ರಮದ ನಿರೂಪಣೆಯನ್ನು…
ವಿದ್ಯಾಗಿರಿ: ಆಯುರ್ವೇದದ ಪ್ರಸೂತಿ ತಂತ್ರದಲ್ಲಿ ಸ್ತ್ರೀ ರೋಗಕ್ಕೆ ಹಲವಾರು ಪರಿಹಾರವಿದೆ ಎಂದು ಆಳ್ವಾಸ್ ಹೆಲ್ತ್ ಸೆಂಟರ್ ಸ್ತ್ರೀರೋಗತಜ್ಞೆ ಡಾ ಹನಾ ಶೆಟ್ಟಿ ನುಡಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ) ಆಳ್ವಾಸ್ ನಿರಾಮಯ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಆಳ್ವಾಸ್ ಆಯುರ್ವೇದ ಕಾಲೇಜಿನ ಪ್ರಸೂತಿ ತಂತ್ರ ಮತ್ತು ಸ್ತ್ರೀ ರೋಗ ಸ್ನಾತಕೋತ್ತರ ವಿಭಾಗ, ಮೂಡಬಿದಿರೆ ಬಂಟರ ಮಹಿಳಾ ಸಂಘದ ಜಂಟಿ ಆಶ್ರಯದಲ್ಲಿ ಮೂಡಬಿದಿರೆಯ ಕನ್ನಡ ಭವನದಲ್ಲಿ ಬುಧವಾರ ಹಮ್ಮಿಕೊಂಡ ‘ಸ್ತ್ರೀ ರೋಗ ಮಾಹಿತಿ ಹಾಗು ಉಚಿತ ಆರೋಗ್ಯ ತಪಾಸಣಾ’ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸ್ತ್ರೀರೋಗದ ಕುರಿತು ಅರಿವು ಮೂಡಿಸಿ ಹಾಗೂ ರಿಯಾಯಿತಿ ದರದಲ್ಲಿ ಔಷಧವನ್ನು ಒದಗಿಸಿ, ಮುಂಬರುವ ದಿನಗಳಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಭೇಟಿ ನೀಡಿ ಸೂಕ್ತ ಪರಿಹಾರವನ್ನು ಕಂಡುಕೊಳ್ಳುವವರಿಗೆ ನೆರವಾಗುತ್ತೇವೆ ಎಂದರು. ಒಂದು ಕುಟುಂಬದ ಸ್ತ್ರೀ ಆರೋಗ್ಯವಾಗಿದ್ದಾಗ ಮಾತ್ರ, ಕುಟುಂಬದ ಎಲ್ಲಾ ಸದಸ್ಯರು ಆರೋಗ್ಯದಿಂದಿರಲು ಸಾಧ್ಯ ಎಂದು ಹೇಳಿದರು. ಆಳ್ವಾಸ್ ನಿರಾಮಯದ ವೈದ್ಯಕೀಯ ನಿರ್ದೇಶಕಿ ಡಾ ಸುರೇಖಾ ಪೈ, ಮಾತನಾಡಿ, ಬಹುತೇಕ ಸ್ತ್ರೀಯರು…
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಜಿಲ್ಲಾ ಉಪನಿರ್ದೇಶಕರ ಕಛೇರಿ (ಆಡಳಿತ) ಮಂಗಳೂರು ಹಾಗೂ ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ದಕ್ಷಿಣ ಕನ್ನಡ ಮತ್ತು ಮಂಗಳೂರು ದಕ್ಷಿಣ ವಲಯ, ಎಸ್ಡಿಎಮ್ ಮಂಗಳಜ್ಯೋತಿ ಸಮಗ್ರ ಶಾಲೆ ವಾಮಂಜೂರು ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರ ಕುಸ್ತಿ ಪಂದ್ಯಾಟದಲ್ಲಿ ಆಳ್ವಾಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು 06 ಚಿನ್ನ, 01 ಬೆಳ್ಳಿ, 01 ಕಂಚು ಒಟ್ಟು 08 ಪದಕಗಳೊಂದಿಗೆ 17 ವರ್ಷ ವಯೋಮಿತಿಯ ಬಾಲಕರ ತಂಡ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿರುತ್ತಾರೆ. ಮುಂದಿನ ತಿಂಗಳು ನಡೆಯುವ ರಾಜ್ಯಮಟ್ಟದ ಕುಸ್ತಿ ಪಂದ್ಯಾಟಕ್ಕೆ ಆಳ್ವಾಸ್ ಆಂಗ್ಲ ಮಾಧ್ಯಮ ಶಾಲೆಯಿಂದ 07 ವಿದ್ಯಾರ್ಥಿಗಳು ಆಯ್ಕೆಯಾಗಿರುತ್ತಾರೆ. ಫಲಿತಾಂಶ : 17 ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ : ರಜತ್ ಬಸು – 55 ಕೆಜಿ ವಿಭಾಗದಲ್ಲಿ (ಪ್ರಥಮ), ರಿತಿಕ್ ಕೆ ಜಿ – 60…
ಮೂಡಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣ ಕನ್ನಡ ಮತ್ತು ಕಪಿತಾನಿಯೋ ಪದವಿಪೂರ್ವ ಕಾಲೇಜು ಮಂಗಳೂರು ಜಂಟಿ ಆಶ್ರಯದಲ್ಲಿ ಮಂಗಳೂರಿನಲ್ಲಿ ಜರುಗಿದ ಜಿಲ್ಲಾ ಮಟ್ಟದ ಖೋ-ಖೋ ಪಂದ್ಯಾಟದಲ್ಲಿ ಬಾಲಕರ ವಿಭಾಗದಲ್ಲಿ ಮೂಡುಬಿದಿರೆ ತಾಲೂಕನ್ನು ಪ್ರತಿನಿಧಿಸಿದ ಆಳ್ವಾಸ್ ತಂಡವು ಮಂಗಳೂರು ತಾಲೂಕನ್ನು ಪ್ರತಿನಿಧಿಸಿದ ಕಪಿತಾನಿಯೋ ಪ.ಪೂ. ಕಾಲೇಜನ್ನು 1 ಇನ್ನಿಂಗ್ಸ್ ಹಾಗೂ 06 ಅಂಕಗಳಿಂದ ಸೋಲಿಸಿ ಪ್ರಶಸ್ತಿಯನ್ನು ಪಡೆಯಿತು. ಬಾಲಕರ ಸೆಮಿಫೈನಲ್ ಪಂದ್ಯಾಟದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು ಪುತ್ತೂರು ತಾಲೂಕನ್ನು ಪ್ರತಿನಿಧಿಸಿದ ವಿವೇಕಾನಂದ ಪದವಿಪೂರ್ವ ಕಾಲೇಜನ್ನು ಸೋಲಿಸಿ ಫೈನಲ್ಗೆ ಪ್ರವೇಶಿಸಿತ್ತು. ಬಾಲಕಿಯರ ವಿಭಾಗದಲ್ಲಿ ಮೂಡುಬಿದಿರೆ ತಾಲೂಕನ್ನು ಪ್ರತಿನಿಧಿಸಿದ ಆಳ್ವಾಸ್ ತಂಡವು ಕಡಬ ತಾಲೂಕನ್ನು ಪ್ರತಿನಿಧಿಸಿದ ಬೆಥನಿ ಪ.ಪೂ. ಕಾಲೇಜು ತಂಡವನ್ನು 1 ಇನ್ನಿಂಗ್ಸ್ ಹಾಗೂ 10 ಅಂಕಗಳಿಂದ ಸೋಲಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಬಾಲಕಿಯರ ಸೆಮಿಫೈನಲ್ ಪಂದ್ಯಾಟದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು ಮೂಲ್ಕಿ ತಾಲೂಕನ್ನು ಪ್ರತಿನಿಧಿಸಿದ ಶ್ರೀ ದುರ್ಗಾಪರಮೇಶ್ವರಿ ಪದವಿಪೂರ್ವ ಕಾಲೇಜು ಕಟೀಲನ್ನು ಸೋಲಿಸಿ ಫೈನಲ್ಗೆ ಅರ್ಹತೆ ಪಡೆದಿತ್ತು. ವಿಜೇತ ತಂಡವನ್ನು ಆಳ್ವಾಸ್ ಶಿಕ್ಷಣ…
ಯಕ್ಷಗಾನ ಕಲೆಗೆ ಅದರದೇ ಆದ ಮಹತ್ವವಿದೆ. ಮೂಲ ಚೌಕಟ್ಟಿಗೆ ಬದಲಾವಣೆಯಾಗದಂತೆ ಆ ಕಲೆಯನ್ನು ಪ್ರದರ್ಶಿಸಬೇಕು. ಇತ್ತೀಚೆಗೆ ಕೆಲವು ಪ್ರಸಂಗಗಳು ಯಕ್ಷಗಾನದ ಚೌಕಟ್ಟನ್ನು ಮೀರಿ ಪ್ರದರ್ಶನಗೊಳ್ಳುತ್ತಿರುವುದು ವಿಷಾದನೀಯ. ಯಕ್ಷಗಾನದಲ್ಲಿ ಬದಲಾವಣೆ ಹಾಗೂ ಮನೋರಂಜನೆ ಬೇಕು. ಆದರೆ ಅದಕ್ಕೊಂದು ಇತಿಮಿತಿ ಇರಬೇಕು ಎಂದು ಹೇರಂಬಾ ಇಂಡಸ್ಟ್ರೀಸ್ ಲಿ. ನ ಸಿಎಂಡಿ ಕನ್ಯಾನ ಸದಾಶಿವ ಶೆಟ್ಟಿ ತಿಳಿಸಿದರು. ಕುರ್ಲಾ ಪೂರ್ವದ ಮುಂಬಯಿ ಬಂಟರ ಸಂಘದ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ಸೆಪ್ಟೆಂಬರ್ 29ರಂದು ಜರಗಿದ ಅಜೆಕಾರು ಕಲಾಭಿಮಾನಿ ಬಳಗ ಮುಂಬಯಿಯ 23ನೇ ವಾರ್ಷಿಕೋತ್ಸವದ ತ್ರಯೋವಿಂಶತಿ ಕಲಾ ಸಂಭ್ರಮ ಯಕ್ಷರಕ್ಷಾ ಪ್ರಶಸ್ತಿ ಪ್ರಧಾನ ಸಮಾರಂಭ, ಕೋಟಿ – ಚೆನ್ನಯ ಯಕ್ಷಗಾನ ಪುಸ್ತಕ ಬಿಡುಗಡೆ ಹಾಗೂ ಪರಕೆದ ಪಲ್ಲೆಂಕಿ ಯಕ್ಷಗಾನ ಪ್ರದರ್ಶನದಲ್ಲಿ ಸಂಜೆ ನಡೆದ ಸಮಾರೋಪ ಸಮಾರಂಭವನ್ನು ಅವರು ಉದ್ಘಾಟಿಸಿ, ಪ್ರಸಿದ್ಧ ಯಕ್ಷಗಾನ ಕಲಾವಿದ ಪ್ರಾರ್ಥಿಸುಬ್ಬರಿಂದ ಹಿಡಿದು ಅನೇಕ ಪ್ರಸಿದ್ಧ ಹಿರಿಯ ಕಲಾವಿದರು ಯಕ್ಷಗಾನಕ್ಕಾಗಿ ಉತ್ತಮ ಕೊಡುಗೆ ನೀಡಿದ್ದಾರೆ. ಅವರ ಜೀವನವೇ ಯಕ್ಷಗಾನಕ್ಕಾಗಿ ಮುಡಿಪಾಗಿತ್ತು. ಅಂತಹ ಕಲೆಯನ್ನು ನಾವು…
ಗಾಂಧಿ ಜಯಂತಿ ದಿನದಂದು ಸುರತ್ಕಲ್ ಸುಭಾಷಿತ ನಗರದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿ ಕೊಳ್ಳಲಾಯಿತು. ಸ್ವಚ್ಛತಾ ಕಾರ್ಯಕ್ರಮ ಬೆಳಿಗ್ಗೆ ನಡೆಯಿತು. ಸುಭಾಷಿತ ನಗರ ವ್ಯಾಪ್ತಿಯಲ್ಲಿ ಸ್ವಚ್ಛತೆ ನಡೆಯಿತು. ಸುಭಾಷಿತ ನಗರ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಶನ್ ನ ಅಧ್ಯಕ್ಷ ರಮೇಶ್ ಶೆಟ್ಟಿ ಅವರ ನೇತೃತ್ವದಲ್ಲಿ ಸ್ವಚ್ಛತಾ ಅಭಿಯಾನ ನಡೆಯಿತು. ಅಸೋಸಿಯೇಶನ್ ನ ಉಪಾಧ್ಯಕ್ಷ ತಾರಾನಾಥ ಸಾಲ್ಯಾನ್, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಶೆಟ್ಟಿ, ಕೋಶಾಧಿಕಾರಿ ನರಸಿಂಹ ಸುವರ್ಣ, ಸಂಘಟನಾ ಕಾರ್ಯದರ್ಶಿ ಪುಷ್ಪರಾಜ ಶೆಟ್ಟಿ ಕುಡುಂಬೂರು, ಜೊತೆ ಕಾರ್ಯದರ್ಶಿ ಲಕ್ಷ್ಮೀ ಚಂದ್ರಶೇಖರ, ಜಗನ್ನಾಥ ಶೆಟ್ಟಿ ಬಾಳ ಹಾಗೂ ಅಸೋಸಿಯೇಶನ್ ನ ಸದಸ್ಯರು ಪಾಲ್ಗೊಂಡಿದ್ದರು. ಬಳಿಕ ಅಸೋಶಿಯನ್ ನ ಸರ್ವ ಸದಸ್ಯರ ಸಭೆ ರಮೇಶ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸುರತ್ಕಲ್ ಎನ್.ಐ.ಟಿ.ಕೆ ನಿವೃತ್ತ ಪ್ರಾಂಶುಪಾಲ ಡಾ| ಪಿ. ಸುಧಾಕರ ಶೆಟ್ಟಿ ಅವರ ಶ್ರದ್ಧಾಂಜಲಿ ಸಭೆಯು ಬೈಲೂರು ಮಹಿಷಮರ್ದಿನಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಡಾ. ಸುಧೀರ್ ರಾಜ್, ಮಟ್ಟಾರ್ ರತ್ನಾಕರ್ ಹೆಗ್ಡೆ, ಪ್ರೊ.ಕೆ.ಆರ್ ಕಾಮತ್ ನುಡಿನಮನ ಸಲ್ಲಿಸಿದರು. ಮಣಿಪಾಲ ಮಾಹೆಯ ಉಪಕುಲಪತಿ ಡಾ. ಎಚ್. ಎಸ್. ಬಲ್ಲಾಳ್, ಎಂಆರ್ ಜಿ ಗ್ರೂಪ್ ಚೇರ್ಮನ್ ಪ್ರಕಾಶ್ ಶೆಟ್ಟಿ, ಮಣಿಪಾಲ ಕೆಎಂಸಿ ಡೀನ್ ಡಾ. ಪದ್ಮರಾಜ್ ಹೆಗ್ಡೆ, ಕೆಎಂಸಿ ಮೆಡಿಕಲ್ ಸೂಪರಿಂಟೆಂಡೆಂಟ್ ಡಾ. ಅವಿನಾಶ್ ಶೆಟ್ಟಿ, ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಎಂಎಲ್ಸಿ ಮಂಜುನಾಥ್ ಭಂಡಾರಿ, ಮಾಜಿ ಸಚಿವರಾದ ಜಯಪ್ರಕಾಶ್ ಹೆಗ್ಡೆ, ನಾಗರಾಜ್ ಶೆಟ್ಟಿ, ಮಾಜಿ ಶಾಸಕರಾದ ಸುಕುಮಾರ್ ಶೆಟ್ಟಿ, ಹಾಲಾಡಿ ಶ್ರೀನಿವಾಸ್ ಶೆಟ್ಟಿ, ರಘುಪತಿ ಭಟ್, ಲಾಲಾಜಿ ಮೆಂಡನ್, ಆರೆಸ್ಸೆಸ್ ಮುಖಂಡ ಶಂಭು ಶೆಟ್ಟಿ, ಬಿಜೆಪಿ ಮುಖಂಡ ಕಿದಿಯೂರು ಉದಯಕುಮಾರ್ ಶೆಟ್ಟಿ, ಕಾಂಗ್ರೆಸ್ ಮುಖಂಡರಾದ ನವೀನ್ ಚಂದ್ರ ಜೆ. ಶೆಟ್ಟಿ, ಮುನಿಯಾಲು ಉದಯ ಕುಮಾರ ಶೆಟ್ಟಿ, ಕಿಶನ್ ಹೆಗ್ಡೆ…















