Author: admin
ತಮಿಳುನಾಡು ರಾಜ್ಯದ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಗೆ (ಪಿಸಿಎ) ಮಾಡಿರುವ ತಿದ್ದುಪಡಿಗಳ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ ನ ಸಾಂವಿಧಾನಿಕ ಪೀಠ ಎತ್ತಿಹಿಡಿದಿದೆ. ಆ ಮೂಲಕ ಜಾನಪದ ಕ್ರೀಡೆ ಜಲ್ಲಿಕಟ್ಟುಗೆ ಅನುಮತಿ ನೀಡಿದೆ. ಇದೇ ವೇಳೆ ಸುಪ್ರೀಂ ಕೋರ್ಟ್ ನ ಪಂಚ ಸದಸ್ಯ ಸಾಂವಿಧಾನಿಕ ಪೀಠವು ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಕಂಬಳ ಮತ್ತು ಎತ್ತಿಮ ಬಂಡಿ ಓಟವನ್ನು ಅನುಮತಿಸುವ ಕಾನೂನನ್ನು ಎತ್ತಿಹಿಡಿದಿದೆ. ಈ ಮೂಲಕ ಕರಾವಳಿ ಕರ್ನಾಟಕದ ಕ್ರೀಡೆ ಕಂಬಳ ಆಯೋಜನೆಗೆ ಇದ್ದ ಆತಂಕ ದೂರವಾಗಿದೆ. “ಎಲ್ಲಾ ಮೂರು ತಿದ್ದುಪಡಿ ಕಾಯಿದೆಗಳು ಮಾನ್ಯವಾದ ಶಾಸನಗಳಾಗಿವೆ. ಎಲ್ಲಾ ಕಾನೂನುಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ. ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಸಕ್ಷಮ ಅಧಿಕಾರಿಗಳು ತಿದ್ದುಪಡಿ ಮಾಡಿದ ಕಾನೂನಿನ ಕಟ್ಟುನಿಟ್ಟಾದ ಅನುಷ್ಠಾನಕ್ಕೆ ಜವಾಬ್ದಾರರಾಗಿರುತ್ತಾರೆ” ಎಂದು ಸರ್ವೋಚ್ಛ ನ್ಯಾಯಾಲಯ ಹೇಳಿದೆ. ತಮಿಳುನಾಡಿನಲ್ಲಿ ಜನಪ್ರಿಯವಾಗಿರುವ ಜಲ್ಲಿಕಟ್ಟುವಿನಲ್ಲಿ ಪ್ರಾಣಿಗಳ ಹಕ್ಕುಗಳು ಹಾಗೂ ಕ್ರೌರ್ಯ ತಡೆ (ಪಿಸಿಎ) ಕಾಯ್ದೆಯ ಉಲ್ಲಂಘನೆಯಾಗಿದೆ ಎಂದು 2014ರ ಮೇನಲ್ಲಿ ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು. ಇದಾದ ಬಳಿಕ ಕಂಬಳಕ್ಕೂ…
ಪ್ರಜ್ವಲ್ ಫಿಲಂಸ್ ನಿರ್ಮಾಣದ ಕೀರ್ತನ್ ಭಂಡಾರಿ ರಚಿಸಿ ನಿರ್ದೇಶಿಸುತ್ತಿರುವ “ಗಜಾನನ ಕ್ರಿಕೆಟರ್ಸ್” ತುಳು ಚಿತ್ರದ ಶೀರ್ಷಿಕೆ ಅನಾವರಣ ಕಾರ್ಯಕ್ರಮ ಸೋಮವಾರ ಸಂಜೆ ಲಾಲ್ ಭಾಗ್ ನಲ್ಲಿರುವ ಖಾಸಗಿ ಹೋಟೆಲ್ ನಲ್ಲಿ ನಡೆಯಿತು. ಚಿತ್ರರಂಗದ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ಅಂಡರ್ ಆರ್ಮ್ ಕ್ರಿಕೆಟ್ ಜಗತ್ತನ್ನು ತೆರೆದಿಡುವಂತಹ ಪ್ರಯತ್ನವನ್ನು ಈ ಚಿತ್ರತಂಡ ಮಾಡುತ್ತಿದ್ದು ಚಿತ್ರವು ಹಾಸ್ಯಮಯ ಕಥಾಹಂದರವನ್ನು ಹೊಂದಿದ್ದು ಕುಟುಂಬ ಸಮೇತ ನೋಡುವಂತಹ ಚಿತ್ರ ಇದಾಗಿರುತ್ತದೆ, ಕ್ರಿಕೆಟ್ ಪ್ರೇಮಿಗಳಿಗೆ ಮನೋರಂಜನೆ ನೀಡುವಂತಹ ಹಲವಾರು ಸನ್ನಿವೇಶಗಳು ಚಿತ್ರದಲ್ಲಿದೆ ಎಂದು ಹಾಗೂ ಚಿತ್ರದ ಚಿತ್ರೀಕರಣವು ಮೇ 18ರಿಂದ ಮಂಗಳೂರಿನಾದ್ಯಂತ ನಡೆಯಲಿದ್ದು ಅತೀ ಶೀಘ್ರದಲ್ಲಿ ಬೆಳ್ಳಿತರೆಗೆ ಬರಲಿದೆ. ನಾನು ಚಿತ್ರದ ಕಥೆಯನ್ನು ಒಪ್ಪಿಕೊಂಡು ಅದರ ಭಾಗವಾಗಿದ್ದೇನೆ ಎಂದು ತುಳು ರಂಗಭೂಮಿಯ ಹಿರಿಯ ನಟ ಭೋಜರಾಜ್ ವಾಮಂಜೂರ್ ಹೇಳಿದರು. ಚಿತ್ರದ ನಾಯಕ ನಟನಾಗಿ ವಿನೀತ್ ಕುಮಾರ್ ನಟಿಸುತ್ತಿದ್ದು ಇವರಿಗೆ ನಾಯಕಿಯರಾಗಿ ಅನ್ವಿತಾ ಸಾಗರ್ ಹಾಗೂ ಸಮತ ಅಮೀನ್ ಜೊತೆಯಾಗಲಿದ್ದಾರೆ. ತಾರಾಗಣದಲ್ಲಿ ನವೀನ್ ಡಿ ಪಡೀಲ್, ಅರವಿಂದ್ ಬೋಳಾರ್, ಭೋಜರಾಜ ವಾಮಂಜೂರು,…
ಅದು 20ನೇ ಶತಮಾನ!, ಚಿಗುರು ಮೀಸೆಯ ಯವ್ವನದ ದಿನ. ಕಾಲೇಜಿನ ಮೆಟ್ಟಿಲನ್ನು ಹತ್ತಿ ವಿದ್ಯಾಸರಸ್ವತಿಯನ್ನು ಒಲಿಸುವ ಸಂಧರ್ಭ, ಬಿಸಿ ರಕ್ತದ ಸಮಯ, ಎಲ್ಲದಕ್ಕೂ ಸಿದ್ದವಿದ್ದ ಹೊತ್ತು. ಹೀಗೆ ಕಾಲೇಜಿನ ದಿನಗಳಲ್ಲಿ ಪರಿಚಯವಾದ ಒಬ್ಬ ಅತೀ ಹತ್ತಿರದ ಗೆಳೆಯನ ಬಗ್ಗೆ ಇಂದಿನ ಲೇಖನ. ಸುದೃಡ ವ್ಯಕ್ತಿತ್ವ, ಮುಖದಲ್ಲಿ ಮಂದಹಾಸ, ಎಲ್ಲವನ್ನೂ ಗೆಲ್ಲುವ ಉತ್ಸಾಹ, ಹೀಗೆ ಮೊದಲ ಭೇಟಿಯಲ್ಲೇ ಡಿಫರೆಂಟ್ ಇಂಪ್ರೆಷನ್ ಮೂಡಿಸಿ ಪರಿಚಯವಾದ ಗೆಳೆಯನೇ ಮಿಥುನ್ ರೈ. ಹೌದು ! ನನ್ನ ಹಾಗೂ ಮಿಥುನ್ ರೈ ಗೆಳೆತನ ಇಂದು ನಿನ್ನೆಯದಲ್ಲ, ಕಾಲೇಜಿನ ದಿನಗಳಿಂದ ಮಿಥುನ್ ರೈಯ ಏಳು ಬೀಳುಗಳನ್ನು ಬಹಳ ಹತ್ತಿರದಿಂದ ನೋಡಿದವ ನಾನು. ಬಹಳ ಸರಳ ವ್ಯಕ್ತಿ, ಶ್ರೀಮಂತ ಮನೆತನದಿಂದ ಹುಟ್ಟಿ ಬಂದರೂ ಗೆಳೆತನ ಎಂಬ ವಿಚಾರ ಬಂದಾಗ ಎಲ್ಲರೊಂದಿಗೂ ಮೇಲು ಕೀಳು ಎಂಬ ಭೇಧ ಭಾವವಿಲ್ಲದೆ ಬೆರೆಯುವ ಗುಣ. ತನ್ನವರಿಗೊಂದು ಸಮಸ್ಯೆ ಎಂದರೆ ಮೊದಲು ನಿಲ್ಲುವ ಮನಸ್ಸು ! ಮಿಥುನ್ ರೈ ಎಲ್ಲಿಯ ಮಟ್ಟಿಗೆ ಡೌನ್ ಟು ಅರ್ಥ್ ವ್ಯಕ್ತಿಯೆಂದರೆ…
ಐತಿಹಾಸಿಕ, ಜಗತ್ಪ್ರಸಿದ್ದಿ ಶ್ರವಣಬೆಳಗೊಳದ ವಿಂಧ್ಯಗಿರಿ ತಾಣ ಅಪಾಯದ ಅಂಚಿನ ಮರೀಚಿಕೆ….! ಕಣ್ಣಿದ್ದು ಕುರುಡಾದ ಪುರಾತತ್ವ ಇಲಾಖೆ…! ಸಹಸ್ರಾರು ವರ್ಷಗಳ ಹಿಂದಿನ ದಂತಕಥೆ ನೆಲಸಮದ ಭೀತಿಯಲ್ಲಿ…..! ಬಾಹುಬಲಿ ನೆಲೆಸಿರುವ ಬೆಟ್ಟದಿಂದ ಜಾರಿದೆ ಬೃಹದಾಕಾರದ ಕಲ್ಲುಗಳು, ಪುರಾತತ್ವ ಇಲಾಖೆ, ಅಧಿಕಾರಿಗಳು ಮೌನ….!? – ಕೆ. ಸಂತೋಷ ಶೆಟ್ಟಿ, ಮೊಳಹಳ್ಳಿ ಕುಂದಾಪುರ, ಉಡುಪಿ ಜಿಲ್ಲೆ (ಪತ್ರಕರ್ತರು ಮಾಧ್ಯಮ ವಿಶ್ಲೇಷಕರು) ಐತಿಹಾಸಿಕ ಪುರಾಣ ಪ್ರಸಿದ್ಧ ವಿಂಧ್ಯಗಿರಿ ಬೆಟ್ಟ ಕುಸಿಯುವ ಭೀತಿಯಲ್ಲಿದೆ. ಸಾವಿರ ಸಾವಿರ ಭಕ್ತರು ದಿನನಿತ್ಯ ವಿಂಧ್ಯಗಿರಿ ಬೆಟ್ಟಕ್ಕೆ ಭೇಟಿ ನೀಡಿ ಪ್ರವಾಸ ತಾಣದ ಅನುಭವ ಪಡೆದುಕೊಳ್ಳುತ್ತಾರೆ ಆದರೆ ಇತ್ತೀಚಿನ ದಿನಗಳಲ್ಲಿ ಪ್ರವಾಸಿಗರ ಜೀವಕ್ಕೆ ಕುತ್ತು ತರುವ ಭೀತಿ ಎದುರಾಗುತ್ತಿದೆ.ಅದು ವಿಶ್ವ ವಿಖ್ಯಾತ ತಾಣ.. ರಾಷ್ಟ್ರೀಯ ಸ್ಮಾರಕ ಎಂದು ಕೇಂದ್ರ ಸರ್ಕಾರದಿಂದ ಗುರ್ತಿಸಿಕೊಂಡಿರುವ, ಅಹಿಂಸಾ ಮೂರ್ತಿ ಬಾಹುಬಲಿ ಸ್ವಾಮಿ ನೆಲೆಸಿರೋ ಪುಣ್ಯ ಕ್ಷೇತ್ರ (shravanabelagola). ನಿತ್ಯ ಸಹಸ್ರಾರು ಭಕ್ತರು ಬಂದು ಇಲ್ಲಿನ ಬಾಹುಬಲಿ ಏಕ ಶಿಲಾ ವಿಗ್ರಹ ನೋಡಿ ಪುಳಕಿತರಾಗುತ್ತಾರೆ. ಇಂತಹ ಪುಣ್ಯ ಕ್ಷೇತ್ರವನ್ನ ಕೇಂದ್ರ ಪುರಾತತ್ವ…
ವಿಶ್ವಸಂಸ್ಥೆ ಬಿಡುಗಡೆ ಮಾಡಿರುವ ಅಂಕಿಅಂಶಗಳ ಪ್ರಕಾರ ಭಾರತ ವಿಶ್ವದಲ್ಲಿಯೇ ಅತೀ ಹೆಚ್ಚು ಜನಸಂಖ್ಯೆಯನ್ನು ಹೊಂದಿದ ರಾಷ್ಟ್ರವಾಗಿದೆ. ಈ ಮೂಲಕ ಭಾರತ ತನ್ನ ನೆರೆಯ ರಾಷ್ಟ್ರ ಚೀನವನ್ನು ಹಿಂದಿಕ್ಕಿದೆ. ಭೌಗೋಳಿಕ ವಿಸ್ತೀರ್ಣದಲ್ಲಿ ವಿಶ್ವದಲ್ಲಿ ಏಳನೇ ಸ್ಥಾನ ಹೊಂದಿರುವ ಭಾರತ ಈಗ 142.86 ಕೋಟಿ ಜನರನ್ನು ಹೊಂದುವ ಮೂಲಕ ಜನಸಂಖ್ಯೆಯಲ್ಲಿ ಮೊದಲ ಸ್ಥಾನದಲ್ಲಿದೆ. ಒಟ್ಟಾರೆಯಾಗಿ ಅವಲೋಕಿ ಸಿದಾಗ ಭಾರತದ ಪಾಲಿಗೆ ಇದೊಂದು ಧನಾತ್ಮಕ ಬೆಳವಣಿಗೆಯಾಗಲಿ, ಹೆಮ್ಮೆಯ ವಿಷಯವೇನಲ್ಲ. ಹಾಗೆಂದು ಇದು ದೇಶದ ಪಾಲಿಗೆ ಬಲುದೊಡ್ಡ ಹೊರೆ ಎಂದು ಭಾವಿಸಿ ಆತಂಕ ಪಡುವ ಪರಿಸ್ಥಿತಿಯೇನೂ ಸೃಷ್ಟಿಯಾಗಿಲ್ಲ. ಕಾರಣ ದೇಶದ ಒಟ್ಟಾರೆ ಜನಸಂಖ್ಯೆಯನ್ನು ಪರಿಗಣಿಸಿದಾಗ 25.40ಕೋಟಿ ಜನರು 15-24 ವರ್ಷದೊಳಗಿನವರಾಗಿದ್ದಾರೆ. ಇದು ದೇಶದ ಪಾಲಿಗೆ ಆಶಾದಾಯಕ ಮತ್ತು ಇಷ್ಟೊಂದು ಬೃಹತ್ ಪ್ರಮಾಣದ ಯುವ ಸಮುದಾಯವನ್ನು ಹೊಂದಿರುವುದು ಹೆಮ್ಮೆಯ ಸಂಗತಿಯೇ. ಸದ್ಯ ಇಡೀ ವಿಶ್ವದ ಜನಸಂಖ್ಯೆಯಲ್ಲಿನ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಅವಲೋಕಿಸಿದಲ್ಲಿ ಬಹುತೇಕ ದೇಶಗಳಲ್ಲಿ ಜನನ ಪ್ರಮಾಣ ಇಳಿಕೆಯಾಗುತ್ತಲೇ ಬಂದಿದೆ. ಈ ಹಿಂದಿನ ವರ್ಷಗಳಿಗೆ ಹೋಲಿಸಿದಲ್ಲಿ ಈ ವಿಚಾರದಲ್ಲಿ ಭಾರತವೂ…
ಐತಿಹಾಸಿಕ ಹಿನ್ನೆಲೆಯಿದ್ದು,ಸುಮಾರು 2200 ವರ್ಷದ ಇತಿಹಾಸವಿರುವ ಶಿರ್ವ ಮಟ್ಟಾರು ಶ್ರೀ ಬಬ್ಬರ್ಯ ದೈವಸ್ಥಾನದಲ್ಲಿ ಎಲ್ಲೂರು ಸೀಮೆಯ ಆಗಮ ಪಂಡಿತ ವೇ|ಮೂ|ಕುತ್ಯಾರು ಕೇಂಜ ಶ್ರೀಧರ ತಂತ್ರಿಗಳ ನೇತೃತ್ವದಲ್ಲಿ,ವೇ|ಮೂ| ಕುತ್ಯಾರು ಕೇಂಜ ಭಾರ್ಗವ ತಂತ್ರಿ ಮತ್ತು ವೇ|ಮೂ| ರಘುಪತಿ ಗುಂಡು ಭಟ್ ಅವರ ಪೌರೋಹಿತ್ಯದಲ್ಲಿ ಬ್ರಹ್ಮಕಲಶಾಭಿಷೇಕವು ಸೋಮವಾರ ನಡೆಯಿತು. ಸೋಮವಾರ ಪುಣ್ಯಾಹ,ಗಣಯಾಗ,ಬ್ರಹ್ಮಕಲಶ ಪ್ರತಿಷ್ಠೆ,ಪ್ರಧಾನ ಯಾಗ, 8-45ರ ಮೀನ ಲಗ್ನ ಸುಮುಹೂರ್ತದಲ್ಲಿ ಬ್ರಹ್ಮಕಲಾಶಾಭಿಷೇಕ,ಮಹಾಪೂಜೆ ನಡೆದು ಸಾನಿಧ್ಯಕ್ಕೆ ಸಂಬಂಧಪಟ್ಟ ನಾಗಬನದಲ್ಲಿ ತನುತಂಬಿಲ ಸೇವೆ ನಡೆಯಿತು. ಸಂಪ್ರದಾಯದಂತೆ ಮಧ್ಯಾಹ್ನ ಧ್ವಜಾರೋಹಣ ನಡೆದು ದೈವ ಸಂದರ್ಶನ,ಪ್ರಸಾದ ವಿತರಣೆ ನಡೆದು ಅನ್ನಸಂತರ್ಪಣೆ ನಡೆಯಿತು. ಸಾವಿರಾರು ಭಕ್ತರು ಅನ್ನಸಂತರ್ಪಣೆಯಲ್ಲಿ ಭಾಗವಹಿಸಿ ಅನ್ನ ಪ್ರಸಾದ ಸ್ವೀಕರಿಸಿದರು. ರಾತ್ರಿ ನಂದಿಗೋಣ ಮತ್ತು ದೈವ ಬಬ್ಬರ್ಯನ ನೇಮ ನಡೆದು ಮಂಗಳವಾರ ಬೆಳಿಗ್ಗೆ ನೀಚ ದೈವದ ನೇಮ ನಡೆಯಿತು. ದೈವಸ್ಥಾನದ ಮೊಕ್ತೇಸರ ಮಟ್ಟಾರು ಅರಂತಡೆ ಎಂ. ಗಿರೀಶ್ ಹೆಗ್ಡೆ, ಆಡಳಿತ ಮಂಡಳಿಯ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಶಿರ್ವ ನಡಿಬೆಟ್ಟು ಮನೆತನದ ಚಂದ್ರಶೇಖರ ಹೆಗ್ಡೆ, ಬರೊಡಾದ ಉದ್ಯಮಿ ಶಶಿಧರ…
ಬಂಟರ ಯಾನೆ ನಾಡವರ ಮಾತೃ ಸಂಘ ಉಡುಪಿ ತಾಲೂಕು ಸಮಿತಿ ವತಿಯಿಂದ ಸಂಘದ ಕಾರ್ಯ ವ್ಯಾಪ್ತಿಯಾದ ಉಡುಪಿ, ಕಾಪು, ಬ್ರಹ್ಮಾವರ ತಾಲೂಕಿನ ಗ್ರಾಮೀಣ ಬಂಟರ ಸಂಘದ 36 ಪ್ರತಿಭಾನ್ವಿತ ಆರ್ಥಿಕವಾಗಿ ಸಂಕಷ್ಟದಲ್ಲಿರುವ ದ್ವಿತೀಯ ಪಿ. ಯು. ಸಿ ಯ ಬಂಟ ವಿದ್ಯಾರ್ಥಿಗಳಿಗೆ ನೀಟ್ ಸಿಇಟಿ ಉಚಿತ ತರಬೇತಿ ಶಿಬಿರ ಉಡುಪಿಯ ವಿನಯ್ ಅಕಾಡೆಮಿಯಲ್ಲಿ ನಡೆಯಲಿದೆ. ಎ.1 ರಿಂದ ಮೇ.5 ರ ತನಕ ಬೆಳಗ್ಗೆ 9.30ರಿಂದ ಸಂಜೆ 5.30 ರ ತನಕ 35 ದಿನಗಳ ತರಬೇತಿಯು ನಡೆಯಲಿದ್ದು ಸಂಘದ ವ್ಯಾಪ್ತಿಯಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಅವಕಾಶವಿದೆ. ನಿಗದಿತ ಅರ್ಜಿ ನಮೂನೆ ಸಂಘದ ಕಚೇರಿಯಲ್ಲಿ ಲಭ್ಯವಿದ್ದು ಮಾ.20 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಶ್ರೀಧರ ಕೆ. ಶೆಟ್ಟಿ ಕುತ್ಯಾರು ಬೀಡು (8884130064) ಅವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಪ್ರವಾಸೋದ್ಯಮ ಇಲಾಖೆಯಿಂದ ಮಾನ್ಯತೆ ಪಡೆದ ಶಿರ್ವ ಮಂಚಕಲ್ ಪೇಟೆಯ ಮುಖ್ಯರಸ್ತೆ ಬಳಿಯ ಶಾಮ್ಸ್ ಸ್ಕ್ವೇರ್ ವಾಣಿಜ್ಯ ಸಂಕೀರ್ಣ ಮತ್ತು ವಸತಿಗೃಹದ ಪ್ರವರ್ತಕರ ಭಾರತ್ ಪೆಟ್ರೋಲಿಯಂನ ನೂತನ ಪೆಟ್ರೋಲ್ಪಂಪ್ ಆನ್ಯ ಫ್ಯೂಯೆಲ್ಸ್ ಕಾರ್ಕಳ-ನಿಟ್ಟೆ ರಾಜ್ಯ ಹೆದ್ದಾರಿಯ ಬಳಿ ಶುಭಾರಂಭಗೊಂಡಿತು. ಸಂಸ್ಥೆಯ ಪ್ರವರ್ತಕರಾದ ಶಿರ್ವ ಅಟ್ಟಿಂಜ ಶೆಟ್ಟಿ ನಿವಾಸ ಹೇಮಲತಾ ಶೆಟ್ಟಿ ಮತ್ತು ಶಂಭು ಶೆಟ್ಟಿ ದಂಪತಿ ಆನ್ಯ ಫ್ಯೂಯೆಲ್ಸ್ನ್ನು ಉದ್ಘಾಟಿಸಿದರು. ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಆಗಮ ವಿದ್ವಾಂಸ ವೇ|ಮೂ| ಕುತ್ಯಾರು ಕೇಂಜ ಶ್ರೀಧರ ತಂತ್ರಿ ಮಾತನಾಡಿ, ಮನುಷ್ಯ ತಾನು ಮಾಡಿದ ಸಂಪಾದನೆಯ ಒಂದಂಶವನ್ನು ಸಮಾಜಕ್ಕೆ ವಿನಿಯೋಗಿಸಿದರೆ ಜನ್ಮ ಸಾರ್ಥಕವಾಗುತ್ತದೆ. ಸಮಾಜದ ಒಳಿತಿಗಾಗಿ ವಿವಿಧ ಕೊಡುಗೆ ನೀಡುತ್ತಿರುವ ಅಟ್ಟಿಂಜೆ ಶಂಭು ಶೆಟ್ಟಿ ದಂಪತಿ ಮತ್ತು ಮಕ್ಕಳ ವ್ಯವಹಾರ,ಉದ್ದಿಮೆ ಯಶಸ್ವಿ ಪಥದತ್ತ ಮುನ್ನಡೆಯಲಿ ಎಂದು ಹೇಳಿದರು. ಕಾರ್ಕಳ ಅತ್ತೂರು ಸೈಂಟ್ ಲಾರೆನ್ಸ್ ಬಸಿಲಿಕಾದ ಸಹಾಯಕ ಧರ್ಮಗುರು ವಂ| ಆಲ್ಬನ್ ಡಿಸೋಜಾ ಮಾತನಾಡಿ ಸರ್ವಧರ್ಮ ಸಮನ್ವಯದ ಮೂಲಕ…
ಕಾರ್ಕಳ ಈಗ ಜನರ ಗಮನ ಸೆಳೆಯುತ್ತಿದೆ. ಜೊತೆಗೆ ತುಳುನಾಡಿಗರ ಆಕ್ರೊಶಕ್ಕೂ ಕಾರಣವಾಗಿದೆ. ಕಾರ್ಕಳದಲ್ಲೊಂದು ಪರಶುರಾಮ ಥೀಮ್ ಪಾರ್ಕ್ ರಚನೆ ಮಾಡಿದೆ ಘನ ಸರಕಾರ. ಇಂಡಾಲಜಿ ವಿದ್ಯಾರ್ಥಿಗಳಾಗಿ ಇಂದಿರ ಗಾಂಧಿ ನ್ಯಾಶನಲ್ ಮ್ಯೂಸಿಯಂಗೆ ನಾವು ಭೇಟಿ ನೀಡಿದ್ದಾಗ ತುಳುನಾಡಿನ ಉಯ್ಯಾಲೆಯಲ್ಲಿ ಇರುವಂತ ಸಣ್ಣ ಸಣ್ಣ ಹಿತ್ತಾಳೆಯ ಪ್ರತಿಮೆಗಳನ್ನು ನಾನು ಅಲ್ಲಿ ಗಮನಿಸಿದೆ. ಈ ಬಗ್ಗೆ ನಮ್ಮ ಇಂಡಾಲಜಿ ಗುರುಗಳಾದ ಎಸ್ ನಾಗರಾಜು ಅವರಲ್ಲಿ ಚರ್ಚೆ ನಡೆಯಿತು. “ನಿಮ್ಮ ಕಡೆ ಅಧ್ಯಯನ ನಡೆಯಲು ಬಹಳಷ್ಟು ಇದೆ. ಪರಂಪರೆಯನ್ನು ಉಳಿಸಿಕೊಳ್ಳುವುದರಲ್ಲಿ ನಿಮ್ಮನ್ನು ಮೆಚ್ಚಬೇಕು. ನೀವು ರಾಕೆಟ್ ಯುಗಕ್ಕೆ ಹೋದರೂ ಲೋಹಯುಗದ ಪಳೆಯುಳಿಕೆಗಳನ್ನು ಬಿಟ್ಟಿಲ್ಲ ಎಂದರು. ಅದು ನಿಜವೇ. ಜಗದಗಲ ತಮ್ಮ ಛಾಪನ್ನು ಛಾಪಿಸಿದ ತುಳುವರು ಆದಿ ಕಾಲದ ಭೂತಾರಾಧನೆಯನ್ನು ಅಭಿಮಾನದಿಂದ ಸಮರ್ಪಣಾ ಭಕ್ತಿಯಿಂದ ಮುಂದುವರಿಸಿಕೊಂಡು ಬರುತ್ತಿದ್ದಾರೆ. “ ತುಳುವ ನಂಬಿಕೆಯ ಪ್ರಕಾರ ‘ನಾರಾಯಣ (ಸೂರ್ಯ) ಚಂದ್ರರ ಉದಯದೊಂದಿಗೆ ನೀರು ತುಂಬಿಕೊಂದ್ದ ಭೂಮಿಯಲ್ಲಿ ಜೀವಿಗಳೂ ಹುಟ್ಟಿದುವು. ಆದ್ದರಿಂದಲೇ ಏನೋ ತುಳುನಾಡಿನ ದೇವಾಲಯಗಳ ಬಾಗಿಲಲ್ಲಿ ಸೂರ್ಯ ಚಂದ್ರರ ಚಿಹ್ನೆಗಳನ್ನು…
ಸುರತ್ಕಲ್: “ರಾಜ್ಯಕ್ಕೆ ಮಾದರಿ ಶಾಲೆ ಎನಿಸಿರುವ ಮಧ್ಯ ಸರಕಾರಿ ಪ್ರಾಥಮಿಕ ಶಾಲೆಗೆ ಸರಕಾರದ ವತಿಯಿಂದ ಆಟದ ಮೈದಾನ ನಿರ್ಮಿಸಲು 2 ಎಕ್ರೆ ಜಾಗ ದೊರೆತಿದ್ದು ಅದರಲ್ಲಿ ಟ್ರಸ್ಟ್ ಗೌರವಾಧ್ಯಕ್ಷರಾದ ಕರುಣಾಕರ ಎಂ ಶೆಟ್ಟಿ ಇವರ ನೇತೃತ್ವದಲ್ಲಿ ಸುಮಾರು 2 ಕೋಟಿ ಅಂದಾಜು ವೆಚ್ಚದಲ್ಲಿ ಶಾಲೆಗೆ ಹೆಚ್ಚುವರಿ ಕೊಠಡಿ ಮತ್ತು 9 ಮತ್ತು 10 ನೇ ತರಗತಿ ಹಾಗೂ ಸುಸಜ್ಜಿತವಾದ ಆಟದ ಮೈದಾನವನ್ನು ನಿರ್ಮಿಸಲು ಯೋಜನೆ ರೂಪಿಸಲಾಗಿದೆ” ಎಂದು ವಿದ್ಯಾನಿಧಿ ಎಜುಕೇಷನ್ ಟ್ರಸ್ಟ್ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. 2015-16 ರ ಸಾಲಿನಲ್ಲಿ 75 ಮಕ್ಕಳನ್ನು ಹೊಂದಿದ್ದ ಶಾಲೆಯು ಸುವರ್ಣ ಮಹೋತ್ಸವ ಆಚರಣೆಯ ಸಂದರ್ಭದಲ್ಲಿ ಟ್ರಸ್ಟ್ ನ ಗೌರವಾಧ್ಯಕ್ಷರಾದ ಕರುಣಾಕರ ಎಂ.ಶೆಟ್ಟಿ ಮಧ್ಯ ಗುತ್ತು ಮತ್ತು ಮೋಹನ್ ಚೌಟ ಮಧ್ಯ ಇವರ ಮುತುವರ್ಜಿಯಿಂದ ಮುಂಬೈಯ ಉದ್ಯಮಿಗಳಿಂದ, ಮಹಾ ದಾನಿಗಳಿಂದ, ಸಂಘ ಸಂಸ್ಥೆಗಳಿಂದ, ಊರಿನ ಹಿರಿಯರಿಂದ, ಹಳೆ ವಿದ್ಯಾರ್ಥಿಗಳಿಂದ, ಸರಕಾರದಿಂದ ಮತ್ತು ಜನಪ್ರತಿನಿಧಿಗಳಿಂದ ಹಾಗೂ ವಿದ್ಯಾಭಿಮಾನಿಗಳ ಸಹಕಾರದಿಂದ ಶಾಲೆಯ ಚಿತ್ರಣವೇ ಬದಲಾಗಿ,…