Author: admin
ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸ್ಶೆಟಿಗೆ ದಾಖಲೆಯ ೧೪ನೇ ಬಾರಿಗೆ ಎಸ್.ಸಿ.ಡಿ.ಸಿ.ಸಿ. ಬ್ಯಾಂಕಿನ ಸಾಧನಾ ಪ್ರಶಸ್ತಿ
ರಾಜ್ಯದ ಅಗ್ರಗಣ್ಯ ಕ್ರೆಡಿಟ್ ಸಹಕಾರ ಸಂಸ್ಥೆಗಳಲ್ಲಿ ಒoದಾಗಿರುವ ಪ್ರತಿಷ್ಟಿತ ಸಹಕಾರ ಮಾಣಿಕ್ಯ ಪ್ರಶಸ್ತಿ ಪುರಸ್ಕöÈತ ಮಂಗಳೂರಿನ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ- ಓಪರೇಟಿವ್ ಸೊಸೈಟಿಯು ೨೦೨೪-೨೫ನೇ ಸಾಲಿನಲ್ಲಿ ರೂ. ೫೮೯ ಕೋಟಿ ಠೇವಣಿ, ೫೦೫ ಕೋಟಿ ಸಾಲದೊಂದಿಗೆ ಒಟ್ಟು ವ್ಯವಹಾರ ರೂ. ೧೦೯೪ ಕೋಟಿ ಒಟ್ಟು ವ್ಯವಹಾರವನ್ನು ದಾಖಲಿಸಿ ರೂ.೧೬.೨೯ ಕೋಟಿ ನಿವ್ವಳ ಲಾಭ ಗಳಿಸಿ ಕಳೆದ ೧೮ ವರ್ಷದಿಂದ ನೆಟ್ ಎನ್.ಪಿ.ಎ. ಯನ್ನು ಶೂನ್ಯ ಪ್ರಮಾಣದಲ್ಲಿರಿಸಿ ಸರ್ವತೋಮುಖ ಪ್ರಗತಿಯನ್ನು ಸಾಧಿಸಿದ ಜಿಲ್ಲೆಯ ಅತ್ಯುತ್ತಮ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ ಎಂದು ಎಸ್.ಸಿ.ಡಿ.ಸಿ.ಸಿ. ಬ್ಯಾಂಕಿನವರು ಗುರುತಿಸಿ ತಮ್ಮ ದಿನಾಂಕ ೩೦.೦೮.೨೦೨೫ರಂದು ಜರಗಿದ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಸಂಘಕ್ಕೆ ಸಾಧನಾ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಎಸ್.ಸಿ.ಡಿ.ಸಿ.ಸಿ. ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ.ಎನ್. ರಾಜೇಂದ್ರ ಕುಮಾರ್ರವರು, ಉಭಯ ಜಿಲ್ಲೆಗಳಾದ ದ.ಕ. ಮತ್ತು ಉಡುಪಿ ಜಿಲ್ಲೆಯ ಸಹಕಾರ ಸಂಘಗಳ ಉಪ ನಿಬಂಧಕರುಗಳಾದ ಶ್ರೀ. ಎಚ್. ಎನ್. ರಮೇಶ್ ಮತ್ತು ಶ್ರೀಮತಿ ಲಾವಣ್ಯ ಕೆ. ಆರ್., ಎಸ್.ಸಿ.ಡಿ.ಸಿ.ಸಿ. ಬ್ಯಾಂಕಿನ…
ಪ್ರಜ್ವಲ್ ಫಿಲಂಸ್ ಲಾಂಛನದಲ್ಲಿ ತಯಾರಾಗುತ್ತಿರುವ ಪ್ರಜ್ವಲ್ ಶೆಟ್ಟಿ ನಿರ್ಮಾಣ ಹಾಗೂ ಕೀರ್ತನ್ ಭಂಡಾರಿ ನಿರ್ದೇಶನದ ‘ಗಜಾನನ ಕ್ರಿಕೆಟರ್ಸ್ (ಜಂತೊಟ್ಟು ಸಿನ್ಸ್ 1983)’ ತುಳು ಚಲನಚಿತ್ರವು 2026ರ ಜನವರಿಯಲ್ಲಿ ರಾಜ್ಯಾದ್ಯಂತ ಮತ್ತು ವಿದೇಶಗಳಲ್ಲಿ ತೆರೆಕಾಣಲು ಸಜ್ಜಾಗುತ್ತಿದೆ. ಇದು ತುಳು ಭಾಷೆಯಲ್ಲಿನ ದೊಡ್ಡ ಬಜೆಟ್ ಚಿತ್ರವಾಗಿದ್ದು, ಕ್ರಿಕೆಟ್ ಮತ್ತು ಆ ಆಟಗಾರರ ಬದುಕಿನ ಹಿನ್ನಲೆ ಆಧಾರಿತ ಕತೆ ಹೊಂದಿದೆ. ಚಿತ್ರದಲ್ಲಿ ಹಾಸ್ಯ, ಪ್ರೇಮಪೂರಿತ ಭಾವನೆಗಳು ಮತ್ತು ಸಮಾಜಮುಖಿ ಸಂದೇಶವಿರುವ ಬಿಗು ಕತೆ ಒಳಗೊಂಡಿದೆ. ಕೀರ್ತನ್ ಭಂಡಾರಿ ಅವರು ಕಥೆ, ಚಿತ್ರಕಥೆ ಬರೆದು ಮೊದಲ ಬಾರಿಗೆ ನಿರ್ದೇಶನ ಮಾಡಿದ್ದಾರೆ. ಮಂಗಳೂರು ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಬಹುಪಾಲು ಚಿತ್ರೀಕರಣ ನಡೆದಿದೆ. ಈ ಚಿತ್ರದಲ್ಲಿ ನಿರ್ಮಾಪಕರಾದ ಪ್ರಜ್ವಲ್ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಚಿತ್ರದ ತಾರಾಗಣದಲ್ಲಿ ವಿನೀತ್ ಕುಮಾರ್, ನವೀನ್ ಡಿ. ಪಡೀಲ್, ಅರವಿಂದ ಬೋಳಾರ್, ಭೋಜರಾಜ್ ವಾಮಂಜೂರು, ದೀಪಕ್ ರೈ ಪಾಣಾಜೆ, ಪ್ರಕಾಶ್ ತುಮಿನಾಡು, ಉಮೇಶ್ ಮಿಜಾರು, ಸಮತಾ ಅಮೀನ್, ಅನ್ವಿತಾ ಸಾಗರ್, ಸರ್ವೋತ್ತಮ ಶೆಟ್ಟಿ, ವಾಲ್ಟರ್…
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕಿನಲ್ಲಿ ನಡೆದ ಮಹಾಸಭೆಯಲ್ಲಿ ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು 2024 -25 ನೇ ಸಾಲಿನಲ್ಲಿ ಶೇಕಡ 100 ಸಾಧನೆ ಮಾಡಿದ್ದು, ಇವರಿಗೆ ಸಾಧನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ| ಎಂ.ಎನ್ ರಾಜೇಂದ್ರ ಕುಮಾರ್ ಅವರು ಬಾರ್ಯ ಸಿಎ ಬ್ಯಾಂಕ್ ಅಧ್ಯಕ್ಷ ಪ್ರವೀಣ್ ರೈ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತೀಶ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಜಯರಾಮ್ ರೈ ಬಳಜ್ಜ, ಬಾರ್ಯ ಸಿಎ ಬ್ಯಾಂಕ್ ನಿರ್ದೇಶಕರು ಹಾಗೂ ಇತರರು ಉಪಸ್ಥಿತರಿದ್ದರು.
ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಓಂಕಾರನಗರ ಬಂಟ್ಸ್ ಹಾಸ್ಟೇಲ್ ಮಂಗಳೂರು ಇದರ ಆಶ್ರಯದಲ್ಲಿ ಬಂಟ್ಸ್ ಹಾಸ್ಟೇಲ್ ನ ಓಂಕಾರ ನಗರದಲ್ಲಿ ನಡೆದ ‘ಲಾಸ್ಯ -2025’ ಬಂಟರ ನೃತ್ಯ ಸ್ಫರ್ಧೆಯಲ್ಲಿ 50 ಸಾವಿರ ನಗದು, ಪ್ರಶಸ್ತಿ ಪತ್ರದೊಂದಿಗೆ ಸುರತ್ಕಲ್ ಬಂಟರ ಸಂಘ ಪ್ರಥಮ ಸ್ಥಾನವನ್ನು ಗಳಿಸಿದೆ. ಸುರತ್ಕಲ್ ಬಂಟರ ಸಂಘದ 32 ಮಂದಿ ಸದಸ್ಯರು ರಾಜಸ್ತಾನಿ ನೃತ್ಯವನ್ನು ಪ್ರದರ್ಶಿಸುವುದರ ಮೂಲಕ ಜನರ ಮೆಚ್ಚುಗೆ ಪಡೆದಿತ್ತು. ಬಳಿಕ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ, ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನದ ಟ್ರಸ್ಟಿ ಕೊಡಿಯಾಲ್ ಗುತ್ತು ಅಜಿತ್ ಕುಮಾರ್ ರೈ ಮಾಲಾಡಿ ಪ್ರಶಸ್ತಿಯನ್ನು ವಿತರಿಸಿದರು. ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಬಾಳ ಜಗನ್ನಾಥ ಶೆಟ್ಟಿ, ಸಾಂಸ್ಕೃತಿಕ ಕಾರ್ಯದರ್ಶಿಗಳಾದ ದೇವೇಂದ್ರ ಶೆಟ್ಟಿ, ಆಶಾ ಕಿರಣ್ ರೈ ಪ್ರಶಸ್ತಿಯನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ನಿಕಟ ಪೂರ್ವ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು,…
ಸಂಸ್ಕಾರಯುತ ಸಮಾಜ ನಿರ್ಮಾಣಕ್ಕೆ ಗಣೇಶೋತ್ಸವ ಪೂರಕವಾಗಿದ್ದು, ಆಡಂಬರವಿಲ್ಲದೆ ಇಲ್ಲಿ ಕೇವಲ ದೇವರ ಸಂಕೀರ್ತನೆಯ ಭಜನೆಯ ಮೂಲಕ ಗಣಪತಿಯ ಶೋಭಾಯಾತ್ರೆ ಸಾಗುವುದು ಎಲ್ಲರಿಗೂ ಮಾದರಿಯಾಗಿದೆ ಎಂದು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು. ಅವರು ಮಂಗಳೂರಿನ ಬಂಟ್ಸ್ ಹಾಸ್ಟೆಲ್ ನಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ ನಡೆಯುತ್ತಿರುವ 19ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಶೋಭಾಯಾತ್ರೆಗೆ ಚಾಲನೆ ನೀಡಿ ಮಾತನಾಡಿದರು. ಶಾಸಕ ವೇದವ್ಯಾಸ ಕಾಮತ್ ಅವರು ಮಾತನಾಡಿ, ಸಮಾಜದ ಎಲ್ಲಾ ಕ್ಷೇತ್ರಗಳಲ್ಲಿ ಗಣನೀಯ ಕೊಡುಗೆ ನೀಡಿದ ಬಂಟ ಸಮಾಜ ಅತ್ಯಂತ ವ್ಯವಸ್ಥಿತವಾಗಿ ಸಂಘಟಿಸುತ್ತಿರುವ ಗಣೇಶೋತ್ಸವದಿಂದ ಎಲ್ಲರಿಗೂ ಒಳಿತಾಗಲಿ ಎಂದು ಹಾರೈಸಿದರು. ಯುವ ನೇತಾರ ಮಿಥುನ್ ರೈ ಮಾತನಾಡಿ, ಸಮಾಜದ ಒಗ್ಗಟ್ಟಿಗೆ ಗಣೇಶೋತ್ಸವ ಪ್ರೇರಣೆ ನೀಡಲಿ ಎಂದರು. ಉದ್ಯಮಿ ಅರುಣೋದಯ ರೈ ಮುಖ್ಯ ಅತಿಥಿಯಾಗಿದ್ದರು. ಈ ಸಂದರ್ಭದಲ್ಲಿ ಸಾಧಕರಾದ ಬಂಟರ ಮಾತೃ ಸಂಘದ ಮಂಗಳೂರು ತಾಲೂಕು ಸಮಿತಿಯ ಮಾಜಿ ಸಂಚಾಲಕ…
ಹುಬ್ಬಳ್ಳಿ ವಿದ್ಯಾನಗರ ಶಿರೂರ ಪಾರ್ಕ್ ಕೊಠಾರಿ ಹೌಸ್ ನಲ್ಲಿ ಬ್ಯಾಂಕ್ ಆಫ್ ಮಹಾರಾಷ್ಟ್ರದ ವಿದ್ಯಾನಗರ ಶಾಖಾ ಕಚೇರಿಯ ಉದ್ಘಾಟನೆ ಗುರುವಾರ ನಡೆಯಿತು. ಬ್ಯಾಂಕಿನಿಂದ ನಗರದಲ್ಲಿ ಆರನೇ ಹಾಗೂ ರಾಜ್ಯದಲ್ಲಿ 95ನೇ ಶಾಖೆ ಇದಾಗಿದೆ. ಹುಬ್ಬಳ್ಳಿ ದಾರವಾಡ ಬಂಟರ ಸಂಘದ ಮಾಜಿ ಅಧ್ಯಕ್ಷ, ಖ್ಯಾತ ಲೆಕ್ಕ ಪರಿಶೋಧಕ ಎಸ್ ಬಿ ಶೆಟ್ಟಿ ಅವರು ಉದ್ಘಾಟನೆ ನೆರವೇರಿಸಿ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಮಾರುಕಟ್ಟೆಯಲ್ಲಿ ಬ್ಯಾಂಕುಗಳು ಸೇವಾ ಮನೋಭಾವದೊಂದಿಗೆ ಗ್ರಾಹಕರನ್ನು ಸೆಳೆಯುವಲ್ಲಿ ಗಮನ ಹರಿಸಬೇಕಾಗಿದೆ. ಗ್ರಾಹಕರ ಅಗತ್ಯಗಳನ್ನು ಮನಗೊಂಡು ಅದಕ್ಕೆ ತಕ್ಕಂತೆ ಸೇವೆಯನ್ನು ಒದಗಿಸಬೇಕು ಎಂದರು. ಹುಬ್ಬಳ್ಳಿ ಜೆ.ಎಂ.ಎಫ್.ಸಿ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಯಮನಪ್ಪ ಕರೇಹನುಮಂತಪ್ಪ ಮಾತನಾಡಿ, ದೇಶದ ಆರ್ಥಿಕ ಪ್ರಗತಿಯಲ್ಲಿ ಬ್ಯಾಂಕುಗಳು ದೊಡ್ಡ ಕೊಡುಗೆಯನ್ನು ನೀಡುತ್ತಿವೆ. ಜನರ ಜೀವನ ಸ್ತರವನ್ನು ಸುಧಾರಿಸುವ ಮೂಲಕ ಸಮಾಜದ ಅಭಿವೃದ್ಧಿಯಲ್ಲೂ ಸಹಯೋಗ ಕೊಡುತ್ತಿವೆ. ನಾವೆಲ್ಲರೂ ಒಟ್ಟಾಗಿ ಸದೃಢ ವೈವಿಧ್ಯ ಹಾಗೂ ಆರ್ಥಿಕವಾಗಿ ಸುಧಾರಿತ ಸಮಾಜವನ್ನು ಕಟ್ಟಬೇಕಿದೆ ಎಂದರು. ಬ್ಯಾಂಕಿನ ಹುಬ್ಬಳ್ಳಿ ವಲಯ ವ್ಯವಸ್ಥಾಪಕಿ ಸುಚೇತ ಡಿಸೋಜಾ ಮಾತನಾಡಿ,…
ಬಂಟರ ಯಾನೆ ನಾಡವರ ಮಾತೃ ಸಂಘ ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್ ನ ಓಂಕಾರ ನಗರದಲ್ಲಿ ನಡೆದ ಸಾರ್ವಜನಿಕ ಗಣೇಶೋತ್ಸವ ಎರಡನೇ ದಿನದ ಧಾರ್ಮಿಕ ಸಭೆಯನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತಾಡಿದ ಅವರು, ‘ನಾನು ಮೊದಲ ಬಾರಿ ಇಲ್ಲಿಗೆ ಆಗಮಿಸಿದ್ದೇನೆ. ಬಹಳ ವಿಜೃಂಭಣೆಯಿಂದ ಗಣೇಶೋತ್ಸವ ಆಚರಿಸುತ್ತಿದ್ದೀರಿ. ಗಣೇಶ ಚತುರ್ಥಿಯ ಶುಭ ಸಂದರ್ಭದಲ್ಲಿ ಇಡೀ ಲೋಕಕ್ಕೆ ಒಳೆಯದಾಗಲಿ. ಬಂಟರ ಯಾನೆ ನಾಡವರ ಮಾತೃ ಸಂಘ ನಡೆಸುತ್ತಿರುವ ಈ ಕಾರ್ಯಕ್ರಮ ಲೋಕಕ್ಕೆ ಮಾದರಿಯಾದುದು. ನಮ್ಮೆಲ್ಲರ ಮೇಲೆ ಗಣೇಶನ ಕೃಪೆ ಸದಾ ಇರಲಿ’ ಎಂದರು. ನಿವೃತ್ತ ಐಎಎಸ್ ಅಧಿಕಾರಿ ಟಿ ಶ್ಯಾಮ ಭಟ್ ಮಾತಾಡಿ, ‘ಈ ಜಗತ್ತು ಸರ್ವೋಚ್ಛ ಶಕ್ತಿಯಿಂದ ಮುನ್ನಡೆಯಲ್ಪಡುತ್ತಿದೆ. ಬಾಲ ಗಂಗಾಧರ್ ತಿಲಕ್ ಸ್ಥಾಪಿಸಿರುವ ಗಣೇಶೋತ್ಸವ ನಿಜ ಅರ್ಥದಲ್ಲಿ ಇಡೀ ಸಮಾಜದ ಉತ್ಸವವಾಗಿದೆ. ಇದರಲ್ಲಿ ಎಲ್ಲ ಜಾತಿ ಧರ್ಮದ ಜನರು ಪಾಲ್ಗೊಳ್ಳುತ್ತಿರುವುವುದು ಸಂತಸದ…
ಹೊಸನಗರ ಬಂಟರ ನಾಡವರ ಸಂಘದ ಅಧೀನಕ್ಕೊಳಪಟ್ಟ ನಿಟ್ಟೂರು ಮತ್ತು ಅದರ ಅಕ್ಕ ಪಕ್ಕದ ಗ್ರಾಮಗಳ ಬಂಟ ಸಮುದಾಯದ ಬಂಧುಗಳನ್ನು ಒಂದೆಡೆ ಸೇರಿಸಿ ತಾಲ್ಲೂಕು ಸಂಘದ ಸಂಘಟನೆ ಮತ್ತು ಇನ್ನಿತರೆ ವಿಷಯಗಳ ಕುರಿತು ಚರ್ಚಿಸುವ ಸಲುವಾಗಿ ನಿಟ್ಟೂರಿನ ನವರತ್ನ ಪ್ಯಾಲೇಸ್ ನಲ್ಲಿ ಯುವ ಉದ್ಯಮಿ, ಪತ್ರಿಕೋದ್ಯಮಿ ಜಯರಾಮ್ ಶೆಟ್ಟಿಯವರ ನೇತೃತ್ವದಲ್ಲಿ ಶ್ರಾವಣ ಸಂಗಮ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಸಭೆಯನ್ನು ಆಯೋಜಿಸುವಲ್ಲಿ ತಾಲ್ಲೂಕು ಸಂಘದ ನಿರ್ದೇಶಕರಾದ ಜಯರಾಮ್ ಶೆಟ್ಟಿ, ಪ್ರಸಿದ್ಧ ವಕೀಲರಾದ ಮೋಹನ್ ಶೆಟ್ಟಿ, ಮಾಜಿ ಕಾರ್ಯದರ್ಶಿಗಳಾದ ಶಿವರಾಮ್ ಶೆಟ್ಟಿ, ಅಲ್ಲದೇ ಆ ಭಾಗದ ಮುಖಂಡರು ಪ್ರಮುಖ ಪಾತ್ರ ವಹಿಸಿದ್ದರು. ಸಭೆಯಲ್ಲಿ ತಾಲ್ಲೂಕು ಸಂಘದ ಸಂಘಟನೆ, ಸದಸ್ಯತ್ವ ಅಭಿಯಾನ, ಸಂಘದ ಮೂಲಕ ದೊರೆಯುವ ಸೌಲಭ್ಯಗಳು, ಸಮುದಾಯದ ಬಂಧುಗಳ ನಡುವೆ ಬಾಂಧವ್ಯ ಮುಂತಾದ ವಿಷಯಗಳ ಕುರಿತು ಸುಧೀರ್ಘ ಚರ್ಚೆ ನಡೆಯಿತು. ಕಾರ್ಯಕ್ರಮದ ಆಯೋಜಕರಾದ ಜಯರಾಮ್ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ತಾಲ್ಲೂಕು ಬಂಟರ ಸಂಘದ ಅಧ್ಯಕ್ಷ ದಿವಾಕರ ಶೆಟ್ಟಿ, ಉಪಾಧ್ಯಕ್ಷ ನಗರ ಚಂದ್ರಶೇಖರ ಶೆಟ್ಟಿ…
ನಮ್ಮ ತುಲುವಾ ನಾಡ್ ಡ್ (ಅವಿಭಜಿತ ದಕ್ಷಿಣ ಕನ್ನಡೊಡು) ಪುಂಡಿ, ನೀರ್ ದೋಸೆ, ಗಟ್ಟಿಗ್ ಸಮದಂಡಿದ ಬೊಕ್ಕೊಂಜಿ ಅಡ್ಡೆನೇ ಕಪ್ಪರುಟ್ಟಿ. ಮುಪ್ಪ ನಲ್ಪ ವರ್ಸ ದುಂಬುಡು ದೋಸೆ, ಇಡ್ಲಿ, ಅಪ್ಪದಡ್ಡೆದ ಎದುರುಡು ಈ ಅಡ್ಡೆಗ್ ಒಂತೆ ಮರ್ಯೆದಿ ಕಮ್ಮಿ. ಎಂಕಲೆಗ್ ಇನಿ ಚಾತ ಬಾಯಿಗ್ “ಕಪ್ಪರುಟ್ಟಿ” ಪಂದ್ ಜಾಕಿನೊಡ್, ನಾಸಿಗೆಡ್ ಪನೊಂದಿತ್ತಿನ ಕಾಲ ಇತ್ಂಡ್. “ಬಲ್ಲವರೆ ಬಲ್ಲರು ಬೆಲ್ಲದ ಸವಿಯ” ಪಂಡಿಲೆಕ್ಕ, ತಿಂದಿನಾಯಗೇ ಗೊತ್ತು ಕಪ್ಪರುಟ್ಟಿದ ರುಚಿ (ಸಜ್ಜಿ). ಕಪ್ಪಲ್+ ರುಟ್ಟಿ = ಕಪ್ಪರುಟ್ಟಿ, ಲೋಪ ಸಂಧಿ. ಪಂಡಾ, ದರಿದಿನ ಮನ್ನ ಗುರ್ಕೆ (ಮಂಡೆ)ದ, ಅಗೋಲಿ, ಮಲ್ಲ ಕರತ ಓಡುಡು ಆರಿತ ಬಂದ ಮಯಿತ್ ಕಾಯವುನ ಅಡ್ಡೆ. ಉಂದೆನ್ ಪುತ್ತೂರು ದಂಚಿದಗುಲು “ಓಡ್ ಪಾಲೆ” ಪನ್ಪೆರ್, ಅಗಲೆಡ್ದ್ ಒಂತೆ ಬಡಕಾಯಿ ದಗುಲು ಓಡುದ ಅಡ್ಡೆ ಪನ್ಪೆರ್. ಅಂದ್ ಕಪ್ಪಲ್ ಪಂಡ ಓಡು. ಕಪ್ಪಲ್ ಪಂದ್ ಪಡವುಗು (ಹಡಗು, ಶಿಪ್) ಲಾ ಪನ್ಪೆರ್. “ಕಪ್ಪಲ್ ದಿಂಜಾವರೆ ಪೋತಿನಾಯೆ (ಪಿರ) ಬೈದೆಗೆ, ಬಂಜಿ ದಿಂಜಾವರೆ…
ಮೂಡುಬಿದಿರೆ: ವಿದ್ಯಾರ್ಥಿಗಳಲ್ಲಿ ತುಳು ಭಾಷೆ ಮತ್ತು ಸಂಸ್ಕೃತಿಯ ಕುರಿತು ಆಸಕ್ತಿ ಮೂಡುವಂತೆ ಮಾಡಲು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದೆ ಎಂದು ಅಕಾಡೆಮಿಯ ಅಧ್ಯಕ್ಷ ತಾರಾನಾಥ ಗಟ್ಟಿ ಕಾಫಿಕಾಡ್ ಹೇಳಿದರು. ಆಳ್ವಾಸ್ ಕಾಲೇಜಿನ (ಸ್ವಾಯತ್ತ) ತುಳು ಸಂಸ್ಕೃತಿ ಅಧ್ಯಯನ ಕೇಂದ್ರ ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸಂಯುಕ್ತ ಆಶ್ರಯದಲ್ಲಿ ಶನಿವಾರ ಕಾಲೇಜಿನಲ್ಲಿ ನಡೆದ ‘ಡಿಜಿಟಲ್ ಲೋಕುಡ್ ತುಳು’ ಒಂದು ದಿನದ ಬರವಣಿಗೆ ಕಮ್ಮಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಾಲೇಜಿನ ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆಯಲ್ಲಿ ನಡೆದ ವಿದ್ಯಾರ್ಥಿ ಸಮ್ಮೇಳನ, ತುಳು ಐಸಿರ, ಒಂಜಿ ದಿನ ಬಲೆ ಓದುಗ ಕೂಟ, ಮಕ್ಕಳ ರಂಗತರಬೇತಿ ಶಿಬಿರ, ತುಳುನಾಡ ಸಿರಿ ಮದಿಪು, ತುಳುಭಾಷೆ ಬದ್ಕ್ ಗೇನದ ಪೊಲಬು ಮುಂತಾದ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ತುಳುವಿನ ಕುರಿತು ಆಸಕ್ತಿ ಮೂಡಿಸಲು ಸಹಕಾರಿಯಾಗಿವೆ. ತುಳು ಭಾಷೆಯ ಸಮೃದ್ಧತೆಯನ್ನು ಯುವ ಸಮುದಾಯಕ್ಕೆ ಪರಿಚಯಿಸುವ ಇನ್ನೂ ಅನೇಕ ಕಾರ್ಯಕ್ರಮಗಳು ನಡೆಯಬೇಕು. ತುಳು ಸಾಹಿತ್ಯ ಓದುವ ಅಭಿರುಚಿಯನ್ನು ಯುವಜನತೆಯಲ್ಲಿ ಬೆಳೆಸಬೇಕಾಗಿದೆ. ತುಳುನಾಡಿನ…