Author: admin

ಲಾಲ್‌ಭಾಗ್‌ನಲ್ಲಿರುವ ಶ್ರೀ ರಾಮಕೃಷ್ಣ ವಿದ್ಯಾರ್ಥಿನಿ ನಿಲಯ ಮತ್ತು ಶಾಂಭವಿ ಭವನದ ಹಾಸ್ಟೆಲ್‌ ಡೇ ಕಾರ್ಯಕ್ರಮ ಮತ್ತು ಅಮೃತೋತ್ಸವ ಕಾರ್ಯಕ್ರಮವು ವಿದ್ಯಾರ್ಥಿನಿ ಭವನದಲ್ಲಿ ಜರಗಿತು. ಕಾರ್ಯಕ್ರಮವನ್ನು ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಚೆಯರ್ ಮೆನ್ ಡಾ. ಎಂ ಮೋಹನ ಆಳ್ವ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು.‌ 80 ವರ್ಷಗಳ ಇತಿಹಾಸ ಇರುವ ಬಂಟರ ಮಾತೃ ಸಂಘದ ಶ್ರೀ ರಾಮಕೃಷ್ಣ ವಿದ್ಯಾರ್ಥಿನಿ ನಿಲಯದಿಂದ ಬಹಳಷ್ಟು ಮಂದಿ ಹೆಣ್ಮಕ್ಕಳಿಗೆ ಇಲ್ಲಿ ಪ್ರಯೋಜವಾಗಿದೆ. ಪ್ರತೀ ವರ್ಷ ಹಾಸ್ಟೇಲ್ ಡೇ ಆಚರಿಸುವ ಮೂಲಕ ವಿದ್ಯಾರ್ಥಿನಿ ನಿಲಯದಲ್ಲಿ ಇಲ್ಲಿದ್ದ ಮಹಿಳೆಯರು ಮತ್ತೆ ಒಟ್ಟು ಸೇರುವ ಅವಕಾಶ ದೊರೆತಿದೆ ಎಂದರು.ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್‌ ಕುಮಾರ್‌ ರೈ ಮಾಲಾಡಿ ಅಧ್ಯಕ್ಷತೆ ವಹಿಸಿದ್ದರು. ಶ್ರೀ ರಾಮಕೃಷ್ಣ ವಿದ್ಯಾರ್ಥಿನಿ ನಿಲಯದಲ್ಲಿ ಸಂಸ್ಕೃತಿ ಆಚಾರ ವಿಚಾರಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತದೆ. ಹಾಗಾಗಿ ಇಲ್ಲಿಯ ಮಕ್ಕಳಲ್ಲಿ ಶಿಸ್ತು, ಸಮಯ ಪ್ರಜ್ಞೆಯನ್ನು ಕಾಣಲು ಸಾಧ್ಯವಿದೆ ಎಂದರು. ಅಮೃತಸಿರಿ ಸ್ಮರಣ ಸಂಚಿಕೆಯನ್ನು ಉಡುಪಿ ಜಿಲ್ಲಾಧಿಕಾರಿ ಡಾ|…

Read More

ಅಂಪಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಮುಂದಿನ ಐದು ವರ್ಷದ ಅವಧಿಗೆ ನಡೆದ ಆಡಳಿತ ಮಂಡಳಿಯ ಅಧ್ಯಕ್ಷರ ಆಯ್ಕೆಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಬೆಂಬಲಿತ ನಿರ್ದೇಶಕ ಕೆ. ಪ್ರದೀಪ್ ಕುಮಾರ್ ಶೆಟ್ಟಿ ಗುಡಿಬೆಟ್ಟು ಮತ್ತು ಉಪಾಧ್ಯಕ್ಷರಾಗಿ ಸ್ವಾಭಿಮಾನಿ ಸಹಕಾರಿ ಸಂಘಟನೆಯ ನವೀನ್ ಕುಮಾರ್ ಶೆಟ್ಟಿ ಶಾನ್ಕಟ್ಟು ಅವರು ಉಪಾಧ್ಯಕ್ಷರಾಗಿ ಆಯ್ಕೆಗೊಂಡರು. ಅಂಪಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ, ಸ್ವಾಭಿಮಾನಿ ಸಹಕಾರಿ ಸಂಘಟನೆ ಹೀಗೆ ತ್ರಿಕೋನ ಸ್ಪರ್ಧೆ ನಡೆದಿತ್ತು. ಕಾಂಗ್ರೆಸ್ ಪಕ್ಷದ ಬೆಂಬಲಿತ ಆರು ಮಂದಿ ಸ್ವಾಭಿಮಾನಿ ಸಹಕಾರಿ ಬಳಗದಿಂದ ನಾಲ್ಕು ಮಂದಿ ಹಾಗೂ ಬಿಜೆಪಿ ಬೆಂಬಲಿತ ಮೂರು ಮಂದಿ ನಿರ್ದೇಶಕರಾಗಿ ಆಯ್ಕೆಗೊಂಡಿದ್ದರು.ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಬೆಂಬಲಿತ ನಿರ್ದೇಶಕ ಕೆ. ಪ್ರದೀಪ್ ಕುಮಾರ್ ಶೆಟ್ಟಿ ಗುಡಿಬೆಟ್ಟು ಮತ್ತು ಉಪಾದ್ಯಕ್ಷರಾಗಿ ಸ್ವಾಭಿಮಾನಿ ಸಹಕಾರಿ ಸಂಘಟನೆಯ ನವೀನ ಕುಮಾರ ಶೆಟ್ಟಿ ಶಾನ್ಕಟ್ಟು ಅವರು ಆಯ್ಕೆಗೊಂಡರು. ನಿರ್ದೇಶಕರಾಗಿ ಎ. ಕಿರಣ್ ಹೆಗ್ಡೆ, ಮೋಹನ ವೈದ್ಯ, ಅರುಣ್ ಕುಮಾರ್ ಶೆಟ್ಟಿ, ಭಾರತಿ…

Read More

ಚೌ ಗ್ರಾಮಗಳ ಪ್ರಧಾನ ಕ್ಷೇತ್ರ ಕಾಟುಕುಕ್ಕೆ ಶ್ರೀ ಸುಬ್ರಾಯ ದೇವಸ್ಥಾನದಲ್ಲಿ ಮೇ 6ರಿಂದ 12ರ ತನಕ ನಡೆಯಲಿರುವ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ‘ಪರ್ವ ಸನ್ನಾಹ’ ಎಂಬ ಕಾರ್ಯಕ್ರಮ ಭಾನುವಾರ ಜರಗಿತು. ಈ ಸಂದರ್ಭದಲ್ಲಿ ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರು ನಿಧಿ ಕುಂಭ ಸಂಚಯನಕ್ಕೆ ಮಂತ್ರಾಕ್ಷತೆಯನ್ನಿತ್ತು ಚಾಲನೆ ನೀಡಿದರು. ಬಳಿಕ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಎಣ್ಮಕಜೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಎಡನೀರು ಸ್ವಾಮೀಜಿಯವರು ವಿಜ್ಞಾಪನಾ ಪತ್ರ ಬಿಡುಗಡೆಗೊಳಿಸಿದರು. ಬ್ರಹ್ಮಕಲಶೋತ್ಸವದ ಲಾಂಛನವನ್ನು ಬ್ರಹ್ಮಶ್ರೀ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳು ಬಿಡುಗಡೆಗೊಳಿಸಿದರು. ಎಣ್ಮಕಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಸೋಮಶೇಖರ್ ಜೆ. ಎಸ್. ಸದಾಶಿವ ಭಟ್ ಹರಿನಿಲಯ, ಗೋಪಾಲ ಮಣಿಯಾಣಿಗುತ್ತು ಸಭೆಯಲ್ಲಿ ಮುಖ್ಯ ಅತಿಥಿಗಳಾಗಿದ್ದರು.ಮಾಜಿ ಮೊಕ್ತೇಸರಾದ ಸಂಜೀವ ರೈ ಕೆಂಗನಾಜೆ, ಸಚ್ಚಿದಾನಂದ ಖಂಡೇರಿ, ವಿಷ್ಣು ಪ್ರಕಾಶ್ ಪಿಲಿಂಗಲ್ಲು, ಮಂಜೇಶ್ವರ ಬ್ಲಾಕ್ ಪಂಚಾಯತ್ ಸದಸ್ಯ ಬಟ್ಟು ಶೆಟ್ಟಿ, ಎಣ್ಮಕಜೆ ಗ್ರಾಮ ಪಂಚಾಯತ್ ಅಭಿವೃದ್ಧಿ ಸ್ಥಾಯೀ ಸಮಿತಿ ಅಧ್ಯಕ್ಷ ಬಿ. ಎಸ್ ಗಾಂಭೀರ್…

Read More

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಸಂಸ್ಥೆಯ ಮಹಿಳಾ ತಂಡ ಬೆಂಗಳೂರಿನ ಜೆಪಿ ನಗರದಲ್ಲಿ ಮುಕ್ತಾಯಗೊಂಡ ಅಖಿಲ ಭಾರತ ಗೋಲ್ಡ್ ಮೆಡಲ್ ಬಾಲ್ ಬ್ಯಾಡ್ಮಿಂಟನ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಮೇರಿ ಗೋ ರೌಂಡ್ ಬಾಲ್ ಬ್ಯಾಡ್ಮಿಂಟನ್ ಕ್ಲಬ್‌ನ 50ನೇ ವರ್ಷದ ಸಂಭ್ರಮಾಚರಣೆಯ ಸಲುವಾಗಿ ಬೆಂಗಳೂರಿನ ಜೆಪಿ ನಗರದ ಆರ್‌ಬಿಐ ಲೇಔಟ್ ಕ್ರೀಡಾಂಗಣದಲ್ಲಿ ಹೊನಲು ಬೆಳಕಿನಲ್ಲಿ ನಡೆದ ಪಂದ್ಯಾವಳಿಯ ಫೈನಲ್ಸ್ನಲ್ಲಿ ಆಳ್ವಾಸ್ ತಂಡ ತಮಿಳುನಾಡುವಿನ ಪಿ.ಎಸ್.ಎನ್.ಎ ದಿಂಡಿಗಲ್ ತಂಡವನ್ನು 35-31 ಅಂಕಗಳಿಂದ ಮಣಿಸಿ ಗೋಲ್ಡ್ ಮೆಡಲ್ ಪ್ರಶಸ್ತಿಯನ್ನು ಪಡೆದುಕೊಂಡಿತು. ವಿಜೇತ ಆಳ್ವಾಸ್ ತಂಡವು ಸೂಪರ್ ಲೀಗ ಹಾಗೂ ಇತರ ಪಂದ್ಯಗಳಲ್ಲಿ ಆತಿಥೇಯ ಮೇರಿ ಗೋ ರೌಂಡ್ ಹಾಗೂ ಟಿಬಿಬಿಸಿ ತಿರುವತ್ತೂರು ತಂಡಗಳನ್ನು ಸೋಲಿಸಿತ್ತು. ಟೂರ್ನಿಯಲ್ಲಿ ರಾಷ್ಟ್ರದ 10 ಪ್ರಮುಖ ಆಹ್ವಾನಿತ ತಂಡಗಳು ಭಾಗವಹಿಸಿದ್ದವು. ಆಳ್ವಾಸ್ ತಂಡದ ಲಕ್ಷ್ಮೀದೇವಿ ಟೂರ್ನಿಯ ಅತ್ಯುತ್ತಮ ಆಟಗಾರ್ತಿ ಪ್ರಶಸ್ತಿಯನ್ನು ಪಡೆದುಕೊಂಡರು. ವಿಜೇತ ವಿದ್ಯಾರ್ಥಿಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ ಅಭಿನಂದಿಸಿದ್ದಾರೆ.

Read More

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್.ಟಿ.ಎ) ವತಿಯಿಂದ ನಡೆಸಲಾದ ಜೆಇಇ ಬಿ ಆರ್ಕ್ ಮತ್ತು ಜೆಇಇ ಬಿ ಪ್ಲಾನಿಂಗ್‍ನ ಫಲಿತಾಂಶ ಪ್ರಕಟವಾಗಿದ್ದು, ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಈ ವರ್ಷವೂ ಅತ್ಯುನ್ನತ ಫಲಿತಾಂಶ ಪಡೆದುಕೊಂಡಿದೆ. ಬಿ ಆರ್ಕ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಾದ ತೇಜಸ್ ವಿ ನಾಯಕ್ 99.4223451 ಪಸೆರ್ಂಟೈಲ್, ಸಾಚಿ ಶಿವಕುಮಾರ್ ಕಡಿ 99.3362631 ಪಸೆರ್ಂಟೈಲ್ ಗಳಿಸಿ ಉತ್ತಮ ಸಾಧನೆಗೈದಿದ್ದಾರೆ. ಬಿ ಪ್ಲಾನಿಂಗ್ ಫಲಿತಾಂಶದಲ್ಲಿ ತೇಜಸ್ ವಿ ನಾಯಕ್ 99.5751775 ಪಸೆರ್ಂಟೈಲ್ ಗಳಿಸಿದ್ದಾರೆ. ಹೀಗೆ ಒಟ್ಟು ಫಲಿತಾಂಶದಲ್ಲಿ 99 ಪಸೆರ್ಂಟೈಲಿಗಿಂತ ಅಧಿಕ 2 ವಿದ್ಯಾರ್ಥಿಗಳು, 97 ರಿಂದ ಅಧಿಕ 3, 95ಕ್ಕಿಂತ ಅಧಿಕ 8 ಹಾಗೂ 16 ವಿದ್ಯಾರ್ಥಿಗಳು 90 ಪಸೆರ್ಂಟೈಲಿಗಿಂತ ಅಧಿಕ ಫಲಿತಾಂಶವನ್ನು ದಾಖಲಿಸಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಯನ್ನು ಪ್ರಾಂಶುಪಾಲರು, ಆಡಳಿತ ಮಂಡಳಿ, ಬೋಧಕ ಬೋಧಕೇತರ ವೃಂದದವರು ಹಾಗೂ ಬಿ ಆರ್ಕ್ ಮತ್ತು ಬಿ ಪ್ಲಾನಿಂಗ್ ಸಂಯೋಜಕರಾದ ಸುಮಂತ್ ದಾಮ್ಲೆ ರವರು ಅಭಿನಂದಿಸಿ ಶ್ಲಾಘಿಸಿದ್ದಾರೆ.

Read More

ಕಾರ್ಕಳ : ರಾಷ್ಟ್ರ ಮಟ್ಟದಲ್ಲಿ ಎನ್.ಟಿ.ಎ ನಡೆಸುವ ಜೆಇಇ ಮೈನ್.ಬಿ.ಆರ್ಕ್‍ನ ಮೊದಲ ಹಂತದ ಫಲಿತಾಂಶದಲ್ಲಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳಿಗೆ 99ಕ್ಕಿಂತ ಅಧಿಕ ಪರ್ಸಂಟೈಲ್ ಹಾಗೂ 22 ವಿದ್ಯಾರ್ಥಿಗಳಿಗೆ 95ಕ್ಕಿಂತ ಅಧಿಕ ಪರ್ಸಂಟೈಲ್ ಗಳಿಸಿ ಉತ್ತಮ ಸಾಧನೆ ಮಾಡಿರುತ್ತಾರೆ. ವಿದ್ಯಾರ್ಥಿಗಳಾದ ಕೆ.ಮನೋಜ್ ಕಾಮತ್ 99.8233055 ಪರ್ಸಂಟೈಲ್, ದರ್ಶನ್ ಡಿ ಬಾಯಾರ್ 99.6466111 ಪರ್ಸಂಟೈಲ್, ಚಿಂತನ ಜೆ. ಮೆಘವತ್ 99.2615078 ಪರ್ಸಂಟೈಲ್, ಆಕಾಶ್ ಎಚ್ ಪ್ರಭು 98.9987314 ಪರ್ಸಂಟೈಲ್, ಪ್ರಜ್ವಲ್ ನಾಯಕ್ 98.6430772 ಪರ್ಸಂಟೈಲ್, ಮಂಜೀತ್ ಎಸ್. ಪದ್ಮಶಾಲಿ 98.6430772 ಪರ್ಸಂಟೈಲ್, ಸಮನ್ವಿತಾ ಜಿ.ನಾಯಕ್ 98.5637912 ಪರ್ಸಂಟೈಲ್, ಸಂಜನಾ ಶೆಣೈ 98.3372599 ಪರ್ಸಂಟೈಲ್, ವಿಷ್ಣು ಧರ್ಮಪ್ರಕಾಶ್ 98.0246466 ಪರ್ಸಂಟೈಲ್, ಅಭಿರಾಮ್ ತೇಜ 97.7346865 ಪರ್ಸಂಟೈಲ್, ತರುಣ್ ಎ.ಸುರಾನ 97.6236861 ಪರ್ಸಂಟೈಲ್, ಪ್ರಣವ್ ಎನ್ ಮಾಳಗಿಮನೆ 97.5013592 ಪರ್ಸಂಟೈಲ್, ಹೃತ್ವಿಕ್ ಶೆಟ್ಟಿ 97.3767669 ಪರ್ಸಂಟೈಲ್, ಧ್ರುವ್ ಶೆಟ್ಟಿ 97.2816238 ಪರ್ಸಂಟೈಲ್, ಗೌತಮ್ ಹುಲ್ಲೋಲಿ 97.1502356 ಪರ್ಸಂಟೈಲ್, ರೋನಕ್ ಎಸ್ ಗುರಾನಿ 96.8602755…

Read More

ಇರ್ದೆ ಬೆಟ್ಟಂಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ, ಹಿರಿಯ ಸಹಕಾರಿ ಧುರೀಣ ಶಶಿಕುಮಾರ್ ರೈ ಬಾಲ್ಯೊಟ್ಟುರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇರ್ದೆ ಗ್ರಾಮದ ಬಾಲ್ಯೊಟ್ಟು ನಿವಾಸಿಯಾಗಿರುವ ಶಶಿಕುಮಾರ್ ರೈರವರು ಪುತ್ತೂರು ಅಭಿವೃದ್ಧಿ ಬ್ಯಾಂಕಿನ ನಿರ್ದೇಶಕರಾಗಿ, ಉಪಾಧ್ಯಕ್ಷರಾಗಿ, ಎಂಟು ವರ್ಷ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನ ಜಾಗೃತಿ ವೇದಿಕೆಯ ಪುತ್ತೂರು ತಾಲೂಕು ಸಮಿತಿ ಅಧ್ಯಕ್ಷರಾಗಿ, ಇರ್ದೆ ಹಾಗೂ ಬೆಟ್ಟಂಪಾಡಿ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ, ಬೆಂದ್ರತೀರ್ಥ ಅಭಿವೃದ್ಧಿ ಸಮಿತಿಯ ಸಂಚಾಲಕರಾಗಿ, ಪೇರ್ಲತ್ತಡ್ಕ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ, ಇರ್ದೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಮೊಕ್ತೇಸರರಾಗಿ, ನಿಡ್ಪಳ್ಳಿ ಶ್ರೀ ಶಾಂತಾದುರ್ಗಾ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕರಾಗಿ, ಸಾರ್ವಜನಿಕ ಶಾರದೋತ್ಸವ ಸಮಿತಿಯಲ್ಲಿ 23 ವರ್ಷ ಅಧ್ಯಕ್ಷರಾಗಿ, ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾಗಿ, ಉಪ್ಪಿನಂಗಡಿ ವಿಜಯ -ವಿಕ್ರಮ ಜೋಡು ಕರೆ ಕಂಬಳ ಸಮಿತಿಯ ಸಂಚಾಲಕರಾಗಿ, ಪುತ್ತೂರು ತಾಲೂಕು ಯುವ ಬಂಟರ…

Read More

ಶಕ್ತಿನಗರ ಕಾನಡ್ಕದ ಪದವು ಫ್ರೆಂಡ್ಸ್ ಕ್ಲಬ್ ನ 49ನೇ ವರ್ಷದ ವಾರ್ಷಿಕೋತ್ಸವ ಸಮಾರಂಭವು ನಾಲ್ಯಪದವು ಶಾಲಾ ರಂಗಮಂದಿರದಲ್ಲಿ ಇತ್ತೀಚೆಗೆ ಜರಗಿತು. ಈ ಸಂದರ್ಭದಲ್ಲಿ ಸಂಸ್ಥೆ 50ನೇ ವರ್ಷಕ್ಕೆ ಕಾಲಿಟ್ಟ ಸಲುವಾಗಿ ಸುವರ್ಣ ಸಂಭ್ರಮಾಚರಣೆಗೆ ಚಾಲನೆ ನೀಡಲಾಯಿತು. ಯಕ್ಷಿಣಿಗಾರ ರಾಜೇಶ್ ಮಳಿ ಹಾಗೂ ಅವರ ಪುತ್ರಿಯರಾದ ಅಂಜನಾ ಮತ್ತು ಅಪೂರ್ವ ಮಳಿ ವಿಶಿಷ್ಟ ರೀತಿಯಲ್ಲಿ ಜಾದೂ ದಂಡ ಪ್ರಯೋಗಿಸಿ ಸುವರ್ಣ ಮಹೋತ್ಸವದ ಲಾಂಛನವನ್ನು ಬಿಡುಗಡೆಗೊಳಿಸಿದರು. ಇದೇ ಸಂದರ್ಭದಲ್ಲಿ ಕವಿ, ಜಾನಪದ ವಿದ್ವಾಂಸ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಅವರು ಬರೆದ ‘ಬಂಗಾರ್ ಪರ್ಬಯೇ..’ ತುಳು ಶೀರ್ಷಿಕೆ ಗೀತೆಯನ್ನು ಪದವು ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಕುಶಾಲ್ ಕುಮಾರ್ ಗುಂಡಿ ಅದುಮಿ ಬಿಡುಗಡೆಗೊಳಿಸಿದರು. ಬಳಿಕ ಧ್ವನಿವರ್ಧಕದಲ್ಲಿ ಅದನ್ನು ಸಾರ್ವಜನಿಕವಾಗಿ ಕೇಳಿಸಲಾಯಿತು.ಹಿರಿಯ ರಂಗಕರ್ಮಿ ಜಿ.ಎಸ್ ಆಚಾರ್ ಅವರಿಗೆ ಕ್ಲಬ್ಬಿನ ಹಿರಿಯ ಸದಸ್ಯ, ಹಾಸ್ಯ ಚಕ್ರವರ್ತಿ ದಿ| ಮಾಧವ ಕೆ. ಶಕ್ತಿನಗರ ಸ್ಮಾರಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ದೆಹಲಿಯಲ್ಲಿ ನಡೆದ ರಾಷ್ಟ್ರೀಯ ಶಾಲಾ ನಾಯಕತ್ವ ಸಮಾವೇಶಕ್ಕೆ ಆಯ್ಕೆಯಾದ ಕರ್ನಾಟಕದ…

Read More

ಪುಣೆ ಬಂಟರ ಸಂಘದ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಸುರತ್ಕಲ್ ಬಂಟರ ಸಂಘದ ಸದಸ್ಯರಿಂದ ನಡೆದ ಬಂಟ ವೈಭವ ಸಾಂಸ್ಕೃತಿಕ ಕಾರ್ಯಕ್ರಮ ಪ್ರೇಕ್ಷಕರ ಗಮನ ಸೆಳೆಯಿತು. ಬಂಟರ ಸಂಘದ ಮಾಜಿ ಅಧ್ಯಕ್ಷ ಉಲ್ಲಾಸ್ ಶೆಟ್ಟಿ ಪೆರ್ಮುದೆ, ಸುಧಾಕರ ಪೂಂಜ ಹೊಸಬೆಟ್ಟು, ಗಿರೀಶ್ ಎಂ ಶೆಟ್ಟಿ ಕಟೀಲು, ಕಾರ್ಯದರ್ಶಿ ಲೀಲಾಧರ ಶೆಟ್ಟಿ ಕಟ್ಲ ಸಂಯೋಜನೆಯಲ್ಲಿ ಹಾಗೂ ರಾಜೇಶ್ವರಿ ಡಿ.ಶೆಟ್ಟಿಯವರ ಸಮರ್ಥ ನಿರ್ದೇಶನದಲ್ಲಿ ಪ್ರಸ್ತುತಪಡಿಸಲ್ಪಟ್ಟ ಸಾಂಸ್ಕೃತಿಕ ಕಾರ್ಯಕ್ರಮ ನೋಡುಗರನ್ನು ನಿಬ್ಬೆರಗಾಗುವಂತೆ ಮಾಡಿತ್ತು. ತುಳುನಾಡಿನ ಗುತ್ತಿನ ಮನೆ, ಆಚಾರ ವಿಚಾರ, ನಂಬಿಕೆ ನಡವಳಿಕೆಗಳನ್ನು ಇಂದಿನ ಪೀಳಿಗೆಗೆ ಪರಿಚಯ ಮಾಡಿಕೊಡುವ ಕಾರ್ಯಕ್ರಮವನ್ನು ವೇದಿಕೆಯಲ್ಲಿ ಒಟ್ಟು 2 ಗಂಟೆಗಳ ಕಾಲ ಸುರತ್ಕಲ್ ಬಂಟರ ಸಂಘದ 130 ಮಂದಿ ಕಲಾವಿದರ ತಂಡ ಸಾದರ ಪಡಿಸುವ ಮೂಲಕ ಪುಣೆ ಬಂಟರ ಸಂಘದಲ್ಲಿ ಹೊಸ ಮುನ್ನುಡಿಯನ್ನು ಬರೆಯಿತು. ಭೂತಾಳ ಪಾಂಡ್ಯ, ಕೊಜಂಬು ಕ್ರಮ, ಕರಪತ್ತಾವುನು, ತುಳುನಾಡಿನ ಬಂಟ ಸಮುದಾಯದ ಜೀವನಾಡಿಯಾದ ಕೃಷಿ ಚಟುವಟಿಕೆ, ತುಡರ್ ಪೂಜೆ- ಗೋ ಪೂಜೆ, ಜಾನಪದ ನೃತ್ಯ, ಉತ್ತರಕ್ರಿಯೆ ಸಂಪ್ರದಾಯ,…

Read More

ಬ್ಯಾಂಕ್ ಉದ್ಯೋಗಿಯೊಬ್ಬರು ಹೋಟೆಲ್ ಉದ್ಯಮದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಯಶಸ್ಸನ್ನು ಕಂಡಿರುವುದು ಸಾಮಾನ್ಯ ಮಾತಲ್ಲ. ಮುಲುಂಡ್ ಪಶ್ಚಿಮದಲ್ಲಿ ಗ್ರಾಹಕರನ್ನು ಆಕರ್ಷಿಸುತ್ತಿರುವ ಹೋಟೆಲ್ ಸೌಂದರ್ಯದ ಮಾಲಕರಾದ ಹರ್ಷವರ್ಧನ್ ಶೆಟ್ಟಿಯವರು ಬ್ಯಾಂಕ್ ಉದ್ಯೋಗದೊಂದಿಗೆ ಹೋಟೆಲ್ ಉದ್ಯಮವನ್ನು ಆರಂಭಿಸಿರುವ ಸಾಹಸಗಾಥೆ ಮಾದರಿಯಾಗಿದೆ. ಸರಳ ವ್ಯಕ್ತಿತ್ವದ, ಸದಾ ಹಸನ್ಮುಖಿ, ಎಲ್ಲರನ್ನು ಆತ್ಮೀಯರಂತೆ ಕಾಣುವ ಗುಣವನ್ನು ಹೊಂದಿರುವ ಇವರು ನಡೆದು ಬಂದ ಬಗೆ ಆಶ್ಚರ್ಯ ಪಡುವಂತದ್ದು. 17 ವರ್ಷಗಳ ಕಾಲ ಬ್ಯಾಂಕ್ ಉದ್ಯೋಗಿಯಾಗಿದ್ದ ಅವರು ಹೋಟೆಲ್ ಮಾಲೀಕರಾಗಿ ಅನೇಕರಿಗೆ ಮಾರ್ಗದರ್ಶಕರಾಗಿದ್ದಾರೆ ಎಂದರೆ ತಪ್ಪಾಗಲಾರದು. ಹೋಟೆಲ್ ಉದ್ಯಮದ ಮೂಲಕ ನೂರಾರು ಮಂದಿಗೆ ನೌಕರಿಯನ್ನು ನೀಡಿ ಅನೇಕ ಕುಟುಂಬಗಳಿಗೆ ಬೆಳಕಾಗಿದ್ದಾರೆ. ಎಳವೆಯಿಂದಲೇ ಕಠಿಣ ಪರಿಶ್ರಮ, ಪ್ರಾಮಾಣಿಕತೆ ಶಿಸ್ತುಬದ್ಧ ಬದುಕು ಅವರದ್ದಾಗಿದೆ.ಉಡುಪಿ ಜಿಲ್ಲೆಯ ಮುದ್ರಾಡಿ ಕೃಷ್ಣಯ್ಯ ಶೆಟ್ಟಿ ಹಾಗೂ ಆತ್ರಾಡಿಯ ರುದ್ರು ಹೆಗ್ಡೆ ದಂಪತಿಯ 7 ಮಕ್ಕಳಲ್ಲಿ ಕೊನೆಯ ಪುತ್ರರಾಗಿ 1955ರ ಮಾರ್ಚ್ 16ರಂದು ಜನಿಸಿದ ಹರ್ಷವರ್ಧನ್ ಅವರು, 1976ರಲ್ಲಿ ಎಂಜಿಎಂ ಕಾಲೇಜಿನಿಂದ ವಿಜ್ಞಾನ ಪದವಿ ಪಡೆದರು. ತಂದೆ ಶಿಕ್ಷಕರಾಗಿದ್ದುದರಿಂದ ಮನೆಯ ಶಿಸ್ತು…

Read More