Author: admin

ಊಹೆಗೂ ನಿಲುಕದ ಆಶ್ಚರ್ಯಗಳು, ಇಲ್ಲಿ ಕಾಲಿಟ್ಟ ಕೂಡಲೇ ಎತ್ತ ನೋಡಿದರೂ ಬೆಚ್ಚಿ ಬೀಳಿಸುವ ವೈವಿಧ್ಯಮಯ ಪ್ರಾಣಿ, ಪಕ್ಷಿ, ಹಾಗೂ ಮನುಷ್ಯರ ಅಗಾಧ ಅಸ್ಥಿಪಂಜರಗಳ ಸಮೂಹ. ಕಸ್ತೂರ್ಬಾ‌ ವೈದ್ಯಕೀಯ ಕಾಲೇಜು ಮಣಿಪಾಲ ಇಲ್ಲಿನ ಅಂಗರಚನಾಶಾಸ್ತ್ರ ಮತ್ತು ರೋಗಶಾಸ್ತ್ರಕ್ಕೆ ಸಂಬಂಧದ ಪಟ್ಟ ಸಂಗ್ರಹಾಲಯ “ಮಣಿಪಾಲ ಮ್ಯೂಸಿಯಂ ಆಫ್ ಅನಾಟಮಿ ಮತ್ತು ಪೈಥಾಲಜಿ” ಸಾರ್ವಜನಿಕರಿಗೆ ಸಂದರ್ಶಿಸಲು ಅವಕಾಶವಿರುವ ಭಾರತದ ಕೆಲವೇ ಕೆಲವು‌ ಅನಾಟಮಿ ಮ್ಯೂಸಿಯಂಗಳಲ್ಲಿ ಇದು ಒಂದು. ಮಾನವ ತಲೆಬುರುಡೆಯಿಂದ ಕಾಲ ಬೆರಳವರೆಗಿನ ಶರೀರದ ವಿವಿಧ ಅಂಗಗಳ ಸಂಗ್ರಹ ಇಲ್ಲಿದೆ. ಅಪರೂಪದ ಈ ಸಂಗ್ರಹಾಲಯ ನೋಡುವ ಅನುಭವ ತುಸು ವಿಶಿಷ್ಟ. ಲೆಕ್ಕಾ ಹಾಕುತ್ತ ಹೋದರೆ ಅಂಗ ರಚನಾಶಾಸ್ತ್ರ ಮತ್ತು ರೋಗ ಶಾಸ್ತ್ರಕ್ಕೆ ಸಂಬಂಧಿಸಿದ 3,000 ಕ್ಕೂ ಹೆಚ್ಚಿನ ಶರೀರದ ವಿವಿಧ ಭಾಗಗಳ ಅಪಾರ ಸಂಗ್ರಹ ಇಲ್ಲಿದೆ. ಕುತೂಹಲದ ಕಣ್ಣಿಗೆ ಹೊಸ ನೋಟವನ್ನು, ಆಸಕ್ತಿಯ ಮನಕ್ಕೆ ಅನೇಕ ವಿಚಾರಗಳನ್ನು ತುಂಬಿಸಿಕೊಳ್ಳಬಹುದು. ಅಷ್ಟೇ ಅಲ್ಲದೇ ಪ್ರವಾಸಿಗರಿಗೆ ವೈದ್ಯ ವಿಜ್ಞಾನದ ಅಚ್ಚರಿಗಳೊಂದಿಗೆ ಹೊಸ ಅನುಭವ ನೀಡಲು ವೈಜ್ಞಾನಿಕವಾಗಿ ಜೋಡಿಸಿದ ಅಸ್ಥಿ…

Read More

ಮಕ್ಕಳ ಕುರಿತಾಗಿ ಅಥವಾ ಮಕ್ಕಳಿಗಾಗಿಯೇ ರಚಿಸಿದ ಸಾಹಿತ್ಯವನ್ನು ಮಕ್ಕಳ ಸಾಹಿತ್ಯ ಎಂದು ವಾಖ್ಯಾನಿಸಲಾಗಿದೆ. ವಿಸ್ತರಿಸಿ ಹೇಳುವುದಾದರೆ ಮಕ್ಕಳ ಸಾಹಿತ್ಯವು ಪ್ರಮುಖವಾಗಿ ಕಥೆ, ಕಾದಂಬರಿ, ಪದ್ಯ, ಜಾನಪದ, ವಿಜ್ಞಾನ ಮುಂತಾದ ಪ್ರಕಾರಗಳಿಂದ ರಚಿಸಲ್ಪಟ್ಟಿದ್ದು, ಮಕ್ಕಳ ಮನೋರಂಜನೆಗಾಗಿ ಮಾತ್ರವಲ್ಲದೆ ಅವರ ಬೌದ್ಧಿಕ ವಿಕಾಸಕ್ಕಾಗಿ ಮತ್ತು ಭಾಷಾ ಬೆಳವಣಿಗೆಗಾಗಿಯೇ ಇರುವ ಸಾಹಿತ್ಯವೆನ್ನಬಹುದು. ಮಕ್ಕಳು ಸಾಹಿತ್ಯ ಪಠ್ಯಗಳನ್ನು ಶಾಲಾ ಚಟುವಟಿಕೆಯ ಭಾಗವಾಗಿ ಓದುವುದು ತಮ್ಮ ವೈಯಕ್ತಿಕ ಓದಿಗಿಂತ ಹೆಚ್ಚಿನ ಸಂತೋಷವನ್ನು ನೀಡುತ್ತದೆ. ಶಾಲೆಯಲ್ಲಿ ಸಾಹಿತ್ಯದ ಓದುವಿಕೆ ಮಗುವಿನ ಮಾನಸಿಕ ಬೆಳವಣಿಗೆ, ಸ್ವ ಅನುಭವ ಹಾಗೂ ಭಾಷಾ ಪ್ರೌಢಿಮೆಯನ್ನು ವಿಸ್ತರಿಸಲು ಸಹಾಯಕವಾಗುತ್ತದಲ್ಲದೇ ಮಗುವಿನ ಕಲ್ಪನಾ ಶಕ್ತಿ ಮತ್ತು ಕಲ್ಪನಾ ಲೋಕವನ್ನು ವಿಸ್ತರಿಸಿಕೊಳ್ಳಲು ಸಹಕಾರಿ. ಓದಿನ ಚಟುವಟಿಕೆ ಅವರ ದೈಹಿಕ, ಮಾನಸಿಕ ಮತ್ತು ಸಾಂಸ್ಕೃತಿಕ ಬೆಳವಣಿಗೆಗೆ ಪೂರಕವಾಗಿರುತ್ತದೆ. ಮಕ್ಕಳ ಸಾಹಿತ್ಯದ ಕಥಾವಸ್ತು, ಪ್ರಕಾರ ಮತ್ತು ಭಾಷೆ ಮಕ್ಕಳಿಗೆ ಇಷ್ಟವಾಗುವಂತಿರಬೇಕು. ಅಂದರೆ ಕೃತಿಯಲ್ಲಿನ ಥೀಮ್‌ಗಳು, ಸಂಬಂಧಗಳು ಹಾಗೂ ಅದರಲ್ಲಿನ ಭಾಷೆ ಅತ್ಯಂತ ಕ್ಲಿಷ್ಟಕರವಾಗಿದ್ದರೆ ಆ ಕೃತಿಯು ಮಕ್ಕಳ ಸಾಹಿತ್ಯ ಕೃತಿಯೆನಿಸಿಕೊಳ್ಳಲು ಯೋಗ್ಯವೆನಿಸಲಾರದು.…

Read More

-ಕೆ .ಸಂತೋಷ್ ಶೆಟ್ಟಿ ಮೊಳಹಳ್ಳಿ ಕುಂದಾಪುರ ,ಉಡುಪಿ ಜಿಲ್ಲೆ. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ಹಲವಾರು ಐತಿಹಾಸಿಕ ಪ್ರಸಿದ್ಧ ತಾಣಗಳಿಗೆ ಸಾಕ್ಷಿಯಾಗಿದೆ. ಅದೇ ರೀತಿ ಮೂಕಾಂಬಿಕಾ ಸನ್ನಿಧಾನಕ್ಕೆ ರಾಜ್ಯ ಮಾತ್ರವಲ್ಲದೆ ಹೊರ ರಾಜ್ಯದಿಂದ ಭಕ್ತಾದಿಗಳು ಬಂದು ತಾಯಿಯ ದರ್ಶನ ಪಡೆದು ಪುನೀತರಾಗುತ್ತಾರೆ, ಅದೇ ರೀತಿ ದೇಶದಲ್ಲಿನ ಅತ್ಯುನ್ನತ ಪ್ರಕರತೆಗಳನ್ನು ಹೊಂದಿರುವ ಕೊಲ್ಲೂರು ಮೂಕಾಂಬಿಕೆಯ ದೇಗುಲ ತನ್ನದೇ ಆದಂತಹ ಐತಿಹಾಸಿಕ ದಂತಕಥೆಯನ್ನು ಹೊಂದಿದೆ. ಸಮಾಜಮುಖಿ ಚಿಂತನೆ, ಪ್ರತಿದಿನ ನಡೆಯುವಂತಹ ಧಾರ್ಮಿಕ ಸೇವೆಗಳು, ಅನ್ನದಾನ ಸೇವೆ ಹಾಗೂ ಇನ್ನಿತರ ಧಾರ್ಮಿಕ ಕಾರ್ಯಗಳು ಸಮಾಜದಲ್ಲಿನ ಭಕ್ತಿಯ ಪರಾಕಷ್ಟೆಯಾಗಿ ಉಳಿದಿರುವುದು ನಿಜಕ್ಕೂ ಸಂತಸದ ವಿಚಾರ. ಅದೇ ರೀತಿ ಸಮಾಜದಲ್ಲಿನ ಭಕ್ತಿ ಕೇಂದ್ರವಾಗಿ ನಯಾಗುವುದರೊಂದಿಗೆ ಕೊಲ್ಲೂರು ಶ್ರೀ ಮೂಕಾಂಬಿಕ ತಾಯಿಯು ದರುಶನ ಭಾಗ್ಯವನ್ನು ಸದಾ ನೀಡುತ್ತಿದ್ದಾಳೆ. ಅದೇ ರೀತಿ ಬೈಂದೂರು ತಾಲೂಕಿನ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ಐತಿಹಾಸಿಕ ಪುರಾಣ ಪ್ರಸಿದ್ಧ ಸ್ಥಾನವಾಗಿ ಮಾರ್ಪಟ್ಟಿದೆ. ಅದಲ್ಲದೆ ಸಮಾಜಮುಖಿ ಚಿಂತನೆ ಉಳ್ಳಂತಹ ಕೊಲ್ಲೂರು ಶ್ರೀ ಮೂಕಾಂಬಿಕ ದೇಗುಲ ವಿಶಿಷ್ಟ…

Read More

ಕಂಬಳವು ತುಳುನಾಡ ರೈತಾಪಿ ಜನರ ಆಚರಣೆಯಾಗಿದ್ದು, ಬಂಟ ಬಾಂಧವರ ಉತ್ಸವವಾಗಿದ್ದು ಗ್ರಾಮೀಣ ಹಿನ್ನೆಲೆಯಲ್ಲಿ ಭಾತೃತ್ವವನ್ನೂ, ಸಾಮಾರಸ್ಯವನ್ನೂ ಬೆಳೆಸುವ ಹಾಗೂ ಬೆರೆಸುವ ಕೊಂಡಿಯೆಂದರೆ ಅತಿಶಯೋಕ್ತಿಯಾಗದು.ನೂರಾರು ವರುಷಗಳ ಇತಿಹಾಸ, ಜನ ಜೀವನ, ಸಂಸ್ಕೃತಿಯೊಂದಿಗೆ ಬೆಸೆದುಕೊಂಡ ಬಾಂಧವ್ಯದ ಈ ಕಂಬಳ ಕ್ರೀಡೆಯಲ್ಲಿ ಸಾಧನೆಯ ಕಿರೀಟವನ್ನು ತೊಟ್ಟು ಬೋಳದಗುತ್ತು ಎಂಬ ಹೆಸರನ್ನು ಎಲ್ಲೆಡೆ ಪಸರಿಸಿದವರು ಬೋಳದಗುತ್ತಿನ ಸಹೋದರರಾದ ಸತೀಶ್ ಶೆಟ್ಟಿ ಮತ್ತು ಜಗದೀಶ್ ಶೆಟ್ಟಿ. ಮುಂಡ್ಕೂರು ಸಾಂತ್ರಾಳಗುತ್ತು ದಿ|ಸಂಕಪ್ಪ ಶೆಟ್ಟಿ ಮತ್ತು ಬೋಳದಗುತ್ತು ದಿ|ಇಂದಿರಾ.ಎಸ್ ಶೆಟ್ಟಿಯವರ ಏಳು ಜನ ಮಕ್ಕಳಲ್ಲಿ ಸತೀಶ್ ಶೆಟ್ಟಿ ಮತ್ತು ಜಗದೀಶ್ ಶೆಟ್ಟಿ ಬಾಲ್ಯದ ದಿನಗಳಲ್ಲಿ ತಮ್ಮ ಮನೆಯಲ್ಲಿದ್ದ ಎರಡು ಬೋಳದಗುತ್ತಿನ ಕೋಣಗಳನ್ನು ನೋಡಿ ಮುಂದೆ ಬೋಳದಗುತ್ತಿನ ಪರವಾಗಿ ಕೋಣಗಳನ್ನು ಸ್ಪರ್ಧಿಸಬೇಕೆಂಬ ಹಂಬಲವನ್ನು ಹೊಂದಿದ್ದರು. ನಂತರ 1996ರಲ್ಲಿ ಮುಂಬೈನಲ್ಲಿ ಸಹೋದರರಿಬ್ಬರೂ ಜೊತೆಗೂಡಿ ಹೋಟೆಲೊಂದನ್ನು ಪ್ರಾರಂಭಿಸಿ ಪಡೆದ ಆದಾಯದಲ್ಲಿ 2008ರಲ್ಲಿ ಎರಡು ಕೋಣಗಳನ್ನು ಖರೀದಿಸಿ ಅನೇಕ ಕಂಬಳಕೂಟದಲ್ಲಿ ಸ್ಪರ್ಧಿಸಿದರೂ 2011ರವರೆಗೆ ಯಾವುದೇ ಪ್ರಶಸ್ತಿಗಳನ್ನು ಪಡೆಯಲು ಸಾಧ್ಯವಾಗಲಿಲ್ಲ. 2012 ರಲ್ಲಿ ಕಂಬಳಕೂಟದ ನೇಗಿಲಿನ ಸೀನಿಯರ್ ವಿಭಾಗಕ್ಕೆ…

Read More

ದಕ್ಷಿಣ ಕನ್ನಡ ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಪುಣೆಯ ಖ್ಯಾತ ಮಕ್ಕಳ ತಜ್ಞ ಡಾ. ಸುಧಾಕರ್ ಶೆಟ್ಟಿ ಅವರ ಬೇಬಿ ಫ್ರೆಂಡ್ ಕ್ಲಿನಿಕ್ ಮತ್ತು ಬಂಟ್ಸ್ ಅಸೋಸಿಯೇಷನ್ ಪುಣೆ ಸಂಯುಕ್ತ ಆಯೋಜನೆಯಲ್ಲಿ ಉಚಿತ ಕಟೀಲ್ ಬೇಬಿ ಫ್ರೆಂಡ್ ಚೈಲ್ಡ್ ಹೆಲ್ತ್ ಕಾರ್ಡ್ ಬಿಡುಗಡೆ ಮತ್ತು ಉಚಿತ ಆರೋಗ್ಯ ತಪಾಸಣೆ ಶಿಬಿರವು ಏಪ್ರಿಲ್ 2 ರಂದು ಪುಣೆಯ ಕ್ಯಾಂಪ್ ಎಂ. ಜಿ. ರೋಡ್ ನಲ್ಲಿರುವ ಡಾ. ಸುಧಾಕರ್ ಶೆಟ್ಟಿಯವರ ಬೇಬಿ ಫ್ರೆಂಡ್ ಕ್ಲಿನಿಕ್ ನ ಆವರಣದಲ್ಲಿ ಯಶಸ್ವಿಯಾಗಿ ನಡೆಯಿತು. ಪುಣೆ ಬಂಟರ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ ಇನ್ನ ಬಾಳಿಕೆ ಕುರ್ಕಿಲ್ ಬೆಟ್ಟು ಅವರು ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಬಂಟ್ಸ್ ಅಸೋಸಿಯೇಷನ್ ಪುಣೆ ಅಧ್ಯಕ್ಷ ಗಣೇಶ್ ಹೆಗ್ಡೆ ಪುಂಚೂರು, ಪುಣೆ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ಅಜಿತ್ ಹೆಗ್ಡೆ, ಪಿಂಪ್ರಿ-ಚಿಂಚ್ವಾಡ್ ಬಂಟರ ಸಂಘದ ಅಧ್ಯಕ್ಷ ರಾಕೇಶ್ ಶೆಟ್ಟಿ ಬೆಳ್ಳಾರೆ, ಪಿಂಪ್ರಿ-ಚಿಂಚ್ವಾಡ್ ತುಳು ಕೂಟದ ಅಧ್ಯಕ್ಷ ಹರೀಶ್ ಶೆಟ್ಟಿ ಕುರ್ಕಾಲು, ಪುಣೆ ಬಂಟ್ಸ್…

Read More

ಅದೊಂದು ಹಳೆಕಾಲದ ನಾಗ ಬನ. ಬನದ ಸುತ್ತಮುತ್ತ ಹಸಿರಿನ ಛತ್ರವನ್ನೇ ಬಿಡಿಸಿಟ್ಟ ಹಾಗೆ ಹಬ್ಬಿರುವ ಮರಗಿಡಗಳು. ಸೂರ್ಯನ ಕಿರಣವನ್ನು ಬನದೊಳಗೆ ಇಣುಕಲು ಬಿಡಲಾರೆವು ಎನ್ನುವಂತೆ ದಟ್ಟೈಸಿರುವ ಬ್ರಹ್ಮ ಗಾತ್ರದ ಮರಗಳು.ಆ ಬೃಹತ್ ವೃಕ್ಷಗಳು ಮಾನವ ತೋಳು ಬೆಸೆದಂತೆ ಪ್ರಾಕೃತಿವಾಗಿ ಬೆಸೆದಿಟ್ಟ ಬೇರು ಬಿಳಲುಗಳ ನಡುವೆ ಒಂದಷ್ಟು ಜಾಗದಲ್ಲಿ ನಿಲ್ಲಿಸಿರುವ ನಾಗನ ಬಿಂಬವಿರುವ ಕಲ್ಲುಗಳು. ಹಚ್ಚ ಹಸುರಿನ ಪ್ರಕೃತಿಯ ನಡುವೆ ಮೇಳೈಸಿರುವ ನಾನಾ ಹಕ್ಕಿಗಳ ಇಂಚರ, ಬನದೊಳಗೆ ಮನಸ್ಸಿಗೆ ಆಹ್ಲಾದತೆ ನೀಡುವ ಬಗೆ ಬಗೆಯ ಹೂಗಳ ಗಂಧ, ದೂರದಲ್ಲಿ ನೀಲಿ ನೀಲಿಯಾಗಿ ಗೋಚರಿಸುವ ಪಶ್ಚಿಮ ಘಟ್ಟಗಳು. ಒಟ್ಟಿನಲ್ಲಿ ಹೃನ್ಮನ ಮುದಗೊಳಿಸುವ ಪ್ರಕೃತಿಯ ಸುಂದರ ವರ್ಣ ಚಿತ್ತಾರದ ನಡುವೆ ನಿಗೂಢವಾಗಿ ಕಾಣುವ ಆ ನಾಗ ಬನದಲ್ಲಿ, ಅದೆಷ್ಟು ತಲೆಮಾರುಗಳು ಹಾಲೆರೆದು ನಾಗನನ್ನು ಪೂಜಿಸಿ ಪಾವನರಾಗಿ ಹೋಗಿದ್ದರೋ ಯಾರಿಗೂ ಗೊತ್ತಿಲ್ಲ. ದೊಡ್ಡ ಕೂಡುಕಟ್ಟಿನ ಕುಟುಂಬದವರ ನಾಗ ಬನವಾದುದರಿಂದ ವರ್ಷಾಂಪ್ರತಿ ಪೂಜೆ ಸಲ್ಲಿಸಲು ಸೇರುವ ಕುಟುಂಬಿಕರ ಸಂಖ್ಯೆ ಅಪಾರ. ಪೂಜೆ ಮಾಡಲು ಬಂದವರ ಕಾಲಿಗೆ ಮೆತ್ತಿಕೊಳ್ಳುವ ಬನದ…

Read More

ಶೈಕ್ಷಣಿಕ, ಸಾಮಾಜಿಕ, ಧಾರ್ಮಿಕ ಸೇವೆಗಳೊಂದಿಗೆ ಸಾಂಸ್ಕøತಿಕ ಕಾರ್ಯಕ್ರಮಗಳಿಂದ ಮನೆ ಮಾತಾಗಿರುವ, ಪರಿಸರದ ಸ್ವಜಾತೀಯ ಬಾಂಧÀವರನ್ನು ಒಟ್ಟು ಸೇರಿಸುವ, ಅವರ ಕಷ್ಟ ಕಾರ್ಪಣ್ಯಗಳಲ್ಲಿ ಸ್ಪಂದಿಸುವ ಹಾಗೂ ಇನ್ನಿತರ ಹಲವಾರು ಧ್ಯೇಯ ಉದ್ದೇಶಗಳನ್ನು ಮುಂದಿಟ್ಟುಕೊಂಡು ಆರಂಭಗೊಂಡ ಬಂಟ್ಸ್ ಫೋರಮ್ ಮೀರಾ-ಭಾಯಂದರ್ ಪ್ರಸ್ತುತ ವರ್ಷದಲ್ಲಿ ಸ್ನೇಹ ಸಮ್ಮಿಲನ ಕಾರ್ಯಕ್ರಮವೊಂದನ್ನು ಆಯೋಜಿಸುವ ಸಲುವಾಗಿ ಪೂರ್ವಭಾವಿ ಸಭೆಯು ಸಂಘದ ಕಾರ್ಯಾಲಯದಲ್ಲಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ಇನ್ನಾರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಸ್ನೇಹ ಸಮ್ಮಿಲನ ಕಾರ್ಯಕ್ರಮವು ಫೆಬ್ರವರಿ 25 ರಂದು ಸಾಯಂಕಾಲ 3.00 ಗಂಟೆಯಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ಮೀರಾರೋಡ್ ಮೇಕ್ಡೊನಾಲ್ಡ್ ಎದುರಿನ ಕನಕಿಯಾ ರಸ್ತೆಯಲ್ಲಿರುವ ಮೆಹರ್‍ವಾಟಿಕಾ ಸಭಾಗೃಹದಲ್ಲಿ ಆಚರಿಸಲು ನಿರ್ಧರಿಸಲಾಯಿತು. ಈ ಕಾರ್ಯಕ್ರಮದ ಸಂಪೂರ್ಣ ಮುತುವರ್ಜಿಯನ್ನು ಸಂಘದ ಗೌರವಾಧ್ಯಕ್ಷ ಬೆಳ್ಳಿಪಾಡಿ ಸಂತೋಷ್ ರೈಯವರಿಗೆ ವಹಿಸಿಕೊಡಲಾಯಿತು. ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಬಂಟ್ಸ್ ಫೆÉೂೀರಮ್ ಸದಸ್ಯರಿಂದ ಮತ್ತು ಸದಸ್ಯರ ಮಕ್ಕಳಿಂದ ವೈವಿಧ್ಯಮಯ ಕಾರ್ಯಕ್ರಮ, ಕಲರ್ಸ್ ಕನ್ನಡ ವಾಹಿನಿಯ ಎದೆ ತುಂಬಿ ಹಾಡುವೆನು ಖ್ಯಾತಿಯ ಸಂದೇಶ್ ನೀರುಮಾರ್ಗ ಇವರ ಸಂಗೀತ ರಸಮಂಜರಿ, ಚೈತನ್ಯ ಕಲಾವಿದರು…

Read More

” ದೇಹದಲ್ಲಿನ ಬ್ಯಾಕ್ಟೀರಿಯ ಮತ್ತು ವಿಟಮಿನ್, ನಾರಿನಂಶ ಉತ್ಪನ್ನಗಳನ್ನು ದೇಹಕ್ಕೆ ಸಾಗಿಸುವ ಮತ್ತು ಆರೋಗ್ಯ ನಿಯಂತ್ರಕ ಬೆಳ್ಳುಳ್ಳಿ ಸೇವನೆ – ಸದೃಢ ಆರೋಗ್ಯದ ದ್ಯೋತಕ…!” ಕೆ. ಸಂತೋಷ್ ಶೆಟ್ಟಿ ಮೊಳಹಳ್ಳಿ ,ಕುಂದಾಪುರ ಉಡುಪಿ ಜಿಲ್ಲೆ (ಪತ್ರಕರ್ತರು  & ಮಾಧ್ಯಮ ವಿಶ್ಲೇಷಕರು) m: 9632581508 ಭಾರತೀಯ ಸಾಂಸ್ಕೃತಿಕ ವಿಚಾರಕ್ಕೆ ಸಂಬಂಧಪಟ್ಟಂತೆ ಭಾರತದ ಅಡುಗೆ ಪದಾರ್ಥಗಳಲ್ಲಿ ಬೆಳ್ಳುಳ್ಳಿಯನ್ನು ಜಾಸ್ತಿ ಬಳಸುವುದರಿಂದ ಆರೋಗ್ಯಕರ ಲಕ್ಷಣವು  ಪದಾರ್ಥಗಳಲ್ಲಿ ಸೇವನೆ ಮಾಡಬೇಕು. ಬೆಳ್ಳುಳ್ಳಿ ನಮ್ಮ ಅಡುಗೆಯಲ್ಲಿ ಹೆಚ್ಚು ಬಳಸುವುದರಿಂದ ದೇಹದಲ್ಲಿನ ಕೊಬ್ಬಿನಂಶ ಮತ್ತು ನಾರಿನಾಂಶ  ಹೆಚ್ಚುಗೊಳಿಸುವುದರೊಂದಿಗೆ ಅದರಲ್ಲಿನ ಪ್ರಾಮುಖ್ಯತೆಯನ್ನು ಕೂಡ ಹಿಂದಿನ ಪಾರಂಪರಿಕ ಅಡುಗೆ ಮನೆಯಲ್ಲಿ ಬಳಸಲಾಗುತ್ತದೆ. ವಿವಿಧ ಹೋಟೆಲ್ಗಳಲ್ಲಿ ಮತ್ತು ಅಡುಗೆ ಸಿದ್ಧಪಡಿಸುವ ಅಡುಗೆ ಮನೆಯಲ್ಲಿ ಬೆಳ್ಳುಳ್ಳಿ ಉತ್ತಮ ಒಗ್ಗರಣೆಯ ಉತ್ಪನ್ನವಾಗಿ ಬಳಕೆ ಮಾಡುತ್ತೇವೆ. ಅದಲ್ಲದೆ ಸಾಂಬಾರು ಪದಾರ್ಥ ಮತ್ತು ರಸಂ ಮಾಡುವಾಗ ಬೆಳ್ಳುಳ್ಳಿಯನ್ನು ಹೆಚ್ಚು ಬಳಸುತ್ತಾರೆ. ಪಾರಂಪರಿಕ ಅಡುಗೆ ಪದಾರ್ಥಗಳಲ್ಲಿ ಬೆಳ್ಳುಳ್ಳಿ ,ಕರಿಬೇವು, ಹಸಿಮೆಣಸಿನಕಾಯಿ ಹಾಗೂ ಬ್ಯಾಡಗಿ ಮೆಣಸುಗಳನ್ನು ಬಳಸಿ ಅಡುಗೆಯನ್ನು ಸಿದ್ಧಪಡಿಸುತ್ತಾರೆ. ಆ ಕಾರಣಕ್ಕಾಗಿ…

Read More

ತಾಲೂಕಿನಲ್ಲಿ ಅತಿವೃಷ್ಟಿಯಿಂದ ನೆರೆ ಬಂದಾಗ, ಕೊರೊನಾ ಸಂದರ್ಭದಲ್ಲಿ ನೊಂದವರಿಗೆ ಹೃದಯಪೂರ್ವಕವಾಗಿ ನೆರವಾಗಿದ್ದನ್ನು ಇಂದಿಗೂ ಅವರು ಸ್ಮರಿಸುತ್ತಿರುವುದು ನನಗೆ ಸಾರ್ಥಕತೆ ತಂದಿದೆ. ರಸ್ತೆ, ಕಿಂಡಿ ಅಣೆಕಟ್ಟು, ಶಾಲಾ ಕಾಲೇಜು ಕಟ್ಟಡ, ಗ್ರಂಥಾಲಯ ನಿರ್ಮಾಣ, ಧಾರ್ಮಿಕ ಶ್ರದ್ಧಾ ಕೇಂದ್ರಗಳ ನಿರ್ಮಾಣ ಸೇರಿದಂತೆ ದಾಖಲೆಯಾಗಿ 3500 ಕೋಟಿ ರೂ. ಅನುದಾನ ತಂದಿದ್ದು ಮುಂದೆ ಎರಡನೇ ಬಾರಿ 50 ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಗೆಲ್ಲಿಸಿದರೆ ತಾಲೂಕನ್ನು ದೇಶಕ್ಕೆ ಮಾದರಿ ತಾಲೂಕಾಗಿ ಅಭಿವೃದ್ಧಿ ಪಡಿಸುತ್ತೇನೆ ಎಂದು ಶಾಸಕ ಹರೀಶ್‌ ಪೂಂಜ ಹೇಳಿದರು. ಮಡಂತ್ಯಾರ್‌, ನಡ, ಕಲ್ಲೇರಿಯಲ್ಲಿ ಗುರುವಾರ ಚುನಾವಣ ಬಹಿರಂಗ ಪ್ರಚಾರ ಸಭೆ ನಡೆಸಿ ತಾಲೂಕಿನಲ್ಲಿ ತನ್ನ ಅವಧಿಯಲ್ಲಿ ಆದ ಅಭಿವೃದ್ಧಿ ವಿಚಾರ ಮುಂದಿಟ್ಟು ಜನರಲ್ಲಿ ಮತ ಯಾಚಿಸಿದರು. ಮುಂದಿನ ಎರಡು ವರ್ಷದಲ್ಲಿ ತಾಲೂಕಿನಲ್ಲಿ ಯಾವುದೇ ಮಣ್ಣಿನ ರಸ್ತೆ ಇಲ್ಲದ ರೀತಿಯಲ್ಲಿ ರಸ್ತೆಗಳ ಅಭಿವೃದ್ಧಿ ಮಾಡುವೆ. ತಾಲೂಕಿನ ವಿದ್ಯಾವಂತ ಯುವಕರು ದೂರದ ಊರಿಗೆ ಉದ್ಯೋಗಕ್ಕೆ ವಲಸೆ ಹೋಗದೆ ಸ್ಥಳೀಯವಾಗಿ ಉದ್ಯೋಗ ಸಿಗುವ ನಿಟ್ಟಿನಲ್ಲಿ ಉಜಿರೆಯಲ್ಲಿ 108 ಎಕರೆ…

Read More

ಈ ಬಾರಿ ಕಾಪು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣದಲ್ಲಿರುವ ಸುರೇಶ್ ಶೆಟ್ಟಿ ಗುರ್ಮೆ ಅವರು ಓರ್ವ ಮಾದರಿ ರಾಜಕಾರಣಿ ಹಾಗೂ ನಿಜಾರ್ಥದ ಸಮಾಜ ಸೇವಕರಾಗಿದ್ದು, ಅವರು ಈ ಹಿಂದೆ ಮಾಡಿರುವ ಜನಸೇವೆಯು ಅವರ ಗೆಲುವನ್ನು ಈಗಾಗಲೇ ಖಚಿತಪಡಿಸಿದೆ ಎಂಬ ಮಾತು ಕ್ಷೇತ್ರದಲ್ಲಿ ಕೇಳಿ ಬರುತ್ತಿದೆ. ಸುರೇಶ್ ಶೆಟ್ಟಿ ಗುರ್ಮೆ ಅವರು ಓರ್ವ ಅಪರೂಪದ ರಾಜಕಾರಣಿ. ಅವರು ರಾಜಕೀಯ ಹೊರತುಪಡಿಸಿ ಚಿಂತಿಸುವ, ಮಾತನಾಡುವ ಪ್ರಬುದ್ಧತೆ ಹೊಂದಿರುವ ಉತ್ತಮ ವಾಗ್ಮಿ. ಬಿ.ಕಾಂ. ಪದವೀಧರರಾಗಿ ಬಳಿಕ ಬಳ್ಳಾರಿಗೆ ಹೋಗಿ ಔದ್ಯೋಗಿಕ ಹಾಗೂ ಉದ್ಯಮ ರಂಗದಲ್ಲಿ ತೊಡಗಿಸಿಕೊಂಡಿದ್ದರೂ ಹುಟ್ಟೂರಿನ ಜನರೊಂದಿಗೆ ನಿರಂತರ ಸಂಪರ್ಕ ಇರಿಸಿಕೊಂಡು, ಅಶಕ್ತರಿಗೆ ತನ್ನ ಕೈಲಾದ ಸಹಾಯವನ್ನು ಮಾಡುತ್ತಾ ಬಂದವರು. ಆ ಕಾರಣದಿಂದಲೇ ಅವರ ಊರಿನ ಮುಸ್ಲಿಂ, ಕ್ರಿಶ್ಚಿಯನ್ನರು ಕೂಡ ಇವರನ್ನು ಬೆಂಬಲಿಸುತ್ತಾರೆ. ಅಲ್ಪಸಂಖ್ಯಾತ ವರ್ಗದ ದೊಡ್ಡ ಪ್ರಮಾಣದ ಮತಗಳು ಈ ಬಾರಿ ಗುರ್ಮೆ ಸುರೇಶ್ ಶೆಟ್ಟಿ ಕಾರಣದಿಂದ ಕಾಪು ಕ್ಷೇತ್ರದಲ್ಲಿ ಬಿಜೆಪಿಗೆ ಬೀಳುವುದು ಖಚಿತ. ಸುರೇಶ್ ಶೆಟ್ಟಿ ಅವರು ವಿದ್ವತ್‌ಪೂರ್ಣ ಭಾಷಣದ…

Read More