Author: admin
ಮೂಡುಬಿದಿರೆ: ಎನ್ಸಿಸಿ ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಭಾರತೀಯ ಸೇನೆಯನ್ನು ಸೇರಬೇಕು. ಭಾರತೀಯ ಸೇನೆ ಒಂದು ಕುಟುಂಬ, ಸವಾಲನ್ನು ಎದುರಿಸುವ ಸ್ಥಳ. ಅಗ್ನಿವೀರ್ ಯೋಜನೆಯು ಯುವಜನತೆಗೆ ದೇಶ ಸೇವೆ ಮಾಡಲು ಉತ್ತಮ ಅವಕಾಶ ಕಲ್ಪಿಸಿದೆ ಎಂದು ಭಾರತೀಯ ಸೇನೆಯ ನಿವೃತ್ತ ಲೆಫ್ಟಿನಂಟ್ ಜನರಲ್ ಬಿಎಸ್ ರಾಜು ಹೇಳಿದರು. ಅವರು ಆಳ್ವಾಸ್ನ ವಿ. ಎಸ್ ಆಚಾರ್ಯ ಸಭಾಂಗಣದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ರೋಸ್ತ್ರಂ ಸ್ಪೀಕರ್ಸ್ ಕ್ಲಬ್ವತಿಯಿಂದ ಎನ್ಸಿಸಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕರ್ಯಕ್ರಮದಲ್ಲಿ ಮಾತನಾಡಿದರು. ಜೀವನದಲ್ಲಿ ಪ್ರತಿಬಾರಿ ನಾವು ಅಂದುಕೊಂಡಂತೆ ನಡೆಯುವುದಿಲ್ಲ. ಅದಕ್ಕಾಗಿ ನಾವು ಪರ್ಯಾಯ ಯೋಜನೆಗಳನ್ನು ಇಟ್ಟುಕೊಳ್ಳಬೇಕು. ಶಿಸ್ತು ಮತ್ತು ಘನತೆ ನಮ್ಮ ಜೀವನದಲ್ಲಿ ಮುಖ್ಯ ಪಾತ್ರ ವಹಿಸುತ್ತದೆ. ಶಿಸ್ತು ನಮ್ಮ ಕೆಲಸವನ್ನು ಸರಿಯಾಗಿ ನಿರ್ವಹಿಸುವ ಶಕ್ತಿ ನೀಡುತ್ತದೆ. ಎನ್ಸಿಸಿ ಸಮವಸ್ತ್ರ ವನ್ನು ಧರಿಸುವ ಆಸೆ ನಮ್ಮಲ್ಲಿ ಮೂಡಬೇಕು. ಆಳ್ವಾಸ್ ಸಂಸ್ಥೆಯ ಎನ್ಸಿಸಿಯಲ್ಲಿ ಮೂರು ವಿಭಾಗಳಿದ್ದು, ಕ್ರೀಯಾಶೀಲತೆಯಿಂದ ಕರ್ಯನಿರ್ವಹಿಸುತ್ತಿದೆ ಎಂಬುದನ್ನು ಅರಿತಿದ್ದೇನೆ ಎಂದರು. ಜಗತ್ತು ಕ್ಷಿಪ್ರ ಬದಲಾವಣೆಯಾಗುತ್ತಾ ಸಾಗುತ್ತಿದೆ. ನಮ್ಮಲ್ಲಿ…
ಉತ್ತಮ ಅವಕಾಶಗಳ ಹುಡುಕಾಟದಲ್ಲಿ ತವರು ನೆಲವನ್ನು ತೊರೆದು ದೂರದ ಗಲ್ಫ್ ರಾಷ್ಟ್ರದಲ್ಲಿ ಉದ್ಯೋಗ ಉದ್ಯಮದ ನೆಲೆಗಂಡು ಓರ್ವ ಪ್ರತಿಷ್ಠಿತ ವ್ಯಕ್ತಿಯಾಗಿ ಗುರುತಿಸಿಕೊಂಡವರು ಈ ಲೇಖನದ ನಾಯಕ, ಸಂಘಟಕ, ಮಯೂರ ಪ್ರಶಸ್ತಿ, ಆರ್ಯಭಟ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಕ್ವಾಡಿ ಪ್ರವೀಣ್ ಶೆಟ್ಟಿ. ಈಗಿನ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ವಕ್ವಾಡಿ ಎಂಬಲ್ಲಿ 1967 ಜುಲೈ 6 ರಂದು ನಾರಾಯಣ ಶೆಟ್ಟಿ ಮತ್ತು ಸರೋಜಿನಿ ಶೆಟ್ಟಿ ದಂಪತಿಯರಿಗೆ ಪ್ರೀತಿಯ ಕುಮಾರನಾಗಿ ಹುಟ್ಟಿದ ಪ್ರವೀಣ್ ಹೆಸರಿಗೆ ತಕ್ಕಂತೆ ಪಾಠ ಪಾಠೇತರ ಚಟುವಟಿಕೆಗಳಲ್ಲಿ ಜಾಣನೆಂಬಂತೆ ಗುರುತಿಸಿಕೊಳ್ಳುತ್ತಲೇ ತನ್ನ ಮಾತಾಪಿತರ ಉತ್ತಮ ಸಂಸ್ಕಾರದ ಪಾಠದಿಂದ ಬಾಲ್ಯವನ್ನು ಕಳೆದವರು. ಸರಕಾರಿ ಕಾಲೇಜು ಕೋಟೇಶ್ವರ ಹಾಗೂ ಕುಂದಾಪುರ ಭಂಡಾರ್ ಕಾರ್ಸ್ ಕಾಲೇಜು ಮುಖಾಂತರ ಬಿ.ಎಸ್ಸಿ ಪದವಿಯನ್ನು ಸಂಪಾದಿಸಿದರು.ತನ್ನ ಕಠಿಣ ಪರಿಶ್ರಮ ದೃಢ ನಿರ್ಧಾರ ಹಾಗೂ ಜೀವನದಲ್ಲಿ ಸ್ಪಷ್ಟ ಗುರಿ ಇರಿಸಿಕೊಂಡ ಈ ಸ್ಫುರದ್ರೂಪಿ ತರುಣ ಕೊಲ್ಲಿ ರಾಷ್ಟ್ರದ ಯುಎಇಯಲ್ಲಿ ಪಾಲುದಾರಿಕೆ ಒಪ್ಪಂದ ಪ್ರಕಾರ ಫಾರ್ಚೂನ್ ಹೊಟೆಲನ್ನು ಆರಂಭಿಸಿದ ನಂತರ…
ಸಮಾಜದ ಜನರ ಆರ್ಥಿಕ ಅವಶ್ಯಕತೆಗಳನ್ನು ಕಾಲಕಾಲಕ್ಕೆ ಹೊಂದಿಸಿಕೊಟ್ಟು ಒಟ್ಟು ಸಮಾಜ ಆರ್ಥಿಕ ಪ್ರಗತಿಗೆ ಶ್ರಮಿಸುವಲ್ಲಿ ಸಹಕಾರಿ ಸಂಘಗಳ ಪಾತ್ರ ಅತ್ಯಂತ ಮಹತ್ವ ಪೂರ್ಣವಾದುದು. ಈ ನಿಟ್ಟಿನಲ್ಲಿ ಚಂದ್ರ ವಿವಿಧೋದ್ದೇಶ ಸಹಕಾರಿ ಸಂಸ್ಥೆಯನ್ನು ಹುಟ್ಟು ಹಾಕಿ ಅದರ ಮೂಲಕ ಸಮಾಜದ ಸರ್ವಾಂಗೀಣ ಅಭಿವೃದ್ಧಿಗೆ ಕಾರಣರಾದ ಐ.ಎಂ ರಾಜಾರಾಮ ಶೆಟ್ಟಿ ಅವರು ಸಹಕಾರಿ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ರಾಜ್ಯದ ಅನೇಕ ಪ್ರತಿಷ್ಠಿತ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದ್ದಾರೆ. ಶ್ರೀಯುತರು ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಮೂಡಲಕಟ್ಟೆ ದೊಡ್ಡಮನೆ ಮನೆತನದ ನಾಗರತ್ನ ಶೆಟ್ಟಿ ಹಾಗೂ ಇರ್ಮಾಡಿ ಪಟೇಲ್ ಭುಜಂಗ ಶೆಟ್ಟಿ ಅವರ ಸುಪುತ್ರನಾಗಿ 1955 ರಲ್ಲಿ ಜನಿಸಿದರು. ತನ್ನ ಕೈಗಾರಿಕೋದ್ಯಮದ ಜೊತೆ ಜೊತೆಗೇ ಸಮಾಜ ಸೇವೆ ಮತ್ತು ಸಹಕಾರಿ ಕ್ಷೇತ್ರದಲ್ಲಿ ತನ್ನನ್ನು ತೊಡಗಿಸಿಕೊಂಡರು. ಇವರ ಹಿರಿಯ ಸಹೋದರ ಐ.ಎಂ ಜಯರಾಮ ಶೆಟ್ಟಿ ಅವರು ಉಡುಪಿ ಜಿಲ್ಲೆಯಿಂದ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಎಂಪಿ ಆಗಿದ್ದರಲ್ಲದೇ ಒಂದು ಬಾರಿ ಉಡುಪಿ ವಿಧಾನಸಭಾ ಕ್ಷೇತ್ರದಿಂದ ವಿಧಾನಸಭಾ ಸದಸ್ಯರಾಗಿದ್ದನ್ನೂ ನಾವಿಲ್ಲಿ ಸ್ಮರಿಸಿಕೊಳ್ಳಬಹುದು.ರಾಜಾರಾಮ್ ಶೆಟ್ಟಿ ಅವರು…
ಸಾಹಿತ್ಯ ಎಂದರೆ ಬದುಕು. ಸಾಹಿತ್ಯವು ಬದುಕಿಗೆ ಬುತ್ತಿ ಕಟ್ಟಿ ಕೊಡುವ ಕೆಲಸ ಮಾಡುತ್ತದೆ ಎಂದು ಅಜೆಕಾರು ಪದ್ಮಗೋಪಾಲ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷ ಡಾ| ಸುಧಾಕರ ಶೆಟ್ಟಿ ಹೇಳಿದರು. ಶಿರ್ಲಾಲು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಕಾರ್ಕಳ ತಾಲೂಕು 20ನೇ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು. ಇದೇ ಸಂದರ್ಭ ಆರ್. ರಮೇಶ್ ಪ್ರಭು ಅವರ ‘ಹೊಂಗನಸು’, ಎಚ್. ವಿಧಾತ್ರಿ ರವಿಶಂಕರ್ ಅವರ ನಕ್ಷತ್ರ ಪಟಲ, ಶೈಲಜಾ ಹೆಗ್ಡೆ ಅವರ ಭಾವ ಲಹರಿ ಎಂಬ ಮೂರು ಕೃತಿಗಳನ್ನು ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಬಿಡುಗಡೆಗೊಳಿಸಿದರು. ಕಂಬಳ ಕ್ಷೇತ್ರದ ಸಾಧಕ ಶ್ರೀಕಾಂತ್ ಭಟ್ ನಂದಳಿಕೆ ಹಾಗೂ ಕಂಬಳದ ಕೋಣ ಪಾಂಡು, ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ವಿನಾಯಕ ನಾಯ್ಕ್, ಜಾಗತಿಕ ದಾಖಲೆಯ ಕಂಬಳ ಓಟಗಾರ ಶ್ರೀನಿವಾಸ ಗೌಡ, ಕಂಬಳ ಕೋಣಗಳ ಯಜಮಾನ ಮಿಜಾರು ಶಕ್ತಿಪ್ರಸಾದ್ ಶೆಟ್ಟಿ, ವರ್ಣಚಿತ್ರ ಕಲಾವಿದ ಗಂಜೀಫಾ ರಘುಪತಿ ಭಟ್, ಶೈಕ್ಷಣಿಕ ಕ್ಷೇತ್ರದ ಸಾಧಕಿ ವಿನಮ್ರ…
ವಿಭಾಗ ಮಟ್ಟದ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವುದು ಅಂದರೆ ಪ್ರತಿಭೆ ವಿಕಾಸನವಾಗಿ ಅರ್ಧ ಜಯಶಾಲಿಯಾದಂತೆ ಪಠ್ಯ ವಿಷಯದ ಕಲಿಕೆ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ವಿದ್ಯಾರ್ಥಿಗಳು ತಮ್ಮನ್ನು ತೊಡಗಿಸಿಕೊಳ್ಳಬೇಕು. ಎಲ್ಲಾ ವಿದ್ಯಾರ್ಥಿಗಳು ತಮ್ಮ ಅತ್ಯುತ್ತಮ ಪ್ರತಿಭೆಯನ್ನು ತೋರಿಸಿ ವಿಜೇತರಾಗಿ ಎಂದು ಉಡುಪಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಶುಭ ಹಾರೈಸಿದರು. ಡಿ. 9ರಂದು ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಮತ್ತು ಶಾಲಾ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ ಹಾಗೂ ಕ್ರಿಯೇಟಿವ್ ಪದವಿಪೂರ್ವ ಕಾಲೇಜು, ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಸಪ್ತಸ್ವರ ವೇದಿಕೆಯಲ್ಲಿ ಜರುಗಿದ 2024-25 ನೇ ಶೈಕ್ಷಣಿಕ ಸಾಲಿನ ಪದವಿ ಪೂರ್ವ ವಿದ್ಯಾರ್ಥಿಗಳ ಮೈಸೂರು ವಿಭಾಗೀಯ ಮಟ್ಟದ ಸಾಂಸ್ಕೃತಿಕ ಮತ್ತು ಪಠ್ಯೇತರ ಸ್ಪರ್ಧೆಗಳನ್ನು ಉದ್ಘಾಟಿಸಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಉಪನಿರ್ದೇಶಕ ಮಾರುತಿ ಅವರು ಮಾತನಾಡಿ, ಗ್ರಾಮಾಂತರ ಭಾಗದಲ್ಲಿ ಇಂತಹ ಶೈಕ್ಷಣಿಕ ಸಂಸ್ಥೆಯನ್ನು ಕಟ್ಟಿ ಅನೇಕ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುತ್ತಿರುವುದು ಅದ್ಭುತ ಸಾಧನೆಯೇ ಸರಿ.…
ವಿದ್ಯಾಗಿರಿ(ಮೂಡುಬಿದಿರೆ): ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದಲ್ಲಿ ರಾಷ್ಟ್ರ ಪ್ರೇಮ,ಮಾನವೀಯ ಸ್ಪರ್ಶ, ಸೇವಾ ಮನೋಭಾವ, ಹೃದಯ ಶ್ರೀಮಂತಿಕೆ ಅತಿ ಮುಖ್ಯ ಎಂದು ಶಿಕ್ಷಕ, ರಾಜ್ಯ ಮಟ್ಟದ ವಿಕಸನ ತರಬೇತಿದಾರ ರಾಜೇಂದ್ರ ಭಟ್ ಕೆ. ಹೇಳಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಮೂಡುಬಿದಿರೆ ಸ್ಥಳೀಯ ಸಂಸ್ಥೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಭಾಗಿತ್ವದಲ್ಲಿ 30 ನೇ ಆಳ್ವಾಸ್ ವಿರಾಸಾತ್ ಸಂದರ್ಭದಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮತ್ತು ರೋವರ್ಸ್ – ರೇಂಜರ್ಸ್ ಸಾಂಸ್ಕೃತಿಕ ಉತ್ಸವದ ಅಂಗವಾಗಿ ರತ್ನಾಕರವರ್ಣಿ ವೇದಿಕೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಗುರುವಾರ ಅವರು ಉಪನ್ಯಾಸ ನೀಡಿದರು. ಸೇವೆ ಎನ್ನುವುದು ಪ್ರತಿ ಮನುಷ್ಯನ ಹೃದಯ ಶ್ರೀಮಂತಿಕೆ ಎಂದರು. ಇನ್ನೊಬ್ಬರ ಸಂತೋಷದಲ್ಲಿ ನಮ್ಮ ನಗುವನ್ನು ನೋಡುವ ಸೇವಾ ಮನೋಭಾವ, ಮಾನವೀಯ ಮೌಲ್ಯ ಇದ್ದಾಗ ಮಾತ್ರ ನಿಜವಾದ ಬದುಕನ್ನು ಜೀವಿಸಲು ಸಾಧ್ಯ ಎಂದು ಅವರು ಹೇಳಿದರು. ಅಮ್ಮನ ಪ್ರೀತಿ,…
ಆಳ್ವಾಸ್ ವಿರಾಸತ್ : ಗೋದೂಳಿಯಲ್ಲಿ ಗಜಲ್ -ಭಜನ್ ಸುಧೆ ಹರಿಸಿದ ಒಸ್ಮಾನ್ -ಅಮೀರ್ ಮೀರ್, ಸಾಥ್ ನೀಡಿದ ಪಾರತಿ ವ್ಯಾಸ್
ವಿದ್ಯಾಗಿರಿ (ಮೂಡುಬಿದಿರೆ): ಗುರುವಾರ ಬಿದಿರೆಯ ಆಗಸದಲ್ಲಿ ಹೊಂಗಿರಣ ಮೂಡಿದ್ದರೆ, ‘ಆಳ್ವಾಸ್ ವಿರಾಸತ್’ನ ವೇದಿಕೆಯಲ್ಲಿ ‘ಸಬ್ ಕಾ ಶುಕ್ರಿಯಾ’ ಎಂದು ವಿನಮ್ರತೆ ವ್ಯಕ್ತಪಡಿಸಿ ಒಸ್ಮಾನ್ ಮೀರ್ ಧನ್ಯರಾದರು, ‘ತುಜ್ ಸೇ ಮೇರಾ ಜೀನಾ ರ್ನಾ… ಮೈ ಮುಸಾಫಿರ್ ತು ಮುಸಾಫಿರ್’ ಎಂದು ಅವರ ಪುತ್ರ ಅಮೀರ್ ಮೀರ್ ವೈರಲ್ ಆದ ತಮ್ಮ ಆಲ್ಬಂನ ಗಾನದ ಹೊನಲು ಹರಿಸಿದರು. ‘ತೇರೆ ಬಿನಾ ಸೋನ ಹೀ ಸಕ್ತೇ….’ ಎಂದಾಗ ಸಭಾಂಗಣ ಕಿಕ್ಕಿರಿದ ವಿದ್ಯರ್ಥಿಗಳ ಉದ್ಘಾರ ನಿದ್ದೆಗೆಡಿಸಿತು. ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ೩೦ನೇ ರ್ಷದ ಆಳ್ವಾಸ್ ವಿರಾಸತ್ನ ಮೂರನೇ ದಿನದ ಕರ್ಯಕ್ರಮದ ಗೋದೂಳಿ ಸೊಬಗು. ಅದು ಸೌಹರ್ದತೆಯ ಮೆರುಗು. ಬಳಿಕ ಅಮೀರ್ ಮೀರ್ ಅವರು ‘ಸಂತ್ … ಸಜ್ ನಾ ತೇರೆ ಬಿನಾ…’ ಎಂದು ಹಾಡಿದಾಗ ತಂದೆ ಒಸ್ಮಾನ್ ಗಾಯನದಲ್ಲಿ ಜೊತೆಯಾದರು. ಪಾರತಿ ವ್ಯಾಸಿ ಸಾಥ್ ನೀಡಿದರು. ದರ್ಘ ಅಗಲುವಿಕೆಯ ‘ಮೌತ್ ನಾ ಆಯಿ.. ಲಂಬೀ ಜುದಾಯಿ…’ ಎಂಬ ನಟಿ ರೇಖಾ ನೆಚ್ಚಿನ…
ವಿದ್ಯಾಗಿರಿ (ಮೂಡುಬಿದಿರೆ): ಆಗಸದಲ್ಲಿ ಆಗಾಗ್ಗೆ ಮೋಡ ಕವಿದ ವಾತಾವರಣ ಕಂಡರೆ, ಇತ್ತ ‘ಆಳ್ವಾಸ್ ವಿರಾಸತ್’ನ ವೇದಿಕೆಯಲ್ಲಿ ಕಥಕ್ ನೃತ್ಯ ವರ್ಷಧಾರೆ. ಪ್ರೇಕ್ಷಕರೆಲ್ಲ ನೃತ್ಯ ರೂಪಕದ ಸಿಂಚನದಲ್ಲಿ ಮಿಂದೆದ್ದರು. ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ 30ನೇ ವರ್ಷದ ಆಳ್ವಾಸ್ ವಿರಾಸತ್ನ ಮೂರನೇ ದಿನದ ಗಾಯನದ ಬಳಿಕ ಮೂಡಿ ಬಂದ ಸಾಂಸ್ಕೃತಿಕ ವೈಭವ. ಆಶಿಂಬಂಧು ಚಟರ್ಜಿ ನಿರ್ದೇಶನದಲ್ಲಿ ಪ್ರಸ್ತುಗೊಂಡ ಭಾರತೀಯ ಶಾಸ್ತ್ರೀಯ ನೃತ್ಯ ಪ್ರಕಾರ ಕಥಕ್ ‘ವರ್ಷಧಾರೆಯನ್ನೇ ಸುರಿಸಿತು. ತುಂತುರು ಮಳೆಯನ್ನು ಸಂಭ್ರಮಿಸುವ ಋತುವಿನ ದರ್ಶನ ನೀಡಿತು. ಉತ್ತರದ ಕಥಕ್ ಬಳಿಕ ನೃತ್ಯ ಲೋಕವು ದ್ವೀಪ ರಾಷ್ಟ್ರ ಶ್ರೀಲಂಕಾ ಸಂಸ್ಕೃತಿಗೆ ಹೆಜ್ಜೆ ಇಟ್ಟಿತು. ಅಖಿಲ ಪರಿಮಳನ್ ನಿರ್ದೇಶನದ ಶ್ರೀಲಂಕಾದ ಕ್ಯಾಂಡಿಯನ್ ನೃತ್ಯ, ಭೂಮಿ ದ್ವೀಪ ದೇಶದ ಚಮತ್ಕಾರದ ಶಕ್ತಿಯೆಡೆಗೆ ಕೊಂಡೊಯ್ಯಿತು. ತಿರುಗುವ ಚಕ್ರ, ಹಾರುವ ಬೆಂಕಿ ಉಂಡೆ ಇತ್ಯಾದಿಗಳು ಸೊಬಗೇರಿಸಿದವು. ವಿಷ್ಣು, ಸಮನ್, ಕಾತರಂಗಂ, ಪಟ್ಟಿನಿ, ಕಾಳಿ ಮತ್ತು ಸುನಿಯಂ ಶ್ರೀಲಂಕಾದ ಪ್ರಮುಖ ದೇವ-ದೈವಗಳಾಗಿವೆ. ಅವರ ಆರಾಧನಾ ವಿಧಾನವಾಗಿ ನೃತ್ಯ…
ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಬೆಂಗಳೂರು ಇವರ ವತಿಯಿಂದ ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ ಅವರ ಸಹಕಾರದೊಂದಿಗೆ ರೂ. 3.00 ಕೋಟಿ ವೆಚ್ಚದಲ್ಲಿ ಅಭಿವೃದ್ದಿ ಪಡಿಸಿದ ಬ್ರಹ್ಮಾವರ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ “ಹೆಗ್ಗುಂಜೆ ರಾಜೀವ ಶೆಟ್ಟಿ ಕರ್ನಾಟಕ ಪಬ್ಲಿಕ್ ಸ್ಕೂಲ್” ನಾಮಕರಣ ಮತ್ತು ಲೋಕಾರ್ಪಣೆ ಕಾರ್ಯಕ್ರಮವು ಡಿಸೆಂಬರ್ 12 ರಂದು ನಡೆಯಿತು. ನೂತನವಾಗಿ ನಿರ್ಮಿಸಲಾದ ಕಟ್ಟಡವನ್ನು ಅಂತರಾಷ್ಟ್ರೀಯ ಮಟ್ಟದ ಶಿಕ್ಷಣ ತಜ್ಞರು, ಪ್ರೇರಣಾತ್ಮಕ ಉಪನ್ಯಾಸಕರಾದ ಡಾ. ಗುರುರಾಜ್ ಖರ್ಜಗಿಯವರು ಉದ್ಘಾಟಿಸಿ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ.) ಬೆಂಗಳೂರು ಇದರ ಅಧ್ಯಕ್ಷರಾದ ಡಾ| ಹೆಚ್.ಎಸ್. ಶೆಟ್ಟಿ, ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ವಿಧಾನಸಭಾ ಕ್ಷೇತ್ರ ಶಾಸಕರಾದ ಯಶ್ಪಾಲ್ ಸುವರ್ಣ, ಮಾಜಿ ಶಾಸಕ ಕೆ ರಘುಪತಿ ಭಟ್, ಶಾಲಾ ಶಿಕ್ಷಣ ಮತ್ತು ಪ್ರೌಢಶಾಲಾ ಇಲಾಖೆ ಉಪ ನಿರ್ದೇಶಕರಾದ ಕೆ. ಗಣಪತಿ, ಉಡುಪಿ ಜಿಲ್ಲಾ ಪದವಿ ಪೂರ್ವ ವಿಭಾಗದ…
ಉಡುಪಿಯ ಪ್ರಖ್ಯಾತ ಸಂಸ್ಥೆ ಸಾಯಿರಾಧ ಗ್ರೂಪ್ಸ್ ನ ಆಡಳಿತ ನಿರ್ದೇಶಕ, ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಹಾಗೂ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಮನೋಹರ ಎಸ್ ಶೆಟ್ಟಿ ಮತ್ತು ಅವರ ಧರ್ಮಪತ್ನಿ ಶ್ರೀಮತಿ ಅನುರಾಧ ಎಂ. ಶೆಟ್ಟಿಯವರು “ಕಾಪುವಿನ ಅಮ್ಮನ ಮಕ್ಕಳು” ತಂಡಕ್ಕೆ ಸೇರ್ಪಡೆಯಾಗಿದ್ದು, ಡಿಸೆಂಬರ್ 10 ರಂದು ಮಂಗಳವಾರ ನವದುರ್ಗಾ ಲೇಖನ ಯಜ್ಞದ ಪುಸ್ತಕವನ್ನು ಬರೆದು ಮಾತೃಶ್ರೀ ರಾಧಾ ಸುಂದರ್ ಶೆಟ್ಟಿ ‘ರಾಧಾಛಾಯಾ’ ಉಳಿಯಾರಗೋಳಿ ಕಾಪು ಇವರ ಸ್ಮರಣಾರ್ಥ 40 ಶಿಲಾಸೇವೆಯೊಂದಿಗೆ ಅಮ್ಮನಿಗೆ ಸಮರ್ಪಿಸಿದರು.ಈ ಸಂಧರ್ಭ ಆರ್ಥಿಕ ಸಮಿತಿಯ ಮುಖ್ಯ ಸಂಚಾಲಕರಾದ ರಮೇಶ್ ಶೆಟ್ಟಿ ಕಾಪು ಕಲ್ಯ, ನವದುರ್ಗಾ ಲೇಖನ ಯಜ್ಞದ ಮಹಿಳಾ ಸಮಿತಿಯ ಮುಖ್ಯ ಸಂಚಾಲಕರಾದ ಶ್ರೀಮತಿ ಸಾವಿತ್ರಿ ಗಣೇಶ್, ಆರ್ಥಿಕ ಸಮಿತಿಯ ಕಾತ್ಯಾಯಿನಿ ತಂಡದ ಸಂಚಾಲಕರುಗಳಾದ ಶ್ರೀಮತಿ ಶೋಭಾ ರಮೇಶ್ ಶೆಟ್ಟಿ ಮತ್ತು ಶ್ರೀಮತಿ ಕವಿತಾ ಶೆಟ್ಟಿ ಉಪಸ್ಥಿತರಿದ್ದರು.















