Author: admin

ಜುಲೈ 9ನೇ ತಾರೀಕು ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಲಾವಿದರ ತಂಡ ಯಕ್ಷಗಾನ ಅಭಿಯಾನಕ್ಕಾಗಿ ಅಮೆರಿಕ ಪ್ರವಾಸ ಕೈಗೊಳ್ಳುತ್ತಿದೆ. ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್(ರಿ) USA ಇದರ ಆಯೋಜನೆಯನ್ನು ಮಾಡುತ್ತಿದೆ. ಅಮೇರಿಕಾ ಸರಕಾರದ ಮಾನ್ಯತೆ ಪಡೆದ ಕಾರಣ ಪುತ್ತಿಗೆ ಮಠದ ಶ್ರೀ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರ ಶುಭಾಶೀರ್ವಾದದಲ್ಲಿ ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಯುಎಸ್ಎ ಘಟಕದ ಅಧ್ಯಕ್ಷ ಡಾ.ಅರವಿಂದ ಉಪಾಧ್ಯಾಯ, ಡಾ. ಶ್ರೀಧರ ಆಳ್ವ, ಮಹಾಬಲ ಶೆಟ್ಟಿ, ಉಳಿ ಯೋಗೇಂದ್ರ ಭಟ್ ಮುಂತಾದ ಪ್ರಮುಖರು ನಮ್ಮ ಯಕ್ಷಗಾನ ತಂಡದ ಕಾರ್ಯಕ್ರಮಗಳನ್ನು ಅಮೇರಿಕಾದ 20 ರಾಜ್ಯಗಳ ಮುಖ್ಯ ನಗರಗಳಲ್ಲಿ ನಿಶ್ಚಯಿಸಿರುತ್ತಾರೆ ಎಂದು ಪಟ್ಲ ಫೌಂಡೇಶನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ತಂಡದಲ್ಲಿ ಹಿಮ್ಮೇಳದ ಕಲಾವಿದರಾಗಿ ಪಟ್ಲ ಸತೀಶ್ ಶೆಟ್ಟಿ, ಪದ್ಮನಾಭ ಉಪಾಧ್ಯ, ಚೈತನ್ಯ ಕೃಷ್ಣ ಪದ್ಯಾಣ ಹಾಗೂ ಮುಮ್ಮೇಳದಲ್ಲಿ ಪ್ರೊ.ಎಂಎಲ್ ಸಾಮಗ, ಹರಿನಾರಾಯಣ ಭಟ್ ಎಡನೀರು, ಚಂದ್ರಶೇಖರ ಧರ್ಮಸ್ಥಳ, ಮಹೇಶ ಮಣಿಯಾಣಿ,…

Read More

ಧರ್ಮದೈವ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗಿರುವ ಧರ್ಮದೈವ ತುಳು ಸಿನಿಮಾ ಜುಲೈ 5 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ. ಪುಣೆ, ಮುಂಬೈನಲ್ಲಿ ನಡೆದ ಪ್ರೀಮಿಯರ್ ಶೋ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ. “ಧರ್ಮ ದೈವ” ಸಿನಿಮಾ ಮಂಗಳೂರಿನಲ್ಲಿ ರೂಪವಾಣಿ, ಭಾರತ್ ಸಿನಿಮಾಸ್, ಪಿವಿಆರ್, ಸಿನಿಪೊಲಿಸ್, ಸುರತ್ಕಲ್ ನಲ್ಲಿ ಸಿನಿಗ್ಯಾಲಕ್ಸಿ, ನಟರಾಜ್, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಉಡುಪಿಯಲ್ಲಿ ಕಲ್ಪನ, ಭಾರತ್ ಸಿನಿಮಾಸ್, ಮಣಿಪಾಲದಲ್ಲಿ ಐನಾಕ್ಸ್, ಭಾರತ್ ಸಿನಿಮಾಸ್, ಕಾರ್ಕಳದಲ್ಲಿ ಪ್ಲಾನೆಟ್, ರಾಧಿಕಾ, ಪುತ್ತೂರಿನಲ್ಲಿ ಭಾರತ್ ಸಿನಿಮಾಸ್ ಬೆಳ್ತಂಗಡಿಯಲ್ಲಿ ಭಾರತ್ ಚಿತ್ರಮಂದಿರದಲ್ಲಿ ಸಿನಿಮಾ ತೆರೆಕಾಣಲಿದೆ” ಎಂದು ಚಿತ್ರದ ನಿರ್ದೇಶಕ ನಿತಿನ್ ರೈ ಕುಕ್ಕುವಳ್ಳಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಬಳಿಕ ಮಾತಾಡಿದ ರಮೇಶ್ ರೈ ಕುಕ್ಕುವಳ್ಳಿ ಅವರು, “ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ಸೇರಿದಂತೆ ಅನೇಕ ಸಾನಿಧ್ಯ ಸ್ಥಳಗಳು, ದೈವಾರಾಧನೆ ನಾಗಾರಾಧನೆಗೆ ಪ್ರಸಿದ್ಧಿ ಪಡೆದಿವೆ. ಇಂದು ತುಳುನಾಡು, ತುಳು ಭಾಷೆ, ದೇಶ ವಿದೇಶ ತುಂಬಾ ಮಾನ್ಯತೆ ಪಡೆದಿದೆ. ಸಿನಿಮಾ ಮಾಧ್ಯಮ ಇಂದು ಪರಿಣಾಮಕಾರಿ ಶ್ರೀಮಂತ ಮಾಧ್ಯಮವಾಗಿ…

Read More

ಜೂನ್ 29: ಬ್ರಹ್ಮಾವರದ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ನಲ್ಲಿ ಫ್ರೆಶರ್ಸ್ ಡೆ’ಯನ್ನು ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಉಡುಪಿಯ ಬಿಗ್ ಮೆಡಿಕಲ್ ಸೆಂಟರ್‍ನ ವೈದ್ಯೆ ಡಾ. ಶ್ರುತಿ ಬಲ್ಲಾಳ್ ಆಗಮಿಸಿದ್ದರು. ಅವರು ಮಾತನಾಡಿ ದುರಭ್ಯಾಸಗಳು ನಮ್ಮನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುತ್ತದೆ. ಆದ್ದರಿಂದ ನಾವು ಒಳ್ಳೆಯ ಆಹಾರ ಪದ್ಧತಿ, ಉತ್ತಮ ಚಟುವಟಿಕೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದರು. ಜಿ ಎಮ್ ಸಂಸ್ಥೆ ಯೋಗ, ಕರಾಟೆ ವಿಭಿನ್ನ ಪಠ್ಯೇತರ ಚಟುವಟಿಕೆಗಳನ್ನು ಆಯೋಜಿಸುತ್ತಿದ್ದು ಮಕ್ಕಳೆಲ್ಲರೂ ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ ಜಿ ಎಮ್ ಸಂಸ್ಥೆಗೆ ಹೊಸದಾಗಿ ಸೇರ್ಪಡೆಗೊಂಡ ಶಿಕ್ಷಕರಿಗೆ, ವಿದ್ಯಾರ್ಥಿಗಳಿಗೆ ಶುಭಹಾರೈಸಿ ಮಕ್ಕಳೆಲ್ಲರೂ ಕಲಿಕೆಯ ಜೊತೆಗೆ ಶಾಲೆಯ ಎಲ್ಲಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಕೊಳ್ಳಬೇಕೆಂದರು. ಶಾಲಾ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್ ಮಾತನಾಡಿ ಪ್ರೆಶರ್ಸ್ ಡೇ ಎಲ್ಲರೂ ಸ್ನೇಹ ಭಾವದಿಂದ ಜೊತೆಯಾಗಿ ಸೇರಿ ಸಂಭ್ರಮಿಸುವ ದಿನವೆಂದರು. ಹೊಸ ಶಿಕ್ಷಕರ, ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ ನೃತ್ಯ, ಗಾಯನ, ಪ್ರಹಸನ, ಮೂಕಾಭಿನಯ ಮುಂತಾದ ಸಾಂಸ್ಕೃತಿಕ ಕಾರ್ಯಕ್ರಮಗಳು ಮನೋರಂಜನೆಯ…

Read More

ಕಾಲ್ತೋಡು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಪ್ಪಾಡಿ, ಮೂರೂರುವಿನಲ್ಲಿ ಸ್ವಯಂಸ್ಪೂರ್ತಿ ಫೌಂಡೆಶನ್ ಬೆಂಗಳೂರು, ಇವರು ಸಮೃದ್ಧ ಬೈಂದೂರು-300 ಟ್ರೀಸ್ ಯೋಜನೆಯಡಿ ನಿರ್ಮಿಸಿರುವ ಸ್ವಯಂಸ್ಪೂರ್ತಿ ಕೌಶಲ್ಯ ಕೇಂದ್ರವನ್ನು ಬೈಂದೂರು ಶಾಸಕರ ಪ್ರತಿನಿಧಿಯಾಗಿ ಉದ್ಯಮಿ ಸುರೇಶ್ ಶೆಟ್ಟಿ ಉದ್ಘಾಟಿಸಿದರು. ಕಾಲ್ತೋಡು ಪಂಚಾಯತ್ ಅಧ್ಯಕ್ಷರಾದ ಅಣ್ಣಪ್ಪ ಶೆಟ್ಟಿ, ಪ್ರಮುಖರಾದ ಆದಿರಾಜ್ ಜೈನ್, ಗೋಪಾಲ್ ಶೆಟ್ಟಿ ಮೂರೂರು ದೊಡ್ಮನೆ, ಚಂದ್ರಶೇಖರ್ ಶೆಟ್ಟಿ ಹೊರ್ಲೆಮನೆ, ಅಣ್ಣಪ್ಪ ಪೂಜಾರಿ ಕಮ್ತಾಡಿಮನೆ, CRP ರಾಮನಾಥ್ ಮೇಸ್ತ, ಪ್ರದೀಪ್ ಶೆಟ್ಟಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು, ಹೆರಿಯಣ್ಣ ಮಡಿವಾಳ, ಶಾಲಾ ಮುಖ್ಯೋಪಾಧ್ಯಾಯಿನಿ ಶೈಲಜಾ, ಸಮೃದ್ಧ ಬೈಂದೂರು ತಂಡದ ಸದಸ್ಯರಾದ ಶೋಧನ್ ಮಲ್ಪೆ ಉಪಸ್ಥಿತರಿದ್ದರು. ಕಪ್ಪಾಡಿ ಅಂಗನವಾಡಿ ಕೇಂದ್ರಕ್ಕೆ ಕ್ರೀಡಾ ಸಾಮಾಗ್ರಿಗಳನ್ನು ಸ್ವಯಂಸ್ಪೂರ್ತಿ ಫೌಂಡೆಶನ್ ವತಿಯಿಂದ ವಿತರಿಸಲಾಯಿತು. ಸ್ವಯಂಸ್ಫೂರ್ತಿ ಫೌಂಡೇಶನ್ ಸಂಸ್ಥಾಪಕರಾದ ನಾಗರಾಜ ಶೆಟ್ಟಿ ಜಡ್ಕಲ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ತಮ್ಮ ತಂದೆಯವರು ಓದಿದ ಶಾಲೆ ಜೊತೆಗೆ ಗ್ರಾಮೀಣ ಪ್ರದೇಶವಾದ ಕಪ್ಪಾಡಿ ಶಾಲೆಯಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಸ್ಮಾರ್ಟ್ ಕ್ಲಾಸ್…

Read More

ವಿದ್ಯಾಗಿರಿ: ‘ಸ್ವಾಯತ್ತ ಎಂಬುದು ಶಿಕ್ಷಣ ಸಂಸ್ಥೆಯ ಸ್ವಯಂ ಪರಿಕಲ್ಪನೆಗಳ ಸಾಕಾರಕ್ಕೆ ದೊರೆತ ಮಹತ್ತರ ಜವಾಬ್ದಾರಿ. ಇಲ್ಲಿ ಬೋಧಕರು ನಿರಂತರ ವಿದ್ಯಾರ್ಥಿಗಳಾಗಬೇಕು’ ಎಂದು ಮಂಗಳೂರಿನ ಡಾ.ಶಿವರಾಮ ಕಾರಂತ ನಿಸರ್ಗ ಧಾಮದ ವಿಜ್ಞಾನ ವಿಭಾಗದ ನಿರ್ದೇಶಕ ಡಾ.ಕೆ.ವಿ.ರಾವ್ ಹೇಳಿದರು. ಆಳ್ವಾಸ್ ಕಾಲೇಜಿನಲ್ಲಿ (ಸ್ವಾಯತ್ತ) ಶುಕ್ರವಾರ ನಡೆದ ಆಂತರಿಕ ಮೌಲ್ಯ ಖಾತರಿ ಕೋಶ (ಐಕ್ಯುಎಸಿ)ದ ಸಭೆಯಲ್ಲಿ ಅವರು ಮಾತನಾಡಿದರು. ‘ಸಂಸ್ಥೆಗಳು ತಮ್ಮ ಸಾಮರ್ಥ್ಯ, ದೌರ್ಬಲ್ಯ, ಅವಕಾಶ ಹಾಗೂ ಅಪಾಯದ (ಸ್ವೊಟ್) ಬಗ್ಗೆ ಸ್ವಯಂ ವಿಮರ್ಶೆ ಮಾಡಿಕೊಂಡಾಗ ಪ್ರಗತಿ ಕಾಣಲು ಸಾಧ್ಯ. ದೂರದೃಷ್ಟಿ, ಸಮಯ ನಿರ್ಬಂಧಿತ ಗುರಿ, ನಿರಂತರ ಕಲಿಕೆ ಇರಬೇಕು’ ಎಂದ ಅವರು, ‘ಕಾಲೇಜು ಎಂದರೆ ಕೇವಲ ಕಟ್ಟಡವಲ್ಲ. ಅದೊಂದು ಜೀವಂತಿಕೆಯ ಅಸ್ತಿತ್ವ’ ಎಂದರು. ‘ಕೈಗಾರಿಕೆಗಳ ಜೊತೆ ಸಂಬAಧ, ಔದ್ಯೋಗಿಕ ತರಬೇತಿ, ಕೌಶಲ ವೃದ್ಧಿ, ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳ ಅಭಿವೃದ್ಧಿ ಸಾಧ್ಯ. ಪಕ್ವತೆಯಲ್ಲಿ ಆಳ್ವಾಸ್ ಯಾವಾಗಲೂ ಮಾದರಿ’ ಎಂದು ಬಣ್ಣಿಸಿದರು. ಯೆನೆಪೋಯಾ ಪರಿಗಣಿತ ವಿಶ್ವವಿದ್ಯಾಲಯ ಆಯುಷ್ ಸಂಶೋಧನಾ ಕೇಂದ್ರದ ವಿಜ್ಞಾನಿ ಹಾಗೂ…

Read More

ವಿದ್ಯಾಗಿರಿ: ಭಾರತೀಯ ಸ್ಕೌಟ್ಸ್ ಹಾಗೂ ಗೈಡ್ಸ್ನ ಸೇವೆಯ ಧ್ಯೇಯದಿಂದ ವ್ಯಕ್ತಿ ನಿರ್ಮಾಣ ಸಾಧ್ಯ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದಕ್ಷಿಣ ಕನ್ನಡದ ಜಿಲ್ಲೆಯ ರಾಜ್ಯ ಸಹಾಯಕ ಸಂಘಟನಾ ಆಯುಕ್ತ ಭರತ್ ರಾಜ್ ಹೇಳಿದರು. ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಶಿವರಾಮ ಕಾರಂತ ವೇದಿಕೆಯಲ್ಲಿ ಆಳ್ವಾಸ್ ರೋವರ್ಸ್ ಮತ್ತು ರೇಂಜರ್ಸ್ 2024-25ನೇ ಸಾಲಿನ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಜೀವನಕ್ಕೆ ಬೇಕಾದ ಕೌಶಲಗಳನ್ನು ವಿದ್ಯಾರ್ಥಿಗಳಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಕಲಿಯಲು ಸಾಧ್ಯ. ಇಲ್ಲಿ ನಡೆಯುವ ಶಿಬಿರಗಳು ವಿದ್ಯಾರ್ಥಿಗಳ ಜೀವನಕ್ಕೆ ಅವಶ್ಯವಾದ ಪಾಠಗಳನ್ನು ಹೇಳಿಕೊಡುತ್ತವೆ ಎಂದರು. ಸ್ಕೌಟ್ಸ್ ಮತ್ತು ಗೈಡ್ಸ್ ದಕ್ಷಿಣ ಕನ್ನಡ ಜಿಲ್ಲಾ ಆಯುಕ್ತ ಡಾ.ಮೋಹನ ಆಳ್ವ ಅವರ ಶ್ರಮದಿಂದ ಜಿಲ್ಲಾ ಘಟಕವು ಮುಂಚೂಣಿಯಲ್ಲಿದೆ. ಆಳ್ವಾಸ್ ಸಾಂಸ್ಕೃತಿಕ ಜಾಂಬೂರಿಯು ಇಡೀ ವಿಶ್ವವೇ ಮೂಡುಬಿದಿರೆಯತ್ತ ಮುಖ ಮಾಡುವಂತೆ ಮಾಡಿತ್ತು ಎಂದರು. ಪಠ್ಯದ ಕಲಿಕೆಯ ಜೊತೆಗೆ ಪಠ್ಯತರ ಚಟುವಟಿಕೆಗಳು ಜೀವನದಲ್ಲಿ ಬಹು ಮುಖ್ಯ ಪಾತ್ರ ವಹಿಸುತ್ತದೆ. ಇದರಿಂದ ವಿದ್ಯಾರ್ಥಿಗಳ ಮನಸ್ಥಿತಿ…

Read More

ವಿದ್ಯಾಗಿರಿ: 21ನೇ ಶತಮಾನದಲ್ಲಿ ಜನರಿಗೆ ಆಯುರ್ವೇದದ ಮಹತ್ವ ತಿಳಿಯುತ್ತಿರುವುದು ಸಂತಸದ ಬೆಳವಣಿಗೆ ಎಂದು ಆಳ್ವಾಸ್  ಹೆಲ್ತ್ ಸೆಂಟರ್‌ನ ಸ್ತ್ರೀ ರೋಗ ತಜ್ಞೆ ಡಾ. ರೇವತಿ ಭಟ್ ಹೇಳಿದರು. ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯ ಸ್ನಾತಕೋತ್ತರ ಪ್ರಸೂತಿ ತಂತ್ರ ಹಾಗೂ ಸ್ತ್ರೀ ರೋಗ ವಿಭಾಗದ ವತಿಯಿಂದ ಪ್ರಾಜ್ಞಾ ವಿಚಾರ ಸಂಕಿರಣ ಸಭಾಂಗಣದಲ್ಲಿ ನಡೆದ ರಾಷ್ಟ್ರ ಮಟ್ಟದ ‘ಎಂಡೊಮೆಟ್ರಿಯೊಸಿಸ್- ಒಂದು ಸಂಯೋಜಿತ ವಿಧಾನ’ ಕಾರ್ಯಗಾರದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಆಯುರ್ವೇದ ಕ್ಷೇತ್ರದಲ್ಲಿ ಹೆಚ್ಚು ಕಾರ್ಯಗಾರ ಹಾಗೂ ವಿಚಾರ ಸಂಕಿರಣಗಳು ನಡೆಯಬೇಕು. ಇದರಿಂದ ಪಡೆದ ಜ್ಞಾನವನ್ನು ನಾವು ಇತರರಿಗೆ ತಿಳಿಸುವ ಅವಶ್ಯಕತೆ ಇದೆ. ಪ್ರಸ್ತುತ ವರ್ತಮಾನದಲ್ಲಿ ಜನರು ಸಾಕ್ಷಿಗಳನ್ನು ಹೆಚ್ಚು ನಂಬುತ್ತಾರೆ. ಹಾಗಾಗಿ ಸಾಕ್ಷಿಗಳ ಜೊತೆ ಆಯುರ್ವೇದದ ಬಗೆಗೆ ಜನರಿಗೆ ಖಾತರಿ ಪಡಿಸಬೇಕು ಎಂದು ಹೇಳಿದರು. ನಮ್ಮ ಹಿಂದಿನ ತಲೆಮಾರಿನ ಜನರಿಗೆ ಪ್ರಕೃತಿಯಲ್ಲಿ ದೊರೆಯುವ ಔಷಧಿಗಳ ಬಗ್ಗೆ ಅಪಾರ ಜ್ಞಾನವಿದ್ದರೂ ಅವರು ಆ ಜ್ಞಾನವನ್ನು ಮುಂದಿನ ತಲೆಮಾರಿಗೆ ಪಸರಿಸಿಲ್ಲ. ಆದರೆ ಈ…

Read More

ಸರ್ಕಾರಿ ಶಾಲೆ ಉಳಿದ ಮಾತ್ರ ನಮ್ಮ ಖುಷಿ, ನೆನಪು ಹಾಗೂ ಸುಮಧುರ ಬಾಂಧವ್ಯ ಶಾಶ್ವತವಾಗಿರಲಿದೆ. ಈ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳನ್ನು ಉಳಿಸಿ, ಸೂಕ್ತ ಸೌಲಭ್ಯ ಕಲ್ಪಿಸುವ ದೊಡ್ಡ ಕಾರ್ಯ ಆಗಬೇಕಿದೆ. ಹೀಗಾಗಿಯೇ 300 ಟ್ರಿಸ್ ಕಲ್ಪನೆಯನ್ನು ಸಮೃದ್ಧ ಬೈಂದೂರು ಮೂಲಕ ಕಾರ್ಯರೂಪಕ್ಕೆ ತರಲಾಗಿದೆ. ಇದಕ್ಕೆ ದಾನಿಗಳು ಸಾಕಷ್ಟು ಪ್ರೋತ್ಸಾಹ ನೀಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಆಯ್ದ ಸರ್ಕಾರಿ ಶಾಲೆಗಳಲ್ಲಿ ಕಂಪ್ಯೂಟರ್ ತರಬೇತಿ ಕೇಂದ್ರ, ಸ್ಮಾರ್ಟ್ ಕ್ಲಾಸ್, ಗ್ರಂಥಾಲಯ ಮತ್ತು ಕ್ರೀಡಾ ಸಾಮಗ್ರಿಗಳನ್ನೊಳಗೊಂಡ ಸ್ವಯಂಸ್ಫೂರ್ತಿ ಕೌಶಲ್ಯ ಕೇಂದ್ರ ಸ್ಥಾಪಿಸಲು ಸ್ವಯಂ ಸ್ಫೂರ್ತಿ ಫೌಂಡೇಶನ್ ಅಧ್ಯಕ್ಷ ನಾಗರಾಜ ಶೆಟ್ಟಿ ಜಡ್ಕಲ್ ಅವರು ಪ್ರೇರಕವಾಗಿ ನಿಂತಿದ್ದಾರೆ ಎಂದು ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಹೇಳಿದರು. ಹೇರೂರು ಗ್ರಾಮದ ಉಳ್ಳೂರು-11 ಸರ್ಕಾರಿ ಶಾಲೆಯ ಶ್ರೇಯೋಭಿವೃದ್ಧಿಗಾಗಿ ರೂಪಿಸಿರುವ ಸಮೃದ್ಧ ಬೈಂದೂರು ಪರಿಕಲ್ಪನೆಯ 300 ಟ್ರೀಸ್ ಯೋಜನೆಯಡಿ ಬೆಂಗಳೂರಿನ ಸ್ವಯಂಸ್ಫೂರ್ತಿ ಫೌಂಡೇಶನ್ ವತಿಯಿಂದ ಸ್ಥಾಪಿಸಿರುವ ಸ್ವಯಂಸ್ಫೂರ್ತಿ ಕೌಶಲ್ಯ ಕೇಂದ್ರ ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರಿ ಶಾಲೆಯಲ್ಲಿ ಓದಿದ ಅನೇಕರು ಇಂದು ದೊಡ್ಡ…

Read More

ಆಜ್ರಿ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೂಡಿಗೆ- ಕೊಡ್ಲಾಡಿಯಲ್ಲಿ ಸ್ವಯಂಸ್ಪೂರ್ತಿ ಫೌಂಡೇಶನ್ ಬೆಂಗಳೂರು, ಇವರು ಸಮೃದ್ಧ ಬೈಂದೂರು 300 ಟ್ರೀಸ್ ಯೋಜನೆಯಡಿ ನಿರ್ಮಿಸಿರುವ ಸ್ವಯಂಸ್ಪೂರ್ತಿ ಕೌಶಲ್ಯ ಕೇಂದ್ರವನ್ನು ಸ್ವಯಂಸ್ಪೂರ್ತಿ ಫೌಂಡೇಶನ್ ಸ್ಥಾಪಕರಾದ ಜಡ್ಕಲ್ ನಾಗರಾಜ ಶೆಟ್ಟಿಯವರು ಉದ್ಘಾಟಿಸಿದರು. ಆಜ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಲ್ಲಿಕಾ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯರಾದ ಪ್ರವೀಣ್ ಶೆಟ್ಟಿ ಕೊಡ್ಲಾಡಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಕೃಷ್ಣಮೂರ್ತಿ ಅಡಿಗ ಹಾಗೂ ಶಾಲಾ ಮುಖ್ಯೋಪಾಧ್ಯಾಯರು ಸಂತೋಷ್ ಕುಮಾರ್, ಶಾಸಕರ ಪ್ರತಿನಿಧಿಯಾಗಿ ಸಮೃದ್ಧ ಬೈಂದೂರು ತಂಡದ ಸಂಯೋಜಕ ಶೋಧನ್ ಮಲ್ಪೆ ಅವರು ಉಪಸ್ಥಿತರಿದ್ದರು. ಕೊಡ್ಲಾಡಿ ಅಂಗನವಾಡಿ ಕೇಂದ್ರಕ್ಕೆ ಕ್ರೀಡಾ ಸಾಮಾಗ್ರಿಗಳನ್ನು ಸ್ವಯಂಸ್ಪೂರ್ತಿ ಫೌಂಡೇಶನ್ ವತಿಯಿಂದ ವಿತರಿಸಲಾಯಿತು. ಸ್ವಯಂಸ್ಫೂರ್ತಿ ಫೌಂಡೇಶನ್ ಸಂಸ್ಥಾಪಕರಾದ ನಾಗರಾಜ ಶೆಟ್ಟಿ ಜಡ್ಕಲ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಗ್ರಾಮೀಣ ಪ್ರದೇಶವಾದ ಕೊಡ್ಲಾಡಿ ಶಾಲೆಯಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಸ್ಮಾರ್ಟ್ ಕ್ಲಾಸ್ ಶಿಕ್ಷಣ ಒದಗಿಸಲು ಕಂಪ್ಯೂಟರ್ ಮತ್ತು ಪೀಠೋಪಕರಣಗಳು, ಗ್ರಂಥಾಲಯದ ವ್ಯವಸ್ಥೆ, ಕ್ರೀಡಾ ಸಾಮಾಗ್ರಿಗಳನ್ನು ನೀಡಲಾಗಿದೆ.…

Read More

ದೇಶದ ವಿವಿಧ ಔಷಧ ತಯಾರಕ ಕಂಪೆನಿಗಳಿಂದ ಉತ್ಪಾದಿಸಲ್ಪಡುತ್ತಿರುವ ಸುಮಾರು 52 ಔಷಧಗಳ ಗುಣಮಟ್ಟ ಕಳಪೆಯಾಗಿದೆ ಎಂದು ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆ (ಸಿಡಿಎಸ್‌ಸಿಒ) ವರದಿ ನೀಡಿದೆ. ವಿವಿಧ ರಾಜ್ಯಗಳಲ್ಲಿ ಕಾರ್ಯಾಚರಿಸುತ್ತಿರುವ ಈ ಕಂಪೆನಿಗಳ ಔಷಧ ತಯಾರಿಕ ಘಟಕಗಳಲ್ಲಿ ಉತ್ಪಾದಿಸಲಾಗುತ್ತಿರುವ ಈ ಔಷಧಗಳು ನಿಗದಿತ ಗುಣಮಟ್ಟ ಹೊಂದಿಲ್ಲದಿರುವುದು ಸಂಸ್ಥೆ ನಡೆಸಿದ ಈ ಔಷಧಗಳ ಮಾದರಿಯ ಪರೀಕ್ಷೆ ವೇಳೆ ದೃಢಪಟ್ಟಿದೆ. ದೇಶದಲ್ಲಿ ಇಂತಹ ಪ್ರಕರಣಗಳು ವರದಿಯಾಗುತ್ತಿರುವುದು ಇದೇ ಮೊದಲೇನಲ್ಲ. ಪದೇ ಪದೆ ವಿವಿಧ ಔಷಧಗಳ ಗುಣಮಟ್ಟ, ಅವುಗಳಲ್ಲಿ ಬಳಸಲಾಗುವ ರಾಸಾಯನಿಕಗಳ ಬಗೆಗೆ ಔಷಧ ನಿಯಂತ್ರಣ ಸಂಸ್ಥೆ ಆದಿಯಾಗಿ ವಿವಿಧ ಔಷಧ ತಜ್ಞರು ಅನುಮಾನ ವ್ಯಕ್ತಪಡಿಸುತ್ತಲೇ ಬಂದಿದ್ದಾರೆ. ಇದರ ಹೊರತಾಗಿಯೂ ಇಂತಹ ಕಳಪೆ ಗುಣಮಟ್ಟದ, ಅಸುರಕ್ಷಿತ ಔಷಧಗಳನ್ನು ಕಂಪೆನಿಗಳು ಉತ್ಪಾದಿಸುತ್ತಲೇ ಬಂದಿವೆ. ಅವು ಮಾರುಕಟ್ಟೆಗೆ ಬಿಡುಗಡೆಯಾಗಿ ಜನರ ಕೈಸೇರುತ್ತಲೇ ಇವೆ. ಔಷಧಗಳು ಮಾರುಕಟ್ಟೆಗೆ ಬಿಡುಗಡೆಯಾಗುವ ಮುನ್ನ ಹಲವಾರು ಮಾನದಂಡಗಳನ್ನು ಪೂರೈಸಬೇಕಾಗಿರುತ್ತದೆ. ಇದರ ಹೊರತಾಗಿಯೂ ಇಂತಹ ಕಳಪೆ ಗುಣಮಟ್ಟದ ಔಷಧಗಳು ಸರಾಗವಾಗಿ ಮಾರುಕಟ್ಟೆಯನ್ನು ಪ್ರವೇಶಿಸುತ್ತವೆ ಎಂದಾದಲ್ಲಿ…

Read More