Author: admin

2022ನೇ ಸಾಲಿನ ಆಲ್ ಇಂಡಿಯಾ ಮೆಡಿಕಲ್ ಸೂಪರ್ ಸ್ಪೆಷಾಲಿಟಿ ನೀಟ್ (MCh) ಪ್ರವೇಶ ಪರೀಕ್ಷೆ ಸರ್ಜರಿ ವಿಭಾಗದಲ್ಲಿ ಕುಂದಾಪುರದ ಅತೀಶ್ ಬಿ. ಶೆಟ್ಟಿ ದೇಶದಲ್ಲೇ ಪ್ರಥಮ ರ‍್ಯಾಂಕ್ ಪಡೆದುಕೊಂಡಿದ್ದಾರೆ. ಕುಂದಾಪುರ ಚಿನ್ಮಯಿ ಆಸ್ಪತ್ರೆಯ ಸರ್ಜನ್ ಡಾ. ಬಾಲಕೃಷ್ಣ ಶೆಟ್ಟಿ ಹಾಗೂ ಸುನಿತಾ ಶೆಟ್ಟಿ ಕಂದಾವರ ಅವರ ಪುತ್ರರಾದ ಅತೀಶ್ ಬಿ. ಶೆಟ್ಟಿ ಅವರು ಬ್ರಹ್ಮಾವರ ಲಿಟಲ್ ರಾಕ್ ಸ್ಕೂಲಿನಲ್ಲಿ ಪಿಯುಸಿ ತನಕದ ವಿದ್ಯಾಭ್ಯಾಸ ಪೂರೈಸಿ, ಸಿಇಟಿಯಲ್ಲಿ 13ನೇ ರ‍್ಯಾಂಕ್ ಪಡೆದುಕೊಂಡಿದ್ದರು. ಬಳಿಕ ಕೆಎಂಸಿ ಮಣಿಪಾಲದಲ್ಲಿ ಎಂಬಿಬಿಎಸ್, ಬೆಂಗಳೂರಿನ ಬಿಎಂಸಿ ಮೆಡಿಕಲ್ ಕಾಲೇಜಿನಲ್ಲಿ ಎಂ.ಎಸ್ ಪದವಿಯನ್ನು ಮುಗಿಸಿ ಆಗಸ್ಟ್ ತಿಂಗಳಲ್ಲಿ ‘ಆಲ್ ಇಂಡಿಯಾ ಮೆಡಿಕಲ್ ಸೂಪರ್ ಸ್ಪೆಷಾಲಿಟಿ ನೀಟ್’ ಪರೀಕ್ಷೆ ಬರೆದಿದ್ದರು.

Read More

ತುಳುನಾಡ ಫೌಂಡೇಶನ್ ಪುಣೆ ವತಿಯಿಂದ ಭಾರತೀಯ ಸೇನಾ ದಿನಾಚರಣೆಯನ್ನು ಖಡ್ಕಿಯಲ್ಲಿರುವ ಭಾರತೀಯ ಸೇನಾ ಪಾರ್ಶ್ವವಾಯು ಪುನರ್ವಸತಿ ಕೇಂದ್ರದಲ್ಲಿ ನಿವೃತ್ತ ಸೇನಾ ಯೋಧರೊಂದಿಗೆ ಆಚರಿಸಲಾಯಿತು. ಈ ಸಂದರ್ಭ ದೇಶಭಕ್ತಿ ಗೀತೆಯ ಹಾಡುಗಳೊಂದಿಗೆ ವೈವಿಧ್ಯಮಯ ಸಂಗೀತ ರಸಮಂಜರಿ ಕಾರ್ಯಕ್ರಮಗಳು, ನೃತ್ಯ ಪ್ರದರ್ಶನ ನಡೆಯಿತು. ನಿವೃತ್ತ ಸೇನಾ ಯೋಧರೊಂದಿಗೆ ಭೋಜನವನ್ನು ಮಾಡಲಾಯಿತು. ಈ ಸಂದರ್ಭ ತುಳುನಾಡ ಪೌಂಡೇಶನ್ ಪುಣೆ ಇದರ ಗೌರವಾಧ್ಯಕ್ಷ ತಾರಾನಾಥ ರೈ ಮೇಗಿನಗುತ್ತು ಮಾತನಾಡಿ, ನಮ್ಮ ಸಂಸ್ಥೆಯ ವತಿಯಿಂದ ಇದು ಎರಡನೇ ಸಾಮಾಜಿಕ ಕಾರ್ಯಕ್ರಮವಾಗಿದೆ. ಸಂಸ್ಥೆಯ ಸ್ಥಾಪನೆಯ ದಿನ ಪುಣೆಯಲ್ಲಿರುವ ಕನ್ನಡ ಮಾಧ್ಯಮ ಶಾಲೆಯ ಮಕ್ಕಳಿಗೆ ಬ್ಯಾಗ್ ವಿತರಣೆ ಮಾಡಲಾಯಿತು. ಇಂದು ಭಾರತೀಯ ಸೇನಾ ದಿನಾಚರಣೆಯನ್ನು ಭಾರತ ಸೇನಾ ಪಾರ್ಶ್ವಾಯು ಪುನರ್ವಸತಿ ಕೇಂದ್ರದಲ್ಲಿ ನಿವೃತ್ತ ಸೇನಾ ಯೋಧರೊಂದಿಗೆ ಬೆರೆತು ಆಚರಿಸುತ್ತಿರುವುದು ಬಹಳಷ್ಟು ಸಂತೋಷ ತಂದಿದೆ. ಇಲ್ಲಿ ಅವರೊಂದಿಗೆ ಕಳೆದ ಕ್ಷಣಗಳು ಬಹಳಷ್ಟು ಉತ್ತಮ ಅನುಭವಗಳನ್ನು ನೀಡಿದೆ. ಸಂಸ್ಥೆಯ ವತಿಯಿಂದ ಸಾಧ್ಯವಾದಷ್ಟು ಪ್ರಾಮಾಣಿಕವಾಗಿ ಸಾಮಾಜಿಕ ಕಾರ್ಯಗಳನ್ನು ಮಾಡುವುದೇ ನಮ್ಮ ಮುಖ್ಯ ಉದ್ದೇಶವಾಗಿದೆ. ಸಂಸ್ಥೆಯ ಅಧ್ಯಕ್ಷರಾದ…

Read More

ವಿದ್ಯಾಗಿರಿ: ಆರು ನೂತನ ಕೂಟ ದಾಖಲೆಗಳು, 440ಕ್ಕೂ ಅಧಿಕ ಅಂಕಗಳ ಅಂತರದ ಜಯದೊಂದಿಗೆ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಅಂತರ ಕಾಲೇಜು ಅಥ್ಲೆಟಿಕ್ಸ್ ಚಾಂಪಿಯನ್‍ಷಿಪ್ ಸಮಗ್ರ ಪ್ರಶಸ್ತಿಯನ್ನು ಆಳ್ವಾಸ್ ಕಾಲೇಜು ಮುಡಿಗೇರಿಸಿಕೊಂಡಿದ್ದು, ಸತತ 21ನೇ ಬಾರಿಗೆ ಚಾಂಪಿಯನ್‍ಶಿಪ್ ಪಡೆದ ಕೀರ್ತಿಗೆ ಪಾತ್ರವಾಯಿತು. ಉಡುಪಿಯ ಅಜ್ಜರಕಾಡಿನ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಬುಧವಾರ ಮುಕ್ತಾಯಗೊಂಡ ಚಾಂಪಿಯನ್‍ಷಿಪ್‍ನ ಪುರುಷರ ವಿಭಾಗದಲ್ಲಿ 259 ಹಾಗೂ ಮಹಿಳೆಯರ ವಿಭಾಗದಲ್ಲಿ 247 ಅಂಕ ಪಡೆದ ಆಳ್ವಾಸ್ ಒಟ್ಟು 506 ಅಂಕಗಳೊಂದಿಗೆ ಸಮಗ್ರ ಪ್ರಶಸ್ತಿ ಪಡೆಯಿತು. ಪುರುಷರ ವಿಭಾಗದಲ್ಲಿ 50 ಅಂಕ ಪಡೆದ ಉಜಿರೆಯ ಎಸ್‍ಡಿಎಂ ಕಾಲೇಜು ಹಾಗೂ ಮಹಿಳೆಯರವಿಭಾಗದಲ್ಲಿ 56 ಅಂಕ ಪಡೆದ ಅಜ್ಜರಕಾಡು ಡಾ.ಜಿ.ಶಂಕರ್ ಸರ್ಕಾರಿ ಪ್ರಥಮದರ್ಜೆಕಾಲೇಜು ರನ್ನರ್‍ಅಫ್ ಪ್ರಶಸ್ತಿಗಳನ್ನು ಪಡೆದವು. ಆಳ್ವಾಸ್ ಕಾಲೇಜು ಪುರುಷರ ವಿಭಾಗದಲ್ಲಿ 22 ಚಿನ್ನ 15 ಬೆಳ್ಳಿ ಹಾಗೂ 3 ಕಂಚಿನ ಪದಕ ಸೇರಿ ಒಟ್ಟು 40 ಹಾಗೂ ಮಹಿಳಾ ವಿಭಾಗದಲ್ಲಿ 22 ಚಿನ್ನ, 13 ಬೆಳ್ಳಿ ಹಾಗೂ 2 ಕಂಚಿನ ಪದಕದೊಂದಿಗೆ 37…

Read More

ಲೇಖಕಿ, ಸಹ್ಯಾದ್ರಿ ಕಾಲೇಜಿನ ಉಪನ್ಯಾಸಕಿ ಅಕ್ಷಯ ಆರ್. ಶೆಟ್ಟಿಯವರ ಎರಡು ಕೃತಿಗಳ ಲೋಕಾರ್ಪಣೆ ಗುರುವಾರ ನಗರದ ಪತ್ರಿಕಾಭವನದಲ್ಲಿ ಜರುಗಿತು. ಕೃತಿ ಬಿಡುಗಡೆ ನೆರವೇರಿಸಿ ಮಾತಾಡಿದ ಹಂಪಿ ವಿಶ್ವವಿದ್ಯಾನಿಲಯದ ವಿಶ್ರಾಂತ ಉಪಕುಲಪತಿ ಡಾ. ಚಿನ್ನಪ್ಪ ಗೌಡ ಅವರು, “ತುಳು ಭಾಷೆಯಲ್ಲಿ ತುಳು ಸಂಸ್ಕೃತಿಯನ್ನು ಶೋಧನೆ ಮಾಡುವಂತಹ ಕಾರ್ಯ ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವುದು ಶ್ಲಾಘನೀಯ ವಿಚಾರ. ತುಳು ನಾಟಕಗಳಿಗೆ ಹೆಚ್ಚಿನ ಮನ್ನಣೆ ಸಿಗುತ್ತಿದೆ. ಅಕ್ಷಯ ಶೆಟ್ಟಿಯವರು ಹಿಂದೆ ದೆಂಗ ಅನ್ನುವ ಕಾದಂಬರಿ ಬರೆದಿದ್ದಾರೆ. ಈಗ ಪೆರ್ಗ ಅನ್ನುವ ತುಳು ನಾಟಕವನ್ನು ತುಳು ಸಾಹಿತ್ಯ ಲೋಕಕ್ಕೆ ಅರ್ಪಿಸಿದ್ದಾರೆ. ಹಿಡಿ ಅಕ್ಕಿಯ ಧ್ಯಾನ ಕವನ ಸಂಕಲನ ಕೂಡಾ ಇದೇ ಸಂದರ್ಭದಲ್ಲಿ ಲೋಕಾರ್ಪಣೆಗೊಂಡಿದೆ. ಪೆರ್ಗ ಅಂದ್ರೆ ತುಳು ಭಾಷೆಯಲ್ಲಿ ಗೆಲುವು, ಆಕಸ್ಮಿಕವಾಗಿ ಸಿಗುವ ಸಂಪತ್ತು ಅನ್ನುವ ಅರ್ಥವಿದೆ. ಒಂದು ನಿಧಿಯ ಹುಡುಕಾಟದ ಹಿಂದಿನ ಶೋಧ ಮತ್ತು ಅದರ ಸುತ್ತಲಿನ ಸನ್ನಿವೇಶಗಳನ್ನು ಬಹಳ ಚೆನ್ನಾಗಿ ಲೇಖಕಿ ನಿರೂಪಿಸಿದ್ದಾರೆ. ಲೇಖಕಿ ಇನ್ನಷ್ಟು ಕೃತಿಗಳನ್ನು ಸಾಹಿತ್ಯ ಲೋಕಕ್ಕೆ ಕೊಡಲಿ” ಎಂದು ಶುಭ ಹಾರೈಸಿದರು.…

Read More

ಕಳೆದ ಹಲವು ವರ್ಷಗಳಿಂದ ಬಂಟ್ಸ್ ಫೋರಮ್ ಸಂಸ್ಥೆಯ ಮಹಿಳಾ ವಿಭಾಗದ ವತಿಯಿಂದ ತಿಂಗಳ ಪ್ರತೀ ಸಂಕ್ರಮಣದಂದು ಕಚೇರಿ ಅಥವಾ ಸದಸ್ಯರ ಮನೆಗಳಲ್ಲಿ ಭಜನಾ ಕಾರ್ಯಕ್ರಮವನ್ನು ನಡೆಸುತ್ತಾ ಬಂದಿದೆ. ಸಂಸ್ಥೆಯ ಸದಸ್ಯರು ಪ್ರತಿಯೊಂದು ಕಾರ್ಯಕ್ರಮಕ್ಕೂ ಒಗ್ಗಟ್ಟಿನ ಪ್ರೋತ್ಸಾಹ ನೀಡುತ್ತಿದ್ದಾರೆ. ಸದಸ್ಯರ ಒಮ್ಮತದಿಂದ ಪ್ರಸ್ತುತ ವರ್ಷದಲ್ಲಿ ನನ್ನನ್ನು ಅಧ್ಯಕ್ಷ ಸ್ಥಾನಕ್ಕೆ ಆರಿಸಿದ್ದಾರೆ. ಸಂಸ್ಥೆಗೆ ಚ್ಯುತಿ ಬಾರದಂತೆ ಕಾರ್ಯವನ್ನು ನಿಭಾಯಿಸಿ ಮುನ್ನಡೆಸುವ ನಿರ್ಧಾರದಿಂದ ಕೊಟ್ಟ ಸ್ಥಾನವನ್ನು ಸಂತೋಷದಿಂದ ಸ್ವೀಕರಿಸಿದ್ದೇನೆ. ಇಂದಿನ ತನ್ನ ಅಧ್ಯಕ್ಷತೆಯಲ್ಲಿ ನಡೆದ ಪ್ರಥಮ ಕಾರ್ಯಕ್ರಮವು ಸರ್ವ ಸದಸ್ಯರ ಸಹಕಾರದಿಂದ ವಿಜೃಂಭಣೆಯಿಂದ ಜರಗಿದೆ. ಕಾರ್ಯಕ್ರಮದ ಯಶಸ್ಸಿಗೆ ಹಾಗೂ ಸಂಸ್ಥೆಯ ಪ್ರಗತಿಗೆ ಹಿರಿಯರ ಮಾರ್ಗದರ್ಶನ ಅಗತ್ಯ ಎಂದು ಬಂಟ್ಸ್ ಫೋರಮ್ ನ ನೂತನ ಅಧ್ಯಕ್ಷ ಉದಯ ಎಮ್ ಶೆಟ್ಟಿ ಮಲಾರಬೀಡು ನುಡಿದರು. ಅವರು ಮೀರಾ – ಭಾಯಂದರ್ ರಸ್ತೆಯಲ್ಲಿರುವ ಗೋಲ್ಡನ್ ನೆಸ್ಟ್ ಸರ್ಕಲ್ ಸಮೀಪದ ಅಶ್ವಿನಿ ( ಕ್ರಾಸ್ ಹೋಟೆಲ್ಸ್ ) ಸಭಾಗೃಹದಲ್ಲಿ ಬಂಟ್ಸ್ ಫೋರಮ್ ಮೀರಾ- ಭಾಯಂದರ್ ಆಯೋಜಿಸಿದ್ದ ವಾರ್ಷಿಕ ಭಜನಾ ಮಂಗಳೋತ್ಸವ ಕಾರ್ಯಕ್ರಮದ…

Read More

ವಿಶ್ವ ಖ್ಯಾತಿಯ ಬಂಟರ ಸಂಘ ಮುಂಬಯಿ ಇದರ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆಯಾಗಿ ಆಯ್ಕೆಯಾದ ಹೆಸರಾಂತ ಸಂಘಟಕಿ, ಬಹುಮುಖ ಪ್ರತಿಭೆಯ ಸಾಧಕಿ ಶ್ರೀಮತಿ ಚಿತ್ರಾ ರವಿರಾಜ್ ಶೆಟ್ಟಿ ಅವರು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸ ಪ್ರಸಿದ್ಧ ಪಾಂಗಾಳ ಆದಿ ಆಲಡೆಗೆ ಸಂಬಂಧ ಪಟ್ಟ ಪ್ರತಿಷ್ಠಿತ ಪಾಂಗಾಳ ಮೇಲ್ಮನೆ ಮನೆತನದ ಮುದ್ದಿನ ಮಗಳಾಗಿ ಬಾಲ್ಯದ ದಿನಗಳಿಂದಲೇ ವಿಚಕ್ಷಣ ಪ್ರತಿಭೆಯ ಬಾಲಕಿಯಾಗಿ ಗುರುತಿಸಿಕೊಂಡವರು. ಪಾಂಗಾಳ ಮೇಲ್ಮನೆ ರಾಧಾ ಡಿ ಶೆಟ್ಟಿ ಮತ್ತು ನಂದಳಿಕೆ ಐಸ್ರಬೆಟ್ಟು ದುಗ್ಗಪ್ಪ ಶೆಟ್ಟಿ ದಂಪತಿಗೆ ಮಗಳಾಗಿ ಹುಟ್ಟಿದ ಚಿತ್ರಾ ಅವರು ಪಾಂಗಾಳದಲ್ಲಿ ಪ್ರಾಥಮಿಕ, ಇನ್ನಂಜೆಯಲ್ಲಿ ಹೈಸ್ಕೂಲು, ಕಟಪಾಡಿಯಲ್ಲಿ ಪದವಿಪೂರ್ವ ಹಾಗೂ ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಪದವಿ ಶಿಕ್ಷಣ ಪೂರೈಸಿದರು. ಇವರು ಪ್ರತೀ ತರಗತಿಗಳಲ್ಲಿ ಪ್ರಥಮ ಸ್ಥಾನ ಗಳಿಸುವುದರ ಮೂಲಕ ಸರಕಾರಿ ವಿದ್ಯಾರ್ಥಿವೇತನಕ್ಕೆ ಆಯ್ಕೆಯಾಗಿದ್ದರು. ನೃತ್ಯ, ನಟನೆ, ಭಜನೆ, ಯಕ್ಷಗಾನ, ನಾಟಕ ಇವರ ಆಸಕ್ತಿಯ ವಿಷಯಗಳಾಗಿದ್ದವು. ಶಾಲಾ ಕಾಲೇಜು ದಿನಗಳ ವಾರ್ಷಿಕೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಉತ್ಸಾಹದಿಂದ ಭಾಗವಹಿಸುತ್ತಿದ್ದರು. ಸುಲಕ್ಷಣೆ ಹಾಗೂ ಸ್ಫುರದ್ರೂಪಿಯಾಗಿದ್ದ…

Read More

ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ ಉಪಕ್ರಮದ ಅನ್ವಯ ನಗರದ ರೆಡ್ ಕ್ರಾಸ್ ಸಂಸ್ಥೆಯ ಶತಮಾನೋತ್ಸವ ಭವನ ನಿರ್ಮಾಣ ಕಾಮಗಾರಿಗೆ 10 ಲಕ್ಷ ರೂ. ಗಳ ನೆರವು ನೀಡಲಾಗಿದೆ. ನಗರದ ಜಿಲ್ಲಾ ಪಂಚಾಯತ್‍ನ ಮಿನಿ ಸಭಾಂಗಣದಲ್ಲಿ ಬ್ಯಾಂಕ್ ಆಫ್ ಇಂಡಿಯಾದ ಎಚಿಡಿ ಹಾಗೂ ಸಿಇಒ ಅಟನ್ ಕುಮಾರ್ ದಾಸ್ ಅವರು ಭಾರತೀಯ ರೆಡ್ ಕ್ರಾಸ್ ಅವರು ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಎ. ಶಾಂತಾರಾಮ ಶೆಟ್ಟಿ ಹಾಗೂ ಉಪಾಧ್ಯಕ್ಷ ಜಿಲ್ಲಾ ಪಂಚಾಯತ್ ಸಿಇಒ ಡಾ| ಕುಮಾರ್ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭ ಮಾತನಾಡಿದ ಡಾ| ಕುಮಾರ್ ಅವರು, ಬ್ಯಾಂಕ್ ಆಫ್ ಇಂಡಿಯಾದಿಂದ ಭಾರತೀಯ ರೆಡ್ ಕ್ರಾಸ್ ಸೊಸೈಟಿಗೆ ಅತ್ಯಂತ ಸೂಕ್ತ ಸಮಯದಲ್ಲಿ ಆರ್ಥಿಕ ಸಹಕಾರ ನೀಡುತ್ತಿರುವುದು ಸ್ವಾಗತಾರ್ಹ, ಇದರಿಂದ ಶತಮಾನೋತ್ಸವ ಭವನ ನಿರ್ಮಾಣಕ್ಕೆ ಅನುಕೂಲವಾಗಲಿದೆ ಎಂದು ಸಂತಸ ವ್ಯಕ್ತಪಡಿಸಿ, ಇದು ಇತರ ಬ್ಯಾಂಕುಗಳಿಗೂ ಮಾದರಿಯಾಗಲಿದೆ ಎಂದರು. ಬ್ಯಾಂಕ್ ಆಫ್ ಇಂಡಿಯಾದ ಜನರಲ್…

Read More

ಸಾಮಾಜಿಕ ಕಳಕಳಿ ಹೊಂದಿರುವ ಐಕಳ ಹರೀಶ್ ಶೆಟ್ಟಿಯವರ ಕನಸಿನಂತೆ ಮೂಲ್ಕಿಯಲ್ಲಿ ತೆರೆದ ಸಭಾಂಗಣ ನಿರ್ಮಾಣವಾಗುತ್ತಿದ್ದು, ಈ ಸಭಾಂಗಣವಕ್ಕೆ ಸಂಪೂರ್ಣ ಸಹಕಾರ ನೀಡುತ್ತೇನೆ ಎಂದು ದಾನಿಗಳಾದ ತೋನ್ಸೆ ಆನಂದ ಶೆಟ್ಟಿ ಹೇಳಿದರು. ಅವರು ಮೂಲ್ಕಿಯ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ರಾಷ್ಟ್ರೀಯ ಹೆದ್ದಾರಿ ಬಳಿ ಇರುವ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ತೋನ್ಸೆ ಶಶಿರೇಖಾ ಆನಂದ ಶೆಟ್ಟಿ ಓಪನ್ ಏರ್ ಗಾರ್ಡನ್ ಹೆಸರಿನಲ್ಲಿ ಹೊರಾಂಗಣ ಸಭಾ ವೇದಿಕೆ ನಿರ್ಮಾಣದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ ಜಾಗತಿಕ ಬಂಟರ ಸಂಘದ ಅಧ್ಯಕ್ಷರಾಗಿ ಐಕಳ ಹರೀಶ್ ಶೆಟ್ಟಿಯವರು ಅಧಿಕಾರ ಸ್ವೀಕಾರ ಮಾಡಿದ ನಂತರ ಸಂಘದಲ್ಲಿ ಅನೇಕ ಸಮಾಜಮುಖಿ ಕಾರ್ಯಗಳ ಮೂಲಕ ಸಂಘದ ಚಿತ್ರಣವೇ ಬದಲಾಗಿದೆ. ಇದೀಗ ಮೆಹೆಂದಿ, ಮದುವೆ ಮತ್ತಿತರ ಎಲ್ಲಾ ಕಾರ್ಯಕ್ರಮಗಳಿಗೆ ಉಪಯೋಗವಾಗುವಂತಹ ಉತ್ತಮವಾದ ತೆರೆದ ಸಭಾಂಗಣ ನಿರ್ಮಾಣವಾಗುತ್ತಿದ್ದು ಸಂಘಕ್ಕೆ ಹೊಸ ರೂಪ ಸಿಗಲಿದೆ ಎಂದರು. ಜಾಗತಿಕ ಬಂಟರ ಸಂಘದ ಮಹಾದಾನಿ ಕನ್ಯಾನ ಸದಾಶಿವ ಶೆಟ್ಟಿ‌ ಮಾತನಾಡಿ, ಐಕಳ ಹರೀಶ್ ಶೆಟ್ಟಿಯವರ ನಾಯಕತ್ವದಲ್ಲಿ ಸಂಘ ಹೆಮ್ಮರವಾಗಿ…

Read More

ಮಾತೃ ಸಂಘ ತಾಲೂಕು ಸಮಿತಿ ಹಾಗೂ ತಾಲೂಕು ಬಂಟರ ಸಂಘ ಪುತ್ತೂರು ಇವರ ಮಾರ್ಗದರ್ಶನದೊಂದಿಗೆ ನೆಲ್ಯಾಡಿ ವಲಯ ಬಂಟರ ಸಂಘ ಇದರ ಆಶ್ರಯದಲ್ಲಿ ಕಡಬ ತಾಲೂಕಿನ ಗೋಳಿತೋಟ್ಟು ಗ್ರಾಮದ ಶ್ರೀಮತಿ ಲೀಲಾವತಿ ವಿಠಲ ಶೆಟ್ಟಿ ಇವರ ಪುತ್ರಿ ಕು ಶ್ರುತಿ ಇವರ ವಿವಾಹಕ್ಕೆ ತಾಲೂಕು ಬಂಟರ ಸಂಘದ ಅಧ್ಯಕ್ಷರಾದ ಶ್ರೀ ಶಶಿ ಕುಮಾರ್ ರೈ ಬಾಲ್ಯೊಟ್ಟು ಇವರ ಮುಖಾಂತರ ಆರ್ಥಿಕ ಸಹಾಯ ನೀಡಲಾಯಿತು. ಈ ಸಂಧರ್ಭದಲ್ಲಿ ನೆಲ್ಯಾಡಿ ವಲಯ ಬಂಟರ ಸಂಘದ ಅಧ್ಯಕ್ಷರಾದ ಶ್ರೀ ಪ್ರತಾಪ್ ಚಂದ್ರ ರೈ, ಶ್ರೀ ಸತೀಶ ರೈ ಕೊಣಾಲು ಗುತ್ತು, ಶ್ರೀ ನಿತ್ಯಾನಂದ ಶೆಟ್ಟಿ ಮನವಳಿಕೆ, ತಾಲೂಕು ಮಹಿಳಾ ಬಂಟರ ಸಂಘದ ಕೋಶಾಧಿಕಾರಿ ಶ್ರೀಮತಿ ವಾಣಿ ಎಸ್ ಶೆಟ್ಟಿ, ರತ್ನಾಕರ ಶೆಟ್ಟಿ ಕೊಲ್ಯೊಟ್ಟು ಅಶ್ವಮೇಧ, ಸುಂದರ ಶೆಟ್ಟಿ ಉಪಸ್ಥಿತರಿದ್ದರು.

Read More

ಬಂಟರ ಸಂಘ ಪಿಂಪ್ರಿ – ಚಿಂಚ್ವಾಡ್ ವತಿಯಿಂದ ಸಮಾಜ ಬಾಂಧವರ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು ಹಾಗೂ ಕಳೆದ ಶೈಕ್ಷಣಿಕ ಸಾಲಿನಲ್ಲಿ ಶೇಕಡಾ ೭೫ ಮತ್ತು ಹೆಚ್ಚು ಅಂಕಗಳನ್ನು ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳ ಸತ್ಕಾರ ಸಮಾರಂಭವು ಜೂನ್ ೧೮ ರಂದು ಸಂಘದ ಕಿರು ಸಭಾಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷರಾದ ರಾಕೇಶ್ ಶೆಟ್ಟಿ ಬೆಳ್ಳಾರೆ ಇವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬಂಟ್ಸ್ ಅಸೋಸಿಯೇಷನ್ ಪುಣೆ ಇದರ ಪ್ರಧಾನ ಕಾರ್ಯದರ್ಶಿ ಅರವಿಂದ ರೈ ಉಪಸ್ಥಿತರಿದ್ದರು. ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಸಂಘದ ಅಧ್ಯಕ್ಷರಾದ ರಾಕೇಶ್ ಶೆಟ್ಟಿ ಬೆಳ್ಳಾರೆ ಮಾತನಾಡಿ, ನಮ್ಮ ಸಂಘದ ಮೂಲಕ ಪ್ರತೀ ವರ್ಷ ಆರ್ಥಿಕವಾಗಿ ಕಷ್ಟದಲ್ಲಿರುವ ವಿದ್ಯಾರ್ಥಿಗಳಿಗೆ ಸಾಧ್ಯವಾದಷ್ಟು ಆರ್ಥಿಕ ನೆರವನ್ನು ನೀಡುತ್ತಾ ಬಂದಿರುತ್ತೇವೆ. ಯಾಕೆಂದರೆ ಸಮಾಜದ ಯಾವುದೇ ಮಕ್ಕಳು ವಿದ್ಯೆಯಿಂದ ವಂಚಿತರಾಗಬಾರದೆಂಬ ಉದ್ದೇಶ ಸಂಘದ್ದಾಗಿದೆ. ಮಕ್ಕಳು ವಿದ್ಯಾವಂತರಾದರೆ ಅವರ ಕುಟುಂಬ ಅಭಿವೃದ್ಧಿಯಾಗುವುದರಲ್ಲಿ ಸಂಶಯವಿಲ್ಲ. ಉತ್ತಮ ಸಮಾಜದ ನಿರ್ಮಾಣಕ್ಕೆ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದಾಗಿದೆ. ಸಂಘದ ಈ ಕಾರ್ಯಕ್ಕೆ ಸಂಘದ…

Read More