Author: admin
ಶ್ರೀ ಕ್ಷೇತ್ರ ಕಟೀಲಿನ ಗೋಪಾಲಕೃಷ್ಣ ಅಸ್ರಣ್ಣರ 24 ನೇ ವರ್ಷದ ಸಂಸ್ಮರಣ ಕಾರ್ಯಕ್ರಮವು ಬಂಟರ ಸಂಘ ಮುಂಬಯಿಯ ಬಂಟರ ಭವನದಲ್ಲಿ ಶ್ರೀ ಕ್ಷೇತ್ರ ಕಟೀಲಿನ ಶ್ರೀ ಲಕ್ಷ್ಮೀನಾರಾಯಣ ಅಸ್ರಣ್ಣರ ದಿವ್ಯ ಉಪಸ್ಥಿತಿಯಲ್ಲಿ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ವಹಿಸಿದ್ದರು. ಮುಂಬಯಿ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿಯವರು ಕಾರ್ಯಕ್ರಮ ಉದ್ಘಾಟಿಸಿದರು.ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಕಟೀಲಿನ ಒಳಿತಿಗಾಗಿ ಶ್ರಮಿಸಿದ ಐಕಳ ಹರೀಶ್ ಶೆಟ್ಟಿಯವರನ್ನು ಶ್ರೀ ಲಕ್ಷ್ಮೀನಾರಾಯಣ ಅಸ್ರಣ್ಣರು ಗಣ್ಯರ ಉಪಸ್ಥಿತಿಯಲ್ಲಿ ಸನ್ಮಾನಿಸಿದರು. ಅಲ್ಲದೇ ಹಲವಾರು ಕಲಾವಿದರಿಗೆ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಹಾಗೂ “ಶ್ರೀ ದೇವಿ ಮಹಾತ್ಮೆ” ಯಕ್ಷಗಾನ ಬಯಲಾಟವು ಜರಗಿತು. ಈ ಸಂದರ್ಭದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ದಾನಿಗಳಾದ ಡಾ| ಆರ್ ಕೆ ಶೆಟ್ಟಿ, ರತ್ನಾಕರ್ ಶೆಟ್ಟಿ ಮುಂಡ್ಕೂರು, ಕೋಶಾಧಿಕಾರಿ ಉಳ್ತೂರು ಮೋಹನದಾಸ್ ಶೆಟ್ಟಿ, ಪದ್ಮನಾಭ ಕಟೀಲು ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.
ಬಂಟರ ಸಂಘ ಕಟಪಾಡಿ ಮತ್ತು ಬಂಟರ ಮಹಿಳಾ ವೇದಿಕೆ ಜಂಟಿಯಾಗಿ ನಡೆಸಿದ ಆಟಿಡೊಂಜಿ ದಿನ ಕಾರ್ಯಕ್ರಮ ಆಗಸ್ಟ್ 11 ರಂದು ಆದಿತ್ಯವಾರ ಎಸ್. ವಿ. ಎಸ್ ಸಭಾಂಗಣದಲ್ಲಿ ನಡೆಯಿತು. ಕಾಪು ಕ್ಷೇತ್ರದ ಶಾಸಕರಾದ ಸುರೇಶ್ ಶೆಟ್ಟಿ ಗುರ್ಮೆಯವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಆಟಿದ ವಿಶೇಷತೆಯ ಬಗ್ಗೆ ಬೆಳಕು ಚೆಲ್ಲಿ ಶುಭ ಹಾರೈಸಿದರು. ವಿಶೇಷ ಅತಿಥಿಯಾಗಿ ಆಗಮಿಸಿದ್ದ ಅಶ್ವಿನ್ ಬಲ್ಲಾಳ್ ಕಟಪಾಡಿ ಬೀಡು ಅವರು ಸಂಘದ ಅಭಿವೃದ್ಧಿಗೆ ತನ್ನ ವಿಶೇಷ ಕೊಡುಗೆಯನ್ನು ನೀಡುತ್ತೇನೆ ಎಂದು ತಿಳಿಸಿದರು. ಅತಿಥಿಗಳಾಗಿ ಬಂಟರ ಸಂಘ ಉಡುಪಿ ತಾಲೂಕು ಸಮಿತಿಯ ಅಧ್ಯಕ್ಷರಾದ ಶಿವಪ್ರಸಾದ್ ಹೆಗ್ಡೆ, ಉಪಾಧ್ಯಕ್ಷರಾದ ದಿನೇಶ್ ಹೆಗ್ಡೆ, ನಿರ್ದೇಶಕರಾದ ಇಂದಿರಾ ಸುಬ್ಬಯ್ಯ ಹೆಗ್ಡೆ, ಮಹಿಳಾ ಬಂಟರ ಸಂಘದ ಅಧ್ಯಕ್ಷೆ ವೀಣಾ ಶೆಟ್ಟಿ, ಇಂದು ಶೆಟ್ಟಿ, ಜಯ. ಕೆ. ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಕಟಪಾಡಿ ಬಂಟರ ಸಂಘದ ಅಧ್ಯಕ್ಷರಾದ ದಯಾನಂದ ಆರ್ ಶೆಟ್ಟಿಯವರು ಎಲ್ಲರನ್ನೂ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಉಮೇಶ್ ಶೆಟ್ಟಿ ವರದಿಯನ್ನು ವಾಚಿಸಿದರು. ಮಹಿಳಾ ಕಾರ್ಯದರ್ಶಿ…
ಹತ್ತು ಹಲವು ಬಗೆಯ ಜಾತ್ರೆ, ಸಂಕ್ರಾಂತಿ, ಹಬ್ಬ ಹರಿದಿನಗಳು ನಮ್ಮ ನಾಡಿನ ನೆಲದ ಮಣ್ಣಿನಲ್ಲಿ ಘಮ ಘಮಿಸುತ್ತಿರುವುದು ಸತ್ಯ. ಹಬ್ಬಗಳ ನಾಡು ನಮ್ಮದು. ಭಾರತೀಯ ಪರಂಪರೆಯಲ್ಲಿ ಪ್ರತಿಯೊಂದು ಸಂವತ್ಸರಕ್ಕೂ, ಋತುಮಾಸಕ್ಕೂ, ಎಲ್ಲಾ ಹಬ್ಬಗಳಿಗೂ ಅದರದ್ದೇ ಆದ ಮಹತ್ವ, ಐತಿಹಾಸಿಕ ಹಿನ್ನಲೆ, ಧಾರ್ಮಿಕ ನಂಬಿಕೆ, ಸಾಮಾಜಿಕ ಕಾಳಜಿ ಹಾಗೂ ಆರೋಗ್ಯದ ವಿಚಾರಗಳು ಅಡಗಿರುತ್ತದೆ. ಅಂತಹದ್ದೇ ಒಂದು ವಿಶಿಷ್ಟತೆಗೆ ಪ್ರತೀಕವಾಗಿ ಸಿಂಹ ಸಂಕ್ರಮಣದಂದು ಉಡುಪಿ ಜಿಲ್ಲೆಯ ಪೆರ್ಡೂರಿನ ಕದಳೀ ಪ್ರಿಯ ಖ್ಯಾತಿಯ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಜರುಗುವ “ಮದುಮಕ್ಕಳ ಜಾತ್ರೆ”ಯು ಜಗತ್ಪ್ರಸಿದ್ಧ. ಅಂದು ದೇವಸ್ಥಾನದ ಆವರಣದ ಸುತ್ತೆಲ್ಲಾ ನವ ದಂಪತಿಗಳು ತುಂಬಿರುತ್ತಾರೆ. ಸಿಂಹ ಸಂಕ್ರಮಣದ ಆಚರಣೆಗಳಲ್ಲಿ ಇಲ್ಲಿ “ಮದುಮಕ್ಕಳ ಜಾತ್ರೆ” ಎಂದೇ ಖ್ಯಾತಿ ಪಡೆದುದಾಗಿದೆ. ನವ ವಧು ಆಷಾಢದಲ್ಲಿ ಅತ್ತೆಯ ಮನೆಯಿಂದ ತವರು ಮನೆಗೆ ತೆರಳಿದವಳು ಮಳೆಯ ಅಬ್ಬರ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿ ಆಷಾಢದ ವಿರಹ ತಪ್ಪಿ ಶ್ರಾವಣಕ್ಕೆ ಪುನಃ ಅತ್ತೆಯ ಮನೆಗೆ ಬರುವ ಕಾಲ. ಆಷಾಢ ಮಾಸದ ಬಳಿಕ ಬರುವ ಸಿಂಹ ಸಂಕ್ರಮಣದಂದು…
ಸಮಾಜವನ್ನು ಆರೋಗ್ಯ ಪೂರ್ಣವಾಗಿಸಲು ಆಟಿಡೊಂಜಿ ದಿನದ ಕಾರ್ಯಕ್ರಮ ಸಹಕಾರಿ. ಆ ನಿಟ್ಟಿನಲ್ಲಿ ಉಡುಪಿ ಗ್ರಾಮೀಣ ಬಂಟರ ಸಂಘವು ತುಳುನಾಡಿನ ಆಚಾರ, ವಿಚಾರ, ಸಂಪ್ರದಾಯಗಳ ಅರಿವು ಮೂಡಿಸುವಲ್ಲಿ ನಡೆಸಿದ ಆಟಿಡೊಂಜಿ ದಿನ ಅರ್ಥಪೂರ್ಣ ಎಂದು ಉಡುಪಿ ಶಾಸಕರಾದ ಯಶ್ ಪಾಲ್ ಎ. ಸುವರ್ಣ ಹೇಳಿದರು. ಅವರು ಕುಂತಳನಗರ ಆಶಾ ಪ್ರಕಾಶ್ ಶೆಟ್ಟಿ ಕನ್ವೆನ್ಷನ್ ಸಭಾಂಗಣದಲ್ಲಿ ಉಡುಪಿ ಗ್ರಾಮೀಣ ಬಂಟರ ಸಂಘದ ವತಿಯಿಂದ ನಡೆದ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ನಮ್ಮ ಪೂರ್ವಜರ ಆರೋಗ್ಯಯುತ ಆಹಾರ ಪದ್ಧತಿಯ ಗುಟ್ಟು ಆಟಿ ಕೂಟದಲ್ಲಿ ಅಡಗಿದೆ. ಯುವ ಪೀಳಿಗೆಗೂ ನಮ್ಮ ತುಳುನಾಡಿನ ಆಚಾರ, ವಿಚಾರ, ಆಟಿಡೊಂಜಿ ದಿನದ ಮಹತ್ವದ ಬಗ್ಗೆ ತಿಳಿಸುವಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ ಪರಿಣಾಮಕಾರಿ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು. ಉಡುಪಿ ಗ್ರಾಮೀಣ ಬಂಟರ ಸಂಘದ ಅಧ್ಯಕ್ಷ ಡಾ. ಎಚ್.ಬಿ. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಜಾನಪದ ಚಿಂತಕ ಡಾ. ವೈ.ಎನ್. ಶೆಟ್ಟಿ ದಿಕ್ಸೂಚಿ ಭಾಷಣಗೈದು ಸಾಂಸ್ಕೃತಿಕ…
ಗೋವಾದಲ್ಲಿ ಕನ್ನಡ ಉಳಿಯಬೇಕು. ಕನ್ನಡ ಬೆಳೆಯಬೇಕು. ಇದಕ್ಕಾಗಿ ಗೋವಾದಲ್ಲಿ ದೊಡ್ಡದಾಗಿ ಶಿಕ್ಷಣ ಕಾಂತ್ರಿಯಾಗಬೇಕಿದೆ. ಎಲ್ಲೆಲ್ಲಿ ಕನ್ನಡಿಗರಿಗೆ ಆರ್ಥಿಕ ಅವಶ್ಯಕತೆಯಿದೆ ಅಲ್ಲಿ ನಾವು ನೀವೆಲ್ಲ ಸೇರಿ ಕನ್ನಡಿಗರ ಒಳಿತಿಗಾಗಿ ಶ್ರಮಿಸಬೇಕು ಎಂದು ಗೋವಾ ಬಿಜೆಪಿ ಕರ್ನಾಟಕ ಸೆಲ್ ಕನ್ವಿನರ್ ಮುರಳಿ ಮೋಹನ್ ಶೆಟ್ಟಿ ನುಡಿದರು. ಗೋವಾ ವಾಸ್ಕೊದ ಜುವಾರಿನಗರದ ಕನ್ನಡ ಶಾಲಾ ವಿದ್ಯಾರ್ಥಿಗಳಿಗೆ ಮೋಹನ್ ಶೆಟ್ಟಿಯವರು ಉಚಿತ ಸಮವಸ್ತ್ರ, ಬ್ಯಾಗ್ ಮತ್ತು ಪುಸ್ತಕ ವಿತರಣೆ ಮಾಡಿ ಮಾತನಾಡುತ್ತಿದ್ದರು. ಸರ್ಕಾರಿ ಶಾಲೆ ಎಂದರೆ ಹೆಚ್ಚಾಗಿ ಬಡವರ ಮಕ್ಕಳು ಇರುತ್ತಾರೆ. ಇಂತಹ ಶಾಲೆಗಳಲ್ಲಿ ಇಂತಹ ಶೈಕ್ಷಣಿಕ ಕಾರ್ಯಕ್ರಮ ಮಾಡಿದಾಗ ಪ್ರೋತ್ಸಾಹ ಮಾಡುವ ಅಗತ್ಯವಿದೆ ಎಂದು ಮುರಳಿ ಮೋಹನ್ ಶೆಟ್ಟಿ ನುಡಿದರು. ಮಕ್ಕಳಿಗೆ ನಮ್ಮ ಭಾರತೀಯ ಸಂಸ್ಕಾರ ನೀಡಬೇಕು. ಮಕ್ಕಳು ಆಧ್ಯಾತ್ಮಕ ಕಡೆಗೆ ಆಸಕ್ತಿ ಬೆಳೆಸುವ ಹಾಗೆ ಪ್ರೋತ್ಸಾಹ ನೀಡಬೇಕು ಎಂದು ಮಕ್ಕಳ ಪಾಲಕರಿಗೆ ಮೋಹನ್ ಶೆಟ್ಟಿ ಕರೆ ನೀಡಿದರು. ಉದ್ಯಮಿ ವಿಜಯ್ ಶೆಟ್ಟಿ, ವಿನೋದ ರಾಹಿರವರು ಬ್ಯಾಗ್, ಪುಸ್ತಕ, ಕಂಪಾಸ ಖರೀದಿಸುವಲ್ಲಿ ಆರ್ಥಿಕ ಸಹಾಯ ಮಾಡಿದ್ದರು.…
ಮುಂಬಯಿಯ ಹೆಸರಾಂತ ನ್ಯಾಯವಾದಿ, ಬೋಂಬೆ ಬಂಟ್ಸ್ ಎಸೋಸಿಯೇಷನ್ನಿನ ಮಾಜಿ ಅಧ್ಯಕ್ಷ ಸುಭಾಷ್ ಬಾಲಕೃಷ್ಣ ಶೆಟ್ಟಿ (70) ಅವರು ಆಗಸ್ಟ್ 9ರಂದು ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು. ತಮ್ಮ ಮನೆಯ ಪಕ್ಕದಲ್ಲಿ ಶಿರ್ಡಿ ಸಾಯಿಬಾಬಾರ ಮಂದಿರವೊಂದನ್ನು ಕಟ್ಟಿಸಿ ಪರಿಸರದ ಭಕ್ತಾದಿಗಳನ್ನು ಒಗ್ಗೂಡಿಸಿ ಉತ್ಸವವನ್ನು ಆಚರಿಸುತ್ತಾ ಧಾರ್ಮಿಕ ಪ್ರಜ್ಞೆಯನ್ನು ಮೆರೆದಿದ್ದರು. ಬೋಂಬೆ ಬಂಟ್ಸ್ ಎಸೋಸಿಯೇಶನ್ ನಲ್ಲಿ ಹಲವಾರು ವರ್ಷಗಳಿಂದ ಪದಾಧಿಕಾರಿಯಾಗಿದ್ದು, ಅಧ್ಯಕ್ಷರಾಗಿದ್ದು, ಸಾಮಾಜಿಕ ಚಿಂತಕರಾಗಿದ್ದರು. ನ್ಯಾಯವಾದಿಯಾಗಿ ತನ್ನಲ್ಲಿ ಬಂದವರಿಗೆ ನ್ಯಾಯ ಒದಗಿಸಿ ಕೊಡುತ್ತಿದ್ದರು. ಅವರು ಯಕ್ಷಗಾನದ ವೇಷಧಾರಿಯಾಗಿ, ಅರ್ಥದಾರಿಯಾಗಿದ್ದರು. ಅಡ್ವಕೇಟ್ ಸುಭಾಷ್ ಶೆಟ್ಟಿಯವರು ಬಂಟ್ಸ್ ಲಾ ಫೋರಮ್ ನ ಸಲಹೆಗಾರರಾಗಿದ್ದರು. ಮೃತರು ಪತ್ನಿ ಉಳೆಪಾಡಿ ಮಂಜಲಗುತ್ತು ಭಾರತಿ ಶೆಟ್ಟಿ, ಪುತ್ರ ಶಶಾಂಕ್ ಶೆಟ್ಟಿ, ಪುತ್ರಿ ಶ್ರೇಯಾ ಶೆಟ್ಟಿ, ಅಳಿಯ, ಸೊಸೆ, ಮೊಮ್ಮಕ್ಕಳು, ಕುಟುಂಬಿಕರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಅವರ ನಿಧನಕ್ಕೆ ಬೋಂಬೆ ಬಂಟ್ಸ್ ಎಸೋಸಿಯೇಷನ್ ನ ಅಧ್ಯಕ್ಷ ಸಿಎ ಸುರೇಂದ್ರ ಕೆ. ಶೆಟ್ಟಿ, ಮಾಜಿ ಅಧ್ಯಕ್ಷರುಗಳು ಮತ್ತು ಸರ್ವ ಪದಾಧಿಕಾರಿಗಳು, ಸದಸ್ಯರು ಸಂತಾಪ…
‘ಭಾರತೀಯ ಸೇನೆ ಇಂದು ಸಶಕ್ತವಾಗಿದ್ದು ಯಾವುದೇ ಶತ್ರು ರಾಷ್ಟ್ರವನ್ನು ಬಗ್ಗು ಬಡಿಯಲು ಸಮರ್ಥವಾಗಿದೆ. ಸೇನಾ ಸಾಧನಗಳ ತಯಾರಿಯ ಸಂಶೋಧನೆ, ಅಭಿವೃದ್ಧಿ ಹಾಗೂ ಉತ್ಪಾದನೆಯಲ್ಲಿ ದೇಶ ಶೇ.75 ರಷ್ಟು ಸ್ವಾವಲಂಬಿಯಾಗಿದೆ’ ಎಂದು ಮೇಜರ್ ಜನರಲ್ ಸತೀಶ್ ಭಂಡಾರಿ ಹೇಳಿದರು. ನಗರದ ಹೋಟೆಲ್ ಮೋತಿ ಮಹಲ್ ಸಭಾಂಗಣದಲ್ಲಿ ನಡೆದ ವಿಶ್ವ ಬಂಟ ಪ್ರತಿಷ್ಠಾನ ಟ್ರಸ್ಟ್ನ 28 ನೇ ವಾರ್ಷಿಕ ಮಹಾಸಭೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಎಮಿನೆಂಟ್ ಬಂಟ್ ಪರ್ಸನಾಲಿಟಿ ಅವಾರ್ಡ್ ಸ್ವೀಕರಿಸಿ ಮಾತನಾಡಿದ ಅವರು ‘ಸೇನೆಯಲ್ಲಿ ಕರ್ತವ್ಯ ನಿರ್ವಹಿಸುವಾಗ ಸಹಜವಾಗಿಯೇ ಕಠಿಣ ಸವಾಲುಗಳನ್ನು ಎದುರಿಸಬೇಕಾಗುತ್ತಿದೆ. ಆದರೆ ದೇಶಕ್ಕಾಗಿ ಸೇವೆ ಸಲ್ಲಿಸಿದ ಅನುಭವ ಸದಾ ಸ್ಮರಣೀಯ’ ಎಂದರು. ಮಂಗಳೂರು ವಿ.ವಿ.ಯಿಂದ ಗೌರವ ಡಾಕ್ಟರೇಟ್ ಪುರಸ್ಕೃತರಾದ ಉದ್ಯಮಿ ಎಂ.ಆರ್.ಜಿ.ಗ್ರೂಪಿನ ಡಾ| ಕೆ ಪ್ರಕಾಶ್ ಶೆಟ್ಟಿ ಅವರನ್ನು ಪ್ರತಿಷ್ಠಾನದ ವತಿಯಿಂದ ಸನ್ಮಾನಿಸಲಾಯಿತು. ಸನ್ಮಾನಕ್ಕೆ ಉತ್ತರಿಸಿದ ಡಾ| ಕೆ ಪ್ರಕಾಶ್ ಶೆಟ್ಟಿ ‘ಹಿರಿಯರ ಸಾಧನೆಯಿಂದ ಪ್ರೇರಿತನಾಗಿ ಜೀವನದಲ್ಲಿ ಏನಾದರೂ ಸಾಧಿಸಬೇಕೆಂದು ಬಯಸಿದ್ದೆ. ಹಾದಿ ಕಠಿಣವಾಗಿತ್ತು. ಆದರೆ ಇಂದು ಕನಸು…
ಕೇಶಿ ಕುದುರೆ ರೂಪದ ರಾಕ್ಷಸ. ಈತ ವಿಷ್ಣುವಿನ ಅವತಾರವಾದ ಕೃಷ್ಣನಿಂದ ಕೊಲ್ಲಲ್ಪಟ್ಟಿರುತ್ತಾನೆ. ಕೇಶಿಯ ವಧೆಯ ಕಥೆಯನ್ನು ಭಾಗವತ ಪುರಾಣ, ವಿಷ್ಣು ಪುರಾಣ ಮತ್ತು ಹರಿವಂಶದಲ್ಲಿ ಹೇಳಲಾಗಿದೆ. ಕೃಷ್ಣನ ಮಾವ ಕಂಸ, ಕೃಷ್ಣ, ಬಲರಾಮನನ್ನು ಕೊಲ್ಲಲು ಈ ರಾಕ್ಷಸನನ್ನು ಕಳುಹಿಸಿರುತ್ತಾನೆ. ಮಥುರೆಯ ರಾಜನಾದ ಕಂಸನಿಗೆ ಕೃಷ್ಣನಿಂದ ಮರಣ ಅಂತ ಶರೀರವಾಣಿ ಆದಂದಿನಿಂದ ಕಂಸನು ತನ್ನ ಮರಣವನ್ನು ತಪ್ಪಿಸುವ ಪ್ರಯತ್ನದಲ್ಲಿ, ಅನೇಕ ರಾಕ್ಷಸರನ್ನು, ಕೃಷ್ಣನನ್ನು ಕೊಲ್ಲಲು ಗೋಕುಲಕ್ಕೆ ಕಳುಹಿಸುತ್ತಾನೆ. ಅಲ್ಲಿ ಕೃಷ್ಣನು ತನ್ನ ಸಾಕು ತಂದೆ ತಾಯಿಯರಾದ ನಂದಗೋಪ ರೋಹಿಣಿಯರೊಂದಿಗೆ ವಾಸಿಸುತ್ತಿರುತ್ತಾನೆ. ದೇವಕಿಯ ಮಗು ಎಂದು ತಪ್ಪಾಗಿ ಭಾವಿಸಿ ಕಂಸ ಕೊಲ್ಲಲು ಯತ್ನಿಸಿದ ಹೆಣ್ಣು ಮಗು ವಾಸ್ತವವಾಗಿ ಕೃಷ್ಣನ ಸಾಕು ತಾಯಿಯಾದ ಯಶೋದೆಯ ಮಗಳು ಎಂದು ತಿಳಿಯುತ್ತದೆ. ಇದನ್ನು ಕೇಳಿ ಕೋಪಗೊಂಡ ಕಂಸ ರಾಕ್ಷಸ ಕೇಶಿಯನ್ನು ಕರೆದು ಕೃಷ್ಣ ಮತ್ತು ಅವನ ಸಹೋದರ ಬಲರಾಮನನ್ನು ಕೊಲ್ಲುವಂತೆ ಆದೇಶಿಸುತ್ತಾನೆ. ಕೇಶಿಯು ಬೃಹತ್ ಕುದುರೆಯ ರೂಪವನ್ನು ತಾಳುತ್ತಾನೆ. ಕುದುರೆಯು ಗೋಕುಲದ ಸುತ್ತಲೂ ವಿಧ್ವಂಸಕತೆಯನ್ನು ಸೃಷ್ಟಿಸುತ್ತಿದ್ದಂತೆ ಕೃಷ್ಣ, ಕೇಶಿಯನ್ನು…
ಕುಂದಾಪುರ ತಾಲೂಕು ಯುವ ಬಂಟರ ಸಂಘದ 2024-26 ನೇ ಸಾಲಿನ ನೂತನ ಅಧ್ಯಕ್ಷರಾಗಿ ಗುತ್ತಿಗೆದಾರರು, ಯುವ ಸಂಘಟಕ, ಉದ್ಯಮಿ ನಿತೀಶ್ ಶೆಟ್ಟಿ ಬಸ್ರೂರುರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪ್ರಸ್ತುತ ಸಂಘದ ದಶಮಾನೋತ್ಸವದ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ ಇವರು ವಿವಿಧ ಸಂಘ ಸಂಸ್ಥೆಗಳಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಇವರು ನಿವೃತ್ತ ಬ್ಯಾಂಕ್ ಉದ್ಯೋಗಿ ಸುಭಾಶ್ ಚಂದ್ರ ಶೆಟ್ಟಿ ಹಾಗೂ ಶ್ರೀಮತಿ ರಸಿಕ ಎಸ್ ಶೆಟ್ಟಿ ದಂಪತಿಯ ಸುಪುತ್ರರಾಗಿದ್ದಾರೆ.
ಇಂದು ಪ್ರಪಂಚದ ಮೂಲೆ ಮೂಲೆಗಳಲ್ಲಿ ಒಂದಲ್ಲ ಒಂದು ಆಘಾತ ಸಂಭವಿಸುತ್ತಲೇ ಇರುತ್ತದೆ. ಅದು ಮಳೆ, ಬರಗಾಲ, ಸ್ಫೋಟ, ಯುದ್ಧ, ಸಾವು-ನೋವು ಏನೇ ಆಗಿರಬಹುದು. ಇವುಗಳೆಲ್ಲ ಬುದ್ದಿವಂತರೆನಿಸಿಕೊಂಡ ನಮ್ಮದೇ ಭಾವನೆಗಳಿಂದ, ಸ್ವಾರ್ಥ, ಅಧಿಕಾರ ದಾಹಗಳಿಂದಾಗಿರಬಹುದು. ಏಪ್ರಿಲ್, ಮೇ, ಜೂನ್ ನಲ್ಲಿ 45+, 50+ ಡಿಗ್ರಿ ಸೆಲ್ಸಿಯಸ್ ತಾಪಮಾನದಿಂದ ನಲುಗಿದ ನಾವು ವಿಶೇಷವಾಗಿ ಇಂದು ದೇಶದಾದ್ಯಂತ ಕುಂಭದ್ರೋಣ ಮಳೆ, ಭೂಕುಸಿತ, ಊರಿಗೆ ಊರೇ ಕೊಚ್ಚಿಹೋಗುವ ಆತಂಕಕಾರಿ ಘಟನೆಗಳಿಂದ ಆಘಾತಗೊಂಡಿದ್ದೇವೆ. ಇವುಗಳಿಗೇನು ಕಾರಣ ಎಂದು ಆಲೋಚಿದರೆ ನಮ್ಮ ಅತೀ ಬುದ್ದಿವಂತಿಕೆ, ಆವೈಜ್ಞಾನಿಕ ಯೋಚನೆ ಯೋಜನೆಗಳೇ ಕಾರಣ ಎಂಬುದನ್ನು ನಾವು ಒಪ್ಪಿಕೊಳ್ಳಲು ಸಿದ್ಧರಿರುವುದಿಲ್ಲ. ಬೇರೆ ಯಾರನ್ನೋ ಬೊಟ್ಟು ಮಾಡಿ ತೋರಿಸುತ್ತೇವೆ. ಭೂಗರ್ಭ ಶಾಂತವಾಗಿರಬೇಕು. ತುಸು ಅಲ್ಲಾಡಿದರೂ ಸಾಕು ಭೂಕಂಪ, ಅಗ್ನಿಸ್ಫೋಟ, ನಮ್ಮ ದಕ್ಷಿಣ ಕನ್ನಡ ಭಾರತದಲ್ಲಿ ಅದರಲ್ಲೂ ವಿಶೇಷವಾಗಿ ಸಕಲೇಶಪುರದ ಎತ್ತಿನ ಹೊಳೆ ಯೋಜನೆಯ ಪರಿಣಾಮವನ್ನೀಗ ಅನುಭವಿಸುತ್ತಿದ್ದೇವೆ. ಕೆಲವು ತಿಂಗಳ ಹಿಂದೆ ಕುಡಿಯಲು ನೀರಿಲ್ಲ. ನದಿ ಕಾಲುವೆಗಳಲ್ಲಿ ನೀರಿನ ಪಟ್ಟೆ ಪಸೆಯಿರಲಿಲ್ಲ. ಈಗ ಕುಂಭದ್ರೋಣ ಮಳೆ, ಪ್ರವಾಹ,…















