Author: admin
ದ.ಕನ್ನಡ, ಉಡುಪಿ, ಮಲೆನಾಡು ಗಳನ್ನು ಕಾಡುತ್ತಿರುವ ಅಡಿಕೆ ಎಲೆಚುಕ್ಕಿ ರೋಗ…..! ಮೌನಕ್ಕೆ ಶರಣಾದ ತೋಟಗಾರಿಕೆ ಇಲಾಖೆ…!
ಅಡಿಕೆ ಬೆಳೆಗಾರರ ಸಂಕಟಕ್ಕೆ ಬೆಂಬಲ ನೀಡದ ತೋಟಗಾರಿಕಾ ಇಲಾಖೆ; ಎಲೆಚುಕ್ಕಿ ರೋಗದಿಂದ ಬಂಡವಾಳ ನೆಲಸಮ…! ತೋಟದಲ್ಲೇ ಕಮರಿ ಹೋದ ಅಡಿಕೆ ಬೆಳೆಗಾರರ ಕನಸು…..! – ಕೆ. ಸಂತೋಷ್ ಶೆಟ್ಟಿ ಮೊಳಹಳ್ಳಿ, ಕುಂದಾಪುರ ಉಡುಪಿ ಜಿಲ್ಲೆ. (ಪತ್ರಕರ್ತರು & ಮಾಧ್ಯಮ ವಿಶ್ಲೇಷಕರು) ದಕ್ಷಿಣ ಕನ್ನಡ ,ಉಡುಪಿ, ಕುಂದಾಪುರ, ಬೈಂದೂರು ಹಾಗೂ ಮಲೆನಾಡು ಪ್ರದೇಶಗಳಲ್ಲಿ ಹೆಚ್ಚು ಕಾಡುತ್ತಿರುವ ಎಲೆ ಚುಕ್ಕಿ ರೋಗದಿಂದ ರೈತ ಕಂಗಾಲಾಗಿದ್ದಾನೆ. ಅದಲ್ಲದೆ ಅಡಿಕೆ ಬೆಳೆಗಾರರು ಎಲೆ ಚುಕ್ಕಿ ರೋಗದಿಂದಾಗಿ ಹಾಕಿದ ಬಂಡವಾಳ ನೆಲಸಮವಾಗುತ್ತಿದೆ .ಇದರ ಬಗ್ಗೆ ತೋಟಗಾರಿಕೆ ಇಲಾಖೆ ಮೌನಕ್ಕೆ ಶರಣಾಗಿದ್ದು ,ವಿಪರ್ಯಾಸ ಕರ್ನಾಟಕ ರಾಜ್ಯದಾದ್ಯಂತ ತೋಟಗಾರಿಕೆ ಇಲಾಖೆಯು ಎಲೆಚುಕ್ಕಿ ರೋಗವನ್ನು ಸಮೀಕ್ಷೆ ಮಾಡುತ್ತೇವೆ ಎಂದು ಮಾಧ್ಯಮಗಳಿಗೆ ಹೇಳಿಕೆಯನ್ನು ನೀಡಿದ್ದು ನೆಪ ಮಾತ್ರಕ್ಕೆ, ದಕ್ಷಿಣ ಕನ್ನಡಗೂ ಬಾಹು ಚಾಚಿದ ಎಲೆಚುಕ್ಕಿ ರೋಗ – ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ, ಮುಂಡಾಜೆಯ ಕೆಲವು ಅಡಿಕೆ ತೋಟಗಳಲ್ಲಿ ಎಲೆಚುಕ್ಕಿ ರೋಗ ಜಿಲ್ಲೆಗೆ ವ್ಯಾಪಿಸುವ ಆತಂಕ.ಬೆಳ್ತಂಗಡಿ ಸಂಸೆಯಿಂದ ಸುತ್ತುವರಿದು ಎಳನೀರು ಭಾಗಕ್ಕೆ ಹಬ್ಬಿದ್ದ ಎಲೆಚುಕ್ಕಿರೋಗ ಇದೀಗ…
ಗುರುಪುರ ಬಂಟರ ಮಾತೃ ಸಂಘದ ನೇತೃತ್ವದಲ್ಲಿ ಸ್ಥಳೀಯ ಸಂಘ-ಸಂಸ್ಥೆಗಳ ಸಹಕಾರದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮೂಡಂಬೈಲ್ ಡಾ.ರವಿ ಶೆಟ್ಟಿ ದೋಣಿಂಜೆಗುತ್ತು ಅವರಿಗೆ ಹುಟ್ಟೂರ ಅಭಿನಂದನಾ ಕಾರ್ಯಕ್ರಮ ಗುರುಪುರ ಕುಕ್ಕುದಕಟ್ಟೆ ಶ್ರೀ ವೈದ್ಯನಾಥ ಕಲ್ಯಾಣ ಸಮುದಾಯ ಭವನದಲ್ಲಿ ನಡೆಯಿತು. ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಸಮಾರಂಭವನ್ನು ಉದ್ಘಾಟಿಸಿದರು. ಆಶೀರ್ವಚನ ನೀಡಿದ ಗುರುಪುರ ಶ್ರೀ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ, ಡಾ. ರವಿ ಶೆಟ್ಟಿ ನಮ್ಮೂರ ದೊಡ್ಡ ಆಸ್ತಿ, ಮೇರು ಸಾಧಕರು ಹಾಗೂ ಅರ್ಹರಿಗೆ ಈ ಬಾರಿ ಪ್ರಶಸ್ತಿ ಬಂದಿದೆ, ಇದರಿಂದ ಪ್ರಶಸ್ತಿಯ ಘನತೆ ಹೆಚ್ಚಿದೆ ಎಂದರು. ಶಾಸಕ ಡಾ. ಭರತ್ ವೈ ಶೆಟ್ಟಿ ಮಾತನಾಡಿ, ದೂರದ ಕತಾರ್ನಲ್ಲಿದ್ದರೂ ಡಾ. ರವಿ ಶೆಟ್ಟಿ ಕೊರೋನಾ ಸಂದರ್ಭ ರಾಜ್ಯ ಮತ್ತು ನಾಡಿನ ಮಂದಿಗೆ ನೆರವಾಗಿರುವ ವ್ಯಕ್ತಿಯಾಗಿದ್ದಾರೆ ಸಮಾಜದ ಅಗತ್ಯಗಳಿಗೆ ತಕ್ಕಂತೆ ಸ್ಪಂದಿಸುವ ದೊಡ್ಡ ಗುಣ ಅವರಲ್ಲಿದೆ ಎಂದರು. ಮಾಜಿ ಸಚಿವ ರಮಾನಾಥ ರೈ,…
ಈ ಸೃಷ್ಟಿಯಲ್ಲಿ ಮಾನವ ಶರೀರ ಉಳಿದೆಲ್ಲ ಜೀವ ಸಂಕುಲಗಳಿಗಿಂತ ಭಿನ್ನ ಮತ್ತು ಶ್ರೇಷ್ಠವಾಗಿದೆ. ಈ ಮಾನವ ಜನ್ಮ ಬರಬೇಕಾದರೆ ಹಿಂದಿನ ಜನ್ಮದಲ್ಲಿ ಪುಣ್ಯ ಮಾಡಿರಬೇಕು. ಹೀಗೆ ಹಿಂದಿನ ಜನ್ಮದ ಪುಣ್ಯಫಲದಿಂದ ಬಂದಂತಹ ಈ ಮಾನವನ ಜನ್ಮವನ್ನು ವ್ಯರ್ಥವಾಗಿ ಹಾಳು ಮಾಡದೆ ಜೀವನವನ್ನು ಸಾರ್ಥಕ ಪಡಿಸಿಕೊಳ್ಳಬೇಕು. ಜೀವನದಲ್ಲಿ ಸುಖ-ಕಷ್ಟ ಎರಡು ಇರಬೇಕು. ಕೇವಲ ಸುಖವೇ ಇದ್ದರೆ ಕಷ್ಟದ ಅರಿವು ಗೊತ್ತಾಗದು. ಜೀವನ ದುದ್ದಕ್ಕೂ ಕಷ್ಟವೇ ಇದ್ದರೂ ಮಾನವ ಜೀವನ ಸಾರ್ಥಕ ಎನಿಸದು. ಸುಖ- ಕಷ್ಟಗಳನ್ನು ಸಮಾನವಾಗಿ ಸ್ವೀಕರಿಸುವ ಮನೋಧರ್ಮವಿರಬೇಕು. ಸುಖ- ಕಷ್ಟಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಇರುತ್ತವೆ. ಕಷ್ಟಗಳು ಮಾನವನಿಗೆ ಬಾರದೆ ಮರಕ್ಕೆ ಬರುತ್ತದೆಯೇ ಎಂದು ಹೇಳುವ ವಾಡಿಕೆ ಇದೆ. ಮುಖ್ಯವಾಗಿ ಮಾನವನಿಗೆ ವಿಪರೀತ ಸಾಲದ ಹೊರೆ, ಮಾನಸಿಕ ಖನ್ನತೆ, ಬಡತನ, ಪರೀಕ್ಷೆಯಲ್ಲಿ ಅನುತ್ತೀರ್ಣ, ಉತ್ತೀರ್ಣನಾದರೂ ಉತ್ತಮ ಅಂಕಗಳನ್ನು ಪಡೆಯಲಿಲ್ಲವೆಂಬ ಬೇಸರ, ವಿವಾಹವಾಗದಿರುವುದು, ಸಂತಾನಭಾಗ್ಯ ಇಲ್ಲದಿರುವುದು, ವಾಸಿಯಾಗದ ಕಾಯಿಲೆ, ಪ್ರೀತಿ ಪ್ರೇಮವೆಂಬ ನಾಟಕ, ವಿಪರೀತ ದುಶ್ಚಟಗಳ ಅಭ್ಯಾಸ, ವಿದ್ಯಾವಂತನಾದರೂ ನಿರುದ್ಯೋಗಿ ಯಾಗಿರುವುದು,…
ಕೇಸರಿ ಮಯವಾದ ಕಾವೂರು ರಸ್ತೆ, ಎಲ್ಲೆಡೆ ಹಾರಾಡಿದ ಬಿಜೆಪಿ ಧ್ವಜ. ಕೇಸರಿ ಪೇಟ, ಶಾಲು ಹಾಕಿದ ಕಾರ್ಯಕರ್ತರಿಂದ ಜೈಕಾರ ಘೋಷಣೆ. ರಸ್ತೆಯುದ್ದಕ್ಕೂ ಹುಲಿ ವೇಷ ಕುಣಿತದ ಅಬ್ಬರ. ಇದು ಮಂಗಳವಾರ ಡಾ. ಭರತ್ ಶೆಟ್ಟಿ ವೈ. ಅವರು ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ಕಂಡು ಬಂದ ಉತ್ಸಾಹ. ಡಾ. ಭರತ್ ಶೆಟ್ಟಿ ಅವರು ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮ ಪತ್ರ ಸಲ್ಲಿಕೆಗೂ ಮುನ್ನ ಕಾವೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ನೆರವೇರಿಸಿದರು. ಬಳಿಕ ದೇವಸ್ಥಾನದಿಂದ ಕಾವೂರು ಮೈದಾನದವರೆಗೆ ಬೃಹತ್ ಕಾರ್ಯಕರ್ತರ ಪಾದೆ ಯಾತ್ರೆಯ ಜತೆ ಸಾಗಿ ಬಂದು ಬಳಿಕ ಸುಮಾರು 2.20ಕ್ಕೆ ನಾಮಪತ್ರ ಸಲ್ಲಿಸಿದರು. ಕ್ಷೇತ್ರದ ವಿವಿಧೆಡೆಯಿಂದ ಆಗಮಿ ಸಿದ ಕಾರ್ಯಕರ್ತರು, ನಾಯಕರು, ದೇವರ ಪ್ರಸಾದ, ಹೂವು ತಂದು ಶಾಸಕರಿಗೆ ನೀಡಿ ವಿಜಯೀಭವ ಎಂದು ಹರಸುತ್ತಾ ಇದ್ದುದು ಕಂಡು ಬಂತು. ಸಾವಿರಾರು ಕಾರ್ಯಕರ್ತರು ಶಿಸ್ತುಬದ್ಧವಾಗಿ ನಡೆಯುತ್ತಾ ಹುಲಿ ವೇಷದ ಕುಣಿತಕ್ಕೆ ನೃತ್ಯದ ಹೆಜ್ಜೆ ಹಾಕುತ್ತಾ ಬಿರು ಬಿಸಿಲನ್ನು ಲೆಕ್ಕಿಸದೆ ತಮ್ಮ…
ಆರಾಧನೆ, ಪುರಾತನ ಇತಿಹಾಸ, ಅಲ್ಲಿನ ಯತಿ ವರ್ಯರು ಅಥವಾ ಧರ್ಮಾಧಿಕಾರಿಗಳ ಶ್ರದ್ಧೆಯಿಂದ ಪ್ರತಿಯೊಂದು ಕ್ಷೇತ್ರ ಗುರುತಿಸಲ್ಪಡುತ್ತದೆ ಎಂದು ಶ್ರೀ ಸಂಸ್ಥಾನ ಗೌಡ ಪಾದಾಚಾರ್ಯ ಕೈವಲ್ಯ ಮಠಾಧೀಶ ಶ್ರೀಮದ್ ಗುರು ಶಿವಾನಂದ ಸರಸ್ವತೀ ಸ್ವಾಮೀಜಿ ನುಡಿದರು. ಅವರು ಪಳ್ಳಿ ಅಡಪಾಡಿ ಶ್ರೀ ಉಮಾಮಹೇಶ್ವರ, ಶ್ರೀ ದುರ್ಗಾ ಪರಮೇಶ್ವರೀ ದೇಗುಲದಲ್ಲಿ ಕ್ಷೇತ್ರದ ವಾಯವ್ಯ ಭಾಗದ ಪುರಾತನ ಆಲಡೆ ಸಾನ್ನಿಧ್ಯಗಳ ಪುನಃ ಪ್ರತಿಷ್ಠಾಪನಾಂಗ ಬ್ರಹ್ಮಕಲಶೋತ್ಸವ, ಸಹಸ್ರ ಚಂಡಿಕಾ ಮಹಾಯಾಗ ಪ್ರಯುಕ್ತ ನಡೆದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು. ಪಳ್ಳಿ ಅಡಪಾಡಿಯಲ್ಲಿ ನಡೆದ ಕ್ಷೇತ್ರ ನಿರ್ಮಾಣ ಇಲ್ಲಿನ ಧರ್ಮದರ್ಶಿ ಪುಂಡಲೀಕ ನಾಯಕ್ ಅವರ ಶ್ರಮದ ಪರಿಣಾಮ ಎಂದರು. ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಭಕ್ತಿ, ಶ್ರದ್ಧೆಯಿಂದ ಅಡಪಾಡಿಯಲ್ಲಿ ಧಾರ್ಮಿಕ ಚಿಂತನೆ ನಡೆಯುತ್ತಿದೆ ಎಂದರು. ಸಚಿವ ಸುನಿಲ್ ಕುಮಾರ್, ಜೋತಿಷ ವಿ| ಪ್ರಸನ್ನ ಆಚಾರ್ಯ, ಕ್ಷೇತ್ರದ ಧರ್ಮದರ್ಶಿ ಪುಂಡಲೀಕ ನಾಯಕ್, ಶಾಸಕ ರಘುಪತಿ ಭಟ್, ಮಂಗಳೂರಿನ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಜಂಟಿ…
ನಮ್ಮ ಟಿವಿ ವಾಹಿನಿಯು ಆಯೋಜಿಸುವ ಬಲೇ ತೆಲಿಪಾಲೆ 10 ನೇ ಆವೃತ್ತಿಯನ್ನು ನಮ್ಮ ಸಂಘದ ಭವನದಲ್ಲಿ ಆಯೋಜಿಸಲು ಅವಕಾಶ ನೀಡಿದ ವಾಹಿನಿಯ ಆಡಳಿತ ನಿರ್ದೇಶಕರಾದ ಡಾ. ಶಿವಶರಣ್ ಶೆಟ್ಟಿಯವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ತುಳು ಭಾಷೆ, ಸಂಸ್ಕೃತಿ, ಆಚಾರ ವಿಚಾರಗಳನ್ನು ಉಳಿಸುವಲ್ಲಿ ನಿಸ್ವಾರ್ಥ ಭಾವದಿಂದ ಶ್ರಮಿಸುತ್ತಿರುವ ಸಂಸ್ಥೆ ಇದಾಗಿದ್ದು ಇವರು ಮಾಡುತ್ತಿರುವ ಕಾರ್ಯಕ್ರಮಕ್ಕೆ ಸಹಕಾರ ನೀಡುವುದಕ್ಕೆ ಹೆಮ್ಮೆಯೆನಿಸುತ್ತಿದೆ ಎಂದು ಪುಣೆ ಬಂಟರ ಸಂಘದ ಅಧ್ಯಕ್ಷರಾದ ಸಂತೋಷ್ ಶೆಟ್ಟಿ ಇನ್ನಾ ಕುರ್ಕಿಲ್ ಬೆಟ್ಟು ಬಾಳಿಕೆ ಅಭಿಪ್ರಾಯಪಟ್ಟರು. ಅವರು ಫೆ 26 ರಂದು ಪುಣೆ ಓಣಿಮಜಲು ಜಗನ್ನಾಥ ಶೆಟ್ಟಿ ಸಾಂಸ್ಕೃತಿಕ ಬಂಟರ ಭವನದ ಲತಾ ಸುಧೀರ್ ಶೆಟ್ಟಿ ವೇದಿಕೆಯಲ್ಲಿ ನಡೆದ ನಮ್ಮ ಟಿವಿ ವಾಹಿನಿಯ ಬಲೇ ತೆಲಿಪಾಲೆ ಸೀಸನ್ 10 ರ ಸ್ಪರ್ಧಾ ಕಾರ್ಯಕ್ರಮಕ್ಕೆ ದೀಪ ಪ್ರಜ್ವಲಿಸಿ ಚಾಲನೆ ನೀಡಿ ಮಾತನಾಡುತ್ತಾ ನಮ್ಮ ಟಿವಿ ವಾಹಿನಿಯು ಬಲೇ ತೆಲಿಪಾಲೆ ಎನ್ನುವ ವಿನೂತನ ಪರಿಕಲ್ಪನೆಯ ಹಾಸ್ಯ ಕಾರ್ಯಕ್ರಮವನ್ನು ಆಯೋಜಿಸಿ ಜನರನ್ನು ರಂಜಿಸುವ ಕಾರ್ಯಕ್ರಮಗಳಿಗೆ ಮುನ್ನುಡಿಯನ್ನು ಬರೆದಿದ್ದು ತದ…
ನಾನು ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ. ಆದರೆ ಪಕ್ಷದ ಕೆಲಸದಲ್ಲಿ ಸಕ್ರಿಯವಾಗಿರುತ್ತೇನೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಯಸ್ಸಿನ ಕಾರಣದಿಂದಾಗಿ ನನ್ನ ಸ್ಪರ್ಧೆಯ ಬಗ್ಗೆ ಪಕ್ಷದವರೇ ಅಪಸ್ವರ ಎತ್ತಿದ್ದರಿಂದಾಗಿ ಮುಂದೆ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ. ಆದರೆ ಕಾಂಗ್ರೆಸ್ ಗೆ ಶಕ್ತಿ ತುಂಬುವ ಕೆಲಸದಲ್ಲಿ ಸಕ್ರಿಯನಾಗಿರುತ್ತೇನೆ. ಹೈಕಮಾಂಡ್ ಹೇಳಿದಂತೆ ಕೇಳುತ್ತೇನೆ. ಹಿಂದಿನಿಂದಲೂ ಹೈಕಮಾಂಡ್ ನ ಎಲ್ಲ ಆದೇಶ ತಪ್ಪದೆ ಪಾಲಿಸುತ್ತಾ ಬಂದಿದ್ದೇನೆ. ಈ ಬಾರಿ ನನ್ನ ಸೋಲಿನ ಮತಗಳ ಅಂತರ ಕಡಿಮೆಯಾಗಿದೆ. ಗೆಲುವಿನ ವಿಶ್ವಾಸವಿತ್ತು. ಆದರೂ ಸೋಲಾಗಿದೆ ಎಂದರು. ಜನರಿಗಾಗಿ ಸದಾ ಕೆಲಸ ಮಾಡುತ್ತೇನೆ. ಜಿಲ್ಲೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗಿದೆ. ಆದರೆ ಇದರಿಂದ ಕಾರ್ಯಕರ್ತರು ಎದೆಗುಂದ ಬೇಕಾಗಿಲ್ಲ. ಲೋಕಸಭಾ ಚುನಾವಣೆ, ತಾ.ಪಂ, ಜಿ.ಪಂ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಜಿಲ್ಲೆಯಲ್ಲಿ ಹೆಚ್ಚಿನ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ರಮಾನಾಥ ರೈ ಹೇಳಿದರು.
ಯು.ಎ.ಇ ಬಂಟ್ಸ್ ನ 46 ನೇ ವರ್ಷದ ಯು.ಎ.ಇ ಬಂಟೆರ್ನ ಕೂಡುಕಟ್ಟ್ ( Get Together) ಕಾರ್ಯಕ್ರಮವು ಎಪ್ರಿಲ್ 30 ರಂದು ಜರುಗಿತು. ಯು.ಎ.ಇ ದೇಶದ ಎಲ್ಲಾ ರಾಜ್ಯದಲ್ಲಿ ನೆಲೆಸಿರುವ ಸಾವಿರಾರು ಬಂಟ ಬಾಂದವರ ಸಮ್ಮುಖದಲ್ಲಿ ದುಬೈನ ದೇರಾದ ಬ್ರಿಸ್ಟೊಲ್ ಹೋಟೆಲ್ ಸಭಾಂಗಣದಲ್ಲಿ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಿತು. ಗಣ್ಯಾತಿ ಗಣ್ಯರನ್ನು ಆರತಿ ಎತ್ತಿ ತಿಲಕವನ್ನು ಹಚ್ಚಿ ಕೇರಳದ ಚೆಂಡೆಯ ವಾದನ, ಸುಮಂಗಲೆಯರು ಪೂರ್ಣ ಕುಂಭ ಕಲಶ ಸ್ವಾಗತದ ಮೆರವಣಿಗೆಯ ಮೂಲಕ ವೇದಿಕೆಗೆ ಬರಮಾಡಿಕೊಳ್ಳಲಾಯಿತ್ತು. ನಂತರ ಗಣ್ಯರು 46 ನೇ ವರ್ಷದ ಕೂಡುಕಟ್ಟ್ ಕಾರ್ಯಕ್ರಮಕ್ಕೆ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಂಟ ಗೀತೆ ಹಾಡುವ ಮೂಲಕ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 7 ರ ವರೆಗೆ ಯು.ಎ.ಇ ಬಂಟರ ಪ್ರತಿಭೆಗಳಿಂದ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಬಂಟ ವಿಭೂಷಣ ಪ್ರಶಸ್ತಿ ಪ್ರದಾನ : ವರ್ಷಂಪ್ರತಿ ಕೊಡಮಾಡುವ “ಬಂಟ ವಿಭೂಷಣ” ಪ್ರಶಸ್ತಿಯನ್ನು ಈ ವರ್ಷ ಆಳ್ವಾಸ್…
ಬಂಟರ ಸಂಘ ಪಿಂಪ್ರಿ- ಚಿಂಚ್ವಾಡ್ ರಜತ ಮಹೋತ್ಸವದ ಸಂಭ್ರಮಾಚರಣೆಯಲ್ಲಿದ್ದು ಮುಂದಿನ ಏಪ್ರಿಲ್ 16 ರಂದು ಸಂಘದ ರಜತ ಮಹೋತ್ಸವದ ಭವ್ಯ ಸಮಾರಂಭವು ಸಂಘದ ಅಧ್ಯಕ್ಷರಾದ ರಾಕೇಶ್ ಶೆಟ್ಟಿ ಬೆಳ್ಳಾರೆ ಇವರ ನೇತೃತ್ವದಲ್ಲಿ ದಿನಪೂರ್ತಿ ನಡೆಯಲಿದ್ದು ಮಾರ್ಚ್ 23 ರಂದು ಚಿಂಚ್ವಾಡ್ ನಲ್ಲಿರುವ ಸಂಘದ ಮಿನಿ ಸಭಾಗೃಹದಲ್ಲಿ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು. ಈ ಸಂದರ್ಭ ಸಂಘದ ಅಧ್ಯಕ್ಷರಾದ ರಾಕೇಶ್ ಶೆಟ್ಟಿ ಬೆಳ್ಳಾರೆ, ಮಾಜಿ ಅಧ್ಯಕ್ಷರಾದ ವಿಶ್ವನಾಥ ಡಿ ಶೆಟ್ಟಿ, ಕೆ. ಪದ್ಮನಾಭ ಶೆಟ್ಟಿ, ವಿಜಯ್ ಶೆಟ್ಟಿ ಕಟ್ಟಣಿಗೆ ಮನೆ ಬೋರ್ಕಟ್ಟೆ, ಸಂಘದ ಪ್ರಧಾನ ಕಾರ್ಯದರ್ಶಿ ಅರುಣ್ ಶೆಟ್ಟಿ ಬೆಳ್ಳಂಪಳ್ಳಿ, ಗೌರವ ಕೋಶಾಧಿಕಾರಿ ಸುಧಾಕರ ಶೆಟ್ಟಿ ಪೆಲತ್ತೂರು ,ಶಿಕ್ಷಣ ಮತ್ತು ಸಮಾಜಕಲ್ಯಾಣ ಸಮಿತಿ ಕಾರ್ಯಾಧ್ಯಕ್ಷ ವಿಶ್ವನಾಥ ಕೆ ಶೆಟ್ಟಿ ಮುಂಡ್ಕೂರು, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಜ್ಯೋತಿ ವಿಜಯ್ ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಆಕಾಶ್ ಜೆ ಶೆಟ್ಟಿ ಸಂಘದ ಸದಸ್ಯರಾದ ಅವಿನಾಶ್ ಶೆಟ್ಟಿ ಮಂದಾಡಿಗುತ್ತು, ಸಂತೋಷ್ ಕಡಂಬ, ನಿಧೀಶ್ ಶೆಟ್ಟಿ ನಿಟ್ಟೆ, ಕಿರಣ್…
ಭಾರತ ಸಹಿತ ಏಷ್ಯಾ ಖಂಡದಲ್ಲಿ ಪ್ರಸಕ್ತ ವರ್ಷ ತಾಪಮಾನ ಒಂದೇ ಸಮನೆ ಹೆಚ್ಚುತ್ತಿದ್ದು ಆತಂಕಕಾರಿ ಸ್ಥಿತಿಯನ್ನು ತಲುಪಿದೆ. ಭಾರತವಂತೂ ಕಂಡರಿಯದಂಥ ಸುಡುಬಿಸಿಲಿನಿಂದ ಕಂಗೆಟ್ಟಿದೆ. ತಾಪಮಾನ ಹೆಚ್ಚಳದ ಜತೆಜತೆಯಲ್ಲಿ ಉಷ್ಣಹವೆ ಪರಿಸ್ಥಿತಿಯನ್ನು ಮತ್ತಷ್ಟು ಹದಗೆಡಿಸಿದ್ದು ದೇಶದ ಸರಿಸುಮಾರು ಶೇ. 90ರಷ್ಟು ಪ್ರದೇಶ ಉಷ್ಣಹವೆಯ ಅಪಾಯದಲ್ಲಿದ್ದು ಇದನ್ನು ಅಪಾಯಕಾರಿ ವಲಯ ಎಂದು ಗುರುತಿಸಲಾಗಿದೆ ಎಂದು ಅಧ್ಯಯನ ವರದಿಯೊಂದು ತಿಳಿಸಿದೆ. ಈಗ ದೇಶದ ಬಹುತೇಕ ಭಾಗಗಳು ಬಿಸಿಲಿನ ಝಳದಿಂದ ತತ್ತರಿಸುತ್ತಿದ್ದು ಹಲವೆಡೆ ಬಿಸಿಲಿನ ತೀವ್ರತೆಯ ಕಾರಣದಿಂದ ಜನರು ಸಾವನ್ನಪ್ಪುತ್ತಿರುವ ಬಗೆಗೆ ವರದಿಯಾಗುತ್ತಿದೆ. ಇದೇ ವೇಳೆ ರಬಿ ಋತುವಿನ ಬೆಳೆಗಳ ಮೇಲೆ ಈ ವಿಪರೀತ ಬಿಸಿಲು ಮತ್ತು ಧಗೆ ವ್ಯತಿರಿಕ್ತ ಪರಿಣಾಮ ಬೀರಿದ್ದು ಇಳುವರಿ ಕುಂಠಿತವಾಗಿದೆ. ಅಕಾಲಿಕ ಮಳೆ ಮತ್ತು ತಾಪಮಾನ ಹೆಚ್ಚಳ ರೈತಾಪಿ ವರ್ಗ ಮತ್ತು ಜನಸಾಮಾನ್ಯರ ಮೇಲೆ ತೀವ್ರತೆರನಾದ ಪರಿಣಾಮವನ್ನು ಬೀರತೊಡಗಿದೆ. ದಿನಗೂಲಿ ಕಾರ್ಮಿಕರ ಮೇಲಂತೂ ಬಿಸಿಲಿನ ಝಳ ನೇರ ಪರಿಣಾಮವನ್ನು ಬೀರಿದೆ. ಇದೇ ವೇಳೆ ನಿರ್ಮಾಣ ಕಾಮಗಾರಿಗಳಿಗೂ ಇದು ಹೊಡೆತ ನೀಡಿದ್ದು ನಿರೀಕ್ಷಿತ…