Author: admin
ರೋಟರಿ ಸಂಸ್ಥೆ ಒಂದು ವಿಶ್ವವಿದ್ಯಾನಿಲಯವಿದ್ದಂತೆ ಎಂದು ಹುಣಸೂರು ರೋಟರಿ ಪದಗ್ರಹಣ ಅಧಿಕಾರಿ ರೋ ಎಂಪಿಎಫ್ ಬಿ.ಶೇಖರ್ ಶೆಟ್ಟಿ ಬಣ್ಣಿಸಿದರು. ಹುಣಸೂರು ರೋಟರಿ ಸಂಸ್ಥೆಯ 2024-25 ನೇ ಸಾಲಿನ ನೂತನ ಅಧ್ಯಕ್ಷ, ಕೆ.ಪಿ. ಪ್ರಸನ್ನ, ಕಾರ್ಯದರ್ಶಿ ಹೆಚ್.ಆರ್. ಕೃಷ್ಣ ಕುಮಾರ್ ಹಾಗೂ ಪದಾಧಿಕಾರಿಗಳ ಪದಗ್ರಹಣ ನೆರವೇರಿಸಿ ಮಾತನಾಡಿ, ರೋಟರಿ ಸಂಸ್ಥೆ ಎಂದರೆ ಸೇವೆ, ಒಡನಾಟ, ಪ್ರೀತಿ, ಸ್ನೇಹ, ತ್ಯಾಗ, ಸಮಗ್ರತೆ, ಏಕತೆ, ನಾಯಕತ್ವಕ್ಕೆ ಮತ್ತೊಂದು ಹೆಸರು. ಕಟ್ಟ ಕಡ್ಡೆಯ ಹಾಗೂ ಮುಂದಿನ ಪೀಳಿಗೆಯವರೆಗೂ ಸೇವೆ ಸಲ್ಲಿಸುವ ಅವಕಾಶ ನೀಡುವುದು ರೋಟರಿ ಸಂಸ್ಥೆಯ ಧ್ಯೇಯವಾಗಿದೆ. ವಿಶ್ವ ಬಾತೃತ್ವ ಸಮಗ್ರತೆ, ಏಕತೆ, ವೈವಿಧ್ಯತೆ ರೋಟರಿ ಸಂಸ್ಥೆಯ ವಿಶೇಷ. ಪ್ರಪಂಚದಾದ್ಯಂತ 1.2 ಮಿಲಿಯನ್, ಭಾರತದಲ್ಲಿ 1.40 ಲಕ್ಷ ಸದಸ್ಯರಿರುವ ವಿಶ್ವದ ದೊಡ್ಡ ಸಂಸ್ಥೆ ಇದಾಗಿದೆ. ಇಂತಹ ಸಂಸ್ಥೆಯ ಸದಸ್ಯರಾಗಿರುವುದು ಹೆಮ್ಮೆಯ ವಿಷಯ, ಹಾಗೂ ಸಂಸ್ಥೆಯು ತನ್ನ ಅತ್ಯುತ್ತಮ ಕಾರ್ಯಗಳಿಂದ ಪ್ಲಾಟಿನಂ ಪ್ರಶಸ್ತಿ ಪಡೆದಿರುವುದು ಅದ್ಭುತ ಸಾಧನೆ ಎಂದು ಕೊಂಡಾಡಿದರು. ಅಧಿಕಾರ ಸ್ವೀಕರಿಸಿದ ರೋಟರಿ ಕೆ.ಪಿ. ಪ್ರಸನ್ನ ಮಾತನಾಡಿ,…
ದಾವಣಗೆರೆಯ ಪ್ರತಿಷ್ಠಿತ “ದಾವಣಗೆರೆ ಚಾರ್ಟರ್ಡ್ ಅಕೌಂಟೆಂಟ್ಸ್ ಅಸೋಸಿಯೇಷನ್” ನ 2024-25 ನೇ ಸಾಲಿನ ಪ್ರಥಮ ಕಾರ್ಯಕಾರಿ ಮಂಡಳಿ ಸಭೆಯು ಪಿ.ಬಿ ರಸ್ತೆಯಲ್ಲಿರುವ ಶ್ರುತಿ ಮೋಟಾರ್ಸ್ ಹಿಂಭಾಗದ, ಚಾರ್ಟರ್ಡ್ ಅಕೌಂಟೆಂಟ್ಸ್ ಭವನದಲ್ಲಿ ನಡೆಯಿತು. ಈ ಸಭೆಯಲ್ಲಿ ದಾವಣಗೆರೆ ಚಿತ್ರದುರ್ಗ ಜಿಲ್ಲಾ ಬಂಟರ ಸಂಘದ ಕಾರ್ಯದರ್ಶಿ, ಕರಾವಳಿ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾದ ಸಿಎ ಉಮೇಶ ಶೆಟ್ಟಿ ಅವರನ್ನು ಸಂಘದ ನೂತನ ಅಧ್ಯಕ್ಷರಾಗಿ ಅವಿರೋದವಾಗಿ ಆಯ್ಕೆ ಮಾಡಲಾಯಿತು. ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾ ಪೋಷಕರಾಗಿರುವ ಉಮೇಶ್ ಶೆಟ್ಟಿಯವರು ಸಮಾಜ ಸೇವಕರಾಗಿಯೂ ಗುರುತಿಸಿಕೊಂಡಿದ್ದಾರೆ.
ಅಂಬಲ್ಪಾಡಿ ಪರಿಸರದಲ್ಲಿರುವ ಭಾಸ್ಕರ್ ಶೆಟ್ಟಿ ಮತ್ತು ಅರುಣ ಶೆಟ್ಟಿ ದಂಪತಿಯವರ ಮನೆಯು ತುಂಬಾ ಅಜೀರ್ಣಾವಸ್ಥೆಯಲ್ಲಿರುವುದನ್ನು ಮನಗಂಡು ಬಂಟರ ಯಾನೆ ನಾಡವರ ಮಾತೃಸಂಘ (ರಿ) ಉಡುಪಿ ತಾಲೂಕು ಸಮಿತಿಯ ನಿಕಟಪೂರ್ವ ಸಂಚಾಲಕರಾದ ಜಯರಾಜ್ ಹೆಗ್ಡೆಯವರ ನೇತೃತ್ವದಲ್ಲಿ, ಪಳ್ಳಿ ನಟರಾಜ್ ಹೆಗ್ಡೆ, ಮನೋಹರ್ ಶೆಟ್ಟಿ ಅಂಬಲ್ಪಾಡಿ ಹಾಗೂ ಈಗಿನ ತಾಲೂಕು ಸಮಿತಿಯ ಸಂಚಾಲಕರಾದ ಶಿವಪ್ರಸಾದ್ ಹೆಗ್ಡೆ, ಉಪ ಸಂಚಾಲಕರಾದ ಕೋಡು ದಿನೇಶ್ ಹೆಗ್ಡೆ ಹಾಗೂ ತಾಲೂಕು ಸಮೀತಿಯ ಸದಸ್ಯರು ಹಾಗೂ ಊರ ಮತ್ತು ಪರ ಊರ ದಾನಿಗಳ ಸಹಕಾರದಿಂದ ಭಾಸ್ಕರ್ ಶೆಟ್ಟಿ ದಂಪತಿಯವರಿಗೆ ಸುಮಾರು 10 ಲಕ್ಷ ರೂಪಾಯಿ ವೆಚ್ಚದಲ್ಲಿ ಮನೆಯನ್ನು ಕಿದಿಯೂರು ಪಂಚಾಯತ್ ನ ಪ್ರಥಮ ಪ್ರಜೆ ಸುಜಾತ ಶೆಟ್ಟಿಯವರು ದೀಪ ಬೆಳಗಿಸಿ, ಮನೆಯ ಕೀ ಕೊಡುವ ಮೂಲಕ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಶಕ್ತಿ ಬೀಡಿ ಮಾಲಕರಾದ ಶಶಿಕಾಂತ್ ಶೆಣೈ, ನಗರಸಭೆಯ ಸದಸ್ಯರಾದ ಹರೀಶ್ ಶೆಟ್ಟಿ, ತಾಲೂಕು ಸಮಿತಿಯ ಸದಸ್ಯರುಗಳಾದ ಮಿಥುನ್ ಹೆಗ್ಡೆ, ಪ್ರಸಾದ್ ಹೆಗ್ಡೆ ಮಾರಳಿ ದಂಪತಿ, ಸುಭಾಸ್ ಬಲ್ಲಾಳ್, ಶ್ರೀಧರ್…
ಇದು ‘ಕಾಂತಾರ’ ಅಲ್ಲ. ಆದರೆ ಅದಕ್ಕಿಂತಲೂ ಏನೋ ಒಂದು ವಿಭಿನ್ನತೆ ಇದರಲ್ಲಿದೆ. ಕಾಂತಾರ ಸಿನಿಮಾ ಬರುವ ಮೊದಲೇ ನಿತಿನ್ ರೈ ಕುಕ್ಕುವಳ್ಳಿ ನಿರ್ದೇಶನದ ‘ಧರ್ಮ ದೈವ’ ಕಿರುಚಿತ್ರ ಬಿಡುಗಡೆಯಾಗಿತ್ತು ಹಾಗೂ ಕಿರುತೆರೆಯಲ್ಲಿ ಬಹಳಷ್ಟು ಸದ್ದು ಮಾಡಿತ್ತು. ಇದೇ ಕಿರುಚಿತ್ರದ ಹೆಸರನ್ನೇ ಇಟ್ಟುಕೊಂಡು ಬೆಳ್ಳಿತೆರೆಯ ಮೇಲೆ ತರಲು ಹೊರಟ ‘ಧರ್ಮ ದೈವ’ ಮಾಯೋದ ಬೊಲ್ಪು ಸಿನಿ ಪ್ರೇಕ್ಷಕರ ಮನಸ್ಸು ಗೆದ್ದಿದೆ ಎನ್ನುವುದರಲ್ಲಿ ಯಾವುದೇ ಸಂಶಯವಿಲ್ಲ. ಇಡೀ ಚಿತ್ರವನ್ನು ಗಮನಿಸುತ್ತಾ ಹೋದರೆ ನಮಗೆ ಎಲ್ಲಿಯೂ ದೈವದ ಪಾತ್ರದ ದರ್ಶನ ಆಗುವುದಿಲ್ಲ. ಅರ್ಥಾತ್ ದೈವವನ್ನು ತೆರೆಯ ಮೇಲೆ ಕಾಣಿಸುವ, ಕುಣಿಸುವ ಪ್ರಯತ್ನವನ್ನು ಇಲ್ಲಿ ನಿರ್ದೇಶಕರು ಮಾಡಿಲ್ಲ. ಅದರ ಬದಲಾಗಿ ಬಹಳ ಸೊಗಸಾಗಿ ದೈವ ದರ್ಶನ ಮಾಡಿಸಿದ್ದಾರೆ. ಅದು ಹೇಗೆ ಸಾಧ್ಯವಾಗಿದೆ ಎಂಬುದನ್ನು ನೋಡಬೇಕಾದರೆ ನೀವು ಸಿನೆಮಾ ನೋಡಲೇಬೇಕು. ಸಿನಿಮಾದ ಮೊದಲರ್ಧ ಕೊಂಚ ಬೋರ್ ಹೊಡೆಸಿದರೂ ಇಂಟರ್ ವಲ್ ಬಳಿಕ ನಮ್ಮಲ್ಲಿ ಏನೋ ಕಾತುರತೆ ಮೂಡಿಸುತ್ತದೆ. ಮುಂದೇನಾಗಬಹುದು ಎಂಬ ಕುತೂಹಲವನ್ನು ಸಿನಿಮಾ ಉಳಿಸಿಕೊಂಡು ಹೋಗುತ್ತದೆ. ತುಳುನಾಡಿನ ಜನರು…
ರೋಟರಿ ಜಿಲ್ಲೆ 3181 ರ ವಲಯ -1 ರ ನೂತನ ಸಹಾಯಕ ಗವರ್ನರ್ ಆಗಿ ಪತ್ರಕರ್ತ, ರಂಗ ಸಂಘಟಕ ಶರತ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಇವರು ರಂಗ ನಟ, ಯಕ್ಷಗಾನ ಕಲಾವಿದ, 26 ವರ್ಷಗಳಿಂದ ಕಿನ್ನಿಗೋಳಿಯ ವಿಜಯಾ ಕಲಾವಿದರು ನಾಟಕ ಸಂಸ್ಥೆಯನ್ನು ಮುನ್ನಡೆಸುತ್ತಿದ್ದು ರಂಗಭೂಮಿ ಸಂಘಟನೆಗೆ 2005 ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ಹುಟ್ಟೂರು ಸಂಕಲಕರಿಯ ವಿಜಯಾ ಯುವಕ ಸಂಘ, ಸಂಕಲಕರಿಯ ಹಾಲು ಉತ್ಪಾದಕರ ಸಂಘ, ಮುಲ್ಕಿ ವಲಯ ಪತ್ರಕರ್ತರ ಸಂಘ, ಕಿನ್ನಿಗೋಳಿಯ ಸಾರ್ವಜನಿಕ ಗಣೇಶೋತ್ಸವ ಸಮಿತಿ, ಐಕಳ ಪೊಂಪೈ ಕಾಲೇಜು ಹಳೆ ವಿದ್ಯಾರ್ಥಿ ಸಂಘ, ಮುಂಡ್ಕೂರು ವಿದ್ಯಾವರ್ಧಕ ಪದವಿಪೂರ್ವ ಕಾಲೇಜು ಹಳೆ ವಿದ್ಯಾರ್ಥಿ ಸಂಘ, ಶಿರ್ವ ಎಂ.ಎಸ್.ಆರ್.ಎಸ್ ಕಾಲೇಜು ವಿದ್ಯಾರ್ಥಿ ಸಂಘ, ಕಿನ್ನಿಗೋಳಿ ರೋಟರಾಕ್ಟ್ ಗಳಲ್ಲಿ ಅಧ್ಯಕ್ಷರಾಗಿ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿ, ಕಿನ್ನಿಗೋಳಿ ರೋಟರಿ ಆಂಗ್ಲ ಮಾಧ್ಯಮ ಶಾಲೆಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಕಿನ್ನಿಗೋಳಿ ರೋಟರಿಯ ಶತಮಾನೋತ್ಸವ ಸಾಲಿನ ವಲಯ ಕಾರ್ಯದರ್ಶಿಯಾಗಿ…
ಐಲೇಸಾ ದಿ ವಾಯ್ಸ್ ಆಫ್ ಓಶಿಯನ್ ವತಿಯಿಂದ ‘ನಂದಾದೀಪ ಸಂದೀಪ’ ವಿಶೇಷ ಕಾರ್ಯಕ್ರಮವು ಜುಲೈ 14 ರಂದು ಬೆಳಗ್ಗೆ 10 ರಿಂದ ಅಪರಾಹ್ನ 1 ರ ವರೆಗೆ ಬೆಂಗಳೂರಿನಲ್ಲಿರುವ ಹುತಾತ್ಮ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಮನೆಯಲ್ಲಿ ನಡೆಯಲಿದೆ. ದೇಶಕ್ಕೋಸ್ಕರ ಬಲಿದಾನಗೈದವರನ್ನು ಸ್ಮರಿಸುವ ಉದ್ದೇಶದಿಂದ ಸಂದೀಪ ನೀನು ನಮ್ಮ ಆತ್ಮಸ್ಥೈರ್ಯದ ನಂದಾದೀಪ ಎಂದು ಆ ಧೀರನ ಮನೆಯಲ್ಲಿ ಹೆತ್ತವರ ಧ್ವನಿಗೆ ನಮ್ಮ ಧ್ವನಿ ಬೆಸೆಯುವ ಕಾರ್ಯಕ್ರಮವನ್ನು ಐಲೇಸಾ ಹಮ್ಮಿಕೊಳ್ಳಲು ಮುಂದಾಗಿದೆ. ಈ ಕಾರ್ಯಕ್ರಮದಲ್ಲಿ ಸೇನೆಯ ನಿವೃತ್ತ ಅಧಿಕಾರಿಗಳಾದ ಅತ್ರಾಡಿ ಸುರೇಶ್ ಹೆಗ್ಡೆ ಮತ್ತು ರಮೇಶ್ ಬಿ. ಪಾಲ್ಗೊಳ್ಳಲಿದ್ದಾರೆ. ಹಿರಿಯ ಸಾಹಿತಿಗಳು, ಮಿಲಿಟರಿಯವರು, ಶ್ರೇಷ್ಠ ಹಾಡುಗಾರರು ಭಾಗವಹಿಸಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಅನಂತ್ ರಾವ್ (9686321393), ಸೂರಿ ಮಾರ್ನಾಡ್ (9324280156), ಶಾಂತಾರಾಮ್ ಶೆಟ್ಟಿ (9916129570) ಅವರನ್ನು ಸಂಪರ್ಕಿಸುವಂತೆ ಟೀಮ್ ಐಲೇಸಾ ವಕ್ತಾರ ಸುರೇಂದ್ರ ಶೆಟ್ಟಿ ಮಾರ್ನಾಡ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಇಡ್ಯಾ ಗೋವಿಂದ ದಾಸ್ ಕಾಲೇಜ್ ಬಳಿಯ ಕೇಶವ ಚೌಟ ಕಂಪೌಂಡ್ ನಿವಾಸಿ ಡಾ. ಜಿ ಮಂಜಯ್ಯ ಶೆಟ್ಟಿ (76) ಅವರು ಜುಲೈ 11 ರಂದು ಬೆಳಿಗ್ಗೆ ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಮೃತರು ಕೃಷಿಕರಾಗಿದ್ದು, ವೈದ್ಯಕೀಯ ಸೇವೆ, ರಾಜಕೀಯ ಸೇವೆ ಮತ್ತು ಇನ್ನಿತರ ಸೇವಾ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಸುರತ್ಕಲ್ ಕರ್ನಾಟಕ ಸೇವಾ ವೃಂದದಲ್ಲಿ ಉಪಾಧ್ಯಕ್ಷರಾಗಿ, ಸುರತ್ಕಲ್ ಬಂಟರ ಸಂಘದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ರಾಜಕೀಯದಲ್ಲಿ ಜನತಾದಳದಲ್ಲಿ ಪಕ್ಷ ಸಂಘಟಿಸಿ ಡಾ. ಜೀವರಾಜ ಆಳ್ಚ, ರಾಮಕೃಷ್ಣ ಹೆಗಡೆ, ರಾಮಯ್ಯ ನಾಯ್ಕ್, ಎಂ ಲೋಕಯ್ಯ ಶೆಟ್ಟಿ ಮೊದಲಾದವರೊಡನೆ ಒಡನಾಟ ಇರಿಸಿಕೊಂಡವರು. ತನ್ನ ತತ್ವ ಸಿದ್ದಾಂತದಲ್ಲಿ ಯಾವತ್ತೂ ರಾಜಿ ಮಾಡಿಕೊಂಡವರಲ್ಲ. ಪ್ರಸ್ತುತ ಸುರತ್ಕಲ್ ಬಂಟರ ಸಂಘದ ನಿರ್ದೇಶಕರಾಗಿ ಸಂಘದ ಚಟುವಟಿಕೆಗಳಲ್ಲಿ ನಿರಂತರ ತನ್ನನ್ನು ತೊಡಗಿಸಿಕೊಂಡಿದ್ದರು. ಡಾ. ಮಂಜಯ್ಯ ಶೆಟ್ಟಿ ಶ್ರೀ ಮಲರಾಯ ಜುಮಾದಿ ಬಂಟ ದೈವಸ್ಥಾನ ಮಲ್ಲೂರು ಇದರ ಒಂದನೇ ಗುತ್ತಿನವರು. ಶ್ರೀ ಈಶ್ವರ ದೇವಸ್ಥಾನ ಮಲ್ಲೂರು ಇದರ…
ಬಂಟ ಸಮಾಜದ ಋಣ ನನ್ನ ಮೇಲಿದೆ. ಈ ನಿಟ್ಟಿನಲ್ಲಿ ನಾನು ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ತಲುಪುವಂತಹ ಸೇವಾ ಕಾರ್ಯಗಳನ್ನು ಮುಂದುರಿಸಿದ್ದೇನೆ. ಪಡುಬಿದ್ರಿ ಬಂಟರ ಸಂಘವು ನನ್ನಲ್ಲಿ ಆದರಾಭಿಮಾನವನ್ನು ಇರಿಸಿರುವುದು ಸಂತಸವನ್ನು ಉಂಟು ಮಾಡಿದೆ ಎಂದು ಬೆಂಗಳೂರಿನ ಎಂಆರ್ ಜಿ ಸಮೂಹ ಸಂಸ್ಥೆಗಳ ಸಂಸ್ಥಾಪಕ, ಆಡಳಿತ ನಿರ್ದೇಶಕ ಡಾ.ಕೆ ಪ್ರಕಾಶ್ ಶೆಟ್ಟಿ ಹೇಳಿದರು. ಅವರು ಜುಲೈ 7 ರಂದು ಮಂಗಳೂರು ವಿವಿ ಪ್ರದಾನಿಸಿದ ಗೌರವ ಡಾಕ್ಟರೇಟ್ ಗಾಗಿ ಡಾ| ಕೆ ಪ್ರಕಾಶ್ ಶೆಟ್ಟಿ ದಂಪತಿಯನ್ನು ಅಭಿನಂದಿಸಲು ಪಡುಬಿದ್ರಿಯಲ್ಲಿ ಆಯೋಜಿಸಲಾಗಿದ್ದ ಸಮ್ಮಾನ ಸಮಾರಂಭದಲ್ಲಿ ಸಮ್ಮಾನವನ್ನು ಸ್ವೀಕರಿಸಿ ಮಾತನಾಡಿದರು. ಸಂಘದ ಸಭಾಂಗಣಕ್ಕೆ ಹಾಗೂ ಭೋಜನ ಗೃಹಕ್ಕೆ ಹವಾನಿಯಂತ್ರಿತ ವಾತಾಯನ ವ್ಯವಸ್ಥೆಯನ್ನು ಭರಿಸಿ ಸದಾ ಸಮಾಜದ ಅಭ್ಯುದಯದ ಕುರಿತಾಗಿ ಚಿಂತನಾ ಶೀಲರಾಗಿರುವ ಡಾ| ಕೆ. ಪ್ರಕಾಶ್ ಶೆಟ್ಟಿ ಅವರಿಗೆ ಮಂಗಳೂರು ವಿ.ವಿ. ಗೌರವ ಡಾಕ್ಟರೇಟ್ ಪ್ರದಾನಿಸಿರುವುದು ಬಂಟ ಸಮಾಜ ಬಾಂಧವರೆಲ್ಲರಿಗೂ ಹೆಮ್ಮೆಯ ವಿಚಾರವಾಗಿದೆ ಎಂದು ಸಂಘದ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು ಹೇಳಿದರು. ಬಂಟ್ಸ್…
ತುಳುಕೂಟ ಉಡುಪಿ ವತಿಯಿಂದ ತುಳು ಭಾಷೆಯ ಪ್ರಪಥಮ ಕಾದಂಬರಿಕಾರ ದಿ. ಎಸ್ ಯು ಪಣಿಯಾಡಿ ಅವರ ಹೆಸರಿನಲ್ಲಿ ನೀಡುವ ಪ್ರಶಸ್ತಿಗೆ ಈ ಸಾಲಿನಲ್ಲಿ ಮಂಗಳೂರಿನ ಕರಂಗಲ್ಪಾಡಿಯ ರೂಪಕಲಾ ಆಳ್ವ ಅವರ “ಪಮ್ಮಕ್ಕೆನ ಪೊರುಂಬಾಟ” ಕೃತಿ ಆಯ್ಕೆಯಾಗಿದೆ. ಪ್ರಶಸ್ತಿಯು 10 ಸಾವಿರ ರೂ ನಗದು ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. ಈ ಬಾರಿ ಸ್ಪರ್ಧೆಗೆ ಬಂದ ಹಸ್ತ ಪ್ರತಿಗಳನ್ನು ತೀರ್ಪುಗಾರರಾದ ಪ್ರೊ. ಮುರಳೀಧರ ಉಪಾಧ್ಯಾಯ ಹಿರಿಯಡಕ, ಸಕು ಪಾಂಗಾಳ ಹಾಗೂ ಪುತ್ತಿಗೆ ಪದ್ಮನಾಭ ರೈ ಅವರನ್ನೊಳಗೊಂಡ ಆಯ್ಕೆ ಸಮಿತಿ ಪರಿಶೀಲಿಸಿ, ಈ ಕೃತಿಯನ್ನು ಆಯ್ಕೆ ಮಾಡಿದೆ. ಪ್ರಶಸ್ತಿ ಪ್ರದಾನ ಸಮಾರಂಭ ಆಗಸ್ಟ್ ನಲ್ಲಿ ನಡೆಯಲಿದೆ ಎಂದು ಪ್ರಶಸ್ತಿಯ ಸಂಚಾಲಕಿ ತಾರಾ ಆಚಾರ್ಯ ಹಾಗೂ ತುಳುಕೂಟದ ಅಧ್ಯಕ್ಷ ಬಿ ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದ್ದಾರೆ.
ಭರತನಾಟ್ಯ ಕಲಾವಿದೆ, ರಂಗಭೂಮಿ ಕಲಾವಿದೆ, ಚಿತ್ರನಟಿ, ಕುಂಚ ಕಲಾವಿದೆ, ವ್ಯಕ್ತಿತ್ವ ವಿಕಸನ ಸಂಪನ್ಮೂಲ ವ್ಯಕ್ತಿ, ನೃತ್ಯ ಸಂಯೋಜಕಿ, ಚಿಣ್ಣರ ಶಿಬಿರ ಸಂಘಟಕಿ ತೃಶಾ ಶೆಟ್ಟಿ ನೀನಾಸಂ ರಂಗ ಶಿಕ್ಷಣ ಕೇಂದ್ರಕ್ಕೆ ಆಯ್ಕೆಯಾಗಿದ್ದಾರೆ. ದಕ್ಷಿಣ ಕನ್ನಡದ ಬಂಟ್ವಾಳ ಮೂಲದ ತೃಶಾ ಶೆಟ್ಟಿಯವರು ದಿನೇಶ್ ಶೆಟ್ಟಿ ಕೊಟ್ಟಿಂಜ ಮತ್ತು ಚಂಚಲಾ ಅವರ ಪುತ್ರಿ. ಬಂಟ್ವಾಳದ ಹೋಲಿ ಫ್ಯಾಮಿಲಿ ಸ್ಕೂಲ್ನಲ್ಲಿ ಪ್ರಾಥಮಿಕ ಶಿಕ್ಷಣ ಪಡೆದಿರುವ ತೃಶಾ ಅವರು, ಸಂತ ಆಗ್ನೆಸ್ ಕಾಲೇಜು (ಸ್ವಾಯತ್ತ) ಮಂಗಳೂರು ಇಲ್ಲಿ ಪದವಿ ಶಿಕ್ಷಣವನ್ನು ಪಡೆದಿದ್ದಾರೆ. ಭರತನಾಟ್ಯ ಕಲೆಯಲ್ಲಿ ವಿಶೇಷ ಪ್ರಾವೀಣ್ಯತೆ ಪಡೆದಿರುವ ಅವರು ಜನಪದ ನೃತ್ಯ ಹಾಗೂ ಸಮಕಾಲೀನ ನೃತ್ಯ ಪ್ರಕಾರಗಳಲ್ಲಿ ಪ್ರಭುತ್ವ ಹೊಂದಿದ್ದಾರೆ. ಕರಾವಳಿಯ ಸಮೃದ್ಧ ಗಂಡು ಕಲೆಯಾದ ಯಕ್ಷಗಾನದಲ್ಲೂ ತಮ್ಮ ಕಲಾಸಕ್ತಿಯನ್ನು ವಿಸ್ತರಿಸಿದ್ದಾರೆ. ರಂಗಾಯಣ ಮೈಸೂರು, ರಂಗ ಶಂಕರ ಬೆಂಗಳೂರು, ಶಂಕರ್ನಾಗ್ ಉತ್ಸವ, ವಿದ್ಯಾವರ್ಧಕ ಸಂಘ ಧಾರವಾಡ ಸೇರಿದಂತೆ ಕರ್ನಾಟಕ ವಿವಿಧ ಭಾಗಗಳಲ್ಲಿ ನಡೆದಿರುವ ರಾಷ್ಟ್ರೀಯ ರಂಗೋತ್ಸವಗಳಲ್ಲಿ ಅವರು ತಮ್ಮ ಕಲಾ ನೈಪುಣ್ಯತೆಯನ್ನು ಪ್ರದರ್ಶಿಸಿದ್ದಾರೆ. ‘ವಿಕಾಸ 2022’,…















