Author: admin
ಕನ್ನಡ ಸಂಘ ಬಹರೈನ್ ನ ಅಧ್ಯಕ್ಷರಾದ ಶ್ರೀ ಅಮರನಾಥ ರೈ ಅವರು ಕರ್ನಾಟಕದ ಗೌರವಾನ್ವಿತ ಗೃಹ ಸಚಿವ ಡಾ ಜಿ ಪರಮೇಶ್ವರ ಅವರನ್ನು ಇತ್ತೀಚೆಗೆ ಬೆಂಗಳೂರಿನಲ್ಲಿ ಅವರ ಕಚೇರಿಯಲ್ಲಿ ಭೇಟಿ ಮಾಡಿದರು ಮತ್ತು ಅವರ ಇತ್ತೀಚಿನ ಬಹರೈನ್ ಭೇಟಿಗಾಗಿ ಸಂಘ ಮತ್ತು ಸದಸ್ಯರ ಕೃತಜ್ಞತೆಯನ್ನು ತಿಳಿಸಿದರು. ಸಚಿವರ ಬಹರೈನ್ ಭೇಟಿಯ ಸಂದರ್ಭದಲ್ಲಿ ಪ್ರಸ್ತಾಪಿಸಲಾದ ಯೋಜನೆಗಳನ್ನು ಅವರು ಚರ್ಚಿಸಿದರು. ಬಹರೈನ್ ನಲ್ಲಿ ಕನ್ನಡ ಮತ್ತು ಕರ್ನಾಟಕದ ಸಂಸ್ಕೃತಿಯನ್ನು ಉಳಿಸುವ ಮತ್ತು ಪ್ರಚಾರ ಮಾಡುವಲ್ಲಿ ಸಂಘ ಮತ್ತು ಸದಸ್ಯರ ಪ್ರಯತ್ನಗಳಿಗೆ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು ಮತ್ತು ಸಂಘದ ಚಟುವಟಿಕೆಗಳಿಗೆ ತಮ್ಮ ಬೆಂಬಲದ ಭರವಸೆ ನೀಡಿದರು. ಭೇಟಿ ಸಂದರ್ಭದಲ್ಲಿ ಮಲ್ಲಾ ರೆಡ್ಡಿ ಹೆಲ್ತ್ ಸಿಟಿಯ ಪ್ರೊ ವೈಸ್ ಛಾನ್ಸಲರ್ ಡಾ ಪಿ ಬಾಲಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು.
ಬಂಟರ ಚಾವಡಿ ಪರ್ಕಳ (ರಿ) ಇದರ ಮುಂದಾಳತ್ವದಲ್ಲಿ ಮುಂಬಯಿಯ ಆಲ್ ಕಾರ್ಗೋ ಲಾಜಿಸ್ಟಿಕ್ ನವರು ಕೊಡಮಾಡುವ ದಿಶಾ ವಿದ್ಯಾರ್ಥಿವೇತನ ಸಮಾರಂಭವು ಪರ್ಕಳ ಸುರಕ್ಷಾ ಸಭಾಭವನದಲ್ಲಿ ಸಂಘದ ಅಧ್ಯಕ್ಷರಾದ ಶ್ರೀ ತಾರಾನಾಥ ಹೆಗ್ಡಯವರ ಅಧ್ಯಕ್ಷತೆಯಲ್ಲಿ ಬಹಳ ಅಚ್ಚುಕಟ್ಟಾಗಿ ಜರಗಿತು. ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ, ಉಡುಪಿ ಶಾಸಕರಾದ ಶ್ರೀ ಯಶ್ಪಾಲ್ ಸುವರ್ಣ ಮತ್ತು ಶ್ರೀ ಸವಿಸ್ತಾರ ಆಳ್ವ (senior Executive, Allcargo Logistics Ltd) ಉಪಸ್ಥಿತರಿದ್ದರು. ವಿವಿಧ ಶಾಲೆಯ 350 ವಿದ್ಯಾರ್ಥಿಗಳಿಗೆ ಸುಮಾರು 13,00,000 ರೂಪಾಯಿ ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು. ವೇದಿಕೆಯಲ್ಲಿ ಸಂಘದ ಗೌರವ ಅಧ್ಯಕ್ಷ ಶ್ರೀ ಜಯರಾಜ್ ಹೆಗ್ಡೆ, ಕಾರ್ಯಧ್ಯಕ್ಷ ಶ್ರೀ ವಸಂತ ಶೆಟ್ಟಿ ಚೆನ್ನಿಬೆಟ್ಟು, ಪ್ರಧಾನ ಕಾರ್ಯದರ್ಶಿ ಶ್ರೀ ವಸಂತ ಶೆಟ್ಟಿ ಹಿರೇಬೆಟ್ಟು, ಕೋಶಾಧಿಕಾರಿ ಶ್ರೀ ದಿನಕರ ಶೆಟ್ಟಿ ಹೆರ್ಗ, ಸಂಘಟನಾ ಕಾರ್ಯದರ್ಶಿ ಶುಭಕರ ಶೆಟ್ಟಿ ಕಬ್ಯಾಡಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಯವರು ವಿದ್ಯಾರ್ಥಿಗಳಿಂದ ‘ನಶಮುಕ್ತ ಭಾರತ’ ಪ್ರತಿಜ್ಞೆಯನ್ನು ಮಾಡಿಸಿದರು. ಕೋಶಾಧಿಕಾರಿ ದಿನಕರ ಶೆಟ್ಟಿ ಹೆರ್ಗ ಸ್ವಾಗತಿಸಿದರು. ಪ್ರಧಾನ…
ಭಾರತದ ಭವ್ಯ ಪರಂಪರೆ ಬಿಂಬಿಸುವ ರಾಷ್ಟ್ರಧ್ವಜ ಹಾರಿಸುವ ನಿಟ್ಟಿನಲ್ಲಿ ಜನಸಾಮಾನ್ಯರಲ್ಲಿ ದೇಶ ಪ್ರೇಮದ ಭಾವಾನಾತ್ಮಕ ಜಾಗೃತಿ ಮತ್ತು ಐಕತ್ಯೆಯ ಪ್ರಾಮಾಣಿಕ ಸದ್ದುದೇಶ ಮೂಡಿಸಲು ಸ್ವಾತಂತ್ರ್ಯ ಅಮೃತ ಮಹೋತ್ಸವ ನಿಮಿತ್ತ ಕಳೆದ ವರ್ಷ ಪ್ರಾರಂಭವಾದ ಮನೆ ಮನೆಯಲ್ಲಿ ತ್ರಿವರ್ಣ ಧ್ವಜ ಅಭಿಯಾನವು ಈ ವರ್ಷದ ಅಗಸ್ಟ್ 13 ರಿಂದ 15 ರ ವರೆಗೆ ಪ್ರತಿ ಮನೆ ಮನೆಯಲ್ಲಿ ರಾಷ್ಟ್ರಧ್ವಜ (ಹರ್ ಘರ್ ತಿರಂಗಾ )ಹಾರಾಡಲಿದೆ. ದೇಶದ ನಾಗರಿಕರು ಸ್ವಾತಂತ್ರ್ಯಕ್ಕಾಗಿ ಯೋಧರ ತ್ಯಾಗ ಮತ್ತು ಬಲಿಧಾನ ಮಾಡಿದ ಮಹನೀಯರನ್ನು ಸ್ಮರಿಸುತ್ತಾ, ದೇಶದ ಸಮಗ್ರತೆ, ಸಾಮರಸ್ಯ ಸಮಾನತೆಗಳನ್ನು ಹಾಗೂ ರಾಷ್ಟ್ರಧ್ವಜದಲ್ಲಿರುವ ಚಕ್ರ ಮತ್ತು ಬಣ್ಣಗಳು ತ್ಯಾಗ ಧೈರ್ಯ, ಸತ್ಯ, ಶಾಂತಿ, ಸಮೃದ್ದಿ, ಪ್ರಗತಿ ಮತ್ತು ಪ್ರಕೃತಿ ಇವುಗಳ ಮಹತ್ವದ ಅರಿವಿನ್ನೊಂದಿಗೆ ರಾಷ್ಟ್ರಪ್ರೇಮ ಅಭಿವ್ಯಕ್ತಗೊಳಿಸಲು ಹರ್ ಘರ್ ತಿರಂಗಾ ಅಭಿಯಾನ ಈ ವರ್ಷವೂ ಆಚರಣೆಯಲ್ಲಿದೆ. ಈ ಪರಿಕಲ್ಪನೆಯ ಬಗ್ಗೆ ಕೇಂದ್ರ ಸರಕಾರಕ್ಕೆ ಸಲಹೆ ನೀಡಿದವರು ಹುಬ್ಬಳ್ಳಿ ನಿವಾಸಿ ದೀಪಕ್ ಪರಶುರಾಮ ಬೋಚಗೇರಿ ಎಂಬುದು ಕನ್ನಡಿಗರಿಗೆ ಹೆಮ್ಮೆ.…
ಬೈಂದೂರು ಬಂಟರ ಯಾನೆ ನಾಡವರ ಸಂಘದ ವತಿಯಿಂದ ಅಭಿನಂದನೆ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಬೈಂದೂರು ಯಡ್ತರೆ ಬಿ. ಜಗನ್ನಾಥ ಶೆಟ್ಟಿ ಸಭಾಭವನದಲ್ಲಿ ನಡೆಯಿತು. ಬಸ್ರೂರು ಮಹಾಲಿಂಗೇಶ್ವರ ದೇವಸ್ಥಾನದ ಧರ್ಮದರ್ಶಿ ಬಿ. ಅಪ್ಪಣ್ಣ ಹೆಗ್ಡೆ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿದರು. ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರಿಗೆ ಬೈಂದೂರು ಬಂಟರ ಯಾನೆ ನಾಡವರ ಸಂಘದ ವತಿಯಿಂದ ಸಮ್ಮಾನಿಸಲಾಯಿತು. ಸಮ್ಮಾನ ಸ್ವೀಕರಿಸಿ ಸಂಘದ ಕಾರ್ಯ ಚಟುವಟಿಕೆಗಳ ಕುರಿತು ಶಾಸಕರು ಮೆಚ್ಚುಗೆ ವ್ಯಕ್ತಪಡಿಸಿದರು. ಬೈಂದೂರು ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷ ಎಚ್. ವಸಂತ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಕೊಲ್ಲೂರು ದೇಗುಲದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಕೆರಾಡಿ ಚಂದ್ರಶೇಖರ್ ಶೆಟ್ಟಿ, ಕುಂದಾಪುರ ತಾಲೂಕು ಯುವ ಬಂಟರ ಸಂಘದ ಅಧ್ಯಕ್ಷ ಅಂಪಾರು ಡಾ. ನಿತ್ಯಾನಂದ ಶೆಟ್ಟಿ, ಬೈಂದೂರು ಬಂಟರ ಯಾನೆ ನಾಡವರ ಸಂಘದ ಗೌರವಾಧ್ಯಕ್ಷ ಚುಚ್ಚಿ ನಾರಾಯಣ ಶೆಟ್ಟಿ, ಸಂಘದ ಗೌರವಾಧ್ಯಕ್ಷ ಕೆ. ವಿಠ್ಠಲ ಶೆಟ್ಟಿ, ನಾಕಟ್ಟೆ ಜಗನ್ನಾಥ ಶೆಟ್ಟಿ, ಸಂಘದ…
ಕಂಬಳ ಕ್ಷೇತ್ರದ ತಾರಾ ಓಟಗಾರ ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ ಅವರು ಮತ್ತೆ ಮಂಗಳೂರು ಕಂಬಳದಲ್ಲಿ ತಮ್ಮ ಪಾರಪತ್ಯ ಮೆರೆದಿದ್ದಾರೆ. ಮಂಗಳೂರು ಕಂಬಳದಲ್ಲಿ ಸತತ ಆರನೇ ಬಾರಿ ಫೈನಲ್ ಪ್ರವೇಶ ಮಾಡಿದ ನಿಶಾಂತ್ ಶೆಟ್ಟಿ ಸಾಧನೆ ಮೆರೆದರು. ಈ ಬಾರಿ ನಿಶಾಂತ್ ಅವರು ಕೂಳೂರು ಪೊಯ್ಯೆಲು ಪಿ.ಆರ್.ಶೆಟ್ಟಿ ಅವರ ಕೋಣಗಳನ್ನು ಓಡಿಸಿ ಪ್ರಥಮ ಸ್ಥಾನ ಬಾಚಿಕೊಂಡರು.ಇದು ಆರನೇ ವರ್ಷದ ಮಂಗಳೂರು ರಾಮ – ಲಕ್ಷ್ಮಣ ಕಂಬಳ ಕೂಟವಾಗಿದ್ದು, ಆರು ವರ್ಷವೂ ನಿಶಾಂತ್ ಶೆಟ್ಟಿ ಅವರು ಪದಕ ಗೆದ್ದಿರುವುದು ಹೆಚ್ಚುಗಾರಿಕೆ. ಬಂಗ್ರಕೂಳೂರಿನಲ್ಲಿ ನಡೆಯುವ ಕೂಟದಲ್ಲಿ ಅವರು ಮೂರು ಪ್ರಥಮ, ಮೂರು ದ್ವಿತೀಯ ಪ್ರಶಸ್ತಿ ಪಡೆದಿದ್ದಾರೆ. ಮಂಗಳೂರು “ರಾಮ – ಲಕ್ಷ್ಮಣ” ಜೋಡುಕರೆ ಕಂಬಳ ಕೂಟದಲ್ಲಿ ಒಟ್ಟು 159 ಜೊತೆ ಕೋಣಗಳು ಭಾಗವಹಿಸಿದ್ದವು. ಕನೆಹಲಗೆ ವಿಭಾಗದಲ್ಲಿ 5 ಜೊತೆ, ಅಡ್ಡಹಲಗೆ ವಿಭಾಗದಲ್ಲಿ 9 ಜೊತೆ, ಹಗ್ಗ ಹಿರಿಯ ವಿಭಾಗದಲ್ಲಿ 19 ಜೊತೆ, ನೇಗಿಲು ಹಿರಿಯ ವಿಭಾಗದಲ್ಲಿ 29 ಜೊತೆ, ಹಗ್ಗ ಕಿರಿಯ ವಿಭಾಗದಲ್ಲಿ 19…
ಮುಂಬಯಿ ಕರ್ನಾಟಕ ಸಂಘ ಮುಂಬಯಿ ; 86 ಮತ್ತು 87ನೇ ವಾರ್ಷಿಕ ಮಹಾಸಭೆ ಸಾಂಸ್ಕೃತಿಕ ಸಮುಚ್ಚಯದಿಂದ ಸಂಘದ ಗತವೈಭವ ಮರುಕಳಿಸಲಿದೆ : ಎಂ.ಎಂ.ಕೋರಿ
ಮುಂಬಯಿ (ಆರ್ ಬಿ ಐ), ಜು.30: ಮುಂಬಯಿ ಕರ್ನಾಟಕ ಸಂಘ, ಮುಂಬಯಿ ಇದರ 86 ಮತ್ತು 87ನೇ ವಾರ್ಷಿಕ ಮಹಾಸಭೆಯು ಇಂದಿಲ್ಲಿ ಶನಿವಾರ ಸಂಜೆ ಮಾಟುಂಗಾ ಪೂರ್ವದಲ್ಲಿನ ಮೈಸೂರು ಅಸೋಸಿಯೇಶನ್ನ ಕಿರು ಸಭಾಗೃಹದಲ್ಲಿ ಸಂಘದ ಅಧ್ಯಕ್ಷ ಮನೋಹರ್ ಎಂ ಕೋರಿ ಇವರ ಅಧ್ಯಕ್ಷತೆಯಲ್ಲಿ ಜರುಗಿತು. 1933ರಲ್ಲಿ ಸ್ಥಾಪಿತ ಹೊರನಾಡ ಕನ್ನಡಿಗರ ಪ್ರಾತಿನಿಧಿಕ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ 89ರ ಸೇವಾವಧಿಯ ಹಿರಿಯ ಸಂಸ್ಥೆ sಸದ್ಯ 7 ಸಂಘ ಸಂಸ್ಥೆಗಳ ಸದಸ್ಯತ್ವವುಳ್ಳ, 45 ಮಹಾ ಪೋಷಕರು , 37 ಪೋಷಕರು, 3401 ಅಜೀವ ಸದಸ್ಯರು ಹೊಂದಿರುವ ಹೊರನಾಡ ಕನ್ನಡಿಗರ ಹಿರಿಯ ಸಂಸ್ಥೆಯಾಗಿದೆ. ಮಹಾರಾಷ್ಟ್ರದ ಬಹುಭಾಷಿಕ ನೆಲದಲ್ಲಿ ಕನ್ನಡಿಗರು, ಕನ್ನಡ-ಮರಾಠಿ ಭಾಷಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಸೌಹಾರ್ದತೆಯನ್ನು ಕಾಪಾಡಿಕೊಂಡು ಬಂದಿರುವ ಹಿರಿಯ ಮತ್ತು ಪ್ರತಿಷ್ಠಿತ ಸಂಸ್ಥೆಯಾಗಿದೆ ಎಂದು ಮನೋಹರ್ ಎಂ.ಕೋರಿ ಅಧ್ಯಕ್ಷೀಯ ಭಾಷಣವನ್ನುದ್ದೇಶಿಸಿ ತಿಳಿಸಿದರು. ಕೊರೋನಾ ಪಿಡುಗುವಿನಿಂದಾಗಿ ಸಂಘದ ಸಾಂಸ್ಕೃತಿಕ ಸಮುಚ್ಚಯ ನಿರ್ಮಾಣ ಕೆಲಸ ಸಾಕಷ್ಟು ತೊಂದರೆಗಳನ್ನು ಎದುರಿಸಬೇಕಾಯಿತು. ಆದರೂ ನಿರ್ಮಾಣ ಕೆಲಸ…
ಬ್ಯಾಂಕಿಂಗ್ ಉದ್ಯಮದ ಉಗಮ ಸ್ಥಾನ, ತೊಟ್ಟಿಲು, ತವರೂರು ಎಂದೇ ಖ್ಯಾತಿ ಪಡೆದಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಬ್ಯಾಂಕಿಂಗ್ ದಿಗ್ಗಜರುಗಳಲ್ಲಿ ಮೂಲ್ಕಿ ಸುಂದರರಾಮ ಶೆಟ್ಟಿ ಅವರ ಹೆಸರು ಅವಿಸ್ಮರಣೀಯ. ಒಬ್ಬ ವ್ಯಕ್ತಿ ಸಮಾಜಕ್ಕೆ ಸಲ್ಲಿಸಿದ ಮಹತ್ವದ ಸೇವೆಯನ್ನು ಮುಂದಿನ ಜನಾಂಗ ನೆನಪಿನಲ್ಲಿಟ್ಟುಕೊಳ್ಳಬೇಕು. ವೈಜ್ಞಾನಿಕವಾಗಿಯೂ ಇದೊಂದು ಪ್ರಬುದ್ಧ ಸಿದ್ಧಾಂತವೆಂದರೂ ತಪ್ಪಾಗಲಾರದು. ಸಮಸ್ತ ಬಂಟ ಸಮಾಜ ಅವರನ್ನು ಸ್ಮರಿಸುವುದು ನಿಜಕ್ಕೂ ಔಚಿತ್ಯಪೂರ್ಣ. 1962 ರಿಂದ 1979ರವರೆಗೆ ವಿಜಯ ಬ್ಯಾಂಕ್ನ ಅಧ್ಯಕ್ಷರಾಗಿ ಅನೇಕ ಸಾಧನೆಗಳನ್ನು ಮಾಡಿ ಬ್ಯಾಂಕ್ಗೆ ಭದ್ರ ಬುನಾದಿಯನ್ನು ಹಾಕಿಕೊಟ್ಟ ಮಹಾನ್ ಚೇತನ. ಇಂದು ವಿಜಯ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ ದೊಂದಿಗೆ ವಿಲೀನವಾದರೂ ಸುಂದರಾಮ ಶೆಟ್ಟಿ ಹೆಸರು ಬ್ಯಾಂಕ್ನೊಂದಿಗೆ ಅಚ್ಚಳಿಯದೇ ಉಳಿದಿದೆ. ರಾಜಮರ್ಜಿಯ ಸಮೃದ್ಧ ಮನೆತನದಲ್ಲಿ ಹುಟ್ಟಿದರೂ ಕೆಳವರ್ಗದ ಜನರ ನೋವು ನಲಿವುಗಳಿಗೆ ಸ್ಪಂದಿಸುವ ಹೃದಯ ಸುಂದರರಾಮ ಶೆಟ್ಟಿ ಅವರಿಗಿತ್ತು. ಅವರಿಗೆ ಬ್ಯಾಂಕ್ನ ಲಾಭವನ್ನು ಹೆಚ್ಚಿಸುವುದೊಂದೇ ಉದ್ಯಮದ ಉದ್ದೇಶವಾಗಿರಲಿಲ್ಲ. ಉದ್ಯಮವು ಸಮಾಜದ ಅನೇಕರಿಗೆ ಉದ್ಯೋಗಾವಕಾಶಗಳನ್ನು ನೀಡುವುದರೊಂದಿಗೆ ಸಾಮಾಜಿಕ ಹಿತಕ್ಕಾಗಿ, ಲೋಕ ಕಲ್ಯಾಣಕ್ಕಾಗಿ ಸ್ಥಾಪಿಸಲ್ಪಡಬೇಕು…
ಚುಕ್ಕಿ ಸಂಕುಲ ಆಯೋಜಿಸಿದ ಡಾ. ಕರುಣಾಕರ ಶೆಟ್ಟಿ ಪಣಿಯೂರು (10 ಕೃತಿಗಳು), ಪಾಂಗಾಳ ವಿಶ್ವನಾಥ್ ಶೆಟ್ಟಿ (3 ಕೃತಿಗಳು) ಹಾಗೂ ಶ್ರುತಿ ಅಭಿಷೇಕ್ ಶೆಟ್ಟಿ (1 ಕೃತಿ) ಇವರ ಒಟ್ಟು14 ಕೃತಿಗಳು ಡಿಸೆಂಬರ್ 30 ರಂದು ಥಾಣೆ ಪೂರ್ವದ ವುಡ್ ಲ್ಯಾಂಡ್ ರೆಟ್ರೀಟ್ ನಲ್ಲಿ ಬಿಡುಗಡೆಗೊಂಡವು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉದ್ಯಮಿ ಚಂದ್ರಹಾಸ್ ಶೆಟ್ಟಿ ವಹಿಸಿದ್ದರು. ಗೌರವ ಅತಿಥಿಗಳಾಗಿ ಆನಂದ್ ಶೆಟ್ಟಿ ಎಕ್ಕಾರು, ಡಿ. ಜಿ. ಬೋಳಾರ್ ಹಾಗೂ ನ್ಯಾಯವಾದಿ ಪದ್ಮನಾಭ ಶೆಟ್ಟಿ ಭಾಗವಹಿಸಿದ್ದರು. ಮುಂಬಯಿಯಲ್ಲಿ ಒಂದೇ ವೇದಿಕೆಯಲ್ಲಿ 14 ಕೃತಿಗಳು ಬಿಡುಗಡೆಗೊಳ್ಳುತ್ತಿರುವುದು ಮುಂಬಯಿ ಸಾಹಿತ್ಯ ಲೋಕಕ್ಕೆ ಒಂದು ಹೆಮ್ಮೆಯ ಸಂಗತಿ. ಕೃತಿಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಚಂದ್ರಹಾಸ ಶೆಟ್ಟಿ ಅವರು ಸಾಹಿತ್ಯ ಲೋಕ ಒಂದು ಸುಂದರ ಲೋಕ. ಸಾಹಿತಿ ತನ್ನ ಅನುಭವವನ್ನು ಅಕ್ಷರ ರೂಪದಲ್ಲಿ ಲೋಕಕ್ಕೆ ಉಣಬಡಿಸುತ್ತಾನೆ. ಆಧುನಿಕ ಯುಗದಲ್ಲಿ ಸಾಹಿತಿಗಳ ಜವಾಬ್ದಾರಿ ದೊಡ್ಡದು ಎಂದು ಅಭಿಪ್ರಾಯಪಟ್ಟರು. ಕವಿಗಳು ಸಮಾಜವನ್ನು ಸುಧಾರಿಸುವವರು ಎಂಬ ಅನಿಸಿಕೆಯನ್ನು ಡಿ. ಜಿ. ಬೋಳಾರ್ ಅವರು ಹಂಚಿಕೊಂಡರು.…
ಇಂದು ಜನರು ರೋಗ ಮುಕ್ತರಾಗಲು ಅಲೋಪಥಿ, ಆಯುರ್ವೇದ, ಹೋಮಿಯೋಪಥಿ ಹೀಗೆ ಹಲವಾರು ವೈದ್ಯಕೀಯ ಮತ್ತು ಚಿಕಿತ್ಸಾ ಪದ್ಧತಿಗಳನ್ನು ಅನುಸರಿಸುತ್ತಿದ್ದಾರೆ. ಇವುಗಳಲ್ಲಿ ಪ್ರಕೃತಿ ಚಿಕಿತ್ಸೆ ಅಥವಾ ನ್ಯಾಚುರೋಪಥಿ ಕೂಡ ಒಂದು. ಮಾನವನು ತನ್ನ ಜೀವನದ ಭೌತಿಕ, ಮಾನಸಿಕ, ನೈತಿಕ ಮತ್ತು ಆಧ್ಯಾತ್ಮಿಕ ಆಯಾಮಗಳಲ್ಲಿ ನಿಸರ್ಗದ ರಚನಾತ್ಮಕ ನಿಯಮಗಳೊಂದಿಗೆ ಸಾಮರಸ್ಯವನ್ನು ಇರಿಸಿಕೊಂಡು ಚಿಕಿತ್ಸೆ ನೀಡುವ ಪದ್ಧತಿಯೇ ಪ್ರಕೃತಿ ಚಿಕಿತ್ಸೆ. ಇದು ಆರೋಗ್ಯಕರ ಜೀವನಶೈಲಿಯ ಬಗ್ಗೆ ಶಿಕ್ಷಣ ನೀಡುವ ಮಾರ್ಗವಾಗಿದೆ. ಆರೋಗ್ಯಕರ ಆಹಾರ, ಶುದ್ಧ ನೀರು, ವ್ಯಾಯಾಮ, ಉಪವಾಸ, ಸೂರ್ಯನ ಬೆಳಕು ಮತ್ತು ಒತ್ತಡ ನಿರ್ವಹಣೆ ಪ್ರಕೃತಿ ಚಿಕಿತ್ಸೆಯ ಮೂಲ ಆಧಾರ ಸ್ತಂಭಗಳಾಗಿವೆ. ನಿಸರ್ಗವೇ ಶ್ರೇಷ್ಠ ಚಿಕಿತ್ಸಕ ಎಂಬ ಅಂಶವೇ ಪ್ರಕೃತಿ ಚಿಕಿತ್ಸೆಯಲ್ಲಿ ಪ್ರಧಾನವಾಗಿದೆ. ಈ ಚಿಕಿತ್ಸಾ ಪದ್ಧತಿಯಲ್ಲಿ ಆಹಾರವೇ ಔಷಧವಾಗಿದ್ದು, ಹೊರಗಿನ ಯಾವುದೇ ಔಷಧಗಳನ್ನು ಬಳಸುವುದಿಲ್ಲ. ಇದೊಂದು ನೈಸರ್ಗಿಕ ಚಿಕಿತ್ಸಾ ವ್ಯವಸ್ಥೆಯಾಗಿದ್ದು ಇದರಲ್ಲಿ ಯಾವುದೇ ರಾಸಾಯನಿಕಜನ್ಯ ಔಷಧಗಳನ್ನು ಬಳಸಲಾಗುವುದಿಲ್ಲ. ಬದಲಾಗಿ ಈ ವಿಶಿಷ್ಟ ಚಿಕಿತ್ಸಾ ವಿಧಾನವು ದೇಹವನ್ನು ಒಳಗಿನಿಂದ ಬಲಪಡಿಸುವುದು, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದು,…
ಮಹಿಳಾ ವೇದಿಕೆ ಬಂಟರ ಸಂಘ ಸುರತ್ಕಲ್ ಇದರ ಆಶ್ರಯದಲ್ಲಿ ಅಕ್ಟೋಬರ್ 6 ರಿಂದ 8 ರ ವರೆಗೆ ಮೂರು ದಿನಗಳ ಕಾಲ ಸುರತ್ಕಲ್ ಬಂಟರ ಭವನದಲ್ಲಿ ನಡೆಯುವ ಸೀರೆ, ಆಭರಣಗಳ ಮಾರಾಟ ಮೇಳವನ್ನು ಶ್ರೀಮತಿ ನಿರ್ಮಿತ ಸತೀಶ್ ಶೆಟ್ಟಿ ಪಟ್ಲ ಉದ್ಘಾಟಿಸಿದರು. ಸುರತ್ಕಲ್ ಪರಿಸರದವರಿಗೆ ಇದೊಂದು ಅಪೂರ್ವ ಅವಕಾಶ. ನವನವೀನ ಮಾದರಿಯ ಸೀರೆ, ಸಿದ್ದ ಉಡುಪುಗಳನ್ನು ಖರೀದಿಸುವ ಅವಕಾಶ ಒದಗಿದೆ. ಗ್ರಾಹಕರು ಇದರ ಸದುಪಯೋಗ ಪಡೆಯಬೇಕೆಂದು ನಿರ್ಮಿತ ಸತೀಶ್ ಶೆಟ್ಟಿ ತಿಳಿಸಿದರು. ಮಹಿಳಾ ವೇದಿಕೆಯ ಅಧ್ಯಕ್ಷೆ ಭವ್ಯಾ ಎ ಶೆಟ್ಟಿ ಮಾತನಾಡಿ ಕಳೆದ ಮೂರು ವರ್ಷಗಳಿಂದ ಉಡುಪಿ- ಉದ್ಯಾವರದ ಜಯಲಕ್ಷ್ಮೀ ಸಿಲ್ಕ್ಸ್ ಇವರ ಸೀರೆ ಮತ್ತು ಸಿದ್ದ ಉಡುಪುಗಳನ್ನು ಮಹಿಳಾ ವೇದಿಕೆಯ ಆಶ್ರಯದಲ್ಲಿ ಸುರತ್ಕಲ್ ಬಂಟರ ಭವನದಲ್ಲಿ ಮಾರಾಟ ಮೇಳ ನಡೆದಿದೆ. ಇವರ ಸೀರೆ, ಸಿದ್ದುಉಡುಪುಗಳಿಗೆ ಎಲ್ಲೆಡೆ ಬಹುಬೇಡಿಕೆ ಇದೆ. ಗ್ರಾಹಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸುರತ್ಕಲ್ ಬಂಟರ ಭವನದಲ್ಲಿ ಅಕ್ಟೋಬರ್ 6 ರಿಂದ 8 ರ ವರೆಗೆ ಮಾರಾಟ ಮೇಳದ ವ್ಯವಸ್ಥೆಯನ್ನು…