Author: admin

ಗೌರವಾನ್ವಿತ ಜಿಲ್ಲಾ ಗವರ್ನರ್‌ ಲಯನ್ ಡಾ. ಎಮ್ ಕೆ ಭಟ್ ರವರು ಲಯನ್ ಜಿಲ್ಲಾ ಪ್ರಥಮ ಮಹಿಳೆ, ಅವರ ಪತ್ನಿ ಲಯನ್ ಸವಿತಾ ಎಮ್ ಕೆ ಭಟ್ ರವರೊಂದಿಗೆ ಲಯನ್ಸ್ ಕ್ಲಬ್ ಬನ್ನಾಡಿ ವಡ್ಡರ್ಸೆ ಗೆ ಅಧೀಕೃತ ಭೇಟಿ ನೀಡಿದರು. ಬನ್ನಾಡಿ ಸುಬ್ಬಣ್ಣ ಹೆಗ್ಡೆ ಸಭಾ ಭವನ ದಲ್ಲಿ ಜರುಗಿದ ಕಾರ್ಯಕ್ರಮಕ್ಕೆ, ಲಯನ್ಸ್ ಕ್ಲಬ್ ಬನ್ನಾಡಿ ವಡ್ಡರ್ಸೆಯ ಅಧ್ಯಕ್ಷರಾದ ಲಯನ್ ರಾಜಾರಾಮ್ ಶೆಟ್ಟಿ‌ ಕಲ್ಕಟ್ಟೆ, ಕಾರ್ಯದರ್ಶಿ ಲಯನ್ ಅಜಿತ್ ಶೆಟ್ಟಿ ಕೊತ್ತಾಡಿ ಹಾಗೂ ಕೋಶಾಧಿಕಾರಿ ಲಯನ್ ವಡ್ಡರ್ಸೆ ಬಾಲಕೃಷ್ಣ ಶೆಟ್ಟಿ ಹಾಗೂ ಪದಾಧಿಕಾರಿಗಳು ಹಾಗೂ ಸದಸ್ಯರು ಅವರನ್ನು ಆತ್ಮೀಯವಾಗಿ ಸ್ವಾಗತಿಸಿಕೊಂಡರು. ಲಯನ್ ಜಿಲ್ಲಾ ಗವರ್ನರ್ ಡಾ. ಎಮ್ ಕೆ ಭಟ್ ಲಯನ್ಸ್ ಕ್ಲಬ್ ಬನ್ನಾಡಿ ವಡ್ಡರ್ಸೆಯ B.O.D ಸಭೆ ನಡೆಸಿದರು. ಲಯನ್ ಬನ್ನಾಡಿ ಪ್ರಭಾಕರ್ ಶೆಟ್ಟಿಯವರ ಪ್ರಾರ್ಥನೆ ಮೂಲಕ, ಸಮಯಕ್ಕೆ ಸರಿಯಾಗಿ ಸಭಾ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಲಯನ್ ಜಿಲ್ಲಾ ಪ್ರಥಮ ಮಹಿಳೆ ಲಯನ್ ಸವಿತಾ ಎಮ್ ಕೆ ಭಟ್ ರವರನ್ನು ಶ್ರೀಮತಿ…

Read More

ಪುಣೆ ಬಂಟರ ಸಂಘದ ವಾರ್ಷಿಕ ಸ್ನೇಹಸಮ್ಮಿಲನವು ಜನವರಿ 26 ರಂದು ಸಂಘದ ಓಣಿಮಜಲು ಜಗನ್ನಾಥ ಶೆಟ್ಟಿ ಸಾಂಸ್ಕೃತಿಕ ಬಂಟರ ಭವನದಲ್ಲಿ ನಡೆಯಲಿದ್ದು ಈ ಬಗ್ಗೆ ಚರ್ಚಿಸಲು ಪೂರ್ವಭಾವಿ ಸಭೆಯನ್ನು ಸ್ವಾರ್ಗೆಟ್ ನಲ್ಲಿರುವ ಹೋಟೆಲ್ ಅಣ್ಣಾಚಿ ಚಾವಡಿಯಲ್ಲಿ ನಡೆಸಲಾಯಿತು. ಈ ಸಂದರ್ಭ ಸಭೆಯ ಅಧ್ಯಕ್ಷತೆ ವಹಿಸಿದ್ದ ಪುಣೆ ಬಂಟರ ಸಂಘದ ಅಧ್ಯಕ್ಷರಾದ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು ಬಾಳಿಕೆ ಸ್ವಾಗತಿಸಿ ಮಾತನಾಡಿ ಪ್ರತೀವರ್ಷ ನಮ್ಮ ಸಂಘದ ವಾರ್ಷಿಕ ಸ್ನೇಹ ಸಮ್ಮಿಲನ ಸಮಾರಂಭವು ಜ 26 ಕ್ಕೆ ನಡೆಯುತ್ತಿದ್ದು ಈ ವರ್ಷದ ಕಾರ್ಯಕ್ರಮವನ್ನು ಸ್ಮರಣೀಯವಾಗಿಸುವಲ್ಲಿ ವಿಶೇಷ ರೀತಿಯಲ್ಲಿ ಶಿಸ್ತುಬದ್ಧವಾಗಿ ಆಯೋಜಿಸುವಲ್ಲಿ ನಾವು ಸಾಕಷ್ಟು ಪೂರ್ವತಯಾರಿಯನ್ನು ಮಾಡಬೇಕಾಗಿದೆ. ಈ ವರ್ಷ ಸಂಘದ ಸದಸ್ಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಮನೋರಂಜನಾ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯಲಿರುವ ಈ ಉತ್ಸವದಲ್ಲಿ ಸಮಾಜದ ಗಣ್ಯ ಅತಿಥಿಗಳೂ ಪಾಲ್ಗೊಳ್ಳಲಿದ್ದಾರೆ. ಅಪರಾಹ್ನ 2:30 ರಿಂದ ಕಾರ್ಯಕ್ರಮ ಆರಂಭಗೊಳ್ಳಲಿದ್ದು ಮುಖ್ಯ ಅತಿಥಿಗಳಾಗಿ ಕರ್ನಾಟಕ ಸರಕಾರದ ಮಾಜಿ ಸಚಿವ ರಮಾನಾಥ ರೈ ಆಗಮಿಸಲಿದ್ದಾರೆ. ಗೌರವ…

Read More

ಕರಾವಳಿಯ ತುಳು ಕನ್ನಡಿಗರು ಉದರ ಪೋಷಣೆಗಾಗಿ ಜಗತ್ತಿನ ನಾನಾ ಕಡೆಗಳಲ್ಲಿ ವಲಸೆ ಹೋದರು. ತಾವು ಹೆಜ್ಜೆಯೂರಿದ ಪ್ರತಿಯೊಂದು ಕಡೆಗಳಲ್ಲೂ ತಮ್ಮ ಬದುಕು ಕಟ್ಟಿಕೊಳ್ಳುವ ಮುಂಚೆ ನಾಡಿನ ಸಂಸ್ಕೃತಿ, ಕಲೆ, ಧರ್ಮ, ಭಾಷೆಯನ್ನು ಬೆಳೆಸುವುದಕ್ಕೆ ಮೊದಲ ಪ್ರಾಶಸ್ತ್ಯ ಕೊಟ್ಟರು. ತುಳು ಮಣ್ಣಿನ ಸಂಸ್ಕ್ರತಿಯ ಆರಾಧಕರಾದ ಅವರುಗಳು ತಾವು ನೆಲೆಯೂರಿದ ಸ್ಥಳಗಳಲ್ಲಿ ನಮ್ಮ ಸಂಸ್ಕೃತಿಯನ್ನು ಆ ರಾಜ್ಯದ, ಆ ದೇಶದ ಜನರಿಗೆ ಪರಿಚಯಿಸಿದರು ಮಾತ್ರವಲ್ಲ, ನಮ್ಮ ಕಲೆಯನ್ನು ನಮ್ಮ ಸಂಸ್ಕ್ರತಿಯನ್ನು ಅಲ್ಲಿನವರೂ ಗೌರವಿಸುವಂತೆ ನೋಡಿಕೊಂಡರು. ಜಗದಗಲ ಇಂದು ತುಳುನಾಡಿನ ಸಂಸ್ಕ್ರತಿ ಮತ್ತು ಇಲ್ಲಿನ ಜನರು ರಾರಾಜಿಸುತ್ತಿದ್ದಾರೆ ಎಂದರೆ ಅಲ್ಲಿ ಅವರ ಛಲ, ಪರಿಶ್ರಮ ಎದ್ದು ಕಾಣುತ್ತದೆ.ಹಾಗೆಯೇ ಶತಮಾನದ ಹಿಂದೆ ಮುಂಬಯಿ ನಗರಕ್ಕೆ ಬದುಕನ್ನು ಅರಸಿಕೊಂಡು ಬಂದ ನಮ್ಮವರು ಬೆಳೆದ ಎತ್ತರದ ಕಡೆ ಗಮನ ಹರಿಸಿದರೆ ಸೋಜಿಗವಾಗದೆ ಇರಲಾರದು. ಶ್ರಮ ಸಂಸ್ಕ್ರತಿಯ ಈ ನಗರದಲ್ಲಿ ತುಳುನಾಡಿನ ಸಂಸ್ಕೃತಿ ಇಂದು ನಳನಳಿಸುತ್ತಿದೆ ಅನ್ನುವಾಗ ಆ ನಾಡಿನಿಂದ ಬಂದ ನಾವುಗಳು ಭಾಗ್ಯವಂತರಲ್ಲದೆ ಮತ್ತಿನ್ನೇನು?? ಇಲ್ಲಿ ನೆಲೆಸಿದ ತುಳುವರು ಯಾವತ್ತಿಗೂ…

Read More

ಜಪ್ಪು ಬಂಟರ ಸಂಘ ವಾರ್ಷಿಕ ಮಹಾಸಭೆ ಇತ್ತೀಚಿಗೆ ಎಮ್ಮೆಕೆರೆಯ ಸಭಾಂಗಣದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ರಾಜ್ ಕುಮಾರ್ ಶೆಟ್ಟಿ ಪಿ. ಅಧ್ಯಕ್ಷತೆ ವಹಿಸಿದ್ದರು. ಕೋಶಾಧಿಕಾರಿ ಗೋಪಿನಾಥ್ ಶೆಟ್ಟಿ ವಾರ್ಷಿಕ ವರದಿ ವಾಚಿಸಿದರು. ಕಾರ್ಯದರ್ಶಿ ಸಚ್ಚಿದಾನಂದ ಆಳ್ವ ಸ್ವಾಗತಿಸಿದರು. 2023-24ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯನ್ನು ಚುನಾವಣಾಧಿಕಾರಿ, ಬಂಟರ ಯಾನೆ ನಾಡವರ ಮಾತೃ ಸಂಘದ ಸಂಚಾಲಕ ವಸಂತ ಶೆಟ್ಟಿ ನೆರವೇರಿಸಿದರು. ಸುನಿಲ್ ಶೆಟ್ಟಿ ಮುಳಿಹಿತ್ಲು ಅಧ್ಯಕ್ಷರಾಗಿ ಆಯ್ಕೆಯಾದರು. ಬಾಲಕೃಷ್ಣ ಶೆಟ್ಟಿ, ಸರಿತಾ. ಎಸ್. ಶೆಟ್ಟಿ ಉಪಾಧ್ಯಕ್ಷರು, ನಯನಾ ಪಿ. ಶೆಟ್ಟಿ ಕಾರ್ಯದರ್ಶಿ, ಸಚ್ಚಿದಾನಂದ ಆಳ್ವ ಜತೆ ಕಾರ್ಯದರ್ಶಿ, ಆಶಾ ಜೆ. ರೈ, ಕೆ. ಗೋಪಿನಾಥ್ ಶೆಟ್ಟಿ ಕೋಶಾಧಿಕಾರಿ, ಜಗದೀಶ್ ರೈ, ಬಾಲಮಣಿ ಜೆ. ಶೆಟ್ಟಿ ಕ್ರೀಡಾ ಕಾರ್ಯದರ್ಶಿ, ಪೂರ್ಣಿಮಾ ಎನ್. ಶೆಟ್ಟಿ, ರೇಖಾ ಆರ್ ನಾಯರ್ ಸಾಂಸ್ಕೃತಿಕ ಕಾರ್ಯದರ್ಶಿ, ಲಕ್ಶ್ಮಣ ಶೆಟ್ಟಿ ಗೌರವಾಧ್ಯಕ್ಷ, ಜೆ. ಜೀವನ್ ಶೆಟ್ಟಿ ಆಂತರಿಕ ಲೆಕ್ಕ ಪರಿಶೋಧಕ, ರಾಜ್ ಕುಮಾರ್ ಶೆಟ್ಟಿ ಪಿ, ಕೃಷ್ಣರಾಜ ಸುಲಾಯ, ರಾಜಶೆಟ್ಟಿ, ವಸಂತ…

Read More

ಸುಸರ್ಜಿತ ತಾಲೂಕು ಆಸ್ಪತ್ರೆ, ಇಂಡಸ್ಟ್ರಿ ನಿರ್ಮಾಣ, ನೀರಿನ ಸಮಸ್ಯೆಗೆ ಮುಕ್ತಿ, ಉದ್ಯೋಗಾವಕಾಶ ಸೃಷ್ಟಿ ಜೊತೆಗೆ ಕಂದಾಯ, ಸಬ್‌ ರಿಜಿಸ್ಟರ್‌ ಸೇರಿದಂತೆ ಆಡಳಿತ ವ್ಯವಸ್ಥೆಯನ್ನು ಪಾರದರ್ಶಕತೆ ನೀಡಲು ಕನಸು ಕಂಡಿದ್ದೇವೆ ಅದರಂತೆ ಕೆಲಸ ಮಾಡಲಿದ್ದೇವೆ ಇದಕ್ಕಾಗಿ ಮತದಾರರು ಹೆಚ್ಚು ಅಂತರದಿಂದ ಗೆಲ್ಲಿಸಬೇಕು ಎಂದು ರಾಜ್ಯ ಬಿಜೆಪಿ ಒಬಿಸಿ ಮೋರ್ಚಾದ ಕಾರ್ಯದರ್ಶಿ ಡಾ| ಗೋವಿಂದಬಾಬು ಪೂಜಾರಿ ಹೇಳಿದರು. ಕಾರ್ಯಕರ್ತರಿಗಾಗಿಯೇ ನಾವು ಕಾರ್ಯಕರ್ತರ ಶ್ರಮ ತಿಳಿದಿದೆ ಅವರಿಗಾಗಿ ಜೀವನವೇ ಮೂಡಿಪಾಗಿಡುತ್ತೇವೆ. ಯಾವುದೇ ಸಮಸ್ಯೆಗಳಿದ್ದರು ಬಿಟ್ಟುಕೊಡುವುದೇ ಇಲ್ಲ, ಕ್ಷೇತ್ರದ ಜನಸಾಮಾನ್ಯರು, ತಾಯಿಯಂದಿರು ಮತ ನೀಡುವ ಮೂಲಕ ಸಾಮಾನ್ಯ ವ್ಯಕ್ತಿಯನ್ನು ಕೈ ಬೀಡುವುದಿಲ್ಲ ಎನ್ನುವುದನ್ನು ದೇಶಕ್ಕೆ ಸಾರಿ ಸಾರಿ ಹೇಳುವ ಅವಕಾಶ ನಮ್ಮ ಮುಂದಿದೆ ಎಂದರು. ನಿಮ್ಮೊಂದಿಗೆ ಚರ್ಚಿಸಿ ಅನುದಾನ ವಾರ್ಡ್‌ ಮತ್ತು ಗ್ರಾಮದಲ್ಲಿ ಪಕ್ಷದ ಬಗ್ಗೆ ಪಂ. ಸದಸ್ಯರು, ಕಾರ್ಯಕರ್ತರು ಇಟ್ಟಿರುವ ವಿಶ್ವಾಸವೇ ಗೆಲುವಿಗೆ ಕಾರಣವಾಗಲಿದೆ. ಸಮಗ್ರ ಅಭಿವೃದ್ಧಿ ಸಾಧ್ಯವಾಗಬೇಕಾದರೆ ಪಂ.ಸದಸ್ಯರು, ಕಾರ್ಯಕರ್ತರು ಯೋಚಿಸಿದಾಗ ಮಾತ್ರ ಸಾಧ್ಯವಾಗುತ್ತದೆ. ಯೋಜನೆಗಳು ಏನು ಬರುತ್ತದೆ, ಅನುದಾನಗಳನ್ನು ಎಲ್ಲಿ, ಹೇಗೆ ನೀಡಬೇಕು…

Read More

ಪ್ರತಿ ವರ್ಷದಂತೆ ಪುಣೆ ಕನ್ನಡ ಸಂಘದ ಪುರಂದರದಾಸರ ಕೀರ್ತನೆ ಸ್ಪರ್ಧೆಯು ಸಂಘದ ಕನ್ನಡ ಹೈಸ್ಕೂಲಿನ ದಿ. ಗುಂಡುರಾಜ್ ಎಂ ಶೆಟ್ಟಿ ಮೆಮೋರಿಯಲ್ ಹಾಲ್ ನಲ್ಲಿ ನಡೆಯಿತು. ಸಂಘದ ಅಧ್ಯಕ್ಷರಾದ ಕುಶಾಲ್ ಹೆಗ್ಡೆ, ಉಪಾಧ್ಯಕ್ಷೆ ಇಂದಿರಾ ಸಾಲ್ಯಾನ್ ಉಪಸ್ಥಿತರಿದ್ದು ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಆರಂಭವಾದ ಕಾರ್ಯಕ್ರಮದಲ್ಲಿ,ಮೂರು ವಿಭಾಗಗಳಲ್ಲಿ ಸುಮಾರು 50 ಜನರು ಭಾಗವಹಿಸಿದ್ದರು. ಕನ್ನಡ ಅಲ್ಲದೇ ತೆಲುಗು, ತಮಿಳು ಹಾಗೂ ಮರಾಠಿ ಭಾಷೆಯ ಮಕ್ಕಳು ಭಾಗವಹಿಸಿದ್ದರು. 5 ವರ್ಷದ ಪುಟಾಣಿ ಮಗು ವಿನಿಂದ 76 ವರ್ಷದ ಮಹಿಳೆ ಯ ವರೆಗಿನ ಕನ್ನಡಿಗರು, ತೆಲುಗು, ತಮಿಳು ಹಾಗೂ ಮರಾಠಿ ಭಾಷಿಕರು ದಾಸರ ಪದ ಹಾಡಿ, ಸಂಗೀತಕ್ಕೆ ಭಾಷೆ, ಜಾತಿಯ ಭೇದವಿಲ್ಲ ಎಂದು ತೋರಿಸಿಕೊಟ್ಟರು.ಕನ್ನಡ ಸಂಘದ ಅಧ್ಯಕ್ಷರಾದ ಕುಶಲ ಹೆಗ್ಡೆ ಅವರು ಮಕ್ಕಳ ಹಾಡುಗಳನ್ನು ಕೇಳಿ ಆನಂದಿಸಿದರು. ಸಬ್ ಜೂನಿಯರ್, ಜೂನಿಯರ್ ಹಾಗೂ ಸೀನಿಯರ್ ವಿಭಾಗಗಳಲ್ಲಿ ಪ್ರಥಮ, ದ್ವಿತೀಯ, ತೃತೀಯ ಮತ್ತು ಸಮಾಧಾನಕರ ಬಹುಮಾನಗಳನ್ನು ಇಂದಿರಾ ಸಾಲಿಯಾನ್ ಮತ್ತು ನಿರ್ಣಾಯಕರು ವಿತರಿಸಿದರು.…

Read More

ನಾಲ್ಕು ವರ್ಷದ ಪುಟ್ಟ ಬಾಲೆ ಇವಳು. ಆದರೆ, ಸಾಧನೆಯ ಪಟ್ಟಿ ನೋಡುತ್ತ ಹೋದರೆ, ಎಂತಹ ವಯಸ್ಕರೂ ನಾಚುವಂತಿದೆ. ಸರಿಯಾಗಿ ಹೆಜ್ಜೆ ಇಟ್ಟು ನಡೆಯುವುದೇ ಕಷ್ಟ ಎನ್ನುವ ಈ ವಯಸ್ಸಿನಲ್ಲಿ ಇಲ್ಲಿನ ಶಾರ್ವಿ, ಸಾಧನೆಗಳ ಮೆಟ್ಟಿಲುಗಳನ್ನು ಹತ್ತುತ್ತಲೇ ಇದ್ದಾಳೆ. ಇಂಡಿಯನ್‌ ಬುಕ್‌ ಆಫ್‌ ರಿಕಾರ್ಡ್, ಇಂಡಿಯಾ ಸ್ಟಾರ್‌ ಐಕಾನ್‌ ಕಿಡ್ಸ್ ಅಚೀವ್‌ಮೆಂಟ್ ಅವಾರ್ಡ್‌, ಮಾಜಿಕ್‌ ಬುಕ್‌ ಆಫ್‌ ರಿಕಾರ್ಡ್‌ ಬೆಸ್ಟ್‌ ಅಚೀವರ್ಸ್‌ ಅವಾರ್ಡ್‌, ಜಾಕಿ ಟ್ಯಾಲೆಂಟ್ ಐಕಾನ್‌ ಅವಾರ್ಡ್‌, ಗ್ರ್ಯಾಂಡ್‌ ಏಷ್ಯನ್‌ ಬುಕ್‌ ಆಪ್‌ ವರ್ಲ್ಡ್‌ ರಿಕಾರ್ಡ್‌, ವಂಡರ್‌ ಬಡ್ಡೀಸ್‌ ಗೋಲ್ಡನ್‌ ಐಕಾನ್‌ ಅವಾರ್ಡ್‌, ಕಾರ್ನಿವಲ್ ಫೆಸ್ಟ್ ಇಂಜ್ ಜಿನಿಯಸ್ ಟ್ಯಾಲೆಂಟ್ ಅವಾರ್ಡ್, ಯೂಥಿಸ್ತಾನ್‌ ಮ್ಯಾಥಮ್ಯಾಟಿಕಲ್‌ ಚಾಲೆಂಜ್‌ ಗೋಲ್ಡನ್‌ ಮೆಡಲ್‌ ಹೀಗೆ ಹತ್ತು ಹಲವು ದಾಖಲೆಗಳು ಶಾರ್ವಿ ಹೆಸರಿನಲ್ಲಿ ದಾಖಲಾಗಿವೆ. ಪಂಜುರ್ಲಿ ಗ್ರೂಪ್‌ನ ರವಿಕಾಂತ್‌ ಶೆಟ್ಟಿ ಹಾಗೂ ದಿವ್ಯಶ್ರೀ ಶೆಟ್ಟಿ ದಂಪತಿಯ ಪುತ್ರಿ ಶಾರ್ವಿಗೆ ಸದ್ಯ ನಾಲ್ಕು ವರ್ಷ ವಯಸ್ಸು. ಈಕೆ 10 ಬಣ್ಣಗಳು, 13 ಆಕೃತಿಗಳು, 15 ಕ್ರೀಡೆಗಳು, 26 ಕಾರು…

Read More

ದೇಶದ ಜನರಿಗೆ ಕೊರೋನಾ ಕಂಟಕ, ಚೀನಾದಲ್ಲಿ ಅಟ್ಟಹಾಸ ಮರೆಯುತ್ತಿದೆ ಡೆಡ್ಲಿ ವೈರಸ್…! ಈಗಲೇ ಕಟ್ಟಚ್ಚರ ಮಾಡಿದರೆ ಭಯಾನಕ ಕಾಯಿಲೆಯಿಂದ ಕರ್ನಾಟಕ ಸಕ್ಸಸ್….! ಕರ್ನಾಟಕಕ್ಕೆ ಡೆಡ್ಲಿ ವೈರಸ್ ಭೀತಿ, ಕರ್ನಾಟಕದಲ್ಲಿ ಕಟ್ಟೇಚ್ಚರಕ್ಕೆ ಸಿ.ಎಂ ಬೊಮ್ಮಾಯಿ ಕರೆ…! ಕಡ್ಡಾಯ ಮಾಸ್ಕ್, ರ್‍ಯಾಂಡಮ್ ಸ್ಯಾಂಪಲ್ಗೆ ಸೂಚನೆ…! – ಕೆ .ಸಂತೋಷ ಶೆಟ್ಟಿ, ಮೊಳಹಳ್ಳಿ ,ಕುಂದಾಪುರ ,ಉಡುಪಿ ಜಿಲ್ಲೆ (ಪತ್ರಕರ್ತರು & ಮಾಧ್ಯಮ ವಿಶ್ಲೇಷಕರು) ದೇಶವನ್ನ ಕಾಡಿದ ವಿಚಿತ್ರ ಕಾಯಿಲೆಗಳಲ್ಲಿ ಕೊರೋನಾ ಹೆಮ್ಮಾರಿ ಜನರನ್ನ ಭಯ ವಾತಾವರಣದಲ್ಲಿ ಮಲಗಿಸಿತ್ತು ಆದರೆ ಅದೇ ವಾತಾವರಣ ಮತ್ತೆ ನಿರ್ಮಾಣ ಮಾಡಲು ಚೀನಾದಿಂದ ವೈರಸ್ ಗಳು ದೇಶವನ್ನು ಹೊಕ್ಕಲು ದೇಶವನ್ನ ಹಾಳು ಮಾಡಲು ಮತ್ತೆ ಸಂಚುರೂಪಿಸುತ್ತಿದೆ. ಕಾಣದ ಕೈಗಳಿಂದ ನಡೆದಂತಹ ದುರಂತ ಇಡೀ ದೇಶವನ್ನೇ ಬೆಚ್ಚಿ ಬೆಳಿಸಿದ ಕರೋನ ವೈರಸ್, ದೇಶಾದ್ಯಂತ ಸಂಚಲನ ಮೂಡಿಸಿ ಸಾವಿರಾರು ಜನರ ಸಾವಿಗೆ ಕಾರಣವಾದ ಡೆಡ್ಲಿ ವೈರಸ್ ಮತ್ತೆ ಚೀನಾದಲ್ಲಿ ಅಟ್ಟಹಾಸ ಮೆರೆಯುತ್ತಿದೆ ಸಾವಿರಾರು ರೋಗಿಗಳು ಬೀದಿ ಹೆಣವಾಗುತ್ತಿದ್ದಾರೆ ಸರಿಯಾದ ಚಿಕಿತ್ಸೆ ಸಿಗದೇ ಸಾರ್ವಜನಿಕರು ಕಂಗಲಾಗುತ್ತಿದ್ದಾರೆ…

Read More

ಸಜ್ಜನ ಪ್ರಾಮಾಣಿಕ ರಾಜಕಾರಣಿಯಾದ ಕಾಂಗ್ರೆಸ್ ಪಕ್ಷವನ್ನು ಮುನ್ನೆಡಿಸಿ ಕಾರ್ಕಳ ಜನರ ಮನಸ್ಸಿನಲ್ಲಿ ಉಳಿದ ಧೀಮಂತ ನಾಯಕ ದಿ.ಗೋಪಾಲ ಭಂಡಾರಿಯವರ ಪ್ರತಿಮೆ ನಿರ್ಮಾಣಕ್ಕೆ ನನ್ನ ಮೊದಲ ಆದ್ಯತೆ ಎಂದು ಕಾರ್ಕಳ ವಿಧಾನ ಸಭಾ ಕೇತ್ರದ ಕಾಂಗ್ರೆಸ್ ಅಭ್ಯರ್ಥಿ ಮುನಿಯಾಲು ಉದಯಕುಮಾರ್ ಶೆಟ್ಟಿ ಹೇಳಿದರು. ಅವರು ಎ.18 ರಂದು ಹೆಬ್ರಿ ಮೇಲ್ಪೇಟೆ ದಿ.ಪ್ರಸನ್ನ ಬಲ್ಲಾಳ ಅವರ ನಿವಾಸದಲ್ಲಿ ಆರಂಭಗೊಂಡ ಚುನಾವಣಾ ಪ್ರಚಾರ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಯಾವುದೇ ಆಡಂಬರ ಇಲ್ಲ ಅಬ್ಬರದ ಪ್ರಚಾರ, ಸದ್ದು ಗದ್ದಲದಿಂದ ಮಾತ್ರ ಅಭಿವೃದ್ಧಿಯಲ್ಲ. ಸತ್ಯ ಧಮ೯, ಪ್ರಮಾಣಿಕತೆ ಮೂಲಕ ಜನರ ಸಮಸ್ಯೆಗೆ ಸ್ಪಂದಿಸುವುದು ಮುಖ್ಯ.ಈ ಬಾರಿ ಕಾರ್ಕಳ ಜನ ಬದಲಾವಣೆ ಬಯಸಿದ್ದಾರೆ ಎನ್ನುವುದು ಜನಬೆಂಬಲದಿಂದ ಗೊತ್ತಾಗುತ್ತಿದೆ. ಒಂದು ಬಾರಿ ಅವಕಾಶ ಕೊಡಿ. ಅಭಿವೃದ್ಧಿ ಏನು ಎಂಬುವುದನ್ನ ಮಾಡಿ ತೋರಿಸುತ್ತೇನೆ. ಈಗಾಗಲೇ ನಿಮ್ಮೆಲ್ಲ ಆಶೀರ್ವಾದ ಹಾಗೂ ಕಾರ್ಕಳ ಕಾಂಗ್ರೆಸ್ ನ ಹಿರಿಯರ ಮಾರ್ಗದರ್ಶನದಲ್ಲಿ ಯಾವುದು ಆಡಂಬರವಿಲ್ಲದೆ ನಾಮಪತ್ರ ಸಲ್ಲಿಸಿದ್ದೇನೆ ಎಂದರು. ಸತ್ಯ ಧರ್ಮದ ಮತಯಾಚನೆ :…

Read More

ಮಂಗಳೂರು ಹೊರವಲಯದ ದೇರಳಕಟ್ಟೆಯ ಎ. ಬಿ. ಶೆಟ್ಟಿ ಮೆಮೊರಿಯಲ್ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸಸ್ ನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಡಾ. ನಿರೀಕ್ಷಾ ಶೆಟ್ಟಿ ಅವರು ಸಲ್ಲಿಸಿದ ಮಹಾ ಪ್ರಬಂಧಕ್ಕೆ ನಿಟ್ಟೆ ವಿಶ್ವವಿದ್ಯಾನಿಲಯವು ಪಿಎಚ್ ಡಿ ಪದವಿ ನೀಡಿದೆ. ಡಾ. ನಿರೀಕ್ಷಾ ಶೆಟ್ಟಿ ಅವರು ಎ. ಬಿ. ಶೆಟ್ಟಿ ಮೆಮೊರಿಯಲ್ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸಸ್ ನ ವೈಸ್ ಪ್ರಿನ್ಸಿಪಾಲ್ ಡಾ. ಮಿತ್ರ ಹೆಗ್ಡೆಯವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿ ‘ಅಸೋಸಿಯೇಷನ್ ಆಫ್ ವಿಟಮಿನ್ ಡಿ ರಿಸೆಪ್ಟರ್ ಜೀನ್ ಪಾಲಿ ಮಾರ್ಪಿಸಮ್ ಆಂಡ್ ಆಂಟಿಮೈಕ್ರೋಬಿಯಲ್ ಪೆಪೈಡ್ ಎಲ್ ಎಲ್ -37 ಇನ್ ಡೆಂಟಲ್ ಕೇರೀಸ್’ ಎನ್ನುವ ಮಹಾಪ್ರಬಂಧವನ್ನು ಮಂಡಿಸಿದ್ದರು. ಇದಕ್ಕೆ ಮಾನ್ಯತೆ ನೀಡಿರುವ ನಿಟ್ಟೆ ವಿಶ್ವವಿದ್ಯಾನಿಲಯವು ಎ.15 ರಂದು ಪಿ ಎಚ್ ಡಿ ಪದವಿ ನೀಡಿದೆ. ಡಾ. ನೀರಿಕ್ಷಾ ಶೆಟ್ಟಿ ಅವರು 2018ರಿಂದ ಎ. ಬಿ. ಶೆಟ್ಟಿ ಡೆಂಟಲ್ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿ ಸೇವೆ ಸಲ್ಲಿಸುತ್ತಿದ್ದು, ಬಿ. ಡಿಎಸ್ ಮತ್ತು ಎಂ.…

Read More