Author: admin

ಶಾಸ್ತ್ರದಲ್ಲಿ ಪ್ರತಿ 12 ವರ್ಷಗಳಿಗೊಮ್ಮೆ ಅಷ್ಟಬಂಧ ನಡೆಸಬೇಕು ಎಂದಿದ್ದರೂ ಅನಿವಾರ್ಯ ಕಾರಣಗಳಿಂದ ಕಳೆದ 21 ವರ್ಷಗಳಿಂದ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ನಡೆಯದೆ ಇದ್ದ ದೇವತಾ ಕಾರ್ಯ ನಡೆಸಲು ಈಗ ಕಾಲ ಕೂಡಿ ಬಂದಿದೆ. 21 ವರ್ಷಗಳ ಬಳಿಕ ದೇವಳದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯಲಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಕೆರಾಡಿ ತಿಳಿಸಿದ್ದಾರೆ. ಕೊಲ್ಲೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಎ.30 ರಿಂದ ಮೇ 11 ರವರೆಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯಲಿದೆ. ಎಲ್ಲರ ಅಭಿಪ್ರಾಯ ಪಡೆದುಕೊಂಡು ಉತ್ಸವ ದಿನಾಂಕ ನಿಶ್ಚಯ ಮಾಡಲಾಗಿದ್ದು, ಕ್ಷೇತ್ರದ ಅರ್ಚಕರ ಹಾಗೂ ಭಕ್ತರ ಸಹಕಾರದಿಂದ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಯೋಜನೆ ರೂಪಿಸಲಾಗುವುದು. ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ಕೆ ಅಂದಾಜು 5 ಕೋಟಿ ವೆಚ್ಚವಾಗಬಹುದು ಎಂದು ಅಂದಾಜಿಸಲಾಗಿದ್ದು, ದೇವಸ್ಥಾನದಿಂದ 2 ಕೋಟಿ ಬಳಸಿಕೊಳ್ಳಲು ಹಾಗೂ ಉಳಿದ 3 ಕೋಟಿಯನ್ನು ಭಕ್ತರಿಂದ ಸಂಗ್ರಹಿಸಿ ಖರ್ಚು ಮಾಡಲು ಸರ್ಕಾರ ಅನುಮತಿ ನೀಡಿದೆ. ಈ ನಿಟ್ಟಿನಲ್ಲಿ ಎಲ್ಲಾ ಸಹೃದಯ ಭಕ್ತರ ಸಹಕಾರವನ್ನು…

Read More

ಮುಂಬಯಿ, ಜೂ.24: ವಾಕ್ಚತುರ್ಯ (ಭಾಷಣ) ಸ್ಪರ್ಧೆಗಳು ವಿದ್ಯಾಥಿರ್üಗಳು ಮತ್ತು ಶಿಕ್ಷಕರಲ್ಲಿ ಆತ್ಮವಿಶ್ವಾಸ ಮೂಡಿಸುವ ಶಕ್ತಿಯಾಗಿದೆ. ಭಾರತ ರಾಷ್ಟ್ರದ ಭವಿಷ್ಯದ ಬೆನ್ನೆಲುಬು ಆಗಿರುವ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಂದ ಉತ್ತಮ ವೇದಿಕೆಯ ನಿರ್ಮಾಣಕ್ಕೆ ಇದು ಸಹಕಾರಿಯಗಿದ್ದು ಇಂತಹ ಉದ್ದೇಶವನ್ನಿರಿಸಿ ನಮ್ಮ ಸಂಸ್ಥೆ ಪ್ರೇರೆಪಿಸಲು ಮುಂದಾಗಿದೆ. ಸಂವಹನದಲ್ಲಿ ವಾಗ್ಮಿ ಸ್ಪರ್ಧೆ ಅತ್ಯಗತ್ಯ. ಪ್ರೇಕ್ಷಕರ ಮುಂದೆ ಬರುವ ಸಂವಹನದೊಂದಿಗೆ ದಿಟ್ಟತನ, ಭರವಸೆಯನ್ನು ಹೆಚ್ಚಿಸಲೂ ಇದು ವೇದಿಕೆಯಾಗಿದೆ ಎಂದು ಬಂಟ್ಸ್ ಸಂಘ ಮುಂಬಯಿ ಸಂಚಾಲಿತ ಎಸ್.ಎಂ ಶೆಟ್ಟಿ ಶೈಕ್ಷಣಿಕ ಸಂಸ್ಥೆಯ ಕಾರ್ಯಾಧ್ಯ ಕಾರ್ಯಾಧ್ಯಕ್ಷ ಬಿ.ಆರ್ ಶೆಟ್ಟಿ ತಿಳಿಸಿದರು. ಇಂದಿಲ್ಲಿ ಶನಿವಾರ ಮಧ್ಯಾಹ್ನ ಪೆರುವಾಯಿಯಲ್ಲಿನ ಎಸ್.ಎಂ ಶೆಟ್ಟಿ ಹೈಸ್ಕೂಲ್‍ನ ಆರ್.ಎನ್ ಶೆಟ್ಟಿ ಒಳಾಂಗಣ ಸಭಾಗೃಹದಲ್ಲಿ ಬಂಟ್ಸ್ ಸಂಘದ ಎಸ್.ಎಂ ಶೆಟ್ಟಿ ಶೈಕ್ಷಣಿಕ ಸಂಸ್ಥೆಯು ತನ್ನ ರಜತೋತ್ಸವ ಸಂಭ್ರಮದ ಪ್ರಯುಕ್ತ ಮುಂಬಯಿ ಮತ್ತು ಉಪನಗರಗಳಲ್ಲಿನ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಅಂತರ್ ಶಾಲಾ (ಇಂಟರ್ ಸ್ಕೂಲ್) ವಾಕ್ಚತುರ್ಯ (ಭಾಷಣ) ಸ್ಪರ್ಧೆಯನ್ನು ಉದ್ಘಾಟಿಸಿ ಬಿ.ಆರ್ ಶೆಟ್ಟಿ ಮಾತನಾಡಿದರು. ಕಾರ್ಯಕ್ರಮ ಉದ್ಘಾಟಿಸಿ ಬಿ.ಆರ್ ಶೆಟ್ಟಿ…

Read More

ದಕ್ಷಿಣ ಕನ್ನಡ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಮಂಗಳೂರು (D.K.M.U) ಇದರ ನಾಮನಿರ್ದೇಶನ ನಿರ್ದೇಶಕರಾಗಿ ಕಾಡೂರು ಸುರೇಶ್ ಶೆಟ್ಟಿ ಅವರು ನೇಮಕಗೊಂಡಿದ್ದಾರೆ. ಸುರೇಶ್ ಶೆಟ್ಟರು ಉದ್ಯಮಿಯಾಗಿಯೂ, ಸಮಾಜಸೇವಕರಾಗಿಯೂ ಕುಂದಾಪುರ ಕ್ಷೇತ್ರದಲ್ಲಿ ಹೆಸರುವಾಸಿಯಾಗಿದ್ದಾರೆ.

Read More

ಸಮಾಜಸೇವಕ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಭವಾನಿ ಗ್ರೂಪ್ ಆಫ್ ಕಂಪನಿಸ್ ನ ಆಡಳಿತ ನಿರ್ದೇಶಕರಾದ ಶ್ರೀ ಕುಸುಮೋಧರ ಶೆಟ್ಟಿ ಚೆಲ್ಲಡ್ಕ ( ಕೆ ಡಿ ಶೆಟ್ಟಿ ) ಅವರ ಹುಟ್ಟುಹಬ್ಬವನ್ನು ಮಂಗಳೂರಿನ ಕೊಟ್ಟಾರದಲ್ಲಿರುವ ಕಚೇರಿಯಲ್ಲಿ ತನ್ನ ನೌಕರ ವೃಂದದವರೊಂದಿಗೆ ಸರಳವಾಗಿ ಆಚರಿಸಿಕೊಂಡರು. ಮುಂಬಯಿ ಕಚೇರಿಯ ನೌಕರ ವೃಂದದವರು ವಿಡಿಯೋ ಕಾಲ್ ಮೂಲಕ ಶುಭ ಹಾರೈಸಿದರು. ಶುಭ ಹಾರೈಸಿದ ಎಲ್ಲರಿಗೂ ಕೆ ಡಿ ಶೆಟ್ಟಿಯವರು ಅಭಿನಂದನೆ ಸಲ್ಲಿಸಿದರು. ಈ ಸಂಧರ್ಭದಲ್ಲಿ ಕೆ ಡಿ ಶೆಟ್ಟಿಯವರ ಧರ್ಮಪತ್ನಿ, ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಸ್ಥಾಪಕ ರಂಜಿತ್ ಶೆಟ್ಟಿ, ವಿಶ್ವನಾಥ್ ಶೆಟ್ಟಿ ದೊಡ್ಡಮನೆ ಹಾಗೂ ಭವಾನಿ ಗ್ರೂಪ್ ನ ನೌಕರ ವೃಂದದವರು ಉಪಸ್ಥಿತರಿದ್ದರು.

Read More

ಯುವ ಜನರಿಗೆ ಇಂದು ಬದುಕು ಕಟ್ಟಿಕೊಳ್ಳಲು ಹಿಂದಿನವರಂತೆ ಉದ್ಯೋಗವನ್ನು ಅರಸಿ ವಲಸೆ ಹೋಗಲೇಬೇಕೆಂಬ ಸ್ಥಿತಿ ಇಲ್ಲ. ಸಮರ್ಥರಿಗೆ ಈಗ ವಿಪುಲ ಉದ್ಯೋಗ ಅವಕಾಶಗಳಿವೆ. ಮನೆ ಬಾಗಿಲಿಗೆ ಉದ್ಯೋಗವಕಾಶವನ್ನು ಒದಗಿಸುವ ಕೆಲಸ ಮಾಡುತ್ತಿರುವ ಉಡುಪಿ ಗ್ರಾಮೀಣ ಬಂಟರ ಸಂಘದ ಪ್ರಯತ್ನ ಶ್ಲಾಘನೀಯ ಎಂದು ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು. ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ನ ಆಶ್ರಯದಲ್ಲಿ ಕುಂತಳ ನಗರ ಸ್ಕಿಲ್ ಡೆವಲಪ್ ಮೆಂಟ್ ಸೆಂಟರ್ ನಲ್ಲಿ ಬೆಂಗಳೂರು ಎಂಆರ್ ಜಿ ಗ್ರೂಪ್ ಪ್ರಾಯೋಜಕತ್ವದಲ್ಲಿ ನಡೆದ ಬೃಹತ್ ಉದ್ಯೋಗ ಮೇಳದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಬಿಜೆಪಿ ವಿಭಾಗ ಪ್ರಭಾರಿ ಉದಯ ಕುಮಾರ್ ಶೆಟ್ಟಿ ಮಾತನಾಡಿ, ಬಡವನಾಗಿ ಹುಟ್ಟುವುದು ತಪ್ಪಲ್ಲ. ಆ ಆಯ್ಕೆ ನಮ್ಮ ಕೈಯಲ್ಲಿ ಇಲ್ಲ. ಆದರೆ ಬಡವನಾಗಿ ಸಾಯಬಾರದು. ಎಲ್ಲರಿಗೂ ಅವಕಾಶ ಇರುತ್ತದೆ. ಅದನ್ನು ಬಳಸಿಕೊಂಡು ಬದುಕಿನಲ್ಲಿ ಮೇಲೆ ಬರಬೇಕು ಎಂದರು. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಟ್ಟಾರು ರತ್ನಾಕರ್ ಹೆಗ್ಡೆ, ಉಡುಪಿ…

Read More

ಬಂಟ ಸಮಾಜದ ಅಗ್ರಗಣ್ಯ ನೇತಾರ, ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಶ್ರೀ ಅಜಿತ್ ಕುಮಾರ್ ರೈ ಮಾಲಾಡಿ ಅವರ ಆಶೀರ್ವಾದದೊಂದಿಗೆ ಪತ್ರಿಕೋದ್ಯಮಿ ರಂಜಿತ್ ಶೆಟ್ಟಿಯವರು ಸರ್ವರಿಗೂ ಆರೋಗ್ಯ, ಸರ್ವರಿಗೂ ವಿದ್ಯಾಭ್ಯಾಸ, ಸರ್ವರಿಗೂ ಉದ್ಯೋಗ ಎಂಬ ಮೂರು ಪರಿಕಲ್ಪನೆ ಇಟ್ಟುಕೊಂಡು, ಬಂಟ ಸಮಾಜದ ಶ್ರೇಯೋಭಿವೃದ್ಧಿಗಾಗಿ ಶ್ರಮಿಸಲು ಬಂಟ್ಸ್ ಬ್ರಿಗೇಡ್ ಸೇವಾ ಸಂಸ್ಥೆಯನ್ನು ಸ್ಥಾಪಿಸಲು ಮುಂದಾಗಿದ್ದಾರೆ. ನಾಳೆ ಗಣೇಶ ಚತುರ್ಥಿಯ ಶುಭ ದಿನದಂದು ಮಂಗಳೂರಿನಲ್ಲಿ ಬಂಟ್ಸ್ ಹಾಸ್ಟೆಲ್ ಓಂಕಾರ ನಗರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಬಂಟ್ಸ್ ಬ್ರಿಗೇಡ್ ಸೇವಾ ಸಂಸ್ಥೆಯ ಲೋಗೋ ಅನಾವರಣವನ್ನು ಗಣ್ಯರ ಸಮ್ಮುಖದಲ್ಲಿ ಅಜಿತ್ ಕುಮಾರ್ ರೈ ಮಾಲಾಡಿಯವರು ಮಾಡಲಿದ್ದಾರೆ. ಪ್ರತಿ ತಿಂಗಳು ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಗಳಲ್ಲಿ ಬಂಟ ಸಮಾಜ ಬಾಂಧವರಿಗೆ ಅರೋಗ್ಯ ತಪಾಸಣಾ ಶಿಬಿರ ಮಾಡಿಕೊಂಡು ಔಷಧಿ ಉಚಿತವಾಗಿ ನೀಡಲು, ನಿರುದ್ಯೋಗ ಸಮಸ್ಯೆ ನಿವಾರಣೆ ಮಾಡುವ ಉದ್ದೇಶದಿಂದ ಅವರವರ ವಿದ್ಯಾಭ್ಯಾಸಕ್ಕೆ ತಕ್ಕಂತೆ ಉದ್ಯೋಗ ದೊರಕಿಸಿಕೊಡಲು, ಸರ್ವರಿಗೂ ವಿದ್ಯಾಭ್ಯಾಸ ದೊರೆಯಲು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ದಾನಿಗಳ ನೆರವಿನಿಂದ…

Read More

ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ) ಮಂಗಳೂರು ಇದರ ವತಿಯಿಂದ ಅಕ್ಟೋಬರ್ 28 ಮತ್ತು 29 ರಂದು ಉಡುಪಿ ಅಜ್ಜರಕಾಡುವಿನಲ್ಲಿ ವಿಶ್ವ ಬಂಟರ ಸಮ್ಮಿಲನ, ಕ್ರೀಡಾ ಸಂಗಮ ಹಾಗೂ ಸಾಂಸ್ಕೃತಿಕ ಸಂಭ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ ತಿಳಿಸಿದ್ದಾರೆ. ಉಡುಪಿ ಅಂಬಾಗಿಲು ಅಮೃತಾ ಗಾರ್ಡನ್‌ ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಪೂರ್ವ ಭಾವಿ ಸಭೆಗಳನ್ನು ನಡೆಸಲಾಗುತ್ತಿದೆ. ಈ ಸಮ್ಮಿಲನದಲ್ಲಿ ಜಗತ್ತಿನಾದ್ಯಂತ ಇರುವ 150 ಬಂಟರ ಸಂಘಗಳ ಪ್ರತಿನಿಧಿಗಳು ಭಾಗವಹಿಸಲಿರುವರು. ಮುಂಬಯಿ, ಪುಣೆ, ಬೆಂಗಳೂರು, ಮೈಸೂರು ಹುಬ್ಬಳ್ಳಿ-ದಾರಾವಾಡ, ಯುಎಇ ಸೇರಿದಂತೆ ವಿವಿಧ ಕಡೆಗಳಿಂದ ಸುಮಾರು 10-15 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದರು. ಕ್ರೀಡಾ ಸಂಗಮದಲ್ಲಿ ತ್ರೋಬಾಲ್, ಕಬಡ್ಡಿ, ವಾಲಿಬಾಲ್, ಹಗ್ಗಜಗ್ಗಾಟವನ್ನು ಏರ್ಪಡಿಸಲಾಗುತ್ತದೆ. ಅದೇ ರೀತಿ ಸಾಂಸ್ಕೃತಿಕ ಸಂಭ್ರಮದಲ್ಲಿ ತಂಡಗಳಿಗೆ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗುತ್ತದೆ. ಈ ಕಾರ್ಯಕ್ರಮಕ್ಕೆ ಸಮುದಾಯದ ಹಲವು ದಾನಿಗಳು ಸಂಪೂರ್ಣ ನೆರವು ನೀಡಲಿದ್ದಾರೆ…

Read More

ತುಳು ರಂಗಭೂಮಿ ಹಾಗೂ ಚಿತ್ರರಂಗದ ಮೇರು ನಿರ್ದೇಶಕ, ನಿರ್ಮಾಪಕ ವಿಜಯಕುಮಾರ್ ಕೊಡಿಯಾಲ್‌ಬೈಲ್ ಅವರು ಕಳೆದ ಮೂರ್‍ನಾಲ್ಕು ವರ್ಷಗಳಿಂದ ಶಿವದೂತೆ ಗುಳಿಗೆ ನಾಟಕದಲ್ಲೇ ಮಗ್ನರಾಗಿದ್ದರು. ನಿರೀಕ್ಷೆಗೂ ಮೀರಿದ ಬೇಡಿಕೆಯಿಂದಾಗಿ ಅದ್ಭುತ ಯಶಸ್ಸು ಗಳಿಸಿರುವ ಶಿವದೂತೆ ಗುಳಿಗೆ ನಾಟಕವು ಸುಮಾರು 500 ಪ್ರದರ್ಶನಗಳ ಸನಿಹದಲ್ಲಿದೆ. ಆ ಮೂಲಕ ಎಲ್ಲರ ಗಮನವನ್ನೂ ತುಳು ರಂಗಭೂಮಿಯತ್ತ ಸೆಳೆದಿದ್ದಾರೆ. ಈ ನಾಟಕವು ಕನ್ನಡಕ್ಕೂ ಡಬ್ಬಿಂಗ್ ಆಗಿದ್ದು, ಮಲಯಾಳ, ಮರಾಠಿಯಲ್ಲೂ ಪ್ರದರ್ಶನ ಕಾಣಲಿದೆ. ದೇಶದ ಪ್ರಮುಖ ನಗರಗಳಲ್ಲಿ ದಿನವೊಂದರಲ್ಲೇ 2-3 ಪ್ರದರ್ಶನ ನೀಡಿ ಸುದ್ದಿಯಾಗಿದ್ದ ಈ ನಾಟಕವು ವಿದೇಶದಲ್ಲೂ ಭರ್ಜರಿ ಸದ್ದು ಮಾಡಿತ್ತು. ಈ ಎಲ್ಲ ಕಾರಣಗಳಿಂದ ಹೊಸ ನಾಟಕ ಪ್ರದರ್ಶನಕ್ಕೆ ಅವರಿಗೆ ಅವಕಾಶ ಸಿಗಲಿಲ್ಲ. ಎಲ್ಲರೂ ಶಿವದೂತ ಗುಳಿಗನನ್ನೇ ಕೇಳುವವರು. ಈಗ ಅವರ ಹೊಸ ನಾಟಕ “ಮೈತಿದಿ” ಪ್ರದರ್ಶನಕ್ಕೆ ಸಿದ್ಧವಾಗಿದೆ. ಇದನ್ನು ಹಿಂದೆಯೇ ರಚಿಸಿ ಸಿದ್ಧಪಡಿಸಿದ್ದ ವಿಜಯಕುಮಾರ್ ಅವರು ಗುಳಿಗನ ಕಾರಣದಿಂದ ಮುನ್ನೆಲೆಗೆ ತರಲು ಸಾಧ್ಯವಾಗಿರಲಿಲ್ಲ. ಈ ಬಾರಿ ಮೈತಿದಿಗೆ ಮುಹೂರ್ತ ಫಿಕ್ಸ್ ಆಗಿದೆ. ಸೆಪ್ಟಂಬರ್‌ನಲ್ಲಿ ಈ ನಾಟಕ…

Read More

ಈ ವರ್ಷದ ಅತೀ ನಿರೀಕ್ಷಿತ ತುಳು ಸಿನಿಮಾ, ಗಿರಿಗಿಟ್ ಖ್ಯಾತಿಯ ಬಿಗ್‌ಬಾಸ್ ಚಾಂಪಿಯನ್ ರೂಪೇಶ್ ಶೆಟ್ಟಿ ನೇತೃತ್ವದ ತಂಡದ ಸರ್ಕಸ್ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿ ಗಮನ ಸೆಳೆದಿರುವ ಪುತ್ತೂರಿನ ಬಹುಮುಖ ಪ್ರತಿಭೆ ರಚನಾ ರೈ ಅವರಿಗೆ ಸಿನಿಮಾ ರಂಗದಲ್ಲಿ ಉಜ್ವಲ ಭವಿಷ್ಯ ಇರುವುದು ಮೇಲ್ನೋಟಕ್ಕೇ ಸ್ಪಷ್ಟವಾಗುತ್ತಿದೆ. ಅವರ ಆಕರ್ಷಕ ದೇಹ ಸೌಂದರ್ಯ, ರೂಪ, ಅಭಿನಯ, ಬಹುಮುಖ ರಂಗದಲ್ಲಿ ತೋರಿಸುತ್ತಿರುವ ಕಲಾ ಪ್ರೌಢಿಮೆಗಳೆಲ್ಲವೂ ಅವರ ಭವಿಷ್ಯದ ದಾರಿಯನ್ನು ಉಜ್ವಲಗೊಳಿಸಲಿದೆ. ಎಳವೆಯಲ್ಲೇ ಕ್ಯಾಮರಾ ಎದುರಿಸಿದ್ದ ಅವರು ಅದೇ ಕಾರಣದಿಂದ ಸರ್ಕಸ್ ಸಿನಿಮಾದಲ್ಲಿ ಘಟಾನುಘಟಿ ಕಲಾವಿದರೊಂದಿಗೆ ಕಿಂಚಿತ್ತೂ ಅಳುಕಿಲ್ಲದೆ ನಟಿಸಿ ಉತ್ತಮ ಪ್ರದರ್ಶನವನ್ನೂ ನೀಡಿ ಎಲ್ಲರಿಂದಲೂ ಮೆಚ್ಚುಗೆ ಪಡೆದುಕೊಂಡಿದ್ದಾರೆ. ಪತ್ರಿಕೋದ್ಯಮದಲ್ಲಿ ಪದವಿ ಮಾಡಿರುವ ಅವರು ಉತ್ತಮ ಭರತನಾಟ್ಯ ಕಲಾವಿದೆ, ಕ್ರೀಡಾಪಟು ಕೂಡ ಆಗಿರುವ ಇವರು ಪುತ್ತೂರಿನಲ್ಲೇ ಹುಟ್ಟಿ ಬೆಳೆದವರು. ಉಜಿರೆಯ ಎಸ್‌ಡಿಎಂ ಶಿಕ್ಷಣ ಸಂಸ್ಥೆಯ ಹಳೆ ವಿದ್ಯಾರ್ಥಿ. ವೃತ್ತಿಪರ ಬ್ಯಾಂಡ್ಮಿಂಟನ್ ಮತ್ತು ಫುಟ್ಬಾಲ್ ಕ್ರೀಡಾಪಟು ಕೂಡ ಆಗಿರುವ ಅವರು ಉತ್ತಮ ಚಿತ್ರಕಲಾವಿದೆಯೂ ಆಗಿದ್ದಾರೆ. ಚಿತ್ರಕಲೆಯಲ್ಲಿ ರಾಜ್ಯ…

Read More

ಯುವನಟ ಪ್ರವೀರ್‌ ಶೆಟ್ಟಿ ಮೊದಲ ಬಾರಿಗೆ ನಾಯಕ ನಟನಾಗಿ ಅಭಿನಯಿಸಿರುವ “ಸೈರನ್‌’ ಸಿನಿಮಾ ತೆರೆಗೆ ಬರಲು ಸಿದ್ಧವಾಗಿದೆ. ಸದ್ಯ ಸಿನಿಮಾದ ಬಹುತೇಕ ಕೆಲಸಗಳನ್ನು ಪೂರ್ಣಗೊಳಿಸಿರುವ ಚಿತ್ರತಂಡ, ಇದೀಗ “ಸೈರನ್‌’ ಸಿನಿಮಾದ ಟ್ರೇಲರ್‌ ಬಿಡುಗಡೆ ಮಾಡುವ ಮೂಲಕ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ “ಸೈರನ್‌’ ಸಿನಿಮಾದ ಟ್ರೇಲರ್‌ ಬಿಡುಗಡೆ ಸಮಾರಂಭದಲ್ಲಿ ನಿರ್ಮಾಪಕಿ ಅಶ್ವಿ‌ನಿ ಪುನೀತ್‌ ರಾಜಕುಮಾರ್‌, ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌, ನಟ ಡಾಲಿ ಧನಂಜಯ್‌, ನಟಿ ಸ್ಪರ್ಶ ರೇಖಾ, ನಿರ್ದೇಶಕ ಎಎಂಆರ್‌ ರಮೇಶ್‌, ಪತ್ರಕರ್ತ ರಂಗನಾಥ್‌ ಭಾರಧ್ವಾಜ್‌ ಸೇರಿದಂತೆ ಹಲವು ಗಣ್ಯರು ಸಮಾರಂಭದಲ್ಲಿ ಹಾಜರಿದ್ದು, “ಸೈರನ್‌’ ಸಿನಿಮಾದ ಟ್ರೇಲರ್‌ ಅನ್ನು ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ಇದೇ ವೇಳೆ ಮಾತನಾಡಿದ ನಟ ಪ್ರವೀರ್‌ ಶೆಟ್ಟಿ, “ಇದೊಂದು ಕಂಪ್ಲೀಟ್‌ ಆ್ಯಕ್ಷನ್‌ ಕಂ ಸಸ್ಪೆನ್ಸ್‌-ಥ್ರಿಲ್ಲರ್‌ ಶೈಲಿಯ ಸಿನಿಮಾ. ಈ ಸಿನಿಮಾದಲ್ಲಿ ನಾನು ಇನ್ವೆಸ್ಟಿಗೇಟಿಂಗ್‌ ಆಫೀಸರ್‌ ಆಗಿ ಕಾಣಿಸಿಕೊಂಡಿದ್ದೇನೆ. ಸಮಾಜದಲ್ಲಿ ಇಂದು ನಡೆಯುತ್ತಿರುವ ಕೆಲವು ಘಟನೆಗಳನ್ನು ಇಟ್ಟುಕೊಂಡು ಈ ಸಿನಿಮಾ ಮಾಡಲಾಗಿದೆ.…

Read More