Author: admin
ಕುಂದಾಪುರದ ಕೊರವಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಬಡ್ಡಿ ತಂಡಕ್ಕೆ ಉಡುಪಿ ಜಿಲ್ಲಾ ಟೆನಿಸ್ ಬಾಲ್ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ಹಾಗೂ ಕರ್ನಾಟಕ ಟೇಬಲ್ ಟೆನಿಸ್ ಅಸೋಸಿಯೇಷನ್ ಉಪಾಧ್ಯಕ್ಷ ಗೌತಮ್ ಶೆಟ್ಟಿ ಕುಂದಾಪುರ 12 ಜೊತೆ ಶೂ ವಿತರಿಸಿದರು. ಕೊರವಡಿ ಹಿರಿಯ ಪ್ರಾಥಮಿಕ ಶಾಲೆಯು ಕಬಡ್ಡಿ ಜಿಲ್ಲಾ ಮಟ್ಟದಲ್ಲಿ ಜಯಗಳಿಸಿ ನವೆಂಬರ್ ಮಂಡ್ಯದಲ್ಲಿ ಮೈಸೂರು ವಿಭಾಗ ಮಟ್ಟದ ಪಂದ್ಯಾವಳಿಯಲ್ಲಿ ಭಾಗವಹಿಸಲು ಅರ್ಹತೆ ಪಡೆದಿದೆ. ಮೈಸೂರು ವಿಭಾಗ ಮಟ್ಟದಲ್ಲಿ ಭಾಗವಹಿಸಲು ತಂಡದ ಆಟಗಾರರಿಗೆ ಪ್ರಾಯೋಜಿತ 12 ಜೊತೆ ಕಬಡ್ಡಿ ಶೂಗಳನ್ನು ನೀಡಿದರು. ಈ ಸಂದರ್ಭ ಕಬಡ್ಡಿ ಸ್ಪರ್ಧಿಗಳನ್ನು ಉದ್ದೇಶಿಸಿ ಮಾತನಾಡಿದ ಗೌತಮ್ ಶೆಟ್ಟಿ “ಕೊರವಡಿ ಹಿರಿಯ ಪ್ರಾಥಮಿಕ ಶಾಲೆಯು ಸೀಮಿತ ವಿದ್ಯಾರ್ಥಿಗಳನ್ನು ಹೊಂದಿರುವ ಗ್ರಾಮೀಣ ಸರ್ಕಾರಿ ಶಾಲೆಯಾದರೂ ಜಿಲ್ಲಾಮಟ್ಟದ ಕಬಡ್ಡಿ ಸ್ಪರ್ಧೆಯಲ್ಲಿ ಅಸಾಧಾರಣ ಪ್ರದರ್ಶನ ನೀಡಿದೆ. ವಿಭಾಗೀಯ ಮಟ್ಟದಲ್ಲಿ ಮತ್ತು ರಾಜ್ಯ ಮಟ್ಟದಲ್ಲಿ ಗೆಲ್ಲಲು ನಿಮ್ಮ ಅತ್ಯುತ್ತಮವಾದ ಆಟವನ್ನು ಆಡಿ. ನಿಮ್ಮಲ್ಲಿ ದೃಢತೆ ಮತ್ತು ಶಿಸ್ತು ಇರಲಿ. ಅದಕ್ಕಿಂತ ಹೆಚ್ಚಾಗಿ ನೀವು ಆಟವನ್ನು…
ಬಡವರಿಗೆ ಹಾಗೂ ಅವಕಾಶ ವಂಚಿತರಿಗೆ ಸುಸ್ಥಿರ ಹಾಗೂ ಗೌರವಯುತ ಜೀವನಾಧಾರವನ್ನು ಒದಗಿಸುವ ಜವಾಬ್ದಾರಿ ಇರುವ ಎಲ್ಲ ರಾಷ್ಟ್ರಗಳಲ್ಲಿ ಸಹಜವಾಗಿ ಸಾಮಾಜಿಕ ರಕ್ಷಣೆ ಮತ್ತು ಕಲ್ಯಾಣ ಕ್ರಮಗಳ ಆವಶ್ಯಕತೆಯನ್ನು ಕಂಡುಕೊಳ್ಳಲಾಗಿದೆ. ಹಸಿದವನಿಗೆ ಬದುಕು ಕಟ್ಟಕೊಳ್ಳಲು ಪೂರಕ ಕ್ರಮಗಳನ್ನು ಯೋಚಿಸಿ, ಯೋಜನೆಗಳನ್ನು ಕೈಗೊಳ್ಳಬೇಕಾ ದುದು ಕಲ್ಯಾಣ ರಾಜ್ಯದ ಪರಿಕಲ್ಪನೆಯ ಪ್ರಜಾಪ್ರಭುತ್ವದ ಜವಾಬ್ದಾರಿಯೂ ಹೌದು. ಹಸಿದವನಿಗೆ ಮೀನು ನೀಡಿದರೆ ಒಂದು ದಿನದ ಹಸಿವನ್ನು ತಣಿಸಿದಂತೆ. ಅವನಿಗೆ ಮೀನು ಹಿಡಿಯುವ ಕಲೆಯನ್ನು ಕಲಿಸಿಕೊಟ್ಟರೆ ಅವನಿಗೆ ಬದುಕು ಕೊಟ್ಟಂತೆ ಎಂಬ ಪ್ರಾಜ್ಞರ ನುಡಿ ನಮಗೆ ದಾರಿದೀಪವಾಗಬೇಕು. ಹಸಿದವನಿಗೆ ಬದುಕು ಕಟ್ಟಿಕೊಳ್ಳುವ ಕಲೆಯನ್ನು ಕಲಿಸಬೇಕಾಗಿದೆ ಮತ್ತು ಅದಕ್ಕೆ ಪೂರಕವಾದ ವಾತಾವರಣವನ್ನು ಕಲ್ಪಿಸಬೇಕಾಗಿದೆ. ಬಡವರಾದರೂ ಸ್ವಾವಲಂಬಿಗಳಾಗಿ, ಸ್ವಾಭಿಮಾನಿಗಳಾಗಿ ಬೆಳೆಯುವಂತೆ ಮಾಡಿದಾಗ ಸೇರ್ಪಡೆಯುಳ್ಳ ಸುಸ್ಥಿರ ಅಭಿವೃದ್ಧಿ ಸಾಧ್ಯ. ಇತಿಹಾಸದಿಂದ ಪಾಠ ಕಲಿಯಬೇಕು ಅತ್ಯಂತ ಸುಂದರ ಮತ್ತು ರಮಣೀಯವಾದ ಪ್ರಕೃತಿ ತಾಣಗಳಿಗೆ ಮತ್ತು ವಿಶ್ವ ಸುಂದರಿಯರ ತಾಣವಾದ ವೆನೆಜುವೆಲಾ ಏಕಾಏಕಿ 1970ರಲ್ಲಿ ಪ್ರಪಂಚದ ಅತ್ಯಂತ 20 ಶ್ರೀಮಂತ ರಾಷ್ಟ್ರಗಳಲ್ಲಿ ಒಂದಾಗಿತ್ತು. ಸುಲಭವಾಗಿ ಅಧಿಕಾರಕ್ಕೆ ಬರಬೇಕೆಂಬ…
ಬನ್ನಾಡಿ ಗ್ರಾಮದ ಉಪ್ಲಾಡಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ 2022-25ರ ಸಾಲಿನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಕುಂದಾಪುರ ವಕೀಲರ ಸಂಘದ ಅಧ್ಯಕ್ಷ ಬನ್ನಾಡಿ ಸೋಮನಾಥ ಹೆಗ್ಡೆ ಇವರು ಆಯ್ಕೆಯಾಗಿದ್ದಾರೆ. ವ್ಯವಸ್ಥಾಪನಾ ಸಮಿತಿಯ ಕಾರ್ಯದರ್ಶಿಯಾಗಿ ಪ್ರಭಾಕರ ಪೂಜಾರಿ ಉಪ್ಲಾಡಿ ಬಡಾಬೆಟ್ಟು, ಕೋಶಾಧಿಕಾರಿಯಾಗಿ ಉಪ್ಲಾಡಿ ಶ್ರೀಧರ್ ಆರ್ ಶೆಟ್ಟಿ ಹಾಗೂ ಸದಸ್ಯರಾಗಿ ಉಪ್ಲಾಡಿ ಗೋಪಾಲಕೃಷ್ಣ ಭಟ್, ಉಪ್ಲಾಡಿ ವೆಂಕಟರಮಣ ಭಟ್, ಶಿವಾನಂದ ನಾೈರಿ ಬಡಾಬೆಟ್ಟು, ದಿನೇಶ ತೆಂಕಬೆಟ್ಟು, ಚೈತ್ರಾ ಬಡಾಬೆಟ್ಟು ಮತ್ತು ಪಲ್ಲವಿ ಬಡಾಬೆಟ್ಟು ಇವರನ್ನು ಮುಂದಿನ 3 ವರ್ಷಗಳ ಅವಧಿಗೆ, ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮದಂತೆ, ಸಹಾಯಕ ಆಯುಕ್ತರು (ಪ್ರಭಾರ), ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ, ಉಡುಪಿ ಜಿಲ್ಲೆ ಇವರು ಆದೇಶಿಸಿರುತ್ತಾರೆ.
ಪೊವಾಯಿ ಕನ್ನಡ ಸೇವಾ ಸಂಘದ ಅಧ್ಯಕ್ಷರಾದ ನ್ಯಾಯವಾದಿ ಆರ್ ಜಿ ಶೆಟ್ಟಿಯವರು ಮೂಲತಃ ಉಡುಪಿ ಜಿಲ್ಲೆಯ ಕಳತ್ತೂರು ಕೋರಂಟ್ ಗುತ್ತು ದಿ. ಗೋಪಾಲ ಎನ್ ಶೆಟ್ಟಿ ಹಾಗೂ ಕುತ್ಯಾರು ಪಣಿಮಾರು ಗುತ್ತು ದಿ. ದೇವಕಿ ಶೆಟ್ಟಿ ದಂಪತಿಗಳ ಸುಪುತ್ರರು. ಇವರು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ಎಳ್ಳೂರು ಕಸಬಾ ಇರಂದಾಡಿಯಲ್ಲಿ ಮುಗಿಸಿ ಪದವಿ ಶಿಕ್ಷಣವನ್ನು ಸಂತ ಮೇರಿ ಕಾಲೇಜು ಶಿರ್ವದಲ್ಲಿ ಮುಗಿಸಿದರು. ಕಾನೂನು ಪದವಿಯನ್ನು ಜೆ.ಸಿ ಲಾ ಕಾಲೇಜು ವಿಲೇಪಾರ್ಲೆ ಇಲ್ಲಿ ಪೂರೈಸಿದರು. ಕಾಲೇಜು ಜೀವನದಲ್ಲೇ ತನ್ನಲ್ಲಿರುವ ಪ್ರತಿಭೆಯನ್ನು ತೋರ್ಪಡಿಸಿದ ಇವರು ಸಂತ ಮೇರಿ ಹೈಸ್ಕೂಲ್ ಎನ್.ಎಸ್.ಎಸ್ ಗ್ರೂಫ್ ನಾಯಕರಾಗಿ, ಜೆ.ಸಿ ಲಾ ಕಾಲೇಜು ವಿಲೇಪಾರ್ಲೆ ಮುಂಬಯಿ ಇಲ್ಲಿ ಕ್ರೀಡಾ ಕಾರ್ಯದರ್ಶಿಯಾಗಿ ಅಂದೇರಿ ಕೋರ್ಟು ನ್ಯಾಯವಾದಿ ಬಾರ್ ಅಸೋಸಿಯೇಶನ್ ನ 2 ವರ್ಷ ಜತೆ ಕಾರ್ಯದರ್ಶಿಯಾಗಿ, 2 ವರ್ಷ ಪ್ರದಾನ ಕಾರ್ಯದರ್ಶಿಯಾಗಿ, 5 ವರ್ಷ ಅಧ್ಯಕ್ಷನಾಗಿ ಸೇವೆ ಸಲ್ಲಿಸಿದ್ದ ಅನುಭವವನ್ನು ಹೊಂದಿದ್ದಾರೆ. ಕನ್ನಡ ಸೇವಾ ಸಂಘ ಪೊವಾಯಿ ಯ ಉಪಾಧ್ಯಕ್ಷರಾಗಿ ಸ್ಮರಣ…
ಹೊಟೇಲ್ ಆದರಾತಿಥ್ಯ ಕ್ಷೇತ್ರದಲ್ಲಿ ಅದ್ಭುತ ಯಶಸ್ಸು ಕಂಡ ಹಣಕಾಸು ಕ್ಷೇತ್ರದ ತಜ್ಞ ಶ್ರೀ ಪ್ರಭಾಕರ್ ವಿ ಶೆಟ್ಟಿ
ಉನ್ನತ ಶಿಕ್ಷಣ ಪಡೆದ ಯುವಕನೊಬ್ಬ ಅಕೌಂಟೆನ್ಸಿ ಆಂಡ್ ಫೈನಾನ್ಸ್ ಕ್ಷೇತ್ರದಲ್ಲಿ ಅಪರಿಮಿತ ಜ್ಞಾನ ಸಂಪಾದಿಸಿ ವಿದೇಶದ ನೆಲದಲ್ಲಿ ಉನ್ನತ ಹುದ್ದೆಯನ್ನಲಂಕರಿಸಿ ಅನೇಕ ವರ್ಷಗಳ ಬಳಿಕ ಸ್ವದೇಶಕ್ಕೆ ಹಿಂದಿರುಗಿ ಇಲ್ಲಿನ ಮಹಾರಾಷ್ಟ್ರದ ಪುಣೆಯಲ್ಲಿ ಹೋಟೇಲ್ ಅತಿಥಿ ಸತ್ಕಾರ ಗೃಹ ಉದ್ದಿಮೆ ನಡೆಸಿ ಈ ಕ್ಷೇತ್ರದಲ್ಲೂ ಗುರಿ ಮೀರಿದ ಸಾಧನೆಯಿಂದ ಪ್ರಸಿದ್ಧಿ ಯಶಸ್ಸು ಗಳಿಸಿದ ವ್ಯಕ್ತಿಯೋರ್ವರ ಸಾಧನೆಯ ಗಾಥೆ ಇಲ್ಲಿದೆ. ಇತಿಹಾಸ ಪ್ರಸಿದ್ಧ ಕಾರ್ಕಳದ ಕೌಡೂರು ಗ್ರಾಮದಲ್ಲಿ ಹುಟ್ಟಿದ ಪ್ರಭಾಕರ ಶೆಟ್ಟರ ತಂದೆ ಕೊರಂಗ್ರಪಾಡಿ ದೊಡ್ಡಮನೆ ವಿಠಲ ಶೆಟ್ಟಿ ಹಾಗೂ ತಾಯಿ ವನಂದೆಗುತ್ತು ಪುಷ್ಪಾವತಿ ಶೆಟ್ಟಿ. ಮುಂಬಯಿ ವಿಶ್ವವಿದ್ಯಾಲಯದಿಂದ ಎಂ.ಕಾಂ. ವಾಣಿಜ್ಯ ಸ್ನಾತಕೋತ್ತರ ಪದವಿ ಗಳಿಸಿದ ಬಳಿಕ ಯುನೈಟೆಡ್ ಕಿಂಗ್ಡಮ್ ನ ಶಿಕ್ಷಣ ಸಂಸ್ಥೆಯ ಮೂಲಕ ಮ್ಯಾನೇಜ್ ಮೆಂಟ್ ಪ್ರಾಧಾನ್ಯದ ಚಾರ್ಟರ್ಡ್ ಅಕೌಂಟೆಂಟ್ ಪದವಿ ಸಂಪಾದಿಸಿದ ಬಳಿಕ ದೋಹಾ ಕತಾರ್ ಮೂಲದ ಪ್ರತಿಷ್ಠಿತ ಫೈನಾನ್ಸ್ ಆಂಡ್ ಅಕೌಂಟ್ಸ್ ಸಂಬಂಧಿತ ಸಂಸ್ಥೆಯೊಂದರಲ್ಲಿ ಅಧಿಕಾರಿಯಾಗಿ ಸುಮಾರು ಒಂದು ದಶಕ ಕಾಲ ಸೇವೆ ಸಲ್ಲಿಸಿದ ಬಳಿಕ ಪುಣೆಗೆ ಬಂದು…
ಬಂಟ್ವಾಳ ತಾಲೂಕಿನ ಕುಕ್ಕಿಪ್ಪಾಡಿ ಗ್ರಾಮದ ಯುವಕನೋರ್ವ ಇಂಡೋನೇಷಿಯಾದ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಕುಕ್ಕಿಪ್ಪಾಡಿ, ಹುಣಸೆಬೆಟ್ಟು ನಿವಾಸಿ ಮಹಾಬಲ ಶೆಟ್ಟಿ ಅವರ ಪುತ್ರ ಧನೇಶ್ ಶೆಟ್ಟಿ ಇಂಡೋನೇಷಿಯಾ ಕ್ರಿಕೆಟ್ ತಂಡಕ್ಕೆ ಆಯ್ಕೆಯಾದವರು. ವಿವಾಹಿತರಾಗಿರುವ ಧನೇಶ್ ಅವರು ತನ್ನ ಪತ್ನಿಯೊಂದಿಗೆ ಇಂಡೋನೇಷಿಯದಲ್ಲಿ ಆರೋಗ್ಯ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಧನೇಶ್ ಅವರು ವಾಮದಪದವು ಸರಕಾರಿ ಶಾಲೆಯಲ್ಲಿ ಪ್ರಾಥಮಿಕ, ಬಂಟ್ವಾಳ ಎಸ್ವಿಎಸ್ ಪ.ಪೂ.ಕಾಲೇಜಿನಲ್ಲಿ ಪ್ರೌಢ ಮತ್ತು ಪದವಿ ಪೂರ್ವ ಶಿಕ್ಷಣ ಪಡೆದು ಮೂಡುಬಿದಿರೆ ಮಹಾವೀರ ಪಾಲಿಟೆಕ್ನಿಕ್ನಲ್ಲಿ ಡಿಪ್ಲೋಮಾ ಹಾಗೂ ಬೆಂಗಳೂರುನಲ್ಲಿ ಇಂಜಿನಿಯರಿಂಗ್ ಪದವಿ ಪಡೆದಿದ್ದಾರೆ. ಶಾಲಾ, ಕಾಲೇಜು ದಿನಗಳಲ್ಲಿ ಕ್ರಿಕೆಟ್ ಆಸಕ್ತಿ ಬೆಳೆಸಿಕೊಂಡು ಆಡುತ್ತಿದ್ದು, ಉತ್ತಮ ಬ್ಯಾಟ್ಸ್ಮನ್ ಅಗಿರುವ ಅವರು ಇದೀಗ ಇಂಡೋನೇಷಿಯಾದ ರಾಷ್ಟ್ರೀಯ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಭಾರತ ಸರಕಾರದ ಮಾನ್ಯತೆ ಪಡೆದಿರುವ ಸ್ವರ್ದಾತ್ಮಕ ಪರೀಕ್ಷೆಗಳ ತರಬೇತಿ ಮತ್ತು ಖಾಸಗಿ ಉದ್ಯೋಗಗಳ ವೃತ್ತಿಪರ ಕೌಶಲ್ಯ ತರಬೇತಿ ಸಂಸ್ಥೆ ಭಾಗ್ಯೆಶ್ ರೈ ಸಾರಥ್ಯದ ವಿದ್ಯಾಮಾತಾ ಅಕಾಡೆಮಿ ಇದರ ಚೊಚ್ಚಲ ಶಾಖೆ ಸೆ. 28 ರಂದು ಸುಳ್ಯ ರಥಬೀದಿಯಲ್ಲಿನ ಟಿ.ಎ.ಪಿ.ಸಿ.ಎಂ.ಎಸ್. ಸಂಕೀರ್ಣದಲ್ಲಿ ಶುಭಾರಂಭಗೊಳ್ಳಲ್ಲಿದೆ. ವಿದ್ಯಾಮಾತಾ ಇದರ ಮಾತೃ ಸಂಸ್ಥೆ ವಿದ್ಯಾಮಾತ ಫೌಂಡೇಶನ್ ಈಗಾಗಲೇ 3 ರಾಜ್ಯಮಟ್ಟದ ಉದ್ಯೋಗ ಮೇಳ, ಸುಮಾರು 500 ಕ್ಕೂ ಹೆಚ್ಚು ನೇರ ಉದ್ಯೋಗ ಸಂದರ್ಶನಗಳ ಮೂಲಕ 5000 ಕ್ಕೂ ಮಿಕ್ಕಿದ್ದ ವಿದ್ಯಾರ್ಥಿಗಳಿಗೆ ವಿವಿಧ ಕಂಪನಿಗಳಲ್ಲಿ ಉದ್ಯೋಗ ಕೊಡಿಸುವಲ್ಲಿ ಸಫಲತೆ ಕಂಡಿದೆ. ಕರಾವಳಿಯಲ್ಲಿ ಸ್ವರ್ದಾತ್ಮಕ ಪರೀಕ್ಷೆಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮತ್ತು ತರಬೇತಿ ನೀಡಿ 90 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸರಕಾರಿ ಹಾಗೂ ಸರಕಾರಿ ಸ್ವಾಮ್ಯದ ಇಲಾಖೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳುವಲ್ಲೂ ಸಂಸ್ಥೆಯ ಶ್ರಮದ ಜೊತೆಗೆ ವಿದ್ಯಾರ್ಥಿಗಳ ಪ್ರಯತ್ನ ಸಾಕಾಷ್ಟಿದೆ. ಅಕಾಡೆಮಿಯ ವೈಶಿಷ್ಟತೆಗಳು : 20 ಕ್ಕೂ ಹೆಚ್ಚು ವಿವಿಧ ಸ್ವರ್ದಾತ್ಮಕ ಪರೀಕ್ಷೆಗಳಿಗೆ 6 ತಿಂಗಳ ಅವಧಿಯಲ್ಲಿ ಏಕಕಾಲದಲ್ಲಿ ತರಬೇತಿ ಪಡೆಯುವ…
ಪ್ರಕೃತಿಯನ್ನು ಮಾತೆಯನ್ನಾಗಿ ಆರಾಧಿಸುತ್ತಾ ಬಂದಿರುವ ಪರಂಪರೆ ನಮ್ಮದು. ಪ್ರಕೃತಿಯಲ್ಲೇ ಹುಟ್ಟಿ ಪ್ರಕೃತಿಯಲ್ಲೇ ಲೀನವಾಗುವ ಎಂಬತ್ತ ನಾಲ್ಕು ಲಕ್ಷ ಜೀವರಾಶಿಯ ಬಾಳು ಅವ್ಯಕ್ತವಾದುದು. ಪಂಚಭೂತಗಳಿಂದ ಆವೃತವಾಗಿರುವ ಪ್ರಕೃತಿಯ ಹಂಗು-ಋಣದಲ್ಲಿ ಮತ್ತು ಪ್ರಕೃತಿ ಮಾತೆಗೆ ಕೃತಜ್ಞರಾಗಿರಬೇಕಾಗಿರುವುದು ಇಲ್ಲಿನ ಜೀವಿಗಳ ಪರಮ ಕರ್ತವ್ಯ. ನಿಸರ್ಗದ ಎಲ್ಲಾ ಜೀವಿಗಳಲ್ಲಿ ತನ್ನ ಬುದ್ಧಿಮತ್ತೆ, ವಿವೇಚನೆಯಿಂದ ಉಳಿದ ಜೀವಿಗಳಿಗಿಂತ ವಿಶಿಷ್ಟ ಮತ್ತು ಭಿನ್ನನಾಗಿರುವ ಮಾನವನ ಪ್ರಕೃತಿಯೊಂದಿಗಿನ ಒಡನಾಟ ಪ್ರಸ್ತುತ ಯಾವ ದಿಕ್ಕಿನತ್ತ ಸಾಗುತ್ತಿದೆ ಎಂಬುದನ್ನು ಪ್ರಶ್ನಿಸುವ ಹಂತಕ್ಕೆ ಬಂದು ನಾವಿಂದು ನಿಂತಿದ್ದೇವೆ. ಪ್ರಕೃತಿಯ ವೈಚಿತ್ರ್ಯ, ಕೊಡುಗೆ ವರ್ಣನೆಗೆ ಸಿಗುವಂತಹುದಲ್ಲ, ಉಪಮೆಗೂ ನಿಲುಕುವಂತಹುದಲ್ಲ. ಪ್ರಕೃತಿ ಏನು ತಾನೇ ಕೊಟ್ಟಿಲ್ಲ. ವಾಸಿಸಲು ನಿರ್ಮಲ ಭೂಮಿ, ಉಸಿರಾಡಲು ಪರಿಶುದ್ಧ ಗಾಳಿ, ಕುಡಿಯಲು ಶುದ್ಧ ನೀರು, ನಿಸರ್ಗದತ್ತ ಆಹಾರ ವೆೃವಿಧ್ಯ… ಹೀಗೆ ನಾವೆಲ್ಲರೂ ಸಮಗ್ರವಾಗಿ ಬದುಕಲು ಪೂರಕ, ಪ್ರೇರಕವಾದ ಸುಂದರ ವ್ಯವಸ್ಥೆಯನ್ನು ಈ ಪ್ರಕೃತಿ ರೂಪಿಸಿಕೊಟ್ಟಿದೆ. ಇಂಥ ಪ್ರಕೃತಿ ನಮಗೆಲ್ಲರಿಗೂ ಮಾತೃ ಸಮಾನ. ಹಾಗೆಂದು ನಾವು ನಮ್ಮ ನಿಸರ್ಗವನ್ನು ಹಬ್ಬಹರಿದಿನಗಳ ಆಚರಣೆ ಸಂದರ್ಭದಲ್ಲೋ ಪೂಜಿಸುತ್ತೇವೆ ಮತ್ತು…
ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮಂಗಳೂರು ಇದರ ಆಶ್ರಯದಲ್ಲಿ ಸಮಾಜ ಕಲ್ಯಾಣ ಯೋಜನೆಯ ಕಾರ್ಯಕ್ರಮ ಮತ್ತು ಸಾಧಕರಿಗೆ ಗೌರವ ಸನ್ಮಾನ ಕಾರ್ಯಕ್ರಮ ಮಾಚ್೯ 7 ರಂದು ಸೋಮವಾರ ಮಧ್ಯಾಹ್ನ 11 ಗಂಟೆಗೆ ಬಂಟ್ಸ್ ಹಾಸ್ಟೇಲ್ ಬಳಿಯ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ಜರಗಲಿದೆ. ಈ ಸಭೆಯ ಅಧ್ಯಕ್ಷತೆಯನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅವರು ವಹಿಸಲಿದ್ದಾರೆ. ಸಮಾಜ ಕಲ್ಯಾಣ ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ ಚೆಕ್ ಗಳನ್ನು ವಿತರಿಸಲಾಗುವುದು. ಮುಖ್ಯ ಅತಿಥಿಗಳಾಗಿ ಮಂಗಳೂರು ಪೊಲೀಸ್ ಆಯುಕ್ತರಾದ ಎನ್. ಶಶಿ ಕುಮಾರ್, ಗೌರವಾನ್ವಿತ ಅತಿಥಿಯಾಗಿ ಮುಂಬಯಿ ವಿ.ಕೆ.ಗ್ರೂಪ್ ನ ಚೆಯರ್ ಮೆನ್ ಕೆ.ಎಂ. ಶೆಟ್ಟಿ ಮಧ್ಯಗುತ್ತು ಭಾಗವಹಿಸಲಿದ್ದಾರೆ. ಸಮಾರಂಭದಲ್ಲಿ ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಆರ್ ಉಪೇಂದ್ರ ಶೆಟ್ಟಿ, ರಾಷ್ಟ್ರಪತಿಗಳ ಸೇವಾ ಪದಕ ಪುರಸ್ಕೃತ ವಿಜಯ ಕಾಂಚನ್ ಬೈಕಂಪಾಡಿ, ಸಂಸ್ಕಾರ ಭಾರತಿ ಮಂಗಳೂರು ಇದರ ಅಧ್ಯಕ್ಷ ಕೆ ಪುರುಷೋತ್ತಮ ಭಂಡಾರಿ ಅಡ್ಯಾರ್, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್…
ತುಳುನಾಡಿನ ಧಾರ್ಮಿಕ ಆಚರಣೆಗಳ ಐತಿಹಾಸಿಕ ಹಿನ್ನೆಲೆಯಿರುವ ಶಿರ್ವ ನಡಿಬೆಟ್ಟು ಚಾವಡಿ ಮನೆಯು ಸುಮಾರು 500-600 ವರ್ಷಗಳ ಇತಿಹಾಸವನ್ನು ಹೊಂದಿದೆ. ಚಾವಡಿಯ ಮರದ ಕಂಬಗಳಲ್ಲಿ ಮತ್ತು ಮೇಲ್ಛಾವಣಿಯಲ್ಲಿ ಕಲಾತ್ಮಕ ಶೈಲಿಯ ಕೆತ್ತನೆಯ ಕುಸುರಿಗಳನ್ನು ಹೊಂದಿದೆ. ಕರ್ನಾಟಕ ರಾಜ್ಯದ ಲಾಂಛನ ಗಂಡಬೇರುಂಡ ಶತಮಾನಗಳ ಹಿಂದೆಯೇ ಚಾವಡಿಯ ಕಂಬದಲ್ಲಿ ಕೆತ್ತಲ್ಪಟ್ಟಿದ್ದು, ತುಳುನಾಡಿನ ಐತಿಹಾಸಿಕ ಪರಂಪರೆಯನ್ನು ಬಿಂಬಿಸುವ ಗತ ವೈಭವವನ್ನು ಸಾರುತ್ತಿದೆ. ಮನೆಯ ಚಾವಡಿ ಹತ್ತಲು 9 ಮೆಟ್ಟಿಲುಗಳಿದ್ದು, ಮೊದಲ ಮೆಟ್ಟಿಲು ಹಾಸುಗಲ್ಲು ಆಗಿದೆ. ಪಾಪನಾಶಿನಿ ನದಿಯ ನೆರೆ ನೀರು ಚಾವಡಿಯ ಮೊದಲ ಮೆಟ್ಟಿಲು ಹಾಸುಗಲ್ಲು ಸ್ಪರ್ಶಿಸಿದ ಕೂಡಲೇ ಮನೆಯ ಮುತ್ತೈದೆ ಗಂಗಾ ಮಾತೆಗೆ ಬಾಗಿನ ಸಮರ್ಪಿಸುವುದು ಮನೆತನದ ಸಂಪ್ರದಾಯ. ಮೆಟ್ಟಿಲಿನ ಇಕ್ಕೆಲದಲ್ಲಿ ನ್ಯಾಯ ತೀರ್ಮಾನದ ಕಟ್ಟೆ ಇದ್ದು, ಚಾವಡಿಯಲ್ಲಿ ಪಟ್ಟದ ಮಂಚವಿದೆ. ಇದು ಯಜಮಾನರ ಆಳ್ವಿಕೆಯ ಆಸ್ಮಿತೆಯ ಕುರುಹಾಗಿದೆ. ಮನೆಯ ಇತಿಹಾಸದ ಬಗ್ಗೆ ಇತಿಹಾಸ ತಜ್ಞ ದಿ. ಡಾ|ಪಾದೂರು ಗುರುರಾಜ ಭಟ್ ತನ್ನ ತುಳುನಾಡಿನ ಇತಿಹಾಸ ಪುಸ್ತಕದಲ್ಲಿ ಉಲ್ಲೇಖೀಸಿದ್ದಾರೆ. ಜೀರ್ಣಾವಸ್ಥೆಯಲ್ಲಿದ್ದ ಮನೆಯು 2003ರಲ್ಲಿ ಶಿರ್ವ ನಡಿಬೆಟ್ಟು…