Author: admin
ಜೀವನ ಒಂದು ಸುಂದರವಾದ ಉದ್ಯಾನವನದಂತೆ. ಅದರಲ್ಲಿ ನಮ್ಮೆಲ್ಲರ ಪಾತ್ರ ಬಹುಮುಖ್ಯ. ಅಲ್ಲಿ ಮೊಳೆವ ಕಳೆಗಳನ್ನು ಸಮಯಕ್ಕೆ ಸರಿಯಾಗಿ ತೆಗೆದು ಹಾಕದಿದ್ದರೆ ಜೀವನ ಸೌಂದರ್ಯ ಹಾಳಾಗುತ್ತದೆ. ಮಾನವನ ಯೋಚನೆ, ಯೋಜನೆಯು ವಿಚಿತ್ರವಾದದು. ಸಾಕೆನಿಸದ ಸ್ವಪ್ರತಿಷ್ಠೆ, ಸ್ವಾರ್ಥ, ದುರಾಸೆಯನ್ನು ನಿಯಂತ್ರಿಸಲಾಗದೆ ಸುಲಭದಲ್ಲಿ ಸುಖ ಸೌಕರ್ಯ ಪಡೆಯುವ ಹಪಾಹಪಿಯಲ್ಲಿ ಕಿರುದಾರಿ, ಅಡ್ಡದಾರಿಯ ಓಟದಲ್ಲಿ ಅಮೂಲ್ಯವಾದುದು ಕಳೆದು ಹೋದದ್ದು ಗೊತ್ತೇ ಆಗುವುದಿಲ್ಲ. ಸುಖ, ಶಾಂತಿ ಮತ್ತೆಲ್ಲೋ ಯಾವುದರಲ್ಲೋ ಇರುವುದಿಲ್ಲ. ಅವರವರ ಮನಸ್ಸಿನಲ್ಲಿ ಅಡಗಿರುತ್ತದೆ. ಕೆಲವರಂತೂ ನಿರ್ದಾಕ್ಷಿಣ್ಯವಾಗಿ ನಕಾಲರಾತ್ಮಕ ಆಲೋಚನೆಗಳಿಂದ ತುಂಬಿರುತ್ತಾರೆ. ಸಂತೋಷಕರ ಜೀವನಕ್ಕಾಗಿ ಒಳ್ಳೆಯ ಆಲೋಚನೆಗಳನ್ನು ಮಾಡಿ ನಿರಂತರ ಆಶಾವಾದಿಗಳಾಗಿರೋಣ. ಕರ್ತವ್ಯದ ಬಗ್ಗೆ ಆಲೋಚಿಸಿ ಫಲಿತಾಂಶಗಳ ಮೇಲೆ ಆಧಾರವಾಗಿರಬೇಡಿ. ಯಾವುದೇ ಕೆಲಸದಲ್ಲಿ ಏಕಾಗ್ರತೆ ಎಷ್ಟು ಮುಖ್ಯವೋ ಕರ್ತವ್ಯ ನಿರ್ವಹಣೆ ಕೂಡ ಅಷ್ಟೇ ಮುಖ್ಯ. ಈ ಪ್ರಪಂಚಕ್ಕೆ ಒಡೆಯನಾದರೂ ಕೆಲವರು ಸಂತೋಷದಿಂದ ಇರುತ್ತಾರೆ ಅನ್ನೋ ಗ್ಯಾರಂಟಿ ಏನು ಇಲ್ಲ . ಸಂತೋಷ ಅಂತರಂಗದಲ್ಲಿ ಅಡಗಿದ ಒಂದು ಭಾವನೆ. ಅದರ ಇರುವಿಕೆಯನ್ನು ತಿಳಿದುಕೊಂಡು ವಿಶಾಲ ದೃಷ್ಟಿಕೋನವನ್ನು ಅಳವಡಿಸಿಕೊಳ್ಳಬೇಕು. ಸಣ್ಣ ಪುಟ್ಟ…
ಶಿವಮೊಗ್ಗ ಕುವೆಂಪು ವಿ. ವಿ. ಯಿಂದ ಗೌರವ ಡಾಕ್ಟರೇಟ್ ಪಡೆದ ಇಂಟರ್ ನ್ಯಾಷನಲ್ ಬಂಟ್ಸ್ ಟ್ರಸ್ಟ್ ಸ್ಥಾಪಕಾಧ್ಯಕ್ಷರಾದ ಡಾ. ಅತ್ತೂರು ಸದಾನಂದ ಶೆಟ್ಟಿ ಅವರಿಗೆ ಅಭಿನಂದನೆ ಸಮಾರಂಭ ಕಾರ್ಯಕ್ರಮ ಬಂಟರ ಸಂಘ ಜಪ್ಪು ಮಾರ್ನಮಿಕಟ್ಟೆ ವತಿಯಿಂದ ನಗರದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಸುನಿಲ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಸಂಘದ ಕಾರ್ಯದರ್ಶಿ ನಯನಾ ಪಿ. ಶೆಟ್ಟಿ ಸ್ವಾಗತಿಸಿದರು. ಸಂಘದ ಸಾಂಸ್ಕೃತಿಕ ಕಾರ್ಯದರ್ಶಿಗಳಾದ ಪೂರ್ಣಿಮಾ ಎನ್. ಶೆಟ್ಟಿ, ರೇಖಾ ಆರ್. ನಾಯರ್ ಅವರ ಮಾರ್ಗದರ್ಶನದಲ್ಲಿ ನೃತ್ಯ ಕಾರ್ಯಕ್ರಮ ಜರುಗಿತು. ಇಂಟರ್ ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ ಉಪಾಧ್ಯಕ್ಷ ದೇವಿಚರಣ್ ಶೆಟ್ಟಿ ಉದ್ಯಮಿ, ದೇರಳಕಟ್ಟೆ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆ ರೂವಾರಿ ರವೀಂದ್ರ ಶೆಟ್ಟಿ ಉಳಿದೊಟ್ಟು, ಕದ್ರಿ ನವನೀತ್ ಶೆಟ್ಟಿ ತುಳು ವಿದ್ವಾಂಸ, ಸಂಘದ ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಸರಿತಾ ಎಸ್. ಶೆಟ್ಟಿ , ಕೋಶಾಧಿಕಾರಿ ಕೆ. ಗೋಪಿನಾಥ್ ಶೆಟ್ಟಿ ಉಪಸ್ಥಿತರಿದ್ದರು. ನಿಖಿಲ್ ಶೆಟ್ಟಿ ವಂದಿಸಿ, ಸಾಹಿಲ್ ರೈ ಕಾರ್ಯಕ್ರಮ ನಿರ್ವಹಿಸಿದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಅಕ್ಟೋಬರ್ 28 ಮತ್ತು 29 ರಂದು ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ನಡೆಯುವ ವಿಶ್ವ ಬಂಟರ ಸಮ್ಮೇಳನವನ್ನು ಯಶಸ್ವಿಗೊಳಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ತಿಳಿಸಿದರು. ಬಂಟ್ಸ್ ಹಾಸ್ಟೇಲ್ ನ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ವಿಶ್ವ ಬಂಟರ ಸಮ್ಮೇಳನದಲ್ಲಿ ನಡೆಯುವ ವಿಶ್ವ ಬಂಟರ ಕ್ರೀಡೋತ್ಸವ ಮತ್ತು ವಿಶ್ವ ಬಂಟರ ಸಾಂಸ್ಕೃತಿಕ ವೈಭವದ ಕರಪತ್ರವನ್ನು ಬಿಡುಗಡೆಗೊಳಿಸಿ ಮಾತನಾಡಿದರು. ವಿಶ್ವದಲ್ಲಿರುವ ಬಂಟರನ್ನು ಒಂದೇ ಚಪ್ಪರದಡಿಯಲ್ಲಿ ಸೇರಿಸುವ ಪ್ರಯತ್ನದಲ್ಲಿ ವಿಶ್ವ ಬಂಟರ ಸಮ್ಮಿಲನ ನಡೆಯಲಿದೆ. ಸಮ್ಮೇಳನದಲ್ಲಿ ಸ್ವಾಮೀಜಿಗಳು, ರಾಜಕೀಯ ನೇತಾರರು, ಸಿನಿಮಾ ತಾರೆಯರು, ಧಾರ್ಮಿಕ ಮುಖಂಡರು, ಸಮಾಜದ ಮುಖಂಡರು ಭಾಗವಹಿಸಲಿದ್ದಾರೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ತಿಳಿಸಿದರು. ವೇದಿಕೆಯಲ್ಲಿ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ಜೊತೆ ಕಾರ್ಯದರ್ಶಿ ಚಂದ್ರಹಾಸ ಶೆಟ್ಟಿ…
ನಮ್ಮ ಹಿರಿಯರ ಆಚರಣೆಗಳು ಅರ್ಥಪೂರ್ಣವಾಗಿದ್ದವು. ಪ್ರಕೃತಿ ಪೂಜೆಗೆ ವಿಶೇಷ ಮಹತ್ವ ಇದ್ದು ಕಲ್ಲು, ಮಣ್ಣು,ಗಿಡ ಮರಗಳ ಪೂಜೆ ನಮ್ಮ ಪೂರ್ವಜರಿಂದ ಬಂದ ಸಂಪ್ರದಾಯ ಅವುಗಳಲ್ಲಿ ದೈವತ್ವವನ್ನು ಕಂಡು ಆರಾಧಿಸುವುದು ಕೃಷಿಕರಿಗೆ ಸಂತಸದ ಕಾಯಕವಾಗಿತ್ತು. ಹಾಗೆ ಕೃಷಿ ಪ್ರಧಾನವಾದ ಕುಟುಂಬಗಳು ಮೇಟಿಕಂಬವನ್ನು ವಿಶೇಷ ದಿನಗಳಲ್ಲಿ ಮೇಟಿ ಕಂಬಕ್ಕೆ ಹೂ ಹಾಕುವುದು, ಮೇಟಕಂಬಕ್ಕೆ ಹೊದಳು ಹಾಕುವ ಕ್ರಮ, ಮೇಟಿಕಂಬಕ್ಕೆ ಭಕ್ತಿಯಿಂದ ಪೂಜಿಸುತ್ತಿದ್ದರು. ಮೇಟಿಕಂಬ ಎಂಬ ಹೆಸರಿನಿಂದ ಬೇಸಾಯಕ್ಕೆ ಮೇಟಿವಿದ್ಯೆ ಎಂಬ ಹೆಸರು ಬಂತು ಎನ್ನುವವರು ಇದ್ದಾರೆ. ಶ್ರಿ ಕೃಷ್ಣಜನ್ಮಾಷ್ಟಮಿಯಂದು, ಕದಿರು ಕಟ್ಟುವ ದಿನ, ಕೃಷಿ ಪ್ರಧಾನ ಮನೆಯ ಎದುರು ಇರುವ ಮರದ ಮೇಟಿಕಂಬದ ಸೊಬಗೆ ಬೇರೆ ಇತ್ತು. ಮೇಟಿಕಂಬವನ್ನು ಒದ್ದೆ ಬಟ್ಟೆಯಲ್ಲಿ ಚೆನ್ನಾಗಿ ಒರಸಿ ಕಂಬದ ಸುತ್ತಾ ರಂಗೋಲಿ ಬರೆದು ಹೊದಲು ಹೂ ಇಟ್ಟು ಮನೆಯ ಯಜಮಾನ ಪಂಚೆ ಉಟ್ಟು ತಿಲಕ ಹಚ್ಚಿ, ದೀಪದ ಆರತಿ ಎತ್ತಿ ಮೇಟಿಕಂಬಕ್ಕೆ ತೆಂಗಿನಕಾಯಿ ಒಡೆದು, ಕೊಡಿ ಬಾಳೆಎಲೆಯಲ್ಲಿ ಹೊದಳು ಪಂಚಕಜ್ಜಾಯ ಮಾಡಿ ಇಟ್ಟು, ಸಳ್ಳೆ ಎಲೆ ಅಥವಾ…
ಸ್ಥಳೀಯ ಹಾಗೂ ದೇಶದ ಅಭಿವೃದ್ಧಿ ದೃಷ್ಟಿಯಿಂದ ವಿದ್ಯಾರ್ಥಿಗಳ ಆವಿಷ್ಕಾರಗಳನ್ನು ಕೆಎಸ್ಸಿಎಸ್ಟಿ ಪ್ರೋತ್ಸಾಹಿಸುತ್ತಿದೆ. ಮಂಡಳಿಯು 45 ವರ್ಷಗಳಲ್ಲಿ 15,300ಕ್ಕೂ ಅಧಿಕ ವಿದ್ಯಾರ್ಥಿ ಯೋಜನೆಗಳನ್ನು ಗುರುತಿಸಿ ನೆರವು ನೀಡಿದೆ. ಪ್ರಸಕ್ತ 46ನೇ ಸರಣಿಯಲ್ಲಿ ಮಂಡಳಿಯು ರಾಜ್ಯದ ವಿಜ್ಞಾನ ಮತ್ತು ಎಂಜಿನಿಯರಿಂಗ್ ಕಾಲೇಜುಗಳ ವಿವಿಧ ವಿಭಾಗಗಳ 5,961 ಯೋಜನೆಗಳನ್ನು ಸ್ವೀಕರಿಸಿದ್ದು 197 ಎಂಜಿನಿಯರಿಂಗ್ ಕಾಲೇಜುಗಳ 1,494 ಯೋಜನ ಪ್ರಸ್ತಾವನೆಗಳಿಗೆ ಧನಸಹಾಯ ಮತ್ತು ತಾಂತ್ರಿಕ ನೆರವು ನೀಡಿರುವುದು ಶ್ಲಾಘನೀಯ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಹೇಳಿದರು. ಮಿಜಾರಿನಲ್ಲಿರುವ ಆಳ್ವಾಸ್ ಇನ್ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ (ಕೆಎಸ್ಸಿಎಸ್ಟಿ) ಸಹಯೋಗದಲ್ಲಿ ಆ.11, 12ರಂದು ನಡೆಯುವ “46ನೇ ರಾಜ್ಯ ಮಟ್ಟದ ವಿದ್ಯಾರ್ಥಿ ಪ್ರಾಜೆಕ್ಟ್ ಗಳ ವಿಚಾರ ಸಂಕಿರಣ ಮತ್ತು ಪ್ರದರ್ಶನ’ದಲ್ಲಿ ಅವರು ಮಾತನಾಡಿ, ಪರಿಣತರ ಮೌಲ್ಯಮಾಪನದ ಮೂಲಕ 433 ಅತ್ಯುತ್ತಮ ಯೋಜನೆಗಳು ಪ್ರದರ್ಶನಕ್ಕೆ ಆಯ್ಕೆ ಮಾಡಲಾಗಿದೆ ಎಂಬುದು ಉತ್ತಮ ಬೆಳವಣಿಗೆ ಎಂದರು. ದೇಶಕ್ಕೆ ಕೊಡುಗೆ…
ಕಾಪುವಿನ ಹಳೇ ಮಾರಿಗುಡಿ, ಹೊಸ ಮಾರಿಗುಡಿ ಮತ್ತು ಮೂರನೇ ಮಾರಿಗುಡಿಗಳಲ್ಲಿ ಏಕಕಾಲದಲ್ಲಿ ನಡೆಯುವ ತುಳುನಾಡಿನ ಏಳು ಜಾತ್ರೆಗಳಲ್ಲಿ ಒಂದಾದ ಕಾಪುವಿನ ಕಾಲಾವಧಿ ಸುಗ್ಗಿಮಾರಿ ಪೂಜೆಯು ಮಾ. 21 ಮತ್ತು 22ರಂದು ನಡೆಯಲಿದೆ ಎಂದು ಮಾರಿಗುಡಿಗಳ ಆಡಳಿತ ಮಂಡಳಿಯ ಮುಖ್ಯಸ್ಥರು ಕಾಪು ಪ್ರೆಸ್ ಕ್ಲಬ್ನಲ್ಲಿ ಆಯೋಜಿಸಲಾಗಿದ್ದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಕಾಪು ಶ್ರೀ ಹಳೇ ಮಾರಿಯಮ್ಮ ದೇವಸ್ಥಾನದ ಆಡಳಿತ ಮೊಕ್ತೇಸರ ಪ್ರಸಾದ್ ಜಿ. ಶೆಣೈ ಈ ಬಗ್ಗೆ ಮಾಹಿತಿ ನೀಡಿ, ಐತಿಹಾಸಿಕ ಹಿನ್ನೆಲೆ ಮತ್ತು ಪ್ರಸಿದ್ಧಿ ಪಡೆದಿರುವ ಮೂರು ಮಾರಿಗುಡಿಗಳಲ್ಲಿ 2023 ನೇ ಸಾಲಿನ ಸುಗ್ಗಿ ಮಾರಿಪೂಜೆಗೆ ಪೂರ್ವಭಾವಿಯಾಗಿ ಮಾ. 14 ಮೀನ ಸಂಕ್ರಮಣದಂದು ಕುರಿ ಬಿಡುವ ಸಂಪ್ರದಾಯ ನಡೆಯಲಿದೆ. ಬಳಿಕ ಅದರ ಮುಂದಿನ ಮಂಗಳವಾರ ಮತ್ತು ಬುಧವಾರ (ಮಾ. 21 ಮತ್ತು 22) ದಂದು ಸುಗ್ಗಿ ಮಾರಿಪೂಜೆ ನಡೆಯಲಿದೆ ಎಂದು ತಿಳಿಸಿದರು. ಕಾಪುವಿನ ಮೂರು ಮಾರಿಗುಡಿಗಳಲ್ಲಿ ವರ್ಷಕ್ಕೆ ಮೂರು ಬಾರಿ ಸುಗ್ಗಿ, ಆಟಿ ಮತ್ತು ಜಾರ್ದೆ ಮಾರಿಪೂಜೆ ನಡೆಯುತ್ತದೆ. ಇದರಲ್ಲಿ ಸುಗ್ಗಿ…
ಪದ್ಮಾವತಿ ಪಿ ಶೆಟ್ಟಿ ಗುರ್ಮೆ ಅವರ 4 ನೇಯ ಪುಣ್ಯತಿಥಿಯ ಸ್ಮರಣಾರ್ಥ ಗುರ್ಮೆ ಫೌಂಡೇಶನ್ ವತಿಯಿಂದ ನಿರ್ಮಿಸಲಾದ ಗುರ್ಮೆ ಗೋ ವಿಹಾರ ಕೇಂದ್ರದ ಲೋಕಾರ್ಪಣೆ ಯನ್ನು ಪುತ್ತಿಗೆ ಮಠದ ಶ್ರೀ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಗುರ್ಮೆಯಲ್ಲಿ ಉದ್ಘಾಟಿಸಿದರು. ಪೇಜಾವರ ಮಠದ ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಹಾಗೂ ಗೌರಿಗದ್ದೆ ಸ್ವರ್ಣ ಪೀಠಿಕಾಪುರದ ಅವದೂತ ವಿನಯ್ ಗುರೂಜಿ ಅವರು ಆಶೀರ್ವಚಿಸಿದರು. ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವರಾದ ಕೆ.ಎಸ್ ಈಶ್ವರಪ್ಪ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ. ಸುನಿಲ್ ಕುಮಾರ್, ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್, ಸಂಸದರಾದ ಬಿ.ವೈ ರಾಘವೇಂದ್ರ, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ರಘುಪತಿ ಭಟ್, ಮಂಗಳೂರು ಉತ್ತರ ಶಾಸಕರಾದ ಭರತ್ ಶೆಟ್ಟಿ, ಬೆಂಗಳೂರು ಎಂ.ಆರ್.ಜಿ ಗ್ರೂಪ್ಸ್ ಚೇರ್ಮನ್…
ಬಂಟ್ಸ್ ನೌ ಮಾಧ್ಯಮ ಸಂಸ್ಥೆಯು ಕಳೆದ 15 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿದ್ದು, ಕೇವಲ ಮಾಧ್ಯಮ ರಂಗದಲ್ಲಿ ಸಕ್ರಿಯವಾಗಿರದೆ ಹಲವಾರು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಂಡಿದೆ. ಕಳೆದ ವರ್ಷ ಸಂಸ್ಥೆಗೆ 15 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಹಲವಾರು ನಮ್ಮ ಸಮಾಜದ ದಾನಿಗಳ ನೆರವಿನಿಂದ 15 ಬಡ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸಂಪೂರ್ಣವಾಗಿ ಅವರ ಜವಾಬ್ದಾರಿಯನ್ನು ತೆಗೆದುಕೊಂಡಿದ್ದೇವೆ. ನಮ್ಮ ಸಮಾಜದ 15 ಸಹೋದರಿಯರಿಗೆ ಕರಿಮಣಿ ಸರವನ್ನೂ ವಿತರಿಸಿದ್ದೇವೆ. ಸುಮಾರು 700 ಮಂದಿಗೆ ಉದ್ಯೋಗವನ್ನು ದೊರಕಿಸಿಕೊಟ್ಟಿದ್ದೇವೆ. ಕಳೆದ ತಿಂಗಳು ನಮ್ಮ ಕಚೇರಿಗೆ ಮಂಜೇಶ್ವರ ಮೂಲದ ಮೋನಪ್ಪ ರೈ ಎಂಬವರು ತನ್ನ ಮಗಳ ಮದುವೆಗೆ ಸಹಾಯ ಮಾಡಲು ಕೋರಿದ್ದರು. ಅವರನ್ನು ದಿನಾಂಕ 3-1-2024 ರಂದು ಕಚೇರಿಗೆ ಕರೆಯಿಸಿ ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕರಾದ ಶ್ರೀ ಬಿ ವಿವೇಕ್ ಶೆಟ್ಟಿ ( ಮಾಜಿ ಅಧ್ಯಕ್ಷರು, ಬಂಟರ ಸಂಘ ಮುಂಬಯಿ )ಹಾಗೂ ದಯಾನಂದ ಶೆಟ್ಟಿ ( ಅಧ್ಯಕ್ಷರು, ಬಂಟರ ಸಂಘ ಆಸ್ಟ್ರೇಲಿಯಾ )ಅವರ ಸಹಕಾರದಿಂದ ಕರಿಮಣಿ ಸರವನ್ನು ವಿತರಿಸಲಾಯಿತು. ಈ ಸಂಧರ್ಭದಲ್ಲಿ…
‘ಯಕ್ಷಗಾನ ಹಲವು ರೋಗಗಳಿಗೆ ಔಷಧ ರೂಪದಲ್ಲಿ ಪರಿಣಾಮ ಬೀರುತ್ತದೆ. ಯಕ್ಷಗಾನ ವೀಕ್ಷಣೆಯಿಂದ ಮಾನಸಿಕ ಒತ್ತಡ ದೂರವಾಗಿ ನೆಮ್ಮದಿ ಪಡೆಯಬಹುದು. ತಾಳಮದ್ದಳೆ ಸಪ್ತಾಹದ ಮೂಲಕ ಯಕ್ಷಾಂಗಣ ಸಂಸ್ಥೆ ಕನ್ನಡವನ್ನು ಉಳಿಸುವ ಕೆಲಸ ಮಾಡುತ್ತಿದೆ’ ಎಂದು ಪುಣೆ ಬಂಟರ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ ಇನ್ನಾ ಕುರ್ಕಿಲ್ ಬೆಟ್ಟು ಬಾಳಿಕೆ ಹೇಳಿದರು. ಯಕ್ಷಾಂಗಣ ಮಂಗಳೂರು, ಯಕ್ಷಗಾನ ಚಿಂತನ – ಮಂಥನ ಮತ್ತು ಪ್ರದರ್ಶನ ವೇದಿಕೆಯು ಮಂಗಳೂರು ವಿ.ವಿ ಡಾ. ದಯಾನಂದ ಪೈ, ಶ್ರೀ ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರ ಹಾಗೂ ಕರ್ನಾಟಕ ಯಕ್ಷ ಭಾರತಿ ಪುತ್ತೂರು ಸಹಯೋಗದೊಂದಿಗೆ ನಡೆಸುವ ಕರ್ನಾಟಕ ರಾಜ್ಯೋತ್ಸವ ಕಲಾ ಸಂಭ್ರಮ, ಹನ್ನೊಂದನೇ ವರ್ಷದ ನುಡಿ ಹಬ್ಬ ‘ಶ್ರೀಹರಿ ಚರಿತ್ರೆ’ ಯಕ್ಷಗಾನ ತಾಳಮದ್ದಳೆ ಸಪ್ತಾಹ – ೨೦೨೩ನ್ನು ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು ರವೀಂದ್ರ ಕಲಾಭವನದಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳಲಿ ಆಸಕ್ತಿ ಬೆಳೆಯಲಿ: ಮುಖ್ಯ ಅತಿಥಿಯಾಗಿದ್ದ ಶಾಸಕ ವೇದವ್ಯಾಸ ಕಾಮತ್ ಮಾತನಾಡಿ ‘ಇಂದಿನ ಪೀಳಿಗೆ ಮೊಬೈಲ್ ವೀಕ್ಷಣೆಗೆ ಸಮಯ ಮೀಸಲಿಡುತ್ತಿದೆ.…
ಸಿನಿಮಾದಲ್ಲಿ ಹೊಸ ಪ್ರಯೋಗ ಮಾಡಲು ಬಹುತೇಕ ಚಿತ್ರತಂಡಗಳು ಹೆದರುತ್ತವೆ. ಕೋಟಿಗಟ್ಟಲೇ ಬಂಡವಾಳ ಹೂಡುವ ಸಿನಿಮಾದಲ್ಲಿ “ಪ್ರಯೋಗ’ ಮಾಡಲು ಹೋಗಿ ಹೆಚ್ಚುಕಮ್ಮಿಯಾದರೆ ಕೈ ಸುಟ್ಟುಕೊಳ್ಳಬೇಕಾದಿತ್ತು ಎಂಬ ಭಯದಿಂದ ಹೆಚ್ಚಿನ ಸಿನಿಮಾಗಳು ‘ರೆಗ್ಯುಲರ್’ ಪ್ಯಾಟರ್ನ್ ಗೆ ಖುಷಿಪಡುತ್ತವೆ. ಈ ನಿಟ್ಟಿನಲ್ಲಿ ‘ಟೋಬಿ’ ತಂಡದ ಪ್ರಯತ್ನ ನಿಜಕ್ಕೂ ಮೆಚ್ಚುವಂಥದ್ದು. ಅದರಲ್ಲೂ ಸಿನಿಮಾದ ಮುಖ್ಯಪಾತ್ರವಾದ ನಾಯಕನ ವಿಚಾರದಲ್ಲಿ ‘ಟೋಬಿ’ ತಂಡದ ಪ್ರಯೋಗ ಇದೆಯಲ್ಲ, ಅದನ್ನು ಮಾಡಲ ಒಂದು ಗಟ್ಟಿ ಧೈರ್ಯ ಬೇಕು. ಆ ಧೈರ್ಯದೊಂದಿಗೆ ಮೂಡಿಬಂದಿರುವ ‘ಟೋಬಿ’ ಪ್ರೇಕ್ಷಕರನ್ನು ತಣ್ಣಗೆ ಕಾಡುತ್ತಾ, ‘ಇವ ಯಾಕ್ ಹಿಂಗೆ’ ಎಂಬ ಪ್ರಶ್ನೆಯನ್ನು ಮುಂದಿಡುತ್ತಲೇ ಸಾಗುತ್ತದೆ. ಮೊದಲೇ ಹೇಳಿದಂತೆ ಟೋಬಿ ಒಂದು ಹೊಸ ಪ್ರಯೋಗದ ಸಿನಿಮಾ. ಸಿನಿಮಾಗಳ ಹಳೆಯ ಸಿದ್ಧಸೂತ್ರಗಳನ್ನು ಪಕ್ಕಕ್ಕಿಟ್ಟು ತನ್ನದೇ ದಾರಿಯಲ್ಲಿ ಸಾಗುವುದು ಟೋಬಿ ವೈಶಿಷ್ಟ್ಯ. ಈ ಹಾದಿಯಲ್ಲಿ ಟೋಬಿ ಬದುಕಿನ ಕರಾಳತೆ, ಕ್ರೂರತೆ, ನೀರವ ಮೌನ, ಸಂಕಟ, ಗೊಂದಲ, ಅಸಹಾಯಕತೆ… ಎಲ್ಲವೂ ಧಕ್ಕುತ್ತದೆ. ಟೋಬಿ ಯಾರು, ಆತ ಯಾಕೆ ಹೀಗಾದ, ಆತನ ಮುಂದಿನ ಹಾದಿ ಏನು… ಇಂತಹ…